Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬಿಬಿಎಂಪಿ ಚುನಾವಣೆ 2022 ; ಕರಡು ಮತದಾರರ ಪಟ್ಟಿ ಪ್ರಕಟ – ನಗರದಲ್ಲಿದ್ದಾರೆ 79.08 ಲಕ್ಷ ಮತದಾರರು

ಬಿಬಿಎಂಪಿ ಚುನಾವಣೆ ಕೂಡಲೇ ಮಾಡುವಂತೆ ಸುಪ್ರೀಂಕೋರ್ಟ್ ನಿರ್ದೇಶನವಿದೆ. ಒಂದೊಮ್ಮೆ ಚುನಾವಣೆ ಮುಂದೂಡಲು ಸೂಚನೆ ಬಂದರೆ ಆ ಬಗ್ಗೆ ಮುಂದೆ ಕ್ರಮ ಕೈಗೊಳ್ಳುತ್ತೇವೆ ; ರಾಜ್ಯ ಚುನಾವಣಾ ಆಯುಕ್ತ ಬಸವರಾಜ್

by Bengaluru Wire Desk
August 25, 2022
in Bengaluru Focus
Reading Time: 1 min read
0

ಬೆಂಗಳೂರು, ಆ.25 www.bengaluruwire.com : ಹಳ್ಳಿಗಳಿಗಿಂತ ನಗರ ಪ್ರದೇಶಗಳಲ್ಲಿ ಮತದಾನದ ಪ್ರಮಾಣ ಕಡಿಮೆಯಿದೆ. ಮತದಾನದ ಪ್ರಮಾಣ ಹೆಚ್ಚಲು ಮತದಾರರು ಕೈಜೋಡಿಸಬೇಕು ಎಂದು ರಾಜ್ಯ ಚುನಾವಣಾ ಆಯುಕ್ತ ಬಸವರಾಜ್ ತಿಳಿಸಿದ್ದಾರೆ.

ನಗರದ ಪಾಲಿಕೆಯ ಐಪಿಪಿ ಕೇಂದ್ರದಲ್ಲಿ ಬಿಬಿಎಂಪಿ ಹಾಗೂ ರಾಜ್ಯ ಚುನಾವಣಾ ಆಯೋಗದಿಂದ ಗುರುವಾರ ಏರ್ಪಡಿಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

www.bbmp.gov.in ವೆಬ್ ಸೈಟ್, ಸೇರಿದಂತೆ ಎಲ್ಲಾ ಕಡೆ ಕರಡು ಮತದಾರರ ಪಟ್ಟಿ ಪ್ರಕಟ ಮಾಡಲಾಗುತ್ತಿದೆ.ಯಲ್ಲಿ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ಮತದಾರರು ತಮ್ಮ ಹೆಸರು ಸೂಕ್ತ ವಾರ್ಡ್ ನಲ್ಲಿ ಇದೆಯೇ ಎಂದು ಪರಿಶೀಲಿಸಿ, ತಪ್ಪಿದ್ದರೆ, ಸರಿಪಡಿಸಲು ಸೂಕ್ತ ರೀತಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿದೆ.

ಬಿಬಿಎಂಪಿಯ ವ್ಯಾಪ್ತಿಯ 243 ವಾರ್ಡ್ ಗಳಲ್ಲಿ 79,08,394 ಮತದಾರರಿದ್ದು ಆ ಪೈಕಿ 41,09,496 ಪುರುಷ ಮತದಾರರು ಹಾಗೂ 37,97,497 ಮಹಿಳಾ ಮತದಾರರು ಹಾಗೂ 1,401 ಇತರೆ ಮತದಾರಿದ್ದಾರೆ ಎಂದು ಚುನಾವಣಾ ಆಯೋಗ ಆಯುಕ್ತ ಬಸವರಾಜ್ ಹೇಳಿದ್ದಾರೆ.

ಬಿಬಿಎಂಪಿ 2022 ರ ಸಾವತ್ರಿಕ ಚುನಾವಣೆ ನಡೆಸುವ ಸಂಬಂದ ಮತದಾರರ ಪಟ್ಟಿ ಕುರಿತಂತೆ ಈಗಾಗಲೇ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ಈ ಕಾರ್ಯಕ್ಕಾಗಿ ನಾಲ್ಕು ಜಿಲ್ಲಾ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಅಂತಿಮ ಮತದಾರರ ಪಟ್ಟಿ ಪ್ರಕಟವಾದಾಗ ಮತದಾರರ ಪಟ್ಟಿಯಲ್ಲಿ ಬದಲಾವಣೆಯಾಗಬಹುದು. ಮತದಾರರ ಪಟ್ಟಿ ಕುರಿತಂತೆ ಯಾವುದಾದರೂ ಆಕ್ಷೇಪಣೆ ERO ಹಾಗೂ ARO ಅವರು ಅರ್ಜಿಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವರು. 22 ಸೆಪ್ಟೆಂಬರ್ ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ.

ERO ಹಾಗೂ ARO ನೂರಕ್ಕೆ ನೂರರಷ್ಟು ವಾರ್ಡ್ ವಾರು ಪುನರ್ವಿಂಗಡಣೆ ಬಗ್ಗೆ ಪರಿಶೀಲನೆ ನಡೆಸಬೇಕು ಅದೇ ರೀತಿ ಆಕ್ಷೇಪಣೆಗಳನ್ನು ಪರಿಶೀಲನೆ ನಡೆಸಬೇಕು. ಜಂಟಿ ಆಯುಕ್ತರು ಶೇ.10ರಷ್ಟು ಪರಿಶೀಲನೆ ನಡೆಸಬೇಕು. ಮಾಧ್ಯಮಗಳು, ನಾಗರೀಕ ಸಂಘ ಸಂಸ್ಥೆಗಳು ಮತದಾರರ ಪಟ್ಟಿ ಬಗ್ಗೆ ಗಮನಹರಿಸಿ ತಮ್ಮ ಜವಾಬ್ದಾರಿಯನ್ನು ಮೆರೆಯಬೇಕು. ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಿದಲ್ಲಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ರಾಜ್ಯ ಚುನಾವಣಾ ಆಯುಕ್ತರು ಹೇಳಿದರು.

ಮತದಾರರು ನಮ್ಮ ಜೊತೆ ಕೈಜೋಡಿಸಿ ಮತಗಟ್ಟೆ, ಮತದಾರರ ಪಟ್ಟಿ ಕರಡು ಪಟ್ಟಿಯನ್ನು ಪರಿಶೀಲಿಸಿ ತಪ್ಪುಗಳಿದ್ದಲ್ಲಿ ಸರಿಪಡಿಸಲು ಅವಕಾಶವಿದೆ. ಆಗ ಅಂತಿಮವಾಗಿ ಬಿಬಿಎಂಪಿ ಚುನಾವಣೆ ಸುಗಮವಾಗಿ ನಡೆಸಲು ಅವಕಾಶವಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ಆನೆಕಲ್ ವಿಧಾನಸಭಾ ಕ್ಷೇತ್ರದ ಒಂದು ವಾರ್ಡ್ ಬಿಬಿಎಂಪಿಗೆ ಸೇರುತ್ತೆ. ಈ ಹಿಂದೆ ಬಿಬಿಎಂಪಿ ಹೊರಗಿದ್ದರೂ ಹಿಂದೆ 2011 ಜನಗಣತಿ ಪರಿಗಣಿಸಿದರೆ ಆಗ ಜನಸಂಖ್ಯೆ ಕಮ್ಮಿಯಿತ್ತು. ಈಗ 11-12 ವರ್ಷದಲ್ಲಿ ಬದಲಾವಣೆ ಆಗಿದೆ. ಥಣಿಸಂದ್ರದಲ್ಲಿ ಮತದಾರರ ಸಂಖ್ಯೆ 51,653 ಹೆಚ್ಚಿರುವ ಬಗ್ಗೆ ಗಮನ ಸೆಳೆದಿದ್ದೀರ, ಈ ಬಗ್ಗೆ ಪರಿಶೀಲನೆ ನಡೆಸ್ತೀವಿ. ಹೊಸ ವಾರ್ಡ್ ನಲ್ಲಿ‌ ಮತಗಟ್ಟೆ ಗುರ್ತಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ತುಷಾರ್ ಗಿರಿನಾಥ್ ಅವರು ಹೇಳಿದರು.

ಮತದಾರರ ಕರಡು ಪಟ್ಟಿ ಪರಿಷ್ಕರಣೆಗೆ ಆಕ್ಷಪಣೆ ಸಲ್ಲಿಸಲು ಸೆ.2ರಂದು ಕೊನೆಯ ದಿನವಾಗಿದೆ. ಆಕ್ಷೇಪಣೆ ಸಲ್ಲಿಸಲು ತರಾತುರಿಯಲ್ಲಿ ಕರಡು ಪಟ್ಟಿ ಪರಿಷ್ಕರಣೆ ಮಾಡಿಲ್ಲ ಎಂದು ಚುನಾವಣಾ ಆಯುಕ್ತ ಬಸವರಾಜ್ ಹೇಳಿದರು.

ಮತದಾರರ ಪಟ್ಟಿ ಅಂತಿಮಗೊಂಡ ನಂತರ ಬಿಬಿಎಂಪಿ ಚುನಾವಣೆ ದಿನಾಂಕ ಪ್ರಕಟವಾಗಲಿದೆ. ಚುನಾವಣೆ ಕೂಡಲೇ ಮಾಡುವಂತೆ ಸುಪ್ರೀಂಕೋರ್ಟ್ ನಿರ್ದೇಶನವಿದೆ. ಒಂದೊಮ್ಮೆ ಚುನಾವಣೆ ಮುಂದೂಡಲು ಸೂಚನೆ ಬಂದರೆ ಆ ಬಗ್ಗೆ ಮುಂದೆ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಚುನಾವಣಾ ಆಯೋಗಕ್ಕೆ ವಾರ್ಡ್ ಪುನರ್ವಿಂಗಡಣೆ ಹಾಗೂ ಮೀಸಲಾತಿ ಪಟ್ಟಿ ಸರ್ಕಾರದಿಂದ ಸಲ್ಲಿಕೆಯಾಗಿದೆ ಎಂದರು.

ಚುನಾವಣಾ ಆಯೋಗದ ಮಾಹಿತಿ ಅನ್ವಯ ಮತದಾರರ ಪಟ್ಟಿ ಸೇರ್ಪಡೆ, ಅಳಿಸು ಹಾಕುವಿಕೆ ನಿರಂತವಾಗಿ ನಡೆಯುತ್ತಿರುತ್ತೆ. ಅಲ್ಲಿನ ದತ್ತಾಂಶವನ್ನು ಆಧರಿಸಿ ಮತದಾರರ ಪಟ್ಟಿ ಪರಿಷ್ಕರಣೆ ಆಗುತ್ತಿರುತ್ತೆ. 2015 ಇಸವಿಯಲ್ಲಿ ನಗರದಲ್ಲಿ 71,22,165 ಮತದಾರರು ಇದ್ದರು. ಈಗ 79,08,394 ಮತದಾರರು ಕರಡು ಪಟ್ಟಿಯಲ್ಲಿದ್ದಾರೆ ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲೆ, ಮೂರು ಲೋಕಸಭಾ ಕ್ಷೇತ್ರಗಳು ಹಾಗೂ 28 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಗುರುತಿನ ಕಾರ್ಡ್ ದತ್ತಾಂಶದ ಜೊತೆಗೆ ಆಧಾರ್ ಕಾರ್ಡ್ ಜೋಡಿಸುವಿಕೆ ಪ್ರಮಾಣ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕಡಿಮೆಯಿದೆ. ಶೇ.3ರಷ್ಟು ಮಾತ್ರ ಮತದಾರರು ತಮ್ಮ ವೋಟರ್ ಐಡಿ ಕಾರ್ಡ್ ಜೊತೆ ಆಧಾರ್ ಕಾರ್ಡ್ ಅನ್ನು ಜೋಡಿಸಿದ್ದಾರೆ. ಈ ಪ್ರಮಾಣ ಹೆಚ್ಚಿಸಲು ಮತದಾರರಲ್ಲಿ ಅರಿವು ಮೂಡಿಸಲು ಸ್ವೀಪ್ ಚಟುವಟಿಕೆ ಹೆಚ್ಚಿಸುತ್ತೇವೆ ಎಂದು ಜಿಲ್ಲಾ ಚುನಾವಣಾಧಿಕಾರಿ ರಂಗಪ್ಪ ತಿಳಿಸಿದರು.

ಇ-ಜೋಡಣೆ ಹಾಗೂ ಬಿಬಿಎಂಪಿ ಚುನಾವಣೆಯೂ ಜೊತೆಗೆ ಬಂದಿದೆ. ಬ್ಲಾಕ್ ಮಟ್ಟದ ಅಧಿಕಾರಿಗಳನ್ನು ಚುನಾವಣೆ ಮತದಾರರ ಪಟ್ಟಿ ಪರಿಷ್ಕರಣೆ ಜೊತೆಗೆ ಇ-ಜೋಡಣೆ ಪ್ರಮಾಣ ಹೆಚ್ಚಲು ಕ್ರಮ ಕೈಗೊಳ್ಳುತ್ತಾರೆ. ಆಧಾರ್ ಲಿಂಕ್ – ವೋಟರ್ ಐಡಿ ಜೊತೆ ಲಿಂಕ್ ಮಾಡುವುದು ಮುಖ್ಯವಾಗಿದೆ. ನಕಲಿ ಮತದಾರರ ಹಾವಳಿ ಕಡಿಮೆ ಮಾಡಬಹುದು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಜಂಟಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹೊನ್ನಾಂಬ, ಬೆಂಗಳೂರು‌ ನಗರ ಜಿಲ್ಲಾಧಿಕಾರಿ ಶ್ರೀನಿವಾಸ್, ಜಿಲ್ಲಾ ಚುನಾವಣಾಧಿಕಾರಿ ಹಾಗೂ ವಿಶೇಷ ಆಯುಕ್ತ ಹರೀಶ್ ಕುಮಾರ್, ಪಾಲಿಕೆ ಚುನಾವಣಾ ಆಯೋಗದ ಸಹಾಯಕ ಆಯುಕ್ತ ಉಮೇಶ್ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

#BeCareful BBMP | ಮೇಲಿಂದ ಕೆಳಗೆ ಬೀಳ್ತಿರಾ ಹುಷಾರ್….! ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿದೆ ಇಂತದ್ದೊಂದು ಖತರ್ನಾಕ್ ಆಫೀಸ್

Next Post

BIG NEWS | ಸಾರ್ವಜನಿಕ ಚರ್ಚೆಗೆ ಗ್ರಾಸವಾದ ಬೆಂಗಳೂರು ವೈರ್ Exclusive Report : ಬಿಬಿಎಂಪಿ ಗುತ್ತಿಗೆದಾರರಿಂದ ಶೇ.50 ಕಮಿಷನ್ ಆರೋಪ ; ಲಿಖಿತ ದೂರು ನೀಡಿದರೆ ಕಾನೂನು ಕ್ರಮ – ತುಷಾರ್ ಗಿರಿನಾಥ್

Next Post
ಸಾಂದರ್ಭಿಕ ಚಿತ್ರ

BIG NEWS | ಸಾರ್ವಜನಿಕ ಚರ್ಚೆಗೆ ಗ್ರಾಸವಾದ ಬೆಂಗಳೂರು ವೈರ್ Exclusive Report : ಬಿಬಿಎಂಪಿ ಗುತ್ತಿಗೆದಾರರಿಂದ ಶೇ.50 ಕಮಿಷನ್ ಆರೋಪ ; ಲಿಖಿತ ದೂರು ನೀಡಿದರೆ ಕಾನೂನು ಕ್ರಮ - ತುಷಾರ್ ಗಿರಿನಾಥ್

Supreme Court

BBMP Election | ಬಿಬಿಎಂಪಿ ಚುನಾವಣೆ ವಿಚಾರ ಸುಪ್ರೀಂಕೋರ್ಟ್ ನಿಂದ ಹೈಕೋರ್ಟ್ ಅಂಗಳಕ್ಕೆ : ಸರ್ವೋಚ್ಛ ನ್ಯಾಯಾಲಯದ ಮಹತ್ವದ ಆದೇಶ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group