Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Save Soil | ಸದ್ಗುರುಗಳ ಮಣ್ಣು ಉಳಿಸಿ ಅಭಿಯಾನ ಬೈಕ್ ಯಾತ್ರೆ ಬೆಂಗಳೂರಿಗೆ ; ರಾಜ್ಯ ಸರ್ಕಾರದೊಂದಿಗೆ ಒಡಂಬಡಿಕೆ

40ಕ್ಕೂ ಹೆಚ್ಚು ದೇಶ, 9 ರಾಜ್ಯಗಳಿಗೆ 30 ಸಾವಿರ ಕಿ.ಮೀ ಬೈಕ್ ಯಾತ್ರೆ ಮುಗಿಸಿ ರಾಜಧಾನಿಗೆ ಬಂದ ಈಶಾ ಫೌಂಡೇಷನ್ ಸದ್ಗುರು ಜಗ್ಗಿ ವಾಸುದೇವ್

by Bengaluru Wire Desk
June 19, 2022
in Bengaluru Focus, News Wire
Reading Time: 1 min read
0

ಬೆಂಗಳೂರು, ಜೂ.19, www.bengaluruwire.com :
ಮಣ್ಣು ಉಳಿಸಿ ಭಾಗವಾಗಿ ದೇಶ ವಿದೇಶಗಳಲ್ಲಿ ಬೈಕ್ ಯಾತ್ರೆ ನಡೆಸುತ್ತಿರುವ ಈಶ ಫೌಂಡೇಷನ್ ಸಂಸ್ಥಾಪಕರಾದ ಸದ್ಗುರು ವಾಸುದೇವ್ ಬೆಂಗಳೂರಿಗೆ ಆಗಮಿಸಿ, ಮಣ್ಣು ಉಳಿಸುವ (Save Soil) ಅಭಿಯಾನದ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಭಾನುವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಡಂಬಡಿಕೆ ಮಾಡಿಕೊಂಡರು.

ಮೂವತ್ತು ದಿನದಲ್ಲಿ ದೇಶ ವಿದೇಶಗಳಲ್ಲಿ ಬರೋಬ್ಬರಿ 30 ಸಾವಿರ ಕಿ.ಮೀ ದೂರ ಬೈಕ್ ನಲ್ಲಿ ಯಾತ್ರೆ ಮಾಡಿ ಮಣ್ಣಿನ ಮಹತ್ವವನ್ನು ಎಲ್ಲೆಡೆ ಸಾರುವ ಕಾರ್ಯವನ್ನು ನಡೆಸಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ನಗರದಲ್ಲಿ ಇಂದು ಏರ್ಪಡಿಸಿದ್ದ ಬೃಹತ್‌ ಸಮಾವೇಶದಲ್ಲಿ ಮಣ್ಣು ಉಳಿಸುವ ಕುರಿತು ಸದ್ಗುರು ಸರಕಾರದ ಸಹಕಾರ ಕೋರಿದರು. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಡಂಬಡಿಕೆಗೆ ಸಹಿ ಹಾಕಿದರು.

ಮುಖ್ಯಮಂತ್ರಿಗಳಿಗೆ ಮಣ್ಣು ಉಳಿಸಿ ಕುರಿತ ಪುಸ್ತಕ ನೀಡಿದ ಸದ್ಗುರು

ಭಾರತದ ಮಣ್ಣಿನಲ್ಲಿ ಜೈವಿಕ ಅಂಶ ಕೇವಲ ಶೇ.0.68 ಮಾತ್ರ :
ಈಶ ಫೌಂಡೇಷನ್ ಸದ್ಗುರು ಮಾತನಾಡಿ, 40ಕ್ಕೂ ಹೆಚ್ಚು ದೇಶಗಳಿಗೆ, 9 ರಾಜ್ಯಗಳಿಗೆ ಭೇಟಿ ನೀಡಿ ಮಣ್ಣಿನ ಮಹತ್ವ ಪ್ರಚಾರ ಪಡಿಸಲಾಗಿದೆ. ಇನ್ನು ಈಶ ಫೌಂಡೇಶನ್ 192 ದೇಶಗಳಲ್ಲಿ ಮಣ್ಣುಗಳ ಅಧ್ಯಯನ ಮಾಡಿದೆ. ಇದರಲ್ಲಿ ಬೆರಳಣಿಕೆಯ ದೇಶಗಳು ಮಾತ್ರ ಮಣ್ಣಿನಲ್ಲಿ ಶೇ.3ರಷ್ಟು ಜೈವಿಕ ಅಂಶ ಹೊಂದಿವೆ. ನಮ್ಮ ದೇಶದಲ್ಲಿ ಇದರ ಪ್ರಮಾಣ ಶೇ.0.68ರಷ್ಟಿದೆ. ಮೂರರಷ್ಟು ಇರಬೇಕಿದ್ದ ಮಣ್ಣಿನ ಜೈವಿಕ ಅಂಶ ಹಲವು ದೇಶದಲ್ಲಿ ಶೇ.1ರಷ್ಟು ಇಲ್ಲ.

ಯಾವ ದೇಶದ ಮಣ್ಣಿನಲ್ಲಿ ಜೈವಿಕ ಅಂಶ ಶೇ.1ಕ್ಕಿಂತ ಕಡಿಮೆ ಇದೆಯೋ ಅಲ್ಲಿ‌ ಪರಿಸರಕ್ಕೆ ಧಕ್ಕೆಯಾಗುತ್ತಿದೆ. ಪ್ರತಿಯೊಬ್ಬರೂ ಮನೆ ಮುಂದೆ ಸಸಿ ನೆಡಿ. ಅಲ್ಲಿ ಜೈವಿಕ ಮಣ್ಣು ಹೆಚ್ಚಿಸಿ ಎಂದು ಸಾರ್ವಜನಿಕರಿಗೆ ಕರೆ ನೀಡಿದರು. ರಾಜ್ಯ ಸರ್ಕಾರವೂ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದು ಸದ್ಗುರು ಸರ್ಕಾರಕ್ಕೆ ಮನವಿ ಮಾಡಿಕೊಂಡರು.

ಭವಿಷ್ಯದಲ್ಲಿ ಆಹಾರ ಉತ್ಪಾದನೆ ಮೇಲೆ ದುಷ್ಪರಿಣಾಮ :
ಭವಿಷ್ಯದಲ್ಲಿ ಆಹಾರ ಉತ್ಪಾದನೆ ಮೇಲೆ‌ ಈ ಪರಿಸ್ಥಿತಿಯಿಂದ ದೊಡ್ಡ ಪರಿಣಾಮ ಬೀರಲಿದೆ. ಪ್ರತಿಯೊಬ್ಬರೂ ಮಣ್ಣಿನ ರಕ್ಷಣೆಗೆ ಮುಂದಾಗಬೇಕಿದೆ. ಆಧುನಿಕತೆ ಬೆಳೆಯುತ್ತಿದ್ದಂತೆ ಮಾನವೀಯತೆ ಮರೆಯಾಗುತ್ತಿದೆ. ಯುದ್ಧ, ಪ್ರಕೃತಿ ವಿಕೋಪಗಳಿಗೆ ಭೂಮಿ ಸಾಕ್ಷಿಯಾಗುತ್ತಿದೆ.

ಮುಂದೆ ನಾಗರೀಕ ಯುದ್ಧ ನಡೆದರೆ, ಯುಕ್ರೇನ್ ನಂತಹ ದೇಶಗಳಿಗೆ ಹಸಿದ ಮಕ್ಕಳಿಗೆ ಆಹಾರ ನೀಡಲಾಗದ ಪರಿಸ್ಥಿತಿ ಬರುತ್ತದೆ. ಆಹಾರವೇ ಸಿಗುವುದಿಲ್ಲವೆಂದರೆ ಎಲ್ಲದೂ ನಾಶವಾಗುತ್ತೆ. ನಾಗರೀಕತೆ, ಮಾನವೀಯತೆ ಮರೆಯಾಗಿ ಕ್ರೂರತೆ ಸ್ಥಾಪನೆಯಾಗುತ್ತದೆ. ಈಗಾಗಲೇ ಪ್ರಪಂಚಾದ್ಯಂತ 27 ಸಾವಿರ ಸಸ್ಯ ಸಂಕುಲ ನಾಶವಾಗುತ್ತಿದೆ ಎಂದು ಪರಿಸ್ಥಿತಿಯ ಭೀಕರತೆ ತೆರೆದಿಟ್ಟರು.

70 ವರ್ಷದಲ್ಲಿ ಪ್ರಕೃತಿಗೆ ಸಾಕಷ್ಟು ಹಾನಿಯಾಗಿದೆ :
ನಮ್ಮ ಭೂಮಿಯನ್ಮು ನಾವು ಉಳಿಸಬೇಕಿದೆ.
ಕಳೆದ 70 ವರ್ಷದಲ್ಲಿ ನಾವು ಪ್ರಕೃತಿಗೆ ಸಾಕಷ್ಟು ಹಾನಿ ಮಾಡಿದ್ದೀವಿ. ಇನ್ನು‌ ಮುಂದೆ ನಮ್ಮ ತಾಯಿಯಂಥ ಭೂಮಿಯ ಮಣ್ಣು ಉಳಿಸುವ ಕೆಲಸ ಮಾಡಬೇಕಿದೆ ಎಂದು ಸದ್ಗುರು ವಾಸುದೇವ್ ಅಭಿಪ್ರಾಯಪಟ್ಟರು.

ಇಶಾ ಫೌಂಡೇಷನ್ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಎ ಜನಸಮೂಹ

ಕಾವೇರಿ ಕಾಲಿಂಗ್ ವೇಳೆ ಆಗ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಸಹಕಾರ ಮರೆಯಲಾಗುವುದಿಲ್ಲ. ಇದೀಗ ಮಣ್ಣು ಉಳಿಸಿ ಅಭಿಯಾನಕ್ಕೆ ಎಲ್ಲೆಡೆಯಿಂದ ಬೆಂಬಲ ಸಿಗುತ್ತಿದೆ. ರಾಜ್ಯ ಸರ್ಕಾರ ಇದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದೆ. ಇದು ಸಂತೋಷದ ವಿಚಾರ ಎಂದರು.

ರಾಜ್ಯದಲ್ಲಿ ಅರಣ್ಯ ನಾಶ ತಡೆದು, ಜೈವಿಕ ಮಣ್ಣಿನ ಅಂಶ ಉಳಿಸುವಲ್ಲಿ ರಾಜ್ಯ ಸರ್ಕಾರ ಬದ್ದ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ಆಹಾರ ಉತ್ಪಾದನೆಗೆ ಲಭ್ಯವಿರುವ ಮಣ್ಣನ್ನು ನಾವು ಲಭ್ಯ ಮಾಡಿಕೊಳ್ಳದೆ ಸಾಕಷ್ಟು ಮಾರ್ಪಾಡು ಮಾಡಿಕೊಳ್ಳುತ್ತಿದ್ದೇವೆ. ಸದ್ಗುರು ಕೈಗೊಂಡಿರುವ ಮಣ್ಣು ಉಳಿಸಿ ಅಭಿಮಾನ ಅರ್ಥಪೂರ್ಣವಾಗಿದೆ. ಈ ಅಭಿಮಾನಕ್ಕೆ ಭಾಗಿಯಾಗಿ ನೈಸರ್ಗಿಕ ಸಂಪನ್ಮೂಲವನ್ನು ಉಳಿಸಬೇಕಾಗಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಸದ್ಗುರು ಅಭಿಮಾನಿಗಳು, ಪರಿಸರ ಪ್ರೇಮಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು. ಮಣ್ಣು ಉಳಿಸಿ ಅಭಿಯಾನದ ಬೈಕ್ ಯಾತ್ರೆ ಬೆಂಗಳೂರಿನಿಂದ ಮೈಸೂರಿನತ್ತ ಸದ್ಗುರು ಪಯಣ ಬೆಳಸಲಿದ್ದಾರೆ. ಯಾತ್ರೆ ಉದ್ದಕ್ಕೂ ಇದು ಕೇವಲ ಇದು ಮಣ್ಣಲ್ಲೋ ಮಂಕುತಿಮ್ಮ ಎಂದು ಮತ್ತೆ ಮತ್ತೆ ತಿಳಿಹೇಳುವ ಹೇಳುವ ಕಾಯಕ ಸದ್ಗುರು ಮುಂದುವರೆಸಲಿದ್ದಾರೆ.

ಬೃಹತ್‌ ಸಮಾವೇಶದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಶಿಕ್ಷಣ ಸಚಿವ ನಾಗೇಶ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Kota Dr.Shivarama Karanth Theme Park | ಕೋಟಾದ ಡಾ.ಶಿವರಾಮ ಕಾರಂತರ ಥೀಮ್ ಪಾರ್ಕ್ ಮೇಲ್ದರ್ಜೆಗೆ

Next Post

PM Modi Bangalore Visit | ಪ್ರಧಾನಿ ನರೇಂದ್ರ ಮೋದಿಯಿಂದ ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Next Post

PM Modi Bangalore Visit | ಪ್ರಧಾನಿ ನರೇಂದ್ರ ಮೋದಿಯಿಂದ ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Mysore Yoga Day 2022 | ಮೈಸೂರು ರಾಜವಂಶಸ್ಥರಿಂದ ಪ್ರಧಾನಿ ನರೇಂದ್ರ ಮೋದಿಗೆ ಅರಮನೆಯಲ್ಲಿ ನಡೆದ ವಿಶೇಷ ಆತಿಥ್ಯ ಹೇಗಿತ್ತು?

Please login to join discussion

Like Us on Facebook

Follow Us on Twitter

Recent News

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group