Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#SolarEclipse2022 | ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣ ರಾಜ್ಯದ ಈ ಪ್ರಮುಖ ಸ್ಥಳಗಳಲ್ಲಿ ಎಷ್ಟು ಹೊತ್ತಿಗೆ ಕಂಡು ಬರಲಿದೆ ? ಸೂರ್ಯಗ್ರಹಣ ಸಂದರ್ಭದಲ್ಲಿ ಹೀಗೆ ಮಾಡಿದರೆ ನಿಮಗೆ ಒಳಿತಾಗುತ್ತೆ..!!

ಎಲ್ಲೆಲ್ಲಿ ಪೂರ್ಣ ಸೂರ್ಯಗ್ರಹಣ ಗೋಚರವಾಗುತ್ತೆ? ಯಾವ ರಾಶಿಯವರಿಗೆ ಶುಭಫಲ, ಮಿಶ್ರಫಲ ಹಾಗೂ ಅಶುಭ ಫಲಗಳಿವೆ? ಸೂರ್ಯಗ್ರಹಣ ಸಂದರ್ಭದಲ್ಲಿ ನಾವು ಯಾವ ರೀತಿ ಎಚ್ಚರಿಕೆವಹಿಸಬೇಕು? ಬೆಂಗಳೂರು ವೈರ್ ನೀಡುತ್ತಿದೆ ಸಂಪೂರ್ಣ ಮಾಹಿತಿ.

by Bengaluru Wire Desk
October 21, 2022
in News Wire, Public interest
Reading Time: 2 mins read
0
ಸೂರ್ಯಗ್ರಹಣದ ಸಾಂದರ್ಭಿಕ ಚಿತ್ರ

ಸೂರ್ಯಗ್ರಹಣದ ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.21 www.bengaluruwire.com : ಕರ್ನಾಟಕದಲ್ಲಿ ಅ.25ರಂದು ಪಾರ್ಶ್ವ ಸೂರ್ಯಗ್ರಹಣ ಕಂಡು ಬರಲಿದೆ. ವರ್ಷದ ಕೊನೆಯ ಭಾಗಶಃ ಸೂರ್ಯಗ್ರಹಣ ಇದಾಗಿದ್ದು, ದೀಪಾವಳಿಯಂದೇ ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣ ಗೋಚರಿಸಲಿದೆ.

ಭಾರತದಲ್ಲಿ ಗ್ರಹಣವು ಮಧ್ಯಾಹ್ನದ ನಂತರ ಸೂರ್ಯಾಸ್ತದ ಮೊದಲು ಕಾಣಿಸಿಕೊಳ್ಳಲಿದ್ದು, ಇದು ಹೆಚ್ಚಿನ ಸ್ಥಳಗಳಲ್ಲಿ ಕಂಡುಬರುತ್ತದೆ. ಆದಾಗ್ಯೂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ  (ಐಜ್ವಾಲ್, ದಿಬ್ರುಗಢ್, ಇಂಫಾಲ್, ಇಟಾನಗರ, ಕೊಹಿಮಾ, ಸಿಬ್ಸಾಗರ್, ಸಿಲ್ಚಾರ್, ತಮೆಲಾಂಗ್ ಇತ್ಯಾದಿ) ಇದನ್ನು ನೋಡಲು ಸಾಧ್ಯವಿಲ್ಲ. ಸೂರ್ಯಾಸ್ತದ ನಂತರ ಗ್ರಹಣದ ಅಂತ್ಯವು ಭಾರತದಲ್ಲಿ ಗೋಚರಿಸುವುದಿಲ್ಲ.

ದೇಶದ ವಾಯವ್ಯ ಭಾಗಗಳಲ್ಲಿ ಗರಿಷ್ಠ ಗ್ರಹಣದ ಸಮಯದಲ್ಲಿ ಚಂದ್ರನು ಸೂರ್ಯನನ್ನು ಆವರಿಸಿದ ಪ್ರಮಾಣವು ಸರಿಸುಮಾರು ಶೇಕಡ 40 ಮತ್ತು 50ರ ನಡುವೆ ಇರುತ್ತದೆ. ದೇಶದ ಇತರ ಭಾಗಗಳಲ್ಲಿ, ಶೇಕಡಾವಾರು ವ್ಯಾಪ್ತಿಯು ಮೇಲಿನ ಮೌಲ್ಯಗಳಿಗಿಂತ ಕಡಿಮೆ ಇರುತ್ತದೆ.

ದೆಹಲಿ ಮತ್ತು ಮುಂಬೈನಲ್ಲಿ, ಗ್ರಹಣದ ಪರ್ವ(ಉತ್ತುಂಗ) ಸಮಯದಲ್ಲಿ ಚಂದ್ರನು ಸೂರ್ಯನನ್ನು ಆವರಿಸಿಕೊಳ್ಳುವ ಶೇಕಡಾವಾರು ಪ್ರಮಾಣ ಕ್ರಮವಾಗಿ 44% ಮತ್ತು 24% ಇರುತ್ತದೆ. ಗ್ರಹಣ ಆರಂಭದಿಂದ ಸೂರ್ಯಾಸ್ತಮಾನದವರೆಗೆ ದೆಹಲಿ ಮತ್ತು ಮುಂಬೈನಲ್ಲಿ ಕ್ರಮವಾಗಿ 1 ಗಂಟೆ 13 ನಿಮಿಷ ಮತ್ತು 1 ಗಂಟೆ 19 ನಿಮಿಷ ಕಾಣಿಸಿಕೊಳ್ಳಲಿದೆ. ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಸೂರ್ಯಾಸ್ತದಿಂದ ಸೂರ್ಯಾಸ್ತಮಾನದವರೆಗೆ ಗ್ರಹಣದ ಅವಧಿ ಕ್ರಮವಾಗಿ 31 ನಿಮಿಷ ಮತ್ತು 12 ನಿಮಿಷ ಇರುತ್ತದೆ.

ವಿಶ್ವದ ವಿವಿಧ ಭಾಗಗಳಲ್ಲಿ ಸೂರ್ಯಗ್ರಹಣ ಗೋಚರ ಕುರಿತ ಗ್ರಾಫಿಕ್ ಚಿತ್ರ

ಎಲ್ಲಿ ಸ್ಪಷ್ಟವಾಗಿ ಸೂರ್ಯ ಗ್ರಹಣ ಗೋಚರವಾಗುತ್ತೆ?

ಯುರೋಪ್, ಮಧ್ಯಪ್ರಾಚ್ಯ, ಆಫ್ರಿಕಾದ ಈಶಾನ್ಯ ಭಾಗಗಳು, ಪಶ್ಚಿಮ ಏಷ್ಯಾ, ಉತ್ತರ ಅಟ್ಲಾಂಟಿಕ್ ಸಾಗರ ಮತ್ತು ಉತ್ತರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಗ್ರಹಣ ಸ್ಪಷ್ಟವಾಗಿ ಗೋಚರಿಸುತ್ತದೆ.

ಸೂರ್ಯಗ್ರಹಣ ವಿದ್ಯಮಾನ ಹೇಗೆ ಸಂಭವಿಸುತ್ತದೆ?

ಮುಂದಿನ ಸೂರ್ಯಗ್ರಹಣವು 2027 ಆಗಸ್ಟ್ 2ರಂದು ಭಾರತದಲ್ಲಿ ಗೋಚರಿಸಲಿದೆ. ಇದು ಪರಿಪೂರ್ಣ ಸೂರ್ಯಗ್ರಹಣವಾಗಿರಲಿದೆ. ಆದರೆ, ಇದು ಭಾರತದ ಎಲ್ಲಾ ಭಾಗಗಳಲ್ಲೂ  ಭಾಗಶಃ ಸೂರ್ಯಗ್ರಹಣದಂತೆ ಗೋಚರಿಸುತ್ತದೆ. ಅಮಾವಾಸ್ಯೆಯ ದಿನದಂದು ಚಂದ್ರನು ಪೃಥ್ವಿ ಮತ್ತು ಸೂರ್ಯನ ನಡುವೆ ಬಂದಾಗ ಮತ್ತು ಈ ಎಲ್ಲಾ 3 ಗ್ರಹಗಳು  ಜೋಡಣೆಯಾದಾಗ(ಸಾಲುಗೂಡಿದಾಗ) ಸೂರ್ಯಗ್ರಹಣ ಸಂಭವಿಸುತ್ತದೆ. ಚಂದ್ರ ಮುದ್ರಿಕೆಯು(ಡಿಸ್ಕ್) ಸೌರ ಮುದ್ರಿಕೆಯನ್ನು ಭಾಗಶಃ ಆವರಿಸಿದಾಗ ಭಾಗಶಃ ಸೂರ್ಯಗ್ರಹಣ ಸಂಭವಿಸುತ್ತದೆ.

ಬರಿಗಣ್ಣಿನಲ್ಲಿ ಸೂರ್ಯಗ್ರಹಣ ನೋಡದಿರಿ ಎಚ್ಚರ…!!

ಸೂರ್ಯಗ್ರಹಣವನ್ನು ಕ್ಷಣ ಮಾತ್ರಕ್ಕೂ ಬರಿಗಣ್ಣಿನಿಂದ ನೋಡಬಾರದು. ಚಂದ್ರನು ಸೂರ್ಯನ ಹೆಚ್ಚಿನ ಭಾಗವನ್ನು ಆವರಿಸಿದಾಗಲೂ ಇದು ಕಣ್ಣುಗಳಿಗೆ ಶಾಶ್ವತ ಹಾನಿ ಉಟುಮಾಡುತ್ತದೆ, ಕುರುಡುತನಕ್ಕೆ ಕಾರಣವಾಗುತ್ತದೆ. ಅಲ್ಯೂಮಿನೈಸ್ಡ್ ಮೈಲಾರ್, ಕಪ್ಪು ಪಾಲಿಮರ್, ಶೇಡ್ ಸಂಖ್ಯೆ 14ರ ವೆಲ್ಡಿಂಗ್ ಗ್ಲಾಸ್‌ನಂತಹ ಸಮರ್ಪಕ ಫಿಲ್ಟರ್ ಬಳಸಬೇಕು ಅಥವಾ ದೂರದರ್ಶಕದ ಮೂಲಕ ಬಿಳಿ ಹಲಗೆಯಲ್ಲಿ ಸೂರ್ಯನ ಚಿತ್ರ ಪ್ರಕ್ಷೇಪಿಸುವ ಮೂಲಕ ಸೂರ್ಯಗ್ರಹಣ ವೀಕ್ಷಿಸುವುದು ಸುರಕ್ಷಿತ ವಿಧಾನವಾಗಿದೆ.

ಕರ್ನಾಟಕದ ರಾಜಧಾನಿ ಬೆಂಗಳೂರು, ಮೈಸೂರು, ಧಾರವಾಡ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಮಂಗಳೂರು ಹಾಗೂ ಕಾರವಾರ ಸ್ಥಳಗಳಲ್ಲಿ ಸೂರ್ಯಗ್ರಹಣ ಪ್ರಾರಂಭ, ಅದರ ಉತ್ತುಂಗದ ಕ್ಷಣ ಹಾಗೂ ಸೂರ್ಯಸ್ತದ ಸಮಯ ಈ ಕೆಳಕಂಡಂತಿದೆ.

ಬೆಂಗಳೂರಿನ ನೆಹರು ಪ್ಲಾನಿಟೋರಿಯಮ್ ಸಿದ್ಧಪಡಿಸಿರುವ ಮಾಹಿತಿ

ಸೂರ್ಯ ಗ್ರಹಣ ಕಾಲದಲ್ಲಿ ಆಚರಣೆ ಹೇಗೆ?

ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಸೂರ್ಯಗ್ರಹಣದ ಕುರಿತಂತೆ ಪ್ರಕಟಣೆ ನೀಡಿದ್ದು, ಆ ಪ್ರಕಾರ ಶ್ರೀ ಶುಭಕೃತ್ ನಾಮ ಸಂವತ್ಸರ ಅಶ್ವೀಜ ಕೃಷ್ಣ ಅಮವಾಸ್ಯೆ ಅ.25ರ ಮಂಗಳವಾರ ಚಿತ್ತಾ ನಕ್ಷತ್ರ ತುಲಾ ರಾಶಿಯಲ್ಲಿ ಸೂರ್ಯನಿಗೆ ಕೇತುಗ್ರಸ್ತ ಖಂಡಗ್ರಾಸ ಗ್ರಹಣವು ಸಂಭವಿಸಲಿದೆ. ಅ.25ರ ಸೂರ್ಯೋದಯದಿಂದಲೇ ವೇದಾರಂಭವಾಗುವುದು. ಆದುದರಿಂದ ಈ ದಿನ ಪೂರ್ತಿ ಭೋಜನಕ್ಕೆ ಅವಕಾಶವಿರುವುದಿಲ್ಲ. ಶ್ರೀ ಮಠದಲ್ಲಿ ಶ್ರೀಗಳ ಒಪ್ಪಿಗೆ ಮೇರೆಗೆ ಸೂರ್ಯಗ್ರಹಣ ಶಾಂತಿ ಹೋಮ ಏರ್ಪಡಿಸಿದೆ.

ಯಾವೆಲ್ಲಾ ರಾಶಿಗಳಿಗೆ ಶುಭ, ಮಿಶ್ರ ಹಾಗೂ ಅಶುಭ ಫಲಗಳಿವೆ?

ಗ್ರಹಣ ಸ್ಪರ್ಶ ಕಾಲ ಸಂಜೆ 5.02ಕ್ಕೆ, ಗ್ರಹಣ ಮಧ್ಯಕಾಲ ಸಂಜೆ  5.47ಕ್ಕೆ, ಗ್ರಹಣ ಮೋಕ್ಷ ಕಾಲ ಸಂಜೆ 6.20ಕ್ಕೆ ಆಗಲಿದೆ. ಧನು, ಮಕರ, ವೃಷಭ ಹಾಗೂ ಸಿಂಹ ರಾಶಿಗೆ ಶುಭಫಲವಿದೆ. ಕನ್ಯಾ, ಕುಂಭ, ಮೇಷ ಹಾಗೂ ಮಿಥುನ ರಾಶಿಗೆ ಮಿಶ್ರ ಫಲವಿದೆ. ಅದೇ ರೀತಿ ತುಲಾ, ವೃಶ್ಚಿಕ, ಮೀನಾ ಮತ್ತು ಕರ್ಕಾಟಕ ರಾಶಿಯವರಿಗೆ ಅಶುಭ ಫಲವಿದೆ ಎಂದು ತಿಳಿಸಲಾಗಿದೆ.

ಊಟ- ತಿಂಡಿ ಸೇವನೆ ಯಾರಿಗೆ ವಿನಾಯಿತಿ?

ಬಾಲಕರು, ವೃದ್ಧರು, ಗರ್ಭಿಣಿ ಸ್ತ್ರೀಯರು, ಅಶಕ್ತರು, ಅನಾರೋಗ್ಯ ಪೀಡಿತರು ಸೇರಿದಂತೆ ಮೊದಲಾದವರು ಅ.25ರ ಮಧ್ಯಾಹ್ನ  2 ಗಂಟೆಯವರೆಗೆ ಅಲ್ಪಾಹಾರವನ್ನು ಮಾಡಬಹುದು. ಮತ್ತು ಗ್ರಹಣ ಬಿಟ್ಟ ಮೇಲೆ ಸ್ನಾನ ಮಾಡಿ ಅಲ್ಪಾಹಾರವನ್ನು ತೆಗೆದುಕೊಳ್ಳಬಹುದು.

ಗ್ರಹಣ ಸಂದರ್ಭದಲ್ಲಿ ಸ್ನಾನ- ಹೋಮ :

ಗ್ರಹಣ ದೋಷ ಇರುವವರು ಸೂರ್ಯ ಬಿಂಬ ಮತ್ತು ಗೋಧಿಯನ್ನು ದಾನ ಮಾಡಬೇಕು. ಗ್ರಹಣ ಆರಂಭವಾಗುತ್ತಿದ್ದಂತೆ ಹಾಗೂ ಗ್ರಹಣ ಬಿಟ್ಟ ಮೇಲೆ ಉಟ್ಟ ಬಟ್ಟೆಯಲ್ಲೇ ಸ್ನಾನ ಮಾಡಬೇಕು. ಗ್ರಹಣ ಸ್ಪರ್ಶ ಸಮಯದಲ್ಲಿ ಮಾಡುವ ಸ್ನಾನವು ಲಕ್ಷ ಸ್ನಾನಗಳ ಫವನ್ನು, ಮೇಕ್ಷಾ ನಂತರ ಮಾಡುವ ಸ್ನಾನವು ಅನಂತ ಸ್ನಾನಗಳ ಫಲವನ್ನು ಕೊಡುತ್ತದೆ. ಗ್ರಹಣ ಮಧ್ಯದಲ್ಲಿ ಮಾಡುವ ಹೋಮವು ಕೋಟಿ ಹೋಮಗಳ ಫಲವನ್ನು ಕೊಡುತ್ತದೆ ಎಂದು ಶ್ರೀಮಠ ತಿಳಿಸಿದೆ.

WhatsApp Join our WhatsApp Channel
Previous Post

Global Investors Meet 2022 | ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕರ್ನಾಟಕ ಸಜ್ಜಾಗುತ್ತಿದೆ: ಸಚಿವ ಮುರಗೇಶ್ ನಿರಾಣಿ

Next Post

Mysore Maharani College Lab Collapse | ಭಾರೀ ಮಳೆ ಹಿನ್ನಲೆಯಲ್ಲಿ ಧರಾಶಾಹಿಯಾಯಿತು ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ : ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಬಚಾವ್ – ಇಲ್ಲಿದೆ Live ವಿಡಿಯೋ

Next Post
ಮೈಸೂರಿನ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿರುವ ಚಿತ್ರ

Mysore Maharani College Lab Collapse | ಭಾರೀ ಮಳೆ ಹಿನ್ನಲೆಯಲ್ಲಿ ಧರಾಶಾಹಿಯಾಯಿತು ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ : ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಬಚಾವ್ - ಇಲ್ಲಿದೆ Live ವಿಡಿಯೋ

ಇಡಿ ಶೋಧ ಕಾರ್ಯಾಚರಣೆ : ಚೈನಾ ಪ್ರಜೆಗಳಿಂದ ನಕಲಿ ವ್ಯಾಪಾರಿ ಐಡಿ ಮೂಲಕ ಸಾಲ ನೀಡಿ ಕಿರುಕುಳ ; 78 ಕೋಟಿ ರೂ. ವಶ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group