Monday, June 16, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

  • Bengaluru Focus
    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

  • Bengaluru Focus
    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

Namma Metro Phase-3 | ಒಆರ್ ಆರ್ ರಸ್ತೆಯಲ್ಲಿ‌ ಬಿಬಿಎಂಪಿ ಪ್ರಸ್ತಾವಿತ ಮೇಲ್ಸೇತುವೆ – ನಮ್ಮ‌ ಮೆಟ್ರೊ ಫೇಸ್-3 ಮಾರ್ಗ ನಿರ್ಮಾಣಕ್ಕೆ ತೊಡಕು

ಬಿಬಿಎಂಪಿ ಮತ್ತು ಬಿಎಂಆರ್ ಸಿಎಲ್ ನಡುವಣ ಪ್ರಸ್ತಾವಿತ ಮಾರ್ಗದಲ್ಲಿ ಸಂಯೋಜಿತವಾಗಿ ಯೋಜನೆ ಜಾರಿಗೆ, ಸಭೆಯಲ್ಲಿ ಸಹಮತ | ಸಮಸ್ಯೆ ಬಗೆಹರಿಸಲು ನಿರ್ಧಾರ

by Bengaluru Wire Desk
June 30, 2022
in Bengaluru Focus, BW Special, Public interest
Reading Time: 2 mins read
0
ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.30 www.bengaluruwire.com :
ನಮ್ಮ ಮೆಟ್ರೊ ಮೂರನೇ ಹಂತದ ಪ್ರಸ್ತಾವಿತ ಯೋಜನೆ ಮಾರ್ಗದಲ್ಲಿಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಎರಡು ಮೇಲ್ಸೇತುವೆ ಯೋಜನೆಯು ಬರುತ್ತಿರುವುದು ಎರಡೂ ಸಂಸ್ಥೆಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಬೆಂಗಳೂರು ಮೆಟ್ರೊ ರೈಲು ನಿಗಮ (BMRCL) ಮೂರನೇ ಹಂತದಲ್ಲಿ 44.65 ಕಿ.ಮೀ ಉದ್ದದ ಒಟ್ಟು ಎರಡು ಕಾರಿಡಾರ್ ಬರುತ್ತಿದೆ. ಹೊಸಹಳ್ಳಿಯಿಂದ ಕಡಬಗೆರೆ ವರೆಗಿನ 12.5 ಕಿ.ಮೀ ಮೆಟ್ರೊ ಮಾರ್ಗ ಹಾಗೂ ಜೆ.ಪಿನಗರ 4ನೇ ಹಂತದಿಂದ ಕೆಂಪಾಪುರದವರೆಗಿನ 32.15 ಕಿ.ಮೀ ಮಾರ್ಗ ಬರಲಿದೆ.

ನಮ್ಮ ಮೆಟ್ರೊ ಫೇಸ್-3 ಮಾರ್ಗದ ನೀಲನಕ್ಷೆ (ಪ್ರಾತಿನಿಧಿಕ ಚಿತ್ರ)

ಜೆ.ಪಿನಗರ 4ನೇ ಹಂತದಲ್ಲಿನ ಮೆಟ್ರೊ ರೈಲು ಮಾರ್ಗವು ಪಾಲಿಕೆಯ ಹೊರವರ್ತುಲ ರಸ್ತೆಯಲ್ಲೇ ಸಾಗುವುದರಿಂದ ಅದೇ ಮಾರ್ಗದಲ್ಲಿ ಬಿಬಿಎಂಪಿಯು ನಿರ್ಮಿಸಲು ಯೋಜಿಸುತ್ತಿರುವ ಸಾರಕ್ಕಿ ಜಂಕ್ಷನ್ ಹಾಗೂ ಇಟ್ಟಮಡು ಜಂಕ್ಷನ್ ಬಳಿಯ ಎರಡು ಮೇಲ್ಸೇತುವೆಗಳು ಮೆಟ್ರೊ ರೈಲು ಮಾರ್ಗ ಹಾಗೂ ಪಾಲಿಕೆಯ ಫ್ಲೈಓವರ್ ಕಾಮಗಾರಿಗಳಿಗೆ ಪರಸ್ಪರ ತೊಡಕಾಗಲಿದೆ.

ಈ ಹಿನ್ನಲೆಯಲ್ಲಿ ಜು.27ರಂದು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಂ ಪರ್ವೇಜ್ ನೇತೃತ್ವದಲ್ಲಿ ಗಹನ ಚರ್ಚೆ ನಡೆಯಿತು.

ತುಷಾರ್ ಗಿರಿನಾಥ್ ಐಎಎಸ್

“ಬಿಬಿಎಂಪಿಯು ಪ್ರಸ್ತಾವಿತ ಮೇಲ್ಸೇತುವೆ ನಿರ್ಮಾಣ ಸ್ಥಳದಲ್ಲಿಯೇ ಮೆಟ್ರೋ 3ನೇ ಹಂತದ ಯೋಜನೆಯ ರೈಲು ಮಾರ್ಗವು ಬರುತ್ತಿರುವ ಹಿನ್ನಲೆಯಲ್ಲಿ ಎರಡೂ ಸಂಸ್ಥೆಗಳಿಗೆ ಅನುಕೂಲವಾಗುವ ರೀತಿಯಲ್ಲಿ ಏನೆಲ್ಲಾ ಮಾಡಬಹುದು? ಎಂಬ ಬಗ್ಗೆ ಪಾಲಿಕೆ ಅಧಿಕಾರಿಗಳು ಹಾಗೂ ಮೆಟ್ರೊ ಅಧಿಕಾರಿಗಳು ಈ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆಸಿದ್ದೇವೆ. ಭವಿಷ್ಯದಲ್ಲಿ ಹೊರವರ್ತುಲ ರಸ್ತೆಯಲ್ಲಿ ಸುಗಮ ವಾಹನ ಸಂಚಾರ ಹಾಗೂ ಮೆಟ್ರೊ‌ ರೈಲು ಸಂಚಾರಕ್ಕೆ ಅನುವಾಗುವ ರೀತಿಯಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುತ್ತೇವೆ.”

– ತುಷಾರ್ ಗಿರಿನಾಥ್, ಬಿಬಿಎಂಪಿ ಮುಖ್ಯ ಆಯುಕ್ತರು

ಎರಡು ಮೇಲ್ಸೇತುವೆಗಳ ನಿರ್ಮಾಣಕ್ಕೆ ಯೋಜನೆ ಸಿದ್ಧವಾಗಿದ್ದು ಕೆಲವೇ ದಿನಗಳಲ್ಲಿ ಈ ಯೋಜನೆ ನಿರ್ಮಾಣ ಆರಂಭವಾಗಬೇಕಿತ್ತು. ಆದರೆ ಇದೇ ಒಆರ್ ಆರ್ ಮಾರ್ಗದಲ್ಲಿ ಫೇಸ್-3 ಮೆಟ್ರೊ ರೈಲು ಮಾರ್ಗ ಬರುತ್ತಿರುವುದರಿಂದ ಬಿಬಿಎಂಪಿ ಹಾಗೂ ಮೆಟ್ರೋ ಜಂಟಿಯಾಗಿ ಒಂದೇ ಸ್ಥಳದಲ್ಲಿ ಸಂಯೋಜಿತವಾಗಿ (Integrated) ಎರಡು ಯೋಜನೆಗಳನ್ನು ನಿರ್ಮಾಣ ಮಾಡಲು ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ಸಮ್ಮತಿಸಿವೆ. ಹೀಗಾಗಿ ಈ ಎರಡು ಮೇಲ್ಸೇತುವೆಗಳ ವಿನ್ಯಾಸ ಬದಲಾವಣೆಗೆ ಒಳಪಡಲಿದೆ.

ಅಂಜುಮ್ ಪರ್ವೇಜ್ ಐಎಎಸ್

“ಮೆಟ್ರೋ ಎರಡನೇ ಹಂತದಲ್ಲಿ ಜಯದೇವ ಆಸ್ಪತ್ರೆ ಬಳಿಯಲ್ಲಿ ನಿರ್ಮಾಣವಾಗುತ್ತಿರುವ ಬಹುಹಂತದ ಮೇಲ್ಸೇತುವೆ ರೀತಿಯಲ್ಲಿ ವಾಹನ ಮತ್ತು ಮೆಟ್ರೊ ರೈಲು ಸಂಚರಿಸುವಂತೆ ಮೇಲ್ಸೇತುವೆ ವಿನ್ಯಾಸವನ್ನು ಸಾರಕ್ಕಿ ಜಂಕ್ಷನ್ ಹಾಗೂ ಇಟ್ಟಮಡು ಜಂಕ್ಷನ್ ಫ್ಲೈಓವರ್ ನಲ್ಲಿ ಅಳವಡಿಸಿಕೊಳ್ಳಲು ಚಿಂತನೆಯಿದೆ. ಈಗಾಗಲೇ ಪ್ರಸ್ತಾವಿತ ಫೇಸ್-3 ಮೆಟ್ರೊ ರೈಲು ಮಾರ್ಗ ಬರುತ್ತಿರುವ ಹಾಗೂ ಪಾಲಿಕೆ ಮೇಲ್ಸೇತುವೆ ಎರಡೂ ಸಂಧಿಸುವ ಸ್ಥಳದಲ್ಲಿ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಎರಡು ಸಂಸ್ಥೆಗಳಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಿದ್ದೇವೆ.”

– ಅಂಜುಮ್ ಪರ್ವೇಜ್, ವ್ಯವಸ್ಥಾಪಕ ನಿರ್ದೇಶಕರು, ಬಿಎಂಆರ್ ಸಿಎಲ್

ಪ್ರಸ್ತಾವಿತ ಎರಡು ಮೇಲ್ಸೇತುವೆಗಳ ವಿವರ ಹೀಗಿದೆ :

ಸಾರಕ್ಕಿ ಜಂಕ್ಷನ್ ಬಳಿಯ ಮೇಲ್ಸೇತುವೆ ನಕ್ಷೆ

ಜೆಪಿನಗರ ಬಳಿಯ ಸಾರಕ್ಕಿ ಜಂಕ್ಷನ್ ನಲ್ಲಿ ಪಾಲಿಕೆಯು ಮುಖ್ಯಮಂತ್ರಿಗಳ ನವ ನಗರೋತ್ಥಾನ ಅನುದಾನದಡಿ120 ಕೋಟಿ ರೂ. ವೆಚ್ಚದಲ್ಲಿ ಸಾರಕ್ಕಿ ಜಂಕ್ಷನ್, 36, 35 ಹಾಗೂ 33ನೇ ಮುಖ್ಯರಸ್ತೆ ಮತ್ತು ಇಲಿಯಾಸ್ ನಗರ ಜಂಕ್ಷನ್ ವರೆಗೆ ಟ್ರಾಫಿಲ್ ಸಿಗ್ನಲ್ ರಹಿತ ಸುಲಲಿತ ವಾಹನ ಸಂಚಾರಕ್ಕಾಗಿ 1.36 ಕಿ.ಮೀ ಉದ್ದದ ನಾಲ್ಕು ಲೇನ್ ಗಳ ಮೇಲ್ಸೇತುವೆ ನಿರ್ಮಿಸಲು ಪಾಲಿಕೆಯು‌ ಯೋಜನೆ ರೂಪಿಸಿತ್ತು. ಈ ಯೋಜನೆ ಪೂರ್ಣಗೊಂಡಲ್ಲಿ ಈ 5 ಜಂಕ್ಷನ್ ಗಳಲ್ಲಿನ ಸಂಚಾರದ ಒತ್ತಡ ಶೇ.60ರಷ್ಟು ಕಡಿಮೆಯಾಗಿ ದಟ್ಟಣೆ ಅವಧಿಯಲ್ಲಿ 20 ನಿಮಿಷದಷ್ಟು ಸಮಯ ಉಳಿತಾಯವಾಗಲಿದೆ.

ಇಟ್ಟಮಡು ಮೇಲ್ಸೇತುವೆ ನಕ್ಷೆ

ಅದೇ ರೀತಿ ಕತ್ರಿಗುಪ್ಪೆ ಬಳಿಯಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಅನುದಾನದಡಿ 152 ಕೋಟಿ ರೂ. ವೆಚ್ಚದಲ್ಲಿ ಇಟ್ಟಮಡು ಜಂಕ್ಷನ್, ಫುಡ್ ವರ್ಲ್ಡ್ ಹಾಗೂ ಕಾಮಾಕ್ಯ ಜಂಕ್ಷನ್ ಮಾರ್ಗದಲ್ಲಿ 1.56 ಕಿ.ಮೀ ಉದ್ದದ 4 ಲೇನ್ ಗಳ ಮೇಲ್ಸೇತುವೆ ನಿರ್ಮಿಸಲು ಪಾಲಿಕೆಯು ಸಮಗ್ರ ಯೋಜನಾ ವರದಿಯನ್ನು (DPR) ತಯಾರಿಸಿತ್ತು. ಈ ಯೋಜನೆ ಪೂರ್ಣಗೊಂಡಲ್ಲಿ ಮೈಸೂರು ರಸ್ತೆ ಹಾಗೂ ಬನ್ನೇರುಘಟ್ಟ ರಸ್ತೆ ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಈ ಸ್ಥಳದಲ್ಲಿ ಟ್ರಾಫಿಕ್ ಜಂಜಾಟವು ಶೇ.67ರಷ್ಟು ಕಡಿಮೆಯಾಗಿ ಈ ಭಾಗದಲ್ಲಿ ಸಂಚರಿಸುವ ಅವಧಿಯು 18 ನಿಮಿಷ ಉಳಿತಾಯವಾಗುತ್ತದೆ ಎಂದು ಡಿಪಿಆರ್ ನಲ್ಲಿ ತಿಳಿಸಲಾಗಿದೆ.

ಉಳಿದಂತೆ ಪಾಲಿಕೆಯು ಕೆಂಗೇರಿಯಿಂದ ಮಾಗಡಿ ರಸ್ತೆವರೆಗಿನ ಹಳೆ ಹೊರವರ್ತುಲ ರಸ್ತೆಯಲ್ಲಿ ಐದು ಕಡೆ ಮೇಲ್ಸೇತುವೆ, ಕೆಳಸೇತುವೆ ನಿರ್ಮಿಸಲಿದೆ. ಈ ಯೋಜನೆಯ ಅನುಷ್ಠಾನಕ್ಕೆ ಯಾವುದೇ ಸಮಸ್ಯೆಯಿಲ್ಲ ಎಂದು ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಚ್ಚೆತ್ತುಕೊಳ್ಳದಿದ್ದರೆ ಮೆಟ್ರೊ ಯೋಜನೆಗೆ ಆಗುತ್ತಿತ್ತು ತೊಂದರೆ :
ಪಾಲಿಕೆ ಒಂದೊಮ್ಮೆ ಮೇಲ್ಸೇತುವೆ ನಿರ್ಮಾಣ ಮಾಡಲು ಆರಂಭಿಸಿದ ನಂತರ ಮೆಟ್ರೊ ಕಾಮಗಾರಿ ಆರಂಭವಾಗಿದ್ದರೆ ರೈಲು ಮಾರ್ಗಕ್ಕೆ ಅಗತ್ಯವಾದ ಪಿಲ್ಲರ್ ಕಂಬ, ವಯಾಡಕ್ಟ್ ಅಳವಡಿಸಲು ಸಮಸ್ಯೆಯಾಗಿ ಯೋಜನೆ ಮತ್ತಷ್ಟು ವಿಳಂಬವಾಗುತ್ತಿತ್ತು. ಆದರೆ ಸಕಾಲದಲ್ಲಿ ಎರಡೂ ಸಂಸ್ಥೆಗಳು ಎಚ್ಚೆತ್ತುಕೊಂಡಿರುವುದು ಸಮಾಧಾನಕರ ವಿಷಯವಾಗಿದೆ.

ಒಟ್ಟಿನಲ್ಲಿ ನಮ್ಮ ಮೆಟ್ರೊ, ಬಿಬಿಎಂಪಿಯು ಎರಡು ಮೇಲ್ಸೇತುವೆ ನಿರ್ಮಾಣವಾಗುವ ಸ್ಥಳದಲ್ಲಿ ಜಯದೇವ ಆಸ್ಪತ್ರೆ ಬಳಿಯಲ್ಲಿ ನಿರ್ಮಿಸುತ್ತಿರುವ ರೀತಿಯಲ್ಲಿ ಡಬಲ್‌ಡೆಕರ್ ಮೇಲ್ಸೇತುವೆ ನಿರ್ಮಿಸುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

BESCOM EV Campaign And EV Expo | ರಾಜ್ಯ ಸರ್ಕಾರದಿಂದ ಜು.1ರಿಂದ ಒಂದು ವಾರ ವಿದ್ಯುತ್ ಚಾಲಿತ ವಾಹನಗಳ ಅಭಿಯಾನ

Next Post

Liquor Sales High In Karnataka | ಮೂರೇ ತಿಂಗಳಲ್ಲಿ 23 ಕೋಟಿ ಲೀ. ಮದ್ಯ ಮಾರಾಟ….! : ರಾಜ್ಯ ಸರ್ಕಾರದ ಖಜಾನೆಗೆ ಸೇರಿತು 7,500 ಕೋಟಿ ರೂ.

Next Post
ಸೂಚನೆ : ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

Liquor Sales High In Karnataka | ಮೂರೇ ತಿಂಗಳಲ್ಲಿ 23 ಕೋಟಿ ಲೀ. ಮದ್ಯ ಮಾರಾಟ....! : ರಾಜ್ಯ ಸರ್ಕಾರದ ಖಜಾನೆಗೆ ಸೇರಿತು 7,500 ಕೋಟಿ ರೂ.

HAL- BMTC #PushpakaVimana | ಪ್ರಾಜೆಕ್ಟ್ ಪುಷ್ಪಕ ವಿಮಾನ : ಒಂಟಿ ಹೋರಾಟದಿಂದ ಎಚ್ಎಎಲ್ ಗಾಗಿ 10 ಬಿಎಂಟಿಸಿ ಬಸ್ಸುಗಳ ಸೇವೆ ಒದಗಿಸಿದ ಸಾಮಾನ್ಯ ನೌಕರ !!

Please login to join discussion

Like Us on Facebook

Follow Us on Twitter

Recent News

2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

June 16, 2025

ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

June 16, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

June 16, 2025

ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

June 16, 2025
UK F-35 Fighter Jet

ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

June 15, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d