Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

RR Nagar Zone City Rounds | ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರಾಜರಾಜೇಶ್ವರಿ ನಗರ ವಲಯದಲ್ಲಿ ಸಿಟಿ ರೌಂಡ್ಸ್

ಬಿಬಿಎಂಪಿ ಆರ್ ಆರ್ ನಗರ ವಲಯದಲ್ಲಿ ಪೌರಕಾರ್ಮಿಕರ ಸಮಸ್ಯೆ ಆಲಿಸಿ, ಉಲ್ಲಾಳ, ಹೇರೋಹಳ್ಳಿ ವಾರ್ಡ್, ಮಲ್ಲತ್ತಳ್ಳಿ ಕೆರೆ, ಜೆಪಿ ಪಾರ್ಕ್ ಮತ್ತಿತರ ಕಡೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ತುಷಾರ್ ಗಿರಿನಾಥ್

by Bengaluru Wire Desk
May 11, 2022
in Bengaluru Focus
Reading Time: 2 mins read
0

ಬೆಂಗಳೂರು, ಮೇ.11 (www.bengaluruwire.com) : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಇಂದು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದರು.

ರಾಜರಾಜೇಶ್ವರಿ ನಗರ ವಾರ್ಡ್ ಬಂಗಾರಪ್ಪ ನಗರ ಮುಖ್ಯ ರಸ್ತೆಯಲ್ಲಿ ಪೌರಕಾರ್ಮಿಕರ ಮಸ್ಟರಿಂಗ್ ಪಾಯಿಂಟ್ ಹಾಗೂ ಶಿವನಪಾಳ್ಯ ಬಳಿ ಆಟೋ ಟಿಪ್ಪರ್ ಮಸ್ಟರಿಂಗ್ ಪಾಯಿಂಟ್ ಗೆ ಮುಖ್ಯ ಆಯುಕ್ತರು ಭೇಟಿ ನಿಡಿ ಪರಿಶೀಲನೆ ನಡೆಸಿದರು. ಈ ಸಮಯದಲ್ಲಿ 57 ಆಟೋ ಟಿಪ್ಪರ್ ಪೈಕಿ 50 ಆಟೋಗಳಿಗೆ GPS ತಂತ್ರಾಂಶ ಅಳವಡಿಸಿದ್ದು, ಅದನ್ನು ಕರಾರುವಕ್ಕಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಅಲ್ಲದೇ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ನಿರ್ಮಾಣ, ಆಟೋ ಟಿಪ್ಪರ್ ಚಾಲಕ ಮತ್ತು ಸಹಾಯಕರಿಗೆ ಪ್ರತಿ ತಿಂಗಳು ಸೂಕ್ತ ಅವಧಿಯಲ್ಲಿ ಗುತ್ತಿಗೆದಾರರು ವೇತನ ನೀಡುವಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ದಾಖಲೆಗಳೊಂದಿಗೆ ಸಂಬಂಧಪಟ್ಟ ಗುತ್ತಿಗೆದಾರರು ಆಯಾ ತಿಂಗಳು ಪಾಲಿಕೆಗೆ ಬಿಲ್ ಸಲ್ಲಿಸಿ ಹಣ ಪಡೆದು ನಿಗದಿತ ಸಮಯಕ್ಕೆ ಸಿಬ್ಬಂದಿಗೆ ವೇತನ ನೀಡಬೇಕು. ಈ ಸಂಬಂಧ ಅಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಉಲ್ಲಾಳ ವಾರ್ಡ್ ನ ಒಣತ್ಯಾಜ್ಯ ಸಂಗ್ರಣಾ ಘಟಕ ಕಾಮಗಾರಿ ಪರಿಶೀಲನೆ :

ಉಲ್ಲಾಳು ವಾರ್ಡ್ ವಾಪ್ತಿಯಲ್ಲಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಒಣತ್ಯಾಜ್ಯ ಸಂಗ್ರಹಣಾ ಘಟಕ ಕಾಮಗಾರಿ ನಿರ್ಮಾಣವಾಗುತ್ತಿದ್ದು, ಇನ್ನು ಒಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಿದರು. ಪಕ್ಕದಲ್ಲೇ ಟ್ರಾನ್ಸ್ ಫರ್ ಸ್ಟೇಷನ್ ಅನ್ನು ಪರಿಶೀಲಿಸಿ ಕಸವನ್ನು ಕಂಪ್ರೆಸ್ ಮಾಡಿ ಅದರಿಂದ ಬಂದ ತ್ಯಾಜ್ಯ ನೀರಿನ ದ್ರಾವಣ(ಲಿಚೆಟ್)ವನ್ನು ಸಮರ್ಪಕವಾಗಿ ಸಂಗ್ರಹಿಸಲು ತಿಳಿಸಿದರು. ಈ ವೇಳೆ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ನಗರದಲ್ಲಿ 50 ಕಡೆ ಟ್ರಾನ್ಸ್ ಫರ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಪೈಕಿ 12 ಅನ್ನು ಸ್ಥಾಪಿಸಲಾಗಿದ್ದು, 8 ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ವೈಟ್ ಟಾಪಿಂಗ್ ಕಾಮಗಾರಿ ಪರಿಶೀಲನೆ :

ವೈಟ್ ಟಾಪಿಂಗ್ ರಸ್ತೆ

ಮೈಸೂರು ರಸ್ತೆಯಿಂದ ಬೆಂಗಳೂರು ವಿಶ್ವ ವಿದ್ಯಾನಿಲಯ ಹಳೆಯ ಹೊರವರ್ತುಲ ರಸ್ತೆಯ ಹೊಯ್ಸಳ ವೃತ್ತದವರೆಗೆ 5.3 ಕಿ.ಮೀ ಉದ್ದದ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ಅದರಲ್ಲಿ ಈಗಾಗಲೇ ಒಂದು ಭಾಗದ ವೈಟ್ ಟಾಪಿಂಗ್ ಮುಗಿದಿದ್ದು, ಪಾದಚಾರಿ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ಇನ್ನುಳಿದರ್ಧ ಭಾಗದಲ್ಲಿ 3.5 ಕಿ.ಮೀ ವೈಟ್ ಟಾಪಿಂಗ್ ಆಗಿದ್ದು, ಜಲಮಂಡಳಿ ವತಿಯಿಂದ ಕುಡಿಯುವ ನೀರು, ಒಳಚರಂಡಿ ಕಾಮಗಾರಿ ಹಾಗೂ ಪಾದಚಾರಿ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ರಸ್ತೆ ಮೀಡಿಯನ್ ಭಾಗವನ್ನು ಯೋಜನಾ ವಿಭಾಗ ಹಾಗೂ ತೋಟಗಾರಿಕಾ ವಿಭಾಗ ಸಮನ್ವಯ ಮಾಡಿಕೊಂಡು ಸರಿಯಾಗಿ ಅಭಿವೃದ್ಧಿಪಡಿಸಲು ತಿಳಿಸಿದರು.

ಉತ್ತರಹಳ್ಳಿ ಮುಖ್ಯ ರಸ್ತೆ ಅಗಲೀಕರಣ ಹಾಗೂ ರಾಜಕಾಲುವೆಯ ಸೇತುವೆ ಸ್ಥಳ ಪರಿಶೀಲನೆ :

ಉತ್ತರಹಳ್ಳಿ ರಾಜಕಾಲುವೆ ಪರಿಶೀಲನೆ

ಉತ್ತರಹಳ್ಳಿ ಮುಖ್ಯ ರಸ್ತೆ(ಕೆಂಗೇರಿಯಿಂದ ಕನಕಪುರ ಮುಖ್ಯ ರಸ್ತೆಯ ಮಾರ್ಗ) 3.5 ಕಿ.ಮೀ ಉದ್ದದ ರಸ್ತೆಯನ್ನು ಅಗಲೀಕರಣ ಮಾಡಬೇಕಿದೆ. ಆದರೆ, ಅಭಿವೃದ್ಧಿ ಹಕ್ಕು ಹಸ್ತಾಂತರ(ಟಿಡಿಆರ್) ಹಾಗೂ ಮರಗಳನ್ನು ತೆರವುಗೊಳಿಸುವ ಪ್ರಕ್ರಿಯೆ ನಡೆಯಬೇಕಿದ್ದು, ಇರುವ ಸಮಸ್ಯೆಯನ್ನು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಇತ್ಯರ್ಥಪಡಿಸಿಕೊಂಡು ರಸ್ತೆ ಅಗಲೀಕರಣ ಕಾಮಗಾರಿಯನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ರಸ್ತೆಯನ್ನು ವಾಹನಗಳ ಸುಗಮ ಸಂಚರಕ್ಕಾಗಿ ತಾತ್ಕಾಲಿಕವಾಗಿ ದುರಸ್ತಿಗೊಳಿಸಲು ತಿಳಿಸಿದರು.

ಉತ್ತರಹಳ್ಳಿ ರಾಜಕಾಲುವೆಯನ್ನು ಕೂಡಲೆ ಅಭಿವೃದ್ಧಿಪಡಿಸಿ ಆರ್.ಸಿ.ಸಿ ತಡೆಗೋಡೆ ನಿರ್ಮಾಣ ಮಾಡಿ ಮಳೆ ನೀರು ಹೊರಬಾರದಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ರಾಜರಾಜೇಶ್ವೇರಿ ನಗರ ವಾರ್ಡ್ ಶ್ರೀನಿವಾಸ ಕ್ರಾಸ್ ಜಂಕ್ಷನ್(ಇಂದ್ರಪ್ರಸ್ತ ಹೋಟೆಲ್ ಬಳಿ) ರಾಜಕಾಲುವೆ ಬಫರ್ ಜೋನ್ ಸ್ಥಳದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಈ ಕೂಡಲೆ ಅದನ್ನು ತೆರವುಗೊಳಿಸಲು ರಾಜಕಾಲುವೆ ವಿಭಾಗದ ಇಂಜಿನಿಯರ್‌ಗಳಿಗೆ ಖಡಕ್ ಸೂಚನೆ ನೀಡಿದರು.

ಮಲ್ಲತಹಳ್ಳಿ ಕೆರೆ ಪರಿಶೀಲನೆ :

ಮಲ್ಲತ್ತಹಳ್ಳಿ ಕೆರೆ ಪರಿಶೀಲನೆ

ಜ್ಞಾನ ಭಾರತಿ ವಾರ್ಡ್ ವ್ಯಾಪ್ತಿಯಲ್ಲಿ 72.15 ಎಕರೆ ಪ್ರದೇಶದ ಮಲ್ಲತಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯ ಆಯುಕ್ತರು, 59 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಕೆರೆಯಲ್ಲಿ ಹೂಳೆತ್ತುವ, ತಡೆಗೋಡೆ ನಿರ್ಮಾಣ, ಗಾಜಿನ ಮನೆ, ತೇಲುವ ಹಾಗೂ ಪಾದಚಾರಿ ಸೇತುವೆ ನಿರ್ಮಾಣ, ತೆರೆದ ರಂಗಮಂದಿರ, ಮನರಂಜನಾ ರೈಲು ಮಾರ್ಗ ನಿರ್ಮಾಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಕೊಳಚೆ ನೀರಿನ ಕಾಲುವೆ ನಿರ್ಮಾಣ, ವಾಯುವಿಹಾರ ಮಾರ್ಗ ಅಭಿವೃದ್ಧಿ, ವಾಯುವಿಹಾರಿಗಳ ವಿಶ್ರಾಂತಿಗಾಗಿ ಆಸನಗಳ ವ್ಯವಸ್ಥೆ, ಶೌಚಾಲಯ, ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೇರೋಹಳ್ಳಿ ವಾರ್ಡ್ ನಲ್ಲಿ ಡಯಾಲಿಸಿಸ್ ಸೆಂಟರ್ ಪರಿಶೀಲನೆ :

ಹೇರೋಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಡಯಾಲಿಸ್ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದ್ದು, ಜಿ + 2 ಕಟ್ಟಡದಲ್ಲಿ 10 ಹಾಸಿಗೆ ಸಾಮರ್ಥ್ಯದ ಹೆರಿಗೆ ಆಸ್ಪತ್ರೆ ಕೂಡಾ ಇರಲಿದೆ. ಆಸ್ಪತ್ರೆಯಲ್ಲಿ ಐಸಿಯು, ಹೆಚ್.ಐ.ವಿ ರೋಗಿಗಳ ಕೊಠಡಿ, ವೈದ್ಯರ ಸಮಾಲೋಚನ ಕೊಠಡಿ, ಲ್ಯಾಬ್, ಶೌಚಾಲಯ, ಆಪರೇಷನ್ ಥಿಯೇಟರ್ ಸೇರಿದಂತೆ ಇನ್ನಿತರೆ ಸೌಲಭ್ಯಗಳು ಲಭ್ಯವಿರಲಿದೆ. ಮುಂದಿನ ಮೂರು ತಿಂಗಳಲ್ಲಿ ಆಸ್ಪತ್ರೆ ಕಾರ್ಯಾರಂಭ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಉದ್ಘಾಟನೆಗೆ ಸಿದ್ದಗೊಂಡ ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ಜೆ.ಪಿ ಪಾರ್ಕ್ ಉದ್ಯಾನವನದಲ್ಲಿ 37 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಇದೇ ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ವಲಯ ಜಂಟಿ ಆಯುಕ್ತರಾದ ನಾಗರಾಜ್, ಮುಖ್ಯ ಇಂಜಿನಿಯರ್ ಗಳಾದ ವಿಜಯ್ ಕುಮಾರ್, ಪ್ರಹ್ಲಾದ್, ಲೋಕೇಶ್, ವಿಜಯ್ ಕುಮಾರ್ ಹರಿದಾಸ್, ಸುಗುಣಾ, ಬಸವರಾಜ್ ಕಬಾಡೆ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

SC Verdict | ಬಿಬಿಎಂಪಿ ಸೇರಿದಂತೆ ದೇಶದೆಲ್ಲಡೆಯ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸುಪ್ರೀಂ ಮಹತ್ವದ ಆದೇಶ

Next Post

BW Special | Varthur Flyover Signature Collection Movement | ವರ್ತೂರು ಎಲಿವೇಟೆಡರ್ ಕಾರಿಡಾರ್ ನಿರ್ಮಾಣ ವಿರೋಧಿಸಿ ಸ್ಥಳೀಯರಿಂದ ಸಹಿ ಸಂಗ್ರಹ ಚಳುವಳಿ

Next Post
ಎಲಿವೇಟೆಡ್ ಕಾರಿಡಾರ್ ಯೋಜನೆ ಕೈಗೊಳ್ಳಲಿರುವ ವರ್ತೂರು ಮುಖ್ಯರಸ್ತೆಯ ದೃಶ್ಯ

BW Special | Varthur Flyover Signature Collection Movement | ವರ್ತೂರು ಎಲಿವೇಟೆಡರ್ ಕಾರಿಡಾರ್ ನಿರ್ಮಾಣ ವಿರೋಧಿಸಿ ಸ್ಥಳೀಯರಿಂದ ಸಹಿ ಸಂಗ್ರಹ ಚಳುವಳಿ

Supreme Court

BDA Shivarama karanth Layout | ಡಾ.ಶಿವರಾಮ ಕಾರಂತ ಲೇಔಟ್ 480 ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಸುಪ್ರೀಂಕೋರ್ಟ್ ಒಪ್ಪಿಗೆ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d