Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Karnataka Rain Damages | ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ; ಪರಿಹಾರ ವಿತರಣೆಯಲ್ಲಿ ಲೋಪ ಮಾಡದಿರಿ : ಡಿಸಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಜೂನ್ 1 ರಿಂದ ಸೆಪ್ಟೆಂಬರ್ 30ರ ವರೆಗೆ 42,661 ಮನೆಗಳಿಗೆ ಪರಿಹಾರ

by Bengaluru Wire Desk
October 13, 2022
in News Wire
Reading Time: 1 min read
0

ಹೊಸಪೇಟೆ, ಅ.13 www.bengaluruwire.com :
ರಾಜ್ಯದಲ್ಲಿ ಹಿಂದೆಂದಿಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು. ಮಳೆಹಾನಿ ಸಂಭವಿಸಿದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಹಾರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶನ ನೀಡಿದರು.

ಅವರು ಇಂದು ಹೊಸಪೇಟೆಯಿಂದ ಮಳೆಹಾನಿ ಸಂಭವಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಪರಿಹಾರ ಕ್ರಮಗಳ ಪರಿಶೀಲನೆ ನಡೆಸಿದರು.

ಮನೆಗಳಿಗೆ ಸಂಬಂಧಿಸಿದ ಹಾನಿಯನ್ನು ದಾಖಲಿಸುವ ಹಂತದಲ್ಲಿಯೇ ಕೆಲವೆಡೆ ಲೋಪಗಳಾಗುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಲೋಪವಾಗದಂತೆ ಜಿಲ್ಲಾಧಿಕಾರಿಗಳು ಖುದ್ದು ಮೇಲ್ವಿಚಾರಣೆ ವಹಿಸಬೇಕು. ವಸ್ತುಸ್ಥಿತಿ ಆಧರಿಸಿ, ಪರಿಹಾರ ಕೋರಿ ಬಂದ ಮನವಿಗಳನ್ನು ದಾಖಲಿಸಬೇಕು. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಮನೆ ಹಾನಿಗೆ ಸಂಬಂಧಿಸಿದಂತೆ ಎನ್ ಡಿಆರ್ ಎಫ್ ಮಾರ್ಗಸೂಚಿಗಿಂತ ಹೆಚ್ಚುವರಿ ಪರಿಹಾರ ವಿತರಣೆಗೆ ಸುತ್ತೋಲೆ ಹೊರಡಿಸುವಂತೆ ವಿಪತ್ತು ನಿರ್ವಹಣೆ ಆಯುಕ್ತರಿಗೆ ಸೂಚನೆ ನೀಡಿದರು.

ಮಳೆಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ, ಪರಿಹಾರ ವಿತರಣೆ, ಮಾಹಿತಿ ದಾಖಲಿಸುವಲ್ಲಿ ಲೋಪಗಳಾಗದಂತೆ ತಹಸೀಲ್ದಾರರಿಗೆ ಮಾರ್ಗಸೂಚಿ ನೀಡಬೇಕು.

ಬೆಳೆಹಾನಿ ಪರಿಹಾರ ವಿತರಣೆಯನ್ನೂ ತ್ವರಿತವಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಿದ ಬೆಳೆಹಾನಿಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ವಿತರಿಸಲು ಸೂಚನೆ ನೀಡಲಾಯಿತು.

ಮೂಲಸೌಲಭ್ಯ ಹಾನಿ ವರ್ಗೀಕರಣ‌:
ಮೂಲಸೌಲಭ್ಯ ಹಾನಿಗೆ ಸಂಬಂಧಿಸಿದಂತೆ ಹಾನಿಯ ತೀವ್ರತೆಯನ್ನು ಆಧರಿಸಿ, ಸಿ ವರ್ಗ- ಎನ್ ಡಿಆರ್ ಎಫ್ ಮಾರ್ಗಸೂಚಿಯನ್ವಯ ದುರಸ್ತಿ, ಬಿ ವರ್ಗ- ಸರ್ಕಾರದಿಂದ ಹೆಚ್ಚುವರಿ ನೆರವು ಅಗತ್ಯವಿರುವ ಕಾಮಗಾರಿಗಳು, ಎ- ಸಂಪೂರ್ಣ ಪುನರ್ ನಿರ್ಮಾಣ ಅಗತ್ಯವಿರುವ ಕಾಮಗಾರಿಗಳು- ಎಂದು ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಲಾಯಿತು.

ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸಹ ಸೂಚನೆ ನೀಡಿದರು. ಕೆರೆಗಳು ದುರ್ಬಲವಾಗಿರುವುದು, ನೀರಿನ ಒತ್ತಡ ಹೆಚ್ಚಿರುವ ಸೂಕ್ಷ್ಮ ಪರಿಸ್ಥಿತಿಯನ್ನು ಅವಲೋಕಿಸಿ, ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಸೇತುವೆಗಳ ನಿರ್ಮಾಣದ ವಿಷಯದಲ್ಲಿಯೂ ಆದ್ಯತೆಯನ್ನು ಗುರುತಿಸಿ, ಅದರಂತೆ ದುರಸ್ತಿ, ಮರುನಿರ್ಮಾಣ ಮಾಡಬೇಕು ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳನ್ನು 24 ಗಂಟೆಗಳೊಳಗೆ ಸರಿಪಡಿಸಿ, ವಿದ್ಯುತ್ ಸಂಪರ್ಕ ಒದಗಿಸಬೇಕು‌ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ದಿಢೀರ್ ಪ್ರವಾಹದ ವಿರುದ್ಧ ಮುನ್ನೆಚ್ಚರಿಕೆ
ದಿಢೀರ್ ಪ್ರವಾಹ ಉಂಟಾಗುವ ಹೊಳೆ, ಹಳ್ಳಗಳ ವ್ಯಾಪ್ತಿಯಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು.

ಅನುದಾನ ಕೊರತೆ ಇಲ್ಲ :
ಬೆಳೆಹಾನಿ ಹಾಗೂ ಮನೆಹಾನಿಗೆ ಪರಿಹಾರ ನೀಡಲು ಅನುದಾನದ ಕೊರತೆ ಇಲ್ಲ. ಮೂಲಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಂತೆ ಸೂಚಿಸಲಾಯಿತು. ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಒಟ್ಟು 635.13 ಕೋಟಿ ರೂ. ಲಭ್ಯವಿದೆ. ಮೂಲಸೌಕರ್ಯ ಹಾನಿಗೆ ಸಂಬಂಧಿಸಿದಂತೆ ಮೂರು ದಿನಗಳ ನಂತರ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ ಅ.1 ರಿಂದ ಈ ವರೆಗೆ ಸಂಬಂಧಿಸಿದಂತೆ ವರದಿಯಾಗಿರುವ ಮಳೆಹಾನಿಯ ವಿವರ :

  1. ಜೀವಹಾನಿ- 13
  2. ಜಾನುವಾರುಗಳ ಸಾವು- 28
  3. ಮನೆಹಾನಿ- 3309
  4. ಬೆಳೆಹಾನಿ- 6279 ಹೆಕ್ಟೇರ್
  5. ಕಾಳಜಿ ಕೇಂದ್ರಗಳ ಸ್ಥಾಪನೆ- 5, ಆಶ್ರಯ ಪಡೆದವರ ಸಂಖ್ಯೆ 1330

6.16 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆಹಾನಿಗೆ ಪರಿಹಾರ:
ಮುಂಗಾರು ಹಂಗಾಮಿನಲ್ಲಿ ಒಟ್ಟು 9,90,957 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದ್ದು, 6,16,138 ಹೆಕ್ಟೇರ್ ಪ್ರದೇಶದ ಬೆಳೆಹಾನಿಗೆ 8.83 ಲಕ್ಷ ರೈತರಿಗೆ 947.8 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಇನ್ನು ಎರಡು ದಿನಗಳಲ್ಲಿ ಇನ್ನೊಂದು ಹಂತದಲ್ಲಿ ಸುಮಾರು 2 ಲಕ್ಷ ರೈತರಿಗೆ ಅಂದಾಜು 250 ಕೋಟಿ ರೂ. ಬೆಳೆ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

42,661 ಮನೆಗಳಿಗೆ ಪರಿಹಾರ ವಿತರಣೆ :
ಜೂನ್ 1 ರಿಂದ ಸೆಪ್ಟೆಂಬರ್ 30ರ ವರೆಗೆ 48,485 ಮನೆ ಹಾನಿ ಸಂಭವಿಸಿದ್ದು, 42,661 ಮನೆಗಳಿಗೆ ಪರಿಹಾರ ವಿತರಿಸಲಾಗಿದೆ.

ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಮುಖ್ಯಮಂತ್ರಿಯವರೊಂದಿಗೆ ಉಪಸ್ಥಿತರಿದ್ದರು. ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದರು.

WhatsApp Join our WhatsApp Channel
Previous Post

KAS | 2017-18ನೇ ಸಾಲಿನ ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಜ್ಞಾನಗಂಗೋತ್ರಿ ಅಕಾಡೆಮಿ ವತಿಯಿಂದ ಅಭಿನಂದನಾ ಕಾರ್ಯಕ್ರಮ

Next Post

Bangalore Metro Rail News | ಭೈಯ್ಯಪ್ಪನಹಳ್ಳಿ – ವೈಟ್ ಫೀಲ್ಡ್ ನಡುವೆ ಅ.25ರಿಂದ ಮೆಟ್ರೋ ರೈಲು ಪ್ರಾಯೋಗಿಕ ಸಂಚಾರ

Next Post

Bangalore Metro Rail News | ಭೈಯ್ಯಪ್ಪನಹಳ್ಳಿ - ವೈಟ್ ಫೀಲ್ಡ್ ನಡುವೆ ಅ.25ರಿಂದ ಮೆಟ್ರೋ ರೈಲು ಪ್ರಾಯೋಗಿಕ ಸಂಚಾರ

ಸಾಂದರ್ಭಿಕ ಚಿತ್ರ

NO Kavery Water Supply | ಬೆಂಗಳೂರಿನ 254 ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಕಾವೇರಿ ನೀರು ಪೂರೈಕೆ ಬಂದ್...!

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group