Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Consumers Power Disconnection | ಕರೆಂಟ್ ಬಿಲ್ ಕಟ್ಟಲಿಲ್ಲ ಅಂತ ಏಕಾಏಕಿ ವಿದ್ಯುತ್ ಸಂಪರ್ಕ ಕಡಿತ ಮಾಡಲು ಸಾಧ್ಯವಿಲ್ಲ…! ಕೆಇಆರ್ ಸಿ ನಿಯಮಗಳೇನಿದೆ? ಇಲ್ಲಿದೆ ಡಿಟೇಲ್ಸ್…!!

ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಪ್ರಾಧಿಕಾರ (KERC) ವಿದ್ಯುತ್ ಶಕ್ತಿ ಸಂಪರ್ಕ ಕಡಿತ ಮತ್ತು ಪುನರ್ ಸ್ಥಾಪನೆ ಕುರಿತಂತೆ ಕೆಇಆರ್ ಸಿ (ವಿದ್ಯುತ್ ಪೂರೈಕೆ) ಕೋಡ್, 2004ರಲ್ಲಿ ವಿದ್ಯುತ್ ಸಂಪರ್ಕ ಕಡಿತ ಮತ್ತು ಪುನರ್ ಸ್ಥಾಪನೆ ಬಗ್ಗೆ ಎಸ್ಕಾಂಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ ತಿಳಿಸುತ್ತದೆ. ಹೆಚ್ಚಿನ ಮಾಹಿತಿಗೆ ಈ ಲೇಖನವನ್ನು ಪೂರ್ತಿ ಓದಿ. ಇತರರಿಗೂ ಶೇರ್ ಮಾಡಿ.

by Bengaluru Wire Desk
November 18, 2022
in News Wire, Public interest
Reading Time: 2 mins read
0
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ಬೆಂಗಳೂರು, ನ.18 www.bengaluruwire.com : ವಿದ್ಯುತ್ ಗ್ರಾಹಕರು ಸತತ ಮೂರು ತಿಂಗಳುಗಳ ಕಾಲ ವಿದ್ಯುತ್ ಬಿಲ್ ಪಾವತಿಸದಿದ್ದರೆ, ವಿದ್ಯುತ್ ಸಂಪರ್ಕ ಒಪ್ಪಂದ ರದ್ದುಗೊಳಿಸಲು ಬೆಸ್ಕಾಂ ಕ್ರಮ ಕೈಗೊಳ್ಳಲಿದೆ. ಈ ಒಪ್ಪಂದ ರದ್ದಾದ ಬಳಿಕ ಗ್ರಾಹಕರು ಪುನಃ ವಿದ್ಯುತ್ ಸಂಪರ್ಕ ಪಡೆಯಲು ಹೊಸ ಗ್ರಾಹಕರಂತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಬೆಸ್ಕಾಂ ವ್ಯವಸ್ಥಾಪಕ ಮಹಾಂತೇಶ ಬೀಳಗಿಯವರು ಟ್ವೀಟ್ ಮಾಡಿದ್ದಾರೆ.

ವಿದ್ಯುತ್ ಗ್ರಾಹಕರಿಗೆ ಒಂದು ವಿಷಯ ತಿಳಿದಿರಲಿ ವಿದ್ಯುತ್ ಸಂಪರ್ಕವನ್ನು ಬೆಸ್ಕಾಂ ಆಗಲಿ ಇತರ ವಿದ್ಯುತ್ ಸರಬರಾಜು ಕಂಪನಿ (ESCOMs)ಗಳಾಗಲಿ ಏಕಾ ಏಕಿ ಕಡಿತಗೊಳಿಸಲು ಅವಕಾಶವಿಲ್ಲ. ಇದಕ್ಕೆ ಬೆಸ್ಕಾಂ ಸೇರಿದಂತೆ ರಾಜ್ಯದಲ್ಲಿ ವಿದ್ಯುತ್ ಸರಬರಾಜು ಮಾಡುವ ಮೆಸ್ಕಾಂ, ಹೆಸ್ಕಾಂ, ಚೆಸ್ಕಾಂ, ಜೆಸ್ಕಾಂ ಕಂಪನಿಗಳು ಕೆಇಆರ್ ಸಿ ನಿಯಮಗಳನ್ನು ಅನುಸರಿಸಲೇ ಬೇಕು. ಕರ್ನಾಟಕದಲ್ಲಿ 2020ರ ಮಾಹಿತಿಯಂತೆ ಒಟ್ಟಾರೆ 2,67,89,971 (2.67 ಕೋಟಿ) ವಿದ್ಯುತ್ ಗ್ರಾಹಕರಿದ್ದಾರೆ.

2021ರ ಇಸವಿಯ ತನಕ ರಾಜ್ಯದಲ್ಲಿ ಒಟ್ಟಾರೆ 30.091 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಸ್ಥಾವರಗಳನ್ನು ಸ್ಥಾಪಿಸಲಾಗಿದೆ. ಇಷ್ಟೆಲ್ಲಾ ಇರುವಾಗ ದಿನನಿತ್ಯ ಅನಧಿಕೃತ ವಿದ್ಯುತ್ ಕಡಿತ, ಅಕ್ರಮ ವಿದ್ಯುತ್ ಸಂಪರ್ಕ, ಬಿಲ್ ಪಾವತಿಸದ ಕಾರಣಕ್ಕೆ ವಿದ್ಯುತ್ ಫ್ಯೂಸ್ ಕಿತ್ತುಕೊಂಡು ಹೋಗುವ ಪ್ರಕರಣಗಳು ನಡೆಯುತ್ತಲೇ ಇರುತ್ತದೆ. ಹೀಗಾಗಿ ಈ ಕುರಿತಂತೆ ವಿದ್ಯುತ್ ಗ್ರಾಹಕರು ಕಾನೂನಿನಲ್ಲಿ ಇರುವ ಅವಕಾಶಗಳು, ಹಕ್ಕುಗಳ ಹಾಗೂ ಅವರಿಗೆ ಇರಬೇಕಾದ ಜವಾಬ್ದಾರಿಗಳ ಬಗ್ಗೆ ತಿಳಿದುಕೊಳ್ಳಬೇಕಿದೆ.  

ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಪ್ರಾಧಿಕಾರ (KERC) ವಿದ್ಯುತ್ ಶಕ್ತಿ ಸಂಪರ್ಕ ಕಡಿತ ಮತ್ತು ಪುನರ್ ಸ್ಥಾಪನೆ ಕುರಿತಂತೆ ಕೆಇಆರ್ ಸಿ (ವಿದ್ಯುತ್ ಪೂರೈಕೆ) ಕೋಡ್, 2004ರಂತೆ ಬಿಲ್‌ನ ಮೊತ್ತಕ್ಕೆ ಸಂಬಂಧಿಸಿದಂತೆ ವಿವಾದ ಉಂಟಾಗಬಹುದಾದ ಸಂದರ್ಭಗಳಿದ್ದಾಗ, ಆ ಬಿಲ್ ಮೊತ್ತವನ್ನು ಪ್ರಶ್ನಿಸುವ ಹಕ್ಕು ಗ್ರಾಹಕನಿಗೆ ಇದೆ. ವಿದ್ಯುತ್ ಸರಬರಾಜುದಾರ ಹಾಗೂ ಗ್ರಾಹಕರ ನಡುವೆ ಯಾವುದೇ ವಿವಾದ ಬಗೆಹರಿಯುವ ತನಕ ವಿದ್ಯುತ್ ಕಡಿತ ಮಾಡುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಏಕಾ ಏಕಿ ವಿದ್ಯುತ್ ಸಂಪರ್ಕಗೊಳಿಸಲು ಸಾಧ್ಯವಿಲ್ಲ :

ವಿದ್ಯುತ್ ಗ್ರಾಹಕ ಸೂಕ್ತ ಅವಧಿಯಲ್ಲಿ ವಿದ್ಯುತ್ ಬಿಲ್ ಕಟ್ಟದಿದ್ದ ಪಕ್ಷದಲ್ಲಿ ವಿದ್ಯುತ್ ಕಡಿತ ಮಾಡಲು ಕೆಇಆರ್ ಸಿ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ ವಿದ್ಯುತ್ ಸರಬರಾಜುದಾರರು ತಮಗೆ ಇಷ್ಟ ಬಂದಂತೆ ವಿದ್ಯುತ್ ಸಂಪರ್ಕ ಕಡಿತ ಮಾಡಲು ಸಾಧ್ಯವಿಲ್ಲ. ಇದಕ್ಕಾಗಿ ಬೆಸ್ಕಾಂ ಸಹಿತ ವಿವಿಧ ವಿದ್ಯುತ್ ಸರಬರಾಜು ಕಂಪನಿ (ESCOMs) ಗಳು ಕೆಲವು ಕಾರ್ಯವಿಧಾನಗಳನ್ನು ಅನುಸರಿಸದೇ ಏಕಾಏಕಿ ವಿದ್ಯುತ್ ಕಡಿತ ಮಾಡಲು ಸಾಧ್ಯವಿಲ್ಲ. ವಿದ್ಯುತ್ ಸಂಪರ್ಕ ಕಡಿತ ಮಾಡುವ ಮೊದಲು ಅನುಸರಿಸಬೇಕಾದ ಹಂತಗಳು ಈ ಕೆಳಗಿನಂತಿವೆ :

• ವಿದ್ಯುತ್ ಸರಬರಾಜು ಮಾಡುವ ಕಂಪನಿ, ಗ್ರಾಹಕರಿಗೆ ನೋಟಿಸ್ ನೀಡಿರುವುದನ್ನು ಖಚಿತಪಡಿಸಿಕೊಳ್ಳಬೇಕು

• ಕೆಇಆರ್ ಸಿ ಕೋಡ್/ಪೂರೈಕೆ ಷರತ್ತುಗಳಿಗೆ ಅನುಗುಣವಾಗಿ ಕನ್ನಡ ಅಥವಾ ಇಂಗ್ಲೀಷ್ ಭಾಷೆಯಲ್ಲಿ ಸರಳವಾಗಿ ಹಾಗೂ ಗ್ರಾಹಕನಿಗೆ ಅರ್ಥವಾಗುವ ರೀತಿಯಲ್ಲಿ ನೋಟೀಸ್ ಇರತಕ್ಕದ್ದು

• ಈ ನೋಟಿಸ್ ನಲ್ಲಿ ಬೆಸ್ಕಾಂ ಅಥವಾ ಇನ್ನಾವುದೇ ವಿದ್ಯುತ್ ಸರಬರಾಜು ಕಂಪನಿಯು ನೋಟಿಸ್ ನಲ್ಲಿ ವಿದ್ಯುತ್ ಸಂಪರ್ಕ ಕಡಿತಕ್ಕೆ ಸೂಕ್ತ ಕಾರಣ ಮತ್ತು ಸಂಭವನೀಯ ಕ್ರಮವನ್ನು ನಿರ್ದಿಷ್ಟಪಡಿಸಬೇಕು.

• ನೋಟಿಸ್ ನಲ್ಲಿ ಗ್ರಾಹಕನು ಅಗತ್ಯವಾದರೆ ಸಂಬಂಧಿಸಿದ ಸ್ಥಳೀಯ ಕಚೇರಿಯನ್ನು ಸಂಪರ್ಕಿಸಲು ವಿನಂತಿಸುವ ಅಂಶವನ್ನು ಒಳಗೊಂಡಿರಬೇಕು

• ನೋಟಿಸ್ ಅನ್ನು ಪೋಸ್ಟಿಂಗ್ ಪ್ರಮಾಣಪತ್ರದ ಅಡಿಯಲ್ಲಿ ನೋಂದಾಯಿತ ಅಂಚೆ ಮೂಲಕ, ಕೊರಿಯರ್ ಅಥವಾ ಇತರ ರೀತಿಯ ವಿಧಾನಗಳ ಮೂಲಕ ಕಳಿಸಬಹುದು. ಅಥವಾ ಈ ನೋಟಿಸನ್ನು ಗ್ರಾಹಕರ ವಿಳಾಸದಕ್ಕೆ ವೈಯಕ್ತಿಕವಾಗಿ ಭೇಟಿ ಮಾಡಿ ಸಹ ಹಸ್ತಾಂತರಿಸಬಹುದು

•  ವಿದ್ಯುತ್ ಸರಬರಾಜು ಕಂಪನಿಯ ಸಿಬ್ಬಂದಿ ಗ್ರಾಹಕನ ವಿಳಾಸದ ಸ್ಥಳದಲ್ಲಿ, ಎದ್ದುಕಾಣುವ ಭಾಗದಲ್ಲಿ ನೋಟೀಸ್ ಅನ್ನು ಅಂಟಿಸಲು ಅವಕಾಶವಿದೆ.

ಬೆಸ್ಕಾಂ ನೋಟಿಸ್ ಸಾಂದರ್ಭಿಕ ಚಿತ್ರ

ಆ ನೋಟಿಸ್ ನಲ್ಲಿ ಏನೇನು ಅಂಶಗಳಿರಬೇಕು?

ಗ್ರಾಹಕರು ಕರೆಂಟ್ ಬಿಲ್‌ಗಳನ್ನು ಪಾವತಿಸಲು ವಿಫಲರಾಗಿದ್ದರೆ ವಿದ್ಯುತ್ ಸರಬರಾಜುದಾರರು, ನಿಗದಿತ ದಿನಾಂಕದ ನಂತರ 15 ದಿನಗಳಿಗಿಂತ ಕಡಿಮೆ ಇಲ್ಲದ ನೋಟಿಸ್ ಅನ್ನು ನೀಡಬೇಕು. ಆ ನೋಟಿಸ್ ನಲ್ಲಿ ಈ ಅಂಶಗಳು ಒಳಗೊಂಡಿರುತ್ತದೆ:-

• ಗ್ರಾಹಕರು ನಿಗದಿತ ದಿನಾಂಕದೊಳಗೆ ಎಷ್ಟು ಹಣವನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂಬ ನಿರ್ದಿಷ್ಟ ಮಾಹಿತಿಯಿರಬೇಕು. .

• ಬಾಕಿ ಮೊತ್ತವನ್ನು ಪಾವತಿಸಲು ಗ್ರಾಹಕರು ವಿಫಲರಾಗಿದ್ದಾರೆ ಎಂಬುದನ್ನು ನೋಟಿಸ್ ನಲ್ಲಿ ತಿಳಿಸಿರಬೇಕು. ಒಂದು ವೇಳೆ ಬಾಕಿ ಪಾವತಿಸಲು ಗ್ರಾಹಕರು ವಿಫಲರಾದರೆ, ವಿದ್ಯುತ್ ಸರಬರಾಜುದಾರರು ವಿದ್ಯುತ್ ಸಂಪರ್ಕ ಪೂರೈಕೆಯನ್ನು ಕಡಿತಗೊಳಿಸಲು ಅಥವಾ ನಿರ್ಬಂಧಿಸಲು ಅವಕಾಶವಿದೆ ಎಂಬುದನ್ನು ಸೂಚಿಸಿರಬೇಕು.

• ನಿಯಮಗಳ ಪ್ರಕಾರ ಬಿಲ್ ಹಣ ಪಾವತಿ ಮಾಡುವ ಆಯ್ಕೆಗಳನ್ನು ತಿಳಿಸಿರಬೇಕು. ಅಲ್ಲದೆ ಕಂತುಗಳ ಆಯ್ಕೆಗಳ ಲಭ್ಯತೆಯನ್ನು ವಿವರಿಸಿರಬೇಕು.

ಮರು ವಿದ್ಯುತ್ ಸಂಪರ್ಕ ಪಡೆಯುವ ವಿಧಾನಗಳೇನು ? :

ಒಂದೊಮ್ಮೆ ವಿದ್ಯುತ್ ಸಂಪರ್ಕವನ್ನು ಬೆಸ್ಕಾಂ ಅಥವಾ ಇನ್ನಾವುದೇ ವಿದ್ಯುತ್ ಸರಬರಾಜು ಕಂಪನಿಗಳು ಕಡಿತಗೊಳಿಸಿದಾಗ ಅಂತಹ ಸಂಪರ್ಕವನ್ನು ಪುನಃ ಪಡೆಯಲು ಕೆಇಆರ್ ಸಿ ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ. ವಿದ್ಯುತ್ ಬಿಲ್ ಪಾವತಿಯಾಗದ ಕಾರಣ ಅಥವಾ ಅಗತ್ಯ ಭದ್ರತಾ ಠೇವಣಿ ಕೊರತೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೆ ಅವುಗಳನ್ನು ಗ್ರಾಹಕರು ಪಾವತಿಸಿದರೆ, KERC (ಕಾರ್ಯಕ್ಷಮತೆಯ ಮಾನದಂಡಗಳು) ನಿಯಮಗಳು 2004 ರ ಪ್ರಕಾರ, ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಗ್ರಾಹಕರು ಬಿಲ್ ಪಾವತಿ ಅಥವಾ ಅಗತ್ಯ ಭದ್ರತಾ ಠೇವಣಿ ಪಾವತಿಸಿದ ಅದೇ ದಿನದಂದು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಎಸ್ಕಾಂಗಳು ಹಣ ಸ್ವೀಕರಿಸಿದ 24 ಗಂಟೆಗಳ ಒಳಗೆ ವಿದ್ಯುತ್ ಮರು ಸಂಪರ್ಕವನ್ನು ಒದಗಿಸಬೇಕಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Defence News | Kaveri Derivative Engine | ರಷ್ಯಾದಲ್ಲಿ ನಡೆಯುತ್ತಿದೆ ಯುಎವಿ ಯುದ್ಧ ವಿಮಾನದ ಕಾವೇರಿ ಡೆರಿವೇಟಿವ್ ಎಂಜಿನ್ ಅತ್ಯಾಧುನಿಕ ಪರೀಕ್ಷೆ

Next Post

Bangalore No Water Supply | ಗಮನಿಸಿ…! ನ.21ರಂದು ಈ ಕೆಳಕಂಡ ಪ್ರದೇಶದಲ್ಲಿ ನೀರು ಪೂರೈಕೆಯಿರುವುದಿಲ್ಲ  

Next Post
ಸಾಂದರ್ಭಿಕ ಚಿತ್ರ

Bangalore No Water Supply | ಗಮನಿಸಿ...! ನ.21ರಂದು ಈ ಕೆಳಕಂಡ ಪ್ರದೇಶದಲ್ಲಿ ನೀರು ಪೂರೈಕೆಯಿರುವುದಿಲ್ಲ  

Bangalore Tech Summit | 2025ರ ಜೂನ್‌ ಹೊತ್ತಿಗೆ 175 ಕಿ.ಮೀ. ಮೆಟ್ರೋ ಮಾರ್ಗ ಸಿದ್ಧ: ಅಂಜುಂ ಪರ್ವೇಜ್

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d