ಬೆಂಗಳೂರು, ಜೂ.6 www.bengaluruwire.com :
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಎರಡು ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಜೂನ್ 13 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ರಾಜ್ಯದ ರಾಜಧಾನಿಗೆ ಸೋಮವಾರ ಬೆಳಿಗ್ಗೆ ಆಗಮಿಸಲಿದ್ದಾರೆ. ನಂತರ, ರಾಷ್ಟ್ರಪತಿಗಳು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅಂದು ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಜೂನ್ 14 ರಂದು, ಮಂಗಳವಾರ ಬೆಳಿಗ್ಗೆ, ಬೆಂಗಳೂರಿನ ಕನಕಪುರ ರಸ್ತೆ ಸಮೀಪದ ದೊಡ್ಡಕಲ್ಲಸಂದ್ರದ ವೈಕುಂಠ ಬೆಟ್ಟದಲ್ಲಿ ತಿರುಪತಿ ತಿರುಮಲ ದೇವಾಲಯವನ್ನು ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣಾ ಸಮಾರಂಭದಲ್ಲಿ ರಾಷ್ಟ್ರಪತಿಯವರು ಭಾಗವಹಿಸಲಿದ್ದಾರೆ. ಅಲ್ಲದೆ, ಅದೇ ದಿನ ಅಪರಾಹ್ನ ಅವರು ದೆಹಲಿಗೆ ತೆರಳಲಿದ್ದಾರೆ.


















