Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

BESCOM EV Campaign And EV Expo | ರಾಜ್ಯ ಸರ್ಕಾರದಿಂದ ಜು.1ರಿಂದ ಒಂದು ವಾರ ವಿದ್ಯುತ್ ಚಾಲಿತ ವಾಹನಗಳ ಅಭಿಯಾನ

ಬೆಸ್ಕಾಂ ವ್ಯಾಪ್ತಿಯಲ್ಲಿ ಇವಿ ಚಾರ್ಜಿಂಗ್‌ ಸ್ಟೇಷನ್‌ ತೆರೆಯಲು ನಿಮಗೆ ಆಸಕ್ತಿಯಿದೆಯೇ? | ಏಕ ಗವಾಕ್ಷಿ ಯೋಜನೆ ಮೂಲಕ ಅರ್ಜಿ ಸಲ್ಲಿಸಬಹುದು ಆಸಕ್ತರ ಮೂರು ದಿನಗಳ ಕಾಲ ನಡೆಯಲಿರುವ ಇವಿ ಎಕ್ಸ್ ಪೋದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ

by Bengaluru Wire Desk
June 29, 2022
in News Wire
Reading Time: 1 min read
0

ಬೆಂಗಳೂರು, ಜೂ.29 www.bengaluruwire.com ವಿದ್ಯುತ್‌ ಚಾಲಿತ ವಾಹನಗಳ (electrical vehicles) ಬಳಕೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು  ರಾಜ್ಯ ಸರ್ಕಾರ ಜುಲೈ  1  ರಿಂದ 6 ರವರೆಗೆ ಒಂದು ವಾರದ ಇವಿ ಅಭಿಯಾನವನ್ನು ಹಮ್ಮಿಕೊಂಡಿದೆ.  ಇದರ ಭಾಗವಾಗಿ ಬೆಸ್ಕಾಂ ಜುಲೈ 1ರಿಂದ 3ನೇ ತಾರೀಖಿನವರೆಗೆ ಅರಮನೆ ಮೈದಾನದ ʼಚಾಮರ ವಜ್ರʼ ಸಭಾಂಗಣದಲ್ಲಿ ʼಇವಿ ಎಕ್ಸ್ ಪೋʼ ಆಯೋಜಿಸಿದೆ. 

ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ “ಇವಿ ಅಭಿಯಾನ ಮತ್ತು ಇವಿ ಎಕ್ಸ್ ಪೋವನ್ನು ಉದ್ಘಾಟಿಸಲಿದ್ದಾರೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್,  ಕೇಂದ್ರ ಸಚಿವರಾದ ರಾಜೀವ್‌ ಚಂದ್ರಶೇಖರ್‌ ಮತ್ತು ಭಗವಂತ ಖೂಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ 250ಕ್ಕೂ ಹೆಚ್ಚು ಚಾರ್ಜಿಂಗ್ ಕೇಂದ್ರಗಳ ಆರಂಭಕ್ಕೆ ಮುಖ್ಯಮಂತ್ರಿಗಳು ವಿದ್ಯುಕ್ತ ಚಾಲನೆ ನೀಡಲಿದ್ದಾರೆ.

ಬೆಸ್ಕಾಂನ ಇವಿ ಮಿತ್ರ ಆಪ್‌,  ಇವಿ ಚಾರ್ಜಿಂಗ್‌ ಸ್ಟೇಷನ್‌ ಮತ್ತು ವಿದ್ಯುತ್‌ ಪೂರೈಕೆಗೆ ಸಂಬಂಧಿಸಿದಂತೆ  ಏಕ ಗವಾಕ್ಷಿಯಲ್ಲಿ ಅನುಮತಿ ಪಡೆದ ಯೋಜನೆಗಳನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದಾರೆ ಎಂದು ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

“ಇವಿ ಅಭಿಯಾನ”ದ ಅಂಗವಾಗಿ 2 ಜುಲೈ 2022 ರಂದು ಬೆಳಿಗ್ಗೆ 6 ರಿಂದ 9 ಗಂಟೆಗೆ ಇವಿ ರ್ಯಾಲಿ (Ev Rally) ಏರ್ಪಡಿಸಲಾಗಿದೆ.  ವಿಧಾನ ಸೌಧದಿಂದ ಅರಮನೆ ಮೈದಾನದವರೆಗೆ ಇವಿ ರ್ಯಾಲಿ ಸಾಗಲಿದ್ದು, ಸುಮಾರು 300 ಕ್ಕೂ ಹೆಚ್ಚು ವಾಹನಗಳು ಪಾಲ್ಗೊಳ್ಳಲಿವೆ.  ವಿದ್ಯುತ್‌ ಚಾಲಿತ ವಾಹನಗಳ ಉತ್ಪಾದಕರು, ಪೂರೈಕೆದಾರರು ಮತ್ತು ಬಳಕೆದಾರರನ್ನು ಒಂದೇ ಸೂರಿನಡಿಯಲ್ಲಿ ತಂದು ಪರಸ್ಪರ ಸಮನ್ವಯ ಸಾಧಿಸಲು ʼಇವಿ ಎಕ್ಸ್ ಪೋʼ ನೆರವಾಗಲಿದೆ. ವಿದ್ಯುತ್‌ ಚಾಲಿತ ವಾಹನಗಳ ಬಳಕೆಗೆ ಉತ್ತೇಜನ ನೀಡಲು ಬೆಸ್ಕಾಂ, ಬೆಂಗಳೂರಿನಲ್ಲಿ 136 ವಿದ್ಯುತ್‌ ಚಾಲಿತ  ವಾಹನಗಳ ಚಾರ್ಜಿಂಗ್ ಸ್ಟೇಷನ್ ಗಳನ್ನು ಆರಂಭಿಸಿದೆ. ಇನ್ನೂ 152  ಚಾರ್ಜಿಂಗ್ ಸ್ಟೇಷನ್ ಗಳು ಹೊಸದಾಗಿ ಸೇರ್ಪಡೆಗೊಳ್ಳಲಿದೆ.  ರಾಜ್ಯದಲ್ಲಿ ಪಿಪಿಪಿ ಮಾದರಿಯಲ್ಲಿ ಒಂದು ಸಾವಿರ ಇವಿ ಚಾರ್ಜಿಂಗ್ ಸ್ಟೇಷನ್ ಗಳ ಸ್ಥಾಪನೆಗೆ ಟೆಂಡರ್‌ ಕರೆಯಲಾಗಿದೆ.

ವಿಧಾನಸೌಧದ ಸಾಂದರ್ಭಿಕ ಚಿತ್ರ

ಇವಿ ಎಕ್ಸ್ ಪೋ ಉದ್ದೇಶಗಳು:

ಉತ್ಪಾದಕರು, ಪೂರೈಕೆದಾರರು ಮತ್ತು ಬಳಕೆದಾರರಿಗೆ  ವಿದ್ಯುತ್‌ ಚಲನಶೀಲತೆ ಕುರಿತು ಸಮಗ್ರ ಮಾಹಿತಿ ನೀಡುವ ಸಲುವಾಗಿ ಇವಿ ಎಕ್ಸ್ ಪೋ ಹಮ್ಮಿಕೊಳ್ಳಲಾಗಿದೆ. ಇವಿ ವಲಯದಲ್ಲಿ ಇತ್ತೀಚೆಗೆ ಆಗಿರುವ ತಂತ್ರಜ್ಞಾನ ಬೆಳವಣಿಗೆ, ಹೊಸ ಸವಾಲುಗಳು, ನಿರೀಕ್ಷೆಗಳು ಮತ್ತು ಸವಾಲುಗಳನ್ನು ಬಗೆಹರಿಸಲು ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಅರಿಯಲು ಇವಿ ಎಕ್ಸ್ ಪೋ ನೆರವಾಗಲಿದೆ. ಇವಿ ಎಕ್ಸ್ ಪೋನಲ್ಲಿ 100 ಕ್ಕೂ ಅಧಿಕ ವಿವಿಧ ಕಂಪನಿಗಳು ಹಾಗೂ ಉತ್ಪಾದಕರ ಮಳಿಗೆಗಳು ತಮ್ಮ ಉತ್ಪನ್ನ ಮತ್ತು ತಂತ್ರಜ್ಞಾನಗಳನ್ನು ಪ್ರಸ್ತುತ ಪಡಿಸಲಿವೆ. ಮೂರು ದಿನಗಳ ಕಾಲ ನಡೆಯಲಿರುವ ಇವಿ ಎಕ್ಸ್ ಪೋದಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ವಿದ್ಯುತ್‌ ಚಾಲಿತ ವಾಹನಗಳ ಮಾರುಕಟ್ಟೆಯಿಂದ ಅನೇಕ ಸುಧಾರಣೆಗಳ ಅಗತ್ಯವಿದೆ. ಬ್ಯಾಟರಿ ತಯಾರಿಕೆ ಘಟಕ, ಚಾರ್ಜಿಂಗ್‌ ಸ್ಟೇಷನ್‌ ಗಳ ಸ್ಥಾಪನೆ ಹಾಗು ಇತರೆ ಮೂಲ ಸೌಕರ್ಯಗಳ ಅಭಿವೃದ್ದಿ ಅತ್ಯವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಇವಿ ಎಕ್ಸ್ ಪೋ ಕಾರ್ಯಕ್ರಮ ಆಯೋಜಿಸಲಾಗಿದೆ.

ಇವಿ ಮಿತ್ರ ಆಪ್‌ :

ಬೆಸ್ಕಾಂ ಇವಿ ಚಾರ್ಜಿಂಗ್‌ ಸ್ಟೇಷನ್‌ ಗಳ ಕುರಿತು ಸಮಗ್ರ ಮಾಹಿತಿ ನೀಡುವ ಇವಿ ಮಿತ್ರ ಆಪ್‌ ನ್ನು ಇವಿ ಎಕ್ಸ್ ಪೋ ದಲ್ಲಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಸಾರ್ವಜನಿಕರು ಇವಿ ಮಿತ್ರ ಆಪ್‌ ಡೌನ್‌ಲೊಡ್‌ ಮಾಡಿಕೊಂಡರೆ, ಇವಿ ಚಾರ್ಜಿಂಗ್‌ ಸ್ಟೇಷನ್‌ ಗಳ ಕುರಿತು ಸಂರ್ಪೂಣ ಮಾಹಿತಿ ಆಪ್‌ ನಲ್ಲಿ ಲಭ್ಯವಿದೆ.

ಇವಿ ಚಾರ್ಜಿಂಗ್ ಸ್ಟೇಷನ್ ಗಳ  ಕುರಿತು ಬೆಸ್ಕಾಂನ ಇವಿ ಮಿತ್ರ ಆ್ಯಪ್ ಸಮಗ್ರ ಮಾಹಿತಿ ಒದಗಿಸಲಿದೆ ನೀವು ಈ ಆ್ಯಪ್ ನ್ನು ಡೌನ್ ಲೊಡ್ ಮಾಡಿಕೂಂಡರೆ ಇವಿ ಚಾರ್ಜಿಂಗ್ ಸ್ಟೇಷನ್ ಗಳು, ಇರುವ ಸ್ಥಳ, ಧರ ಪಟ್ಟಿ, ಚಾರ್ಜಿಂಗ್ ಸೌಲಭ್ಯದ ಲಭ್ಯತೆ ಮುಂತಾದ ಮಾಹಿತಿಗಳನ್ನು ಇವಿ ಮಿತ್ರ ಆ್ಯಪ್ ನಲ್ಲಿ ಪಡೆಯಬಹುದಾಗಿದೆ. ಆ್ಯಪ್ ಮುಲಕ ನಿಮ್ಮ ವಾಹನವನ್ನು ಮುಂಚಿತವಾಗಿ ಚಾರ್ಜಿಂಗ್‌ ಮಾಡಿಕೂಳ್ಳಲು ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಚಾರ್ಜಿಂಗ್ ಮಾಡಿದ ನಂತರ ಶುಲ್ಕವನ್ನು ಆನ್ ಲೈನ್ ನಲ್ಲಿ ಪಾವತಿಸಲು ಆ್ಯಪ್ ನಲ್ಲಿ ಅವಕಾಶವಿದೆ.

ಇವಿ ಚಾರ್ಜಿಂಗ್‌ ಸ್ಟೇಷನ್‌ ತೆರೆಯಲು ಏಕ ಗವಾಕ್ಷಿ ಯೋಜನೆ :

ಹೂಸ  ಇವಿ ಚಾರ್ಜಿಂಗ್ ಸ್ಟೇಷನ್ (EV Charging Stations) ಗಳಿಗೆ  ವಿದ್ಯುತ್ ಸಂಪರ್ಕ ನೀಡಲು ಬೆಸ್ಕಾಂ “ಏಕ ಗವಾಕ್ಷಿ” ಯೋಜನೆಯನ್ನು ಜಾರಿಗೆ ತಂದಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ನಿಮಗೇನಾದರು ಇವಿ ಚಾರ್ಜಿಂಗ್ ಸ್ಟೇಷನ್ ತೆರೆಯಲು ಆಸಕ್ತಿ ಇದ್ದರೆ, ಬೆಸ್ಕಾಂನ ವೆಬ್ ಸೈಟ್ ನಲ್ಲಿನ “Single Window Dash Board” ಸೌಲಭ್ಯ ಪೆಡೆದುಕೂಳ್ಳಬಹುದು. ಮುಖ್ಯಮಂತ್ರಿಗಳು ಹೊಸ ಆಪ್ ಬಿಡುಗಡೆ ಕಾರ್ಯಕ್ರಮದ ನಂತರ ಬೆಸ್ಕಾಂ ವೆಬ್ ಸೈಟ್ ನ ಮೂಲಕ ಆಸಕ್ತರು, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಪೂರಕ ದಾಖಲೆಗಳನ್ನು ಸಲ್ಲಿಸಿದ ತಕ್ಷಣವೇ, ಚಾರ್ಜಿಂಗ್ ಸ್ಟೇಷನ್ ಗೆ  ವಿದ್ಯುತ್ ಸಂಪರ್ಕ ಸಿಗಲಿದೆ. ಸಾರ್ವಜನಿಕರು, ಖಾಸಗಿ ಕಂಪನಿಗಳು ಮತ್ತು ಸಂಘ-ಸಂಸ್ಥೆಗಳು ಹೊಸ ಇವಿ ಚಾರ್ಜಿಂಗ್‌ ಸ್ಟೇಷನ್‌ ತೆರೆಯಲು ಆಸಕ್ತಿ ಇದ್ದರೆ, ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಿ , ಅದಕ್ಕೆ ಬೇಕಾದ ಪೂರಕ ದಾಖಲೆಗಳನ್ನು ಆನ್‌ ಲೈನ್‌ ನಲ್ಲಿ ಅಪ್‌ ಲೋಡ್‌ ಮಾಡಿ, ವಿದ್ಯುತ್‌ ಸಂಪರ್ಕ ಪಡೆಯಬಹುದು. ಇವಿ ಚಾರ್ಜಿಂಗ್‌ ಗೆ ವಿದ್ಯುತ್‌ ಸಂಪರ್ಕ ಪಡೆಯಲು ಬೆಸ್ಕಾಂ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಏಕ ಗವಾಕ್ಷಿ ಯೋಜನೆ ಜಾರಿಗೆ ತರಲಾಗಿದೆ.

ಇವಿ ಚಾರ್ಜಿಂಗ್‌ ಸ್ಟೇಷನ್‌ ಗಳ ಕುರಿತು ಸಾರ್ವಜನಿಕರಿಗೆ ಸಮಗ್ರ ಮಾಹಿತಿ ನೀಡಲು ಬೆಸ್ಕಾಂ ಈಗಾಗಲೇ ಇವಿ ಮಿತ್ರ ಆಪ್‌ ತಯಾರಿಸಿದ್ದು, ಬೆಸ್ಕಾಂ ಪ್ರಯತ್ನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಸ್ಕಾಂ ಚಾರ್ಜಿಂಗ್‌  ಸ್ಟೇಷನ್‌ ಗಳ ಕುರಿತು ಸಂಪೂರ್ಣ ಮಾಹಿತಿ ಇವಿ ಆಪ್‌ ನಲ್ಲಿ  ಲಭ್ಯವಿದೆ. ನೀತಿ ಆಯೋಗ, ಕರ್ನಾಟಕ ಮತ್ತು ಬ್ರಿಟನ್‌ ಸರಕಾರದ ಸಹಭಾಗಿತ್ವದಲ್ಲಿ ಬೆಂಗಳೂರು ನಗರವನ್ನು ಇವಿ ವಲಯವನ್ನಾಗಿ ರೂಪಿಸುವ ದಿಕ್ಸೂಚಿ ವರದಿ ಮತ್ತು ಇವಿ ಜಾಗೃತಿ ಪೋರ್ಟಲ್‌ ಅನ್ನು ಇತ್ತೀಚೆಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ  ಸಚಿವ ವಿ. ಸುನಿಲ್‌ ಕುಮಾರ್‌ ಬಿಡುಗಡೆ ಮಾಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW IMPACT | ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿ ಅವಧಿ ಹಿಂದಿನಂತೆಯೇ ಮರುನಿಗಧಿ

Next Post

Namma Metro Phase-3 | ಒಆರ್ ಆರ್ ರಸ್ತೆಯಲ್ಲಿ‌ ಬಿಬಿಎಂಪಿ ಪ್ರಸ್ತಾವಿತ ಮೇಲ್ಸೇತುವೆ – ನಮ್ಮ‌ ಮೆಟ್ರೊ ಫೇಸ್-3 ಮಾರ್ಗ ನಿರ್ಮಾಣಕ್ಕೆ ತೊಡಕು

Next Post
ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

Namma Metro Phase-3 | ಒಆರ್ ಆರ್ ರಸ್ತೆಯಲ್ಲಿ‌ ಬಿಬಿಎಂಪಿ ಪ್ರಸ್ತಾವಿತ ಮೇಲ್ಸೇತುವೆ - ನಮ್ಮ‌ ಮೆಟ್ರೊ ಫೇಸ್-3 ಮಾರ್ಗ ನಿರ್ಮಾಣಕ್ಕೆ ತೊಡಕು

ಸೂಚನೆ : ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

Liquor Sales High In Karnataka | ಮೂರೇ ತಿಂಗಳಲ್ಲಿ 23 ಕೋಟಿ ಲೀ. ಮದ್ಯ ಮಾರಾಟ....! : ರಾಜ್ಯ ಸರ್ಕಾರದ ಖಜಾನೆಗೆ ಸೇರಿತು 7,500 ಕೋಟಿ ರೂ.

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d