Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

KASHMIR SHARADA TEMPLE | ಕಾಶ್ಮೀರದ ಗಡಿ ದೇವಸ್ಥಾನಕ್ಕೆ ಶೃಂಗೇರಿ ಪೀಠದಿಂದ ಪಂಚಲೋಹ ಶಾರದಾ ವಿಗ್ರಹ ಹಸ್ತಾಂತರ

ಕಾಶ್ಮೀರದ ಶಾರದಾ ಸಂರಕ್ಷಣಾ ಸಮಿತಿಯವರಿಗೆ ಆಶೀರ್ವವಾದ ಮಾಡಿ 100 ಕೆಜಿ ತೂಕದ 3 ಅಡಿಯ ಸುಂದರ ಶಾರದಾ ವಿಗ್ರಹವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶೃಂಗೇರಿ ಮಠದ ಜಗದ್ಗುರುಗಳು ಹಸ್ತಾಂತರಿಸಿದರು.

by Bengaluru Wire Desk
October 5, 2022
in News Wire, Public interest
Reading Time: 2 mins read
0
ಕಾಶ್ಮೀರದ ತೀತ್ವಾಲ್ ನ ನೂತನ ಶಾರದಾ ದೇವಸ್ಥಾನಕ್ಕೆ ಶೃಂಗೇರಿ ಮಠದಿಂದ ನೀಡುತ್ತಿರುವ ಶಾರದಾ ದೇವಿ ಪಂಚಲೋಹ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿರುವ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮಿಗಳು. ಚಿತ್ರಕೃಪೆ : ಶೃಂಗೇರಿ ಮಠ

ಕಾಶ್ಮೀರದ ತೀತ್ವಾಲ್ ನ ನೂತನ ಶಾರದಾ ದೇವಸ್ಥಾನಕ್ಕೆ ಶೃಂಗೇರಿ ಮಠದಿಂದ ನೀಡುತ್ತಿರುವ ಶಾರದಾ ದೇವಿ ಪಂಚಲೋಹ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿರುವ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮಿಗಳು. ಚಿತ್ರಕೃಪೆ : ಶೃಂಗೇರಿ ಮಠ

ಶೃಂಗೇರಿ, ಅ.5 www.bengaluruwire : ಕಾಶ್ಮೀರ ನಿಯಂತ್ರಣ ರೇಖೆ ತೀತ್ವಾಲ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಶಾರದಾ ಯಾತ್ರೆ ದೇವಸ್ಥಾನಕ್ಕಾಗಿ ವಿಜಯದಶಮಿಯ ದಿನವಾದ ಬುಧವಾರ ಇಲ್ಲಿ ನಡೆದ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಶೃಂಗೇರಿ ಶಾರದಾ ಪೀಠದ ಹಿರಿಯ ಶ್ರೀಗಳಾದ ಶ್ರೀ ಭಾರತೀ ತೀರ್ಥ ಸ್ವಾಮಿಜಿ ಹಾಗೂ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರ ಭಾರತಿ ಸ್ವಾಮಿಜಿಯವರು ಶಾರದಾ ಮೂರ್ತಿಯನ್ನು ಕಾಶ್ಮೀರ ಉಳಿಸಿ ಶಾರದಾ ಸಮಿತಿಯವರಿಗೆ ಆಶೀರ್ವದಿಸಿ ಹಸ್ತಾಂತರಿಸಿದರು.

ವಿಜಯದಶಮಿಯ ಶುಭದಿನ ದಂದು ಬೆಳಗ್ಗೆ ಶೃಂಗೇರಿಯಲ್ಲಿ ನಡೆದ ಪವಿತ್ರ ಕಾರ್ಯಕ್ರಮದಲ್ಲಿ 100 ಕೆಜಿ ತೂಕದ ಈ 3 ಅಡಿ ತೂಕದ ಸುಂದರ ಶಾರದಾ ದೇವಿಯ ಮೂರ್ತಿಗೆ ಉಭಯ ಶ್ರೀಗಳು ಪೂಜೆ ನೆರವೇರಿಸಿದರು. ಬಳಿಕ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು, ಬಳಿಕ ಸೇವ್ ಶಾರದಾ ಸಮಿತಿ ಅಧ್ಯಕ್ಷ ರವೀಂದರ್ ಪಂಡಿತ ಅವರ ನೇತೃತ್ವದ ನಿಯೋಗಕ್ಕೆ ಮೂರ್ತಿಯನ್ನು ನೀಡಿದರು. ಮುಂದಿನ ವರ್ಷದ ಆರಂಭದಲ್ಲಿ ತೀತ್ವಾಲ್ ಗೆ ಈ ಮೂರ್ತಿಯನ್ನು ಯಾತ್ರೆಯಲ್ಲಿ ಕೊಂಡೊಯ್ದು, ಅಲ್ಲಿನ  ಹೊಸ ಶಾರದಾ ಯಾತ್ರಾ ದೇವಸ್ಥಾನದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಪಂಚಲೋಹದ ಶಾರದಾ ವಿಗ್ರಹ, ಅದರ ಪೀಠ ಹಾಗೂ ಪ್ರಭಾವಳಿ ಸೇರಿದಂತೆ ಒಟ್ಟು 400 ಕೆಜಿ ತೂಕವನ್ನು ಹೊಂದಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾರದಾ ಉಳಿಸಿ ಸಮಿತಿ ಸಂಸ್ಥಾಪಕ ರವೀಂದರ್ ಪಂಡಿತ್, 1947 ರ ತೀತ್ವಾಲ್‌ನಲ್ಲಿ ಕಳೆದುಹೋದ ಪರಂಪರೆಯನ್ನು ಮರಳಿ ಪಡೆಯಲು ಶೃಂಗೇರಿ ಮಠವು ತಮ್ಮ ಸಮಿತಿಗೆ ಬೆಂಬಲ ನೀಡಿದಕ್ಕಾಗಿ ತಾವು ತುಂಬಾ ಕೃತಜ್ಞನಾಗಿದ್ದೇನೆ ಎಂದು ಹೇಳಿದರು.

ಇದೊಂದು ಐತಿಹಾಸಿಕ ಕ್ಷಣ :

“1947 ರಲ್ಲಿ ತೀತ್ವಾಲ್‌ನಲ್ಲಿ ದಾಳಿಯ ಸಮಯದಲ್ಲಿ ಇಲ್ಲಿನ ಧರ್ಮಶಾಲಾ ಮತ್ತು ಸಿಖ್ ಗುರುದ್ವಾರ ಸಂಪೂರ್ಣವಾಗಿ ದಹಿಸಲ್ಪಟ್ಟಿತ್ತು. 2021 ರ ಸೆಪ್ಟೆಂಬರ್‌ನಲ್ಲಿ ನಮ್ಮ ವಾರ್ಷಿಕ ಯಾತ್ರೆಯಲ್ಲಿ ನಾವು ಸ್ಥಳೀಯರಿಂದ ದೇವಸ್ಥಾನಕ್ಕೆ ಭೂಮಿಯನ್ನು ಪಡೆದುಕೊಂಡಿದ್ದೆವು.  ಸ್ವಾತಂತ್ರ್ಯ ಪೂರ್ವದಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಶಾರದಾ ಪೀಠವು ಸೇರ್ಪಡೆಯಾಗಿತ್ತು. ಹಾಗಾಗಿ ಅಧಿಕೃತ ಚಾರ್ರಿ ಮುಬಾರಕ್, ಆ ದಿನಗಳಲ್ಲಿ ತೀತ್ವಾಲ್‌ನಿಂದ ಚಿಲ್ಹಾನಾ ಮೂಲಕ ಆಗ ಶಾರದಾ ಪೀಠಕ್ಕೆ ಹೋಗುತ್ತಿದ್ದರು.” ಎಂದು ತಿಳಿಸಿದರು.

ಈಗ ತೀತ್ವಾಲ್ ನಲ್ಲಿಯೇ ಶಾರದಾ ಯಾತ್ರೆಯ ಪರಿಕ್ರಮ ಪ್ರಾರಂಭವಾಗುವ ಸ್ಥಳದಲ್ಲಿಯೇ ಶಾರದಾ ದೇವಿ ದೇವಸ್ಥಾನ ನಿರ್ಮಿಸುತ್ತಿದ್ದು, ಆ ದೇವಸ್ಥಾನಕ್ಕೆ ಶೃಂಗೇರಿ ಪೀಠದಿಂದ ಪಂಚಲೋಹದ ವಿಗ್ರಹ ಪಡೆಯುತ್ತಿರುವುದು ಒಂದು ಐತಿಹಾಸಿಕ ಕ್ಷಣವಾಗಿದೆ ಎಂದು ರವೀಂದರ್ ಪಂಡಿತ ಹೇಳಿದರು.

ಶಾರದಾ ದೇವಿ ಪಂಚಲೋಹ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿರುವ ಶ್ರೀ ವಿಧುಶೇಖರ ಭಾರತೀ ಶ್ರೀಗಳು

ಪಾರಂಪರಿಕ ದೇವಾಲಯದ ಕಾಮಗಾರಿಯು ಈ ನವೆಂಬರ್‌ನಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಹಾಗೂ ಪ್ರತಿಷ್ಠಾಪನೆ ಮತ್ತು ಅಂತಿಮ ಉದ್ಘಾಟನೆಗಾಗಿ ಮೂರ್ತಿಯನ್ನು ಮುಂದಿನ ವರ್ಷದ ಆರಂಭದಲ್ಲಿ ತೀತ್ವಾಲ್‌ಗೆ ಕೊಂಡೊಯ್ಯಲಾಗುತ್ತದೆ. ಏತನ್ಮಧ್ಯೆ, ಸಮಿತಿಯು ಸಿಖ್ ಗುರುದ್ವಾರವನ್ನು ನಿರ್ಮಿಸುತ್ತಿದೆ.  ಅದರ ಕೆಲಸವು ಬಹುತೇಕ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

ಮುಂದಿನ ವರ್ಷ ನೂತನ ದೇವಸ್ಥಾನದ ಕುಂಭಾಭಿಷೇಕ :

ಶೃಂಗೇರಿ ಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ವಿ.ಆರ್.ಗೌರಿಶಂಕರ ಅವರು ಮಾತನಾಡಿ, ಹೊಸ ಶಾರದಾ ದೇವಿ ದೇವಸ್ಥಾನ ನಿರ್ಮಾಣವಾಗುತ್ತಿರುವುದು ಸನಾತನ ಧರ್ಮದ ಅನುಯಾಯಿಗಳಿಗೆ ಹೆಮ್ಮೆಯ ವಿಚಾರವಾಗಿದೆ. ಸನಾತನ ಧರ್ಮವನ್ನು ಅನುಸರಿಸುವ ಪ್ರತಿಯೊಬ್ಬರು ಈ ಪ್ರಮುಖ ಯೋಜನೆಗೆ ಬೆಂಬಲ ನೀಡಬೇಕಾಗಿರುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. 1200 ವರ್ಷಗಳ ಹಿಂದೆ ಆದಿ ಶಂಕರಾಚಾರ್ಯರು ಈಗಿನ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಶ್ರೀ ಶಾರದಾ ಸರ್ವಜ್ಞ ಪೀಠಕ್ಕೆ ಭೇಟಿ ನೀಡಿ ಅವರೋಹಣ ನಡೆಸಿದರು. ಹಿಂದುಗಳ ಪವಿತ್ರ ಸ್ಥಳವಾದ ಶ್ರೀ ಸರ್ವಜ್ಞ ಪೀಠಕ್ಕೆ ನಿರಂತರವಾಗಿ ಯಾತ್ರೆ ಆರಂಭಿಸುವ ಬಗ್ಗೆ ಪ್ರಯತ್ನಗಳು ನಡೆದಿದೆ. ಶೃಂಗೇರಿ ಜಗದ್ಗುರುಗಳ ಆಶೀರ್ವಾದಿಂದ ಮುಂದಿನ ವರ್ಷ ನೂತನ ದೇವಸ್ಥಾನದ ಕುಂಭಾಭಿಷೇಕ ಕಾರ್ಯಕ್ರಮ ನೆರವೇರಲಿದೆ ಎಂದು ತಿಳಿಸಿದ್ದಾರೆ.

ಶಾರದಾ ಯಾತ್ರೆ ಪುನಃ ಆರಂಭಿಸುವ ಉದ್ದೇಶ :

ಶೃಂಗೇರಿ ಮಠದ ಶ್ರೀಗಳಿಂದ ಕಾಶ್ಮೀರದ ಶಾರದಾ ಸಂರಕ್ಷಣಾ ಸಮಿತಿಯವರಿಗೆ ಶಾರದಾ ವಿಗ್ರಹ ಹಸ್ತಾಂತರಿಸಿದ ಕ್ಷಣ

ಕಾಶ್ಮೀರದ ಶಾರದಾ ಸಂರಕ್ಷಣಾ ಸಮಿತಿಯ ಸಂಚಾಲಕ ಹಾಗೂ ಹಿರಿಯ ಪತ್ರಕರ್ತ ಮಂಜುನಾಥ ಶರ್ಮ ಮಾತನಾಡಿ, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಇದ್ದ ಐತಿಹಾಸಿಕ ಶ್ರೀ ಶಾರದಾ ದೇವಿ ದೇವಸ್ಥಾನ ಆಕ್ರಮಣಕಾರರ ದಾಳಿಗೆ ಭಗ್ನಗೊಂಡ ಬಳಿಕ, ಆ ತಾಯಿಗೆ ನೆಲೆ ಇಲ್ಲದೆ ಪೂಜೆಯು ನಿಂತು ಹೋಗಿತ್ತು. ಹಾಗಾಗಿ ಅಲ್ಲಿನ ಪರಂಪರೆಯನ್ನು ಪುನಃ ಸ್ಥಾಪಿಸುವ ನಿಟ್ಟಿನಲ್ಲಿ ಕಾಶ್ಮೀರದ ಗಡಿನಿಯಂತ್ರಣ ರೇಖೆಯ ಗಡಿ ಗ್ರಾಮ ತೀತ್ವಾಲ್ ನಲ್ಲಿ ಶಾರದಾ ದೇವಸ್ಥಾನ ನಿರ್ಮಾಣ ಮಾಡುವ ಯೋಜನೆ ಬಗ್ಗೆ ಶೃಂಗೇರಿ ಮಠದ ಉಭಯ ಶ್ರೀಗಳು ಸಮ್ಮತಿ ಸೂಚಿಸಿ, ತಮ್ಮ ಬೆಂಬಲವನ್ನು ಘೋಷಿಸಿದರು. ಅದಾದ ಬಳಿಕ ಮಠದ ಭಕ್ತರು, ದೇವಿಯ ಅನುಯಾಯಿಗಳ ನೆರವಿನಿಂದ ಕೇವಲ 5 ತಿಂಗಳ ದಾಖಲೆ ಅವಧಿಯಲ್ಲಿ ದೇವಸ್ಥಾನದ ಕಲ್ಲಿನ ಕಟ್ಟಡದ ನಿರ್ಮಾಣ ಕಾಮಗಾರಿ ಮುಗಿಸಿ, ಮೇಲ್ಛಾವಣಿ ಕೆಲಸ ಭರದಿಂದ ನಡೆಯುತ್ತಿದೆ ಎಂದು ವಿವರಿಸಿದರು.

ದೇವಸ್ಥಾನ ಕಾಮಗಾರಿಗೆ ಸಣ್ಣ ಮೊತ್ತದ ದೇಣಿಗೆ ಸಂಗ್ರಹಕ್ಕೂ ಒತ್ತು :

ಈ ದೇವಸ್ಥಾನಕ್ಕೆ ನಾಲ್ಕು ಬಾಗಿಲುಗಳಿದ್ದು, ಇದು ಸನಾತನ ಧರ್ಮದಲ್ಲಿನ ನಾಲ್ಕು ವೇದಗಳ ಸಂಕೇತವಾಗಿದೆ. ವಿಶೇಷವಾಗಿ ದಾನಿಗಳಿಂದಲೇ ನಿರ್ಮಾಣವಾಗುತ್ತಿರುವ ದೇವಸ್ಥಾನಕ್ಕೆ ಉದಾರ ದೇಣಿಗೆಯ ಅವಶ್ಯಕತೆಯಿದ್ದು, ವಿದ್ಯಾ ದೇವತೆ ಸರಸ್ವತಿ ಮಾತೆಗೆ ಒಂದು ದೇಗುಲ ನಿರ್ಮಿಸುವ ಸದುದ್ದೇಶವಿದೆ. ಹೀಗಾಗಿ ದೊಡ್ಡ ಮೊತ್ತದ ಜೊತೆಗೆ ಸಣ್ಣ ದೇಣಿಗೆ ಮಾಡಲು ಒತ್ತು ನೀಡಲಾಗಿದೆ. ತೀತ್ವಾಲ್ ಶಾರದಾ ದೇವಿ ದೇವಸ್ಥಾನದಲ್ಲಿ ಇನ್ನು ಮರದ ಬಾಗಿಲು ಕೆಲಸ, ಅರ್ಚಕರಿಗೆ ಮನೆ, ಯಾತ್ರಿಗಳಿಗೆ ಧರ್ಮಶಾಲೆ, ನೈವೇದ್ಯ ಸಿದ್ಧತೆಗೆ ಪಾಕಶಾಲೆ ಇತ್ಯಾದಿ ಕೆಲಸಗಳು ಬಾಕಿಯಿದೆ. ಈಗಲೂ ದಾನಿಗಳು ಮುಂದೆ ಬಂದು ಶಾರದಾ ದೇವಸ್ಥಾನ ನಿರ್ಮಾಣಕ್ಕೆ ಕಾಣಿಕೆ ಸಲ್ಲಿಸಬಹುದು ಎಂದು ಮಂಜುನಾಥ್ ಶರ್ಮ ವಿನಂತಿಸಿದ್ದಾರೆ.

WhatsApp Join our WhatsApp Channel
Previous Post

‘ನಾದದ ನವನೀತ’ ಸಾಕ್ಷ್ಯಾಚಿತ್ರ ಪ್ರಶಸ್ತಿ ಕುರಿತ ವಿವಾದಕ್ಕೆ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ತೆರೆ

Next Post

#KantaraMovie | ಆರು ದಿನಗಳಲ್ಲೇ ‘ಕಾಂತಾರ’ ಸಿನಿಮಾ ಗಳಿಸಿದ್ದೆಷ್ಟು? ಎಷ್ಟು ಭಾಷೆಗಳಲ್ಲಿ ಸೆನ್ಸರ್ ಮಂಡಳಿಗೆ ಹೋಗಿದೆ? ಇಲ್ಲಿದೆ Special Report.

Next Post

#KantaraMovie | ಆರು ದಿನಗಳಲ್ಲೇ 'ಕಾಂತಾರ' ಸಿನಿಮಾ ಗಳಿಸಿದ್ದೆಷ್ಟು? ಎಷ್ಟು ಭಾಷೆಗಳಲ್ಲಿ ಸೆನ್ಸರ್ ಮಂಡಳಿಗೆ ಹೋಗಿದೆ? ಇಲ್ಲಿದೆ Special Report.

ಸಾಂದರ್ಭಿಕ ಚಿತ್ರ

BWSSB NEWS | ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ಕಾವೇರಿ ನೀರು ಪೂರೈಕೆ ಬಂದ್....!

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group