Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ರಾಜಧಾನಿ ಮಳೆನೀರು ನಿರ್ವಹಣೆಗೆ ಅಷ್ಟ ದಿಕ್ಕುಗಳಲ್ಲಿಯೂ ಸಚಿವರ ನೇತೃತ್ವದ ಕಾರ್ಯಪಡೆ ರಚನೆ – ಸಿಎಂ ಬೊಮ್ಮಾಯಿ

ದಾಸರಹಳ್ಳಿ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಿಎಂ ಎಚ್.ಡಿ.ಕೆ ಭೇಟಿ - ಪರಿಶೀಲನೆ | ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ನಿರ್ಲಕ್ಯಕ್ಕೆ ಎಚ್ ಡಿಕೆ ಗರಂ

by Bengaluru Wire Desk
May 20, 2022
in Bengaluru Focus, Public interest
Reading Time: 2 mins read
0

ಬೆಂಗಳೂರು, ಮೇ.20(www.bengaluruwire.com) :
ರಾಜಧಾನಿಯಲ್ಲಿ ಮಳೆ‌ ನೀರು ನಿರ್ವಹಣೆಗೆ ಅಷ್ಟ ದಿಕ್ಕುಗಳಿಗೂ ಅಂದರೆ ಪ್ರತಿ ಬಿಬಿಎಂಪಿ ವಲಯದಲ್ಲಿಯೂ ಸಚಿವರ ಮತ್ತು ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆಯನ್ನು ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುರಿದ ಭಾರಿ ಮಳೆಯಿಂದಾಗಿ ಕೆ.ಅರ್.ಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಕೆಲ ಪ್ರದೇಶಗಳಲ್ಲಿ ಹಾನಿಯನ್ನುಂಟು ಮಾಡಿದ ಸ್ಥಳಕ್ಕೆ ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾತನಾಡಿದ ಅವರು, ಕಾರ್ಯಪಡೆಯಲ್ಲಿ ಒಬ್ಬ ಸಚಿವರನ್ನು ಮುಖ್ಯಸ್ಥರನ್ನಾಗಿ ಮಾಡಿ, ಆ ಭಾಗದ ಶಾಸಕರು, ಸಂಸದರು, ಎಂಎಲ್ ಸಿ ಗಳು , ಹಿರಿಯ ಅಧಿಕಾರಿಗಳು ಸಮಿತಿಯಲ್ಲಿ ಸದಸ್ಯರಾಗಿರುತ್ತಾರೆ. ಈ ಕಾರ್ಯಪಡೆಗಳ ನೇತೃತ್ವದಲ್ಲಿ ಆಯಾ ವಲಯದ ಅಭಿವೃದ್ಧಿ ಕಾರ್ಯಗಳು, ಪ್ರವಾಹದಂತಹ ಸಂದರ್ಭಗಳಲ್ಲಿ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ನೀಡಿ ಇಂದೇ ಆದೇಶ ಹೊರಡಿಸಲಾಗುವುದು ಎಂದರು.

ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರ ಅಳಲು ಆಲಿಸಿದ ಸಿಎಂ ಬೊಮ್ಮಾಯಿ

ಕ್ಷೇತ್ರದ ಅಭಿವೃದ್ಧಿ,ಕಾಮಗಾರಿ ಪರಿಶೀಲನೆ, ತುರ್ತು ಸಂದರ್ಭದಲ್ಲಿ ಟಾಸ್ಕ್‌ಫೋರ್ಸ್ ವಲಯ ಉಸ್ತುವಾರಿ ನೋಡಿಕೊಳ್ಳಲಿದೆ. ಬೆಂಗಳೂರು ಅಜೆಂಡಾಗೆ ಟಾಸ್ಕ್ ಫೋರ್ಸ್ ಪುನಾರಚನೆಗೆ ಈ ಹಿಂದೆ  ಮಾಜಿ ಸಿಎಂ ಎಸ್.ಎಂ ಕೃಷ್ಣ ಸಲಹೆ ನೀಡಿದ್ದರು. ಆ ಸಲಹೆ ಬೆನ್ನೆಲ್ಲೆ ಬಸವರಾಜ ಬೊಮ್ಮಾಯಿ ಟಾಸ್ಕ್ ಫೋರ್ಸ್ ರಚಿಸಲು ಮುಂದಾಗಿದ್ದಾರೆ.

ಕೆ.ಅರ್.ಪುರ ಕ್ಷೇತ್ರದ ಶಾಸಕ ಹಾಗೂ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ ಅವರೊಂದಿಗೆ ಕ್ಷೇತ್ರದ ವ್ಯಾಪ್ತಿಯಲ್ಲಿನ ಸಾಯಿ ಬಡಾವಣೆ, ಪೈ ಬಡಾವಣೆ, ನಾಗಪ್ಪ ಬಡಾವಣೆ, ಹೊರ ಮಾವು ಸೇರಿದಂತೆ ಹಲ ಪ್ರದೇಶಗಳಲ್ಲಿ ಸಂಚರಿಸುವ ಮೂಲಕ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು.

ನಿನ್ನೆ ಒಂದು ಭಾಗ ನೋಡಿದ್ದೇವೆ. ಇಂದು ಮತ್ತೊಂದು ಭಾಗ ಪರಿಶೀಲನೆ ಮಾಡಿದ್ದೇವೆ. ಈ ಭಾಗದ ರೈಲ್ವೆ ಭಾಗದಲ್ಲಿ ಸಮಸ್ಯೆ ಇದೆ. 42 ಕೋಟಿ ರೂ. ಅನುದಾನದಲ್ಲಿ ಅಲ್ಲಿ ಕಾಮಗಾರಿ ನಡೆಸಿ ಸಮಸ್ಯೆ ಬಗೆ ಹರಿಸುತ್ತೇವೆ. 900 ಮೀಟರ್ ಹೆಚ್ಚುವರಿ ಮಳೆನೀರು ಚರಂಡಿ ಕೂಡ ಮಾಡುತ್ತಿದ್ದೇವೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಹೇಳಿದರು.

ಕೆಲವು ಕಡೆ ರಾಜಕಾಲುವೆ ಮೇಲೆ ಮನೆ ನಿರ್ಮಾಣ ಮಾಡಿದ್ದಾರೆ. ಅದನ್ನು ತೆರವು ಮಾಡಿಸುವ ಕೆಲಸ ಲಮಾಡುತ್ತೇವೆ. ಯಾವುದೇ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಬಾರದು ಎಂದು ಕಠಿಣ ಆದೇಶ ಮಾಡಿದ್ದೇನೆ. ಹಾಗಾಗಿ ಕೆರೆ ಜಾಗಗಳಲ್ಲಿ ಬಿಡಿಎ ವಸತಿ ನಿರ್ಮಾಣ ನೋಟಿಫಿಕೆಷನ್ ರದ್ದು ಮಾಡಿದ್ದೇವೆ ಎಂದು ತಿಳಿಸಿದರು.

ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ  ರಾಜೇಂದ್ರ ಸಿಂಗ್, ಬಿಬಿಎಂಪಿ ಮುಖ್ಯ ಅಯುಕ್ತರಾದ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ‌ಉಪಸ್ಥಿತರಿದ್ದರು.

ದಾಸರಹಳ್ಳಿಯ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಿಎಂ ಎಚ್.ಡಿ.ಕೆ ಭೇಟಿ – ಪರಿಶೀಲನೆ :

ದಾಸರಹಳ್ಳಿಯ ರುಕ್ಮಿಣಿ‌ನಗರ, ಬೆಲ್ಮಾರ್ ಬಡಾವಣೆ, ಚಿಕ್ಕಬಾಣಾವಾರ ಪ್ರದೇಶಗಳ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಶುಕ್ರವಾರ ಭೇಟಿ ನೀಡಿದರು.

ನಗರ ಪ್ರದಕ್ಷಿಣೆ ವೇಳೆ ಕುಮಾರಸ್ವಾಮಿ ಮಾತನಾಡಿ, ನಾನು ಮುಖ್ಯಮಂತ್ರಿ ಆಗಿದ್ದಾಗ ದಾಸರಹಳ್ಳಿ ಕ್ಷೇತ್ರಕ್ಕೆ ನೀಡಿದ್ದ ಅನುದಾನವನ್ನು ನಂತರ ತಡೆ ಹಿಡಿದರು. ಇಷ್ಟು ವರ್ಷಗಳಾದರೂ ಯಾಕೆ ಇಲ್ಲೆಲ್ಲಾ ಅಭಿವೃದ್ಧಿ ಆಗಿಲ್ಲ? ಸಣ್ಣ ಮಕ್ಕಳನಿಟ್ಟುಕೊಂಡು ಇಲ್ಲಿನ ಜನತೆ ಹೇಗೆ ಜೀವನ ಮಾಡಬೇಕು? ನಗರದ 28 ವಿಧಾನಸಭಾ ಕ್ಷೇತ್ರದಲ್ಲಿ 15 ವರ್ಷ ದಲ್ಲಿ ಎಷ್ಟು ಹಣ ಬಿಡುಗಡೆ ಮಾಡಿದ್ದಾರೆ ಎಂದು ಮಾಹಿತಿ ಪಡೆಯುತ್ತೇನೆ.

ದಾಸರಹಳ್ಳಿಯಲ್ಲಿ ಪರಿಶೀಲನೆ ನಡೆಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ನಿಮ್ಮ ಶಾಸಕರ ಕ್ಷೇತ್ರ ಗಳಿಗೆಲ್ಲ ಮುಖ್ಯಮಂತ್ರಿ ಗಳೇ ನೀವು ಹೋಗಬೇಕಾಗಿದೆ. ನೀವು ಎಷ್ಟು ವರ್ಷ ಇರ್ತೀರೋ ಗೊತ್ತಿಲ್ಲ. ಜನರ ಜೀವನದ ಜೊತೆ ಚೆಲ್ಲಾಟ ಆಡಬೇಡಿ. ನಗರ ಪ್ರದಕ್ಷಿಣಿ ಕಾಟಾಚಾರದ ಫೋಟೋ ಶೂಟ್ ಆಗಬಾರದು. ಬಡವರ ಜೀವನದ ಜೊತೆ ಚೆಲ್ಲಾಟ ಆಡವಾರದು‌. ಕೆಆರ್ ಪುರಂ‌ ವಿಧಾನಸಭಾ ಕ್ಷೇತ್ರಕ್ಕೆ 1600 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಆದ್ರೆ ಅಲ್ಲಿನ ಜನ ನೀರಿನಲ್ಲಿ ತೇಲುತ್ತಿದ್ದಾರೆ.

ಬೆಂಗಳೂರಿನಲ್ಲಿ ಚಂಬಲ್ ಕಣಿವೆ ರೀತಿಯ ದರೋಡೆಕೋರರಿದ್ದಾರೆ :

ಸಿಎಂ ನಾಲ್ಕು ದಿನದ ನಗರ ಪ್ರದಕ್ಷಣೆಯಲ್ಲಿ ಅವರಿಗೆ ನಗರದಲ್ಲಿನ ಮಳೆಹಾನಿಯ ಅನುಭವ ಆಗಿದೆ. ಒಂದು ಕಾಲದಲ್ಲಿ ಚಂಬಲ್ ಕಣಿವೆ ದರೋಡೆ ಕೋರರನ್ನ ಕಾಣುತ್ತಿದ್ದವು. ಈಗ ಬೆಂಗಳೂರಿನಲ್ಲಿ ದರೋಡೆ ಕೋರರಿದ್ದಾರೆ. ಸಾಕು ದರೋಡೆ ಮಾಡಿದ್ದು. ತಿನ್ನೋದು ಎರಡು ತುತ್ತು ಅನ್ನ, ಒಂದು ಸಲ ಯೋಚನೆ ಮಾಡಿ ಎಂದು ಬಿಬಿಎಂಪಿ ಮತ್ತಿತರ ಸಂಬಂಧಿಸಿದ ಅಧಿಕಾರಿಗಳಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚಾಟಿ ಬೀಸಿದರು.

“20 ವರ್ಷದಿಂದ ರಾಜಕಾಲುವೆ ಅಂತಾ ಚರ್ಚೆ ಮಾಡುತ್ತಿದ್ದಾರೆ. ಇಷ್ಟು ದಿನ ಬೇಕಾ ಸಮಸ್ಯೆ ಬಗೆಹರಿಸೋಕೆ? ಜನಗಳ ಮದ್ಯೆ ಶೋ ಮಾಡೊದಲ್ಲ ಕಾಮನ್ ಮ್ಯಾನ್ ಚೀಫ್ ಮಿನಿಸ್ಟರ್, ಕಾಮನ್ ಮ್ಯಾನ್‌ಗಳ ಸಮಸ್ಯೆ ಬಗೆಹರಿಸಬೇಕು.
ಮಾಧ್ಯಮಗಳು ಟೀಕೆ ಮಾಡಿವೆ ಅಂತಾ ಮಾಧ್ಯಮಗಳ ವಿರುದ್ದ ಮಾತನಾಡೋದಲ್ಲ. ಸಮಸ್ಯೆ ಇರುವ ಸ್ಥಳಗಳಲ್ಲಿ ಧನಾತ್ಮಕವಾಗಿ ಕೆಲಸ ಮಾಡಬೇಕು. ಕಾಟಾಚಾರದ ಕೆಲಸ ಮಾಡಬಾರದು. ನಗರ ಪ್ರದಕ್ಷಿಣೆ ಮಾಡಬೇಡಿ, ಮಾಧ್ಯಮಗಳ ವಿಡಿಯೋ ತುಣುಕುಗಳನ್ನ ನೋಡಿ. ಆ ವಿಡಿಯೋ ಇಟ್ಟುಕೊಂಡು ಸಮಸ್ಯೆ ಬಗೆಹರಿಸಿ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಿವಿಮಾತು ಹೇಳಿದರು.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ‌ (KRIDL) ಅನ್ನೋ ಸಂಸ್ಥೆಯನ್ನು ಮೊದಲು ಮುಚ್ಚಿ. ಈ ಕೆ‌ಆರ್‌ಐ‌ಡಿ‌ಎಲ್ ಸಂಸ್ಥೆಯಿಂದ ಲೂಟಿ ಮಾಡೋಕೆ ಇಟ್ಟುಕೊಳ್ಳಲಾಗಿದೆ.
ಅವರ ಮಂತ್ರಿ ಮಂಡಲ, ಪಕ್ಷದ ಶಾಸಕರ ಅಭಿವೃದ್ದಿ ಆದರೆ ಮಾತ್ರ ಅದು ಅಭಿವೃದ್ದಿನಾ? ಮಳೆಹಾನಿಯಿಂದ ನಷ್ಟಕ್ಕೊಳಗಾದವರಿಗೆ 25 ಸಾವಿರ ಪರಿಹಾರ ಘೋಷಣೆ ಮಾಡಿದ್ದೀರ, ಜನಗಳು ಭಿಕ್ಷುಕರಾ?

ಮಳೆಯಿಂದ ನಷ್ಟ ಆಗಿರುವವರಿಗೆ ಸರ್ಕಾರ ಸರಿಯಾದ ಪರಿಹಾರ ಕೊಡಬೇಕು. ತೋರಿಕೆಗೆ ಅಷ್ಟೋ ಇಷ್ಟೋ ಕೊಟ್ಟು ಸುಮ್ಮನಾಗಬಾರದು. ಸಾರ್ವಜನಿಕರಿಗೆ ನಷ್ಟ ಆಗಿರುವ ಶೇ.75ರಷ್ಟು ಪರಿಹಾರ ಕೊಡಬೇಕು. ಆ ಪರಿಹಾರ ನೀಡಿಕೆಯಲ್ಲೂ ಅಧಿಕಾರಿಗಳು ಮತ್ತೆ ದುಡ್ಡು ಹೊಡೆಯಲು ನೋಡುತ್ತಾರೆ. ಹಾಗಾಗದಂತೆ ಎಚ್ಚರಿಕೆವಹಿಸಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಕಿವಿಮಾತು ಹೇಳಿದರು.

WhatsApp Join our WhatsApp Channel
Previous Post

Textile Park | ಚಿಕ್ಕಬಳ್ಳಾಪುರದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದ ಸಚಿವ ಡಾ.ಕೆ.ಸುಧಾಕರ್

Next Post

ACB Raid Today | ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ – ಉಪ ತಹಸೀಲ್ದಾರ್ ಸೇರಿ ಇಬ್ಬರ ಬಂಧನ

Next Post
ಎಸಿಬಿ ಕೇಂದ್ರ ಕಚೇರಿ, ಬೆಂಗಳೂರು

ACB Raid Today | ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ - ಉಪ ತಹಸೀಲ್ದಾರ್ ಸೇರಿ ಇಬ್ಬರ ಬಂಧನ

ಬೆಂಗಳೂರಿನ ಮಳೆ ಸಂಬಂಧಿತ ಸಮಸ್ಯೆಗೆ ಸಚಿವರ ನೇತೃತ್ವದ ಕಾರ್ಯಪಡೆ ರಚನೆ

Please login to join discussion

Like Us on Facebook

Follow Us on Twitter

Recent News

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group