Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW Special | Varthur Flyover Signature Collection Movement | ವರ್ತೂರು ಎಲಿವೇಟೆಡರ್ ಕಾರಿಡಾರ್ ನಿರ್ಮಾಣ ವಿರೋಧಿಸಿ ಸ್ಥಳೀಯರಿಂದ ಸಹಿ ಸಂಗ್ರಹ ಚಳುವಳಿ

ವರ್ತೂರು ಮುಖ್ಯರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಸ್ಥಳೀಯ ವಿರೋಧ | ಫ್ಲೈಓವರ್ ನಿರ್ಮಾಣದ ಬದಲು ರಸ್ತೆ ಅಗಲೀಕರಣ ಅಥವಾ ಅಂಡರ್ ಪಾಸ್ ನಿರ್ಮಿಸಲು ಸಹಿ ಸಂಗ್ರಹ ಚಳುವಳಿ | ಆರೇಳು ವರ್ಷದ ಹಿಂದೆ ಆರಂಭವಾಗಬೇಕಿದ್ದ ಯೋಜನೆಗೆ ಗ್ರಹಣ

by Bengaluru Wire Desk
January 12, 2023
in BW Special, Public interest
Reading Time: 1 min read
0
ಎಲಿವೇಟೆಡ್ ಕಾರಿಡಾರ್ ಯೋಜನೆ ಕೈಗೊಳ್ಳಲಿರುವ ವರ್ತೂರು ಮುಖ್ಯರಸ್ತೆಯ ದೃಶ್ಯ

ಎಲಿವೇಟೆಡ್ ಕಾರಿಡಾರ್ ಯೋಜನೆ ಕೈಗೊಳ್ಳಲಿರುವ ವರ್ತೂರು ಮುಖ್ಯರಸ್ತೆಯ ದೃಶ್ಯ

ಬೆಂಗಳೂರು, ಮೇ.12 (www.bengaluruwire.com) : ವರ್ತೂರಿನ ಕೆರೆ ಕೋಡಿಯಿಂದ ವರ್ತೂರಿನ ವಿಶಾಲ್ ಮಾರ್ಟ್ ವರೆಗೆ ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗಲೆಂದು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (KRDCL) ನಿರ್ಮಿಸಲು ಹೊರಟಿರುವ ಎಲಿವೇಟೆಡ್ ಕಾರಿಡಾರ್ ಮೇಲ್ಸೇತುವೆಗೆ ವರ್ತೂರು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಸಹಿ ಸಂಗ್ರಹ ಚಳುವಳಿ ಆರಂಭಿಸಿದ್ದಾರೆ.

482 ಕೋಟಿ ರೂ. ವೆಚ್ಚದ ಈ ಯೋಜನೆ ನಿರ್ಮಾಣದಿಂದ ವರ್ತೂರಿನ ಸುಮಾರು 20 ಸಾವಿರ ಗ್ರಾಮಸ್ಥರಿಗೆ ಯಾವುದೇ ರೀತಿಯ ಪ್ರಯೋಜನವಿಲ್ಲ. ಈ ಫ್ಲೈಓವರ್ ಮಾಡುವುದರಿಂದ ವರ್ತೂರಿನ ವ್ಯಾಪಾರ ವಹಿವಾಟಿಗೂ, ಭೂಮಿಯ ಬೆಲೆಗೂ ಕುತ್ತು ಬರಲಿದೆ. ಅಲ್ಲದೆ ವರ್ತೂರಿನ ಮುಖ್ಯರಸ್ತೆಯಲ್ಲಿರುವ ಪುರಾತನ ಇತಿಹಾಸಕ್ಕೂ ಧಕ್ಕೆಯಾಗಲಿದೆ. ಇನ್ನು ವರ್ತೂರಿನ ಸುಪ್ರಸಿದ್ಧ ಶ್ರೀ ಚನ್ನರಾಯಸ್ವಾಮಿ ಜಾತ್ರೆಯ ಹೆಸರುವಾಸಿ ರಥದ ಮೆರವಣಿಗೂ ಅಡ್ಡಿಯಾಗುತ್ತದೆ. ಮುಂದೊಂದು ದಿನ ವರ್ತೂರಿನ ಜನರಿಗೆ ಮೆಟ್ರೊ ರೈಲು ಮಾರ್ಗದ ಸೌಲಭ್ಯವೂ ಸಿಗದಂತಾಗುತ್ತದೆ ಎಂದು ಸಹಿ ಸಂಗ್ರಹ ಚಳುವಳಿಯಲ್ಲಿ ತೊಡಗಿರುವ ವರ್ತೂರು ರೈಸಿಂಗ್, ವರ್ತೂರು ನಾಗರೀಕ ರಕ್ಷಣಾ ವೇದಿಕೆ, ವೈಟ್ ಫೀಲ್ಡ್ ರೈಸಿಂಗ್ ಸಂಘಟನೆ ಸೇರಿದಂತೆ ಹಲವು ನಾಗರೀಕ ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ.

ರಸ್ತೆ ಅಗಲೀಕರಣ ಮಾಡಿ ಅಥವಾ ಅಂಡರ್ ಪಾಸ್ ನಿರ್ಮಿಸಿ :

ವರ್ತೂರು ನಾಗರೀಕರಿಂದ ಫ್ಲೈಓವರ್ ನಿರ್ಮಾಣ ವಿರೋಧಿಸಿ ಸಹಿಸಂಗ್ರಹ ಚಳುವಳಿ

ಈ ಫ್ಲೈಓವರ್ ಕಟ್ಟುವ ಬದಲು ವರ್ತೂರು ಮುಖ್ಯ ರಸ್ತೆಯಲ್ಲಿರುವ ಕಟ್ಟಡ ಮಾಲೀಕರ ಮನವೊಲಿಸಿ ರಸ್ತೆ ಅಗಲೀಕರಣ ಮಾಡಲಿ ಅಥವಾ ವರ್ತೂರು ಹೈಸ್ಕೂಲ್ ಮುಂಭಾಗ, ವರ್ತೂರು ಪೊಲೀಸ್ ಸ್ಟೇಷನ್ ಹಾಗೂ ಬಳಗೆರೆ ರಸ್ತೆ ಸಂಪರ್ಕಿಸುವ ಜಾಗದಲ್ಲಿ ಕುಂದಲಹಳ್ಳಿ ಜಂಕ್ಷನ್ ನಲ್ಲಿ ನಿರ್ಮಿಸಿರುವಂತಹ ಅಂಡರ್ ಪಾಸ್ ರಸ್ತೆ ನಿರ್ಮಾಣ ಮಾಡಲಿ. ಆಗ ಟ್ರಾಫಿಕ್ ಸಮಸ್ಯೆ ಪರಿಹಾರವಾಗಿ, ಹಾಲಿ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಆಸಕ್ತಿವಹಿಸಿ ನಿರ್ಮಾಣ ಮಾಡಲು ಹೊರಟಿರುವ ಫ್ಲೈಓವರ್ ಅವಶ್ಯಕತೆಯಿರುವುದಿಲ್ಲ. ವರ್ತೂರು ಮುಖ್ಯರಸ್ತೆಯಲ್ಲಿ ಯಾವುದೇ ಪಕ್ಷದ ಮುಖಂಡರು ಅಥವಾ ಕಾರ್ಯಕರ್ತರು ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಬೆಂಬಲ ನೀಡಿದರೂ ಅವರೆಲ್ಲ ವರ್ತೂರಿನ ಭವಿಷ್ಯದ ಅಭಿವೃದ್ಧಿಯನ್ನು ವಿರೋಧಿಸುವವರು ಎಂದು ತಿಳಿಯಬೇಕಾಗುತ್ತದೆ ಎಂದು ಸಹಿಸಂಗ್ರಹ ಚಳುವಳಿಯಲ್ಲಿ ತೊಡಗಿರುವವರು ಎಚ್ಚರಿಕೆ ನೀಡಿದ್ದಾರೆ.

ವರ್ತೂರು ಮುಖ್ಯ ರಸ್ತೆಯನ್ನು ಸಂಪರ್ಕಿಸುವ ಗ್ರಾಮಗಳಾದ ಸೋರಹುಣಸೆ, ಮಧುರಾನಗರ, ವಾಲೇಪುರ, ಮುತ್ಸಂದ್ರ, ಹಾರೋಹಳ್ಳಿ, ಬಳಗೆರೆ, ಹಲಸಹಳ್ಳಿ ಹಾಗೂ ತಿಪ್ಪಸಂದ್ರ ಗ್ರಾಮಗಳ ಅಭಿವೃದ್ಧಿಗೂ ಈ ಎಲಿವೇಟೆಡ್ ಕಾರಿಡಾರ್ ನಿಂದ ತೊಂದರೆಯಾಗಲಿದೆ. ಈ ಫ್ಲೈಓವರ್ ಒಂದೊಮ್ಮೆ ನಿರ್ಮಾಣವಾದರೆ ಅದರಿಂದ ವರ್ತೂರಿನ ನಾಗರೀಕರಿಗೆ ಪ್ರಯೋಜನವಾಗದು. ಬದಲಿಗೆ ವಿಶಾಲ್ ಮಾರ್ಟ್ ಆದ ನಂತರ ಇರುವ ಅಪಾರ್ಟ್ ಮೆಂಟ್ ಗಳಿಗೆ ಮಾತ್ರ ಅನುಕೂಲಕಾರಿಯಾಗಿದೆ.ವರ್ತೂರಿನ ಜನರನ್ನು ಓಟಿಗೆ ಮಾತ್ರ ಉಪಯೋಗಿಸಿಕೊಂಡು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಇಲ್ಲಿನ ಜನಪ್ರತಿನಿಧಿಗಳು ಈ ವಿಚಾರದಲ್ಲಿ ವರ್ತಿಸುತ್ತಿದ್ದಾರೆ ಎಂದು ಸಹಿ ಸಂಗ್ರಹ ಚಳುವಳಿಯಲ್ಲಿ ತೊಡಗಿರುವ ನಾಗರೀಕರು ದೂರಿದ್ದಾರೆ.

ಅಭಿವೃದ್ಧಿಗೆ ವರ್ತೂರು ಗ್ರಾಮಸ್ಥರ ವಿರೋಧವಿಲ್ಲ. ಆದರೆ ಅಭಿವೃದ್ಧಿ ಹೆಸರಿನಲ್ಲಿ ವರ್ತೂರು ಮುಖ್ಯರಸ್ತೆಯಲ್ಲಿ ಅನಗತ್ಯವಾದ ಎಲಿವೇಟೆಡ್ ಕಾರಿಡಾರ್ ನಿರ್ಮಿಸಿ ವರ್ತೂರನ್ನು 50 ವರ್ಷಗಳ ಹಿಂದಕ್ಕೆ ತಳ್ಳುವುದು ಬೇಡ. ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿಯಿಂದ ವೈಟ್ ಫೀಲ್ಡ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವ ಈ ವರ್ತೂರು ಮುಖ್ಯರಸ್ತೆಯನ್ನು ಅಗಲೀಕರಣ ಮಾಡಿದರೆ ಸಾಕಷ್ಟು ಸಮಸ್ಯೆಗಳು ಪರಿಹಾರವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಒಂದು ತಿಂಗಳವರೆಗೆ ನಡೆಯಲಿದೆ ಸಹಿಸಂಗ್ರಹ ಚಳುವಳಿ :

“ಎಲಿವೇಟೆಡ್ ಕಾರಿಡಾರ್ ನಿರ್ಮಾಣದಿಂದ ವರ್ತೂರು ಸುತ್ತಮುತ್ತಲಿನ ಊರಿನವರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ. ಈ ಕುರಿತಂತೆ ಸರ್ಕಾರಕ್ಕೆ ನಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲು ನಾಲ್ಕು ದಿನದಿಂದ ಎಲ್ಲಾ ನಾಗರೀಕ ಸಂಘಟನೆಗಳು ಜೊತೆಗೂಡಿ ಸಾರ್ವಜನಿಕರಿಂದ ಸಹಿಸಂಗ್ರಹ ಚಳುವಳಿ ಆರಂಭಿಸಿದ್ದೇವೆ. ಒಂದು ತಿಂಗಳ ಅವಧಿಯವರೆಗೆ ಈ ಅಭಿಯಾನ ನಡೆಯಲಿದೆ. ಬಳಿಕ ಮುಖ್ಯಮಂತ್ರಿಗಳು, ಸ್ಥಳೀಯ ಶಾಸಕರು ಹಾಗೂ ಸಂಬಂಧಿಸಿದ ಇಲಾಖೆಗಳಿಗೆ ಸಂಗ್ರಹಿಸಿದ ಸಹಿಯೊಂದಿಗೆ ತಮ್ಮ ಮನವಿ ನೀಡಲಿದ್ದೇವೆ. ಜನರಿಗೆ ಅನಗತ್ಯವಾದ ಎಲಿವೇಟೆಡ್ ಕಾರಿಡಾರ್ ಅನ್ನು ಬಲವಂತವಾಗಿ ನಿರ್ಮಿಸಲು ಹೊರಟಿರುವುದು ಏಕೆ?”

– ಜಗದೀಶ್ ರೆಡ್ಡಿ, ವರ್ತೂರು ರೈಸಿಂಗ್ ಸದಸ್ಯರು
ವರ್ತೂರು ಮುಖ್ಯ ರಸ್ತೆಯಲ್ಲಿ ಫ್ಲೈಓವರ್ ಗೆ ಪರ್ಯಾಯ ಪರಿಹಾರ

ಈ ಹಿಂದೆ ಕೆಆರ್ ಡಿಸಿಎಲ್ ವರ್ತೂರು ಮುಖ್ಯ ರಸ್ತೆಯಲ್ಲಿ 187 ಕೋಟಿ ರೂ. ವೆಚ್ಚದಲ್ಲಿ 1.3 ಕಿ.ಮೀ ಉದ್ದ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಟೆಂಡರ್ ಕರೆದಿತ್ತು. ಆನಂತರ ಯೋಜನೆಯಲ್ಲಿ ಬದಲಾವಣೆ ಮಾಡಿ 1.92 ಕಿ.ಮೀ ಉದ್ದದ ಎಲಿವೇಟೆಡ್ ಫ್ಲೈಓವರನ್ನು 482 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಹೊರಟಿದೆ. ಈ ಯೋಜನೆ ಅನುಷ್ಠಾನ ವಿಚಾರದಲ್ಲಿ ಸ್ಥಳೀಯ ಸಾರ್ವಜನಿಕರಿಂದ ಆಕ್ಷೇಪಣೆ, ಸಲಹೆ- ಸೂಚನೆ ಪಡೆಯದೇ ಕೇವಲ ಕೆಲವು ಪಕ್ಷಗಳ ಕಾರ್ಯಕರ್ತರು, ಮುಖಂಡರನ್ನು ಮಾತ್ರ ಸಂಪರ್ಕಿಸಿ ಯೋಜನೆ ಜಾರಿಗೆ ತರಲು ಹೊರಟಿದ್ದಾರೆ. ಫ್ಲೈಓವರ್ ನಿರ್ಮಾಣಕ್ಕೆಂದು ಮುಖ್ಯರಸ್ತೆಯಲ್ಲಿರುವ ಶೇ.30ರಷ್ಟು ಮಂದಿಗೆ ಮಾತ್ರ ರಸ್ತೆ ಅಗಲೀಕರಣಕ್ಕೆ ಆಸ್ತಿ ಬಿಟ್ಟು ಕೊಡಲು ನೋಟಿಸ್ ನೀಡಲಾಗಿದೆ. ಯೋಜನೆಯಿಂದ ಆಸ್ತಿ ಕಳೆದುಕೊಳ್ಳುವವರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವ ವಿಚಾರದಲ್ಲೂ ಕೆಆರ್ ಡಿಸಿಎಲ್ ಆಗಲಿ, ಜನಪ್ರತಿನಿಧಿಗಳಾಗಲಿ ಪಾರದರ್ಶಕತೆ ಕಾಯ್ದುಕೊಳ್ಳುತ್ತಿಲ್ಲ ಎಂದು ವರ್ತೂರಿನ ಜನತೆ ಅಲವತ್ತುಕೊಂಡಿದ್ದಾರೆ.

ವರ್ತೂರು ಫ್ಲೈಓವರ್ ಯೋಜನೆ ಹಾಗೂ ನಾಗರೀಕರ ಸಹಿ ಸಂಗ್ರಹ ಚಳುವಳಿ ಕುರಿತಂತೆ ಕೆಆರ್ ಡಿಸಿಎಲ್ ಮುಖ್ಯ ಎಂಜಿನಿಯರ್ ಆರ್.ಪ್ರಸಾದ್ ಹಾಗೂ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿಯವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ.

2016-17ರಲ್ಲೇ ಆರಂಭವಾಗಬೇಕಿದ್ದ ಯೋಜನೆಗೆ ಗ್ರಹಣ :

ಕೆಆರ್ ಡಿಸಿಎಲ್ ಸಂಸ್ಥೆಯು 35 ಅಡಿಯಿಂದ 60 ಅಡಿ ಅಗಲವಿರುವ ವರ್ತೂರು ಮುಖ್ಯರಸ್ತೆಯನ್ನು 150 ಅಡಿಯಷ್ಟು ಅಗಲೀಕರಣ ಮಾಡಿ ಫ್ಲೈಓವರ್ ನಿರ್ಮಿಸುವ ಉದ್ದೇಶ ಹೊಂದಿತ್ತು. 2016-17ರಲ್ಲೇ ಆರಂಭವಾಗಬೇಕಿದ್ದ ವರ್ತೂರು ಫ್ಲೈಓವರ್ ಕಾಮಗಾರಿ ಸ್ಥಳೀಯರ ವಿರೋಧ, ಜನಪ್ರತಿನಿಧಿಗಳ ಹಸ್ತಕ್ಷೇಪ, ಯೋಜನೆಯಲ್ಲಿ ಸಾಕಷ್ಟು ಬದಲಾವಣೆಗಳ ಕಾರಣಕ್ಕೆ ಯೋಜನೆ ಅನುಷ್ಠಾನ ಮಾಡುವಲ್ಲಿ ಸೋತಿದೆ. ಇತ್ತ ಸ್ಥಳೀಯರ ಬೇಡಿಕೆಯಂತೆ ರಸ್ತೆ ಅಗಲೀಕರಣವೂ ಆಗಿಲ್ಲ. ಅತ್ತ ವರ್ತೂರು ಎಲಿವೇಟೆಡ್ ಕಾರಿಡಾರ್ ಯೋಜನೆಯು ಅಂದುಕೊಂಡಂತೆಯೂ ಸಾಗುತ್ತಿಲ್ಲ. ಇದರ ಮಧ್ಯೆ ದಿನೇ ದಿನೇ ಇಲ್ಲಿನ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ವಾಹನ ಸವಾರರು ಪ್ರತಿ ನಿತ್ಯ ಪರದಾಡುವಂತಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

RR Nagar Zone City Rounds | ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರಾಜರಾಜೇಶ್ವರಿ ನಗರ ವಲಯದಲ್ಲಿ ಸಿಟಿ ರೌಂಡ್ಸ್

Next Post

BDA Shivarama karanth Layout | ಡಾ.ಶಿವರಾಮ ಕಾರಂತ ಲೇಔಟ್ 480 ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಸುಪ್ರೀಂಕೋರ್ಟ್ ಒಪ್ಪಿಗೆ

Next Post
Supreme Court

BDA Shivarama karanth Layout | ಡಾ.ಶಿವರಾಮ ಕಾರಂತ ಲೇಔಟ್ 480 ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಸುಪ್ರೀಂಕೋರ್ಟ್ ಒಪ್ಪಿಗೆ

ದೊಡ್ಡ ಆಲದ ಮರದ ಭಾಗವೊಂದು ಮಳೆ-ಗಾಳಿಗೆ ನೆಲಕ್ಕುರುಳಿರುವುದು

Bengaluru Big Banyan Tree | 400 ವರ್ಷಗಳ ಪುರಾತನ ದೊಡ್ಡ ಆಲದ ಮರಕ್ಕೆ ಕುತ್ತು – ಮಳೆಗಾಳಿಗೆ ಮುರಿದು ಬಿತ್ತು ಬೀಳಲು ಬೇರಿನ ಸಮೂಹ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d