Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#SolarEclipse2022 | ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣ ರಾಜ್ಯದ ಈ ಪ್ರಮುಖ ಸ್ಥಳಗಳಲ್ಲಿ ಎಷ್ಟು ಹೊತ್ತಿಗೆ ಕಂಡು ಬರಲಿದೆ ? ಸೂರ್ಯಗ್ರಹಣ ಸಂದರ್ಭದಲ್ಲಿ ಹೀಗೆ ಮಾಡಿದರೆ ನಿಮಗೆ ಒಳಿತಾಗುತ್ತೆ..!!

ಎಲ್ಲೆಲ್ಲಿ ಪೂರ್ಣ ಸೂರ್ಯಗ್ರಹಣ ಗೋಚರವಾಗುತ್ತೆ? ಯಾವ ರಾಶಿಯವರಿಗೆ ಶುಭಫಲ, ಮಿಶ್ರಫಲ ಹಾಗೂ ಅಶುಭ ಫಲಗಳಿವೆ? ಸೂರ್ಯಗ್ರಹಣ ಸಂದರ್ಭದಲ್ಲಿ ನಾವು ಯಾವ ರೀತಿ ಎಚ್ಚರಿಕೆವಹಿಸಬೇಕು? ಬೆಂಗಳೂರು ವೈರ್ ನೀಡುತ್ತಿದೆ ಸಂಪೂರ್ಣ ಮಾಹಿತಿ.

by Bengaluru Wire Desk
October 21, 2022
in News Wire, Public interest
Reading Time: 2 mins read
0
ಸೂರ್ಯಗ್ರಹಣದ ಸಾಂದರ್ಭಿಕ ಚಿತ್ರ

ಸೂರ್ಯಗ್ರಹಣದ ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.21 www.bengaluruwire.com : ಕರ್ನಾಟಕದಲ್ಲಿ ಅ.25ರಂದು ಪಾರ್ಶ್ವ ಸೂರ್ಯಗ್ರಹಣ ಕಂಡು ಬರಲಿದೆ. ವರ್ಷದ ಕೊನೆಯ ಭಾಗಶಃ ಸೂರ್ಯಗ್ರಹಣ ಇದಾಗಿದ್ದು, ದೀಪಾವಳಿಯಂದೇ ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣ ಗೋಚರಿಸಲಿದೆ.

ಭಾರತದಲ್ಲಿ ಗ್ರಹಣವು ಮಧ್ಯಾಹ್ನದ ನಂತರ ಸೂರ್ಯಾಸ್ತದ ಮೊದಲು ಕಾಣಿಸಿಕೊಳ್ಳಲಿದ್ದು, ಇದು ಹೆಚ್ಚಿನ ಸ್ಥಳಗಳಲ್ಲಿ ಕಂಡುಬರುತ್ತದೆ. ಆದಾಗ್ಯೂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ  (ಐಜ್ವಾಲ್, ದಿಬ್ರುಗಢ್, ಇಂಫಾಲ್, ಇಟಾನಗರ, ಕೊಹಿಮಾ, ಸಿಬ್ಸಾಗರ್, ಸಿಲ್ಚಾರ್, ತಮೆಲಾಂಗ್ ಇತ್ಯಾದಿ) ಇದನ್ನು ನೋಡಲು ಸಾಧ್ಯವಿಲ್ಲ. ಸೂರ್ಯಾಸ್ತದ ನಂತರ ಗ್ರಹಣದ ಅಂತ್ಯವು ಭಾರತದಲ್ಲಿ ಗೋಚರಿಸುವುದಿಲ್ಲ.

ದೇಶದ ವಾಯವ್ಯ ಭಾಗಗಳಲ್ಲಿ ಗರಿಷ್ಠ ಗ್ರಹಣದ ಸಮಯದಲ್ಲಿ ಚಂದ್ರನು ಸೂರ್ಯನನ್ನು ಆವರಿಸಿದ ಪ್ರಮಾಣವು ಸರಿಸುಮಾರು ಶೇಕಡ 40 ಮತ್ತು 50ರ ನಡುವೆ ಇರುತ್ತದೆ. ದೇಶದ ಇತರ ಭಾಗಗಳಲ್ಲಿ, ಶೇಕಡಾವಾರು ವ್ಯಾಪ್ತಿಯು ಮೇಲಿನ ಮೌಲ್ಯಗಳಿಗಿಂತ ಕಡಿಮೆ ಇರುತ್ತದೆ.

ದೆಹಲಿ ಮತ್ತು ಮುಂಬೈನಲ್ಲಿ, ಗ್ರಹಣದ ಪರ್ವ(ಉತ್ತುಂಗ) ಸಮಯದಲ್ಲಿ ಚಂದ್ರನು ಸೂರ್ಯನನ್ನು ಆವರಿಸಿಕೊಳ್ಳುವ ಶೇಕಡಾವಾರು ಪ್ರಮಾಣ ಕ್ರಮವಾಗಿ 44% ಮತ್ತು 24% ಇರುತ್ತದೆ. ಗ್ರಹಣ ಆರಂಭದಿಂದ ಸೂರ್ಯಾಸ್ತಮಾನದವರೆಗೆ ದೆಹಲಿ ಮತ್ತು ಮುಂಬೈನಲ್ಲಿ ಕ್ರಮವಾಗಿ 1 ಗಂಟೆ 13 ನಿಮಿಷ ಮತ್ತು 1 ಗಂಟೆ 19 ನಿಮಿಷ ಕಾಣಿಸಿಕೊಳ್ಳಲಿದೆ. ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಸೂರ್ಯಾಸ್ತದಿಂದ ಸೂರ್ಯಾಸ್ತಮಾನದವರೆಗೆ ಗ್ರಹಣದ ಅವಧಿ ಕ್ರಮವಾಗಿ 31 ನಿಮಿಷ ಮತ್ತು 12 ನಿಮಿಷ ಇರುತ್ತದೆ.

ವಿಶ್ವದ ವಿವಿಧ ಭಾಗಗಳಲ್ಲಿ ಸೂರ್ಯಗ್ರಹಣ ಗೋಚರ ಕುರಿತ ಗ್ರಾಫಿಕ್ ಚಿತ್ರ

ಎಲ್ಲಿ ಸ್ಪಷ್ಟವಾಗಿ ಸೂರ್ಯ ಗ್ರಹಣ ಗೋಚರವಾಗುತ್ತೆ?

ಯುರೋಪ್, ಮಧ್ಯಪ್ರಾಚ್ಯ, ಆಫ್ರಿಕಾದ ಈಶಾನ್ಯ ಭಾಗಗಳು, ಪಶ್ಚಿಮ ಏಷ್ಯಾ, ಉತ್ತರ ಅಟ್ಲಾಂಟಿಕ್ ಸಾಗರ ಮತ್ತು ಉತ್ತರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಗ್ರಹಣ ಸ್ಪಷ್ಟವಾಗಿ ಗೋಚರಿಸುತ್ತದೆ.

ಸೂರ್ಯಗ್ರಹಣ ವಿದ್ಯಮಾನ ಹೇಗೆ ಸಂಭವಿಸುತ್ತದೆ?

ಮುಂದಿನ ಸೂರ್ಯಗ್ರಹಣವು 2027 ಆಗಸ್ಟ್ 2ರಂದು ಭಾರತದಲ್ಲಿ ಗೋಚರಿಸಲಿದೆ. ಇದು ಪರಿಪೂರ್ಣ ಸೂರ್ಯಗ್ರಹಣವಾಗಿರಲಿದೆ. ಆದರೆ, ಇದು ಭಾರತದ ಎಲ್ಲಾ ಭಾಗಗಳಲ್ಲೂ  ಭಾಗಶಃ ಸೂರ್ಯಗ್ರಹಣದಂತೆ ಗೋಚರಿಸುತ್ತದೆ. ಅಮಾವಾಸ್ಯೆಯ ದಿನದಂದು ಚಂದ್ರನು ಪೃಥ್ವಿ ಮತ್ತು ಸೂರ್ಯನ ನಡುವೆ ಬಂದಾಗ ಮತ್ತು ಈ ಎಲ್ಲಾ 3 ಗ್ರಹಗಳು  ಜೋಡಣೆಯಾದಾಗ(ಸಾಲುಗೂಡಿದಾಗ) ಸೂರ್ಯಗ್ರಹಣ ಸಂಭವಿಸುತ್ತದೆ. ಚಂದ್ರ ಮುದ್ರಿಕೆಯು(ಡಿಸ್ಕ್) ಸೌರ ಮುದ್ರಿಕೆಯನ್ನು ಭಾಗಶಃ ಆವರಿಸಿದಾಗ ಭಾಗಶಃ ಸೂರ್ಯಗ್ರಹಣ ಸಂಭವಿಸುತ್ತದೆ.

ಬರಿಗಣ್ಣಿನಲ್ಲಿ ಸೂರ್ಯಗ್ರಹಣ ನೋಡದಿರಿ ಎಚ್ಚರ…!!

ಸೂರ್ಯಗ್ರಹಣವನ್ನು ಕ್ಷಣ ಮಾತ್ರಕ್ಕೂ ಬರಿಗಣ್ಣಿನಿಂದ ನೋಡಬಾರದು. ಚಂದ್ರನು ಸೂರ್ಯನ ಹೆಚ್ಚಿನ ಭಾಗವನ್ನು ಆವರಿಸಿದಾಗಲೂ ಇದು ಕಣ್ಣುಗಳಿಗೆ ಶಾಶ್ವತ ಹಾನಿ ಉಟುಮಾಡುತ್ತದೆ, ಕುರುಡುತನಕ್ಕೆ ಕಾರಣವಾಗುತ್ತದೆ. ಅಲ್ಯೂಮಿನೈಸ್ಡ್ ಮೈಲಾರ್, ಕಪ್ಪು ಪಾಲಿಮರ್, ಶೇಡ್ ಸಂಖ್ಯೆ 14ರ ವೆಲ್ಡಿಂಗ್ ಗ್ಲಾಸ್‌ನಂತಹ ಸಮರ್ಪಕ ಫಿಲ್ಟರ್ ಬಳಸಬೇಕು ಅಥವಾ ದೂರದರ್ಶಕದ ಮೂಲಕ ಬಿಳಿ ಹಲಗೆಯಲ್ಲಿ ಸೂರ್ಯನ ಚಿತ್ರ ಪ್ರಕ್ಷೇಪಿಸುವ ಮೂಲಕ ಸೂರ್ಯಗ್ರಹಣ ವೀಕ್ಷಿಸುವುದು ಸುರಕ್ಷಿತ ವಿಧಾನವಾಗಿದೆ.

ಕರ್ನಾಟಕದ ರಾಜಧಾನಿ ಬೆಂಗಳೂರು, ಮೈಸೂರು, ಧಾರವಾಡ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಮಂಗಳೂರು ಹಾಗೂ ಕಾರವಾರ ಸ್ಥಳಗಳಲ್ಲಿ ಸೂರ್ಯಗ್ರಹಣ ಪ್ರಾರಂಭ, ಅದರ ಉತ್ತುಂಗದ ಕ್ಷಣ ಹಾಗೂ ಸೂರ್ಯಸ್ತದ ಸಮಯ ಈ ಕೆಳಕಂಡಂತಿದೆ.

ಬೆಂಗಳೂರಿನ ನೆಹರು ಪ್ಲಾನಿಟೋರಿಯಮ್ ಸಿದ್ಧಪಡಿಸಿರುವ ಮಾಹಿತಿ

ಸೂರ್ಯ ಗ್ರಹಣ ಕಾಲದಲ್ಲಿ ಆಚರಣೆ ಹೇಗೆ?

ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಸೂರ್ಯಗ್ರಹಣದ ಕುರಿತಂತೆ ಪ್ರಕಟಣೆ ನೀಡಿದ್ದು, ಆ ಪ್ರಕಾರ ಶ್ರೀ ಶುಭಕೃತ್ ನಾಮ ಸಂವತ್ಸರ ಅಶ್ವೀಜ ಕೃಷ್ಣ ಅಮವಾಸ್ಯೆ ಅ.25ರ ಮಂಗಳವಾರ ಚಿತ್ತಾ ನಕ್ಷತ್ರ ತುಲಾ ರಾಶಿಯಲ್ಲಿ ಸೂರ್ಯನಿಗೆ ಕೇತುಗ್ರಸ್ತ ಖಂಡಗ್ರಾಸ ಗ್ರಹಣವು ಸಂಭವಿಸಲಿದೆ. ಅ.25ರ ಸೂರ್ಯೋದಯದಿಂದಲೇ ವೇದಾರಂಭವಾಗುವುದು. ಆದುದರಿಂದ ಈ ದಿನ ಪೂರ್ತಿ ಭೋಜನಕ್ಕೆ ಅವಕಾಶವಿರುವುದಿಲ್ಲ. ಶ್ರೀ ಮಠದಲ್ಲಿ ಶ್ರೀಗಳ ಒಪ್ಪಿಗೆ ಮೇರೆಗೆ ಸೂರ್ಯಗ್ರಹಣ ಶಾಂತಿ ಹೋಮ ಏರ್ಪಡಿಸಿದೆ.

ಯಾವೆಲ್ಲಾ ರಾಶಿಗಳಿಗೆ ಶುಭ, ಮಿಶ್ರ ಹಾಗೂ ಅಶುಭ ಫಲಗಳಿವೆ?

ಗ್ರಹಣ ಸ್ಪರ್ಶ ಕಾಲ ಸಂಜೆ 5.02ಕ್ಕೆ, ಗ್ರಹಣ ಮಧ್ಯಕಾಲ ಸಂಜೆ  5.47ಕ್ಕೆ, ಗ್ರಹಣ ಮೋಕ್ಷ ಕಾಲ ಸಂಜೆ 6.20ಕ್ಕೆ ಆಗಲಿದೆ. ಧನು, ಮಕರ, ವೃಷಭ ಹಾಗೂ ಸಿಂಹ ರಾಶಿಗೆ ಶುಭಫಲವಿದೆ. ಕನ್ಯಾ, ಕುಂಭ, ಮೇಷ ಹಾಗೂ ಮಿಥುನ ರಾಶಿಗೆ ಮಿಶ್ರ ಫಲವಿದೆ. ಅದೇ ರೀತಿ ತುಲಾ, ವೃಶ್ಚಿಕ, ಮೀನಾ ಮತ್ತು ಕರ್ಕಾಟಕ ರಾಶಿಯವರಿಗೆ ಅಶುಭ ಫಲವಿದೆ ಎಂದು ತಿಳಿಸಲಾಗಿದೆ.

ಊಟ- ತಿಂಡಿ ಸೇವನೆ ಯಾರಿಗೆ ವಿನಾಯಿತಿ?

ಬಾಲಕರು, ವೃದ್ಧರು, ಗರ್ಭಿಣಿ ಸ್ತ್ರೀಯರು, ಅಶಕ್ತರು, ಅನಾರೋಗ್ಯ ಪೀಡಿತರು ಸೇರಿದಂತೆ ಮೊದಲಾದವರು ಅ.25ರ ಮಧ್ಯಾಹ್ನ  2 ಗಂಟೆಯವರೆಗೆ ಅಲ್ಪಾಹಾರವನ್ನು ಮಾಡಬಹುದು. ಮತ್ತು ಗ್ರಹಣ ಬಿಟ್ಟ ಮೇಲೆ ಸ್ನಾನ ಮಾಡಿ ಅಲ್ಪಾಹಾರವನ್ನು ತೆಗೆದುಕೊಳ್ಳಬಹುದು.

ಗ್ರಹಣ ಸಂದರ್ಭದಲ್ಲಿ ಸ್ನಾನ- ಹೋಮ :

ಗ್ರಹಣ ದೋಷ ಇರುವವರು ಸೂರ್ಯ ಬಿಂಬ ಮತ್ತು ಗೋಧಿಯನ್ನು ದಾನ ಮಾಡಬೇಕು. ಗ್ರಹಣ ಆರಂಭವಾಗುತ್ತಿದ್ದಂತೆ ಹಾಗೂ ಗ್ರಹಣ ಬಿಟ್ಟ ಮೇಲೆ ಉಟ್ಟ ಬಟ್ಟೆಯಲ್ಲೇ ಸ್ನಾನ ಮಾಡಬೇಕು. ಗ್ರಹಣ ಸ್ಪರ್ಶ ಸಮಯದಲ್ಲಿ ಮಾಡುವ ಸ್ನಾನವು ಲಕ್ಷ ಸ್ನಾನಗಳ ಫವನ್ನು, ಮೇಕ್ಷಾ ನಂತರ ಮಾಡುವ ಸ್ನಾನವು ಅನಂತ ಸ್ನಾನಗಳ ಫಲವನ್ನು ಕೊಡುತ್ತದೆ. ಗ್ರಹಣ ಮಧ್ಯದಲ್ಲಿ ಮಾಡುವ ಹೋಮವು ಕೋಟಿ ಹೋಮಗಳ ಫಲವನ್ನು ಕೊಡುತ್ತದೆ ಎಂದು ಶ್ರೀಮಠ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Global Investors Meet 2022 | ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕರ್ನಾಟಕ ಸಜ್ಜಾಗುತ್ತಿದೆ: ಸಚಿವ ಮುರಗೇಶ್ ನಿರಾಣಿ

Next Post

Mysore Maharani College Lab Collapse | ಭಾರೀ ಮಳೆ ಹಿನ್ನಲೆಯಲ್ಲಿ ಧರಾಶಾಹಿಯಾಯಿತು ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ : ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಬಚಾವ್ – ಇಲ್ಲಿದೆ Live ವಿಡಿಯೋ

Next Post
ಮೈಸೂರಿನ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿರುವ ಚಿತ್ರ

Mysore Maharani College Lab Collapse | ಭಾರೀ ಮಳೆ ಹಿನ್ನಲೆಯಲ್ಲಿ ಧರಾಶಾಹಿಯಾಯಿತು ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ : ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಬಚಾವ್ - ಇಲ್ಲಿದೆ Live ವಿಡಿಯೋ

ಇಡಿ ಶೋಧ ಕಾರ್ಯಾಚರಣೆ : ಚೈನಾ ಪ್ರಜೆಗಳಿಂದ ನಕಲಿ ವ್ಯಾಪಾರಿ ಐಡಿ ಮೂಲಕ ಸಾಲ ನೀಡಿ ಕಿರುಕುಳ ; 78 ಕೋಟಿ ರೂ. ವಶ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d