Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bengaluru Big Banyan Tree | 400 ವರ್ಷಗಳ ಪುರಾತನ ದೊಡ್ಡ ಆಲದ ಮರಕ್ಕೆ ಕುತ್ತು – ಮಳೆಗಾಳಿಗೆ ಮುರಿದು ಬಿತ್ತು ಬೀಳಲು ಬೇರಿನ ಸಮೂಹ

ಮತ್ತೆರಡು ಬೀಳಲು ಬೇರುಗಳ ಸಮೂಹ ನೆಲಕ್ಕುರುಳುವ ಸಾಧ್ಯತೆ ಹಿನ್ನಲೆ | ದೊಡ್ಡ ಆಲದ ಮರದ ಸಂರಕ್ಷಣೆ ಬಗ್ಗೆ ಕೆಲವೊಂದು ಕ್ರಮ ಕೈಗೊಳ್ಳುವಂತೆ ದೊಡ್ಡ ಆಲದ ಮರ ಸಂರಕ್ಷಣಾ ಸಮಿತಿ ಸದಸ್ಯರು ಮತ್ತು ತಜ್ಞರಿಂದ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸಲಹೆ- ಸೂಚನೆ

by Bengaluru Wire Desk
May 12, 2022
in Bengaluru Focus, News Wire
Reading Time: 1 min read
0
ದೊಡ್ಡ ಆಲದ ಮರದ ಭಾಗವೊಂದು ಮಳೆ-ಗಾಳಿಗೆ ನೆಲಕ್ಕುರುಳಿರುವುದು

ದೊಡ್ಡ ಆಲದ ಮರದ ಭಾಗವೊಂದು ಮಳೆ-ಗಾಳಿಗೆ ನೆಲಕ್ಕುರುಳಿರುವುದು

ಬೆಂಗಳೂರು, ಮೇ.12 (www.bengaluruwire.com) : ರಾಜಧಾನಿಯ ಹೊರವಲಯದಲ್ಲಿರುವ ದೇಶದ 6ನೇ ಅತಿಹಳೆಯ ದೊಡ್ಡ ಆಲದ ಮರದ ಬೀಳಲು ಬೇರು ಸಮೂಹ ಭಾರೀ ಮಳೆಯಿಂದ ಬಿದ್ದು ಹೋಗಿರುವ ಸ್ಥಳಕ್ಕೆ ಇಂದು ದೊಡ್ಡ ಆಲದ ಮರ ಸಂರಕ್ಷಣಾ ಸಮಿತಿ ಸದಸ್ಯರು ಹಾಗೂ ತಜ್ಞರು ಭೇಟಿ ನೀಡಿ ಆಲದ ಮರದ ಆರೋಗ್ಯ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿ, ಮರದ ಸಂರಕ್ಷಣೆ ಬಗ್ಗೆ ಅಧಿಕಾರಿಗಳಿಗೆ ಸಲಹೆ, ಸೂಚನೆ ನೀಡಿದರು.

ದೊಡ್ಡ ಆಲದ ಮರುವು ಒಟ್ಟು 400 ವರ್ಷಗಳಷ್ಟು ಹಳೆಯದಾಗಿದ್ದು, 3 ಎಕರೆ ಪ್ರದೇಶದಲ್ಲಿ 1,359 ಬೀಳಲು ಬೇರುಗಳನ್ನು ಹೊಂದಿದೆ. ಆ ಪೈಕಿ 811 ಸಂಖ್ಯೆಯ ಬೀಳಲು ನೆಲಕ್ಕೆ ಬೇರು ಬಿಟ್ಟಿದೆ. ಉಳಿದ 548 ಸಂಖ್ಯೆಯ ಬೀಳಲಿನ ಬೇರುಗಳು ನೆಲದಿಂದ 10 ರಿಂದ 20 ಅಡಿ ಎತ್ತರದಲ್ಲಿ ತೂಗುತ್ತಿದೆ. ಇವುಗಳ ಪೈಕಿ ಒಂದು ಬೀಳಲಿನ ಬೇರು ಸಮೂಹ ಮೇ.8ರಂದು ಭಾನುವಾರ ರಾತ್ರಿ ಸುರಿದ ಮಳೆಗೆ ಸಂಪೂರ್ಣವಾಗಿ ಬಿದ್ದು ಹೋಗಿತ್ತು.

ಈ ಹಿನ್ನಲೆಯಲ್ಲಿ ದೊಡ್ಡ ಆಲದ ಮರ ಸಂರಕ್ಷಣಾ ಸಮಿತಿ ಅಧ್ಯಕ್ಷ ಡಾ.ಎ.ಎನ್.ಯಲ್ಲಪ್ಪರೆಡ್ಡಿ ಹಾಗೂ ಸದಸ್ಯರು, ತಜ್ಞರು ಈ ಮರವನ್ನು ಪರಿಶೀಲಿಸಿ ದೊಡ್ಡ ಆಲದ ಮರ ನಿರಂತರವಾಗಿ ಬೆಳೆಯುವ ಮರವಾಗಿದ್ದು, ಹಳೆಯ ಬೀಳಲು ಬೇರು ಮತ್ತು ಬೇರುಗಳ ಸಮೂಹದ ದೃಢತೆಯ ಚೈತನ್ಯವು ಸ್ವಾಭಾವಿಕವಾಗಿ ಹೊಸ ಬೀಳಲು ಬೇರುಗಳ ದೃಢತೆಯ ಚೈತನ್ಯಕ್ಕಿಂತ ಕಡಿಮೆಯಿರುತ್ತದೆ. ಪ್ರಸ್ತುತ ಉರುಳಿ ಬಿದ್ದಿರುವ ಬೀಳಲು ಬೇರುಗಳ ಸಮೂಹ ಭಾರಿ ಗಾಳಿ- ಮಳೆಯಿಂದ ನೈಸರ್ಗಿಕವಾಗಿ ಉರುಳಿ ಬಿದ್ದಿದೆ. ದೊಡ್ಡ ಆಲದ ಮರದ ಮೂಲ ಕಾಂಡವು 60 ವರ್ಷಗಳ ಹಿಂದೆಯೇ ನೈಸರ್ಗಿಕವಾಗಿ ಬಿದ್ದು ನಾಶವಾಗಿದೆ ಎಂದರು.

ದೊಡ್ಡ ಆಲದ ಮರ ಸಂರಕ್ಷಣಾ ಸಮಿತಿ ಈ ಕೆಳಕಂಡಂತೆ ಕ್ರಮ ಕೈಗೊಳ್ಳಲು ತೋಟಗಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ :

ದೊಡ್ಡ ಆಲದ ಮರ ಸಂರಕ್ಷಣಾ ಸಮಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ದೃಶ್ಯ

ಹಾಲಿ ಉರುಳಿ ಬಿದ್ದಿರುವ ಬೀಳಲು ಬೇರುಗಳ ಕಾಂಡ ಸಮೂಹ ಪಕ್ಕದ ಬೇರು ಸಮೂಹಕ್ಕೆ ಹಾನಿ ಮಾಡುವುದನ್ನು ತಪ್ಪಿಸಲು, ಈಗಾಗಲೇ ಬಿದ್ದಿರುವ ಬೇರು ಸಮೂಹವನ್ನು ತ್ವರಿತವಾಗಿ ಕತ್ತರಿಸಿ ತೆರವುಗೊಳಿಸಬೇಕು. ಬಿದ್ದಿರುವ ಬೀಳಲು ಬೇರುಗಳ ಸಮೂಹದ ಆಯ್ದ 8-10 ಅಡಿ ಎತ್ತರದ ಕತ್ತರಿಸಿದ ಕಾಂಡದ ತುಂಡುಗಳನ್ನು ತಯಾರಿಸಿಕೊಂಡು, ಕತ್ತರಿಸಿದ ಭಾಗಕ್ಕೆ VAM (Veslcular Arbuscular Mycorrhiza) ಹೆಚ್ಚಾಗಿ ಹೊಸ ಬೇರು ಬೆಳೆಯಲು ಸಹಕಾರಿಯಾಗಿರುವ ಸೂಕ್ಷ್ಮಾಣು ಪೌಡರ್ ಅನ್ನು ಹಚ್ಚಿ ಬೇರು ಸಮೂಹ ಬಿದ್ದ ಸ್ಥಳದಲ್ಲಿ 2 ರಿಂದ 3 ಕಾಂಡದ ತುಂಡುಗಳನ್ನು ನೆಡುವಂತೆ ಸಲಹೆ ನೀಡಿದ್ದಾರೆ. ಇದರಿಂದಾಗಿ ಕಾಂಡು ಚಿಗುರಿ, ಬೇರುಬಿಟ್ಟು ಮುಂದೆ ಆಲದ ಮರದ ಭಾಗವಾಗುತ್ತದೆ. ಹಾಗೆಯೇ ಹಿಂದೆ ಮರದ ಕಾಂಡ ಬಿದ್ದು ಪಾಳಾಬಿದ್ದಿರುವ 5-6 ಸ್ಥಳದಲ್ಲಿಯೂ ಸಹಾ ಇದೇ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಪರಿಶೀಲನಾ ಸಮಯದಲ್ಲಿ 2 ಬೀಳಲು ಬೇರುಗಳ ಸಮೂಹದ ದೃಢತೆ ನೈಸರ್ಗಿಕವಾಗಿ ಕುಗ್ಗಿದ್ದು, ಮುಂದೆ ಮಳೆ- ಗಾಳಿಗೆ ಬೀಳುವ ಸಂಭವಿರುವುದನ್ನು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದನ್ನು ತಪ್ಪಿಸಲು ಈ ಬೀಳಲು ಬೇರುಗಳ ಸುತ್ತಲೂ ಕಲ್ಲಿನ ಬೋಲ್ಡರ್ಸ್ ಗಳನ್ನು ಜೋಡಿಸಿ, ಮಧ್ಯಭಾಗಕ್ಕೆ ಕೆಂಪು ಮಣ್ಣನ್ನು ತುಂಬಿಸಿದಲ್ಲಿ ಮುಂದೆ ಆಗುವ ನೈಸರ್ಗಿಕ ಅವಘಡದ ತೀವ್ರತೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಬಹುದೆಂದು ತಜ್ಞರು ಅಧಿಕಾರಿಗಳಿಗೆ ಸಲಹೆ ನೀಡಿದರು.

ವಾಸ್ತವವಾಗಿ ಎತ್ತರದ ಬೀಳಲು ಬೇರುಗಳಿಗೆ ಕಬ್ಬಿಣದ ರಾಡ್ ಗಳ ಆಸರೆ ಒದಗಿಸಲು ಸಾಧ್ಯವಿಲ್ಲ. ಇದರಿಂದ ನಿರೀಕ್ಷಿತ ಸಂರಕ್ಷಣೆಯನ್ನು ಸಹ ನೀಡಲು ಸಾಧ್ಯವಿಲ್ಲ. ಹಾಗಾಗಿ ವಾಸ್ತವಾಂಶವನ್ನು ಅವಲೋಕಿಸಿದ ಸಮಿತಿಯು ಭೂಮಿಗೆ ತಾಗುವ ಸಾಧ್ಯತೆಯಿರುವ ಕಾಂಡಗಳಿಗೆ ಮಾತ್ರ ಕಬ್ಬಿಣದ ಲೋಹದ ವೈ ಆಕಾರದ ಆಸರೆ ನೀಡಲು ತಿಳಿಸಿದರು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮೇ ತಿಂಗಳ ಆರಂಭದಿಂದ ಈತನಕ ಹೆಚ್ಚು ಗಾಳಿ- ಮಳೆಯಿಂದ 201 ಮರಗಳು ಬುಡ ಸಮೇತ ಉರುಳಿ ಬಿದ್ದಿದೆ. ಅಲ್ಲದೆ ಸುಮಾರು 845 ಮರಗಳ ರೆಂಬೆಗಳು ಮುರಿದು ಬಿದ್ದಿದೆ. ಅಲ್ಲದೆ ತಮಿಳುನಾಡಿನಲ್ಲಿರುವ ದೇಶದ 3ನೇ ಅತಿದೊಡ್ಡ ಆಲದ ಮರದ ಕೆಲವು ಭಾಗಗಳು ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಹಾನಿಗೀಡಾಗಿದೆ. ಇಂತಹ ನೈಸರ್ಗಿಕ ಪರಿಸ್ಥಿತಿಯಲ್ಲಿ ಮಳೆ ಮತ್ತು ಗಾಳಿಯ ತೀವ್ರತೆಯಿಂದಾಗಿ ಯಾವುದೇ ಮರಗಳು ನೈಸರ್ಗಿಕವಾಗಿ ಹಾನಿಗೀಡಾಗುತ್ತದೆಂದು ದೊಡ್ಡ ಆಲದ ಮರ ಸಂರಕ್ಷಣಾ ಸಮಿತಿಯು ಅಭಿಪ್ರಾಯಪಟ್ಟಿತು.

ದೊಡ್ಡ ಆಲದ ಮರ ಪರಿಶೀಲನೆ ಸಂದರ್ಭದಲ್ಲಿ ಬಟಾನಿಕಲ್ ಸರ್ವೇ ಆಫ್ ಇಂಡಿಯಾ ನಿರ್ದೇಶಕರು ಹಾಗೂ ಕೋಲ್ಕತಾ ಬಟಾನಿಕಲ್ ಗಾರ್ಡನ್ ನ ದೇಶದ ಅತಿದೊಡ್ಡ ಆಲದ ಮರದ ಉಸ್ತುವಾರಿ ತಜ್ಞರಾದ ಡಾ.ಸಂಜಪ್ಪ, ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ಸಸ್ಯಶಾಸ್ತ್ರೀಯ ವಿಭಾಗದ ಡೀನ್ ಮತ್ತು ಮುಖ್ಯಸ್ಥರಾದ ಡಾ.ಬಾಲಕೃಷ್ಣಗೌಡ, ರಾಜ್ಯ ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ.ಎಂ.ಜಗದೀಶ್, ಕೇತೋಹಳ್ಳಿ ಗ್ರಾಮಸ್ಥರು, ಪರಿಸರ ಪ್ರಿಯರು ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

BDA Shivarama karanth Layout | ಡಾ.ಶಿವರಾಮ ಕಾರಂತ ಲೇಔಟ್ 480 ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಸುಪ್ರೀಂಕೋರ್ಟ್ ಒಪ್ಪಿಗೆ

Next Post

Sringeri Mata – Vijaya Yathre 2022 | ಬೆಂಗಳೂರಿನಲ್ಲಿ ಶೃಂಗೇರಿ ಶಾರದಾ ಪೀಠದ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳ 50 ದಿನಗಳ ವಾಸ್ತವ್ಯ

Next Post

Sringeri Mata - Vijaya Yathre 2022 | ಬೆಂಗಳೂರಿನಲ್ಲಿ ಶೃಂಗೇರಿ ಶಾರದಾ ಪೀಠದ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳ 50 ದಿನಗಳ ವಾಸ್ತವ್ಯ

BJP Bangalore | ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಿಗೂ ಉನ್ನತ ಸ್ಥಾನಮಾನ ಅವಕಾಶ ಲಭಿಸಲಿದೆ ; ಸಚಿವ ವಿ.ಸೋಮಣ್ಣ

Please login to join discussion

Like Us on Facebook

Follow Us on Twitter

Recent News

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group