Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | BBMP TVCC Cell Major Surgery |ಬಿಬಿಎಂಪಿ ಮುಖ್ಯ ಆಯುಕ್ತರ ಟಿವಿಸಿಸಿ ಕೋಶಕ್ಕೆ ಮರುಜೀವ : ಕಳಪೆ ಕಾಮಗಾರಿಗಳಿಗೆ ಬ್ರೇಕ್ ಹಾಕಲು ಹೊಸ ಪ್ಲಾನ್

ಪಾಲಿಕೆ ನಡೆಸುವ ಸಾವಿರಾರು ಕಾಮಗಾರಿಗಳಲ್ಲಿ ಟಿವಿಸಿಸಿ ಕೋಶ ಪ್ರತಿ ವರ್ಗದ ಶೇ.10ರಷ್ಟು ಕಾಮಗಾರಿಗಳ ಗುಣಮಟ್ಟ ಪರಿಶೀಲನೆ | ಯೋಜನಾ ವಿಶೇಷ ಆಯುಕ್ತರ ಅಧೀನದಲ್ಲಿದ್ದ ಟಿವಿಸಿಸಿ ಇನ್ನು ಮುಂದೆ ಮುಖ್ಯ ಆಯುಕ್ತರ ನೇರ ಸುಪರ್ದಿಗೆ

by Bengaluru Wire Desk
May 26, 2022
in Bengaluru Focus, BW Special
Reading Time: 1 min read
0
ಬಿಬಿಎಂಪಿ ಕಾಮಗಾರಿಗಳ ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕಾಮಗಾರಿಗಳ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.26 (www.bengaluruwire.com) : ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ವರ್ಷಂಪ್ರತಿ ನಡೆಯುವ ಸಾವಿರಾರು ಕೋಟಿ ರೂ ಕಾಮಗಾರಿಗಳ ಬಗ್ಗೆ ನಿಗಾ ವಹಿಸಲೆಂದು ಯೋಜನಾ ವಿಶೇಷ ಆಯುಕ್ತರ ಅಧೀನದಲ್ಲಿದ್ದ ಆಯುಕ್ತರ ತಾಂತ್ರಿಕ ಮತ್ತು ಜಾಗೃತ ಕೋಶ (TVCC)ವನ್ನು ಈ ಹಿಂದೆಯಿದ್ದಂತೆ ಮುಖ್ಯ ಆಯುಕ್ತರ ಅಧೀನದಡಿ ತರಲಾಗಿದೆ. ಆ ಮೂಲಕ ನಕಲಿ ಬಿಲ್ ಪಾವತಿ, ಗುಣಮಟ್ಟವಿಲ್ಲದ ಕಾಮಗಾರಿಗಳಿಗೆ ಅಂಕುಶ ಹಾಕಲು ಹೊಸ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೊರಟಿದ್ದಾರೆ.

ಈ ಕುರಿತಂತೆ ಮುಖ್ಯ ಆಯುಕ್ತರು ಮೇ.18ರಂದು ಸುತ್ತೋಲೆ ಹೊರಡಿಸಿದ್ದಾರೆ. ಈ ಹೊಸ ಸುತ್ತೋಲೆಯಿಂದಾಗಿ ರಸ್ತೆ, ಒಳಚರಂಡಿ, ದೊಡ್ಡ ದೊಡ್ಡ ಯೋಜನೆಗಳು, ಬೃಹತ್ ನೀರುಗಾಲುವೆ ಕೆಲಸಗಳು ಸೇರಿದಂತೆ ಸಾವಿರಾರು ಅಭಿವೃದ್ಧಿ ಕಾಮಗಾರಿಗಳ ತಾಂತ್ರಿಕ ಅಂದಾಜು, ಗುಣಮಟ್ಟ ಪರಿಶೀಲನೆ, ಆಯ್ದ ಬಿಲ್ ಗಳ ಪರಿಶೀಲನೆಯನ್ನು ಯೋನಾ ವಿಶೇಷ ಆಯುಕ್ತರ ಮೇಲುಸ್ತುವಾರಿಯಿಂದ ಪುನಃ ಮುಖ್ಯ ಆಯುಕ್ತರ ಅಧೀನದಲ್ಲಿ ಟಿವಿಸಿಸಿ ಸೆಲ್ ಕಾರ್ಯನಿರ್ವಹಿಸಬೇಕಾಗಿದೆ.

ಯಾಕೆ ಈ ಬದಲಾವಣೆ ಮಾಡಲಾಗಿದೆ ?

ಯೋಜನೆ ವಿಶೇಷ ಆಯುಕ್ತರ ವಿಭಾಗದಡಿ ಪಾಲಿಕೆಯಲ್ಲಿನ 12 ವಿವಿಧ ಕಾಮಗಾರಿ ವಿಭಾಗಗಳಡಿ ಬರುವ ಎಂಜನಿಯರ್ ಗಳು ಕಾಮಗಾರಿಗೆ ಟೆಂಡರ್ ಕರೆಯುವುದು, ಗುತ್ತಿಗೆ ಸಂಸ್ಥೆಗಳಿಂದ ಕಾಮಗಾರಿ ಮಾಡಿಸುವುದು, ಗುತ್ತಿಗೆ ಸಂಸ್ಥೆಯು ಸಲ್ಲಿಸಿದ ಕಾಮಗಾರಿ ಬಿಲ್ ಗಳ ಪ್ರಕ್ರಿಯೆ ನಡೆಸುವುದು ಮೊದಲಾದ ಕಾರ್ಯಗಳ ಮೇಲುಸ್ತುವಾರಿ ನಡೆಸುತ್ತಿತ್ತು. ಅದೇ ಹೊತ್ತಿನಲ್ಲಿ ವಿಶೇಷ ಆಯುಕ್ತರ ಅಧೀನದಲ್ಲಿದ್ದ ಟಿವಿಸಿಸಿ ಕೋಶದ ಅಧಿಕಾರಿಗಳು ಆಯ್ದ ಕಾಮಗಾರಿಗಳ ಪರಿಶೀಲನೆ ನಡೆಸುವುದು, ಬಿಲ್ ಗಳ ಪರಿಶೀಲಿಸುವುದು, ಅನುಮಾನ ಕಂಡು ಬಂದ ಕಾಮಗಾರಿ ಸ್ಥಳಗಳಿಗೆ ಹಠಾತ್ ಭೇಟಿ ನೀಡುವುದು, ಕಳಪೆ ಕಾಮಗಾರಿಗಳ ದೂರು ಕೇಳಿ ಬಂದ ಪ್ರಕರಣಗಳನ್ನು ತನಿಖೆ ನಡೆಸುವುದು. ಹೀಗೆ ಟಿವಿಸಿಸಿ ನಡೆಸುತ್ತಿದ್ದ ಕೆಲಸಗಳ ಮೇಲೆ ಅದೇ 12 ವಿಭಾಗಗಳಲ್ಲಿದ್ದ ಅಧಿಕಾರಿಗಳು ಸಾಕಷ್ಟು ಪ್ರಭಾವ ಬೀರಿ ತಮ್ಮ ಕೆಲಸ ಮಾಡಿಸಿಕೊಳ್ಳಲು ಅನುಕೂಲವಾಗುತ್ತಿತ್ತು. ಇದರಿಂದ ಟಿವಿಸಿಸಿ ಕೋಶದ ಕಾರ್ಯನಿರ್ವಹಣೆ ಬಗ್ಗೆಯೇ ಎಲ್ಲರೂ ಅನುಮಾನ ಪಡುವಂತಾಗಿತ್ತು.

ಈ ಹಿಂದೆ ಟಿವಿಸಿಸಿಯಲ್ಲಿ ಚೀಫ್ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದವರು ಹಾಗೂ ಅವರ ಸಹದ್ಯೋಗಿಗಳು ರಾಜರಾಜೇಶ್ವರಿ ನಗರ ವಲಯದಲ್ಲಿ ನಡೆಸದ ಕಾಮಗಾರಿಗಳಿಗೂ ಬಿಲ್ ಪಾವತಿ ಮಾಡಿದ್ದರೆಂದು ಲೋಕಾಯುಕ್ತ ವರದಿಯಲ್ಲೂ ಉಲ್ಲೇಖವಾಗಿತ್ತು. ಇದು ಬಿಬಿಎಂಪಿಯ ಮುಖ್ಯ ಆಯುಕ್ತರು ಹಾಗೂ ಆಡಳಿತಾಗರರಿಗೂ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿತ್ತು. ಹಾಗಾಗಿ 04 ಜುಲೈ 2006ರಲ್ಲಿನ ಆದೇಶದಂತೆ ಪಾಲಿಕೆ ಆಯುಕ್ತರ ಅಧೀನದಲ್ಲಿ ರಚನೆಯಾಗಿದ್ದ ಟಿವಿಸಿಸಿಯನ್ನು ಪುನಃ ಈಗ ಮುಖ್ಯ ಆಯುಕ್ತರ ಅಧೀನದಲ್ಲಿ ಕಾರ್ಯನಿರ್ವಹಿಸಲು ಅನುವಾಗುವಂತೆ ಕಳೆದು ಕೊಂಡ ಅಧಿಕಾರವನ್ನು ಪುನಃ ನೀಡಿ ಟಿವಿಸಿಸಿಯನ್ನು ಸಶಕ್ತಗೊಳಿಸುವ ಕೆಲಸಕ್ಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೈ ಹಾಕಿದ್ದಾರೆ.

“ಇಷ್ಟು ದಿನ ಕಾಮಗಾರಿ ನಡೆಸುತ್ತಿದ್ದಿದ್ದು ಅದೇ ಯೋಜನಾ ವಿಭಾಗ. ಪುನಃ ಆ ಕಾಮಗಾರಿಗಳನ್ನು ಪರಿಶೀಲನೆ ನಡೆಸುವ ಕೋಶವೂ ಅದೇ ವಿಭಾಗದಲ್ಲಿತ್ತು. ಇದರಿಂದ ಟಿವಿಸಿಸಿ ಯಾವುದೇ ಪ್ರಭಾವಕ್ಕೆ ಒಳಗಾಗದೆ ಸೂಕ್ತ ರೀತಿ ಕೆಲಸ ನಿರ್ವಹಿಸದಿರುವುದು ಸಾಧ್ಯವಿಲ್ಲ. ಹಾಗಾಗಿ ಈ ಹಿಂದೆ 04.07.2006ರ ಸುತ್ತಲೆಯಂತೆ ಟಿವಿಸಿಸಿಯು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯ ಆಯುಕ್ತರ ಅಧೀನದಲ್ಲಿ ನೇರವಾಗಿ ಕೆಲಸ  ಮಾಡಲಿದೆ. ಅದೇ ರೀತಿ ಪ್ರತಿ ವರ್ಗದ ಕಾಮಗಾರಿಗಳ ಶೇ.10ರಷ್ಟು ಕೆಲಸಗಳ ಗುಣಮಟ್ಟವನ್ನು, ವಲಯದಲ್ಲಿ ನಡೆಸಿರುವ ಆಯ್ದ ಕಾಮಗಾರಿಗಳು ಮತ್ತು ಆಯ್ದ ಬಿಲ್ ಗಳ ಬಗ್ಗೆಯೂ ಪರಿಶೀಲನೆ ನಡೆಸಲಿದೆ. ಕಳಪೆ ಕಾಮಗಾರಿಗಳ ದೂರುಗಳ ಬಗ್ಗೆಯೂ ತನಿಖೆ ನಡೆಸಲಿದೆ. ಪಾಲಿಕೆ ಕೈಗೊಳ್ಳುವ ಕಾಮಗಾರಿಗಳ ಗುಣಮಟ್ಟ, ನಕಲಿ ಬಿಲ್ ಹಾವಳಿ ತಪ್ಪಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ.”

– ತುಷಾರ್ ಗಿರಿನಾಥ್, ಬಿಬಿಎಂಪಿ ಮುಖ್ಯ ಆಯುಕ್ತರು

ಟಿವಿಸಿಸಿ ಅಧಿಕಾರ ಕುರಿತಂತೆ 4.07.2006 ಬಿಬಿಎಂಪಿ ಆಯುಕ್ತರ ಸುತ್ತೋಲೆಯಲ್ಲೇನಿದೆ?

  • ಬಿಬಿಎಂಪಿಯ ಎಲ್ಲಾ ಕಾಮಗಾರಿಗಳ ಪರಿಶೀಲನೆ ಮತ್ತು ಖರೀದಿಸಿದ ವಸ್ತುಗಳ ಗುಣಮಟ್ಟಗಳ ಬಗ್ಗೆ  ಹಠಾತ್ ಪರಿಶೀಲನೆ ಹಾಗೂ ಈ ಕೋಶಕ್ಕೆ ವಹಿಸುವ ಕಳಪೆ ಕಾಮಗಾರಿಗಳ ದೂರಿನ ಬಗ್ಗೆ ತನಿಖೆ ನಡೆಸುವುದು.
  • ವಾರ್ಡ್ ಕಾಮಗಾರಿ, ಯೋಜನೆ ಹಾಗೂ ಕಟ್ಟಡ ನಿರ್ಮಾಣಗಳ ಗುಣಮಟ್ಟ ಮತ್ತು ಸಂಗ್ರಹಣೆ ಕುರಿತಂತೆ ಪರಿಶೀಲನೆ ನಡೆಸುವುದು.
  • ಕಾಮಗಾರಿಗಳ ಅಂದಾಜು ವೆಚ್ಚ, ಬಿಲ್ ನಲ್ಲಿ ಸಲ್ಲಿಕೆಯಾಗಿರುವ ಕಾಮಗಾರಿಗಳನ್ನು ನಡೆಸಿರುವ ಮಾಹಿತಿ, ಅಳತೆ ಬಗ್ಗೆ ಸೂಕ್ಷ್ಮವಾಗಿ ಪರಿಶೀಲಿಸುವುದು. ಕಾಮಗಾರಿ ಅಂದಾಜಿನಲ್ಲಿ ತಪ್ಪುಗಳಿದ್ದರೆ ಸರಿಪಡಿಸುವುದು.
  • ತಾಂತ್ರಿಕ ಪರಿಶೀಲನೆ ಮತ್ತು ಯೋಜನೆ ಸಿದ್ದಪಡಿಸುವಿಕೆಯಲ್ಲಿ ನೆರವು ನೀಡುವುದು.
  • ಮಾಹಿತಿ ತಂತ್ರಜ್ಞಾನ ಹೆಚ್ಚುವರಿ ಸಲಹೆಗಾರರೊಂದಿಗೆ ಸಂಯೋಜನೆ ನಡೆಸುವುದು.
  • ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳ ನಿಯಂತ್ರಣ ಮತ್ತು ಚಟುವಟಿಕೆಗಳ ಮೇಲುಸ್ತುವಾರಿ
  • ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು, ಮುಗಿದಿರುವ ಕಾಮಗಾರಿಗಳ ತಾಂತ್ರಿಕ ಪರಿಶೋಧನೆ ಹಾಗೂ ಎಂಜಿನಿಯರಿಂಗ್ ವಿಧಾನದಂತೆ ಆ ಕಾಮಗಾರಿಗಳ ಅಂದಾಜು ವೆಚ್ಚ ಮಾಡಲಾಗಿದೆಯೇ ಎಂದು ಪರಿಶೀಲನೆ ನಡೆಸುವುದು.
  • ಬಿಬಿಎಂಪಿ ಕೈಗೊಳ್ಳುವ ಕಾಮಗಾರಿಗಳಲ್ಲಿ ಎಂಜಿನಿಯರಿಂಗ್ ಗುಣಮಟ್ಟವನ್ನು ಕಾಯ್ದುಕೊಂಡು, ಕಾಮಗಾರಿಗಳಲ್ಲಿ ಸುಧಾರಣೆ ತರಲು ಉತ್ತಮ ಅಭ್ಯಾಸಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಲು ಪಾಲಿಕೆ ಆಯುಕ್ತರಿಗೆ ನೆರವಾಗುವುದು.
  • ಕಾಲ ಕಾಲಕ್ಕೆ ಆಯುಕ್ತರು ವಹಿಸುವ ಜವಾಬ್ದಾರಿಗಳನ್ನು ನಿರ್ವಹಿಸುವುದು. * ಆಯುಕ್ತರಿಗೆ ನೇರವಾಗಿ ವರದಿ ಮಾಡುವುದು.

2006ರಲ್ಲಿ ಟಿವಿಸಿಸಿ ಕೋಶ ಸ್ಥಾಪನೆಯಾದಾಗ ಒಬ್ಬರು ಕಾರ್ಯನಿರ್ವಾಹಕ ಎಂಜಿನಿಯರ್, ಮೂವರು ಸಹಾಯಕ ಎಂಜಿನಿಯರ್ ಗಳು ಕಾರ್ಯನಿರ್ವಹಿಸುತ್ತಿದ್ದರು. ಆದರೆ ಸದ್ಯ ಟಿವಿಸಿಸಿಯಲ್ಲಿ ಚೀಫ್ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್, ತಲಾ ನಾಲ್ವರು ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗಳು ಕಾರ್ಯನಿರ್ವಹಿಸುತ್ತಿದ್ದಾರೆ. 800 ಚದರ ಕಿ.ಮೀ. ವಿಸ್ತೀರ್ಣದ ಬಿಬಿಎಂಪಿಯಲ್ಲಿನ ಟಿವಿಸಿಸಿ ಕೋಶಕ್ಕೆ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಇನ್ನು ಹೆಚ್ಚಿನ ಸಿಬ್ಬಂದಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಪಾಲಿಕೆ ಮುಖ್ಯ ಆಯುಕ್ತರು ಕ್ರಮ ಕೈಗೊಂಡು ಟಿವಿಸಿಸಿಯನ್ನು ಮತ್ತಷ್ಟು ಬಲಪಡಿಸಬೇಕಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದೆ.

WhatsApp Join our WhatsApp Channel
Previous Post

Bescom Electricity Accident | ಹೈ ಓಲ್ಟೇಜ್ ವಿದ್ಯುತ್ ತಂತಿ ತಗುಲಿ ಇಬ್ಬರು ಬೆಸ್ಕಾಂ ಗುತ್ತಿಗೆ ಕಾರ್ಮಿಕರು ಸಾವು – ಓರ್ವನ ಸ್ಥಿತಿ ಗಂಭೀರ

Next Post

Karnataka New CS | ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮ ನೇಮಕ

Next Post

Karnataka New CS | ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮ ನೇಮಕ

Yoga Day | ಮೈಸೂರಿನಲ್ಲಿ ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ - ಪ್ರಧಾನಿ ಭಾಗಿ ; ವಿಡಿಯೋ ಕಾನ್ಫರೆನ್ಸ್ ನಲ್ಲಿ ಮೋದಿ ಜೊತೆ ಬೊಮ್ಮಾಯಿ ಮಾತುಕತೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group