Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಗಾಂಧೀಜಿ ಬಂದಿದ್ದ ಬದನವಾಳು ಖಾದಿ ಕೇಂದ್ರಕ್ಕೆ ರಾಹುಲ್ ಭೇಟಿ : ಹತ್ಯಾಕಾಂಡ ನಡೆದ 3 ದಶಕಗಳ ಬಳಿಕ ಎರಡು ಸಮುದಾಯಗಳ ಜೊತೆ ಭೋಜನ ಸವಿದ ಕಾಂಗ್ರೆಸ್ ನಾಯಕ

ಭಾರತ ಐಕ್ಯತಾ ಯಾತ್ರೆಯ 25ನೇ ದಿನ ಗಾಂಧಿ ಜಯಂತಿ ಹಿನ್ನಲೆಯಲ್ಲಿ ಬದನವಾಳು ಗ್ರಾಮಕ್ಕೆ ಭೇಟಿ ನೀಡಿ ಹಲವು ಕಾರ್ಯಕ್ರಮಗಳಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡರು.

by Bengaluru Wire Desk
October 2, 2022
in News Wire
Reading Time: 2 mins read
0
ಬದನವಾಳು ಗ್ರಾಮದಲ್ಲಿ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಯ್ಕೆ ಮಾಡುತ್ತಿರುವುದನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆಗಿದ್ದರು.

ಬದನವಾಳು ಗ್ರಾಮದಲ್ಲಿ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಯ್ಕೆ ಮಾಡುತ್ತಿರುವುದನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆಗಿದ್ದರು.

ನಂಜನಗೂಡು, ಅ.02 www.bengaluruwire.com : ಭಾರತ ಐಕ್ಯತಾ ಯಾತ್ರೆಯಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಗಾಂಧಿ ಜಯಂತಿ ಹಿನ್ನಲೆಯಲ್ಲಿ ಭಾನುವಾರ ಇಲ್ಲಿನ ಬದನವಾಳು ಗ್ರಾಮದಲ್ಲಿನ ಕರ್ನಾಟಕ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು.

ಭಾರತ್ ಜೋಡೋ ಪಾದಯಾತ್ರೆಗೆ ಗಾಂಧಿ ಜಯಂತಿ ಹಿನ್ನಲೆಯಲ್ಲಿ  ಬೆಳಗ್ಗೆ 7:30 ರಿಂದ ಮಧ್ಯಾಹ್ನ 3ರವರೆಗೆ ವಿರಾಮ ನೀಡಿ ಬದನವಾಳುನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಗಾಂಧೀಜಿ ಪ್ರತಿಮೆಗೆ ಹಾರ ಹಾಕಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಮಹಾತ್ಮಾ ಗಾಂಧಿ ಅವರು ನಮ್ಮ ಸಂವಿಧಾನಿಕ ಹಕ್ಕಿಗಾಗಿ ತ್ಯಾಗ ಬಲಿದಾನ ನೀಡಿದ್ದು, ಇಂದು ಆ ಹಕ್ಕುಗಳು ಅಪಾಯಕ್ಕೆ ಸಿಲುಕಿವೆ ಎಂಬುದು ಬಹುತೇಕರಿಗೆ ಮನದಟ್ಟಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಭಾರತ ಜೋಡೋ ಯಾತ್ರೆಯ 25ನೇ ದಿನವಾದ ಇಂದು ನಾವು ಗಾಂಧಿ ಅವರ ಸ್ಮರಣೆ ಮಾಡುತ್ತಿದ್ದು, ಈ ಯಾತ್ರೆ ಗಾಂಧಿ ಅವರ ಅಹಿಂಸೆ, ಏಕತೆ, ಸಮಾನತೆ ಹಾಗೂ ನ್ಯಾಯದ ಮಾರ್ಗದಲ್ಲಿ ಸಾಗುತ್ತಿದೆ. ಈ ಯಾತ್ರೆಯಲ್ಲಿ ಅಪಾರ ಪ್ರಮಾಣದಲ್ಲಿ ಪುರುಷರು, ಮಹಿಳೆಯರು, ಮಕ್ಕಳು ಭಾಗವಹಿಸಿದ್ದಾರೆ. ನಮ್ಮ ಯಾತ್ರೆ ಮೈಸೂರಿನಿಂದ ಕಾಶ್ಮೀರದವರೆಗೆ ಸಾಗುತ್ತಿದ್ದಂತೆ ಎಲ್ಲರೂ ಈ ಯಾತ್ರೆಯಲ್ಲಿ ಅಹಿಂಸಾ ಹಾಗೂ ಸದ್ಭಾವನ ಮನೋಭಾವದಿಂದ ನಮ್ಮೊಡನೆ ಹೆಜ್ಜೆ ಹಾಕಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು.

ಗಾಂಧೀಜಿ ಕೊಂದವರ ಸಿದ್ಧಾಂತದ ವಿರುದ್ಧ ಹೋರಾಟ :

ಮಹಾತ್ಮ ಗಾಂಧಿ ಅವರ 153ನೇ ಜಯಂತೋತ್ಸವ ಹಿನ್ನೆಲೆಯಲ್ಲಿ ಇಂದು ನಾವೆಲ್ಲರೂ ಬದನವಾಳುವಿನ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಸೇರಿದ್ದೇವೆ. ಮಹಾತ್ಮ ಗಾಂಧಿ ಅವರು 1927ರಲ್ಲಿ ಈ ಕೇಂದ್ರಕ್ಕೆ ಭೇಟಿ ನೀಡಿದ್ದು, ಈ ಕೇಂದ್ರದಲ್ಲಿ ಭಾರತ ಮಾತೆಯ ಶ್ರೇಷ್ಠ ಪುತ್ರನಿಗೆ ನಮನ ಸಲ್ಲಿಸುತ್ತಿದ್ದೇವೆ. ಬ್ರಿಟೀಷ್ ರಾಜ್ ವ್ಯವಸ್ಥೆ ವಿರುದ್ಧ ಗಾಂಧಿ ಅವರ ಹೋರಾಟದಂತೆ, ಗಾಂಧಿ ಅವರನ್ನು ಕೊಂದವರ ಸಿದ್ಧಾಂತದ ವಿರುದ್ಧ ನಾವು ಇಂದು ಹೋರಾಟ ಮಾಡುತ್ತಿದ್ದೇವೆ. ಈ ಸಿದ್ಧಾಂತದ ಪರಿಣಾಮ ಕಳೆದ ಎಂಟು ವರ್ಷಗಳಿಂದ ದೇಶದಲ್ಲಿ ಅಸಮಾನತೆ, ಸಮಾಜ ವಿಭಜನೆ ಹಾಗೂ ಕಷ್ಟಪಟ್ಟು ಪಡೆದ ಸ್ವಾತಂತ್ರ್ಯದ ಹರಣವಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಹಿಂಸಾತ್ಮಕ ರಾಜಕೀಯ, ಅಸತ್ಯದ ವಿರುದ್ಧ ಭಾರತ ಐಕ್ಯತಾ ಯಾತ್ರೆ ಮೂಲಕ ಅಹಿಂಸೆ ಮತ್ತು ಸ್ವರಾಜ್ಯದ ಸಂದೇಶವನ್ನು ಪಸರಿಸಲಾಗುತ್ತಿದೆ. ಸ್ವರಾಜ್ಯಕ್ಕೆ ಹಲವು ಅರ್ಥಗಳಿವೆ. ಅಂದರೆ ಭಯದಿಂದ ಮುಕ್ತಿಗೊಳ್ಳುವುದು. ನಮ್ಮ ರಾಜ್ಯಗಳು ತಮಗಿರುವ ಸಂವಿಧಾನಿಕ ಸ್ವಾಂತ್ರ್ಯವನ್ನು ಅನುಭವಿಸಿ, ನಮ್ಮ ಹಳ್ಳಿಗಳು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಹೊಂದುವ ಸ್ವಾಂತ್ರ್ಯವಾಗಿದೆ. ನಮ್ಮ ರೈತರು, ಯುವಕರು, ಸಣ್ಣ ಮತ್ತು ಮಧ್ಯಮ ವ್ಯಾಪಾರಸ್ಥರು ಇದನ್ನೇ ಬಯಸುತ್ತಿದ್ದಾರೆ.

ಅಷ್ಟೇ ಅಲ್ಲ ಈ ಯಾತ್ರೆಯಲ್ಲಿ 3600 ಕಿ.ಮೀ ಸಾಗುತ್ತಿರುವ ಯಾತ್ರಿಗಳು ಹಾಗೂ ಅಲ್ಪಾವಧಿಯಲ್ಲಿ ಸಾಗುತ್ತಿರುವ ಲಕ್ಷಾಂತರ ಜನರ ಗೆಲುವಾಗಿದೆ. ಈ ಯಾತ್ರೆಯು ಭಯ, ದ್ವೇಷ ಹಾಗೂ ವಿಭಜನೆ ರಾಜಕೀಯದ ವಿರುದ್ಧ ದೇಶದ ಜನರು ಗಟ್ಟಿ ಧ್ವನಿ ಎತ್ತುವ ಯಾತ್ರೆಯಾಗಿದೆ. ಅಧಿಕಾರದಲ್ಲಿರುವವರಿಗೆ ಗಾಂಧಿ ಅವರ ಪರಂಪರೆ ಬಗ್ಗೆ ಮಾತನಾಡುವುದು ಸುಲಭವಾಗಬಹುದು. ಆದರೆ ಅವರ ಹಾದಿಯಲ್ಲಿ ಸಾಗುವುದು ಬಹಳ ಕಷ್ಟವಾಗಲಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟರು.

ಬದನವಾಳು ಎರಡು ಸಮುದಾಯಗಳ ಜೊತೆ ರಾಹುಲ್ ಭೋಜನ :

ಬದನವಾಳು ಗ್ರಾಮದಲ್ಲಿ ಎರಡು ಸಮುದಾಯಗಳೊಂದಿಗೆ ಕುಳಿತು ಊಟ ಮಾಡುತ್ತಿರುವ ರಾಹುಲ್ ಗಾಂಧಿ

ಗಾಂಧಿ ಜಯಂತಿ ಆಚರಣೆಯ ಹಿನ್ನಲೆಯಲ್ಲಿ ಬದನವಾಳಿನಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಮುಖಂಡರೊಂದಿಗೆ ಸೇರಿ ಸಸಿ ನೆಟ್ಟರು. ಇದೇ ಸಂದರ್ಭದಲ್ಲಿ ಗ್ರಾಮದ ಯುವಕರೊಂದಿಗೆ ಸೇರಿ ಗ್ರಾಮದಲ್ಲಿ ಹೆಜ್ಜೆ ಹಾಕಿದರು. 1993ರಲ್ಲಿ ಬದನವಾಳು ಗ್ರಾಮದಲ್ಲಿ ದೇವಸ್ಥಾನ ಪ್ರವೇಶ ಸಂಬಂಧ ನಡೆದ ಹತ್ಯಾಕಾಂಡದ ನಂತರ ಎರಡೂ ಸಮುದಾಯಗಳು 29 ವರ್ಷಗಳಲ್ಲಿ ಎಂದೂ ಕೂಡ ಒಟ್ಟಿಗೆ ಕೂತು ಊಟ ಮಾಡಿರಲಿಲ್ಲ. ಆದರೆ ಬದನವಾಳು ಗ್ರಾಮದ ಎರಡೂ ಸಮುದಾಯಗಳ ಮಕ್ಕಳು ಸೇರಿದಂತೆ ಈ ಸಮುದಾಯಗಳ ಜೊತೆ ಕುಳಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಊಟ ಮಾಡಿದರು.

ಮೂರು ದಶಕಗಳಲ್ಲಿ ಪ್ರಪ್ರಥಮ ಬಾರಿಗೆ ಈ ಎರಡೂ ಸಮುದಾಯಗಳು ಒಟ್ಟಿಗೆ ಸೌಹಾರ್ದಯುತವಾಗಿ ಸಮಾನವಾಗಿ ಕುಳಿತು ಊಟ ಮಾಡಿದ್ದು ಅಭೂತಪೂರ್ವ ಘಟನೆಗೆ ಸಾಕ್ಷಿಯಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಕೆ ಸಿ ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಹಲವಾರು ಮುಖಂಡರು ಈ ಸೌಹಾರ್ದಯುತ ಸಂದರ್ಭದಲ್ಲಿ ಜೊತೆಯಾಗಿದ್ದರು.

ಬದನವಾಳು ಗ್ರಾಮದ ವಿಶೇಷತೆ :

ಬದನವಾಳು ಖಾದಿ ಕೇಂದ್ರದ ಆವರಣದಲ್ಲಿ 1927 ಇಸವಿಯಲ್ಲಿ ಭೇಟಿ ನೀಡಿದ್ದ ಮಹಾತ್ಮಗಾಂಧಿಜಿ ಅವರು ‘ಬದನವಾಳು ನೂಲುವ ಪ್ರಾಂತ್ಯ’ ಎಂಬ ಕಲ್ಲನ್ನು ಶಿಲಾನ್ಯಾಸ ಮಾಡಿರುವ ಕುರುಹು ಈಗಲೂ ಇದೆ. ಸ್ವಾತಂತ್ರ್ಯ ಪೂರ್ವದಲ್ಲಿ ಈ ಖಾದಿ ಕೇಂದ್ರದಲ್ಲಿ ಬಟ್ಟೆ, ಅವಲಕ್ಕಿ, ಎಣ್ಣೆ, ಬೆಂಕಿಪಟ್ಟಣ, ಕಾಗದ ಸೇರಿದಂತೆ ಇತರೆ ಉತ್ಪನ್ನಗಳನ್ನು ತಯಾರಿಸಲಾಗುತ್ತಿತ್ತು. ಹೀಗಾಗಿ 1932ರಲ್ಲಿ ಗಾಂಧೀಜಿ ಮತ್ತೊಮ್ಮೆ ಇಲ್ಲಿಗೆ ಭೇಟಿ ನೀಡಿ ಇಲ್ಲಿನ ಚಟುವಟಿಕೆಗಳನ್ನು ಪರಿಶೀಲಿಸಿದ್ದರು. ಇಂದಿಗೂ ಈ ಗ್ರಾಮದಲ್ಲಿ ನೂಲು ಉತ್ಪಾದನೆ ಮತ್ತು ಖಾದಿ ಬಟ್ಟೆ ತಯಾರಿಕೆ ನಡೆಯುತ್ತಿದ್ದು, 80ಕ್ಕೂ ಹೆಚ್ಚು ಜನ ಉದ್ಯೋಗಾವಕಾಶ ಪಡೆದುಕೊಂಡಿದ್ದಾರೆ. ಇಲ್ಲಿನ ಖಾದಿ ಗ್ರಾಮೋದ್ಯೋಗ ಕೇಂದ್ರದ ಪುನಶ್ವೇತನಕ್ಕೆ ಬಹು ಹಿಂದಿನಿಂದಲೂ ಸ್ಥಳೀಯರು ಒತ್ತಡ ಹೇರುತ್ತಾ ಬಂದಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಇಲಾಖೆ ಇತಿಹಾಸದಲ್ಲೇ ಪ್ರಥಮ ಬಾರಿಗೆ ರಜತ ಕಮಲ ಪ್ರಶಸ್ತಿ ಸ್ವೀಕರಿಸಿದ ರಾಜ್ಯ ವಾರ್ತಾ ಇಲಾಖೆ : ಸಿಎಂ ಬೊಮ್ಮಾಯಿ ಶ್ಲಾಘನೆ

Next Post

ಗಾಂಧಿ ಜಯಂತಿ ಹಿನ್ನಲೆ : ಕೆಎಸ್ ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ವಿವಿಧ ಸ್ವಚ್ಛತೆ ಕಾರ್ಯಕ್ರಮಗಳ ಆಯೋಜನೆ

Next Post
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ನೈಋತ್ಯ ರೈಲ್ವೆ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಗಾಂಧಿ ಜಯಂತಿ ಹಿನ್ನಲೆ : ಕೆಎಸ್ ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ವಿವಿಧ ಸ್ವಚ್ಛತೆ ಕಾರ್ಯಕ್ರಮಗಳ ಆಯೋಜನೆ

#MysoreDasara2022 | ಮೈಸೂರು ದಸರಾ ಮಹೋತ್ಸವದಲ್ಲಿ ಬಗೆ ಬಗೆಯ ಆಕರ್ಷಕ ಶ್ವಾನಗಳ ಪ್ರದರ್ಶನ ; ಎಲ್ಲರ ಗಮನ ಸೆಳೆದ ಚಾರ್ಲಿ 777

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d