Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

BSY IN TO BJP PARLIAMENTARY BOARD | ಬಿಜೆಪಿ ಹೈಕಮಾಂಡ್ ಮಹತ್ವದ ನಿರ್ಧಾರ : ಕೇಂದ್ರೀಯ ಸಂಸದೀಯ ಮಂಡಳಿಯಲ್ಲಿ ಬಿ.ಎಸ್.ಯಡಿಯೂರಪ್ಪಗೆ ಸ್ಥಾನ – ಮತ್ತೆ ಪವರ್ ಪುಲ್ ಆದ ಮಾಜಿ ಸಿಎಂ

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರ ಹಿಡಿಯಲು ನಿರ್ಣಾಯಕ ಸ್ಥಾನಕ್ಕೇರಿದ ಬಿ.ಎಸ್.ಯಡಿಯೂರಪ್ಪ

by Bengaluru Wire Desk
August 17, 2022
in News Wire, Public interest
Reading Time: 1 min read
0
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪ

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಆ.17 www.bengaluruwire.com : ಕಮಲ ಪಕ್ಷ ಕರ್ನಾಟಕದಲ್ಲಿ ಪಕ್ಷದ ಸಂಘಟನೆಯು ಹಳಿ ತಪ್ಪುತ್ತಿರುವ ನಡುವೆಯೇ ದೆಹಲಿ ನಾಯಕರು ಸಕಾಲಕ್ಕೆ ಸೂಕ್ತ ನಿರ್ಧಾರ ಕೈಗೊಂಡು, ಬಿಜೆಪಿ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪನವರಿಗೆ ಕೇಂದ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದೆ.

ಬಿಜೆಪಿ ಪಕ್ಷವನ್ನು ದಶಕಗಳಿಂದ ಕಟ್ಟಿದ್ದ ಬಿ.ಎಸ್.ಯಡಿಯೂರಪ್ಪ ಪಕ್ಷವು ತಮ್ಮನ್ನು ಮೂಲೆಗುಂಪು ಮಾಡಿದ್ದಕ್ಕೆ ಪ್ರತಿಯಾಗಿ ತಮ್ಮ ಸ್ವಕ್ಷೇತ್ರ ಶಿಕಾರಿಪುರವನ್ನು ವಿಜಯೇಂದ್ರ ಅವರಿಗೆ ಬಿಟ್ಟುಕೊಟ್ಟು ರಾಜಕೀಯ ಸನ್ಯಾಸ ಸ್ವೀಕರಿಸುವ ಸಂದೇಶ ನೀಡಿದ್ದರು. ಅದಕ್ಕೆ ಸರಿಯಾಗಿ ರಾಜ್ಯ ಬಿಜೆಪಿಯಲ್ಲಿ ನಿರಂತರವಾಗಿ ಆಗುತ್ತಿರುವ ಇರುಸು ಮುರುಸು- ತಲ್ಲಣಗಳನ್ನು ಅರಿತ ಹೈಕಮಾಂಡ್ ರಾಜ್ಯ ಬಿಜೆಪಿಗೆ ಬಲ ತುಂಬಲು ಹಾಗೂ ಬಿ.ಎಸ್.ಯಡಿಯೂರಪ್ಪನವರ ಅನುಭವ, ಸಂಘಟನೆ ಬಳಸಿಕೊಳ್ಳದಿದ್ದರೆ ಮುಂದೆ ಬರುವ ಗಂಡಾಂತರವನ್ನು ಅರಿತು ಬಿಜೆಪಿ ರಾಷ್ಟ್ರಮಟ್ಟದ ಉನ್ನತಾಧಿಕಾರ ಸಮಿತಿಯಾಗಿರುವ ಕೇಂದ್ರೀಯ ಸಂಸದೀಯ ಮಂಡಳಿ ಸಭೆಯಲ್ಲಿ ಬಿ.ಎಸ್.ಯಡಿಯೂರಪ್ಪನವರಿಗೆ ಮಹತ್ವದ ಸ್ಥಾನವನ್ನು ನೀಡಿದೆ.

ಘಟಾನುಘಟಿ ನಾಯಕರ ನಡುವೆ ಬಿಎಸ್ ವೈ :

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ನೇತೃತ್ವದ 11 ಸದಸ್ಯರ ಸಂಸದೀಯ ಮಂಡಳಿಯಲ್ಲಿ ಯಡಿಯೂರಪ್ಪರಿಗೆ ಈ ಜವಾಬ್ದಾರಿ ನೀಡಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೀಗೆ ಘಟಾನುಘಟಿ ನಾಯಕರುಗಳಿರುವ ತಂಡದಲ್ಲಿ ಬಿ.ಎಸ್.ಯಡಿಯೂರಪ್ಪ ಸ್ಥಾನ ಪಡೆದಿದ್ದಾರೆ. ಈ ಮೂಲಕ ಕೆಲವು ತಿಂಗಳಲ್ಲೇ ನಡೆಯಲಿರುವ ಬೆಂಗಳೂರಿನ ಬಿಬಿಎಂಪಿ ಹಾಗೂ ಮುಂದಿನ ವರ್ಷ ಕರ್ನಾಟಕದಲ್ಲಿ ನಡೆಯಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪನವರ ನಿರ್ಧಾರ ನಿರ್ಣಾಯಕವಾಗಿದೆ ಎಂಬ ಸೂಚನೆಯನ್ನು ರಾಜ್ಯದ ನಾಯಕರಿಗೆ ನೀಡಿದೆ.

ನೂತನವಾಗಿ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾಗಿ ನೇಮಕಗೊಂಡ ಬಿ.ಎಸ್.ಯಡಿಯರೂಪ್ಪನವರನ್ನು
ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ಸದಾನಂದಗೌಡ ಹಾಗೂ ಸಚಿವರು ಮತ್ತು ಶಾಸಕರು ಭೇಟಿ ಮಾಡಿ ಶುಭ ಹಾರೈಸಿದರು.

ಪಕ್ಷದ ಸಂಸದೀಯ ಮಂಡಳಿಯಲ್ಲಿ ಬಿಎಸ್ ವೈಗೆ ಸ್ಥಾನ ಕಲ್ಪಿಸುವ ಮೂಲಕ ಹೈಕಮಾಂಡ್ ಪಕ್ಷಕ್ಕಾಗಲಿದ್ದ ಸಾಕಷ್ಟು ಅಪಾಯವನ್ನು ತಪ್ಪಿಸಿದಂತಾಗಿದೆ. ಅಲ್ಲದೆ ತಮ್ಮನ್ನು ಹಾಗೂ ತಮ್ಮ ಬೆಂಬಲಿಗರನ್ನು ಮೂಲೆಗುಂಪು ಮಾಡಿದ್ದಾರೆಂದು ಮುನಿಸಿಕೊಂಡಿದ್ದ ಬಿ.ಎಸ್.ಯಡಿಯೂರಪ್ಪನವರಿಗೆ ಪ್ರಬಲ ರಾಜಕೀಯ ಅಖಾಡ ಸಿಕ್ಕಂತಾಗಿದೆ. ಈ ಇಳಿಯ ವಯಸ್ಸಿನಲ್ಲೂ ಪಕ್ಷದ ಸಂಘಟನೆಯ ಬಗ್ಗೆ ಛಾತಿ ಹೊಂದಿರುವ ಬಿ.ಎಸ್.ಯಡಿಯೂರಪ್ಪನವರಿಗೆ ಸ್ಥಾನ ನೀಡಿ ಆ ಮೂಲಕ ರಾಜ್ಯ ಬಿಜೆಪಿಯನ್ನು ಮುಂದಿನ ಚುನಾವಣೆಗೆ ಸಂಘಟಿಸುವ ಕ್ಯಾಲುಕೇಟವ್ ನಡೆಯನ್ನು ಪಕ್ಷದ ಹೈಕಮಾಂಡ್ ಮಾಡಿದಂತಾಗಿದೆ. ಹೊಸದಾಗಿ ಪಾರ್ಲಿಮೆಂಟರಿ ಬೋರ್ಡ್ ಸದಸ್ಯರಾಗಿ ಆಯ್ಕೆಯಾದ ವಿಷಯ ಹೊರಬೀಳುತ್ತಿದ್ದಂತೆ ಬಿ.ಎಸ್.ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ವೈ ಆಪ್ತರು, ಸಚಿವ ಸಂಪುಟದ ಸದಸ್ಯರು ಅವರ ಬೆಂಗಳೂರಿನ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ :

2024ರಲ್ಲಿ ನಡೆಯುವ ಲೋಕಸಭೆ ಚುನಾವಣೆ ಹಾಗೂ ಮುಂದಿನ ವರ್ಷ ದೇಶದಲ್ಲಿನ ವಿವಿಧ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಅವರಿಗೆ ಪಕ್ಷದ ಟಿಕೆಟನ್ನು ಪಕ್ಷದ ಸಂಸದೀಯ ಮಂಡಳಿಯ ಸಮಿತಿಯು ನೀಡುತ್ತದೆ. ಇಂತಹ ಸಂಸದೀಯ ಮಂಡಳಿಯಲ್ಲಿ ರಾಜ್ಯದಿಂದ ಬಿ.ಎಲ್.ಸಂತೋಷ್ ಈಗಾಗಲೇ ಸ್ಥಾನಪಡೆದಿದ್ದಾರೆ. ಇದೀಗ ಇಂತಹ ಮಹತ್ವದ ಹುದ್ದೆಯನ್ನು ಬಿ.ಎಸ್.ಯಡಿಯೂರಪ್ಪನವರಿಗೆ ನೀಡಿ, ರಾಜ್ಯದಲ್ಲಿ ಪ್ರಬಲ ಹಾಗೂ ಬಹುಸಂಖ್ಯಾತರಾಗಿರುವ ಲಿಂಗಾಯತ ಸಮುದಾಯಕ್ಕೆ ಹಾಗೂ ಬಿ.ಎಸ್.ವೈ ಕಾರ್ಯಕರ್ತರಿಗೆ ಹುರುಪು ತುಂಬವ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆಯುವ ಜಾಣ ನಡೆಯನ್ನು ಹೈಕಮಾಂಡ್ ಅನುಸರಿಸಿದೆ.

ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ 11 ನೂತನ ಸದಸ್ಯರ ಪಟ್ಟಿ

ಈ ಬೆಳವಣಿಗೆಯಿಂದ ಪಕ್ಷವನ್ನು ಕಾಡುತ್ತಿದ್ದ ಸಂಘಟನೆ ಕೊರತೆ ನೀಗಿಸಲಿದ್ದಾರೆ. ಈ ಇಳಿವಯಸ್ಸಿನಲ್ಲೂ ಕಾಲಿಗೆ ಚಕ್ರ ಕಟ್ಟಿಕೊಂಡು ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ ಎನ್ನುವುದು ಹೈಕಮಾಂಡ್ ಲೆಕ್ಕಾಚಾರ. ಬಿಎಸ್ ವೈ ವ್ಯಕ್ತಿತ್ವ, ಎದುರಾಳಿಗಳಿಗೆ ಪಟ್ಟು ಹಾಕುವ ಚಾಕಚಕ್ಯತೆ, ಎಂತಹ ಸವಾಲುಗಳು ಬಂದರೂ ಅದನ್ನು ಎದುರಿಸುವ ರಾಜಕೀಯ ಅನುಭವವನ್ನು ಮತ್ತೊಮ್ಮೆ ಗುರುತಿಸಿರುವ ಹೈಕಮಾಂಡ್ ಸಂಸದೀಯ ಮಂಡಳಿ ಸದಸ್ಯ ಸ್ಥಾನವನ್ನು ನೀಡಿದೆ ಎಂಬ ಲೆಕ್ಕಾಚಾರಗಳು ಕೇಳಿಬಂದಿದೆ.

ಫೀನಿಕ್ಸ್ ನಂತೆ ಮೇಲೆದ್ದು ಕುಳಿತ ಮಾಜಿ ಸಿಎಂ :

ಯಡಿಯೂರಪ್ಪನವರಿಗೆ ಇದೀಗ ಸಂಸದೀಯ ಮಂಡಳಿಯ ಸದಸ್ಯ ಸ್ಥಾನ ದೊರೆಯುತ್ತಿದ್ದಂತೆ ಪಕ್ಷದ ನಾಯಕರೆಲ್ಲರೂ ನಾಮುಂದು ತಾಮುಂದು ಎಂದು ಅವರ ಮನೆಗೆ ಎಡತಾಕಿ ಶುಭ ಹಾರೈಕೆಗಳ ಹೊಳೆಯನ್ನೇ ಹರಿಸುತ್ತಿದ್ದಾರೆ. ಅಧಿಕಾರ ಬೇಕಾದಾಗ ತಮ್ಮನ್ನು ಬೇಕಾದಂತೆ ಬಳಸಿಕೊಂಡು ನಂತರ ತಮ್ಮನ್ನು ದೂರ ಮಾಡಿದರೆಂಬ ಅಳುಕು ಬಿ.ಎಸ್.ವೈ ಮನದ ಮೂಲೆಯಲ್ಲಿ ಕಾಡಿದ್ದಂತು ಸತ್ಯ. ಹಾಗಾಗಿ ಯಾವುದರ ಗೊಡವೆಯೇ ಬೇಡವೆಂದು ಸುಮ್ಮನಿದ್ದರು. ಸ್ವಪಕ್ಷದಲ್ಲಿದ್ದ ಹಿತಶತ್ರುಗಳು ಕೂಡ ಯಡಿಯೂರಪ್ಪನವರ ಯುಗ ಮುಗಿಯಿತು ಎಂದು ಹೇಳುತ್ತಿರುವಾಗಲೇ ರಾಜ್ಯದಲ್ಲಿ ಹೋರಾಟ ಮಾಡಿಕೊಂಡೇ ರಾಜಕೀಯ ಭವಿಷ್ಯ ಕಂಡುಕೊಂಡ ಯಡಿಯೂರಪ್ಪ ಇದೀಗ ಫೀನಿಕ್ಸ್ ನಂತೆ ಮೇಲೆದ್ದು ಕೂತಿದ್ದಾರೆ.

ಮುಂಬರುವ ರಾಜ್ಯದ ವಿಧಾನಸಭಾ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆಯಲ್ಲೂ ಪಕ್ಷದ ಪ್ರಣಾಳಿಕೆ, ಅಭ್ಯರ್ಥಿಗಳ ಆಯ್ಕೆ, ಟಿಕೆಟ್ ಹಂಚಿಕೆಯಂತಹ ಮಹತ್ವದ ನಿರ್ಧಾರಗಳಲ್ಲಿ ಬಿ.ಎಸ್.ಯಡಿಯೂರಪ್ಪನವರ ಮಾತು ನಿರ್ಣಾಯಕವಾಗಲಿದೆ. ಹೀಗಾಗಿ ಇನ್ನು ಮುಂದೆ ಗೆದ್ದತ್ತಿದ ಬಾಲ ಹಿಡಿದಂತೆ ರಾಜಕೀಯ ಭವಿಷ್ಯಕ್ಕಾಗಿ ಅವರ ಮನೆ ಮುಂದೆ ಮಾರುದ್ದ ಸಾಲು ಸೃಷ್ಟಿಯಾದರೆ ಆಶ್ಚರ್ಯಪಡಬೇಕಿಲ್ಲ. ಅಧಿಕಾರ ಇದ್ದಾಗ ಯಾರು ಯಾವ ರೀತಿ ನೆಡೆಸಿಕೊಂಡರು ಎಂಬುದನ್ನು ಅರಿತು, ಯಡಿಯೂರಪ್ಪನವರು ಮುಂದೆ ಹೆಜ್ಜೆ ಇಟ್ಟರೆ ಉತ್ತಮ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಿಂದ, ರಾಜಕೀಯ ಪಂಡಿತರಿಂದ ವ್ಯಕ್ತವಾಗಿದೆ.

WhatsApp Join our WhatsApp Channel
Previous Post

BW SPECIAL | CMs Multi- Storeyed Housing Scheme | ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ ಬಗ್ಗೆ ನಿಮಗೊಂದು ಗುಡ್ ನ್ಯೂಸ್….! ಇಲ್ಲಿದೆ ಫುಲ್ ಡಿಟೇಲ್ಸ್

Next Post

Viral Video : ಮಗುವಿನ ಶೂವನ್ನು ತನ್ನ ಸೋಂಡಿಲಿನಿಂದ ಎತ್ತಿ ವಾಪಸ್ ನೀಡಿದ ಆನೆ…!

Next Post
ಆನೆಯೊಂದು ತನ್ನ ಸೋಂಡಲಿನ ಮೂಲಕ ಮಗುವಿನ ಶೂ ವಾಪಸ್ ಮಾಡುತ್ತಿರುವ ಚಿತ್ರ. (ಚಿತ್ರಕೃಪೆ :  ನೋ ದಿಸ್ ನ್ಯೂಸ್/ಇನ್ ಸ್ಟಾಗ್ರಾಮ್)

Viral Video : ಮಗುವಿನ ಶೂವನ್ನು ತನ್ನ ಸೋಂಡಿಲಿನಿಂದ ಎತ್ತಿ ವಾಪಸ್ ನೀಡಿದ ಆನೆ...!

ವಿಂಧ್ಯಾ ಟಿಬಿಎಮ್ ಯಂತ್ರ ಪಾಟರಿ ಟೌನ್ ನಿಲ್ದಾಣದಿಂದ ಯಶಸ್ವಿಯಾಗಿ ಹೊರಬಂದ ಚಿತ್ರ

Namma Metro Rail News | ಪಾಟರಿ ಟೌನ್ ಮೆಟ್ರೊ ನಿಲ್ದಾಣದಕ್ಕೆ ಯಶಸ್ವಿಯಾಗಿ ಸುರಂಗ ಕೊರೆದು ಹೊರಬಂದ ವಿಂಧ್ಯಾ ಟಿಬಿಎಮ್ ಯಂತ್ರ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group