Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | Rain Water Reservoir | ಬೆಂಗಳೂರಿನಲ್ಲಿ ಕೆರೆಗಳ ಒತ್ತುವರಿ ನಡುವೆಯೇ ಜಿಲ್ಲಾ ಪಂಚಾಯಿತಿಯಿಂದ ನಿರ್ಮಿಸಲಾಗಿದೆ ಮಳೆ ನೀರು ಜಲಾಶಯ….!

ಮಳೆ ನೀರು ಸಂರಕ್ಷಿಸಿ ಸದುಪಯೋಗಪಡಿಸಿಕೊಳ್ಳಲು ನರೇಗಾ, ಜಲಜೀವನ್ ಯೋಜನೆಯಡಿ ಆನೇಕಲ್ ತಾಲೂಕಿನ ವಣಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಳೆನೀರು ಜಲಾಶಯ ನಿರ್ಮಿಸಲಾಗಿದೆ.

by Bengaluru Wire Desk
September 17, 2022
in Bengaluru Focus, BW Special
Reading Time: 2 mins read
0
ವಣಕನಹಳ್ಳಿ ಗ್ರಾಮ ಪಂಚಾಯಿತಿ ಕಿರು ಅಣೆಕಟ್ಟಿನ ಚಿತ್ರ

ವಣಕನಹಳ್ಳಿ ಗ್ರಾಮ ಪಂಚಾಯಿತಿ ಕಿರು ಅಣೆಕಟ್ಟಿನ ಚಿತ್ರ

ಬೆಂಗಳೂರು, ಸೆ.17 www.bengaluruwire.com : ರಾಜಧಾನಿ ಬೆಂಗಳೂರು ಒಂದು ಕಾಲದಲ್ಲಿ ನೂರಾರು ಕೆರೆಗಳಿದ್ದರೂ, ಹಲವು ಕೆರೆಗಳು ಸದ್ದಿಲ್ಲದೆ ಒತ್ತುವರಿಯಾಗಿ ಅವುಗಳ ಮೇಲೆ ರಸ್ತೆ, ಕಟ್ಟಡ, ಕಾಂಪ್ಲೆಕ್ಸ್ ನಿಂತುಕೊಂಡಿದ್ದರೆ, ಮತ್ತೊಂದೆಡೆ ರಾಜಕಾಲುವೆ ದಾರಿಗಳೇ ಹಲವು ಕಡೆ ಮುಚ್ಚಿಹೋಗಿವೆ. ಹೀಗಾಗಿ ನಗರದಲ್ಲಿ ಕೆಲವು ಹೊತ್ತು ಜೋರು ಮಳೆ ಸುರಿದರೂ ಮನೆಗಳಿಗೆ, ರಸ್ತೆಗಳಿಗೆ ನೀರು ನುಗ್ಗುತ್ತಿದೆ. ಬಿದ್ದ ಮಳೆ ನೀರು ಮೋರಿ ಸೇರುತ್ತಿದೆ.

ಇದನ್ನು ಮನಗಂಡ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ನರೇಗಾ ಯೋಜನೆಯಡಿ ಆನೇಕಲ್ ತಾಲೂಕು ವಣಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭೂಮಿಗೆ ಬಿದ್ದ ಮಳೆ ನೀರನ್ನೇ ಸದ್ಬಳಕೆ ಮಾಡಿಕೊಳ್ಳಲು ಮಳೆ ನೀರು ಜಲಾಶಯವನ್ನು ನಿರ್ಮಿಸಿ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಮಾದರಿಯಾಗಿದ್ದಾರೆ.

ರಾಜ್ಯದ ಅನೇಕ ಕಡೆ ನರೇಗಾ ಯೋಜನೆ ಹಣವನ್ನು ರಸ್ತೆ ನಿರ್ಮಾಣ ಮತ್ತು ಗುಂಡಿ ತೆಗೆಯುವಂತಹ ಕಾಮಗಾರಿಗಳ ನೆಪದಲ್ಲಿ ದುರ್ಬಳಕೆ ಮಾಡಿಕೊಂಡಿರುವ ಸಾಕಷ್ಟು ದೂರುಗಳಿವೆ. ಇಂತಹ ಆರೋಪಗಳ ನಡುವೆಯೇ  ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ನರೇಗಾದ ನೆರವಿನಲ್ಲೇ ಶಾಶ್ವತ ನೀರಿನ ಸೆಲೆಯ ತಾಣವನ್ನೇ ನಿರ್ಮಿಸಿದೆ. ಅಂದರೆ ಬೆಂಗಳೂರು ಸುತ್ತಮುತ್ತ ಸುರಿದು ಹರಿಯುವ ಮಳೆ ನೀರು ಸದ್ಬಳಕೆ ಮಾಡಿಕೊಳ್ಳಲು ಕಿರು ಅಣೆಕಟ್ಟೆಯನ್ನೇ ನಿರ್ಮಿಸಲಾಗಿದೆ. ಈ ಕಿರು ಜಲಾಶಯದಿಂದಾಗಿ ಸಣ್ಣಪುಟ್ಟ ಕಣಿವೆಗಳ ಮೂಲಕ ಹರಿದು ಪೋಲಾಗುವ ನೀರನ್ನು ಸೂಕ್ತ ರೀತಿ ಬಳಸಿಕೊಳ್ಳಲು ಸಾಧ್ಯವಾಗಲಿದೆ.

ಆನೇಕಲ್ ತಾಲೂಕು ವಣಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕಿರು ಅಣೆಕಟ್ಟು

ಬೆಂಗಳೂರು ಸುತ್ತಮುತ್ತ ಸುರಿಯುವ ಮಳೆ ನೀರು ವೃಥಾ ತಮಿಳುನಾಡಿನ ಮೂಲಕ ಸಮುದ್ರ ಸೇರುವುದನ್ನು ತಪ್ಪಿಸಿ ಸದ್ಬಳಕೆ ಮಾಡಿಕೊಂಡಂತಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್  ಅವರ ಪರಿಕಲ್ಪನೆಯನ್ನು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಗಪ್ಪ ಅವರು ನರೇಗಾ ಮುಖ್ಯಸ್ಥರು ಹಾಗೂ ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಶಿಲ್ಪಾನಾಗ್ ಸಹಕಾರ ಮತ್ತು ವಿಶೇಷ ಆಸಕ್ತಿಯಿಂದಾಗಿ ಈ ಮಳೆನೀರು ಆಧಾರಿತ ಜಲಾಶಯ ಇದೀಗ ತಲೆ ಎತ್ತಿ ನಿಂತಿದೆ. ಆ ಮೂಲಕ ನರೇಗಾ ಹಣವನ್ನು ಹೀಗೂ ಬಳಸಿಕೊಳ್ಳಬಹುದು ಎಂದು ನರೇಗಾದಲ್ಲಿ  31ನೇ ಸ್ಥಾನದಲ್ಲಿರುವ ಚಾಮರಾಜನಗರ ಜಿಲ್ಲಾಪಂಚಾಯಿತಿಯನ್ನೇ ನಾಚಿಸುವ ರೀತಿ ಈ ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

“ ಜಲಜೀವನ್, ನರೇಗಾ ಯೋಜನೆಯಡಿ ಬೆಂಗಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿನ 200 ಕೆರೆಗಳ ಸಂಪೂರ್ಣ ಅಭಿವೃದ್ಧಿ ಮಾಡಿ, ಅಂತರ್ಜಲ ಮಟ್ಟ ಏರಿಕೆ ಮಾಡಿ ಪ್ರತಿಯೊಬ್ಬರಿಗೂ ಗುಣಮಟ್ಟದ ನೀರು ಒದಗಿಸಲು ಯೋಜಿಸಲಾಗಿದೆ. ಅದರಂತೆ ರಾಜಕಾಲುವೆ ಒತ್ತುವರಿ ತೆರವು, ಶುದ್ಧೀಕರಣ ಹಾಗೂ ಕೆರೆಗಳಲ್ಲಿ ಹೂಳು ತೆಗೆದು ಆ ಕೆರೆಗಳ ಪುನರುಜ್ಜೀವನ ಮಾಡಲಾಗುತ್ತದೆ. ಈ 200 ಕೆರೆಗಳ ಸಮೀಕ್ಷೆ ನಡೆಸಿ, ಕಾರ್ಯಯೋಜನೆ ನೀಡುವಂತೆ ಅರಣ್ಯ ಇಲಾಖೆಯ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI)ಗೆ ತಿಳಿಸಲಾಗಿದೆ. ಆ ಸಂಸ್ಥೆಯು ನೀಡುವ ಸಮೀಕ್ಷೆ ವರದಿ ಆಧರಿಸಿ ಕ್ರಮ ಕೈಗೊಳ್ಳುತ್ತೇವೆ. ಆ ನಿಟ್ಟಿನಲ್ಲಿ ಮೊದಲನೆಯದಾಗಿ ಆನೇಕಲ್ ತಾಲೂಕಿನಲ್ಲಿ ಮಳೆ ನೀರು ಕಿರು ಅಣೆಕಟ್ಟೆ ನಿರ್ಮಿಸಲಾಗಿದೆ.”

– ಎಲ್.ಕೆ.ಅತೀಕ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

446 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ಸಂಜೀವಿನಿಯಂತಾಗಿದೆ :

ಸುಮಾರು 1.2 ಕೋಟಿ ರೂ ವೆಚ್ಚದಲ್ಲಿ ಈ ಕಿರು ಅಣೆಕಟ್ಟೆಯನ್ನು ನಿರ್ಮಿಸಲಾಗಿದೆ. ಬೆಂಗಳೂರು ಜಿಲ್ಲಾ ಪಂಚಾಯತಿ ನರೇಗಾ ಮೂಲಕ ನೆರವು ಒದಗಿಸಿದೆ. ಹಾಗೆಯೇ ಇದರ ನಿರ್ಮಾಣ ಕಾಲದಲ್ಲಿ ಕಾಮಗಾರಿಯ ಮೂಲಕ ಸಾವಿರಾರು ಜನರಿಗೆ ಉದ್ಯೋಗವನ್ನೂ ನೀಡಿದೆ. ಉಳಿದಂತೆ ಯುನೈಟೆಡ್ ವೆ (United Way) ಮತ್ತು ಕಾಂಟಿನೆಂಟಲ್ (continental) ಎಂಬ ಖಾಸಗಿ ಸಂಸ್ಥೆಗಳಿಂದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ನೆರವು ಪಡೆದು ಕಿರು ಜಲಾಶಯ ನಿರ್ಮಿಸಲಾಗಿದೆ. ಈ ಮೂಲಕ ಯುನೈಟೆಡ್ ವೆ ಮತ್ತು ಕಾಂಟಿನೆಂಟಲ್ ಸಂಸ್ಥೆಗಳು ಮಳೆ ನೀರು ಸದ್ಬಳಕೆ ಮಾಡುವ ವಿನೂತನ ಯೋಜನೆಗೆ ಸಿಎಎಸ್ ಆರ್ ನೆರವು ನೀಡಿ ಸಾಮಾಜಿಕ ಹೊಣೆಗಾರಿಕೆಯನ್ನೂ ಹೀಗೂ ಮಾಡಬಹುದು ಎಂದು  ತೋರಿಸಿಕೊಟ್ಟಿವೆ.

2500 ಎಕರೆ ಜಲಾನಯನ ಪ್ರದೇಶ ಹೊಂದಿರುವ ಈ ಅಣೆಕಟ್ಟೆಯಿಂದ ಸುಮಾರು 446 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಪೂರೈಸಬಹುದಾಗಿದೆ. ಬೆಂಗಳೂರು ದಕ್ಷಿಣ ಭಾಗದ ಸಾವಿರಾರು ಕುಟುಂಬಗಳಿಗೆ ಜೀವನದಿಯಂತೆ ಗೋಚರವಾಗುತ್ತಿದೆ.  ಸಾವಿರಾರು ಕುಟುಂಬಗಳಿಗೆ ದಿನಬಳಕೆ ನೀರನ್ನು ಈ ಮಳೆನೀರು ಜಲಾಶಯ ಪೂರೈಸಲಿದೆ.

 ಏನಿದು ಮಳೆನೀರು ಜಲಾಶಯ ಯೋಜನೆ?

ಬೆಂಗಳೂರು ದಕ್ಷಿಣ ಭಾಗದ ಆನೇಕಲ್ ತಾಲೂಕಿನ ಸುತ್ತಮುತ್ತ ಬೇಸಿಗೆ ಬಂತೆಂದರೆ ಸಾಕು ನೀರಿನ ಬವಣೆ ವಿಪರೀತ.  ಇಲ್ಲಿ ಭಾರೀ ಮಳೆ ಸುರಿದರೂ ನೀರು ನಿಲ್ಲುವುದಿಲ್ಲ. ಕಾರಣ ಇಲ್ಲಿ ಬೆಟ್ಟ, ಗುಡ್ಡ ಕಣಿವೆಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಹರಿದು ಬರುವ ನೀರು ಸಣ್ಣಪುಟ್ಟ ಕೆರೆ ತೊರೆಗಳ ಮೂಲಕ ತಮಿಳುನಾಡು ಸೇರುತ್ತದೆ. ಇದನ್ನು ಅರಿತು, ಆ ಮಳೆ ನೀರನ್ನು ಬಳಸಿಕೊಳ್ಳಲು ಯಾವುದೇ ಪ್ರಚಾರವಿಲ್ಲದೆ ಕಿರು ಅಣೆಕಟ್ಟೆಯನ್ನ ನಿರ್ಮಿಸಲಾಗಿದೆ. 

ಜಲಾಶಯದಿಂದಾಗುವ ಲಾಭಗಳೇನು ?

ಸಾವಿರಾರು ಎಕರೆ ಪ್ರದೇಶದ ರೈತರಿಗೆ ನೀರು ಬೇಸಿಗೆಯಲ್ಲೂ ಲಭ್ಯವಾಗಲಿದೆ. ಜೀವ ವೈವಿಧ್ಯತೆಯ ರಕ್ಷಣೆಗೆ ಅವಕಾಶವಾಗಲಿದೆ. ಸಣ್ಣ ಪುಟ್ಟ  ಕೆರೆಕಟ್ಟೆಗಳ ಸಂರಕ್ಷಣೆ, ಅಂತರ್ಜಲ ಅಭಿವೃದ್ಧಿಗೆ ಸಹಾಯಕವಾಗಲಿದೆ. ಕಾವೇರಿ ನೀರಿನ ಸದ್ಬಳಕೆಗೆ ಅವಕಾಶವಾಗುತ್ತದೆ. ಬಹಳ ಪ್ರಮುಖವಾಗಿ ಕೆರೆಕುಂಟೆಗಳ ಒತ್ತುವರಿಗೆ ತಡೆ ಬೀಳಲಿದೆ ಎನ್ನುತ್ತಾರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿಕಾರಿಗಳು.

ಅಧಿಕಾರಿಗಳು ಏನಂತಾರೆ?

“ಬೆಂಗಳೂರಿನಲ್ಲಿ ಮುಂದೆ ಎದುರಾಗಬಹುದಾದ ನೀರಿನ ಸಮಸ್ಯೆ ಗಮನದಲ್ಲಿಟ್ಟುಕೊಂಡು ಇಲಾಖೆ ಮುಖ್ಯಸ್ಥರಾದ ಅತೀಕ್ ಅವರ ಮಾರ್ಗದರ್ಶನದಲ್ಲಿ ಅಣೆಕಟ್ಟೆ ನಿರ್ಮಿಸಲಾಗಿದ್ದು, ಇದನ್ನು ಜನತೆ ಸದ್ಬಳಕೆ ಮಾಡಿಕೊಳ್ಳಬೇಕು. “

– ಸಂಗಪ್ಪ,  ಬೆಂಗಳೂರು ಜಿಲ್ಲಾಪಂಚಾಯಿತಿ ಸಿಇಒ

WhatsApp Join our WhatsApp Channel
Previous Post

Beware On Fake Banking App | ಮೊಬೈಲ್ ಬ್ಯಾಂಕಿಂಗ್ ಹೊಸ ಟ್ರೋಜನ್ ವೈರಸ್ ಬಗ್ಗೆ ಎಚ್ಚರವಹಿಸಿ ; ನಿರ್ಲಕ್ಷಿಸಿದರೆ ಬ್ಯಾಂಕ್ ಅಕೌಂಟ್ ಖಾಲಿಯಾಗುತ್ತೆ ಹುಷಾರು!!

Next Post

Mysore Dasara 2022 | ಮೈಸೂರು ದಸರಾಗೆ ರಾಷ್ಟ್ರಪತಿಗಳು ಆಗಮಿಸುವ ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಪರಿಶೀಲಿಸಿದ ಸಚಿವ ಎಸ್.ಟಿ.ಸೋಮಶೇಖರ್

Next Post

Mysore Dasara 2022 | ಮೈಸೂರು ದಸರಾಗೆ ರಾಷ್ಟ್ರಪತಿಗಳು ಆಗಮಿಸುವ ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಪರಿಶೀಲಿಸಿದ ಸಚಿವ ಎಸ್.ಟಿ.ಸೋಮಶೇಖರ್

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೋಲಿಕೆಯಂತಿರುವ ರಾಜಾಜಿನಗರ ಬಿಜೆಪಿ ಮುಖಂಡ ಮಂಜುನಾಥ್ ಸ್ನೇಹಿತರೊಂದಿಗೆ ಮಾತನಾಡುತ್ತಿರುವುದು

JDS HD Kumarswamy | ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸೇರಿಕೊಂಡ್ರಾ?

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group