Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore City Narcotics | ಸಿಲಿಕಾನ್ ಸಿಟಿ ಡ್ರಗ್ಸ್ ಸಿಟಿಯಾಯ್ತಾ? ಬೆಂಗಳೂರಿನಲ್ಲಿ ಒಂದೂವರೆ ವರ್ಷದಲ್ಲಿ 5,710 ಕೆಜಿ ಡ್ರಗ್ಸ್ ವಶ

2021 ಹಾಗೂ 2022ರ ಸಾಲಿನಲ್ಲಿ ಮಾದಕ ವಸ್ತು ಕಳ್ಳಸಾಗಣೆ ದಂಧೆ ಕುರಿತಂತೆ 6,271 ಪ್ರಕರಣ ದಾಖಲಿಸಿ 8,015 ಮಂದಿಯ ಬಂಧನ | 186 ವಿದೇಶಿ ಪ್ರಜೆಗಳ ದಸ್ತಗಿರಿ |4,353 ಕೆಜಿ ಡ್ರಗ್ಸ್ ನಾಶ ಮಾಡಲು ಕ್ರಮ | ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ಕೊಟ್ಟ ಮಾಹಿತಿಯನ್ನು ಪೊಲೀಸರಿಗೆ ನೀಡದಿದ್ದರೆ ಕಾನೂನು ಕ್ರಮ

by Bengaluru Wire Desk
June 26, 2022
in Bengaluru Focus
Reading Time: 1 min read
0
ಬೆಂಗಳೂರು ಪೊಲೀಸರು ವಶಪಡಿಸಿಕೊಂಡಿರುವ ವಿವಿಧ ಬಗೆಯ ಮಾದಕದ್ರವ್ಯಗಳನ್ನು ಪ್ರದರ್ಶನಕ್ಕಿಟ್ಟಿರುವ ಚಿತ್ರ

ಬೆಂಗಳೂರು ಪೊಲೀಸರು ವಶಪಡಿಸಿಕೊಂಡಿರುವ ವಿವಿಧ ಬಗೆಯ ಮಾದಕದ್ರವ್ಯಗಳನ್ನು ಪ್ರದರ್ಶನಕ್ಕಿಟ್ಟಿರುವ ಚಿತ್ರ

ಬೆಂಗಳೂರು, ಜೂ.26 www.bengaluruwire.com : ರಾಜಧಾನಿ ಬೆಂಗಳೂರು ಮಾದಕ ವಸ್ತು ಕಳ್ಳಸಾಗಣೆ ಮತ್ತು ಸೇವನೆಯ ದೊಡ್ಡ ಅಡ್ಡ ಆಗ್ತಿದ್ಯಾ ಎಂಬ ಆತಂಕ ಎದುರಾಗಿದೆ. ಬೆಂಗಳೂರು ನಗರ ಪೊಲೀಸರು ನೀಡಿರುವ ಅಧಿಕೃತ ಮಾಹಿತಿ ಪ್ರಕಾರ 2021 ಹಾಗೂ 2022ರ ಜೂನ್ 26ರ ತನಕ ಸಿಲಿಕಾನ್ ಸಿಟಿಯಲ್ಲಿ 5,710 ಕೆಜಿ ತೂಕದ ವಿವಿಧ ರೀತಿಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿವಿಧ ಪ್ರಕರಣಗಳಲ್ಲಿ ನಗರ ಪೊಲೀಸರು 6,271 ಪ್ರಕರಣಗಳನ್ನು ದಾಖಲಿಸಿ 8,015 ಮಂದಿಯನ್ನು ಬಂಧಿಸಿದ್ದಾರೆ. ಹೀಗೆ ಬಂಧಿಸಿರುವವರಲ್ಲಿ 186 ವಿದೇಶಿ ಪ್ರಜೆಗಳು ಸೇರಿದ್ದಾರೆ ಎಂಬುದು ಮತ್ತೊಂದು ಕಳವಳಕಾರಿ ವಿಷಯ. ಮಾದಕವಸ್ತು ಕಳ್ಳಸಾಗಣಿಕೆದಾರರಿಂದ ವಶಪಡಿಸಿಕೊಳ್ಳಲಾದ ಈ ಡ್ರಗ್ಸ್ ಗಳ ಮೌಲ್ಯ 115 ಕೋಟಿ ರೂ. ಗಳಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.

ವಿಶ್ವ ಮಾದಕವಸ್ತುಗಳ ಸೇವನೆ ಮತ್ತು ಕಳ್ಳಾಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಈ ಮಾತಾನಾಡಿದ ಅವರು, 2021-22ನೇ ಸಾಲಿನಲ್ಲಿ ಗಾಂಜಾ, ಅಫೀಮು, ಎಂಡಿಎಂ, ಎಕ್ಸ್ ಟೆಸಿ ಮಾತ್ರೆ, ಎಲ್ಎಸ್ ಡಿ ಸ್ಟ್ರಿಪ್ಸ್ ಸೇರಿದಂತೆ ವಿವಿಧ ರೀತಿಯ ಮಾದಕವಸ್ತು ಕಳ್ಳಸಾಗಾಣಿಕೆ ಮಾಡುತ್ತಿದ್ದ 4,555 ಪ್ರಕರಣಗಳಲ್ಲಿ 5,753 ಮಂದಿಯನ್ನು ಬಂಧಿಸಿ ಅವರಿಂದ 60 ಕೋಟಿ ರೂ. ಬೆಲೆಬಾಳುವ 3,705 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಣೆ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವುದು. ಹಿರಿಯ ಪೊಲೀಸ್ ಅಧಿಕಾರಿಗಳು ಚಿತ್ರದಲ್ಲಿದ್ದಾರೆ.

ಅದೇ ರೀತಿ 2022ರ ಜೂನ್ 26ರ ತನಕ 1,716 ಪ್ರಕರಣಗಳಲ್ಲಿ 2,262 ಆರೋಪಿಗಳನ್ನು ಬಂಧಿಸಿ ಅವರಿಂದ 55 ಕೋಟಿ ರೂ. ಮೌಲ್ಯದ 2,005 ಕೆಜಿ ತೂಕದ ಡ್ರಗ್ಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. 2021 ಹಾಗೂ 2022ರ ಇಸವಿಯಲ್ಲಿ ಈತನಕ ದಾಖಲೆ ಪ್ರಮಾಣದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿ ಸ್ಥಳೀಯ ಹಾಗೂ ವಿದೇಶಿ ಪ್ರಜೆಗಳನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೇ ರೀತಿ ಇವುಗಳನ್ನು ಸೇವಿಸುತ್ತಿದ್ದ ಗ್ರಾಹಕರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

4,353 ಕೆಜಿ ಡ್ರಗ್ಸ್ ನಾಶ ಮಾಡಲು ಕ್ರಮ :

25 ಆಗಸ್ಟ್ 2021ರಿಂದ 2022ರ ಇಸವಿಯ ಜೂನ್ 26ರ ತನಕ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ 41.80 ಕೋಟಿ ರೂ. ಮೌಲ್ಯದ 4,353 ಕೆಜಿ ತೂಕದ ಎಂಡಿಎಂಎ, ಎಕ್ಸ್ ಟೆಸಿ ಮಾತ್ರೆಗಳು ಹಾಗೂ 2,995 ಎಲ್ಎಸ್ ಡಿ ಸ್ಟ್ರಿಪ್ಸ್ ಸೇರಿದಂತೆ ವಿವಿಧ ರೀತಿಯ ಮಾದಕವಸ್ತುಗಳನ್ನು ನಾಶಪಡಿಸಲಾಗುವುದು. ಇದಕ್ಕಾಗಿ ನ್ಯಾಯಾಲಯದಿಂದ ಆದೇಶ ಪಡೆಯಲಾಗಿದೆ ಎಂದು ಸುದ್ದಿಗಾರರಿಗೆ ವಿವರಿಸಿದರು.

ವಿವಿಧ ರಾಜ್ಯಗಳಿಂದ ರಾಜಧಾನಿಗೆ ಮಾದಕದ್ರವ್ಯ ಕಳ್ಳಸಾಗಾಣೆ :

ಬೆಂಗಳೂರಿಗೆ ಮಾದಕದ್ರವ್ಯಗಳಲ್ಲಿ ಹೆಚ್ಚಾಗಿ ತೆಲಂಗಾಣ, ಒಡಿಶಾ, ಆಂದ್ರಪ್ರದೇಶ, ಪಶ್ಚಿಮ ಬಂಗಾಳ, ಅಸ್ಸಾಮ್ ರಾಜ್ಯಗಳಿಂದ ಗಾಂಜಾ ಕಳ್ಳಸಾಗಾಣಿಕೆಯಾಗುತ್ತದೆ. ದೆಹಲಿ, ಪಂಜಾಬ್, ಮಹಾರಾಷ್ಟ್ರ, ಕೇರಳ ಹಾಗೂ ಗೋವಾ ರಾಜ್ಯಗಳಿಂದ ಎಂಡಿಎಂಎ ಹಾಗೂ ಎಕ್ಸ್ ಟೆಸಿ ಮಾತ್ರೆಗಳು ಸರಬರಾಜಾಗುತ್ತಿರುವುದು ತನಿಖೆಯಿಂದ ತಿಳಿದು ಬಂದಿದೆ. ಕರ್ನಾಟಕ ರಾಜ್ಯದ ಗಡಿ ಭಾಗಗಳಲ್ಲಿನ ಪೊಲೀಸ್ ಅಧಿಕಾರಿಗಳೊಂದಿಗೆ ಮಾದಕವಸ್ತು ಕಳ್ಳಸಾಗಾಣಿಕೆ ಮತ್ತು ಅದರಲ್ಲಿ ತೊಡಗಿರುವವರ ಮಾಹಿತಿಯನ್ನು ಆಗಾಗ ನಗರ ಪೊಲೀಸರು ವಿನಿಮಯ ಮಾಡಿಕೊಳ್ಳುತ್ತಿರುತ್ತಾರೆ. ಹೀಗಾಗಿ ಇಷ್ಟೊಂದು ಪ್ರಮಾಣದಲ್ಲಿ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿದೇಶಿ ಪ್ರಜೆಗಳ ಮಾಹಿತಿಯನ್ನು ಮನೆ ಮಾಲೀಕರು ನೀಡದಿದ್ದಲ್ಲಿ ಕಠಿಣ ಕ್ರಮ :

ನಗರದಲ್ಲಿ ವಿದೇಶಿ ಪ್ರಜೆಗಳಿಗೆ ಬಾಡಿಗೆ ಮನೆ ನೀಡುವ ಮುನ್ನ ಅವರ ಪಾಸ್ ಪೋರ್ಟ್, ವಿಸಾ ಸೇರಿದಂತೆ ಸರ್ಕಾರ ನೀಡಿರುವ ದಾಖಲೆಗಳನ್ನು ಪರಿಶೀಲಿಸಿ, ನಂತರ ಅವರೊಂದಿಗೆ ಕರಾರುಪತ್ರ ಮಾಡಿಕೊಳ್ಳಬೇಕು. ಈ ವಿದೇಶಿ ಪ್ರಜೆಗಳ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮನೆ ಮಾಲೀಕರು ತಪ್ಪದೇ ಮಾಹಿತಿ ನೀಡಬೇಕು. ಇಲ್ಲವಾದಲ್ಲಿ ಅಂತಹ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

WhatsApp Join our WhatsApp Channel
Previous Post

BW SPECIAL | KARNATAKA BIG NEWS | 2021-22ನೇ ಸಾಲಿನಲ್ಲಿ ಮುದ್ರಾಂಕ ಮತ್ತು ನೋಂದಣಿ ಇಲಾಖೆಯಲ್ಲಿ 14,250 ಕೋಟಿ ರೂ. ದಾಖಲೆ ಮಟ್ಟದ ಆದಾಯ ಸಂಗ್ರಹ…!

Next Post

BBMP Kempegowda Jayanthi | ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಆಚರಣೆ

Next Post
ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಅಂಗವಾಗಿ ಕೇಂದ್ರ ಕಚೇರಿಯಲ್ಲಿ ಅವರ ಮೂರ್ತಿಗೆ ಪಾಲಿಕೆ ಅಧಿಕಾರಿಗಳು ಪುಷ್ಪಾರ್ಚನೆ ನೆರವೇರಿಸಿ ತಮ್ಮ ಗೌರವ ಸಮರ್ಪಿಸಿದರು.

BBMP Kempegowda Jayanthi | ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಆಚರಣೆ

BDA News | ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ: 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ಸ್ವಾಧೀನ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group