Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore Roads | ಪಾದರಾಯನಪುರ ರಸ್ತೆ ಅಗಲೀಕರಣ : ಇನ್ನು ಒಂದು ತಿಂಗಳಲ್ಲಿ 240 ಕೋಟಿ ರೂ. ವೆಚ್ಚದ ಕಾಮಗಾರಿ ಆರಂಭ

ವಸತಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆಯಲ್ಲಿ ನಗರದಲ್ಲಿ ಸೋಮವಾರ ನಡೆದ ಸಭೆಯಲ್ಲಿ ನಿರ್ಧಾರ | ಸಿರ್ಸಿ ವೃತ್ತದಿಂದ ವಿಜಯನಗರ ಪೈಪ್ ಲೈನ್ ವರೆಗೆ ಒಟ್ಟು 1.8 ಕಿ.ಮೀ ಉದ್ದದ ರಸ್ತೆ ಅಗಲೀಕರಣ | ಮುಖ್ಯ ರಸ್ತೆ 24 ಮೀಟರ್ ಗೆ ಅಗಲೀಕರಣ | ಕಾಮಗಾರಿಗೆ 1,63,190 ಚ.ಅಡಿ ಜಾಗದ ಅವಶ್ಯಕತೆ ಆ ಪೈಕಿ 1,13,875 ಚ.ಅಡಿ (140 ಆಸ್ತಿಗಳು) ಖಾಸಗಿ ಸ್ವತ್ತು

by Bengaluru Wire Desk
December 5, 2022
in Bengaluru Focus
Reading Time: 2 mins read
0
ಪಾದರಾಯನಪುರ ರಸ್ತೆಯ ವಾಹನ ದಟ್ಟಣೆ ಸಾಂದರ್ಭಿಕ ಚಿತ್ರ

ಪಾದರಾಯನಪುರ ರಸ್ತೆಯ ವಾಹನ ದಟ್ಟಣೆ ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.5 www.bengaluruwire.com : ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಬಿಎಂಪಿ ಪಶ್ಚಿಮ ವಲಯದ ವಾಹನ ಸವಾರರಿಗೆ ಅಗತ್ಯವಾಗಿದ್ದ ನಗರದ ಪಾದರಾಯನಪುರ ಮುಖ್ಯ ರಸ್ತೆಯ ಅಗಲೀಕರಣ ಕಾಮಗಾರಿಯನ್ನು ಸುಮಾರು 240 ಕೋಟಿ ರೂ. ವೆಚ್ಚದಲ್ಲಿ ಶೀಘ್ರದಲ್ಲೇ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ.ಸೋಮಣ್ಣ ರವರು ತಿಳಿಸಿದರು.

ಪಾದರಾಯನಪುರ ಮುಖ್ಯ ರಸ್ತೆ ಅಗಲೀಕರಣ ಕುರಿತಂತೆ ಇಂದು ವಿಧಾನಸೌಧದ 3ನೇ ಮಹಡಿಯ ಸಮಿತಿ ಕೊಠಡಿ-313ರಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿರ್ಸಿ ವೃತ್ತ(ಬಿನ್ನಿಮಿಲ್ ಟ್ಯಾಂಕ್ ಬಂಡ್ ರಸ್ತೆ)ದಿಂದ ವಿಜಯನಗರ ಪೈಪ್ ಲೈನ್ ವರೆಗೆ ಒಟ್ಟು 1.8 ಕಿ.ಮೀ ಉದ್ದದ ಪಾದರಾಯನಪುರ ಮುಖ್ಯ ರಸ್ತೆಯನ್ನು ಅಗಲೀಕರಣ ಮಾಡುವ ಸಲುವಾಗಿ ಪಾಲಿಕೆಯ ಅಭಿಯಂತರರು, ನಗರ ಯೋಜನೆ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಗಳ ಜೊತೆ ಸಭೆ ನಡೆಸಲಾಯಿತು ಎಂದು ಹೇಳಿದರು.

ಪಾದರಾಯನಪುರ ರಸ್ತೆ ಅಗಲೀಕರಣದಲ್ಲಿ ಯಾವುದೇ ಧಾರ್ಮಿಕ ಸ್ಥಳಗಳಿಗೆ ಧಕ್ಕೆಯಾಗದಂತೆ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ. ರಸ್ತೆ ಅಗಲೀಕರಣ ಮಾಡುವ ವಿಚಾರವಾಗಿ 2017ರಲ್ಲಿ ಟಿಡಿಆರ್ ನೀಡಲು ಸ್ಥಳೀಯರಲ್ಲಿ ಒಪ್ಪಿಸಲಾಗಿತ್ತು. ಆದರೆ ಟಿಡಿಆರ್ ಬಗ್ಗೆ ಜನರಲ್ಲಿ ಸಾಕಷ್ಟು ಗೊಂದಲಗಳಿರುವುದರಿಂದ ಸುಪ್ರೀಂ ಕೋರ್ಟ್ ನ ಸೂಚನೆಯ ಮೇರೆಗೆ ಪ್ರಸ್ತುತವಿರುವ ದರದಂತೆ ಸ್ಥಳೀಯರಿಗೆ ಪರಿಹಾರದ ಮೊತ್ತವನ್ನು ನೀಡಲಾಗುವುದು ಎಂದರು.

ಬಡ ವರ್ಗದ ಜನ ವಾಸಿಸುವ ಸ್ಥಳದಲ್ಲಿ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಬೇಕಾದರೆ ಹಾಗೂ ನಾಗರಿಕತೆಯನ್ನು ಹೆಚ್ಚಿನ ಮಟ್ಟಕ್ಕೆ ಕೊಂಡಯ್ಯಬೇಕಾದರೆ ರಸ್ತೆಗಳು ಹಾಗೂ ಮೂಲಭೂತಸೌಕರ್ಯ ಅತ್ಯಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಪಾದರಾಯನಪುರ ರಸ್ತೆ ಅಗಲೀಕರಣ ಮಾಡಿದಲ್ಲಿ ಸ್ಥಳೀಯ ಪ್ರದೇಶ ಸಾಕಷ್ಟು ಅಭಿವೃದ್ಧಿಯಾಗಲಿದೆ. ಇದರಿಂದ ಚಾಮರಾಜಪೇಟೆ, ವಿಜಯನಗರ ಹಾಗೂ ಗೋವಿಂದರಾಜನಗರದ ಸುತ್ತಮುತ್ತಲಿನ ಜನಕ್ಕೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ಒಂದು ತಿಂಗಳಲ್ಲಿ ಎಲ್ಲಾ ಪ್ರಕ್ರಿಯೆ ಪೂರ್ಣ:

ಪಾದರಾಯನಪುರ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಕೆಲಸ ಪ್ರಾರಂಭಿಸಲಾಗುವುದು. ಆ ಬಳಿಕ ಖಾಸಗಿ ಸ್ವತ್ತುಗಳ ಮಾಲೀಕರಿಗೆ ಸೂಕ್ತ ಪರಿಹಾರವನ್ನು ಹಂತ-ಹಂತವಾಗಿ ನೀಡಲಾಗುವುದು ಎಂದು ಹೇಳಿದರು.

ರಸ್ತೆ ಅಗಲೀಕರಣದ ವಿವರ:

ಸಿರ್ಸಿ ವೃತ್ತದಿಂದ ವಿಜಯನಗರ ಪೈಪ್ ಲೈನ್ ವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಮಾರ್ಗದ ನಕ್ಷೆ

ಚಾಮರಾಜಪೇಟೆ ವ್ಯಾಪ್ತಿಯ ಸಿರ್ಸಿ ವೃತ್ತ(ಬಿನ್ನಿಮಿಲ್ ಟ್ಯಾಂಕ್ ಬಂಡ್ ರಸ್ತೆ)ದಿಂದ ವಿಜಯನಗರ ಪೈಪ್ ಲೈನ್ ವರೆಗೆ ಒಟ್ಟು 1.8 ಕಿ.ಮೀ ಉದ್ದದ ಪಾದರಾಯನಪುರ ಮುಖ್ಯ ರಸ್ತೆಯನ್ನು 24 ಮೀಟರ್ ಗೆ ಅಗಲೀಕರಣ ಮಾಡುವ ಸಲುವಾಗಿ ಒಟ್ಟಾರೆ 1,63,190 ಚ.ಅಡಿ ಜಾಗದ ಅವಶ್ಯಕತೆಯಿದೆ. ಅದರಲ್ಲಿ 1,13,875 ಚ.ಅಡಿ(ಸುಮಾರು 140 ಆಸ್ತಿಗಳು) ಖಾಸಗಿ ಸ್ವತ್ತುಗಳು ಬರಲಿದ್ದು, ಅದಕ್ಕಾಗಿ 140 ಕೋಟಿ ರೂ. ಪರಿಹಾರ ನೀಡಬೇಕಿದೆ. ಉಳಿದಂತೆ ಬಿಬಿಎಂಪಿ, ಕೆಪಿಟಿಸಿಎಲ್, ಜಲಮಂಡಳಿ, ಪೊಲೀಸ್ ಇಲಾಖೆಯ ಸರ್ಕಾರಿ ಜಾಗವಿದ್ದು, ರಸ್ತೆ ಅಗಲೀಕರಣಕ್ಕೆ ಸುಮಾರು 240 ಕೋಟಿ ರೂ. ವೆಚ್ಚವಾಗಲಿದೆ.

ರಸ್ತೆ ಮಾರ್ಗದಲ್ಲಿ 1 ರೈಲ್ವೆ ಒವರ್ ಬ್ರಿಡ್ಜ್, 1 ರಾಜಕಾಲುವೆ ಬ್ರಿಡ್ಜ್ ಹಾಗೂ 2 ಕಲ್ವರ್ಟ್ ಗಳು ಬರಲಿವೆ. ರಸ್ತೆಯ ಎರಡೂ ಬದಿ 1.50 ಮೀಟರ್ ಮಳೆ ನೀರು ಕಾಲುವೆ ಹಾಗೂ 2.50 ಮೀಟರ್ ಪಾದಚಾರಿ ಮಾರ್ಗ ಬರಲಿದ್ದು, ಸಮಗ್ರವಾಗಿ ರಸ್ತೆ ಅಭಿವೃದ್ಧಿಪಡಿಸಲಾಗುತ್ತದೆ.

ಸಭೆಯಲ್ಲಿ ಸ್ಥಳೀಯ ಶಾಸಕರಾದ ಜಮೀರ್ ಅಹ್ಮದ್ ಖಾನ್, ವಲಯ ಜಂಟಿ ಆಯುಕ್ತರಾದ ಯೋಗೇಶ್, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ವಲಯ ಮುಖ್ಯ ಅಭಿಯಂತರರಾದ ದೊಡ್ಡಯ್ಯ, ಪಾಲಿಕೆಯ ಅಭಿಯಂತರರು, ನಗರ ಯೋಜನೆ ವಿಭಾಗದ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

#BirdWildlife | ದಾಂಡೇಲಿ ಮಳೆ ಕಾಡುಗಳಲ್ಲಿನ ವಿಶಿಷ್ಟ ಬಾನಾಡಿ ಲೋಕ…!

Next Post

#AirShow2023 | ಏರ್ ಶೋ 2023 : ರಕ್ಷಣಾ ಸಚಿವಾಲಯದ ಅಧಿಕಾರಿಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ – ಏರ್ ಶೋ ಕುರಿತು ಚರ್ಚೆ

Next Post
ರಕ್ಷಣಾ ಸಚಿವಾಲಯದ ಅಧಿಕಾರಿಗಳು ನಗರದಲ್ಲಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮುಂಬರುವ ಏರ್ ಶೋ2023ರ ಪ್ರದರ್ಶನದ ಕುರಿತು ಚರ್ಚೆ ನಡೆಸಿದರು.

#AirShow2023 | ಏರ್ ಶೋ 2023 : ರಕ್ಷಣಾ ಸಚಿವಾಲಯದ ಅಧಿಕಾರಿಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ – ಏರ್ ಶೋ ಕುರಿತು ಚರ್ಚೆ

Crime News | ಬೆಂಗಳೂರಿನಲ್ಲಿ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ : ಸಿಸಿಟಿವಿಯಲ್ಲಿ ಸೆರೆಯಾಯ್ತು ಕೃತ್ಯ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d