Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bengaluru Demolition Drive | ಬಿಬಿಎಂಪಿ ವ್ಯಾಪ್ತಿಯ 3 ವಲಯಗಳ ಯಾವ್ಯಾವ ಸ್ಥಳಗಳಲ್ಲಿ ಒತ್ತುವರಿ ತೆರವು ಆಪರೇಷನ್ ನಡೆದಿದೆ?

ಪೂರ್ವ ಪಾರ್ಕ್ರಿಡ್ಜ್ ಸ್ವತ್ತು ಹಾಗೂ ಭಾಗಮನೆ ಟೆಕ್ ಪಾರ್ಕ್ ನ ಸ್ವತ್ತಿನ ಮೂಲಕ ಹಾದು ಹೋಗುವ ಕಾಲುವೆಯನ್ನು ಬಿಬಿಎಂಪಿ ಅಧಿಕಾರಿಗಳು, ಸರ್ಕಾರದ ಭೂಮಾಪಕರು ಮತ್ತಿತರಿಂದ ಸರ್ವೆ ಕಾರ್ಯ ಪೂರ್ಣ

by Bengaluru Wire Desk
September 14, 2022
in Bengaluru Focus
Reading Time: 1 min read
0

ಬೆಂಗಳೂರು, ಸೆ.14 www.bengaluruwire.com : ನಗರದ ಯಲಹಂಕ, ಪಶ್ಚಿಮ ಹಾಗೂ ಮಹದೇವಪುರ ವಲಯದ ವಿವಿಧ ಸ್ಥಳಗಳಲ್ಲಿ ರಾಜಕಾಲುವೆಯ ಒತ್ತುವರಿಗಳ ತೆರವು ಕಾರ್ಯಾಚರಣೆ ಮುಂದುವರೆಸಿರುವ ಬಿಬಿಎಂಪಿ (BBMP)ಯ ಬೃಹತ್ ನೀರುಗಾಲುವೆ ವಿಭಾಗ (SWD) ಒಟ್ಟು 11 ಒತ್ತುವರಿಗಳನ್ನು ತೆರವುಗೊಳಿಸಿದೆ.

ಯಲಹಂಕ ವಲಯದಲ್ಲಿ 4 ಒತ್ತುವರಿಗಳನ್ನು ತೆರವುಗೊಳಿಸಿದ್ದು, ಈ ಪೈಕಿ ಕುವೆಂಪು ನಗರ ವಾರ್ಡ್ ಸಿಂಗಾಪುರ ವ್ಯಾಪ್ತಿಯಲ್ಲಿ ಇಂದು ಸರ್ವೆ ಸಂ. 81 ಹಾಗೂ 82ರಲ್ಲಿ ಬರುವ ಬಾಲನ್ ಆಗ್ರೋ ಪ್ರಾಡಕ್ಟ್ ಲಿ. ಸಂಸ್ಥೆಯ ಜ್ಯೂಸ್ ಪ್ಯಾಕ್ಟರಿಯಿಂದ ಸುಮಾರು 21 ಮೀಟರ್ ಅಗಲ, 65 ಮೀಟರ್ ಉದ್ದದ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿರುತ್ತದೆ.

ಒತ್ತುವರಿ ಸ್ಥಳದಲ್ಲಿ ಟ್ರಾನ್ಸ್ಫಾರ್ಮರ್ ಸೇರಿದಂತೆ ಕೆಲ ಸಂಗ್ರಹ ವಸ್ತುಗಳನ್ನು ತೆರವುಗೊಳಿಸಬೇಕಿದ್ದು, ಅದನ್ನು ಕೂಡಲೆ ಸ್ಥಳಾಂತರಿಸಲು ಜ್ಯೂಸ್ ಪ್ಯಾಕ್ಟರಿಗೆ ಸೂಚನೆ ನೀಡಲಾಗಿದೆ. ಇದಲ್ಲದೆ ಸಿಂಗಾಪುರ ಕೆರೆಯಿಂದ ಅಬ್ಬಿಗೆರೆ ಕೆರೆಗೆ ಹರಿಯುವ ಮಳೆ ನೀರುಗಾಲುವೆ(ಕಮಾಂಡೊ ಗ್ಲೋರಿ ಅಪಾರ್ಟ್ಮೆಂಟ್ ಹಿಂಭಾಗ) ಸರ್ವೇ ಸಂ. 97 ಹಾಗೂ 100 ರಲ್ಲಿ 2.4 ಮೀಟರ್ ಅಗಲ ಹಾಗೂ 200 ಮೀಟರ್ ಉದ್ದ ರಾಜಕಾಲುವೆಯ ಒತ್ತುವರಿಯನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿರುತ್ತದೆ.

ಪಶ್ಚಿಮ ವಲಯದಲ್ಲಿ 2 ಒತ್ತುವರಿಗಳ ತೆರವು :
ಪಶ್ಚಿಮ ವಲಯದಲ್ಲಿ 2 ಒತ್ತುವರಿಗಳನ್ನು ತೆರವುಗೊಳಿಸಿದ್ದು, ಈ ಪೈಕಿ ಶುಭಾಷ್‌ನಗರದ ಬರಗಿ ಮುದ್ದೇನಹಳ್ಳಿಯಲ್ಲಿ 120 ಚ.ಮೀ ಖಾಲಿ ಜಾಗ ಹಾಗೂ 120 ಚ.ಮೀ ರೈಲ್ವೆ ಇಲಾಖೆಯ ಜಾಗ ಸೇರಿದಂತೆ ಒಟ್ಟು 240 ಚ.ಮೀ ನಷ್ಟು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ ಪಾಲಿಕೆಯ ವಶಕ್ಕೆ ಪಡೆಯಲಾಗಿದೆ.

ಮಹದೇವಪುರ ವಲಯದಲ್ಲಿ ಒಂದು ಒತ್ತುವರಿಯನ್ನು ತೆರವುಗೊಳಿಸಿದ್ದು, ಈ ಪೈಕಿ ಮುನ್ನೇಕೊಳಲು ವ್ಯಾಪ್ತಿಯಲ್ಲಿ ಇಂದು ಖಾಲಿ ಜಾಗವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿರುತ್ತದೆ.

ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ 4 ಒತ್ತುವರಿ ತೆರವು :
ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ 4 ಒತ್ತುವರಿಗಳನ್ನು ತೆರವುಗೊಳಿಸಿದ್ದು, ಈ ಪೈಕಿ ಹೊರಮಾವು ವಾರ್ಡ್ ಪಟೇಲ್ ರಾಮಯ್ಯ ಲೇಔಟ್‌ನ ಕೊತ್ತನೂರು ಹಳ್ಳಿ ಸರ್ವೇ ಸಂ. 6, 7, 30 ಹಾಗೂ 14 ಸೇರಿದಂತೆ ಒಟ್ಟಾರೆ 600 ಮೀ. ಉದ್ದ ಹಾಗೂ 19.5 ಮೀ. ಅಗಲದ ರಾಜಕಾಲುವೆಯ ಒತ್ತುವರಿ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. ಅದರ ಭಾಗವಾಗಿ ಇಂದು 25 ಮೀಟರ್ ಉದ್ದ ಮತ್ತು 3 ಮೀಟರ್ ಎತ್ತರದ 2 ಕಾಂಪೌಂಡ್ ಗೋಡೆಗಳನ್ನು ಕೆಡವಲಾಗಿದ್ದು, ಒಂದು 10 * 10 ಅಡಿಯ ತಾತ್ಕಾಲಿಕ ಶೆಡ್ ಹಾಗೂ 20 * 10 ಅಡಿಯ ಮತ್ತೊಂದು ಶೆಡ್ ಸೇರಿ ಇಂದು 4 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಗುರುವಾರ 100 ಮೀಟರ್ ನ ಸ್ಕೇಟಿಂಗ್ ಮೈದಾನ ಸೇರಿದಂತೆ ಉಳಿದ ಒತ್ತುವರಿಯನ್ನು ತೆರವು ಕಾರ್ಯಾಚರಣೆ ಮುಂದುವರಿಯಲಿದೆ ಎಂದ ಬಿಬಿಎಂಪಿ ಎಂಜಿನಿಯರ್ ಗಳು ತಿಳಿಸಿದ್ದಾರೆ.

ನಲಪಾಡ್ ಅಕಾಡೆಮಿಯ ಒತ್ತುವರಿ ತೆರವು :
ಚೆಲ್ಲಘಟ್ಟದ ಸರ್ವೇ ಸಂ. 70/14 ರಲ್ಲಿರುವ ನಲಪಾಡ್ ಅಕಾಡೆಮಿಯಿಂದ ಒತ್ತುವರಿಯಾಗಿದ್ದ 2.5 ಮೀಟರ್ ಅಗಲ ಹಾಗೂ 150.5 ಮೀಟರ್ ಉದ್ದದ ಕಾಲುವೆ ಜಾಗದಲ್ಲಿ ಅಳವಡಿಸಿದ್ದ ಕಾಂಕ್ರಿಟ್ ಸ್ಲಾö್ಯಬ್ ಅನ್ನು ತೆರವುಗೊಳಿಸಲಾಗಿದೆ. ಈ ಪೈಕಿ ಇಂದಿಗೆ 90 ಮೀಟರ್ ಒತ್ತುವರಿಯನ್ನು ತೆರವುಗೊಳಿಸಿ ತಡೆಗೋಡೆಯ ಮೇಲೆ ಅಳವಡಿಸಿದ್ದ ಫೆನ್ಸಿಂಗ್ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಸರ್ವೇ ಕಾರ್ಯ ಪೂರ್ಣ:
ಉಚ್ಛ ನ್ಯಾಯಲಯ ಹಾಗೂ ಲೋಕಾಯುಕ್ತ ರವರ ಸೆ.12ರ ಅದೇಶದ ಮೇರೆಗೆ ಇಂದು ಗರುಡಾಚಾರಪಾಳ್ಯ ಕೆರೆಯಿಂದ ಮಹದೇವಪುರ ಕೆರೆಗೆ ಸೇರುವ ಮಳೆ ನೀರು ಗಾಲುವೆಯನ್ನು ಪೂರ್ವ ಪಾರ್ಕ್ರಿಡ್ಜ್ ಸ್ವತ್ತು ಹಾಗೂ ಭಾಗಮನೆ ಟೆಕ್ ಪಾರ್ಕ್ ಸ್ವತ್ತಿನ ಮೂಲಕ ಹಾದು ಹೋಗುವ ಕಾಲುವೆಯನ್ನು ಬಿಬಿಎಂಪಿ ಅಧಿಕಾರಿಗಳು, ಸರ್ಕಾರದ ಭೂಮಾಪಕ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರ್ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳಿಂದ ಸರ್ವೆ ಕಾರ್ಯ ನಡೆಸಲಾಗಿರುತ್ತದೆ. ಅದರ ವಿವರ ಈ ಕೆಳಕಂಡಂತಿದೆ :

• ಭಾಗಮನೆ ಟೆಕ್ ಪಾರ್ಕ್ ನಲ್ಲಿ 2.5 ಮೀಟರ್ ಅಗಲದ ರಾಜಕಾಲುವೆಯ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಹಾಕಿ ಮುಚ್ಚಿರುವುದು.
• ಪೂರ್ವ ಪಾರ್ಕ್ರಿಡ್ಜ್ ನಲ್ಲಿ 2.5 ಮೀಟರ್ ಅಗಲದ ಸ್ಥಳದಲ್ಲಿ ಕಟ್ಟಡ, ಖಾಲಿ ಜಾಗ ಹಾಗೂ ರಸ್ತೆಯನ್ನು ನಿರ್ಮಿಸಿರುವುದು.
• ಗರುಡಾಚಾರ್ ಪಾಳ್ಯ ಕೆರೆಯಿಂದ ಮಹದೇವಪುರ ಕೆರೆಯ ಭಾಗದಲ್ಲಿ ಸುಮಾರು 13 ಮೀಟರ್ ಅಗಲದ ರಾಜಕಾಲುವೆಯ ಮೇಲೆ ಕಾಂಪೌಂಡ್ ವಾಲ್, ಕಟ್ಟಡ ಹಾಗೂ ಶೆಡ್ ನಿರ್ಮಾಣ ಮಾಡಿರುವುದನ್ನು ಸಮೀಕ್ಷೆ ಮಾಡಿ ಗುರುತಿಸಲಾಗಿದೆ.

ಮಹದೇವಪುರ ವಲಯದ ಪ್ರಮುಖ ಅಂಶಗಳು:

• ಶಾಂತಿನಿಕೇತನ ಲೇಔಟ್ ನಲ್ಲಿ ಶೇ. 25 ರಷ್ಟು ಬಾಕಿ ಒತ್ತುವರಿ ತೆರವುಗೊಳಿಸಬೇಕಿದೆ.
• ವಾಗ್ದೇವಿ ಲೇಔಟ್ ನಲ್ಲಿ ಶೇ. 25 ರಷ್ಟು ಬಾಕಿ ಒತ್ತುವರಿ ತೆರವುಗೊಳಿಸಬೇಕಿದೆ.
• ಚಲ್ಲಘಟ್ಟ ವ್ಯಾಪ್ತಿಯಲ್ಲಿ ಶೇ. 50 ರಷ್ಟು ಒತ್ತುವರಿ ತೆರವುಗೊಳಿಸಲಾಗಿದೆ.
• ಪಾಪಯ್ಯ ರೆಡ್ಡಿ ಲೇಔಟ್ ನಲ್ಲಿ ಒತ್ತುವರಿ ಮಾಡಿರುವುದನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.
• ಸದರಮಂಗಲ ಕೆರೆಯಿಂದ ಬೆಳ್ಳತ್ತೂರಿನವರೆಗೆ ಒತ್ತುವರಿಯನ್ನು ಗುರುತಿಸಬೇಕಿದೆ.
• ದೊಡ್ಡಕನಹಳ್ಳಿ ಕೆರೆಗಯಿಂದ ಸೋಲ್ ಕೆರೆವರೆಗೆ ಒತ್ತುವರಿಯನ್ನು ಗುರುತಿಸಬೇಕಿದೆ
• TZED ಅಪಾರ್ಟ್ಮೆಂಟ್ ನಿಂದ ಶೀಲವಂತ ಕೆರೆವರೆಗೆ ಒತ್ತುವರಿಯನ್ನು ಗುರುತಿಸಬೇಕಿದೆ.
• ಪಟ್ಟಂದೂರು ಅಗ್ರಹಾರ ಕೆರೆಯಿಂದ ನಲ್ಲೂರಹಳ್ಳಿವರೆಗೆ ಒತ್ತುವರಿಯನ್ನು ಗುರುತಿಸಬೇಕಿದೆ.
• ಇದುವರೆಗೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವ ಸ್ಥಳದಲ್ಲಿ ಸಂಗ್ರಹವಾಗಿರುವಂತಹ ಕಟ್ಟಡದ ಭಗ್ನಾವಶೇಷಗಳನ್ನು ತೆರವುಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Crime News | ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಡ್ರಗ್ಸ್ ಹಾವಳಿ : ಮಾದಕ ವಸ್ತು ದಂಧೆಕೋರರಿಂದ 5 ಕೋಟಿ ಮೌಲ್ಯದ ಗಾಂಜಾ ಮತ್ತು ಹಶೀಷ್ ಎಣ್ಣೆ ವಶ

Next Post

BBMP JC POST ONLY IAS/KAS | ಬಿಬಿಎಂಪಿಯ ಜಂಟಿ ಆಯುಕ್ತರ ಹುದ್ದೆಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳ ನಿಯೋಜನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post
ವಿಧಾನ ಪರಿಷತ್ ನಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

BBMP JC POST ONLY IAS/KAS | ಬಿಬಿಎಂಪಿಯ ಜಂಟಿ ಆಯುಕ್ತರ ಹುದ್ದೆಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳ ನಿಯೋಜನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಾಂದರ್ಭಿಕ ಚಿತ್ರ

Beware On Fake Banking App | ಮೊಬೈಲ್ ಬ್ಯಾಂಕಿಂಗ್ ಹೊಸ ಟ್ರೋಜನ್ ವೈರಸ್ ಬಗ್ಗೆ ಎಚ್ಚರವಹಿಸಿ ; ನಿರ್ಲಕ್ಷಿಸಿದರೆ ಬ್ಯಾಂಕ್ ಅಕೌಂಟ್ ಖಾಲಿಯಾಗುತ್ತೆ ಹುಷಾರು!!

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d