Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BDA NEWS | ಬೆಂಗಳೂರಿನಲ್ಲಿ ಅಭಿವೃದ್ಧಿ ಕಾಣದ ಈ ಬಿಡಿಎ ಲೇಔಟ್ ಗಳಿಗೆ ಶುಕ್ರದೆಶೆ…! ; ಸದ್ಯದಲ್ಲೇ ಬಿಡಿಎ ಹಳೆಯ ಬಡಾವಣೆಗಳು ಬಿಬಿಎಂಪಿಗೆ ಹಸ್ತಾಂತರ

ಬನಶಂಕರಿ ಮುಂದುವರಿದ ಬಡಾವಣೆಗೆ ಕುಡಿಯುವ ನೀರಿಗೆ 27.54 ಕೋಟಿ ರೂ. Bwssb ಗೆ ಸಂದಾಯ | ಬೆಂಗಳೂರು ದಕ್ಷಿಣ ಮತ್ತು ಯಶವಂತಪುರ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯ ಬಿಡಿಎ ಲೇಔಟ್ ಮೂಲಸೌಕರ್ಯಕ್ಕೆ 400 ಕೋಟಿ ರೂ. ಮೀಸಲು – 200 ಕೋಟಿ ರೂ. ಗೆ ಟೆಂಡರ್ | ಸದ್ಯದಲ್ಲೇ ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಯೋಜನೆ : ಎಸ್.ಆರ್.ವಿಶ್ವನಾಥ್

by Bengaluru Wire Desk
August 8, 2022
in Bengaluru Focus
Reading Time: 1 min read
1
ಬಿಡಿಎ ಹಳೆಯ ಬಡಾವಣೆಯಲ್ಲಿ ಮೂಲಸೌಕರ್ಯ ಕುರಿತಂತೆ ಪರಿಶೀಲನೆ ನಡೆಸುತ್ತಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹಾಗೂ ಶಾಸಕ ಎಂ.ಕೃಷ್ಣಪ್ಪ, ಬಿಡಿಎ ಅಧಿಕಾರಿಗಳು ಜೊತೆಯಲ್ಲಿದ್ದಾರೆ.

ಬಿಡಿಎ ಹಳೆಯ ಬಡಾವಣೆಯಲ್ಲಿ ಮೂಲಸೌಕರ್ಯ ಕುರಿತಂತೆ ಪರಿಶೀಲನೆ ನಡೆಸುತ್ತಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹಾಗೂ ಶಾಸಕ ಎಂ.ಕೃಷ್ಣಪ್ಪ, ಬಿಡಿಎ ಅಧಿಕಾರಿಗಳು ಜೊತೆಯಲ್ಲಿದ್ದಾರೆ.

ಬೆಂಗಳೂರು, ಆ.8 www.bengaluruwire.com : ಬನಶಂಕರಿ, ಅಂಜನಾಪುರ ಮತ್ತು ವಿಶ್ವೇಶ್ವರಯ್ಯ ಬಡಾವಣೆಗಳಲ್ಲಿ ಅಗತ್ಯವಿರುವ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ, ಶೀಘ್ರದಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (BBMP) ಹಸ್ತಾಂತರ ಮಾಡಲಾಗುತ್ತದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸಿರುವ ಬನಶಂಕರಿ 6ನೇ ಹಂತ, ಜೆ ಪಿ ನಗರ 8  ಮತ್ತು 9 ನೇ ಹಂತ ಹಾಗೂ ಅಂಜನಾಪುರ ಮುದುವರೆದ ಬಡಾವಣೆಗಳ ಮೂಲಸೌಕರ್ಯ ಕುರಿತು ಎಸ್.ಆರ್.ವಿಶ್ವನಾಥ್, ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ದಿಢೀರ್ ಸ್ಥಳ ಪರಿಶೀಲನೆ ನಡೆಸಿತು.

ಈ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳಿಂದ ಅಹವಾಲು ಸ್ವೀಕರಿಸಿದ ಎಸ್.ಆರ್.ವಿಶ್ವನಾಥ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಳೆಯ ಬಡಾವಣೆಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಿ, ಆ ಬಡಾವಣೆಗಳನ್ನು ಬಿಬಿಎಂಪಿಗೆ ಹಸ್ತಾಂತರ ಮಾಡುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಬಿಡಿಎ ಕಾರ್ಯೋನ್ಮುಖವಾಗಿದೆ ಎಂದರು.

ನಾನಾ ಕಾರಣಗಳಿಂದಾಗಿ ಅಂಜನಾಪುರ, ಬನಶಂಕರಿ ಮತ್ತು ವಿಶ್ವೇಶ್ವರಯ್ಯ ಬಡಾವಣೆಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಲ್ಲಿ ವಿಳಂಬವಾಗಿದೆ. ಮತ್ತಷ್ಟು ವಿಳಂಬ ನೀತಿ ಅನುಸರಿಸದೇ ಈ ಬಡಾವಣೆಗಳಿಗೆ ಕುಡಿಯುವ ನೀರು, ಒಳಚರಂಡಿ, ವಿದ್ಯುತ್, ರಸ್ತೆ ಸಂಪರ್ಕ ಸೇರಿದಂತೆ ಇನ್ನಿತರೆ ಮೂಲಸೌಕರ್ಯಗಳನ್ನು ಕಲ್ಪಿಸಲು ಬಿಡಿಎ ಪ್ರಾಧಿಕಾರ ಮಂಡಳಿಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಬಿಡಿಎ ಹಳೆಯ ಬಡಾವಣೆ ನಾಗರೀಕರ ಅಹವಾಲು ಸ್ವೀಕರಿಸಿ ಮಾತನಾಡುತ್ತಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್

ಕಳೆದ ಒಂದು ವರ್ಷದಲ್ಲಿ ವಿವಿಧ ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ್ದ ಜಾಗವನ್ನು ಅತಿಕ್ರಮಿಸಿದವರ ವಿರುದ್ಧ ಸಮರ ಸಾರಿ ಅವರಿಂದ ಕಾನೂನಿನಡಿ ಬಿಡಿಎ ಜಾಗವನ್ನು ಮರುವಶ ಪಡೆದುಕೊಳ್ಳುವ ಪ್ರಕ್ರಿಯೆಯನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಇದರಿಂದ ಸಂಸ್ಥೆಗೆ ಸಾಕಷ್ಟು ಆದಾಯ ಬರುವುದರ ಜೊತೆಗೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಕಾರಣವಾಗಿದೆ. ಇದುವರೆಗೆ ಬಿಡಿಎಗೆ ಸೇರಿದ 9 ಸಾವಿರ ನಿವೇಶನಗಳನ್ನು ಪತ್ತೆ ಮಾಡಿದ್ದು ಹಂತ ಹಂತವಾಗಿ ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ. ಇದರಿಂದ ಇದುವರೆಗೆ ಸುಮಾರು 3 ಸಾವಿರ ಕೋಟಿ ರೂಪಾಯಿ ಆದಾಯ ಬಂದಿದೆ ಎಂದರು.

ಕುಡಿಯುವ ನೀರಿಗೆ ಆದ್ಯತೆ :

ಬನಶಂಕರಿ ಮುಂದುವರಿದ ಬಡಾವಣೆಗೆ ಕುಡಿಯುವ ನೀರು ಪೂರೈಸುವ ಸಂಬಂಧ ಬೆಂಗಳೂರು ಜಲಮಂಡಳಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. ಅದಕ್ಕೆ ಅಗತ್ಯವಿರುವ 54 ಕೋಟಿ ರೂಪಾಯಿಗಳ ಪೈಕಿ 27.50 ಕೋಟಿ ರೂಪಾಯಿಗಳನ್ನು ಬಿಡಿಎ ಜಲಮಂಡಳಿಗೆ ಸಂದಾಯ ಮಾಡಿದ್ದು, ಶೀಘ್ರದಲ್ಲೇ ಕುಡಿಯುವ ನೀರು ಪೂರೈಕೆಯಾಗಲಿದೆ.  ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗೆ ಹಣದ ಕೊರತೆ ಇಲ್ಲ. ಜಲಮಂಡಳಿಯಿಂದ ಕಾಮಗಾರಿ ಆದ ತಕ್ಷಣ ಅವರಿಗೆ ಬಿಡಿಎ ಹಣ ಪಾವತಿಸಲಿದೆ ಎಂದು ತಿಳಿಸಿದರು.

ಹೆಬ್ಬಾಳ ಮೇಲ್ಸೇತುವೆಯ ವಿಸ್ತರಣೆಗಾಗಿ 175 ಕೋಟಿ ರೂ. :

ಬೆಂಗಳೂರು ದಕ್ಷಿಣ ಮತ್ತು ಯಶವಂತಪುರ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಬಿಡಿಎ ಬಡಾವಣೆಗಳ ಮೂಲಸೌಕರ್ಯಕ್ಕಾಗಿ ಸುಮಾರು 400 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದ್ದು, ಈಗಾಗಲೇ 200 ಕೋಟಿ ರೂಪಾಯಿಗಳ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಅದೇ ರೀತಿ ಅರ್ಕಾವತಿ ಬಡಾವಣೆಯ ಮೂಲಸೌಕರ್ಯಕ್ಕಾಗಿ 450 ಕೋಟಿ ರೂಪಾಯಿಗಳು ಮತ್ತು ಹೆಬ್ಬಾಳ ಮೇಲ್ಸೇತುವೆಯ ವಿಸ್ತರಣೆಗಾಗಿ 175 ಕೋಟಿ ರೂಪಾಯಿಗಳ ಯೋಜನೆಯನ್ನು ಬಿಡಿಎ ಕೈಗೆತ್ತಿಕೊಳ್ಳುತ್ತಿದೆ.

ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸಲು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಿದ್ದು, ಗುತ್ತಿಗೆದಾರರಿಗೆ ಹಣವನ್ನೂ ಬಿಡುಗಡೆ ಮಾಡಿ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಲು ಸೂಚಿಸಲಾಗಿದೆ ಎಂದು ವಿಶ್ವನಾಥ್ ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಎಂ.ಕೃಷ್ಣಪ್ಪ ಅವರು, ತಮ್ಮ ಕ್ಷೇತ್ರ ವ್ಯಾಪ್ತಿಯ ಅಂಜನಾಪುರ ಮತ್ತು ಬನಶಂಕರಿ ಬಡಾವಣೆಗಳಿಗೆ ಆದ್ಯತೆ ಮೇಲೆ ಕುಡಿಯುವ ನೀರು ಮತ್ತು ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸುವಂತೆ ಮನವಿ ಮಾಡಿದರು. ಬಿಡಿಎ ಕಾರ್ಯದರ್ಶಿ ಆನಂದ್, ಅಭಿಯಂತರರಾದ ಸುರೇಶ್, ಅಶೋಕ್ ಸೇರಿದಂತೆ ಮತ್ತಿತರೆ ಅಧಿಕಾರಿಗಳು ಈ ವೇಳೆ ಹಾಜರಿದ್ದರು.

WhatsApp Join our WhatsApp Channel
Previous Post

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ : ಜಪಾನ್ ರಾಷ್ಟ್ರದ ಉದ್ಯಮಗಳಿಗೆ ಕರ್ನಾಟಕ ಆಹ್ವಾನ

Next Post

#Bangalore Traffic | ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಕುರಿತು ಸಮನ್ವಯ ಸಭೆ : ನಿರಂತರ ಮಳೆಯ ಕಾರಣ ಕೋಲ್ಡ್ ಮಿಕ್ಸ್ ಬಳಸಿ ರಸ್ತೆ ಗುಂಡಿ ಮುಚ್ಚಲು ನಿರ್ಧಾರ

Next Post
ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ರಜನೀಶ್ ಗೋಯಲ್ ರವರ ಅಧ್ಯಕ್ಷತೆಯಲ್ಲಿ ಸೋಮವಾರ ವಿವಿಧ ಇಲಾಖೆಗಳ ಸಮನ್ವಯ ಸಭೆ ನಡೆದ ಚಿತ್ರ

#Bangalore Traffic | ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಕುರಿತು ಸಮನ್ವಯ ಸಭೆ : ನಿರಂತರ ಮಳೆಯ ಕಾರಣ ಕೋಲ್ಡ್ ಮಿಕ್ಸ್ ಬಳಸಿ ರಸ್ತೆ ಗುಂಡಿ ಮುಚ್ಚಲು ನಿರ್ಧಾರ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

BW EXCLUSIVE | Highest Commercial Value Properties | ಕರ್ನಾಟಕದಲ್ಲಿ ಈ ಸ್ಥಳಗಳಲ್ಲಿನ ಸೈಟ್ - ಪ್ರತಿ ಚದರ ಅಡಿ ಬೆಲೆ 22 ಕ್ಯಾರೆಟ್ ಚಿನ್ನಕ್ಕಿಂತ ಹೆಚ್ಚು....! ಇಲ್ಲಿದೆ ಸಂಪೂರ್ಣ ಮಾಹಿತಿ

Please login to join discussion

Like Us on Facebook

Follow Us on Twitter

Recent News

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group