Saturday, May 31, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Bengaluru Focus

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Bengaluru Focus

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

BESCOM DLMS Meter | ಬೆಂಗಳೂರಿನ ವಿದ್ಯುತ್ ಗ್ರಾಹಕರೇ ಗಮನಿಸಿ : ಪ್ರತಿಯೊಂದು ಮನೆಯಲ್ಲಿನ ವಿದ್ಯುತ್ ಮೀಟರ್ ಬದಲಾಗಲಿದೆ – ಈ ಅಂಶಗಳನ್ನು ನೀವು ತಿಳಿಯಲೇಬೇಕು!!

ಬೆಂಗಳೂರಿನ ಬೆಸ್ಕಾಂ ಬಿಎಂಎಜೆಡ್ ವ್ಯಾಪ್ತಿಯಲ್ಲಿದೆ ಒಟ್ಟು 17,68 ಲಕ್ಷ ಮೀಟರ್ ಗಳು | ಹೊಸ ಮೀಟರ್ ಬಳಕೆಯಿಂದ ಹಲವು ಉಪಯೋಗಗಳಿವೆ | ಬೆಸ್ಕಾಂ 4 ವೃತ್ತಗಳಲ್ಲಿ ಈತನಕ (ಡಿ.6) 6.22 ಲಕ್ಷ ಮೀಟರ್ ಬದಲಾವಣೆ ಮಾಡಲಾಗಿದೆ

by Bengaluru Wire Desk
December 19, 2022
in Bengaluru Focus, BW Special
Reading Time: 2 mins read
21
ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

ಬೆಂಗಳೂರು, ಡಿ.10 www.bengaluruwire.com : ರಾಜಧಾನಿ ಬೆಂಗಳೂರಿನ ಮೆಟ್ರೋಪಾಲಿಟನ್ ಪ್ರದೇಶ ವಲಯದಲ್ಲಿನ (BMAZ)  ಎಲೆಕ್ಟ್ರೋ ಮೆಕಾನಿಕಲ್ ಮೀಟರ್ ಗಳನ್ನು ಡಿಜಿಟಲ್ ಮೀಟರ್ ಗೆ ಬದಲಿಸುವ ಕಾರ್ಯ ನಡೆಯುತ್ತಿದೆ. ಈತನಕ ಒಟ್ಟು 6,22,418 ಎಲೆಕ್ಟ್ರೋ ಮೆಕಾನಿಕಲ್ ಮೀಟರ್ ಗಳನ್ನು ಸ್ಟಾಟಿಕ್ ಡಿಜಿಟಲ್ ಮೀಟರ್ ಗೆ ಬದಲಾಯಿಸಲಾಗಿದೆ.

ಹತ್ತು ವರ್ಷಗಳ ಹಿಂದೆ ಅಳವಡಿಸಿರುವ ಎಲೆಕ್ಟ್ರೋ ಮೆಕಾನಿಕಲ್ ಮೀಟರ್ ಗಳನ್ನು ಡಿಎಲ್ಎಮ್ಎಸ್  ಸ್ಟ್ಯಾಟಿಕ್ (Device Language Message Specification – DLMS) ಡಿಜಿಟಲ್ ಮಾಪನಗಳಿಗೆ ಬದಲಾಯಿಸುವ ಕಾರ್ಯ ಜುಲೈ ತಿಂಗಳಲ್ಲಿ ಆರಂಭಗೊಂಡಿತ್ತು. ಅಕ್ಟೋಬರ್ 17ರ ತನಕ ನಗರದಲ್ಲಿ 2,85,941 ಹೊಸ ಡಿಜಿಟಲ್ ಮೀಟರ್ ಗಳನ್ನು ಹಳೆಯ ಮೀಟರ್ ತೆಗೆದು ಬದಲಾಯಿಸಲಾಗಿದೆ. ಅದಾಗಿ 50 ದಿನಗಳಲ್ಲಿ 3,36,477 ಡಿಎಲ್ ಎಮ್ಎಸ್ ಡಿಜಿಟಲ್ ಮೀಟರ್ ಗಳನ್ನು ಬೆಸ್ಕಾಂ ತನ್ನ ಗ್ರಾಹಕರ ಕಟ್ಟಡಗಳಿಗೆ ಅಳವಡಿಸಿದೆ.

ಯಾವ್ಯಾವ ವೃತ್ತಗಳಲ್ಲಿ ಎಷ್ಟೆಷ್ಟು ಮೀಟರ್ ಬದಲಾಯಿಸಲಾಗಿದೆ? :

 ಬೆಂಗಳೂರು ಮೆಟ್ರೋಪಾಲಿಟನ್‌ ಪ್ರದೇಶ ವಲಯದಲ್ಲಿ ಬರುವ ಬೆಸ್ಕಾಂನ ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ವೃತ್ತಗಳಲ್ಲಿ ಡಿಜಿಟಲ್‌ ಮೀಟರ್‌ ಅಳವಡಿಸಲಾಗುತ್ತಿದೆ. ಈ ವರ್ಷದ ಡಿಸೆಂಬರ್ 6ರ ವೇಳೆಗೆ ಉತ್ತರ ವೃತ್ತದಲ್ಲಿ – 1,78,722 ಕಟ್ಟಡಗಳಿಗೆ, ಪಶ್ಚಿಮ ವೃತ್ತದಲ್ಲಿ -1,73,085, ದಕ್ಷಿಣ ವೃತ್ತ- 87,408 ಮತ್ತು ಪೂರ್ವ ವೃತ್ತದ ವ್ಯಾಪ್ತಿಯಲ್ಲಿನ 1,83,203 ಸೇರಿ ಒಟ್ಟು 6,22,418 ಡಿಎಲ್‌ಎಮ್‌ ಎಸ್‌ ಸ್ಟ್ಯಾಟಿಕ್‌ ಸಿಂಗಲ್‌ ಫೇಸ್‌ ಮೀಟರ್‌ ಗಳನ್ನು ಅಳವಡಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಸ್ಟ್ಯಾಟಿಕ್ ಮೀಟರ್ ನಿಂದ ಗ್ರಾಹಕರಿಗೇನು ಉಪಯೋಗ? :

ತಮ್ಮ ಬಳಕೆಯ ವಿದ್ಯುತ್‌ ಕುರಿತು ಗ್ರಾಹಕರಿಗೆ ನಿಖರ ಮಾಹಿತಿ ಸಿಗಲಿದೆ. ಜೊತೆಗೆ ತಾವು 2 ವರ್ಷದ ಹಿಂದಿನ ವರೆಗೆ ಬಳಸಿರುವ ವಿದ್ಯುತ್‌ ಬಳಕೆಯ ವಿವರಗಳನ್ನು ಡಿಜಿಟಲ್‌ ಸ್ಟ್ಯಾಟಿಕ್‌ ಮೀಟರ್‌ ಸಹಾಯದಿಂದ ಗ್ರಾಹಕರು ಉಪ ವಿಭಾಗ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ. ಹೀಗೆ ಪಡೆದ ಮಾಹಿತಿಯನ್ನು ಬೆಸ್ಕಾಂ ಕಛೇರಿಯಿಂದ ಪಡೆದು ಅದನ್ನು ವಿದ್ಯುತ್ ಬಿಲ್ ಜೊತೆ ತುಲನೆ ಮಾಡಿ ತಾವು ಈಗ ಬಳಸಿರುವ ವಿದ್ಯುತ್ ಪ್ರಮಾಣ ಸರಿಯಾಗಿದೆಯೇ ಎಂದು ತಿಳಿಯಬಹುದಾಗಿದೆ.  ಮ್ಯಾಕಾನಿಕಲ್‌ ಮೀಟರ್‌ ಕೆಲವೊಮ್ಮೆ  ತಾಂತ್ರಿಕ ದೋಷಕ್ಕೀಡಾಗಿ ವಿದ್ಯುತ್‌ ಬಳಕೆ ಪ್ರಮಾಣದ ಮಾಹಿತಿ ಸಿಗುತ್ತಿರಲಿಲ್ಲ. ಇದೀಗ ನಿಖರ ಮಾಹಿತಿ ಬೆಸ್ಕಾಂ ಗೆ ದೊರೆಯಲಿದೆ.

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಮೀಟರ್ ಬದಲಾಯಿಸುವ ಕಾರ್ಯದಲ್ಲಿ ವಿಳಂಬ? :

ಮೀಟರ್‌ ಅಳವಡಿಕೆ ಕಾರ್ಯವನ್ನು ರಾಜೇಶ್ವರಿ ಇಲೆಕ್ಟ್ರಿಕಲ್ಸ್‌ ಮತ್ತು ವಿ.ಆರ್. ಪಾಟೀಲ್‌ ಎಲೆಕ್ಟ್ರಿಕಲ್ಸ್‌ ಕಂಪನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದೀಗ ಸಿಂಗಲ್‌ ಫೇಸ್‌ ಡಿಜಿಟಲ್‌ ಮೀಟರ್‌ ಅಳವಡಿಸಲಾಗುತ್ತಿದ್ದು, 3 ಫೇಸ್‌ ಮಿಟರ್‌ ಅಳವಡಿಕೆ ಕಾರ್ಯವನ್ನು ಬೆಸ್ಕಾಂ ಇನ್ನಷ್ಟೆ ಕೈಗೆತ್ತಿಕೊಳ್ಳಲಿದೆ. ಡಿಜಿಟಲ್‌ ಮೀಟರ್‌ ಅಳವಡಿಕೆ ಕಾರ್ಯದ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದ್ದು, ಎರಡೂ ಕಂಪನಿಗಳಿಗೆ ದಿನಕ್ಕೆ ಸರಾಸರಿ 12000 ಸಿಂಗಲ್‌ ಫೇಸ್‌ ಮೀಟರ್‌ ಗಳನ್ನು ಅಳವಡಿಸಲು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ ಬೀಳಗಿ ಸೂಚನೆ ನೀಡಿದ್ದಾರೆ. ಆದರೆ ಡಿ.6ರ ದತ್ತಾಂಶವನ್ನು ಪರಿಶೀಲಿಸಿದಾಗ ಈ ಎರಡು ಸಂಸ್ಥೆಗಳು 6,491 ಮೀಟರ್ ಗಳನ್ನಷ್ಟೇ ಆ ದಿನ ಬದಲಾಯಿಸಿರುವುದು ಕಂಡು ಬಂದಿದೆ.  

ಬೆಂಗಳೂರಿನಲ್ಲಿ 17.68 ಲಕ್ಷ ವಿದ್ಯುತ್ ಮೀಟರ್ ಗಳಿವೆ :

ಬೆಂಗಳೂರಿನ ಬೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 17,68,000 (17.68 ಲಕ್ಷ) ಎಲೆಕ್ಟ್ರೊ ಮೆಕಾನಿಕಲ್ ಮೀಟರ್ ಗಳನ್ನು ಡಿಎಲ್ಎಮ್ಎಸ್ ಸ್ಟ್ಯಾಟಿಕ್  ಡಿಜಿಟಲ್ ಮೀಟರ್ ಗೆ ಬದಲಾವಣೆ ಮಾಡುವ ಯೋಜನೆಗೆ ಒಟ್ಟು 116.69 ಕೋಟಿ ರೂ. ಹಣವನ್ನು ಬೆಸ್ಕಾಂ ವೆಚ್ಚ ಮಾಡುತ್ತಿದೆ. ಬೆಸ್ಕಾಂನ ಬೆಂಗಳೂರು ಗ್ರಾಮಾಂತರ ಪ್ರದೇಶ ಮತ್ತು ಚಿತ್ರದುರ್ಗ ಪ್ರದೇಶ ವಲಯಗಳಲ್ಲಿ ಸುಮಾರು 9 ಲಕ್ಷ ಡಿಜಿಟಲ್‌ ಮೀಟರ್‌ ಅಳವಡಿಕೆಗೆ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ. ಗ್ರಾಹಕರಿಗೆ ತಾವು ಬಳಸುವ ವಿದ್ಯುತ್ ಪ್ರಮಾಣದ ನಿಖರ ಮಾಹಿತಿ ತಿಳಿದುಕೊಳ್ಳಲು ಡಿಎಲ್ಎಮ್ಎಸ್  ಸ್ಟ್ಯಾಟಿಕ್  ಡಿಜಿಟಲ್ ಮಾಪನಗಳಿಂದ ಸಾಧ್ಯವಾಗಲಿದೆ.

ಪ್ರತಿ ಸಿಂಗಲ್ ಫೇಸ್ – ತ್ರಿಫೇಸ್ ಮೀಟರ್ ಬೆಲೆ ಎಷ್ಟು? :

ಡಿಎಲ್ಎಮ್ಎಸ್ ಸ್ಟ್ಯಾಟಿಕ್  ಮೀಟರ್ ಗ್ರಾಹಕ ಸ್ನೇಹಿಯಾಗಿದ್ದು ಸಿಂಗಲ್ ಫೇಸ್ ಅಥವಾ 3 ಫೇಸ್ ಮೀಟರ್ ಅಳವಡಿಸಿಕೊಂಡಿರುವ ಗ್ರಾಹಕರಿಗೆ ವಿದ್ಯುತ್ ವೊಲ್ಟೇಜ್ ಮತ್ತು ಬಳಕೆ ಕುರಿತು ಮಾಹಿತಿ ಪಡೆಯಬಹುದಾಗಿದೆ. ಈ ಡಿಜಿಟಲ್ ಮೀಟರ್‌ ಗಳನ್ನು ಉಚಿತವಾಗಿ ಅಳವಡಿಸಲಾಗುತ್ತಿದ್ದು ಗ್ರಾಹಕರಿಂದ ಯಾವುದೇ ಶುಲ್ಕವನ್ನು ಪಡೆಯುವುದಿಲ್ಲ. ಸಿಂಗಲ್ ಫೇಸ್ ಡಿಜಿಟಲ್ ಮೀಟರ್ ಗೆ ತೆರಿಗೆ,  ವೈರಿಂಗ್‌ ಮತ್ತು ಅಳವಡಿಕೆ ವೆಚ್ಚ ಸೇರಿ 1,497 ರಿಂದ 1,507 ರೂಪಾಯಿ ಮತ್ತು 3 ಫೇಸ್ ಮೀಟರ್ ಗೆ 3,612 ರಿಂದ 3,652 ರೂಪಾಯಿಗಳಾಗಲಿದ್ದು ಈ ವೆಚ್ಚವನ್ನು ಬೆಸ್ಕಾಂ ಭರಿಸುತ್ತದೆ.ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ ಬೀಳಗಿ

ಹೊಸ ಡಿಜಿಟಲ್ ಮೀಟರ್ ಬದಲಾವಣೆ ಸಂಪೂರ್ಣ ಉಚಿತ :

“2024ರ ವೇಳೆಗೆ ಎಲೆಕ್ಟ್ರೋ ಮೆಕಾನಿಕಲ್ ಮೀಟರ್ ಗಳನ್ನು ಡಿಜಿಟಲ್ ಮೀಟರ್ ಗೆ ಬದಲಿಸುವ ಕಾರ್ಯ ಪೂರ್ಣಗೊಳ್ಳಲಿದೆ.  ಗ್ರಾಹಕರು ಡಿಜಿಟಲ್‌ ಮೀಟರ್‌ ಗೆ ಹಣ ಪಾವತಿಸಬೇಕಾಗಿಲ್ಲ. ಏಜೆನ್ಸಿ ಕಡೆಯಿಂದ ಡಿಜಿಟಲ್‌ ಮೀಟರ್‌ ಇನ್‌ ಸ್ಟಾಲ್‌ ಮಾಡುವ ಸಂದರ್ಭದಲ್ಲಿ ಹಣಕ್ಕೆ ಬೇಡಿಕೆ ಇಟ್ಟರೆ ಬೆಸ್ಕಾಂ ಸಹಾಯವಾಣಿ (1912)ಗೆ ದೂರು ನೀಡಲು ಕೋರಲಾಗಿದೆ. ಅಲ್ಲದೆ ಉಪ ವಿಭಾಗ ಕಚೇರಿಗೆ ದೂರು ನೀಡಲು ವಿನಂತಿಸಲಾಗಿದೆ.”

–           ಮಹಂತೇಶ ಬೀಳಗಿ, ವ್ಯವಸ್ಥಾಪಕ ನಿರ್ದೇಶಕರು, ಬೆಸ್ಕಾಂ

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

Defence News | ಸೇನಾಪಡೆಯ ಎಎಸ್ ಸಿ ಸಂಸ್ಥಾಪನಾ ದಿನದ ಅಂಗವಾಗಿ ಯೋಧರ ರೋಚಕ ಸಾಹಸ ಪ್ರದರ್ಶನ

Next Post

#Viral Video | ಆಸ್ಟ್ರೇಲಿಯಾ ಬಳಿಯಿದೆ ಹೊರಜಗತ್ತಿನ ಜೊತೆ ಸಂಪರ್ಕವೇ ಇಲ್ಲದ ಪ್ರಾಚೀನ ಬುಡಕಟ್ಟು ಜನಾಂಗದ ವಿಶಿಷ್ಟ ದ್ವೀಪ..!

Next Post
ಆಸ್ಟ್ರೇಲಿಯಾ ಕಡಲ ತೀರದಿಂದ ನೂರಾರು ಕಿ.ಮೀ ದೂರವಿರುವ ವನವಾಟು ದ್ವೀಪದ ಸಮೂಹದಲ್ಲಿನ ಕ್ವಾಕಿಯಾ ಎಂಬ ನಿಗೂಢ ಮತ್ತು ಅಭೇದ್ಯ ದ್ವೀಪದ ಪ್ರಾಚೀನ ಬುಡಕಟ್ಟು ಜನಾಂಗ (ಕೃಪೆ : ಯೂಟ್ಯೂಬ್ ಚಿತ್ರ)

#Viral Video | ಆಸ್ಟ್ರೇಲಿಯಾ ಬಳಿಯಿದೆ ಹೊರಜಗತ್ತಿನ ಜೊತೆ ಸಂಪರ್ಕವೇ ಇಲ್ಲದ ಪ್ರಾಚೀನ ಬುಡಕಟ್ಟು ಜನಾಂಗದ ವಿಶಿಷ್ಟ ದ್ವೀಪ..!

ಬೆಂಗಳೂರಿನ ಮನೆಯೊಂದರ ಮೇಲ್ಛಾವಣಿ ಮೇಲೆ ಸೌರ ಫಲಕ ಅಳವಡಿಸಿರುವ ಸಾಂದರ್ಭಿಕ ಚಿತ್ರ (ಕೃಪೆ : ಬೆಸ್ಕಾಂ)

Bescom News | ಮಾಸಿಕ ದುಬಾರಿ ವಿದ್ಯುತ್ ಬಿಲ್ ಕಟ್ಟಿ ಚಿಂತೆಯಾಗಿದ್ಯಾ? ಮನೆ ಮೇಲೆ ಸೋಲಾರ್ ಅಳವಡಿಸಿ – ಬೆಸ್ಕಾಂ ಮೂಲಕ ಬೇಗ ಸಬ್ಸೀಡಿ ಪಡೆಯಿರಿ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

May 30, 2025

ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

May 30, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

May 30, 2025

ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

May 30, 2025

BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

May 30, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d