Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | Since 1927 Old Park | ಬ್ರಾಂಡ್ ಬೆಂಗಳೂರಿನ ಹೆಸರಿಗೆ ಮಸಿ – ಇದು ಐತಿಹಾಸಿಕ ಶ್ರೀ ಕೃಷ್ಣರಾಜೇಂದ್ರ ಒಡೆಯರ್ ಸಿಲ್ವರ್ ಜುಬಿಲಿ ಪಾರ್ಕ್ ಅಲ್ಲ ಕೊಳಚೆ ಜುಬಿಲಿ ಪಾರ್ಕ್….!

ಬೆಂಗಳೂರಿನಲ್ಲಿದೆ 1,348 ಪಾರ್ಕ್ ಗಳು – 230 ಪಾರ್ಕ್ ಬಳಕೆಯಲ್ಲಿಲ್ಲ | ರಸ್ತೆಗಾಗಿ ಈ ಹಿಂದೆ ಸಿಲ್ವರ್ ಜ್ಯೂಬಲಿ ಪಾರ್ಕ್ ಭೂ ಭಾಗವನ್ನೇ ಇಬ್ಭಾಗ ಮಾಡಲಾಗಿತ್ತು | ನಿರಂತರ ದಬ್ಬಾಳಿಕೆಯಿಂದ ಸೊರಗಿದೆ ಬೆಂಗಳೂರಿನ ಐಕಾನಿಕ್ ಸ್ಪಾಟ್

by Bengaluru Wire Desk
August 20, 2022
in Bengaluru Focus, BW Special
Reading Time: 2 mins read
0
ಸಿಲ್ವರ್ ಜ್ಯೂಬಿಲಿ ಪಾರ್ಕ್ ಚಿತ್ರ

ಸಿಲ್ವರ್ ಜ್ಯೂಬಿಲಿ ಪಾರ್ಕ್ ಚಿತ್ರ

ಬೆಂಗಳೂರು, ಆ.20 www.bengaluruwire.com : ರಾಜಧಾನಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಗೆ ಸೇರಿದ ಐತಿಹಾಸಿಕ ಮಹತ್ವವುಳ್ಳ ಸಿಲ್ವರ್ ಜುಬಿಲಿ ಪಾರ್ಕ್ ಈಗ ಸೊಂಬೇರಿಗಳ ಹಾಗೂ ಪಾಲಿಕೆ ಕಸ, ತ್ಯಾಜ್ಯ ವಸ್ತುಗಳ ಡಂಪಿಂಗ್ ತಾಣವಾಗಿ ಬದಲಾಗಿದೆ. ಇದು ಬೆಂಗಳೂರಿಗರ ದೌರ್ಭಾಗ್ಯವೇ ಸರಿ.

ಹತ್ತಿರದಲ್ಲೇ ಪುರಾತನ ಧರ್ಮರಾಯ ಸ್ವಾಮಿ ದೇವಸ್ಥಾನ ಹಾಗೂ ಸುತ್ತಮುತ್ತ ಜನನಿಬಿಡ ಸ್ಥಳದ ಮಧ್ಯೆ ಹಸಿರಿನಿಂದ ನಳ ನಳಿಸುತ್ತಿದ್ದ ಸಿಲ್ವರ್ ಜುಬಿಲಿ ಪಾರ್ಕ್ ಗೆ ಸುತ್ತಮುತ್ತಲ ನಾಗರೀಕರು ವಾಯುವಿಹಾರಕ್ಕೆ ಬಾರದ ಸ್ಥಿತಿ ನಿರ್ಮಾಣವಾಗಿದೆ. ವಾಯುವಿಹಾರಕ್ಕೆ ಇರಲಿ, ಬಾಯಿ, ಮೂಗು ಮುಚ್ಚಿಕೊಂಡು ಹೋದರು ಗೊಬ್ಬುನಾತ ಬೀರುತ್ತದೆ. ಒಂದು ರೀತಿ ತ್ಯಾಜ್ಯ ವಿಲೇವಾರಿ ಕೇಂದ್ರದಂತೆ ಭಾಸವಾಗುತ್ತಿದೆ.

ಬೆಂಗಳೂರಿನ ಪಾಲಿಕೆ ಬೃಹತ್ ನೀರುಗಾಲುವೆ ವಿಭಾಗದವರು ಟೌನ್ ಹಾಲ್ ಮತ್ತು ಕೆ.ಆರ್.ಮಾರ್ಕೆಟ್ ಮಧ್ಯೆ ದೊಡ್ಡ ಮಳೆನೀರಿನ ದೊಡ್ಡ ದೊಡ್ಡ ಪೈಪ್ ಗಳನ್ನು ಹಾಕಲು ಯದ್ವಾತದ್ವಾ ಪಾರ್ಕಿನ ಜಾಗವನ್ನು ಅಗೆದು ಹಾಕಿದ್ದಾರೆ. ನಿಧಾನಗತಿಯ ಕಾಮಗಾರಿಯಿಂದಾಗಿ ಪಾರ್ಕ್ ತುಂಬಾ ತ್ಯಾಜ್ಯವಸ್ತುಗಳು, ಕೊಳವೆ ಪೈಪ್ ಗಳು, ಹಾಗೆಯೇ ಬಿಬಿಎಂಪಿಯ ಕೇಂದ್ರ ಯೋಜನಾ ವಿಭಾಗದವರು ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡುವಾಗ ಕಿತ್ತು ಹಾಕಿದ ಕಾಂಕ್ರಿಟ್ ತ್ಯಾಜ್ಯವನ್ನು ಇಲ್ಲೇ ತಂದು ಸುರಿದಿದ್ದಾರೆ.

ಮೈಸೂರು ಸಂಸ್ಥಾನದಲ್ಲಿ ನಾಲ್ಕನೇ ಶ್ರೀ ಕೃಷ್ಣರಾಜೇಂದ್ರ ಒಡೆಯರ್ ಅವರ ಆಳ್ವಿಕೆಯ 25 ವರ್ಷ ಪೂರ್ಣಗೊಳಿಸಿದ ನೆನಪಿಗಾಗಿ 1927ರಲ್ಲಿ ಬೆಂಗಳೂರು ಕೇಂದ್ರ ಭಾಗದಲ್ಲಿ ಟೌನ್ ಹಾಲ್ ಮುಂಭಾಗದಲ್ಲಿ ಈ ಸಿಲ್ವರ್ ಜುಬಿಲಿ ಪಾರ್ಕ್ ಅನ್ನು ನಿರ್ಮಾಣ ಮಾಡಲಾಗಿತ್ತು. ಬೆಂಗಳೂರಿನಲ್ಲಿ ಉದ್ಯಾನವನಗಳ ನಿರ್ಮಾಣ ಮಾಡುವ ಕಾಲಘಟ್ಟದಲ್ಲಿ ರಚಿಸಲಾದ ಈ ಸಿಲ್ವರ್ ಜ್ಯೂಬಲಿ ಪಾರ್ಕ್ ಈ ಹಿಂದೆ 3 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಿತ್ತು.

ನಗರದಲ್ಲಿ ಟ್ರಾಫಿಕ್ ಹೆಚ್ಚಾದಂತೆ ಮೈಸೂರು ರಸ್ತೆ ಮೇಲ್ಸೇತುವೆಯಿಂದ ಟೌನ್ ಹಾಲ್ ಕಡೆಗೆ ಬರುವ ಹಂತದಲ್ಲಿ ಈ ಪಾರ್ಕ್ ಮಧ್ಯೆ ಎಸ್.ಜೆ.ಪಿ ರಸ್ತೆಗೆ ಸಂಪರ್ಕಿಸುವ ಭಾಗದಲ್ಲಿ ರಸ್ತೆ ನಿರ್ಮಾಣ ಮಾಡಲಾಯಿತು. ಆ ಬಳಿಕ ಇಷ್ಟು ದೊಡ್ಡ ಪಾರ್ಕ್ ಇಬ್ಬಾಗವಾಯಿತು. ಅದಾದ ನಂತರ ಈ ಪಾರ್ಕ್ ನಲ್ಲಿ ಸೊಂಬೇರಿಗಳ ಅಡ್ಡೆಯಾಗಿ ಬದಲಾಯಿತು. ಸಂಜೆಯಾದರೆ ಅಕ್ರಮ- ಅನಾಚಾರಣಗಳ ತಾಣವಾಯಿತು. ಇದೀಗ ಬೆಂಗಳೂರು ಜಲಮಂಡಳಿ ಕೊಳಚೆ ಪೈಪ್ ಅಳವಡಿಸಲು ಹಾಗೂ ಬಿಬಿಎಂಪಿಯ ವೈಟ್ ಟಾಪಿಂಗ್ ಕಾಂಕ್ರಿಟ್ ರಸ್ತೆ ಒಡೆದು ಹಾಕಿದ ಭಾಗಗಳು, ಫುಟ್ ಪಾತ್ ಸಿಮೆಂಟ್ ಸ್ಲಾಬ್ ಹಾಗೂ  ತ್ಯಾಜ್ಯ ವಸ್ತುಗಳ ಡಂಪಿಂಗ್ ಏರಿಯಾ ಆಗಿ ಬದಲಾಗಿದೆ.

‘ಕಳೆದ 2-3 ವರ್ಷದಿಂದ ಸಿಲ್ವರ್ ಜುಬಿಲಿ ಪಾರ್ಕ್ ಬಳಸಲು ಆಗದ ಪರಿಸ್ಥಿತಿಯಿದೆ. ಬಿಬಿಎಂಪಿಯವರು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಪಾರ್ಕ್ ಒಳಗೆ ಕಾಲಿಡಲು ಆಗಲ್ಲ. ತುಂಬಾ ಮೋರಿ ವಾಸನೆ ಬರುತ್ತೆ. ಮೊದಲು ಸಿಲ್ವರ್ ಜುಬಿಲಿ ಪಾರ್ಕ್ ತುಂಬಾ ಚೆನ್ನಾಗಿತ್ತು. ಇಲ್ಲಿ ಬಂದು ಕೂತರೆ ನಿದ್ದೆ ಬರುವಷ್ಟು ಹಿತವಾದ ವಾತಾವರಣವಿತ್ತು. ಈಗ ಗೊಬ್ಬು ವಾಸನೆ ಬರುತ್ತಿದೆ. ಸಿಕ್ಕಾಪಟ್ಟೆ ಸೊಳ್ಳೆಗಳ ಕಾಟ. ಡೆಂಗ್ಯೂ, ಚಿಕನ್ ಗುನ್ಯಾ ಕಾಯಿಲೆ ಬರುವ ತಾಣವಾಗಿದೆ. ಮೊದಲು ಇಲ್ಲಿನ ಅವ್ಯವಸ್ಥೆಯನ್ನು ಬಿಬಿಎಂಪಿ ಸರಿಪಡಿಸಬೇಕು.’

ಅಬ್ರಾರ್ ಖಾನ್, ಹಿರಿಯ ನಾಗರೀಕ
ಕೊಳಚೆ ನೀರು- ಸೊಳ್ಳೆಯ ತಾಣವಾಗಿರುವ ಪಾರ್ಕಿನ ಜಾಗ

ರಾಜಧಾನಿ ಬೆಂಗಳೂರು ಸಿಲಿಕಾನ್ ಸಿಟಿ ಅಂತ ಗುರ್ತಿಸೋಕೆ ಮುನ್ನ ಉದ್ಯಾನವನಗಳ ನಗರಿ ಎಂದೇ ಖ್ಯಾತಿ ಪಡೆದಿತ್ತು. ನಗರದಲ್ಲಿದ್ದ ಹಲವು ಐತಿಹಾಸಿಕ ಪಾರ್ಕ್ ಗಳಿಂದಾಗಿಯೇ ಬೆಂಗಳೂರಿನ ಸೌಂದರ್ಯ ನಳನಳಿಸಿತ್ತು. ಈಗ ನೂರಾರು ಉದ್ಯಾನವನಗಳನ್ನು ಬೆಂಗಳೂರು ಹೊಂದಿದ್ದರೂ, ಹಲವು ಪಾರ್ಕ್ ಗಳು ನಿರ್ವಹಣೆಯಿಲ್ಲದೆಯೇ ಸೊರಗಿದೆ. ಪಾಲಿಕೆಯು ರಸ್ತೆ, ರಾಜಕಾಲುವೆ, ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೊಡುವ ಪ್ರಾಮುಖ್ಯತೆಯನ್ನು ಅಧಿಕಾರಿಗಳಿಗೆ ಪರ್ಸಂಟೇಜ್ ಕಮಾಯಿ ಅಷ್ಟಾಗಿ ವರ್ಕ್ ಔಟ್ ಆಗದ ಪಾರ್ಕ್, ಕೆರೆ ಅಭಿವೃದ್ಧಿಗೆ ಆಸಕ್ತಿ ಕೊಟ್ಟಿಲ್ಲ. ಅಗತ್ಯವಾದಷ್ಟು ಹಣವನ್ನು ಇಟ್ಟಿಲ್ಲ ಎನ್ನುವ ಆರೋಪಗಳಿವೆ.

ಆರು ತಿಂಗಳಲ್ಲಿ ಸಂಪೂರ್ಣವಾಗಿ ಪಾರ್ಕ್ ಅಭಿವೃದ್ಧಿಯಾಗುತ್ತಂತೆ :

ಗೆಜಿಬೋ ಜಾಗವನ್ನೇ ಅತಿಕ್ರಮಿಸಿ ತಾತ್ಕಾಲಿಕವಾಗಿ ಆಶ್ರಯ ತಾಣ ಮಾಡಿಕೊಂಡಿರುವ ಚಿತ್ರ

‘ಸಿಲ್ವರ್ ಜುಬಿಲಿ ಪಾರ್ಕ್ ನಲ್ಲಿ ಹಿಂದೆ ಇದ್ದವರು ಬೇಕಾಬಿಟ್ಟಿಯಾಗಿ ಮಳೆನೀರು ಮೋರಿ ಪೈಪ್ ಹಾಕಿ ಕೊಳಚೆ ನೀರು ಪಾರ್ಕ್ ಒಳಗೆ ನುಗ್ಗುತ್ತಿತ್ತು. ಹಿಂದೆ ಇದ್ದ ಜನಪ್ರತಿನಿಧಿಗಳು ಈ ಉದ್ಯಾನವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಹಣ ತಂದು ಅಭಿವೃದ್ಧಿ ಮಾಡಿದ್ದರೆ ಪಾರ್ಕ್ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಪಾರ್ಕ್ ನ ಒಳಗೆ ತ್ಯಾಜ್ಯವಸ್ತುಗಳನ್ನು ತಂದು ಸುರಿಯದಂತೆ ತಿಳಿಸಿದ್ದರೂ ಕೆಳ ಹಂತದ ಅಧಿಕಾರಿಗಳು ಈ ಬಗ್ಗೆ ಮಾತು ಕೇಳುತ್ತಿಲ್ಲ. ಒಂದೂವರೆ ವರ್ಷದ ಹಿಂದೆ ಈ ಪಾರ್ಕ್ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಇನ್ನೊಂದು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಮುಗಿದು, ಆರು ತಿಂಗಳ ಒಳಗಾಗಿ ಸಂಪೂರ್ಣವಾಗಿ ಪಾರ್ಕ್ ಅಭಿವೃದ್ಧಿ ಮಾಡುತ್ತೇವೆ.’

ಉದಯ್ ಗರುಡಾಚಾರ್, ಶಾಸಕರು, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ

ಬೆಂಗಳೂರಿನಲ್ಲಿದೆ 1,348 ಪಾರ್ಕ್ ಗಳು – 230 ಪಾರ್ಕ್ ಬಳಕೆಯಲ್ಲಿಲ್ಲ :

ನಗರದಲ್ಲಿ ಒಟ್ಟಾರೆ 1,348 ಉದ್ಯಾನವನಗಳಿವೆ. ಆ ಪೈಕಿ 1,118 ಪಾರ್ಕ್ ಗಳನ್ನು ಸಾರ್ವಜನಿಕರು ಬಳಕೆ ಮಾಡುತ್ತಿದ್ದಾರೆ. ಆದರೆ 230 ಪಾರ್ಕ್ ಗಳು ಅಭಿವೃದ್ಧಿಯಾಗದೆ, ಬಳಸಲು ಯೋಗ್ಯವಿಲ್ಲದ ಸ್ಥಿತಿಯಲ್ಲಿದೆ.  ನಗರದಲ್ಲಿ ಬಿಬಿಎಂಪಿ ಸುಪರ್ದಿಯಲ್ಲಿ ಐದು ಎಕರೆ ಮೇಲಿನ ಪಾರ್ಕ್ ಗಳೆಂದರೆ ಜೆಪಿ ಪಾರ್ಕ್, ಕೋಲ್ಸ್ ಪಾರ್ಕ್, ಕೃಷ್ಣರಾವ್ ಪಾರ್ಕ್ ಹಾಗೂ ಲಕ್ಷಣರಾವ್ ಪಾರ್ಕ್ ಗಳಾಗಿದೆ. ಸಿಲಿಕಾನ್ ಸಿಟಿಯಲ್ಲಿ 1 ರಿಂದ 2 ಎಕರೆವಗಿನ 400 ರಿಂದ 500 ಪಾರ್ಕ್ ಗಳಿವೆ. ಅಲ್ಲದೆ ಅರ್ಧ ಎಕರೆಯಿಂದ ಒಂದು ಎಕರೆವರೆಗಿನ 400 ರಿಂದ 500 ಪಾರ್ಕ್ ಗಳಿವೆ. ನಗರದಲ್ಲಿ ಇಷ್ಟೆಲ್ಲಾ ಪಾರ್ಕ್ ಗಳಿರುವುದರಿಂದಲೇ ದಿನೇ ದಿನೇ ಹೆಚ್ಚುತ್ತಿರುವ ವಾಯುಮಾಲಿನ್ಯವನ್ನು ಆದಷ್ಟು ಮಟ್ಟಿಗೆ ಈ ಉದ್ಯಾನವನಗಳ ಪರಿಸರ ಸಮತೋಲನ ಮಾಡುತ್ತಿದೆ ಎನ್ನುತ್ತಾರೆ ಪರಿಸರ ತಜ್ಞರು.

ಕೆಲಸ ಅವಧಿಯಲ್ಲಿ ಸೊಂಬೇರಿ ಕಟ್ಟೆಯಾಗಿರುವ ಪಾರ್ಕ್ ಒಳಭಾಗ
ಮಳೆನೀರು ಮೋರಿ ಪೈಪ್ ಗಳನ್ನು ಬೇಕಾಬಿಟ್ಟಿಯಾಗಿ ಹಾಕಿರುವ ಬಿಬಿಎಂಪಿ ಬೃಹತ್ ಮಳೆನೀರುಗಾಲುವೆ ವಿಭಾಗ

‘ಸಿಲ್ವರ್ ಜುಬಿಲಿ ಪಾರ್ಕ್ ಮಧ್ಯೆ 2- 3 ತಿಂಗಳಿಂದ ಕೆ.ಆರ್.ಮಾರುಕಟ್ಟೆ ಕಡೆಗೆ ಮಳೆನೀರು ಮೋರಿ ಪೈಪ್ ಅಳವಡಿಸುವ ಕಾರ್ಯವನ್ನು ಬಿಬಿಎಂಪಿ ಬೃಹತ್ ನೀರುಗಾಲುವೆ ವಿಭಾಗ ಕೈಗೆತ್ತಿಕೊಂಡಿದೆ. ಇದರ ಜೊತೆಗೆ ಬಿಬಿಎಂಪಿ ಕೇಂದ್ರ ಯೋಜನೆ ವಿಭಾಗದವರು ವೈಟ್ ಟಾಪಿಂಗ್ ಕಾಮಗಾರಿ ನಡೆಸಿದ ತ್ಯಾಜ್ಯವಸ್ತುಗಳನ್ನು ಈ ಪಾರ್ಕ್ ಜಾಗದಲ್ಲಿ ಹಾಕಿದ್ದಾರೆ. ಜಲಮಂಡಳಿ ಪೈಪ್ ಅಳವಡಿಕೆ ಕಾರ್ಯ ಮುಗಿದ ಬಳಿಕ ಪಾಲಿಕೆ ಯೋಜನಾ ವಿಭಾಗದವರು ಪಾರ್ಕ್ ನಡಿಗೆ ಮಾರ್ಗ, ಕುಳಿತುಕೊಳ್ಳಲು ಬೆಂಚು ಸೇರಿದಂತೆ ಮತ್ತಿತರ ಕಾಮಗಾರಿಗಳನ್ನು ನಡೆಸಿ ನಿರ್ವಹಣೆಗಾಗಿ ತೋಟಗಾರಿಕೆ ವಿಭಾಗಕ್ಕೆ ಹಸ್ತಾಂತರಿಸಲಿದ್ದಾರೆ.’

ಚಂದ್ರಶೇಖರ್, ಉಪನಿರ್ದೇಶಕರು, ಬಿಬಿಎಂಪಿ ತೋಟಗಾರಿಕಾ ಇಲಾಖೆ

ಐತಿಹಾಸಿಕ ಮಹತ್ವವುಳ್ಳ ಈ ಉದ್ಯಾನವವು, ಬ್ರಾಂಡ್ ಬೆಂಗಳೂರಿನ ಹೆಸರಿಗೆ ಇಲ್ಲಿನ ಅವ್ಯವಸ್ಥೆಯು ಮಸಿಬಳಿಯುವ ರೀತಿಯಲ್ಲಿದೆ. ನಾಡನ್ನು ಕಟ್ಟಿದವರ ಹೆಸರಿನಲ್ಲಿರುವ ಈ ಉದ್ಯಾನವನವು ತನ್ನ ಗತ ವೈಭವವನ್ನು ಆದಷ್ಟು ಶೀಘ್ರವಾಗಿ ಮರಳಿ ಪಡೆದುಕೊಳ್ಳುವುದು ಯಾವಾಗ ಎಂಬ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Wildlife Crime | ಕೊಳ್ಳೆಗಾಲ ಸಿಐಡಿ ಅರಣ್ಯ ಮೊಬೈಲ್ ಘಟಕ ಪೊಲೀಸರ ಕಾರ್ಯಾಚರಣೆ : ಎಂಟು ಬೆಲೆಬಾಳುವ ಕೃಷ್ಣ ಮೃಗಗಳ ಚರ್ಮ ವಶ, ಇಬ್ಬರ ಬಂಧನ

Next Post

BBMP ELECTION | ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ

Next Post
ಬಿಬಿಎಂಪಿ ಚುನಾವಣೆ ಮತದಾರರ ಕರಡು ಪಟ್ಟಿ ಪ್ರಕಟ ಕುರಿತಂತೆ ರಾಜ್ಯ ಚುನಾವಣಾ ಆಯುಕ್ತ ಬಸವರಾಜ್ ನೇತೃತ್ವದಲ್ಲಿ ಶನಿವಾರ ಸಭೆ ನಡೆಯಿತು.

BBMP ELECTION | ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ

Moving House Video | ರೈತನೊಬ್ಬ 500 ಅಡಿಯಷ್ಟು ದೂರ ಸರಿಸಿದ ತನ್ನ ಎರಡು ಅಂತಸ್ತಿನ ಮನೆ....!

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d