Saturday, June 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

  • Bengaluru Focus
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

  • Bengaluru Focus
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bengaluru Demolition Drive | ಬಿಬಿಎಂಪಿ ವ್ಯಾಪ್ತಿಯ 3 ವಲಯಗಳ ಯಾವ್ಯಾವ ಸ್ಥಳಗಳಲ್ಲಿ ಒತ್ತುವರಿ ತೆರವು ಆಪರೇಷನ್ ನಡೆದಿದೆ?

ಪೂರ್ವ ಪಾರ್ಕ್ರಿಡ್ಜ್ ಸ್ವತ್ತು ಹಾಗೂ ಭಾಗಮನೆ ಟೆಕ್ ಪಾರ್ಕ್ ನ ಸ್ವತ್ತಿನ ಮೂಲಕ ಹಾದು ಹೋಗುವ ಕಾಲುವೆಯನ್ನು ಬಿಬಿಎಂಪಿ ಅಧಿಕಾರಿಗಳು, ಸರ್ಕಾರದ ಭೂಮಾಪಕರು ಮತ್ತಿತರಿಂದ ಸರ್ವೆ ಕಾರ್ಯ ಪೂರ್ಣ

by Bengaluru Wire Desk
September 14, 2022
in Bengaluru Focus
Reading Time: 1 min read
0

ಬೆಂಗಳೂರು, ಸೆ.14 www.bengaluruwire.com : ನಗರದ ಯಲಹಂಕ, ಪಶ್ಚಿಮ ಹಾಗೂ ಮಹದೇವಪುರ ವಲಯದ ವಿವಿಧ ಸ್ಥಳಗಳಲ್ಲಿ ರಾಜಕಾಲುವೆಯ ಒತ್ತುವರಿಗಳ ತೆರವು ಕಾರ್ಯಾಚರಣೆ ಮುಂದುವರೆಸಿರುವ ಬಿಬಿಎಂಪಿ (BBMP)ಯ ಬೃಹತ್ ನೀರುಗಾಲುವೆ ವಿಭಾಗ (SWD) ಒಟ್ಟು 11 ಒತ್ತುವರಿಗಳನ್ನು ತೆರವುಗೊಳಿಸಿದೆ.

ಯಲಹಂಕ ವಲಯದಲ್ಲಿ 4 ಒತ್ತುವರಿಗಳನ್ನು ತೆರವುಗೊಳಿಸಿದ್ದು, ಈ ಪೈಕಿ ಕುವೆಂಪು ನಗರ ವಾರ್ಡ್ ಸಿಂಗಾಪುರ ವ್ಯಾಪ್ತಿಯಲ್ಲಿ ಇಂದು ಸರ್ವೆ ಸಂ. 81 ಹಾಗೂ 82ರಲ್ಲಿ ಬರುವ ಬಾಲನ್ ಆಗ್ರೋ ಪ್ರಾಡಕ್ಟ್ ಲಿ. ಸಂಸ್ಥೆಯ ಜ್ಯೂಸ್ ಪ್ಯಾಕ್ಟರಿಯಿಂದ ಸುಮಾರು 21 ಮೀಟರ್ ಅಗಲ, 65 ಮೀಟರ್ ಉದ್ದದ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿರುತ್ತದೆ.

ಒತ್ತುವರಿ ಸ್ಥಳದಲ್ಲಿ ಟ್ರಾನ್ಸ್ಫಾರ್ಮರ್ ಸೇರಿದಂತೆ ಕೆಲ ಸಂಗ್ರಹ ವಸ್ತುಗಳನ್ನು ತೆರವುಗೊಳಿಸಬೇಕಿದ್ದು, ಅದನ್ನು ಕೂಡಲೆ ಸ್ಥಳಾಂತರಿಸಲು ಜ್ಯೂಸ್ ಪ್ಯಾಕ್ಟರಿಗೆ ಸೂಚನೆ ನೀಡಲಾಗಿದೆ. ಇದಲ್ಲದೆ ಸಿಂಗಾಪುರ ಕೆರೆಯಿಂದ ಅಬ್ಬಿಗೆರೆ ಕೆರೆಗೆ ಹರಿಯುವ ಮಳೆ ನೀರುಗಾಲುವೆ(ಕಮಾಂಡೊ ಗ್ಲೋರಿ ಅಪಾರ್ಟ್ಮೆಂಟ್ ಹಿಂಭಾಗ) ಸರ್ವೇ ಸಂ. 97 ಹಾಗೂ 100 ರಲ್ಲಿ 2.4 ಮೀಟರ್ ಅಗಲ ಹಾಗೂ 200 ಮೀಟರ್ ಉದ್ದ ರಾಜಕಾಲುವೆಯ ಒತ್ತುವರಿಯನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿರುತ್ತದೆ.

ಪಶ್ಚಿಮ ವಲಯದಲ್ಲಿ 2 ಒತ್ತುವರಿಗಳ ತೆರವು :
ಪಶ್ಚಿಮ ವಲಯದಲ್ಲಿ 2 ಒತ್ತುವರಿಗಳನ್ನು ತೆರವುಗೊಳಿಸಿದ್ದು, ಈ ಪೈಕಿ ಶುಭಾಷ್‌ನಗರದ ಬರಗಿ ಮುದ್ದೇನಹಳ್ಳಿಯಲ್ಲಿ 120 ಚ.ಮೀ ಖಾಲಿ ಜಾಗ ಹಾಗೂ 120 ಚ.ಮೀ ರೈಲ್ವೆ ಇಲಾಖೆಯ ಜಾಗ ಸೇರಿದಂತೆ ಒಟ್ಟು 240 ಚ.ಮೀ ನಷ್ಟು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ ಪಾಲಿಕೆಯ ವಶಕ್ಕೆ ಪಡೆಯಲಾಗಿದೆ.

ಮಹದೇವಪುರ ವಲಯದಲ್ಲಿ ಒಂದು ಒತ್ತುವರಿಯನ್ನು ತೆರವುಗೊಳಿಸಿದ್ದು, ಈ ಪೈಕಿ ಮುನ್ನೇಕೊಳಲು ವ್ಯಾಪ್ತಿಯಲ್ಲಿ ಇಂದು ಖಾಲಿ ಜಾಗವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿರುತ್ತದೆ.

ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ 4 ಒತ್ತುವರಿ ತೆರವು :
ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ 4 ಒತ್ತುವರಿಗಳನ್ನು ತೆರವುಗೊಳಿಸಿದ್ದು, ಈ ಪೈಕಿ ಹೊರಮಾವು ವಾರ್ಡ್ ಪಟೇಲ್ ರಾಮಯ್ಯ ಲೇಔಟ್‌ನ ಕೊತ್ತನೂರು ಹಳ್ಳಿ ಸರ್ವೇ ಸಂ. 6, 7, 30 ಹಾಗೂ 14 ಸೇರಿದಂತೆ ಒಟ್ಟಾರೆ 600 ಮೀ. ಉದ್ದ ಹಾಗೂ 19.5 ಮೀ. ಅಗಲದ ರಾಜಕಾಲುವೆಯ ಒತ್ತುವರಿ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. ಅದರ ಭಾಗವಾಗಿ ಇಂದು 25 ಮೀಟರ್ ಉದ್ದ ಮತ್ತು 3 ಮೀಟರ್ ಎತ್ತರದ 2 ಕಾಂಪೌಂಡ್ ಗೋಡೆಗಳನ್ನು ಕೆಡವಲಾಗಿದ್ದು, ಒಂದು 10 * 10 ಅಡಿಯ ತಾತ್ಕಾಲಿಕ ಶೆಡ್ ಹಾಗೂ 20 * 10 ಅಡಿಯ ಮತ್ತೊಂದು ಶೆಡ್ ಸೇರಿ ಇಂದು 4 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಗುರುವಾರ 100 ಮೀಟರ್ ನ ಸ್ಕೇಟಿಂಗ್ ಮೈದಾನ ಸೇರಿದಂತೆ ಉಳಿದ ಒತ್ತುವರಿಯನ್ನು ತೆರವು ಕಾರ್ಯಾಚರಣೆ ಮುಂದುವರಿಯಲಿದೆ ಎಂದ ಬಿಬಿಎಂಪಿ ಎಂಜಿನಿಯರ್ ಗಳು ತಿಳಿಸಿದ್ದಾರೆ.

ನಲಪಾಡ್ ಅಕಾಡೆಮಿಯ ಒತ್ತುವರಿ ತೆರವು :
ಚೆಲ್ಲಘಟ್ಟದ ಸರ್ವೇ ಸಂ. 70/14 ರಲ್ಲಿರುವ ನಲಪಾಡ್ ಅಕಾಡೆಮಿಯಿಂದ ಒತ್ತುವರಿಯಾಗಿದ್ದ 2.5 ಮೀಟರ್ ಅಗಲ ಹಾಗೂ 150.5 ಮೀಟರ್ ಉದ್ದದ ಕಾಲುವೆ ಜಾಗದಲ್ಲಿ ಅಳವಡಿಸಿದ್ದ ಕಾಂಕ್ರಿಟ್ ಸ್ಲಾö್ಯಬ್ ಅನ್ನು ತೆರವುಗೊಳಿಸಲಾಗಿದೆ. ಈ ಪೈಕಿ ಇಂದಿಗೆ 90 ಮೀಟರ್ ಒತ್ತುವರಿಯನ್ನು ತೆರವುಗೊಳಿಸಿ ತಡೆಗೋಡೆಯ ಮೇಲೆ ಅಳವಡಿಸಿದ್ದ ಫೆನ್ಸಿಂಗ್ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಸರ್ವೇ ಕಾರ್ಯ ಪೂರ್ಣ:
ಉಚ್ಛ ನ್ಯಾಯಲಯ ಹಾಗೂ ಲೋಕಾಯುಕ್ತ ರವರ ಸೆ.12ರ ಅದೇಶದ ಮೇರೆಗೆ ಇಂದು ಗರುಡಾಚಾರಪಾಳ್ಯ ಕೆರೆಯಿಂದ ಮಹದೇವಪುರ ಕೆರೆಗೆ ಸೇರುವ ಮಳೆ ನೀರು ಗಾಲುವೆಯನ್ನು ಪೂರ್ವ ಪಾರ್ಕ್ರಿಡ್ಜ್ ಸ್ವತ್ತು ಹಾಗೂ ಭಾಗಮನೆ ಟೆಕ್ ಪಾರ್ಕ್ ಸ್ವತ್ತಿನ ಮೂಲಕ ಹಾದು ಹೋಗುವ ಕಾಲುವೆಯನ್ನು ಬಿಬಿಎಂಪಿ ಅಧಿಕಾರಿಗಳು, ಸರ್ಕಾರದ ಭೂಮಾಪಕ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರ್ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳಿಂದ ಸರ್ವೆ ಕಾರ್ಯ ನಡೆಸಲಾಗಿರುತ್ತದೆ. ಅದರ ವಿವರ ಈ ಕೆಳಕಂಡಂತಿದೆ :

• ಭಾಗಮನೆ ಟೆಕ್ ಪಾರ್ಕ್ ನಲ್ಲಿ 2.5 ಮೀಟರ್ ಅಗಲದ ರಾಜಕಾಲುವೆಯ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಹಾಕಿ ಮುಚ್ಚಿರುವುದು.
• ಪೂರ್ವ ಪಾರ್ಕ್ರಿಡ್ಜ್ ನಲ್ಲಿ 2.5 ಮೀಟರ್ ಅಗಲದ ಸ್ಥಳದಲ್ಲಿ ಕಟ್ಟಡ, ಖಾಲಿ ಜಾಗ ಹಾಗೂ ರಸ್ತೆಯನ್ನು ನಿರ್ಮಿಸಿರುವುದು.
• ಗರುಡಾಚಾರ್ ಪಾಳ್ಯ ಕೆರೆಯಿಂದ ಮಹದೇವಪುರ ಕೆರೆಯ ಭಾಗದಲ್ಲಿ ಸುಮಾರು 13 ಮೀಟರ್ ಅಗಲದ ರಾಜಕಾಲುವೆಯ ಮೇಲೆ ಕಾಂಪೌಂಡ್ ವಾಲ್, ಕಟ್ಟಡ ಹಾಗೂ ಶೆಡ್ ನಿರ್ಮಾಣ ಮಾಡಿರುವುದನ್ನು ಸಮೀಕ್ಷೆ ಮಾಡಿ ಗುರುತಿಸಲಾಗಿದೆ.

ಮಹದೇವಪುರ ವಲಯದ ಪ್ರಮುಖ ಅಂಶಗಳು:

• ಶಾಂತಿನಿಕೇತನ ಲೇಔಟ್ ನಲ್ಲಿ ಶೇ. 25 ರಷ್ಟು ಬಾಕಿ ಒತ್ತುವರಿ ತೆರವುಗೊಳಿಸಬೇಕಿದೆ.
• ವಾಗ್ದೇವಿ ಲೇಔಟ್ ನಲ್ಲಿ ಶೇ. 25 ರಷ್ಟು ಬಾಕಿ ಒತ್ತುವರಿ ತೆರವುಗೊಳಿಸಬೇಕಿದೆ.
• ಚಲ್ಲಘಟ್ಟ ವ್ಯಾಪ್ತಿಯಲ್ಲಿ ಶೇ. 50 ರಷ್ಟು ಒತ್ತುವರಿ ತೆರವುಗೊಳಿಸಲಾಗಿದೆ.
• ಪಾಪಯ್ಯ ರೆಡ್ಡಿ ಲೇಔಟ್ ನಲ್ಲಿ ಒತ್ತುವರಿ ಮಾಡಿರುವುದನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.
• ಸದರಮಂಗಲ ಕೆರೆಯಿಂದ ಬೆಳ್ಳತ್ತೂರಿನವರೆಗೆ ಒತ್ತುವರಿಯನ್ನು ಗುರುತಿಸಬೇಕಿದೆ.
• ದೊಡ್ಡಕನಹಳ್ಳಿ ಕೆರೆಗಯಿಂದ ಸೋಲ್ ಕೆರೆವರೆಗೆ ಒತ್ತುವರಿಯನ್ನು ಗುರುತಿಸಬೇಕಿದೆ
• TZED ಅಪಾರ್ಟ್ಮೆಂಟ್ ನಿಂದ ಶೀಲವಂತ ಕೆರೆವರೆಗೆ ಒತ್ತುವರಿಯನ್ನು ಗುರುತಿಸಬೇಕಿದೆ.
• ಪಟ್ಟಂದೂರು ಅಗ್ರಹಾರ ಕೆರೆಯಿಂದ ನಲ್ಲೂರಹಳ್ಳಿವರೆಗೆ ಒತ್ತುವರಿಯನ್ನು ಗುರುತಿಸಬೇಕಿದೆ.
• ಇದುವರೆಗೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವ ಸ್ಥಳದಲ್ಲಿ ಸಂಗ್ರಹವಾಗಿರುವಂತಹ ಕಟ್ಟಡದ ಭಗ್ನಾವಶೇಷಗಳನ್ನು ತೆರವುಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ.

WhatsApp Join our WhatsApp Channel
Previous Post

Crime News | ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಡ್ರಗ್ಸ್ ಹಾವಳಿ : ಮಾದಕ ವಸ್ತು ದಂಧೆಕೋರರಿಂದ 5 ಕೋಟಿ ಮೌಲ್ಯದ ಗಾಂಜಾ ಮತ್ತು ಹಶೀಷ್ ಎಣ್ಣೆ ವಶ

Next Post

BBMP JC POST ONLY IAS/KAS | ಬಿಬಿಎಂಪಿಯ ಜಂಟಿ ಆಯುಕ್ತರ ಹುದ್ದೆಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳ ನಿಯೋಜನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post
ವಿಧಾನ ಪರಿಷತ್ ನಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

BBMP JC POST ONLY IAS/KAS | ಬಿಬಿಎಂಪಿಯ ಜಂಟಿ ಆಯುಕ್ತರ ಹುದ್ದೆಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳ ನಿಯೋಜನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಾಂದರ್ಭಿಕ ಚಿತ್ರ

Beware On Fake Banking App | ಮೊಬೈಲ್ ಬ್ಯಾಂಕಿಂಗ್ ಹೊಸ ಟ್ರೋಜನ್ ವೈರಸ್ ಬಗ್ಗೆ ಎಚ್ಚರವಹಿಸಿ ; ನಿರ್ಲಕ್ಷಿಸಿದರೆ ಬ್ಯಾಂಕ್ ಅಕೌಂಟ್ ಖಾಲಿಯಾಗುತ್ತೆ ಹುಷಾರು!!

Please login to join discussion

Like Us on Facebook

Follow Us on Twitter

Recent News

ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

June 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group