Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW SPECIAL | Ragi Procurement | ರೈತರೇ ಇತ್ತ ಗಮನಿಸಿ….! ರಾಜ್ಯದಲ್ಲಿ 4.04 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ!!

ಕರ್ನಾಟಕದಲ್ಲಿ ಈತನಕ 2.66 ಲಕ್ಷ ರೈತರಿಂದ ಕ್ವಿಂಟಾಲ್ ಗೆ 3,377 ರೂ. ಕನಿಷ್ಟ ಬೆಂಬಲ ಬೆಲೆ ನೀಡಿ ರಾಗಿ ಖರೀದಿ | ಸೆಪ್ಟೆಂಬರ್ ತನಕ ರಾಗಿ ಹಂಚಿಕೆ ನಿಗದಿ |2018-19ನೇ ಸಾಲಿನಿಂದ 2021-22ರ ತನಕ ಒಟ್ಟು 42.90 ಲ.ಮೆಟ್ರಿಕ್ ಟನ್ ರಾಗಿ ಉತ್ಪಾದನೆ

by Bengaluru Wire Desk
July 31, 2022
in BW Special, Public interest
Reading Time: 2 mins read
0
ರಾಗಿ ಬೆಳೆಯ ಪ್ರಾತಿನಿಧಿಕ ಚಿತ್ರ

ರಾಗಿ ಬೆಳೆಯ ಪ್ರಾತಿನಿಧಿಕ ಚಿತ್ರ

ನವದೆಹಲಿ/ಬೆಂಗಳೂರು, ಜು.31 www.bengaluruwire.com : ರಾಜ್ಯದಲ್ಲಿ 2021-22 ಸಾಲಿನ ಮುಂಗಾರು ಹಂಗಾಮಿನಲ್ಲಿ ಒಟ್ಟು 10.79 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗಿದ್ದು, 4.04 ಲಕ್ಷ ಮೆಟ್ರಿಕ್ ಟನ್ ನಷ್ಟು ರಾಗಿಯನ್ನು ರೈತರಿಂದ ಕನಿಷ್ಠ ಬೆಂಬಲ ಬೆಲೆ ನೀತಿಯಡಿ ಖರೀದಿ ಮಾಡಿದ್ದು, ಪ್ರಸ್ತುತವಾಗಿ ರಾಜ್ಯದಲ್ಲಿ 2.73 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ನೀಡಲಾಗುತ್ತಿದೆ.

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಸಾಧ್ವಿ ನಿರಂಜನ್ ಜ್ಯೋತಿ ಲೋಕಸಭೆಯ ಅಧಿವೇಶನದಲ್ಲಿ ರಾಜ್ಯದ ಸಂಸದ ಪ್ರಜ್ವಲ್ ರೇವಣ್ಣ ಅವರ ಚುಕ್ಕೆಗುರಿತಿಲ್ಲದ ಪ್ರಶ್ನೆಗೆ ಉತ್ತರಿಸುತ್ತಾ ಈ ವಿಷಯ ತಿಳಿಸಿದ್ದಾರೆ.

ರಾಜ್ಯದಲ್ಲಿ ರಾಗಿ ಖರೀದಿಸುವ ನೀತಿಯಿಂದಾಗಿ ರೈತರು ಸಂಕಷ್ಟದಲ್ಲಿದ್ದು, ಕನಿಷ್ಠ ಬೆಂಬಲ ಬೆಲೆಯಡಿ (MSP) ಖರೀದಿ ಪ್ರಕ್ರಿಯೆ ವಿಳಂಬ ಮಾಡುತ್ತಿರುವುದರಿಂದ ರೈತರು ತಮ್ಮ ಉತ್ಪನ್ನಗಳನ್ನು ಎಂಎಸ್ ಪಿ ದರಕ್ಕಿಂತ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದೆಯಾ? ಕೇಂದ್ರ ಸರ್ಕಾರ ರಾಜ್ಯಕ್ಕೆ 2.10 ಲಕ್ಷ ಮೆಟ್ರಿಕ್ ಟನ್ ನಷ್ಟು ರಾಗಿಯನ್ನು ಖರೀದಿ ಮಾಡಲಷ್ಟೇ ಅನುಮತಿ ನೀಡಿದೆಯಾ? ಹಾಗೆಯೇ ಪ್ರತಿಯೊಬ್ಬ ರೈತರಿಂದ ಗರಿಷ್ಠ 20 ಕ್ವಿಂಟಾಲ್ ನಷ್ಟು ಮಾತ್ರ ರಾಗಿ ಖರೀದಿ ಮಾಡಲು ನಿರ್ದೇಶನ ಕೊಟ್ಟಿದೆಯೇ ? ಎಂದು ಸಂಸದ ಪ್ರಜ್ವಲ್ ರೇವಣ್ಣ ಪ್ರಶ್ನೆ ಕೇಳಿದ್ದರು.

5.25 ಲ.ಮೆಟ್ರಿಕ್ ಟನ್ ರಾಗಿ ಖರೀದಿಗೆ ಕೇಂದ್ರದ ಅನುಮತಿ :

ಇದಕ್ಕೆ ಉತ್ತರಿಸಿರುವ ಸಾಧ್ವಿ ನಿರಂಜನ್ ಜ್ಯೋತಿ, 2021-22ನೇ ಸಾಲಿನಲ್ಲಿ ರಾಗಿ ಖರೀದಿಗೆಂದು ಕರ್ನಾಟಕ ಸರ್ಕಾರ 2.10 ಹಾಗೂ 3.14 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿ ಮಾಡುವ ಎರಡು ಹಂತದ ಯೋಜನೆಯನ್ನು ಹೊಂದಿದ್ದು, ಆ ಕುರಿತಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ರಾಗಿ ಖರೀದಿ, ಹಂಚಿಕೆ ಮತ್ತು ವಿತರಣೆ ನಿಯಮದಡಿ 2021ರ ಡಿಸೆಂಬರ್ 7ನೇ ರಂದೇ ತ್ವರಿತವಾಗಿ ಅನುಮತಿ ನೀಡಿತ್ತು. ಅದರಂತೆ ಒಟ್ಟಾರೆ 5.25 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ರೈತರಿಂದ ಖರೀದಿಸಲು ಅನುಮತಿ ನೀಡಿತ್ತು. ಈ ಸಂದರ್ಭದಲ್ಲಿ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ರಾಗಿ ಖರೀದಿಯ ಮಿತಿಯನ್ನು ಕೇಂದ್ರವು ಹೇರಿಲ್ಲ ಎಂದು ಅವರು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ 2017-18ನೇ ಸಾಲಿನಿಂದ 2021-22ನೇ ಸಾಲಿನ ಐದು ವರ್ಷಗಳ ಮುಂಗಾರು ಹಂಗಾಮಿನಲ್ಲಿ ಒಟ್ಟು 55.768 ಲಕ್ಷ ಮೆಟ್ರಿಕ್ ಟನ್ ರಾಗಿ ಉತ್ಪಾದನೆಯಾಗಿದೆ. ಆ ಪೈಕಿ 2017-18ನೇ ಸಾಲಿನಲ್ಲಿ ಕರ್ನಾಟವು ರೈತರಿಂದ ರಾಗಿ ಖರೀದಿಸಿ, ವಿತರಿಸಿದ ಅಂಕಅಂಶವನ್ನು ಹೊರತುಪಡಿಸಿ ಉತ್ಪಾದನೆಯಾದ ರಾಗಿ ಪ್ರಮಾಣವನ್ನು ಮಾತ್ರ ಲೋಕಸಭೆಯಲ್ಲಿ ರಾಜ್ಯ ಸಚಿವರು ನೀಡಿದ್ದಾರೆ.

ಕಳೆದ ಐದು ವರ್ಷಗಳ ಪೈಕಿ 2020-21ನೇ ಮುಂಗಾರು ಹಂಗಾಮಿನ ಅವಧಿಯಲ್ಲಿ ಐದು ವರ್ಷಗಳಲ್ಲೇ ಅತಿಹೆಚ್ಚು ಅಂದರೆ ಬರೋಬ್ಬರಿ 13.69 ಲಕ್ಷ ಮೆಟ್ರಿಕ್ ಟನ್ ನಷ್ಟು ರಾಗಿ ಉತ್ಪಾದನೆಯಾಗಿದ್ದರೆ, 4.75 ಲಕ್ಷ ಮೆ.ಟನ್ ರಾಗಿ ಖರೀದಿಸಿ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ 77,103 ಟನ್ ರಾಗಿಯನ್ನು ಹೊರತುಪಡಿಸಿ ಉಳಿದ ಸಿರಿಧಾನ್ಯವನ್ನು ಹಂಚಿಕೆ ಮಾಡಿದೆ.

ರಾಜ್ಯದಲ್ಲಿ ಈತನಕ 2.66 ಲಕ್ಷ ರೈತರಿಂದ ರಾಗಿ ಖರೀದಿ :

ಒಟ್ಟಾರೆ ರಾಜ್ಯದಲ್ಲಿ 2018-19ನೇ ಸಾಲಿನಿಂದ 2021-22ನೇ ಮುಂಗಾರು ಹಂಗಾಮಿನ ಅವಧಿಯಲ್ಲಿ 42.90 ಲ.ಮೆ.ಟನ್ ರಾಗಿ ಉತ್ಪಾದನೆಯಾಗಿದ್ದು, 11.67 ಲ.ಮೆ.ಟನ್ ರಾಗಿಯನ್ನು ರಾಜ್ಯ ಸರ್ಕಾರ ಕನಿಷ್ಠ ಬೆಂಬಲ ಬೆಲೆ ನೀತಿಯಡಿ ಖರೀದಿಸಿ, 10.366 ಲ.ಮೆ.ಟನ್ ವಿತರಣೆ ಮಾಡಿದೆ (2021-22ನೇ ಸಾಲಿನ 2.73 ಲ.ಮೆ.ಟನ್ ರಾಗಿ ವಿತರಣೆ ಪ್ರಸ್ತುತ ನಡೆಯುತ್ತಿದೆ) ಎಂದು ಲೋಕಸಭೆಗೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ರಾಜ್ಯ ಸಚಿವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಈತನಕ 2.66 ಲಕ್ಷ ರೈತರಿಂದ 4.04 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕ್ವಿಂಟಾಲ್ ಗೆ 3,377 ರೂ. ಕನಿಷ್ಟ ಬೆಂಬಲ ಬೆಲೆ ನೀಡಿ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ (KFCSC) ಖರೀದಿಸಿದೆ. ಏಪ್ರಿಲ್ ನಿಂದ ಪಡಿತರ ವಿತರಣಾ ಕೇಂದ್ರದಲ್ಲಿ ರಾಗಿ ವಿತರಣೆಯಾಗುತ್ತಿದ್ದು, ಸೆಪ್ಟೆಂಬರ್ ತನಕ ರಾಗಿ ಹಂಚಿಕೆಯನ್ನು ನಿಗಧಿ ಮಾಡಲಾಗಿದೆ. ಅಕ್ಟೋಬರ್ ಮತ್ತು ನವೆಂಬರ್ ವರೆಗೆ 70 ಸಾವಿರ ಟನ್ ರಾಗಿ ವೇರ್ ಹೌಸಿಂಗ್ ಕಾರ್ಪೊರೇಷನ್ ಗೋದಾಮು ಹಾಗೂ ಎಂಎಸ್ ಪಿ ಸಂಗ್ರಹ ಕೇಂದ್ರದಲ್ಲಿರಲಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಉನ್ನತ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ರಾಗಿ ಖರೀದಿಸಿದ 10 ತಿಂಗಳ ಒಳಗೆ ಬಳಯಾಗುವ ಅವಧಿ ವಿಸ್ತರಣೆ :

ಈ ಮೊದಲು ರಾಗಿ ಖರೀದಿಸಿದ ನಂತರ 6 ತಿಂಗಳ ಒಳಗೆ ಹಂಚಿಕೆ ಮಾಡಿ ಮುಗಿಸಬೇಕಿತ್ತು. ಆದರೆ ಈಗ ರಾಗಿ ಖರೀದಿಸಿದ 10 ತಿಂಗಳ ಒಳಗಾಗಿ ಗ್ರಾಹಕರಿಗೆ ವಿತರಣೆ ಮಾಡಲು ಕೇಂದ್ರ ಸರ್ಕಾರ ಸಮಯಾವಕಾಶ ವಿಸ್ತರಣೆ ಮಾಡಿದೆ. ಒಂದು ಋತುಮಾನದಲ್ಲಿ ರಾಗಿ ಖರೀದಿಗೂ ಹಾಗೂ ಬಳಕೆಗೂ ಕನಿಷ್ಟ 3 ತಿಂಗಳು ಅಂತರವಿರಲಿದೆ. ಯಾಕೆಂದರೆ ಖರೀದಿಯಾದ ರಾಗಿ ವಿತರಣೆ ಮಾಡಿದ ಬಳಿಕ ಮತ್ತೆ ಅದೇ ರಾಗಿ ಮಾರಾಟಕ್ಕಾಗಿ ಕಾಳಸಂತೆ ಹಾಗೂ ಖರೀದಿ ವ್ಯವಸ್ಥೆಗೆ ಬರುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ಈ ನಿಯಮಾವಳಿ ರೂಪಿಸಿದೆ.

ಪ್ರತಿಯೊಂದು ಕಾರ್ಡ್ ಆಧರಿಸಿ ಒಂದು ಯೂನಿಟ್ ಅಥವಾ ಪ್ರತಿವ್ಯಕ್ತಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಅಥವಾ ಅದರ ಬದಲು 2,3 ಅಥವಾ 4 ಕೆಜಿ ಅಕ್ಕಿ- ರಾಗಿ ಹೊಂದಣಿಕೆಯ ರೀತಿ ರೇಷನ್ ನೀಡಲಾಗುತ್ತಿದೆ. ಈ ವರ್ಷ ನವೆಂಬರ್ ತನಕ ರಾಗಿಯನ್ನು ರೇಷನ್ ಅಂಗಡಿಗಳಲ್ಲಿ ವಿತರಣೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.

ರಾಜ್ಯದಲ್ಲಿ ಏ.25ರಿಂದ 2020-21ನೇ ಮುಂಗಾರು ಹಂಗಾಮಿನ ಅವಧಿಯಲ್ಲಿ ಬೆಳೆದ ರಾಗಿ ಖರೀದಿಯನ್ನು ಮಾಡಲು ಏ.25ರಿಂದ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿತ್ತು. ಕೆಲವು ಕಡೆಗಳಲ್ಲಿ ರಾಗಿ ಖರೀದಿ ಕೇಂದ್ರ ಪ್ರಾರಂಭಿಸುವಲ್ಲಿನ ಗೊಂದಲದಿಂದ ರೈತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಯ ಹಾದಿ ಹಿಡಿದಿದ್ದರು.

ಪ್ರೊ.ಟಿ.ಎನ್.ಪ್ರಕಾಶ್ ಕಮ್ಮರಡಿ

ರಾಜ್ಯದಲ್ಲಿ ರಾಗಿ ಖರೀದಿ ಮತ್ತು ಪಡಿತರ ನಿರ್ವಹಣೆ ಸಮರ್ಪಕವಾಗಬೇಕಿದೆ :

“ಸರ್ಕಾರ ರಾಗಿ ಖರೀದಿಗಾಗಿ ರೈತರಿಗೆ ನೀಡಿರುವ ಕನಿಷ್ಟ ಬೆಂಬಲ ಬೆಲೆ ಚೆನ್ನಾಗಿದೆ. ರೈತರು ಆ ಬೆಲೆಯಲ್ಲಿ ತಮ್ಮ ಬೆಳೆಯನ್ನು ಮಾರಾಟ ಮಾಡಲು ಸಿದ್ಧರಿದ್ದಾರೆ. ರಾಗಿಯು ಆಹಾರ ಭದ್ರತಾ ಕಾಯ್ದೆಯಲ್ಲಿ ಬರುವ ಸಿರಿಧಾನ್ಯವಾಗಿದ್ದು, ಇದನ್ನು ಪ್ರತಿ ರೈತರಿಂದ ಖರೀದಿಸಲು ಮಿತಿ ಹೇರಿಕೆಯನ್ನು ತೆಗೆಯಬೇಕಿದೆ. ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ರಾಗಿ ಬೆಳೆಯುವ ಪ್ರದೇಶ ಕಡಿಮೆಯಾಗುತ್ತಿದೆ. ಇದರಿಂದ ಉತ್ಪಾದನೆಯೂ ಕಡಿಮೆಯಾಗುತ್ತಿದೆ. ಕೂಲಿ ಖರ್ಚಿನ ಹೆಚ್ಚಳ ಸೇರಿದಂತೆ ಮೊದಲಾದ ಕಾರಣದಿಂದ ರಾಗಿ ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ರಾಗಿಗೆ ಬೇಡಿಕೆಯಿದೆ. ಆದರೆ ರಾಜ್ಯ ಸರ್ಕಾರ ರಾಗಿ ಖರೀದಿ ಮತ್ತು ಪಡಿತರ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ. ಅದರ ಕಡೆ ಹೆಚ್ಚು ಗಮನವಹಿಸಬೇಕಿದೆ.”

  • ಪ್ರೊ.ಟಿ.ಎನ್.ಪ್ರಕಾಶ್ ಕಮ್ಮರಡಿ, ಮಾಜಿ ಅಧ್ಯಕ್ಷರು, ಕರ್ನಾಟಕ ಕೃಷಿ ಬೆಲೆ ಆಯೋಗ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BJP Praveen Case To NIA | ರಾಷ್ಟ್ರೀಯ ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

EC Voter ID Link To Aadhaar | ನಿಮ್ಮ ವೋಟರ್ ಐಡಿಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಲು ಚುನಾವಣಾ ಆಯೋಗ ನೀಡಿದೆ ಅವಕಾಶ…! ಇಂದಿನಿಂದ ಜಾರಿಗೆ ಬರುತ್ತಿರುವ ಹೊಸ ಬದಲಾವಣೆಗಳು ಯಾವುದು?

Next Post
ಸಾಂದರ್ಭಿಕ ಚಿತ್ರ

EC Voter ID Link To Aadhaar | ನಿಮ್ಮ ವೋಟರ್ ಐಡಿಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಲು ಚುನಾವಣಾ ಆಯೋಗ ನೀಡಿದೆ ಅವಕಾಶ…! ಇಂದಿನಿಂದ ಜಾರಿಗೆ ಬರುತ್ತಿರುವ ಹೊಸ ಬದಲಾವಣೆಗಳು ಯಾವುದು?

BW EXCLUSIVE | Hemavati Reservoir Project | ಹೇಮಾವತಿ ಜಲಾಶಯ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಅಕ್ರಮವಾಗಿ 2343 ಎಕರೆ ಅರಣ್ಯ ಜಮೀನು ಮಂಜೂರು...! – ಕಾನೂನು ಉಲ್ಲಂಘಿಸಿದರೂ ಕ್ರಮವಿಲ್ಲ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d