Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW SPECIAL | Karnataka Failed In Wi-Fi Hotspot | ರಾಜ್ಯದ 2,650 ಗ್ರಾಮ ಪಂಚಾಯಿತಿಗಳಲ್ಲಿ ವೈ-ಫೈ ಹಾಟ್ ಸ್ಪಾಟ್ ಯೋಜನೆ ಜಾರಿಯಲ್ಲಿ ಫೇಲ್….! – ಸರ್ಕಾರದ ಬೊಕ್ಕಸಕ್ಕೆ 29.50 ಕೋಟಿ ರೂ. ನಷ್ಟ

ಅಸಮರ್ಪಕ ಯೋಜನೆ ಕಾರ್ಯಗತ | ಯೋಜನೆಗಾಗಿ ಗ್ರಾಮ ಪಂಚಾಯಿತಿಗಳ ಆರ್ಥಿಕ ಕಾರ್ಯಾ ಸಾಧ್ಯತೆಯನ್ನು ಖಚಿತಪಡಿಸಿಕೊಳ್ಳದೆ ಆಯ್ಕೆ | ಕಳಪೆ ಯೋಜನೆ ರೂಪಿಸಿದ ಕಾರಣ ಕೋಟ್ಯಾಂತರ ರೂ. ನಷ್ಟ | ಭಾರತ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿಯಲ್ಲಿ ಬಹಿರಂಗ

by Bengaluru Wire Desk
January 12, 2023
in BW Special, News Wire
Reading Time: 2 mins read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.21 www.bengaluruwire.com :  ಪ್ರಧಾನಿ ನರೇಂದ್ರ ಮೋದಿಯವರ ಹಳ್ಳಿ ಹಳ್ಳಿಗಳಲ್ಲಿ ಡಿಜಿಟಲ್ ನೆಟ್ ವರ್ಕ್ ಸ್ಥಾಪಿಸಿ ದೇಶವನ್ನು ಸಬಲಗೊಳಿಸುವ ಡಿಜಿಟಲ್ ಇಂಡಿಯಾ ಕನಸನ್ನು ರಾಜ್ಯ ಸರ್ಕಾರ ಮಣ್ಣುಪಾಲು ಮಾಡಿರುವುದು 2022ರ ಮಹಾಲೆಕ್ಕಪರಿಶೋಧಕ(CAG)ರ ವರದಿಯಿಂದ ಬಹಿರಂಗಗೊಂಡಿದೆ.

ರಾಜ್ಯದ 2,650 ಗ್ರಾಮ ಪಂಚಾಯಿತಿಗಳಲ್ಲಿ ವೈ-ಫೈ ಹಾಟ್ ಸ್ಪಾಟ್ ಮೂಲಕ ಇಂಟರ್ ನೆಟ್ ಸೌಲಭ್ಯ ಕಲ್ಪಿಸುವ ಆಶಯಕ್ಕೆ ಕಿಯೋನಿಕ್ಸ್ ಮತ್ತು ಐಸಿಟಿ ಕೌಶಲ್ಯಾಭಿವೃದಧಿ ಸೊಸೈಟಿಗಳ ಅಸಮರ್ಪಕ ಯೋಜನೆ ಕಾರ್ಯಗತಗೊಳಿಸಿದ್ದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 29.58 ಕೋಟಿ ರೂ. ನಷ್ಟವಾಯಿತು. ಅಲ್ಲದೆ ಎರಡೂ ಸಂಸ್ಥೆಗಳ ಪ್ರಕರಣದಲ್ಲಿ ವೈ-ಫೈ ಯೋಜನೆಯನ್ನು ಮೊದಲ ವರ್ಷದ ಕಾರ್ಯಾಚರಣೆಯ ನಂತರ ಕೈಬಿಡಲಾಯಿತು ಎಂದು ಸಿಎಜಿ ವರದಿಯಲ್ಲಿ ತಿಳಿಸಲಾಗಿದೆ. ಈ ದಾಖಲೆಗಳು ‘ಬೆಂಗಳೂರು ವೈರ್’ ಗೆ ಲಭ್ಯವಾಗಿದೆ.

ರಾಜ್ಯ ಸರ್ಕಾರದ ಉದ್ಯಮವಾದ ಕಿಯೋನಿಕ್ಸ್ 500 ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಐಸಿಟಿ ಕೌಶಲ್ಯಾಭಿವೃದ್ಧಿ ಸೊಸೈಟಿ 2,150 ಗ್ರಾಮ ಪಂಚಾಯಿತಿಗಳಲ್ಲಿ ವೈ-ಫೈ ಹಾಟ್ ಸ್ಪಾಟ್ ಅನ್ನು ಸ್ಥಾಪಿಸಲು ಸರ್ಕಾರವು ಅನುಮೋದನೆ ನೀಡಿತ್ತು. ಆದರೆ ಈ ಯೋಜನೆಯ ಪ್ರಾರಂಭದಿಂದ ಆ ಯೋಜನೆ ಏಕಾಏಕಿ ನಿಂತು ವಿಫಲವಾಗುವ ತನಕ ಪ್ರತಿಯೊಂದು ಹಂತದಲ್ಲೂ ಸೂಕ್ತ ರೀತಿಯಲ್ಲಿ ಯೋಜನೆ ರೂಪಿಸದ ಕಾರಣ ಹಾಗೂ ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಎಚ್ಚರಿಕೆಯ ಹೆಜ್ಜೆಯನ್ನು ಇಡದ ಕಾರಣ ಸಂಪೂರ್ಣ ಯೋಜನೆಯು ನೆಲಕಚ್ಚಿತು. ಅಲ್ಲದೆ ಗ್ರಾಮೀಣ ಭಾಗದಲ್ಲಿ ವೈ-ಫೈ ಹಾಟ್ ಸ್ಪಾಟ್ ಮೂಲಕ ಇಂಟರ್ ನೆಟ್ ಅಳವಡಿಸುವ ಭಾರತ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆಗೆ ರಾಜ್ಯದಲ್ಲಿ ಹಿನ್ನಡೆಯಾಗಿರುವುದನ್ನು ಆಡಿಟ್ ರಿಪೋರ್ಟ್ ನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಗ್ರಾಮ ಪಂಚಾಯಿತಿಗಳಲ್ಲಿ ವೈ-ಫೈ ಹಾಟ್ ಸ್ಪಾಟ್ ಸೌಲಭ್ಯ ಕಲ್ಪಿಸುವ ಯೋಜನೆಗೆ ಮೂರು ವರ್ಷಗಳವರೆಗೆ ರಾಜ್ಯ ಸರ್ಕಾರವು ಕಾರ್ಯಸಾಧ್ಯತೆಯ ಅಂತರದ ಹಣಕಾಸು ಒದಗಿಸುವಿಕೆ (VGF)ಗಾಗಿ ಆಯವ್ಯಯ ಬೆಂಬಲವಾಗಿ ಮೊದಲ ವರ್ಷ 50.50 ಕೋಟಿ ರೂ., ಎರಡನೇ ವರ್ಷ 26.50 ಕೋಟಿ ರೂ. ಹಾಗೂ ಮೂರನೇ ವರ್ಷದಲ್ಲಿ 2.50 ಕೋಟಿ ರೂ. ಸೇರಿದಂತೆ ಒಟ್ಟು 79.50 ಕೋಟಿ ರೂ. ಹಣವನ್ನು ಕೊಡುಗೆಯಾಗಿ ಈ ಯೋಜನೆಗೆ ಕೊಡಬೇಕಿತ್ತು. ವರ್ಷಕ್ಕೆ 62.50 ಕೋಟಿ ರೂ. ಯೋಜನಾ ವೆಚ್ಚವಾಗುತ್ತದೆಂದು ಲೆಕ್ಕ ಹಾಕಲಾಗಿತ್ತು. ಈ ಹಣವನ್ನು ವೈ-ಫೈ ಹಾಟ್ ಸ್ಪಾಟ್  ಸೇವೆ ಒದಗಿಸಿ ಅದರಿಂದ ಬರುವ ಆದಾಯದಿಂದ ಕ್ರಮೇಣ ಸರಿದೂಗಿಸಿ ಆ ಮೂಲಕ ಚಂದಾದಾರರ ಸಂಖ್ಯೆ ಹೆಚ್ಚಳದ ಆಧಾರದ ಮೇಲೆ ನಾಲ್ಕನೇ ವರ್ಷಕ್ಕೆ ಸ್ವಾವಲಂಬನೆ ಸಾಧಿಸಬೇಕಿತ್ತು. ಆದರೆ ಅಸಮರ್ಪಕವಾಗಿ ಯೋಜನೆ ರೂಪಿಸಿದ್ದರಿಂದ ಉದ್ದೇಶವೇ ವಿಫಲವಾಯಿತು.

ವೈ-ಫೈ ಹಾಟ್ ಸ್ಪಾಟ್ ಸೌಲಭ್ಯ ಒದಗಿಸುವ ಯೋಜನೆ ಜಾರಿಗಾಗಿ ಕಿಯೋನಿಕ್ಸ್ ಸಂಸ್ಥೆಯು ಕೇಂದ್ರ ಸರ್ಕಾರದ ಉದ್ಯಮವಾದ ಬಿಎಸ್ ಎನ್ ಎಲ್ (BSNL) ಅನ್ನು ಆಯ್ದುಕೊಂಡಿತ್ತು. ಅಲ್ಲದೆ ವೈ-ಫೈ ಹಾಟ್ ಸ್ಪಾಟ್ ಸೌಲಭ್ಯ ಕಲ್ಪಿಸಲು ವೈರ್ ಲೆಸ್ ಸಲ್ಯೂಷನ್ಸ್ ಐಎನ್ ಸಿಯನ್ನು ಚಾನಲ್ ಪಾಲುದರಾರರನ್ನಾಗಿ ಮಾಡಿಕೊಂಡಿತ್ತು. ಇನ್ನು 2,150 ಗ್ರಾಮ ಪಂಚಾಯಿತಿಗಳನ್ನು ವೈ-ಫೈ ಹಾಟ್ ಸ್ಪಾಟ್ ಸೌಲಭ್ಯ ಕಲ್ಪಿಸಲು ಐಸಿಟಿ ಕೌಶಲ್ಯಾಭಿವೃದ್ಧಿ ಸೊಸೈಟಿಯು ಯೋಜನೆ ಜಾರಿಗಾಗಿ ಸಿಎಸ್ ಸಿ ಇ-ಗವರ್ನೆನ್ಸ್  ಸರ್ವೀಸಸ್ ಇಂಡಿಯಾ (CSC) ತನ್ನ ಸೇವಾ ಪೂರೈಕೆದಾರರನ್ನಾಗಿ ಆಯ್ದು ಕೊಂಡಿತ್ತು.

ವೈ-ಫೈ ಲೈವ್ ಎಂಬುದು ಬರೀ ಬಾಯಿಮಾತಿಗಷ್ಟೆ :

ಬಿಎಸ್ ಎನ್ ಎಲ್ ಪ್ರಕರಣದಲ್ಲಿ ವೈ-ಫೈ ಹಾಟ್ ಸ್ಪಾಟ್ ಕಲ್ಪಿಸಲು ಹಾಕಲಾಗಿದ್ದ ಮೂಲಸೌಕರ್ಯವನ್ನೇ ತೆಗೆದು ಹಾಕಲಾಗಿತ್ತು. ಈ ಯೋಜನೆ ಕಾರ್ಯಗತಗೊಳಿಸಲು ಒಪ್ಪಂದದ ಪ್ರಕಾರ 14.75 ಕೋಟಿ ರೂ. ಮೊತ್ತಕ್ಕೆ ಬಿಎಸ್ ಎನ್ ಎಲ್ 2019ರ ಜನವರಿ 19ರಂದು ಹಕ್ಕು ಮಂಡಿಸಿದ್ದರೂ 10.10 ಕೋಟಿ ರೂ. ಹಣವನ್ನು ಮಾತ್ರ ಪಾವತಿಸಲಾಗಿದೆ. ಇನ್ನು ಸಿಎಸ್ ಸಿ ಪ್ರಕರಣದಲ್ಲಿ 2018ರ ಸೆಪ್ಟೆಂಬರ್ 5ರಲ್ಲಿದ್ದಂತೆ 1,782 ಗ್ರಾಮ ಪಂಚಾಯಿತಿಗಳಲ್ಲಿ ವೈ-ಫೈ ಹಾಟ್ ಸ್ಪಾಟ್ ಲೈವ್ ಆಗಿತ್ತು ಎಂದು ಹೇಳಲಾಗಿತ್ತು. ಆದರೂ ಲೈವ್ ಆದ ಗ್ರಾಮ ಪಂಚಾಯಿತಿಗಳ ಸ್ಥಿತಿಯ ಬಗ್ಗೆ ದಾಖಲೆಗಳು ಲಭ್ಯವಿರಲಿಲ್ಲ ಎಂದಿರುವ ಭಾರತೀಯ ಲೆಕ್ಕಪರಿಶೋಧಕರು, ಸಿಎಸ್ ಸಿ ಸಂಸ್ಥೆಗೆ 2017ರ ಡಿಸೆಂಬರ್ ನಿಂದ 2019ರ ಫೆಬ್ರವರಿ ತನಕ ಒಟ್ಟಾರೆ 19.48 ಕೋಟಿ ರೂ.ಗಳನ್ನು ಪಾವತಿಸಲಾಗಿತ್ತು. ಒಟ್ಟಾರೆ ಎರಡು ಪ್ರಕರಣಗಳಲ್ಲಿ 29.58 ಕೋಟಿ ರೂ.ಗಳನ್ನು ವ್ಯರ್ಥವಾಗಿ ಕರ್ಚು ಮಾಡಲಾಗಿದೆ ಎಂದು ತಿಳಿಸಿದೆ.

ಯೋಜನೆಗೆ ಅಸಮರ್ಪಕವಾಗುವುದಕ್ಕೆ ಕಾರಣಗಳೇನು?

ಲೆಕ್ಕಪರಿಶೋಧನೆಯಲ್ಲಿ ಕಂಡು ಬಂದ ಅಂಶಗಳೇನು?

ಲೆಕ್ಕಪರಿಶೋಧನೆಯಲ್ಲಿ ಯೋಜನೆಗಾಗಿ ಗ್ರಾಮ ಪಂಚಾಯಿತಿಗಳ ಆರ್ಥಿಕ ಕಾರ್ಯಾ ಸಾಧ್ಯತೆಯನ್ನು ಖಚಿತಪಡಿಸಿಕೊಳ್ಳದೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಅದಲ್ಲದೆ ಸರ್ಕಾರವು ನಿಗಧಿಪಡಿಸಿದ್ದರೂ ಬಿಎಸ್ ಎನ್ ಎಲ್ ಮತ್ತು ಸಿಎಸ್ ಸಿ ಸಂಸ್ಥೆಗಳೊಂದಿಗೆ ಕಿಯೋನಿಕ್ಸ್ ಹಾಗೂ ಐಸಿಟಿ ಕೌಶಲ್ಯಾಭಿವೃದಧಿ ಸೊಸೈಟಿ ವಿವರವಾದ ಸೇವಾ ಮಟ್ಟದ ಒಪ್ಪಂದ (SLA)ವನ್ನು ಮಾಡಿಕೊಂಡಿರಲಿಲ್ಲ. ಇದರಿಂದ ಎಷ್ಟು ಸಮಯದೊಳಗೆ ಯೋಜನೆ ಪೂರ್ಣಗೊಳಿಸಬೇಕು, ಹಣ ಪಾವತಿ ವೇಳಪಟ್ಟಿ, ಮೇಲ್ವಿಚಾರಣಾ ವರದಿಗಳು, ಒಂದೊಮ್ಮೆ ಯೋಜನೆ ಸೂಕ್ತ ರೀತಿ ಅನುಷ್ಠಾನ ಮಾಡದಿದ್ದರೆ ದಂಡ ವಿಧಿಸುವ ಷರತ್ತುಗಳು, ಭದ್ರತೆ ಇತ್ಯಾದಿಗಳ ಯಾವುದೇ ಸ್ಪಷ್ಟತೆ ಇರಲಿಲ್ಲ.

ಕಳಪೆ ಯೋಜನೆ ರೂಪಿಸಿದ ಕಾರಣ ಕೋಟ್ಯಾಂತರ ರೂ. ನಷ್ಟ :

ವಿವರವಾದ ಸೇವಾ ಮಟ್ಟದ ಒಪ್ಪಂದ ಇಲ್ಲದ ಕಾರಣ ಸೇವಾ ಪೂರೈಕೆದಾರರಾದ ಬಿಎಸ್ ಎನ್ ಎಲ್ ಮತ್ತು ಸಿಎಸ್ ಸಿ ಸಂಸ್ಥೆಗಳ ಜೊತೆ ಪತ್ರ ವ್ಯವಹಾರ ಮತ್ತು ವಿವಾದಗಳ ಸರಣಿಯನ್ನು ಸೌಹಾರ್ದಯುತವಾಗಿ ಬಗೆಹರಿಸಲಾಗಿಲ್ಲ. ಇದರಿಂದಾಗಿ ಸೇವಾ ಪೂರೈಕೆದಾರರೊಂದಿಗಿನ ಸಂಬಂಧದಲ್ಲಿ ಘರ್ಷಣೆಗಳಾಗಿ ಮತ್ತು ಅವರ ವ್ಯಾಪಾರದ ಕಾರ್ಯಾ ಸಾಧ್ಯತೆಯ ಕೊರತೆಯಿಂದಾಗಿ ತಮ್ಮ ಕಾರ್ಯಚಟುವಟಿಕೆಗಳನ್ನು ಅಂತ್ಯಗೊಳಿಸಿದರು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಯಿತು ಎಂದು ಸಿಎಜಿಯು ಸರ್ಕಾರದ ನೀಡಿರುವ ಅನುಪಾಲನಾ ವರದಿ ಮೇಲೆ ಕೈಗೊಂಡ ಲೆಕ್ಕಪರಿಶೋಧನಾ ವರದಿಯಲ್ಲಿ ಉಲ್ಲೇಖಿಸಿದೆ.

ಅಲ್ಲದೇ ಸರ್ಕಾರವೂ ಕೂಡ ವೈ-ಫೈ ಹಾಟ್ ಸ್ಪಾಟ್ ಯೋಜನೆಗೆ ಅನುಮೋದನೆ ನೀಡುವ ಮುನ್ನ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದ ಕಿಯೋನಿಕ್ಸ್ ಸಂಸ್ಥೆಯಿಂದ ಪ್ರಾಯೋಗಿಕ ಅಧ್ಯಯನವನ್ನು ನಡೆಸುವಂತೆ ಒತ್ತಾಯಿಸಿರಲಿಲ್ಲ. ಹೀಗಾಗಿ ಸರಿಯಾದ ಕಾರ್ಯ ಸಾಧ್ಯತೆಯ ಅಧ್ಯಯನ ನಡೆಸದೆ ಮತ್ತು ವಿವರವಾದ ಷರತ್ತುಗಳ ಒಪ್ಪಂದಗಳಿಲ್ಲದೆ ಗ್ರಾಮ ಪಂಚಾಯಿತಿಗಳಲ್ಲಿ ವೈ-ಫೈ ಒದಗಿಸುವ ಕಳಪೆಯಾಗಿ ರೂಪಿಸಿದ ಯೋಜನೆಯಿಂದ ಬೊಕ್ಕಸಕ್ಕೆ ಸರ್ಕಾರಕ್ಕೆ ಕೋಟ್ಯಾಂತರ ರೂ. ಹಣ ವ್ಯರ್ಥವಾಯಿತು. ಒಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಡಿಜಿಟಲ್ ಇಂಡಿಯಾ ಅಭಿಯಾನಕ್ಕೆ ರಾಜ್ಯದಲ್ಲಿ ಹಿನ್ನಡೆಯಾಗಿರುವುದು ಈ ಸಿಎಜಿ ವರದಿಯಿಂದ ಬಹಿರಂಗವಾಗಿದೆ. ಸರ್ಕಾರಕ್ಕೆ ಯೋಜನೆ ಜಾರಿಗೆ ತೋರುವ ಆಸಕ್ತಿ ಅದನ್ನು ಅನುಷ್ಠಾನ ಮಾಡುವುದರಲ್ಲಿ ಇರಲ್ಲ ಎಂಬುದಕ್ಕೆ ಇದೊಂದು ನಿದರ್ಶನವಷ್ಟೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಇಡಿ ಶೋಧ ಕಾರ್ಯಾಚರಣೆ : ಚೈನಾ ಪ್ರಜೆಗಳಿಂದ ನಕಲಿ ವ್ಯಾಪಾರಿ ಐಡಿ ಮೂಲಕ ಸಾಲ ನೀಡಿ ಕಿರುಕುಳ ; 78 ಕೋಟಿ ರೂ. ವಶ

Next Post

#Viral Video | ಸಹಾಯ ಕೇಳಲು ಬಂದ ಮಹಿಳೆಗೆ ವಿ.ಸೋಮಣ್ಣ ಕಪಾಳ ಮೋಕ್ಷ ಮಾಡಿದ ವಿಡಿಯೋ ವೈರಲ್ : ತಮಗೆ ಸಚಿವರು ಹೊಡೆದಿಲ್ಲ ಎಂದು ಸ್ಪಷ್ಟನೆ ನೀಡಿದ ಮಹಿಳೆ

Next Post
ವಸತಿ ಸಚಿವ ವಿ.ಸೋಮಣ್ಣ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡುತ್ತಿದ್ದಾರೆ ಎಂಬ ವೈರಲ್ ವಿಡಿಯೋವೊಂದರ  ಚಿತ್ರ

#Viral Video | ಸಹಾಯ ಕೇಳಲು ಬಂದ ಮಹಿಳೆಗೆ ವಿ.ಸೋಮಣ್ಣ ಕಪಾಳ ಮೋಕ್ಷ ಮಾಡಿದ ವಿಡಿಯೋ ವೈರಲ್ : ತಮಗೆ ಸಚಿವರು ಹೊಡೆದಿಲ್ಲ ಎಂದು ಸ್ಪಷ್ಟನೆ ನೀಡಿದ ಮಹಿಳೆ

ಸಾಂದರ್ಭಿಕ ಚಿತ್ರ

Health Tips | ಆಗಾಗ ಅಜೀರ್ಣ, ಹೊಟ್ಟೆಭಾರ ಸಮಸ್ಯೆ ಎದುರಿಸ್ತಿದ್ದೀರಾ? ಇಂತಹ ಹಲವು ತೊಂದರೆಗಳಿಗೆ ಉಪವಾಸವೇ ಮದ್ದು..! ಉಪವಾಸದಿಂದಾಗುವ ಲಾಭಗಳೇನು ಗೊತ್ತಾ?

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d