Thursday, August 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Save Soil | ಸದ್ಗುರುಗಳ ಮಣ್ಣು ಉಳಿಸಿ ಅಭಿಯಾನ ಬೈಕ್ ಯಾತ್ರೆ ಬೆಂಗಳೂರಿಗೆ ; ರಾಜ್ಯ ಸರ್ಕಾರದೊಂದಿಗೆ ಒಡಂಬಡಿಕೆ

40ಕ್ಕೂ ಹೆಚ್ಚು ದೇಶ, 9 ರಾಜ್ಯಗಳಿಗೆ 30 ಸಾವಿರ ಕಿ.ಮೀ ಬೈಕ್ ಯಾತ್ರೆ ಮುಗಿಸಿ ರಾಜಧಾನಿಗೆ ಬಂದ ಈಶಾ ಫೌಂಡೇಷನ್ ಸದ್ಗುರು ಜಗ್ಗಿ ವಾಸುದೇವ್

by Bengaluru Wire Desk
June 19, 2022
in Bengaluru Focus, News Wire
Reading Time: 1 min read
0

ಬೆಂಗಳೂರು, ಜೂ.19, www.bengaluruwire.com :
ಮಣ್ಣು ಉಳಿಸಿ ಭಾಗವಾಗಿ ದೇಶ ವಿದೇಶಗಳಲ್ಲಿ ಬೈಕ್ ಯಾತ್ರೆ ನಡೆಸುತ್ತಿರುವ ಈಶ ಫೌಂಡೇಷನ್ ಸಂಸ್ಥಾಪಕರಾದ ಸದ್ಗುರು ವಾಸುದೇವ್ ಬೆಂಗಳೂರಿಗೆ ಆಗಮಿಸಿ, ಮಣ್ಣು ಉಳಿಸುವ (Save Soil) ಅಭಿಯಾನದ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಭಾನುವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಡಂಬಡಿಕೆ ಮಾಡಿಕೊಂಡರು.

ಮೂವತ್ತು ದಿನದಲ್ಲಿ ದೇಶ ವಿದೇಶಗಳಲ್ಲಿ ಬರೋಬ್ಬರಿ 30 ಸಾವಿರ ಕಿ.ಮೀ ದೂರ ಬೈಕ್ ನಲ್ಲಿ ಯಾತ್ರೆ ಮಾಡಿ ಮಣ್ಣಿನ ಮಹತ್ವವನ್ನು ಎಲ್ಲೆಡೆ ಸಾರುವ ಕಾರ್ಯವನ್ನು ನಡೆಸಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ನಗರದಲ್ಲಿ ಇಂದು ಏರ್ಪಡಿಸಿದ್ದ ಬೃಹತ್‌ ಸಮಾವೇಶದಲ್ಲಿ ಮಣ್ಣು ಉಳಿಸುವ ಕುರಿತು ಸದ್ಗುರು ಸರಕಾರದ ಸಹಕಾರ ಕೋರಿದರು. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಡಂಬಡಿಕೆಗೆ ಸಹಿ ಹಾಕಿದರು.

ಮುಖ್ಯಮಂತ್ರಿಗಳಿಗೆ ಮಣ್ಣು ಉಳಿಸಿ ಕುರಿತ ಪುಸ್ತಕ ನೀಡಿದ ಸದ್ಗುರು

ಭಾರತದ ಮಣ್ಣಿನಲ್ಲಿ ಜೈವಿಕ ಅಂಶ ಕೇವಲ ಶೇ.0.68 ಮಾತ್ರ :
ಈಶ ಫೌಂಡೇಷನ್ ಸದ್ಗುರು ಮಾತನಾಡಿ, 40ಕ್ಕೂ ಹೆಚ್ಚು ದೇಶಗಳಿಗೆ, 9 ರಾಜ್ಯಗಳಿಗೆ ಭೇಟಿ ನೀಡಿ ಮಣ್ಣಿನ ಮಹತ್ವ ಪ್ರಚಾರ ಪಡಿಸಲಾಗಿದೆ. ಇನ್ನು ಈಶ ಫೌಂಡೇಶನ್ 192 ದೇಶಗಳಲ್ಲಿ ಮಣ್ಣುಗಳ ಅಧ್ಯಯನ ಮಾಡಿದೆ. ಇದರಲ್ಲಿ ಬೆರಳಣಿಕೆಯ ದೇಶಗಳು ಮಾತ್ರ ಮಣ್ಣಿನಲ್ಲಿ ಶೇ.3ರಷ್ಟು ಜೈವಿಕ ಅಂಶ ಹೊಂದಿವೆ. ನಮ್ಮ ದೇಶದಲ್ಲಿ ಇದರ ಪ್ರಮಾಣ ಶೇ.0.68ರಷ್ಟಿದೆ. ಮೂರರಷ್ಟು ಇರಬೇಕಿದ್ದ ಮಣ್ಣಿನ ಜೈವಿಕ ಅಂಶ ಹಲವು ದೇಶದಲ್ಲಿ ಶೇ.1ರಷ್ಟು ಇಲ್ಲ.

ಯಾವ ದೇಶದ ಮಣ್ಣಿನಲ್ಲಿ ಜೈವಿಕ ಅಂಶ ಶೇ.1ಕ್ಕಿಂತ ಕಡಿಮೆ ಇದೆಯೋ ಅಲ್ಲಿ‌ ಪರಿಸರಕ್ಕೆ ಧಕ್ಕೆಯಾಗುತ್ತಿದೆ. ಪ್ರತಿಯೊಬ್ಬರೂ ಮನೆ ಮುಂದೆ ಸಸಿ ನೆಡಿ. ಅಲ್ಲಿ ಜೈವಿಕ ಮಣ್ಣು ಹೆಚ್ಚಿಸಿ ಎಂದು ಸಾರ್ವಜನಿಕರಿಗೆ ಕರೆ ನೀಡಿದರು. ರಾಜ್ಯ ಸರ್ಕಾರವೂ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದು ಸದ್ಗುರು ಸರ್ಕಾರಕ್ಕೆ ಮನವಿ ಮಾಡಿಕೊಂಡರು.

ಭವಿಷ್ಯದಲ್ಲಿ ಆಹಾರ ಉತ್ಪಾದನೆ ಮೇಲೆ ದುಷ್ಪರಿಣಾಮ :
ಭವಿಷ್ಯದಲ್ಲಿ ಆಹಾರ ಉತ್ಪಾದನೆ ಮೇಲೆ‌ ಈ ಪರಿಸ್ಥಿತಿಯಿಂದ ದೊಡ್ಡ ಪರಿಣಾಮ ಬೀರಲಿದೆ. ಪ್ರತಿಯೊಬ್ಬರೂ ಮಣ್ಣಿನ ರಕ್ಷಣೆಗೆ ಮುಂದಾಗಬೇಕಿದೆ. ಆಧುನಿಕತೆ ಬೆಳೆಯುತ್ತಿದ್ದಂತೆ ಮಾನವೀಯತೆ ಮರೆಯಾಗುತ್ತಿದೆ. ಯುದ್ಧ, ಪ್ರಕೃತಿ ವಿಕೋಪಗಳಿಗೆ ಭೂಮಿ ಸಾಕ್ಷಿಯಾಗುತ್ತಿದೆ.

ಮುಂದೆ ನಾಗರೀಕ ಯುದ್ಧ ನಡೆದರೆ, ಯುಕ್ರೇನ್ ನಂತಹ ದೇಶಗಳಿಗೆ ಹಸಿದ ಮಕ್ಕಳಿಗೆ ಆಹಾರ ನೀಡಲಾಗದ ಪರಿಸ್ಥಿತಿ ಬರುತ್ತದೆ. ಆಹಾರವೇ ಸಿಗುವುದಿಲ್ಲವೆಂದರೆ ಎಲ್ಲದೂ ನಾಶವಾಗುತ್ತೆ. ನಾಗರೀಕತೆ, ಮಾನವೀಯತೆ ಮರೆಯಾಗಿ ಕ್ರೂರತೆ ಸ್ಥಾಪನೆಯಾಗುತ್ತದೆ. ಈಗಾಗಲೇ ಪ್ರಪಂಚಾದ್ಯಂತ 27 ಸಾವಿರ ಸಸ್ಯ ಸಂಕುಲ ನಾಶವಾಗುತ್ತಿದೆ ಎಂದು ಪರಿಸ್ಥಿತಿಯ ಭೀಕರತೆ ತೆರೆದಿಟ್ಟರು.

70 ವರ್ಷದಲ್ಲಿ ಪ್ರಕೃತಿಗೆ ಸಾಕಷ್ಟು ಹಾನಿಯಾಗಿದೆ :
ನಮ್ಮ ಭೂಮಿಯನ್ಮು ನಾವು ಉಳಿಸಬೇಕಿದೆ.
ಕಳೆದ 70 ವರ್ಷದಲ್ಲಿ ನಾವು ಪ್ರಕೃತಿಗೆ ಸಾಕಷ್ಟು ಹಾನಿ ಮಾಡಿದ್ದೀವಿ. ಇನ್ನು‌ ಮುಂದೆ ನಮ್ಮ ತಾಯಿಯಂಥ ಭೂಮಿಯ ಮಣ್ಣು ಉಳಿಸುವ ಕೆಲಸ ಮಾಡಬೇಕಿದೆ ಎಂದು ಸದ್ಗುರು ವಾಸುದೇವ್ ಅಭಿಪ್ರಾಯಪಟ್ಟರು.

ಇಶಾ ಫೌಂಡೇಷನ್ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಎ ಜನಸಮೂಹ

ಕಾವೇರಿ ಕಾಲಿಂಗ್ ವೇಳೆ ಆಗ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಸಹಕಾರ ಮರೆಯಲಾಗುವುದಿಲ್ಲ. ಇದೀಗ ಮಣ್ಣು ಉಳಿಸಿ ಅಭಿಯಾನಕ್ಕೆ ಎಲ್ಲೆಡೆಯಿಂದ ಬೆಂಬಲ ಸಿಗುತ್ತಿದೆ. ರಾಜ್ಯ ಸರ್ಕಾರ ಇದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದೆ. ಇದು ಸಂತೋಷದ ವಿಚಾರ ಎಂದರು.

ರಾಜ್ಯದಲ್ಲಿ ಅರಣ್ಯ ನಾಶ ತಡೆದು, ಜೈವಿಕ ಮಣ್ಣಿನ ಅಂಶ ಉಳಿಸುವಲ್ಲಿ ರಾಜ್ಯ ಸರ್ಕಾರ ಬದ್ದ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ಆಹಾರ ಉತ್ಪಾದನೆಗೆ ಲಭ್ಯವಿರುವ ಮಣ್ಣನ್ನು ನಾವು ಲಭ್ಯ ಮಾಡಿಕೊಳ್ಳದೆ ಸಾಕಷ್ಟು ಮಾರ್ಪಾಡು ಮಾಡಿಕೊಳ್ಳುತ್ತಿದ್ದೇವೆ. ಸದ್ಗುರು ಕೈಗೊಂಡಿರುವ ಮಣ್ಣು ಉಳಿಸಿ ಅಭಿಮಾನ ಅರ್ಥಪೂರ್ಣವಾಗಿದೆ. ಈ ಅಭಿಮಾನಕ್ಕೆ ಭಾಗಿಯಾಗಿ ನೈಸರ್ಗಿಕ ಸಂಪನ್ಮೂಲವನ್ನು ಉಳಿಸಬೇಕಾಗಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಸದ್ಗುರು ಅಭಿಮಾನಿಗಳು, ಪರಿಸರ ಪ್ರೇಮಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು. ಮಣ್ಣು ಉಳಿಸಿ ಅಭಿಯಾನದ ಬೈಕ್ ಯಾತ್ರೆ ಬೆಂಗಳೂರಿನಿಂದ ಮೈಸೂರಿನತ್ತ ಸದ್ಗುರು ಪಯಣ ಬೆಳಸಲಿದ್ದಾರೆ. ಯಾತ್ರೆ ಉದ್ದಕ್ಕೂ ಇದು ಕೇವಲ ಇದು ಮಣ್ಣಲ್ಲೋ ಮಂಕುತಿಮ್ಮ ಎಂದು ಮತ್ತೆ ಮತ್ತೆ ತಿಳಿಹೇಳುವ ಹೇಳುವ ಕಾಯಕ ಸದ್ಗುರು ಮುಂದುವರೆಸಲಿದ್ದಾರೆ.

ಬೃಹತ್‌ ಸಮಾವೇಶದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಶಿಕ್ಷಣ ಸಚಿವ ನಾಗೇಶ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Kota Dr.Shivarama Karanth Theme Park | ಕೋಟಾದ ಡಾ.ಶಿವರಾಮ ಕಾರಂತರ ಥೀಮ್ ಪಾರ್ಕ್ ಮೇಲ್ದರ್ಜೆಗೆ

Next Post

PM Modi Bangalore Visit | ಪ್ರಧಾನಿ ನರೇಂದ್ರ ಮೋದಿಯಿಂದ ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Next Post

PM Modi Bangalore Visit | ಪ್ರಧಾನಿ ನರೇಂದ್ರ ಮೋದಿಯಿಂದ ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Mysore Yoga Day 2022 | ಮೈಸೂರು ರಾಜವಂಶಸ್ಥರಿಂದ ಪ್ರಧಾನಿ ನರೇಂದ್ರ ಮೋದಿಗೆ ಅರಮನೆಯಲ್ಲಿ ನಡೆದ ವಿಶೇಷ ಆತಿಥ್ಯ ಹೇಗಿತ್ತು?

Please login to join discussion

Like Us on Facebook

Follow Us on Twitter

Recent News

GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

August 5, 2026

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

August 5, 2026

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

August 5, 2026
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group