Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

‘ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆ ತಿರುಚಿ ಬರೆದವರ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಿ’ – ಕಸಾಪದಿಂದ ರಾಜ್ಯ ಸರ್ಕಾರಕ್ಕೆ ಒತ್ತಾಯ

ಯಾವುದೇ ಸಾಹಿತಿಯನ್ನು ಟೀಕಿಸುವ ಮೊದಲು ಅವರ ಸಾಹಿತ್ಯದ ಸಾರ-ಸರ್ವವನ್ನು ಅರಿತುಕೊಳ್ಳಬೇಕು. ಅವರ ಬಗ್ಗೆ ತಿಳಿದುಕೊಳ್ಳದೇ ಮಾತನಾಡುವುದು ಶೋಭೆಯಲ್ಲ – ನಾಡೋಜ ಡಾ.ಮಹೇಶ್ ಜೋಶಿ | ರೋಹಿತ್ ಚಕ್ರತೀರ್ಥ ವಿರುದ್ಧ ನಾಳೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

by Bengaluru Wire Desk
May 30, 2022
in News Wire, Public interest
Reading Time: 1 min read
0
ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.30 www.bengaluruwire.com : ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯ ತಿರುಚಿ ಬರೆದವರ ವಿರುದ್ಧ ಸರ್ಕಾರ ತಡಮಾಡದೆ ಕ್ರಮಕೈಗೊಳ್ಳಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹಿಸಿದೆ.

ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳ ಬಗ್ಗೆ ಹಾಗೂ ನಾಡಗೀತೆಯನ್ನು ತಿರುಚಿ ಬರೆದಿರುವ ಕುರಿತು ಮಾಧ್ಯಮಗಳಲ್ಲಿ ಓದುವ, ಹೀನಾಯ ಸ್ಥಿತಿ ತಲುಪಿರುವುದಕ್ಕೆ, ಕನ್ನಡ ಸಾಹಿತ್ಯ ಪರಿಷತ್ತಿನ ಪಾಲಿಗೆ ಅತ್ಯಂತ ಖೇದ ಹಾಗೂ ಬೇಸರದ ಸಂಗತಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ, ಬೇಸರ ವ್ಯಕ್ತಪಡಿಸಿದ್ದಾರೆ.

ರಾಮಕೃಷ್ಣ ಪರಮಹಂಸರ, ವಿವೇಕಾನಂದರ ಚಿಂತನೆಗಳನ್ನು ಆದರ್ಶವನ್ನಾಗಿಸಿಕೊಂಡು, ಸಾಹಿತ್ಯದಲ್ಲಿ ಆಧ್ಯಾತ್ಮೀಕತೆಯನ್ನು ಸರಳವಾಗಿ, ಎಲ್ಲರೂ ಅರ್ಥ ಮಾಡಿಕೊಳ್ಳುವ ಹಾಗೆ ರಚಿಸಿದ ಮಹಾಕವಿಯ ಕುರಿತು ನಿಂದನೆಯನ್ನು ಮಾಡಿರುವುದು ವೈಯಕ್ತಿಕವಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ ಖಂಡಿಸುವುದರ ಜೊತೆಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದವರ ವಿರುದ್ಧ ಸರ್ಕಾರ ಶೀಘ್ರವೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು ಪರೋಕ್ಷವಾಗಿ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಮುಖ್ಯಸ್ಥ ರೋಹಿತ್ ಚಕ್ರತೀರ್ಥ ಹೆಸರನ್ನು ಉಲ್ಲೇಖಿಸದೆ ಅವರು ಹೇಳಿದ್ದಾರೆ.

ನಾಡೋಜ ಡಾ.ಮಹೇಶ್ ಜೋಶಿ

ಯಾವುದೇ ಸಾಹಿತಿಯನ್ನು ಟೀಕಿಸುವ ಮೊದಲು ಅವರ ಸಾಹಿತ್ಯದ ಸಾರ-ಸರ್ವವನ್ನು ಅರಿತುಕೊಳ್ಳಬೇಕು. ಅವರ ಬಗ್ಗೆ ತಿಳಿದುಕೊಳ್ಳದೇ ಮಾತನಾಡುವುದು ಶೋಭೆಯಲ್ಲ. ಹಿನ್ನೆಲೆ ತಿಳಿದುಕೊಳ್ಳದೇ ಮಾತನಾಡುವುದು, ಅವರ ಬೇಜವಾಬ್ದಾರಿತನವನ್ನು ಹಾಗೂ ಅಪ್ರಬುದ್ಧತೆಯನ್ನು ತೋರಿಸುತ್ತದೆ. ಕುವೆಂಪು ಅವರನ್ನು ನಿಂದಿಸಿದವರ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರ ಮೇಲೆ ಕ್ರಮಕೈಗೊಳ್ಳುವಂತೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳ ಒತ್ತಾಯದಂತೆ ಮುಖ್ಯಮಂತ್ರಿಗಳು ಕ್ರಮ ತೆಗೆದುಕೊಳ್ಳುವ ಬಗ್ಗೆ ತೀರ್ಮಾನ ಕೈಗೊಂಡಿರುವುದನ್ನು, ಕನ್ನಡ ಸಾಹಿತ್ಯ ಪರಿಷತ್ತು ಬೆಂಬಲಿಸುತ್ತದೆ. ಈ ಬಗ್ಗೆ ತಡಮಾಡದೇ ಅಂಥವರ ವಿರುದ್ಧ ಶೀಘ್ರ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿರುವ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರ ಮೇಲೆ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ ಹಾಗೂ ಪರಿಷತ್ತಿನ ಎಲ್ಲಾ ಜಿಲ್ಲಾ ಘಟಕಗಳ, ಗಡಿನಾಡ ಘಟಕಗಳ, ತಾಲ್ಲೂಕು ಹಾಗೂ ಹೋಬಳಿ ಘಟಕಗಳ ಅಧ್ಯಕ್ಷರುಗಳು, ಈ ಖಂಡನೆಗೆ ಒಮ್ಮತದಿಂದ ಕೇಂದ್ರ ಪರಿಷತ್ತಿಗೆ ಬೆಂಬಲವನ್ನು ಸೂಚಿಸಿದ್ದಾರೆ.”

– ನಾಡೋಜ ಡಾ. ಮಹೇಶ ಜೋಶಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು

ಕುವೆಂಪು ವಿರಚಿತ ಗೀತೆ ನಾಡಗೀತೆಯಾಗಿದ್ದು ಹೇಗೆ ?

ಕುವೆಂಪು ವಿರಚಿತ “ಜಯಭಾರತ ಜನನಿಯ ತನುಜಾತೆ” ಗೀತೆಯನ್ನು “ನಾಡಗೀತೆ” ಮಾಡಬೇಕೆಂದು ಮೊದಲ ಅಳವಡಿಸಿಕೊಂಡಿದ್ದು ಸಾಹಿತ್ಯ ಪರಿಷತ್ತು. 1971ರಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಮ್ಮತಿ ಪಡೆದು ಕನ್ನಡ ಸಾಹಿತ್ಯ ಪರಿಷತ್ತು ನಾಡಗೀತೆಯನ್ನು ತನ್ನ ಎಲ್ಲ ಕಾರ್ಯಕ್ರಮಗಳಲ್ಲೂ ಹಾಡಿಸುತ್ತಾ ಬಂದಿದೆ. ಈ ಮೂಲಗೀತೆ 1924ರಲ್ಲಿ ರಚನೆಯಾಗಿ, ಇಂದಿಗೆ 98 ವರ್ಷವಾಯಿತು. ಎರಡು ಸಲ ಪರಿಷ್ಕರಣೆಗೊಂಡು ಮೈಸೂರಿನ ಸಂಪದಭ್ಯುದಯ ಪತ್ರಿಕೆಯಲ್ಲಿ ಪ್ರಕಟವಾಯಿತು. ಅನಂತರ ಮತ್ತೆ ಪರಿಷ್ಕರಣೆಗೊಂಡು ಕುವೆಂಪು ಅವರ ಕೊಳಲು ಕವನ ಸಂಕಲನದಲ್ಲಿ ಪ್ರಕಟವಾಯಿತು. ಇದು ಭಾರತದ ಅಖಂಡತೆಯನ್ನೂ, ಭಾವೈಕ್ಯತೆಯನ್ನೂ ಎತ್ತಿ ಹಿಡಿಯುವ ಗೀತೆ.

ಭಾರತಾಂತರ್ಗತ ಕರ್ನಾಟಕ, ಕರ್ನಾಟಕಾಂತರ್ಗತ ಭಾರತ ಎಂಬುದನ್ನು ಆವೇಶವಿಲ್ಲದೆ, ಘೋಷಣೆಗಳಿಲ್ಲದೆ ಸಾರುವ ಭಾವನಾತ್ಮಕ ಗೀತೆಯಿದು. ಇಂತಹ ಅಪರೂಪದ ಗೀತೆಯನ್ನು ಪರಿಷತ್ತು ನಾಡಗೀತೆಯಾಗಿ ಆರಿಸಿತು. ಅದರ ಅನಂತರ ಸರ್ಕಾರವೂ ಇದನ್ನೇ ನಾಡಗೀತೆ ಎಂದು ಅಂಗೀಕರಿಸಿ, ಪರಿಷತ್ತಿನ ಆಯ್ಕೆಯನ್ನು ದೃಢಗೊಳಿಸಿ, 6 ಜನವರಿ 2004ರಂದು ಕರ್ನಾಟಕದ ನಾಡಗೀತೆಯನ್ನಾಗಿ ನಿಗದಿಪಡಿಸಿ ಆದೇಶ ಹೊರಡಿಸಿತು.

“ಮನುಜ ಮತ ವಿಶ್ವಪಥ” ಎಂಬ ಸಂದೇಶದ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದ ಕುವೆಂಪು ಅವರು, ಪ್ರಕೃತಿಯಲ್ಲಿ ದೇವರನ್ನು ಕಾಣುವ, ದೇವರಲ್ಲಿ ಪ್ರಕೃತಿಯನ್ನು ಕಾಣುವ ದೈವಿಕ ಸಂಬಂಧಗಳನ್ನು ಪ್ರತಿಪಾದಿಸಿದ ಸರ್ವೋದಯ ತತ್ವ ಪ್ರತಿಪಾದಕರು. ಸಾಮಾಜಿಕ, ಧಾರ್ಮಿಕ, ಆರ್ಥಿಕ ಅಸಮಾನತೆಯನ್ನು ಮತ್ತು ಲಿಂಗಭೇದವನ್ನು ನಿವಾರಿಸಿಕೊಂಡು ಈ ಜಗತ್ತು “ಸರ್ವಜನಾಂಗದ ಶಾಂತಿಯ ತೋಟ”ವಾಗಬೇಕೆಂದು ಕನಸು ಕಂಡ ಶ್ರೇಷ್ಠ ದಾರ್ಶನಿಕರು.

ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಸಾಹಿತ್ಯದ ಮೂಲಕ ಅರ್ಥಗರ್ಭಿತ ಪ್ರಯತ್ನ ಮಾಡಿದ ಮೇರು ಸಾಹಿತಿಗಳು. ಅವರ ಸಾಹಿತ್ಯವನ್ನು ಓದಿದವರ್ಯಾರೂ ಸಹ ಕುವೆಂಪು ಅವರ ಕುರಿತು ಚಕಾರ ಎತ್ತುವ ಧೈರ್ಯವನ್ನು ಮಾಡುವುದಿಲ್ಲ. ಯಾರು ಈ ಮಹಾದಾರ್ಶನಿಕರನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲವೋ, ಅಂಥವರು ಮಾತ್ರ ಅಡ್ಡದಾರಿಯನ್ನು ಹಿಡಿದು, ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡುತ್ತಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ವಿವರಿಸಿದ್ದಾರೆ.

WhatsApp Join our WhatsApp Channel
Previous Post

Yoga Day | ಮೈಸೂರಿನಲ್ಲಿ ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ಪ್ರಧಾನಿ ಭಾಗಿ ; ವಿಡಿಯೋ ಕಾನ್ಫರೆನ್ಸ್ ನಲ್ಲಿ ಮೋದಿ ಜೊತೆ ಬೊಮ್ಮಾಯಿ ಮಾತುಕತೆ

Next Post

Petrol Purchase Bandh | ಕಮಿಷನ್ ಏರಿಕೆಗೆ ಒತ್ತಾಯಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ಮಂಗಳವಾರ ರಾಜ್ಯಾದ್ಯಂತ ತೈಲ ಖರೀದಿ ಸ್ಥಗಿತ

Next Post
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

Petrol Purchase Bandh | ಕಮಿಷನ್ ಏರಿಕೆಗೆ ಒತ್ತಾಯಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ಮಂಗಳವಾರ ರಾಜ್ಯಾದ್ಯಂತ ತೈಲ ಖರೀದಿ ಸ್ಥಗಿತ

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

Karnataka Textbook Controversy | ಪಠ್ಯ ಪರಿಷ್ಕರಣೆ : ಸಚಿವರ ವರದಿ ಆಧರಿಸಿ ಕ್ರಮ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group