Sunday, June 8, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

Air Pollution Contributes To Lung Cancer | ವಾಯು ಮಾಲಿನ್ಯದಿಂದ ಶ್ವಾಸಕೋಶದ ಕ್ಯಾನ್ಸರ್ ಅಪಾಯ ಹೆಚ್ಚು : ನೂತನ ಸಂಶೋಧನೆಯಿಂದ ಬಹಿರಂಗ

ವಿಶ್ವ ಆರೋಗ್ಯ ಸಂಸ್ಥೆ ವಾರ್ಷಿಕವಾಗಿ ನಿಗಧಿಪಡಿಸಿರುವ ಮೌಲ್ಯಕ್ಕಿಂತ 11.5 ಪಟ್ಟು ಹೆಚ್ಚು ವಾಯು ಮಾಲಿನ್ಯ ಭಾರತದಲ್ಲಿದೆ.

by Bengaluru Wire Desk
October 17, 2022
in Bengaluru Focus, Public interest
Reading Time: 1 min read
0
ಶ್ವಾಸಕೋಶದ ಗ್ರಾಫಿಕ್ ಚಿತ್ರ

ಶ್ವಾಸಕೋಶದ ಗ್ರಾಫಿಕ್ ಚಿತ್ರ

ವಾಯು ಮಾಲೀನ್ಯವು ಮನುಷ್ಯನ ಶ್ವಾಸಕೋಶದ ಕ್ಯಾನ್ಸರ್ ಸಾಧ್ಯತೆಯನ್ನು ಹೆಚ್ಚಿಸುತ್ತದೆ ಎಂದು ಹೊಸ ಅಧ್ಯಯನವೊಂದು ಬಹಿರಂಗಪಡಿಸಿದೆ. ಇದು ವಿಶ್ವದಲ್ಲೇ ಅತಿಹೆಚ್ಚು ವಾಯು ಮಾಲಿನ್ಯವಿರುವ ಭಾರತ ದೇಶಕ್ಕೆ ಅದಲ್ಲೂ ಅತಿಹೆಚ್ಚು ವಾಯುಮಾಲಿನ್ಯ ಪ್ರಮಾಣವಿರುವ ಬೆಂಗಳೂರಿಗೆ ಒಂದು ದೊಡ್ಡ ಅಲಾರಾಮ್ ಅಂತಲೇ ಹೇಳಬಹುದು.

ಐಕ್ಯೂಏರ್.ಕಾಮ್ ಎಂಬ ಸಂಸ್ಥೆಯು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದಂತೆ 2021ರಲ್ಲಿ ವಿಶ್ವದಲ್ಲೇ 118 ರಾಷ್ಟ್ರಗಳ ಪೈಕಿ ಅತಿಹೆಚ್ಚು ಕಳಪೆ ಗುಣಮಟ್ಟದ ಗಾಳಿಯಿರುವ ರಾಷ್ಟ್ರಗಳ ಪೈಕಿ ಭಾರತ 5ನೇ ಸ್ಥಾನ ಪಡೆದಿತ್ತು. ವಿಶ್ವ ಆರೋಗ್ಯ ಸಂಸ್ಥೆ ವಾರ್ಷಿಕವಾಗಿ ನಿಗಧಿಪಡಿಸಿರುವ ಮೌಲ್ಯಕ್ಕಿಂತ 11.5 ಪಟ್ಟು ಹೆಚ್ಚು ವಾಯು ಮಾಲಿನ್ಯ ಭಾರತದಲ್ಲಿದೆ ಕಂಡು ಬಂದಿತ್ತು ಎಂದು ತಿಳಿಸಿದೆ.

ಪರಿಸ್ಥಿತಿ ಹೀಗಿರುವಾಗ, ವಾಯು ಮಾಲಿನ್ಯದ ಕುರಿತು ಇತ್ತೀಚೆಗೆ ದಿ ಲ್ಯಾನ್ಸೆಟ್‌ ಜರ್ನಲ್ (The Lancet) ನಲ್ಲಿ ಪ್ರಕಟವಾದ ಸಂಶೋಧನಾ ಅಧ್ಯಯನವು ಗ್ರಂಥಿ ವಿಜ್ಞಾನ (Oncology) ಕ್ಷೇತ್ರಕ್ಕೆ ಉತ್ತಮ ಭರವಸೆಯನ್ನು ನೀಡಿದೆ. ಫ್ರಾನ್ಸಿಸ್ ಕ್ರಿಕ್ ಇನ್ಸ್ಟಿಟ್ಯೂಟ್ ಮತ್ತು ಯೂನಿವರ್ಸಿಟಿ ಕಾಲೇಜ್ ಲಂಡನ್ ಸಂಶೋಧಕರು ಶ್ವಾಸಕೋಶದ ಕ್ಯಾನ್ಸರ್ ವಿಕಸನವನ್ನು ಕಾಲಾನಂತರದಲ್ಲಿ ಅಧ್ಯಯನ ಮಾಡಿದರು. ಈ ಅಧ್ಯಯನ ಮಾಡಿದಾಗ, ಧೂಮಪಾನಿಗಳಲ್ಲದ ಅಂದಾಜು 6,000 ಮಂದಿ ಪ್ರತಿ ವರ್ಷ ಬ್ರಿಟನ್ ನಲ್ಲಿ ಶ್ವಾಸಕೋಶದ ಕ್ಯಾನ್ಸರ್ ನಿಂದ ಸಾಯುತ್ತಿದ್ದಾರೆ. ಈ ಕ್ಯಾನ್ಸರ್ ರೋಗದ ಪ್ರತಿ ಹತ್ತು ಪ್ರಕರಣಗಳಲ್ಲಿ ಒಂದು ಪ್ರಕರಣ, ಗಾಳಿಯಿಂದ ಸಂಭವಿಸಿದ ರೋಗವಾಗಿದೆ.

ವಾಯು ಮಾಲಿನ್ಯದ ವಾತಾವರಣದಲ್ಲಿ ಸಾಗುತ್ತಿರುವ ವಾಹನಗಳು (ಸಾಂದರ್ಭಿಕ ಚಿತ್ರ)

ಮನುಷ್ಯನಿಗೆ ವಯಸ್ಸಾಗುತ್ತಿದ್ದಂತೆ ಕ್ಯಾನ್ಸರ್ ಉಂಟುಮಾಡುವ ರೂಪಾಂತರಗೊಂಡ ಜೀವಕೋಶಗಳು ಸ್ವಾಭಾವಿಕವಾಗಿ ದೇಹದಲ್ಲಿ ಸಂಗ್ರಹಗೊಳ್ಳುತ್ತವೆ. ಆದರೆ ಇವು ಸಾಮಾನ್ಯವಾಗಿ ನಿಷ್ಕ್ರಿಯವಾಗಿರುತ್ತವೆ. ವಾಯು ಮಾಲಿನ್ಯವು ಶ್ವಾಸಕೋಶದಲ್ಲಿ ಈ ಕೋಶಗಳನ್ನು ಸಕ್ರಿಯಗೊಳಿಸುತ್ತದೆ ಮತ್ತು ಅವುಗಳ ಬೆಳವಣಿಗೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಇವುಗಳು ಗಡ್ಡೆಗಳ ರೂಪದಲ್ಲಿ ಹರಡುತ್ತದೆ ಎಂದು ಅಧ್ಯಯನವು ಬಹಿರಂಗಪಡಿಸಿದೆ.

ವಾತಾವರಣದಲ್ಲಿ ತೇಲಲ್ಪಡುವ ಸಣ್ಣ ಧೂಳಿನ ಕಣಗಳು (PM2•5) ಉಸಿರಾಟದ ಮೂಲಕ ಶ್ವಾಸಕೋಶದಲ್ಲಿ ಎಚ್ಚರಿಕೆಯ ಪ್ರತಿಕ್ರಿಯೆಯನ್ನು ಪ್ರಚೋದಿಸುತ್ತದೆ. ಅಲ್ಲದೆ ಕ್ಯಾನ್ಸರ್ ಉಂಟುಮಾಡುವ ರೂಪಾಂತರಗಳನ್ನು ಹೊಂದಿರುವ ಸುಪ್ತ ಕೋಶಗಳನ್ನು ಉರಿಯೂತಗೊಳಿಸುತ್ತದೆ ಮತ್ತು ಸಕ್ರಿಯಗೊಳಿಸುತ್ತದೆ. ಈ ಊಹೆಯನ್ನು ಪರೀಕ್ಷಿಸಲು,  ಸಂಶೋಧಕರು ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ ಕಂಡುಬರುವ ವಾಯು ಮಾಲಿನ್ಯದ ಸಾಂದ್ರತೆಗಳ ರೀತಿಯ EGFR (ಕ್ಯಾನ್ಸರ್ ಕಾರಕ ಪ್ರೊಟಿನ್) ರೂಪಾಂತರಿತ ಕೋಶಗಳೊಂದಿಗೆ ಇಲಿಗಳನ್ನು ಪರೀಕ್ಷೆಗೆ ಒಳಪಡಿಸಿದರು.

ಈ ವಾಯುಮಾಲಿನ್ಯದ ಪರಿಸ್ಥಿತಿಗೆ ಒಳಪಡಿಸದ ಇಲಿಗಳಿಗಿಂತ, ಮಾಲಿನ್ಯಕ್ಕೆ ತೆರೆದುಕೊಂಡ ಇಲಿಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಬರುವ ಸಾಧ್ಯತೆಯಿದೆ ಎಂದು ಅವರ ಸಂಶೋಧನೆಗಳು ತಿಳಿಯಪಡಿಸಿತು. ಈ ಸಂಶೋಧನೆಯು ಸಾರ್ವತ್ರಿಕ ಪ್ರಸ್ತುತತೆಯನ್ನು ಹೊಂದಿದೆ.  ಏಕೆಂದರೆ ಪ್ರಪಂಚದ ಹೆಚ್ಚಿನ ಜನಸಂಖ್ಯೆಯು PM2•5 ಗಾಗಿ ವಿಶ್ವ ಆರೋಗ್ಯ ಸಂಸ್ಥೆ (WHO) ಯ ವಾರ್ಷಿಕ ಮಿತಿಗಳನ್ನು ಮೀರಿದ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ.

ಇದಲ್ಲದೆ, ತಮ್ಮ ಸಂಶೋಧನಾ ಫಲಿತಾಂಶಗಳು ಇತರ ರೀತಿಯ ಕ್ಯಾನ್ಸರ್‌ಗಳಿಗೂ ಅನ್ವಯಿಸಬಹುದು ಎಂದು ತಂಡವು ವಾದಿಸಿದೆ. ಒಂದು ಪಿಎಂ2.5 ಧೂಳಿನ ಕಣವು 40 ಕೋವಿಡ್ ವೈರಸ್ ಗಳಿಗೆ ಸಮ ಎಂದು ಹೇಳುತ್ತಾರೆ ಕ್ಯಾನ್ಸರ್ ತಜ್ಞರು. ಈ ಮಹತ್ವದ ಸಂಶೋಧನಾ ಅಧ್ಯಯನವು ಧೂಮಪಾನಿಗಳಲ್ಲದವರ ಕ್ಯಾನ್ಸರ್ ಚಿಕಿತ್ಸೆಗೆ ಹೊಸ ವಿಧಾನಗಳಿಗೆ ದಾರಿ ಮಾಡಿಕೊಟ್ಟಿದೆ. ಮಾತ್ರವಲ್ಲದೆ ಜಗತ್ತಿನಾದ್ಯಂತ ವಾಯುಮಾಲಿನ್ಯದ ಗಂಭೀರ ಏರಿಕೆಯನ್ನು ತಡೆಯುವ ತೀವ್ರ ಅಗತ್ಯವನ್ನು ಎತ್ತಿ ತೋರಿಸಿದೆ.

“ಫ್ರಾನ್ಸಿಸ್ ಕ್ರಿಕ್ ಇನ್ಸಿಟ್ಯೂಟ್ ಹಾಗೂ ಯೂನಿರ್ವಸಿಟಿ ಕಾಲೇಜ್ ಲಂಡನ್ ಸಂಶೋಧಕರು ವಾಯುಮಾಲಿನ್ಯ ಶ್ವಾಸಕೋಶ ಕ್ಯಾನ್ಸರ್ ಬರುವ ಅಪಾಯವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದೆ. ಹೀಗಾಗಿ ಬಂಡವಾಳಶಾಹಿ ಹಾಗೂ ಕೈಗಾರಿಕರಣದಿಂದಾಗಿ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ವಿವಿಧ ರೀತಿಯ ಮಾಲಿನ್ಯಗಳು ಹೆಚ್ಚಾಗಿ ಮನುಷ್ಯನ ಆರೋಗ್ಯವು ಹದಗೆಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಇತರ ಸಂಸ್ಥೆಗಳು ಬೇರೆ ಬೇರೆ ಸಂದರ್ಭದಲ್ಲಿ ಹೇಳಿರುವಂತೆ ವಾತಾವರಣದಲ್ಲಿ ಮಾಲಿನ್ಯವನ್ನು ನಿಯಂತ್ರಣ ಮಾಡದೇ ಹೋದರೆ ಮೂವರಲ್ಲಿ ಒಬ್ಬರಿಗೆ ಕ್ಯಾನ್ಸರ್ ರೋಗ ಬರಬಹುದು. ಹಾಗಾಗಿ ಎಲ್ಲಾ ರೀತಿಯ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಬೆಂಗಳೂರಿನ ವಾಯುಮಾಲಿನ್ಯ ಪರಿಸ್ಥಿತಿಯೂ ಗಂಭೀರವಾಗಿದೆ.”

  • ಡಾ.ವಿಶಾಲ್ ರಾವ್, ಡೀನ್, ಎಚ್ ಸಿಜಿ ಕ್ಯಾನ್ಸರ್ ಆಸ್ಪತ್ರೆ

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

#AssemblyElection | ಬೀಳಗಿ ಕ್ಷೇತ್ರ ಬಿಟ್ಟು ನಾನೆಲ್ಲೂ ಹೋಗಲ್ಲ : ಸಚಿವ ಮುರುಗೇಶ್ ನಿರಾಣಿ ಸ್ಪಷ್ಟನೆ

Next Post

Defence News | 2600 ಕಿ.ಮೀ ಮೋಟಾರ್ ಸೈಕಲ್ ಯಾತ್ರೆ ಪೂರ್ಣಗೊಳಿಸಿದ ಸೇನೆಯ ಟೋರ್ನಡೋಸ್ ತಂಡ

Next Post

Defence News | 2600 ಕಿ.ಮೀ ಮೋಟಾರ್ ಸೈಕಲ್ ಯಾತ್ರೆ ಪೂರ್ಣಗೊಳಿಸಿದ ಸೇನೆಯ ಟೋರ್ನಡೋಸ್ ತಂಡ

BBMP NEWS | ಬಿಬಿಎಂಪಿ ಮುಖ್ಯ ಆಯುಕ್ತರಿಂದ ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಕಾಲ್ನಡಿಗೆಯ ಮುಖಾಂತರ ಸಮಸ್ಯೆಗಳ ಖುದ್ದು ಪರಿವೀಕ್ಷಣೆ

Please login to join discussion

Like Us on Facebook

Follow Us on Twitter

Recent News

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d