Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW Special | Kurinji Flower | ಚಂದ್ರದ್ರೋಣ ಪರ್ವತದಲ್ಲಿ ನೀಲ ಕುರಂಜಿ ಹೂವಿನ ಸಿಂಗಾರ : ಭೂರಮೆಯ ಸೌಂದರ್ಯ ಕಣ್ತುಂಬಿಕೊಳ್ಳಲು ಇದು ಸಕಾಲ

ಚಿಕ್ಕಮಗಳೂರಿನಲ್ಲಿ ಹಸಿರಿನಿಂದ ಕಂಗೊಳಿಸೋ ಬೆಟ್ಟಗುಡ್ಡಗಳನ್ನ ನೋಡಿದವರಿಗೆ ಕೆಲವು ದಿನಗಳ ಕಾಲ ನೀಲಿ ಬೆಟ್ಟಗಳನ್ನ ನೋಡುವ ಅವಕಾಶ ಲಭ್ಯವಾಗಿದೆ.

by Bengaluru Wire Desk
January 12, 2023
in BW Special, Public interest
Reading Time: 1 min read
0
ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ನೀಲಕುರಂಜಿ ಹೂಗಳಿಂದ ಕಂಗೊಳಿಸುತ್ತಿರುವ ಮನೋಹರ ದೃಶ್ಯ

ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ನೀಲಕುರಂಜಿ ಹೂಗಳಿಂದ ಕಂಗೊಳಿಸುತ್ತಿರುವ ಮನೋಹರ ದೃಶ್ಯ

ಚಿಕ್ಕಮಗಳೂರು, ಸೆ.10 www.bengaluruwire.com : ಕಾಫಿ ನಾಡು ಚಿಕ್ಕಮಗಳೂರಿನ ಗಿರಿ-ಪರ್ವತ ಶ್ರೇಣಿಗಳ ಸಾಲುಗಳೆಲ್ಲಾ ನೀಲಿ ನೇರಳೆಯ ರೂಪ ಪಡೆದುಕೊಂಡಿದೆ. ಇಲ್ಲಿನ ಬೆಟ್ಟ ಗುಡ್ಡಗಳೆಲ್ಲಾ ಕಳೆದ ಎರಡು ಮೂರು ವಾರಗಳಿಂದ ನೀಲಿ- ನೇರಳೆ (Blueish Purple) ಬಣ್ಣದಿಂದ ಕಂಗೊಳಿಸುತ್ತಿದೆ. ಅರೆ ಇದೇನ್ ವಿಶೇಷ ಅಂತಿರಾ 12 ವರ್ಷಕೊಮ್ಮೆ ಅರಳೋ ನೀಲ ಕುರಂಜಿ ಹೂವು (Kurinji Flower) ಚಿಕ್ಕಮಗಳೂರಿನ ಗಿರಿ ಕಂದರವನ್ನು ಭೂ ಲೋಕದ ಸ್ವರ್ಗವನ್ನಾಗಿಸಿದೆ.

ಒಂದೆಡೆ ಎಡಬಿಡದೆ ಸುರಿಯುತ್ತಿರುವ ಮಳೆ ಮತ್ತೊಂದೆಡೆ ಹಿಮದಿಂದ ಮುಚ್ಚಿಹೋದ ಬೆಟ್ಟಗಳು ಮಧ್ಯೆ ಮಧ್ಯೆ ನೀಲಿ ನೇರಳೆ ಬಣ್ಣದ ಕುರಂಜಿ ಹೂಗಳಿಂದ ತುಂಬಿದ್ದು, ಅಲ್ಲಿನ ಪರಿಸರಕ್ಕೆ ಮೆರಗು ನೀಡಿದೆ. ರಸ್ತೆಯ ಇಕ್ಕೆಲಗಳಲ್ಲಿ ಈ ಹೂವುಗಳು ಅರಳಿ ನಿಂತಿದೆ.ಅಲ್ಲದೆ ಪ್ರಕೃತಿ ಸೌಂದರ್ಯವನ್ನು ಇಮ್ಮಡಿಗೊಳಿಸಿದೆ. ಪ್ರಕೃತಿ ಪ್ರಿಯರು, ಪ್ರವಾಸಿಗರಂತೂ ಇಂತಹ ಕಾಲಕ್ಕಾಗಿಯೇ ಎದುರು ನೋಡುತ್ತಿರುತ್ತಾರೆ. 12 ವರ್ಷಗಳಿಗೊಮ್ಮೆ ಅರಳೋ ಈ ನೀಲಿ ನೇರಳೆ ಹೂವು ಕಾಫಿನಾಡಿನ ಸೌಂದರ್ಯದ ದಿಕ್ಕನ್ನೇ ಬದಲಿಸಲಿದೆ. ಕಣ್ಣು ಹಾಯಿಸಿದಲೆಲ್ಲಾ ಕಾಣೋ ಅಪರೂಪದ ನೀಲಿ ಕುರಂಜಿ ನೋಡುಗರ ಕಣ್ಮನ ಸೆಳೆಯೋದ್ರ ಜೊತೆ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ.

ಹೂ ಬೆಟ್ಟಗಳನ್ನು ಕಂಡು ಸಂತಸದಿಂದ ನೆಗೆಯುತ್ತಿರುವ ಪ್ರವಾಸಿಗ
ಶೋಲಾ ಕಾಡುಗಳಲ್ಲಿ ಕಂಡು ಬರುವ ಅಪರೂಪದ ಪ್ರಕೃತಿ ವೈಭವ

ಪಶ್ಚಿಮಘಟ್ಟ ಅರಣ್ಯ ವ್ಯಾಪ್ತಿಯ ಭದ್ರಾ ರಕ್ಷಿತಾರಣ್ಯದ ಶೋಲಾ ಹುಲ್ಲುಗಾವಲು ಪ್ರದೇಶದಲ್ಲಿ ಅರಳೋ ಈ ಹೂವು ಕಾಫಿನಾಡಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಅರಳಿ ನಿಂತಿದೆ. ಮುಳ್ಳಯ್ಯನಗಿರಿ, ಮಲ್ಲಂದೂರಿನ ಕಲ್ಲುಬಂಡೆಗುಡ್ಡ ಸುತ್ತಲೂ ಹುಲುಸಾಗಿ ಅರಳಿ ನಿಂತಿದೆ. ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ಓಡಾಡೋ ಪ್ರವಾಸಿಗರಂತೂ ಪ್ರಕೃತಿ ಈ ವೈಭವನ್ನು ಕಣ್ಣು ತುಂಬಿಕೊಂಡು ಸಖತ್ ಥ್ರಿಲ್ ಆಗಿದ್ದಾರೆ. ಈ ನೀಲಿ ಕುರಂಜಿ ಹೂವು ಪಶ್ವಿಮಘಟ್ಟ ಸಂರಕ್ಷಿತ ಪ್ರದೇಶವಾಗಿರುವ ಕಾರಣ ಈ ಹೂವು ಇನ್ನೂ ಜೀವಂತವಾಗಿದೆ. ಹೀಗಾಗಿ ಈ ಅಪರೂಪದ ಹೂವು ಪ್ರತಿ 12 ವರ್ಷಕೊಮ್ಮೆ ಕಾಫಿನಾಡನ್ನ ಭೂರಮೆಯ ಮರೆಗನ್ನು ಹೆಚ್ಚಿಸುತ್ತಾ ಬಂದಿದೆ.

ಕುರಂಜಿ ಹೂವಿನ ಧಾರ್ಮಿಕ ಐತಿಹ್ಯ :

ಕುರಂಜಿ ಹೂವಿನ ಸೌಂದರ್ಯಕ್ಕೆ ಸಾಟಿ ಯಾವುದು?

ಈ ಹೂವಿಗೆ ಧಾರ್ಮಿಕವಾಗಿಯೂ ಇತಿಹಾಸವಿದೆ. ಸುಬ್ರಹ್ಮಣ್ಯ ವೆಳ್ಳಿನ ಮದುವೆಯಾಗುವಾಗ ಈ ಹೂವಿನ ಮಾಲೆ ಹಾಕಿದ್ದರು. ಈ ನೀಲಿ ಪುಷ್ಪವನ್ನು ಪ್ರೇಮದ ಸಂಕೇತವಾಗಿ ಪ್ರೇಮದ ಹೂ ಅಂತಲೂ ಕೇರಳ, ತಮಿಳುನಾಡಿಗರು ಕರೆಯುತ್ತಾರೆ. ಆದ್ದರಿಂದ ಈ ಹೂವು ಅರಳಿದ ಕೂಡಲೇ ಮೊದಲು ಸುಬ್ರಹ್ಮಣ್ಯ ದೇವರಿಗೆ ಅರ್ಪಿಸುತ್ತಾರೆ. ಮಳೆ, ಗಾಳಿ, ನೀರು, ಬೆಳಕು ಹಾಗೂ ಪ್ರಕೃತಿಯ ಸಮತೋಲನವಾಗಿದ್ದಾಗ ಮಾತ್ರ ಈ ಹೂ ಅರಳುತ್ತದೆ. ಗುರ್ಗಿ ಹೂವಿನಲ್ಲಿ ನಾನಾ ವಿಧಗಳಿದ್ದು, 5, 7, 12, 14 ವರ್ಷಗಳಿಗೆ ಅರಳೋ ಪ್ರಭೇದ ಹೂವುಗಳೂ ಇವೆ. ಈ ಹೂವುಗಳು ಅರಳಿ ನಿಂತಾಗ ಇದರ ಕಾಂಡದಲ್ಲಿ ಔಷಧಿಯ ಗುಣಗಳಿರುವ ಕಾರಣಕ್ಕೆ ನಾನಾ ಖಾಯಿಲೆಗಳಿಗೆ ಚಿಕಿತ್ಸೆಗಾಗಿ ಬಳಸುತ್ತಾರೆ. ಸದ್ಯಕ್ಕೆ ಕಾಫಿನಾಡಿನ ಗಿರಿ-ಶಿಖರಗಳಲ್ಲಿ ಅರಳಿ ನಿಂತಿರೋ, ಮತ್ತಷ್ಟು ಅರಳುವ ಸನಿಹದಲ್ಲಿದ್ದು ಬೆಟ್ಟಗುಡ್ಡಗಳ ಸೌಂದರ್ಯವನ್ನೆ ಬದಲಿಸಿ, ನೋಡುಗರ ಕಣ್ಮನದಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡುತ್ತಿದೆ.

ಒಟ್ಟಾರೆ, ಪ್ರಕೃತಿಯ ಒಡಲಾಳದಲ್ಲಿ ಇನ್ನೆಷ್ಟು ಸೌಂದರ್ಯದ ರಾಶಿ ಮನೆ ಮಾಡಿದ್ಯೊ ಬಲ್ಲೋರ್ಯಾರು ಇಲ್ಲ. ಕಾಫಿನಾಡಲ್ಲಿ ಒಂದೊಂದು ಕಾಲದಲ್ಲೂ ಒಂದೊಂದು ರೀತಿಯ ಸೌಂದರ್ಯ ಮನೆ ಮಾಡಿರುತ್ತೆ. ಈವರೆಗೆ ಹಸಿರಿನಿಂದ ಕಂಗೊಳಿಸೋ ಬೆಟ್ಟಗುಡ್ಡಗಳನ್ನ ನೋಡಿದವರಿಗೆ ಕೆಲವು ದಿನಗಳ ಕಾಲ ನೀಲಿ ಬೆಟ್ಟಗಳನ್ನ ನೋಡುವ ಅವಕಾಶ ಲಭ್ಯವಾಗಿದೆ. ಸಾಮಾನ್ಯವಾಗಿ ಆಗಸ್ಟ್ ನಿಂದ ನವೆಂಬರ್ ವರೆಗೆ ಕುರುವಂಜಿ ಹೂಗಳು ಅರಳುವ ಸಂದರ್ಭವಾಗಿರುತ್ತದೆ.

ಕುರಂಜಿ ಹೂವಿನ ವೈಜ್ಞಾನಿಕ ಹಿನ್ನಲೆ :

ನೀಲಿ-ನೇರಳೆ ಕುರಂಜಿ ಒಂದು ಜಾತಿಯ ಹೂವು. ಇದು ದಕ್ಷಿಣ ಭಾರತದಲ್ಲಿರುವ ನೀಲಗಿರಿ ಬೆಟ್ಟದಲ್ಲಿರುವ ಶೋಲಾ ಕಾಡಿನಲ್ಲಿ ಕಂಡು ಬರುತ್ತದೆ. ಇದರ ವೈಜ್ಞಾನಿಕ ಹೆಸರು ಸ್ಟ್ರೊಬಿಲಂಥೆಸ್ ಕುಂತಿಯಾನ. ಈ ಹೂವು ಅರಳಿದಾಗ ಇದು ನೀಲಿ ಬಣ್ಣದಲ್ಲಿರುತ್ತದೆ. ಈ ಹೂವು ಹನ್ನೆರಡು ವರ್ಷಗಳಿಗೊಮ್ಮೆ ಅರಳುತ್ತದೆ. ಈ ಒಂದು ಗಿಡ ಸ್ಟ್ರೊಬಿಲಂತಸ್ ಜಾತಿಗೆ ಸೇರಿದೆ. ಹತ್ತೊಂಬತ್ತನೇ ಶತಮಾನದಲ್ಲಿ ಕ್ರಿಶ್ಚಿಯನ್ ಗಾಟ್ಫ್ರೈಡ್ ಡೇನಿಯಲ್ ನೀಸ್ ವಾನ್ ಎಸೆನ್ಬೆಕ್ ಎಂಬ ವ್ಯಕ್ತಿ ಈ ಹೂವನ್ನು ಮೊದಲು ಗುರುತಿಸಿದ್ದರು. ಈ ಕುರುಂಜಿ ಹೂವು 250 ಜಾತಿಗಳಲ್ಲಿ ಕಂಡುಬರುತ್ತದೆ. ಅದರಲ್ಲಿ 46 ಜಾತಿಯ ಹೂವುಗಳು ನಮ್ಮ ಭಾರತ ದೇಶದಲ್ಲಿ ಕಂಡುಬರುತ್ತದೆ. ಸಾಮಾನ್ಯವಾಗಿ ಹನ್ನೆರಡು ವರ್ಷಗಳಿಗೊಮ್ಮೆ ಅರಳುವ ಈ ಹೂವಿನ ಜಾತಿಯಲ್ಲಿ ಕೆಲವು ವಿಚಿತ್ರ ಜಾತಿಯ ಹೂವುಗಳಿವೆ, ಅವು ಹನ್ನೆರಡು ವರ್ಷಗಳ ಬದಲಿಗೆ ಹದಿನಾರು ವರ್ಷಗಳಿಗೊಮ್ಮೆ ಅರಳುತ್ತದೆ.

1,300 ರಿಂದ 2,400 ಪರ್ವತಗಳಲ್ಲಿ ಕಂಡು ಬರುವ ಹೂ :

ದೀರ್ಘ ಕಾಲಗಳಿಗೊಮ್ಮೆ ಅರಳುವ ಈ ರೀತಿಯ ಹೂಗಳನ್ನು ಪಿಲಿಟೆಸಿಯಲ್ಸ್ ಅಂದು ಕರೆಯುತ್ತಾರೆ. ಈ ಹೂವು 1300ರ ರಿಂದ 2400 ಪರ್ವತಗಳಲ್ಲಿ ಕಂಡು ಬರುತ್ತದೆ. ಕುರಂಜಿ ಗಿಡ ಮೂವತ್ತರಿಂದ ಅರವತ್ತು ಸೆಂಟಿ ಮೀಟರ್ ಉದ್ದ ಬೆಳೆಯುತ್ತದೆ. ಆದರೆ ಇದಕ್ಕೆ 180 ಸೆಂಟಿ ಮೀಟರ್ ಎತ್ತರ ಬೆಳೆಯುವ ಕ್ಷಮತೆ ಹೊಂದಿದೆ. ಕುರಂಜಿ ಹೂವುಗಳಿಂದ ಜೇನುಹುಳಗಳು ಸಂಗ್ರಹಿಸಿದ ಜೇನು ತುಪ್ಪ ಬಲು ರುಚಿ ಎನ್ನುತ್ತಾರೆ ಸ್ಥಳೀಯರು.

ಮತ್ಯಾಕೆ ತಡ, ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಪ್ರದೇಶದಲ್ಲಿನ ಪ್ರಕೃತಿ ವಿಸ್ಮಯ ಹಾಗೂ ಅಪರೂಪದ ನೀಲಿ ಸೌಂದರ್ಯವನ್ನು ಸವಿಯರಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BBMP News | ನಾಲ್ಕು ಟೆಲಿಕಾಮ್ ಸರ್ವಿಸ್ ಸಂಸ್ಥೆಗಳಿಗೆ ಬಿಬಿಎಂಪಿ 80 ಲಕ್ಷ ರೂ. ದಂಡ

Next Post

ಶ್ರೀ ನಾರಾಯಣಗುರುಗಳ ಆದರ್ಶ- ವಿಚಾರಧಾರೆಗಳು ಇಂದಿಗೂ ಪ್ರಸ್ತುತ : ಸಚಿವ ಡಾ.ನಾರಾಯಣಗೌಡ

Next Post

ಶ್ರೀ ನಾರಾಯಣಗುರುಗಳ ಆದರ್ಶ- ವಿಚಾರಧಾರೆಗಳು ಇಂದಿಗೂ ಪ್ರಸ್ತುತ : ಸಚಿವ ಡಾ.ನಾರಾಯಣಗೌಡ

Karnataka Forest News | ಅರಣ್ಯ ಹುತಾತ್ಮರ ಪರಿಹಾರ  30 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗಳಿಗೆ ಏರಿಕೆ : ಸಿಎಂ ಬೊಮ್ಮಾಯಿ ಘೋಷಣೆ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d