Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Agriculture News | 2023ನೇ ಇಸವಿ ಆರಂಭದಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮೇಳ ಆಯೋಜನೆ : ಕೃಷಿ ಸಚಿವ ಬಿ.ಸಿ.ಪಾಟೀಲ್

ಕೃಷಿ ಇಲಾಖೆಗೆ ಪ್ರಶಸ್ತಿಗಳ ಸುರಿಮಳೆ | ಈ ಮುಂಗಾರು ಹಂಗಾಮಿನಲ್ಲಿ 80.40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ, 26.26 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ

by Bengaluru Wire Desk
October 19, 2022
in News Wire
Reading Time: 1 min read
0

ಬೆಂಗಳೂರು, ಅ.19 www.bengaluruwire.com : ಮುಂದಿನ ವರ್ಷ ಜನವರಿ 20ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮೇಳ ಆಯೋಜನೆ ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಚಿವರು, 2018ರ ನಂತರ ಕೋವಿಡ್ ನಿಂದಾಗಿ ಸಿರಿಧಾನ್ಯ ಮೇಳ ಆಯೋಜನೆ ಸಾಧ್ಯವಾಗಿರಲಿಲ್ಲ. ಹಾಗಾಗಿ ಮುಂದಿನ ವರ್ಷದ ಆರಂಭದಲ್ಲೇ ಆಯೋಜನೆ ಮಾಡಲಾಗುತ್ತಿದೆ. ಜನವರಿ 6,7,8ರಂದು ಸಿರಿಧಾನ್ಯ ಮೇಳ ಮಾಡಬೇಕಿತ್ತು. ಅಖಿಲ ಭಾರತ ಸಾಹಿತ್ಯ ಕನ್ನಡ ಸಮ್ಮೇಳನ ಇರುವ ಕಾರಣ ಕಾರ್ಯಕ್ರಮವನ್ನು ಮುಂದೂಡಲಾಗಿದೆ‌ ಎಂದರು.

ರೈತರಿಗೆ ಸಿರಿ ಧಾನ್ಯದ ಬಗ್ಗೆ ಅರಿವು ಮೂಡಿಸಬೇಕಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಿರಿ ಧಾನ್ಯ ಬಗ್ಗೆ ಕಾಳಜಿ ಇದೆ.
ಪ್ರಧಾನಿಗಳು ಕೂಡ ಈ ಧಾನ್ಯದ ಮಹತ್ವವನ್ನು ತಿಳಿಸಿದ್ದಾರೆ.

ಸಿರಿಧಾನ್ಯ ಮೇಳದಲ್ಲಿ ವ್ಯಾಪಾರಸ್ಥರು, ರಫ್ತುದಾರರು ಸೇರಿದಂತೆ ಎಲ್ಲಾ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಲಕ ಪ್ರಧಾನಿಗೆ ಆಹ್ವಾನ ನೀಡುತ್ತೇವೆ. ಮೋದಿಯವರು ಆಗಮಿಸಿದಲ್ಲಿ ಕಾರ್ಯಕ್ರಮಕ್ಕೆ ಮತ್ತಷ್ಟು ಶಕ್ತಿ ತುಂಬಿದಂತಾಗುತ್ತದೆ.

ಕೃಷಿ ಇಲಾಖೆಗೆ ಪ್ರಶಸ್ತಿಗಳ ಸುರಿಮಳೆ :
2020-21 ರಿಂದ 2021-22ರ ಅವಧಿಯಲ್ಲಿ ರಾಜ್ಯವು ಕೃಷಿ ಅಭಿವೃದ್ಧಿಯಲ್ಲಿ ನೂತನ ಅವಿಷ್ಕಾರ, ತಂತ್ರಜ್ಞಾನ ಬಳಕೆ, ಆಹಾರ ಉತ್ಪಾದನೆ ಹೆಚ್ಚಳಕ್ಕಾಗಿ 2022ನೇ ಸಾಲಿನ ಔಟ್ ಲುಕ್ ಅಗ್ರಿ ಶೃಂಗಸಭೆಯ ಅತ್ಯುತ್ತಮ ರಾಜ್ಯ ಪ್ರಶಸ್ತಿ, ಸಿರಿಧಾನ್ಯಗಳ ಉತ್ತೇಜನಕ್ಕಾಗಿ ಪೋಷಕ್ ಅನಾಜ್ ಪ್ರಶಸ್ತಿ, ಭಾರತ ಸರ್ಕಾರದ ಕೃಷಿ ಮೂಲ ಸೌಕರ್ಯ ಪ್ರಶಸ್ತಿ, ಐಸಿಸಿಒಎ (ICCOA) ಜೈವಿಕ್ ಅವಾರ್ಡ್ ಪ್ರಶಸ್ತಿ ಲಭಿಸಿದೆ.

ಕೃಷಿ ಮೂಲಸೌಕರ್ಯ ನಿಧಿ ಬಳಕೆಯಲ್ಲಿ ದ್ವಿತೀಯ ಅತ್ಯುತ್ತಮ ರಾಜ್ಯ ಪ್ರಶಸ್ತಿ, ಸಿರಿಧಾನ್ಯ ಬೆಳೆ ಉತ್ಪಾದನೆಯಲ್ಲಿ ದೇಶದಲ್ಲೆ ಉತ್ತಮ ಸಾಧನೆ ಮಾಡಿದ ರಾಜ್ಯವೆಂದು ಐಸಿಸಿಒಎನಿಂದ ಜೈವಿಕ ಇಂಡಿಯಾ ಪ್ರಶಸ್ತಿ ಲಭಿಸಿದೆ. ರೈತರಿಂದ ಡಿಜಿಟಲ್ ಕ್ರಾಪ್ ಸರ್ವೆ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಡಿ ‘ನನ್ನ ಬೆಳೆ ನನ್ನ ಹಕ್ಕು’ ಘೋಷವಾಕ್ಯದ ಅಡಿಯಲ್ಲಿ ಉತ್ತಮ ಬೆಳೆ ಸಮೀಕ್ಷೆ ಮಾಡಿರುವುದರಿಂದ ರಾಜ್ಯದ ಕೃಷಿ ಇಲಾಖೆಗೆ ಪ್ರವೃತ್ತಿ ಸಂಯೋಜನಾ ಪ್ರಶಂಸನಾ ಪ್ರಶಸ್ತಿ ಬಂದಿದೆ ಎಂದು ಇಲಾಖೆಯ ಸಾಧನೆಯ ಬಗ್ಗೆ ಹೆಮ್ಮೆಯಿಂದ ಹೇಳಿದರು.

ಈ ಮುಂಗಾರು ಹಂಗಾಮಿನಲ್ಲಿ 80.40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ :
ಈ ಬಾರಿ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 82.67 ಲಕ್ಷ ಹೆಕ್ಟೇರ್ ಬಿತ್ತನೆಯ ಗುರಿಯನ್ನು ಹೊಂದಲಾಗಿತ್ತು. ಆದರೆ 80.40 ಲಕ್ಷ ಹೆಕ್ಟೇರ್ ನ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹಿಂಗಾರು ಹಂಗಾಮಿನಲ್ಲಿ 26.68 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಇದ್ದು, ಅ.10ರ ತನಕ ರಾಜ್ಯದಲ್ಲಿ 2.25 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಈ ಬಾರಿ ಮೊದಲನೇ ಜೂನ್ ನಿಂದ 30 ಸೆಪ್ಟೆಂಬರ್ ತನಕ ವಾಡಿಕೆ ಮಳೆ 852 ಮಿ.ಮೀ ಬದಲಿಗೆ ವಾಸ್ತವದಲ್ಲಿ 1019 ಮಿ.ಮೀ ಅಂದರೆ ಶೇ.20ರಷ್ಟು ಹೆಚ್ಚುವರಿ ಮಳೆಯಾಗಿದೆ.

ಇದರಿಂದಾಗಿ ರಾಜ್ಯದಲ್ಲಿ ನೆರೆ- ಮಳೆಹಾನಿಯಿಂದ 10ಲಕ್ಷ 29ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದೆ. ಇದುವರೆಗೆ ಸರ್ಕಾರದಿಂದ 1,020 ಕೋಟಿ ರೂ. ಪರಿಹಾರ ಕೊಡಲಾಗಿದೆ.

ಸಾಂದರ್ಭಿಕ ಚಿತ್ರ

ಮುಂಗಾರು ಹಂಗಾಮಿನಲ್ಲಿ 26.26 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ :
ಮುಂಗಾರು ಹಂಗಾಮಿನಲ್ಲಿ ರಾಜ್ಯವ್ಯಾಪಿ 26.76 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆಯಿತ್ತು. ಆ ಪೈಕಿ 26.26 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ ಮಾಡಲಾಗಿದೆ. ಹಿಂಗಾರು ಹಂಗಾಮಿನಲ್ಲಿ 17 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆಯಿತ್ತು. ಆ ಪೈಕಿ ಈವರೆಗೆ 1.69 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ ಮಾಡಲಾಗಿದೆ. 6.35 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ ಎಂದು ಸಚಿವರು ಹೇಳಿದರು.

ಎನ್ ಡಿಆರ್ ಎಫ್ (NDRF) ಪ್ರಕಾರ ಹೆಕ್ಟೇರ್‌ಗೆ 6,800ರೂ. ಇತ್ತು, ಸಿಎಂ ಜೊತೆ ಮಾತನಾಡಿ ಆ ಪರಿಹಾರದ ಮೊತ್ತವನ್ನು ಪ್ರತಿ ಹೆಕ್ಟೇರ್‌ಗೆ 13,500ರೂ. ಕೊಡಲಾಗುತ್ತಿದೆ ಎಂದು‌ ಮಾಹಿತಿ ನೀಡಿದರು.

164 ಕೃಷಿ ಸಂಜೀವಿನಿ ವಾಹನ ಬಿಡುಗಡೆ ಯೋಜನೆಯಡಿ ಈಗಾಗಲೇ ನೂರು ವಾಹನ ಬಿಡುಗಡೆಯಾಗಿದೆ. ಲ್ಯಾಂಡ್ ಟು ಲ್ಯಾಬ್ ಕಾರ್ಯಕ್ರಮ ಮಾಡುತ್ತೇವೆ. ರೈತ ಬೆಳೆದಿರೋ ಬೆಳೆ ಸಮಸ್ಯೆ ಇದ್ದಲ್ಲಿ, ಸಮಸ್ಯೆ ಪರಿಹಾರ ಕೊಡಲಾಗುವುದು‌ ಎಂದು ಸಚಿವರು ತಿಳಿಸಿದರು.

ಕೃಷಿ ಇಲಾಖೆ ಜಾಗೃತ ಕೋಶ ವರದಿ ಏನು ಹೇಳುತ್ತೆ?
ಕಳೆದ ಮೂರು ವರ್ಷದಲ್ಲಿ 28.57 ಕೋಟಿ ಕೃಷಿ ಪರಿಕರ ಜಪ್ತಿ ಮಾಡಲಾಗಿದೆ. 315 ಪ್ರಕರಣ ನ್ಯಾಯಾಲಯದಲ್ಲಿ ಮೊಕದ್ದಮೆ ಇದೆ. ಜೈವಿಕ ಉತ್ಪನ್ನದ ಹೆಸರಲ್ಲಿ ಕೀಟನಾಶಕ ಮಾರಾಟ ಮಾಡುತ್ತಿದ್ದು, 295 ಪ್ರಕರಣ ನ್ಯಾಯಾಲಯದಲ್ಲಿ ಮೊಕದ್ದಮೆ ಇದೆ. 248 ಪರವಾನಗಿ ಅಮಾನತ್ತು ಮಾಡಿ, 35 ಪರವಾನಗಿ ರದ್ದು ಮಾಡಲಾಗಿದೆ. 34 ಪ್ರಕರಣದಲ್ಲಿ 17.20 ಲಕ್ಷ ರೂ. ದಂಡ ಸರ್ಕಾರಕ್ಕೆ ಭರಿಸಲಾಗಿದೆ ಎಂದು ಸಚಿವ ಬಿ.ಸಿ.ಪಾಟೀಲ್ ಹೆಳಿದರು.

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ‌ನೇಮಕ ಬಗ್ಗೆ ಭಕ್ತರ ಸಭೆ ಅಗತ್ಯವಿದೆ :
ಚಿತ್ರದುರ್ಗದ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ‌ನೇಮಕ ವಿಚಾರದ ಕುರಿತಂತೆ ಚಿತ್ರದುರ್ಗ ಉಸ್ತುವಾರಿ ಸಚಿವ ಬಿ. ಸಿ ಪಾಟೀಲ್, ಮುರುಘಾ ಮಠ, ಸಮುದಾಯ ಹಾಗೂ ಸ್ವಾಮೀಜಿ ಮಧ್ಯೆ ಇರುವ ವಿಷಯ ಇದು. ಸ್ವಾಮೀಜಿ ಅವರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಪ್ರಕರಣ ದಾಖಲಾಗಿದೆ. ಆ ಬಗ್ಗೆ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಠದ ದೈನಂದಿನ ಕಾರ್ಯಚಟುವಟಿಕೆಗಳಿಗೆ ಆಡಳಿತಾಧಿಕಾರಿ ನೇಮಕದ ಬಗ್ಗೆ ಮಠದ ಭಕ್ತರ ಸಭೆ ಮಾಡಿ ನಿರ್ಣಯ ‌ಮಾಡಬೇಕು. ಆ ಮೇಲೆ ಸರ್ಕಾರ ಪ್ರವೇಶಿಸಲು ಸಾಧ್ಯ. ಮೊದಲು ಮಠದ ಭಕ್ತಾದಿಗಳ ಅಭಿಪ್ರಾಯ ಮುಖ್ಯ. ಬಳಿಕ ಆಡಳಿತ ಅಧಿಕಾರಿ ನೇಮಕ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತೆ ಎಂದರು.

ಕಾಂಗ್ರೆಸ್ SAY CM ಆರೋಪ ವಿಚಾರ :
ಭೂತದ ಬಾಯಲ್ಲಿ ಭಗವದ್ಗೀತೆ ಅಂತಾರಲ್ಲ ಹಾಗೆ ಕಾಂಗ್ರೆಸ್ ಕಥೆ. ಅವರಿಗೆ ಮಾಡಲು ಕೆಲಸ ಇಲ್ಲ.‌ಬಿಜೆಪಿ ಅಭಿವೃದ್ಧಿ ಕಾರ್ಯ ನೋಡಿ ಸಹಿಸಲಾಗುತ್ತಿಲ್ಲ. ಮುಂದೆ ಚುನಾವಣೆಯಲ್ಲಿ ಅವರಿಗೆ ನೆಲೆ ಇಲ್ಲದಂತಾಗಲಿದೆ ಎಂದು ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

ಪಕ್ಷದ ಪ್ರಣಾಳಿಕೆ ಈಡೇರಿಕೆ ಮಾಡುತ್ತಿದ್ದೇವೆ :
ಬಿಜೆಪಿಯ ಚುನಾವಣಾ ಪ್ರಣಾಳಿಕೆ ಈಡೇರಿಕೆ ಕುರಿಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವ ಬಿ.ಸಿ.ಪಾಟೀಲ್, ನಾವು ಏನು ಮಾಡಿದ್ದೇವೆ ಅಂತ ದಾಖಲೆ ಸಹಿತ ಹೇಳುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ರೈತರಿಗೆ 12 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ. ರೈತ ವಿದ್ಯಾನಿಧಿ ಅಡಿಯಲ್ಲಿ ಹಣ ನೀಡಿದ್ದೇವೆ. ಬರೀ ಅಹಿಂದ ಅಂತ ಹೇಳಿದರು. ಇಂದು ಪರಿಶಿಷ್ಟರಿಗೆ ಮೀಸಲಾತಿ ನೀಡಿದ್ದೇವೆ. ಅವರು ಬರೀ ಹೇಳಿಕೊಂಡು ಹೋಗಿದ್ದು ಮಾತ್ರ. ರೈತರಿಗೆ ಡೀಸೆಲ್ ಕೊಡುವ ಯೋಜನೆ ನೀಡಿದ್ದೇವೆ. ರೈತರಿಗೆ ಮಾತ್ರವಲ್ಲದೆ, ಕೃಷಿ, ಕಾರ್ಮಿಕರ ಮಕ್ಕಳಿಗೂ ವುದ್ಯಾನಿಧಿ ಬಿಡುಗಡೆ ಮಾಡಿದ್ದೇವೆ. ಕಾಂಗ್ರೆಸ್ ಬೇಡ ಅಂತಲೇ ಆ ಪಕ್ಷಕ್ಕೆ ಡೈವರ್ಸ್ ನೀಡಿ ಹೊರ ಬಂದಿದ್ದೇನೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೃಷಿ ಇಲಾಖೆ ಆಯುಕ್ತ ಬಿ.ಶರತ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

KIAL AIRPORT | 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಉದ್ಘಾಟನೆ ಹಿನ್ನಲೆ ; ಅ.21ರಿಂದ ರಾಜ್ಯದೆಲ್ಲಡೆ ಮೃತ್ತಿಕೆ ಸಂಗ್ರಹ

Next Post

BBMP NEWS | ಮಾರುತಿ ಮಂದಿರ ವಾರ್ಡ್ ಶ್ರೀ ಕಾಂತಿವೀರ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರಕ್ಕೆ ಚಾಲನೆ

Next Post

BBMP NEWS | ಮಾರುತಿ ಮಂದಿರ ವಾರ್ಡ್ ಶ್ರೀ ಕಾಂತಿವೀರ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರಕ್ಕೆ ಚಾಲನೆ

ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಯೊಂದರ ಮೇಲೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಸಿಎಂ ಬಸವರಾಜ ಬೊಮ್ಮಾಯಿ ಭಾವಚಿತ್ರವಿಟ್ಟು ಕಾಂಗ್ರೆಸ್ ಗುರುವಾರ ವಿನೂತನ ಪ್ರತಿಭಟನೆ ನಡೆಸಿತು.

Bangalore Pothole Protest | ಬೆಂಗಳೂರಿನ ರಸ್ತೆಗುಂಡಿಗಳಲ್ಲಿ ಮಂತ್ರಿ- ಸಂಸದರ ಫೊಟೋ ಇಟ್ಟು ವಿಶಿಷ್ಟ ಪ್ರತಿಭಟನೆ ನಡೆಸಿದ ಕಾಂಗ್ರೆಸ್

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group