Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW EXCLUSIVE | Energy News | ‘ಅಮೃತ ಜ್ಯೋತಿ’ ಯೋಜನೆ ಬಡ ಫಲಾನುಭವಿಗಳ ಸಂಖ್ಯೆ 6.78 ಲಕ್ಷ ; ಸಬ್ಸೀಡಿ ಸಿಕ್ಕಿದ್ದು 24 ಸಾವಿರ ಜನರಿಗೆ ಮಾತ್ರ

ಪರಿಶಿಷ್ಟ ಜಾತಿ ಮತ್ತು ಪಂಗಡದ ಬಿಪಿಎಲ್ ಕಾರ್ಡ್ ದಾರರಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆ | ಮೇ ತಿಂಗಳಲ್ಲಿ ಜಾರಿಗೆ ಬಂದಿತ್ತು | ವಿದ್ಯುತ್ ಯೋಜನೆ ಅನುಷ್ಠಾನಕ್ಕೆ ಎಸ್ಕಾಂಗಳ ದಿವ್ಯ ನಿರ್ಲಕ್ಷ್ಯ

by Bengaluru Wire Desk
January 12, 2023
in BW Special, News Wire, Public interest
Reading Time: 2 mins read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ನ.28 www.bengaluruwire.com : ರಾಜ್ಯ ಸರ್ಕಾರದ ಇಂಧನ ಇಲಾಖೆಯ ಮಹತ್ವಾಕಾಂಕ್ಷೆ ಯೋಜನೆಯಾದ ‘ಅಮೃತ ಜ್ಯೋತಿ’ ಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡಲಾಗುತ್ತಿರುವ 75 ಯೂನಿಟ್‌ ವರೆಗಿನ ಉಚಿತ ವಿದ್ಯುತ್‌ ಪಡೆಯಲು ರಾಜ್ಯದಾದ್ಯಂತ ಇದುವರೆಗೆ 6.78 (6,78,234) ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಆದರೆ ಈತನಕ ಕೇವಲ 24,884 ಫಲಾನುಭವಿಗಳಿಗೆ 34 ಲಕ್ಷ ರೂ. ಸಬ್ಸೀಡಿ ಹಣ ತಲುಪಿದೆ.

ಇಂಧನ ಇಲಾಖೆ ಮೂಲಗಳು ತಿಳಿಸಿರುವಂತೆ ಈ ವರ್ಷದ ಮೇ ತಿಂಗಳಲ್ಲಿ ಜಾರಿಗೆ ಬಂದ  ‘ಅಮೃತ ಜ್ಯೋತಿ’ ಯೋಜನೆಯಲ್ಲಿ ಬೆಸ್ಕಾಂ, ಮೆಸ್ಕಾಂ, ಹೆಸ್ಕಾಂ, ಜೆಸ್ಕಾಂ ಹಾಗೂ ಚೆಸ್ಕಾಂ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಕುಟುಂಬ ಸಾಫ್ಟ್ ವೇರ್, ಸುವಿಧಾ ಆಂಡ್ರಾಯ್ಡ್ ಆಪ್ ಹಾಗೂ ಸೇವಾಸಿಂಧು ಪೋರ್ಟಲ್ ನಲ್ಲಿ ಎಸ್ ಸಿ- ಎಸ್ ಟಿ ಬಿಪಿಎಲ್ ಕಾರ್ಡ್ ಹೊಂದಿದ ವಿದ್ಯುತ್ ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

ಬಿಪಿಎಲ್ ಪಡಿತರ ಕಾರ್ಡ್ ಹೊಂದಿದ 6.78 ಲಕ್ಷ ಗ್ರಾಹಕರು ನೋಂದಾವಣಿ ಮಾಡಿಕೊಂಡಿದ್ದರೂ, ಇದುವರೆಗೆ ಕೇವಲ 1,13,015 (1.13 ಲಕ್ಷ) ಗ್ರಾಹಕರನ್ನು ಮಾತ್ರ ವಿವಿಧ ಐದು ಎಸ್ಕಾಂಗಳು ಪರಿಶೀಲನೆ ನಡೆಸಿವೆ. ಆ ಗ್ರಾಹಕರಿಗೆ 1,89,80,388 (1.89 ಕೋಟಿ ರೂ.) ಸಬ್ಸೀಡಿ ಹಣವನ್ನು ಪಾವತಿಸಬೇಕಾಗುತ್ತದೆ. ಆದರೆ ನ.22ರ ತನಕ ಬೆಂಗಳೂರು ವೈರ್ ಗೆ ಲಭ್ಯವಾದ ಮಾಹಿತಿ ಪ್ರಕಾರ 24,884 ಫಲಾನುಭವಿಗಳ ಬ್ಯಾಂಕ್ ಖಾತೆಗೆ  33,93,884 ರೂ. ಹಣ ಜಮೆಯಾಗಿದೆ.

ಇಂಧನ ಸಚಿವ ವಿ.ಸುನಿಲ್ ಕುಮಾರ್

ಬೆಸ್ಕಾಂ ನಲ್ಲಿ 2.29 ಲಕ್ಷ ಫಲಾನುಭವಿಗಳು – 16 ಸಾವಿರ ಜನರಿಗಷ್ಟೆ ಸಬ್ಸೀಡಿ :
ಇಡೀ ಐದು ಎಸ್ಕಾಂಗಳ ಪೈಕಿ ಬೆಸ್ಕಾಂ ವಿದ್ಯುತ್ ಸರಬರಾಜು ಕಂಪನಿಯಲ್ಲಿ 2,29,811 (2.29 ಲಕ್ಷ) ಎಸ್ ಸಿ-ಎಸ್ ಟಿ ಬಿಪಿಎಲ್ ಕಾರ್ಡ್ ಹೊಂದಿದ ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಆದರೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿರುವ ಬೆಸ್ಕಾಂ ಈತನಕ ಕೇವಲ 29,810 ಫಲಾನುಭವಿಗಳನ್ನು ಪರಿಶೀಲನೆಗೆ ಒಳಪಡಿಸಿದೆ. ಈ ಅರ್ಹ ಫಲಾನುಭವಿಗಳಿಗೆ ಬೆಸ್ಕಾಂ ಒಟ್ಟು 40,06,387 (40 ಲಕ್ಷ ರೂ.) ಸಬ್ಸೀಡಿ ಹಣ ಪಾವತಿಸಬೇಕಿತ್ತು.

ಚೆಸ್ಕಾಂನಲ್ಲಿ 16 ಸಾವಿರ ಜನರಿಗೆ ತಲುಪಿದೆ ಸಬ್ಸೀಡಿ ಹಣ :
ದುರದೃಷ್ಟವಶಾತ್ ನವೆಂಬರ್ ತಿಂಗಳು ಬಂದರೂ ಕೇವಲ 16,798 ಜನರ ಬ್ಯಾಂಕ್ ಖಾತೆಗಳಿಗೆ 21,93,508 (21.93 ಲಕ್ಷ) ರೂ. ಹಣ ನೇರವಾಗಿ ಜಮೆಯಾಗಿದೆ. ಇದು ಎಸ್ಕಾಂಗಳ ಪೈಕಿ ಅತಿ ಹೆಚ್ಚು ಫಲಾನುಭವಿಗಳಿಗೆ ಸಬ್ಸೀಡಿ ರವಾನೆ ಮಾಡಿದ ಎಸ್ಕಾಂ ಆಗಿದೆ. ಇನ್ನು ಅತಿ ಕಡಿಮೆ ಫಲಾನುಭವಿಗಳು ನೋಂದಣಿಯಾಗಿರುವ ಎಸ್ಕಾಂ ಅಂದರೆ‌ ಅದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (CESC)ಯಾಗಿದೆ. ಇಲ್ಲಿ ಕೇವಲ 71,326 ‘ಅಮೃತ ಜ್ಯೋತಿ’ ಫಲಾನುಭವಿಗಳಿದ್ದರೂ ಕೇವಲ 2,235 ಫಲಾನುಭವಿಗಳ ಪರಿಶೀಲನೆ ನಡೆಸಿ ಅವರಿಗೆ 3,26,451 ರೂ. ಹಣ ಪಾವತಿಯಾಗಬೇಕು ಎಂದು ಹೇಳಿದೆ.

ಹೀಗಿದ್ದರೂ ಕೇವಲ 16,798 ಗ್ರಾಹಕರ ಖಾತೆಗಳಿಗೆ ನೇರ ನಗದು ಪಾವತಿ ವ್ಯವಸ್ಥೆಯಡಿ 21,93,508 (21.93 ಲಕ್ಷ) ರೂ. ಹಣ ಮಾತ್ರ ಪಾವತಿಯಾಗಿದೆ. ಇದೆಲ್ಲವನ್ನು‌ ಗಮನಿಸಿದಾಗ ‘ಅಮೃತ ಜ್ಯೋತಿ’ ಯೋಜನೆ ಇಂಧನ ಸಚಿವ ಸುನಿಲ್ ಕುಮಾರ್ ಅಂದುಕೊಂಡ ವೇಗದಲ್ಲಿ ಕೊಂಡೊಯ್ಯುವಲ್ಲಿ ಎಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಫಲರಾಗಿರುವುದು ಕಂಡುಬರುತ್ತದೆ.

ಬೆಸ್ಕಾಂ ವಿದ್ಯುತ್ ಪರಿವರ್ತಕ

ಅ.15 ರಿಂದ 15 ದಿನಗಳ ಕಾಲ ರಾಜ್ಯದಾದ್ಯಂತ ‘ಅಮೃತ ಜ್ಯೋತಿ’ ಯೋಜನೆಯಡಿ ಫಲಾನುಭವಿಗಳ ನೋಂದಾವಣಿಗೆ ಅಭಿಯಾನ ಹಮ್ಮಿಕೊಳ್ಳುವ ಮುನ್ನ 2.5 ಲಕ್ಷ ಜನರು ಪ್ರತಿ ತಿಂಗಳು ತಮ್ಮ ವಿದ್ಯುತ್ ಬಿಲ್‌ನಲ್ಲಿ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯಲು ನೋಂದಾಯಿಸಿಕೊಂಡಿದ್ದರು. ಆ ಸಂದರ್ಭದಲ್ಲಿ ಇಂಧನ ಸಚಿವ ವಿ.ಸುನಿಲ್ ಕುಮಾರ್ ಅಭಿಯಾನ ಪೂರ್ಣಗೊಳ್ಳುವ ವೇಳೆಗೆ 10 ಲಕ್ಷ ಫಲಾನುಭವಿಗಳು ನೋಂದಣಿಯಾಗಬೇಕು ಎಂದ ಎಸ್ಕಾಂ ಅಧಿಕಾರಿಗಳಿಗೆ ಗುರಿ ನೀಡಿದ್ದರು. ಆದರೂ ಆ ಗುರಿಯನ್ನು‌ ತಲುಪುವಲ್ಲೂ ಐದು ಎಸ್ಕಾಂಗಳು ಸೋತಿವೆ.

ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯಜ್ಯೋತಿ, ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್ ಗಳವರೆಗೆ ವಿದ್ಯುತ್ ಸೌಲಭ್ಯ ನೀಡುವ ಯೋಜನೆ ಇದಾಗಿದೆ.

ವಿದ್ಯುತ್ ಮೀಟರ್

ಯಾರಿಗೆ? ಎಷ್ಟು ಯೂನಿಟ್ ಗಳವರೆಗೆ ಸಹಾಯಧನ? ಯಾರು ಅರ್ಹರು? :
ಗ್ರಾಮೀಣ ಪ್ರದೇಶದಲ್ಲಿ ಭಾಗ್ಯಜ್ಯೋತಿ, ಕುಟೀರಜ್ಯೋತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಉಚಿತವಾಗಿ ನೀಡಲಾಗುತ್ತಿದ್ದ 40 ಯೂನಿಟ್ ಗಳನ್ನು 75 ಯೂನಿಟ್ ಗಳವರೆಗೆ ಹೆಚ್ಚಿಸಲಾಗಿದೆ.

ಗ್ರಾಹಕರು 30-04-2022 ರ ಅಂತ್ಯಕ್ಕೆ ಇರುವ ಬಾಕಿ ವಿದ್ಯುತ್ ಶುಲ್ಕದ ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಿದಲ್ಲಿ ಈ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಅಲ್ಲದೆ ಮಾಸಿಕ ವಿದ್ಯುತ್ ಬಳಕೆ ಗರಿಷ್ಠ 250 ಯೂನಿಟ್ ಮೀರಬಾರದು. ಮಾಪಕ ಅಳವಡಿಕೆ ಮತ್ತು ಮಾಪಕವನ್ನು ಎಸ್ಕಾಂ ಸಿಬ್ಬಂದಿ ಕಡ್ಡಾಯವಾಗಿ ಓದುತ್ತಾರೆ.

ಅಮೃತ ಯೋಜನೆಯಡಿ ಸೌಲಭ್ಯ ಪಡೆಯಲು ಯಾವ ಯಾವ ದಾಖಲೆಗಳು ಬೇಕು? :
ಬಿಪಿಎಲ್ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಜಾತಿ ಆದಾಯ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಸಹಿತ) ದಾಖಲೆ ನೀಡಬೇಕು. 75 ಯೂನಿಟ್ ವರೆಗೆ ಬಳಕೆಯ ವಿದ್ಯುತ್ ಶುಲ್ಕವನ್ನು ಡಿಬಿಟಿ (ನೇರ ನಗದು ಪಾವತಿ ವ್ಯವಸ್ಥೆ) ಮುಖಾಂತರ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.

ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಸುವಿಧಾ ಆಪ್ ಅಥವಾ ಸಂಬಂಧಿಸಿದ ಜೆಸ್ಕಾಂ, ಮೆಸ್ಕಾಂ, ಬೆಸ್ಕಾಂ, ಹೆಸ್ಕಾಂ, ಚಸ್ಕಾಂ  ಉಪ ವಿಭಾಗ ಅಥವಾ ಶಾಖಾ ಕಚೇರಿಗೆ ಭೇಟಿ ನೀಡಿ ಆನ್ಲೈನ್ ನಲ್ಲಿ ನೋಂದಾಯಿಸಿ  ಈ ಸೌಲಭ್ಯ ಪಡೆಯಬಹುದು.

ಸಬ್ಸೀಡಿ ಸಹಾಯಧನ ಹೇಗೆ ನೀಡಲಾಗುತ್ತದೆ? :
ಈ ಸೌಲಭ್ಯಕ್ಕೆ ಅರ್ಹರಾಗಿರುವ ವಿದ್ಯುತ್ ಗ್ರಾಹಕರು ಮಾಸಿಕ ವಿದ್ಯುತ್ ಬಿಲ್ಲನ್ನು ಸಂಪೂರ್ಣವಾಗಿ ನಿಗದಿತ ಅವಧಿಯೊಳಗೆ ಪಾವತಿಸಿದ ನಂತರ ಸದರಿ ಗ್ರಾಹಕರುಗಳಿಗೆ ಡಿಬಿಟಿ ಯೋಜನೆಯ ವ್ಯವಸ್ಥೆಯಡಿ ಸರ್ಕಾರದ ಸಹಾಯಧನವನ್ನು ಮರು ಪಾವತಿಸಲಾಗುವುದು.

ಅಮೃತ ಯೋಜನೆ ಬಗ್ಗೆ ಎಲ್ಲಿ ವಿಚಾರಿಸಬೇಕು?
ಸಾರ್ವಜನಿಕರು ತಮ್ಮ ಮನೆಯ ಲೈಟ್ ಬಿಲ್ ಕಟ್ಟಲು ಹೋಗುವಾಗಿ ಸಂಬಂಧಿಸಿದ ಕಚೇರಿಯಲ್ಲಿ ಅಮೃತ ಜ್ಯೋತಿ ಯೋಜನೆ ಬಗ್ಗೆ ವಿಚಾರಿಸಿದರೆ ಅವರು ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ವಿದ್ಯುತ್ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು.

Quote : ಈ ಸರ್ಕಾರದ ಯೋಜನೆ ಘೋಷಣೆಗಷ್ಟೆ ಸೀಮಿತ :
“ಅಮೃತ ಜ್ಯೋತಿ ವಿದ್ಯುತ್ ಯೋಜನೆಯನ್ನು ರಾಜ್ಯ ಬಿಜೆಪಿ ಸರ್ಕಾರ ಕೇವಲ ಘೋಷಣೆಗಷ್ಟೆ ಸೀಮಿತ ಮಾಡಿಕೊಂಡಿದೆ. ಎಸ್ ಸಿ- ಎಸ್ ಟಿ ಬಿಪಿಎಲ್ ಕಾರ್ಡ್ ಹೊಂದಿದ ಬಡ ಜನರಿಗೆ ನೋಂದಣಿ ಮಾಡಿಕೊಂಡರೂ ಸರಿಯಾಗಿ ಸಬ್ಸೀಡಿ ಹಣ ಹಸ್ತಾಂತರಿಸದಿರುವುದನ್ನು ನೋಡಿದರೆ ಸರ್ಕಾರಕ್ಕೆ ಬಡಜನರಿಗೆ ಸಹಾಯ ಮಾಡುವ ಉದ್ದೇಶವನ್ನು‌ ತೋರಿಸುತ್ತಿಲ್ಲ. ಲೆಕ್ಕ ಕೊಡಲು ಘೋಷಣೆಯಾಗುವ ಯೋಜನೆಗಳ ಪಟ್ಟಿಗೆ ಈ “ಅಮೃತ ಜ್ಯೋತಿ” ಯೂ ಸೇರಿಕೊಂಡಿರುವುದು ಸ್ಪಷ್ಟವಾಗಿ ಗೋಚವಾಗುತ್ತಿದೆ. ಎಸ್ ಸಿ/ಎಸ್ ಟಿ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಗೆ ಮೀಸಲಿಟ್ಟ ಹಣವನ್ನು ಈ ಸರ್ಕಾರ ಬೇರೆಯ ಕೆಲಸಕ್ಕೆ ಬಳಸಿಕೊಂಡಿರುವುದು ಇಂತಹ ಪ್ರಕರಣಕ್ಕೆ ಮತ್ತೊಂದು ಉದಾಹರಣೆ.”

  • ಪ್ರಕಾಶ್ ಬಾಬು, ಸಂಚಾಲಕರು, ಜನಾಧಿಕಾರ ಸಂಘರ್ಷ ಪರಿಷತ್
WhatsApp Join our WhatsApp Channel
Previous Post

AeroIndia2023 | ಬೆಂಗಳೂರಿನಲ್ಲಿ ಫೆ.13ರಿಂದ ಐದು ದಿನಗಳ ಕಾಲ ಏಷ್ಯಾದ ಅತಿದೊಡ್ಡ ಏರ್ ಶೋ-2023

Next Post

2023 Second PUC Exam ALERT | 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.9ರಿಂದ – ಹೀಗಿದೆ ವೇಳಾಪಟ್ಟಿ

Next Post
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ಸಾಂದರ್ಭಿಕ ಚಿತ್ರ)

2023 Second PUC Exam ALERT | 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.9ರಿಂದ - ಹೀಗಿದೆ ವೇಳಾಪಟ್ಟಿ

ಸ್ಪೈಸ್ ಜೆಟ್ ಚೀಫ್ ಪೈಲೆಟ್ ಕ್ಯಾಪ್ಟನ್ ಹರ್ ಕಮಲ್ ಜಿತ್ ಸಿಂಗ್ ಸೋಕೆ ವಿಮಾನದಲ್ಲಿ ತಮ್ಮನ್ನು ಅಭಿನಂದಿಸಿದ ಪ್ರಯಾಣಿಕರಿಗೆ ಕೃತಜ್ಞತೆ ಸಲ್ಲಿಸುತ್ತಿರುವುದು (ತಲೆಗೆ ಕಪ್ಪು ಪೇಟ ಹಾಕಿರುವ ವ್ಯಕ್ತಿ)

#Interesting News | ನಿವೃತ್ತಿಯಾಗುತ್ತಿರುವ ಪೈಲೆಟ್ ಗೆ ವಿಮಾನದಲ್ಲೇ ಬೀಳ್ಕೊಡುಗೆ : ಪ್ರಯಾಣಿಕರ ಚಪ್ಪಾಳೆಗಳ ಕರಾಡತನಕ್ಕೆ ಮನೆಸೋತ ಕ್ಯಾಪ್ಟನ್

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group