Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

SW Railway Solar Power | ನೈರುತ್ಯ ರೈಲ್ವೆ ಸೌರಫಲಕ ಅಳವಡಿಕೆ ಮೂಲಕ 1.96 ಕೋಟಿ ರೂ. ಉಳಿತಾಯ

ನೈರುತ್ಯ ರೈಲ್ವೆಯು 120 ನಿಲ್ದಾಣಗಳ ಛಾವಣಿಗಳ ಮೇಲೆ, 7 ಸೇವಾ ಕಟ್ಟಡಗಳು ಸೇರಿದಂತೆ ವಿವಿಧೆಡೆ ಸೌರಫಲಕ ಅಳವಡಿಸಿದೆ

by Bengaluru Wire Desk
May 10, 2022
in Bengaluru Focus, News Wire
Reading Time: 1 min read
0

ಬೆಂಗಳೂರು, (www.bengaluruwire.com) : ನೈರುತ್ಯ ರೈಲ್ವೆಯು ತನ್ನ ವ್ಯಾಪ್ತಿಯಲ್ಲಿನ ನಿಲ್ದಾಣಗಳು, ಸೇವಾ ಕಟ್ಟಡಗಳು, ಲೆವೆಲ್‌ ಕ್ರಾಸಿಂಗ್‌ ಗೇಟ್‌ ಗಳು ಮತ್ತಿತರ ಕಡೆಗಳಲ್ಲಿ ಸೌರಫಲಕಗಳನ್ನು ಅಳವಡಿಸಿಕೊಳ್ಳುವ ಮೂಲಕ ಕಳೆದ ಆರ್ಥಿಕ ವರ್ಷದಲ್ಲಿ ಸೌರಶಕ್ತಿಯ ಮೂಲಕ ಒಟ್ಟಾರೆ 46.11 ಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದ್ದು ವಿದ್ಯುತ್‌ ಬಿಲ್‌ ನಲ್ಲಿ 1.96 ಕೋಟಿ ರೂಪಾಯಿಗಳ ಉಳಿತಾಯವಾಗಿದೆ.

ಸೌರಶಕ್ತಿಯನ್ನು ಬಳಸಿಕೊಳ್ಳುವ ಮೂಲಕ ನಿಲ್ದಾಣಗಳ ವಿದ್ಯುತ್‌ ಅಗತ್ಯವು ಪೂರೈಕೆಯಾಗುವುದರ ಜೊತೆಗೆ ರೈಲ್ವೆಯ ವಿದ್ಯುತ್‌ ಮೇಲಿನ ವೆಚ್ಚದಲ್ಲಿಯೂ ಸಹಾ ಉಳಿತಾಯವಾಗುತ್ತಿದೆ.

ಸೇವಾಕಟ್ಟಡಗಳು, ಪ್ರಮುಖ ನಿಲ್ದಾಣಗಳಲ್ಲಿ ನೈರುತ್ಯ ರೈಲ್ವೆಯು ಇದುವರೆಗೆ ಒಟ್ಟಾರೆ 4656.60 ಕೆ.ಡಬ್ಲ್ಯು.ಪಿ. ಸಾಮರ್ಥ್ಯದ ಸೌರಫಲಕಗಳನ್ನು ಅಳವಡಿಸಿದೆ. ನೈರುತ್ಯ ರೈಲ್ವೆಯು 120 ನಿಲ್ದಾಣಗಳ ಛಾವಣಿಗಳ ಮೇಲೆ (ಪ್ರಮುಖ ನಿಲ್ದಾಣಗಳು- ಎಸ್‌.ಎಸ್‌.ಎಸ್‌. ಹುಬ್ಬಳ್ಳಿ, ಕೆ.ಎಸ್‌.ಆರ್‌.ಬೆಂಗಳೂರು, ಮೈಸೂರು, ಯಶವಂತಪುರ ಇತ್ಯಾದಿ) ಮತ್ತು 7 ಸೇವಾ ಕಟ್ಟಡಗಳಲ್ಲಿ (ನೈರುತ್ಯ ರೈಲ್ವೆಯ ಪ್ರಧಾನ ಕಾರ್ಯಾಲಯವಾದ ರೈಲ್‌ ಸೌಧ, ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಾರ್ಯಾಲಯಗಳು, ಹುಬ್ಬಳ್ಳಿ ಮತ್ತು ಬೆಂಗಳೂರಿನ ರೈಲ್ವೆ ಆಸ್ಪತ್ರೆಗಳು, ಹಾಗೂ ಬೆಂಗಳೂರಿನ ಪಾರ್ಸೆಲ್‌ ಕಾರ್ಯಾಲಯ) ಸೌರಫಲಕಗಳನ್ನು ಒದಗಿಸಿದೆ.

ವರ್ಕ್‌ ಷಾಪ್‌ಗಳು (ಹುಬ್ಬಳ್ಳಿ ವರ್ಕ್‌ಷಾಪ್‌-1045 ಕೆ.ಡಬ್ಲ್ಯು.ಪಿ.; ಮೈಸೂರು ವರ್ಕ್‌ಷಾಪ್‌-500 ಕೆ.ಡಬ್ಲ್ಯು.ಪಿ. ಮತ್ತು ಶೆಡ್‌ ಗಳಲ್ಲಿಯೂ ಸಹಾ ಛಾವಣಿಯ ಮೇಲೆ ಸೌರಘಟಕಗಳನ್ನು ಒದಗಿಸಿದೆ. ಕೃಷ್ಣರಾಜಪುರಂ ಡೀಸೆಲ್‌ ಶೆಡ್‌ (240 ಕೆ.ಡಬ್ಲ್ಯು.ಪಿ.), ಹುಬ್ಬಳ್ಳಿ ಇ.ಎಮ್‌.ಡಿ. ಶೆಡ್‌ (640 ಕೆ.ಡಬ್ಲ್ಯು.ಪಿ.) ಗಳಲ್ಲಿ ಸೌರಫಲಕಗಳನ್ನು ಅಳವಡಿಸಲಾಗಿದೆ. ಜೊತೆಗೆ 295 ಲೆವೆಲ್‌ ಕ್ರಾಸಿಂಗ್‌ ಗೇಟ್‌ಗಳಲ್ಲಿ ಸೌರಫಲಕ ಅಳವಡಿಸಲಾಗಿದೆ.

ಮೈಸೂರು ರೈಲ್ವೆ ನಿಲ್ದಾಣ ಮೇಲ್ಭಾಗ ಸೌರಫಲಕ ಅಳವಡಿಸಿರುವ ಚಿತ್ರ

2021-22 ನೇ ಆರ್ಥಿಕ ವರ್ಷದಲ್ಲಿ ಹುಬ್ಬಳ್ಳಿ ನಿಲ್ದಾಣದ ಒಟ್ಟಾರೆ ವಿದ್ಯುತ್‌ ಅಗತ್ಯತೆಯ ಸುಮಾರು ಶೇ.70 ಸೌರಶಕ್ತಿಯಿಂದಲೇ ಪೂರೈಕೆಯಾಗಿದೆ. ಹುಬ್ಬಳ್ಳಿ ವರ್ಕ್‌ ಷಾಪ್‌ನ ಶೇ.83 ವಿದ್ಯುತ್‌ ಅಗತ್ಯವನ್ನು (ಒಟ್ಟು ವಿದ್ಯುತ್‌ ಅಗತ್ಯವು 13.51 ಲಕ್ಷ ಯುನಿಟ್‌ ಗಳು) ಸೌರಶಕ್ತಿಯ ಮೂಲಕ ಪೂರೈಸಲಾಗಿದೆ. ಹುಬ್ಬಳ್ಳಿ ಇ.ಎಮ್‌.ಡಿ. ಶೆಡ್‌ನ ವಾರ್ಷಿಕ 1.13 ಲಕ್ಷ ಯುನಿಟ್‌ಗಳ ವಿದ್ಯುತ್‌ ಬಳಕೆಯ ಪೈಕಿ ಶೇ.60 ವಿದ್ಯುತ್ತನ್ನು ಸೌರಶಕ್ತಿಯ ಮೂಲಕ ಪಡೆದುಕೊಳ್ಳಲಾಗಿದೆ.

2021-22 ನೇ ಆರ್ಥಿಕ ವರ್ಷದಲ್ಲಿ, ರೈಲ್‌ ಸೌಧದಲ್ಲಿ ಅಳವಡಿಸಲಾಗಿರುವ 250 ಕೆ.ಡಬ್ಲ್ಯು.ಪಿ. ಸಾಮರ್ಥ್ಯದ ಸೌರ ಫಲಕಗಳಿಂದ 2.75 ಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದ್ದು 15.51 ಲಕ್ಷ ರೂಪಾಯಿಗಳ ಉಳಿತಾಯವಾಗಿದೆ. ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಾರ್ಯಾಲಯದಲ್ಲಿ ಅಳವಡಿಸಲಾಗಿರುವ 320 ಕೆ.ಡಬ್ಲ್ಯು.ಪಿ. ಸಾಮರ್ಥ್ಯದ ಸೌರಫಲಕಗಳಿಂದ 84,294 ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದ್ದು 2.80 ಲಕ್ಷ ರೂಪಾಯಿಗಳ ಉಳಿತಾಯವಾಗಿದೆ.

ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಾರ್ಯಾಲಯದಲ್ಲಿ ಅಳವಡಿಸಲಾಗಿರುವ 80 ಕೆ.ಡಬ್ಲ್ಯು.ಪಿ. ಸಾಮರ್ಥ್ಯದ ಸೌರಫಲಕಗಳಿಂದ 94,115 ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದ್ದು 4.25 ಲಕ್ಷ ರೂಪಾಯಿಗಳ ಉಳಿತಾಯವಾಗಿದೆ. ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಾರ್ಯಾಲಯದಲ್ಲಿ ಅಳವಡಿಸಲಾಗಿರುವ 100 ಕೆ.ಡಬ್ಲ್ಯು.ಪಿ. ಸಾಮರ್ಥ್ಯದ ಸೌರ ಫಲಕಗಳಿಂದ 1.28 ಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದ್ದು 5.11 ಲಕ್ಷ ರೂ. ಉಳಿಕೆಯಾಗಿದೆ.

ಯಶವಂತಪುರ ರೈಲ್ವೆ ನಿಲ್ದಾಣದ ಮೇಲ್ಭಾಗದಲ್ಲಿ ಸೌರಫಲಕ ಅಳವಡಿಸಿರುವ ಚಿತ್ರ

ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಸಂಜೀವ್‌ ಕಿಶೋರ್‌ ರವರು ಪ್ರಸಕ್ತ ಆರ್ಥಿಕ ವರ್ಷದಲ್ಲಿ ನೈರುತ್ಯ ರೈಲ್ವೆಯ ಇನ್ನೂ 26 ನಿಲ್ದಾಣಗಳಲ್ಲಿ ಸೌರಫಲಕಗಳನ್ನು ಅಳವಡಿಸುವ ಯೋಜನೆಯನ್ನು ಹೊಂದಿದೆ. ನೈರುತ್ಯ ರೈಲ್ವೆಯು ಪರಿಸರ ಸ್ನೇಹಿ ಸೌರಶಕ್ತಿಯನ್ನು ಬಳಸಿಕೊಳ್ಳುತ್ತಿದ್ದು 2030ರೊಳಗೆ ʼನಿವ್ವಳ ಶೂನ್ಯ ಇಂಗಾಲ ಹೊರಸೂಸುವ ರೈಲ್ವೆʼ (‘Net Zero Carbon Emission Railway’) ಯಾಗಿ ಹೊರಹೊಮ್ಮುವ ರೈಲ್ವೆ ಇಲಾಖೆಯ ಗುರಿಗೆ ಇದು ಸಹಕಾರಿಯಾಗಲಿದೆ ಎಂದರು.

2021-22 ನೇ ಆರ್ಥಿಕ ವರ್ಷದಲ್ಲಿ ಎಸ್‌.ಎಸ್‌.ಎಸ್‌. ಹುಬ್ಬಳ್ಳಿ ರೈಲು ನಿಲ್ದಾಣದ ಸೌರಫಲಕಗಳಿಂದ 3.38 ಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದೆ. ಯಶವಂತಪುರ ರೈಲು ನಿಲ್ದಾಣದ 80 ಕೆ.ಡಬ್ಲ್ಯು.ಪಿ. ಸೌರ ಫಲಕಗಳಿಂದ 0.95 ಲಕ್ಷ ಯುನಿಟ್‌, ಮೈಸೂರು ರೈಲು ನಿಲ್ದಾಣದ 110 ಕೆ.ಡಬ್ಲ್ಯು.ಪಿ. ಸೌರಫಲಕಗಳಿಂದ 1.42 ಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದೆ. ಈ ಎಲ್ಲ ನಿಲ್ದಾಣಗಳಿಂದ ಒಟ್ಟಾರೆ 21.42 ಲಕ್ಷ ರೂಪಾಯಿಗಳ ಉಳಿತಾಯವಾಗಿದೆ.

ಪ್ರಧಾನ ಮುಖ್ಯ ವಿದ್ಯುತ್‌ ಇಂಜಿನಿಯರ್‌ ಜೈಪಾಲ್‌ ಸಿಂಗ್‌ ನೇತೃತ್ವದಲ್ಲಿ ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರವಿಂದ ಮಾಲಖೇಡೆ, ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ಯಾಮ್‌ ಸಿಂಗ್‌ ಮತ್ತು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್‌ ಅಗರ್‌ವಾಲ್‌ ರ ಮಾರ್ಗದರ್ಶನದಲ್ಲಿ ಮೂರೂ ರೈಲ್ವೆ ವಿಭಾಗಗಳಲ್ಲಿ ಸೌರಶಕ್ತಿ ಬಳಕೆಯ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ.

WhatsApp Join our WhatsApp Channel
Previous Post

KSRTC Bus Accident | ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಮೆಟ್ರೊ ಪಿಲ್ಲರ್ ಗೆ ಡಿಕ್ಕಿ ; 29 ಪ್ರಯಾಣಿಕರಿಗೆ ಗಾಯ

Next Post

Formers Union Letter To RBI | ರೈತರಿಗೆ ಸಿಬಿಲ್ ಸ್ಕೋರ್ ಪರಿಶೀಲಿಸಿ ಸಾಲ ನೀಡುವ ಪದ್ಧತಿ ರದ್ದುಪಡಿಸಲು ಕೋರಿ ಆರ್ ಬಿಐಗೆ ಪತ್ರ

Next Post

Formers Union Letter To RBI | ರೈತರಿಗೆ ಸಿಬಿಲ್ ಸ್ಕೋರ್ ಪರಿಶೀಲಿಸಿ ಸಾಲ ನೀಡುವ ಪದ್ಧತಿ ರದ್ದುಪಡಿಸಲು ಕೋರಿ ಆರ್ ಬಿಐಗೆ ಪತ್ರ

Hukka Bar | ಬೆಂಗಳೂರು ಏರ್ ಪೋರ್ಟ್ ಬಳಿ ಹುಕ್ಕಾಬಾರ್ ಮೇಲೆ ಪೊಲೀಸರ ದಾಳಿ - ಮೂವರ ಬಂಧನ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group