Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bescom News | ಮಾಸಿಕ ದುಬಾರಿ ವಿದ್ಯುತ್ ಬಿಲ್ ಕಟ್ಟಿ ಚಿಂತೆಯಾಗಿದ್ಯಾ? ಮನೆ ಮೇಲೆ ಸೋಲಾರ್ ಅಳವಡಿಸಿ – ಬೆಸ್ಕಾಂ ಮೂಲಕ ಬೇಗ ಸಬ್ಸೀಡಿ ಪಡೆಯಿರಿ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ʼಸೋಲಾರ ರೂಫ್‌ ಟಾಪ್ ಹಂತ-02ʼ ಯೋಜನೆಯಡಿ ಬೆಸ್ಕಾಂನಲ್ಲಿ ನೋಂದಣಿಗೊಂಡಿರುವ ಏಜೆನ್ಸಿಗಳ ಮೂಲಕ ಸೋಲಾರ್‌ ಫಲಕಗಳನ್ನು ಅಳವಡಿಸಿಕೊಳ್ಳಲು ಗ್ರಾಹಕರು ಅರ್ಜಿ ಸಲ್ಲಿಸಬಹುದು. | ಗ್ರಾಹಕರಿಗೆ 3 ಕಿ.ವ್ಯಾ. ಸಾಮರ್ಥ್ಯದವರೆಗಿನ ಸೋಲಾರ್ ಘಟಕಗಳ ಅಳವಡಿಕೆಗೆ ಶೇ. 40 ರಷ್ಟು ಸಹಾಯಧನ

by Bengaluru Wire Desk
December 10, 2022
in Bengaluru Focus
Reading Time: 2 mins read
0
ಬೆಂಗಳೂರಿನ ಮನೆಯೊಂದರ ಮೇಲ್ಛಾವಣಿ ಮೇಲೆ ಸೌರ ಫಲಕ ಅಳವಡಿಸಿರುವ ಸಾಂದರ್ಭಿಕ ಚಿತ್ರ (ಕೃಪೆ : ಬೆಸ್ಕಾಂ)

ಬೆಂಗಳೂರಿನ ಮನೆಯೊಂದರ ಮೇಲ್ಛಾವಣಿ ಮೇಲೆ ಸೌರ ಫಲಕ ಅಳವಡಿಸಿರುವ ಸಾಂದರ್ಭಿಕ ಚಿತ್ರ (ಕೃಪೆ : ಬೆಸ್ಕಾಂ)

ಬೆಂಗಳೂರು, ಡಿ.10 www.bengaluruwire.com : ಹಸಿರು ಇಂಧನ ಬಳಕೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ʼಸೋಲಾರ ರೂಫ್‌ ಟಾಪ್ ಹಂತ-02ʼ ಯೋಜನೆಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (Bescom) ಚಾಲನೆ ನೀಡಿದ್ದು, ಗ್ರಾಹಕರು ತಮ್ಮ ಮನೆಯ ಮೇಲ್ಛಾವಣಿಗಳಲ್ಲಿ ಸೋಲಾರ್‌ ಘಟಕಗಳ ಅಳವಡಿಸಿಕೊಂಡಲ್ಲಿ ಸಬ್ಸೀಡಿ ದೊರೆಯಲಿದೆ.

ಗ್ರಾಹಕರು ಪಡೆದಿರುವ ವಿದ್ಯುತ್‌ ಸಾಮರ್ಥ್ಯಕ್ಕೆ ಅನುಗುಣವಾಗಿ ಸೋಲಾರ್‌ ಘಟಕಗಳನ್ನು ಅಳವಡಿಸಿ, ಸೌರ ವಿದ್ಯುತ್‌ ಅನ್ನು ಬಳಸಿಕೊಂಡು ಹೆಚ್ಚುವರಿ ವಿದ್ಯುತ್‌ ಅನ್ನು ಗ್ರಿಡ್‌ಗೆ ಮಾರಾಟ ಮಾಡಿ ಹಣಗಳಿಸುವ ಮಹತ್ವದ ಯೋಜನೆ ಇದಾಗಿದೆ. ಇದಕ್ಕಾಗಿ ನೆಟ್‌ ಮೀಟರ್‌ ಅನ್ನು ಗ್ರಾಹಕರು ಅಳವಡಿಸಿಕೊಳ್ಳಬೇಕಾಗುತ್ತದೆ.

ಯೋಜನೆಯನ್ನು ಬೆಸ್ಕಾಂ ವ್ಯಾಪ್ತಿಯಲ್ಲಿ ಕಾರ್ಯಗತಗೊಳಿಸಲು ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಅವರು ಇತ್ತೀಚೆಗೆ ನಡೆದ  ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ್ದರು.

ಬೆಂಗಳೂರಿನ ಸಾಂದರ್ಭಿಕ ಚಿತ್ರ

ವಿವಿಧ ರೀತಿಯ ಸಬ್ಸೀಡಿಗಳು ಹೀಗೆ ಸಿಗುತ್ತೆ :

ಸೌರ ಗೃಹ ಯೋಜನೆಯ ಉಪಯೋಗ ಪಡೆಯುವ ಗ್ರಾಹಕರಿಗೆ ಗರಿಷ್ಟ 3 ಕಿ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳಿಗೆ ಶೇ. 40 ರಷ್ಟು ಸಹಾಯಧನ, 3 ಕಿ.ವ್ಯಾ ಸಾಮರ್ಥ್ಯಕ್ಕಿಂತ ಹೆಚ್ಚು ಮತ್ತು 10 ಕಿ. ವ್ಯಾ ಸಾಮರ್ಥ್ಯದವರೆಗಿನ ಸೌರ ಘಟಕಗಳಿಗೆ ಶೇ. 40 ಜತೆಗೆ ಶೇ.20 ರಷ್ಟು ಹೆಚ್ಚುವರಿ ಸಹಾಯಧನವನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ವಸತಿ ಸಮುಚ್ಛಯಗಳ ಮೇಲ್ಛಾವಣಿಗಳ ಸಾಮಾನ್ಯ (ಕಾಮನ್‌ ಏರಿಯಾ ಮಾತ್ರ) ಸೌಲಭ್ಯಗಳಾದ ಲಿಫ್ಟ್‌, ಮೋಟರ್‌ ಮತ್ತು ಲೈಟ್‌ಗಳಿಗೆ  ಸೋಲಾರ ಘಟಕಗಳ ಸ್ಥಾಪನೆಯ ಸಾಮಾರ್ಥ್ಯವನ್ನು ಗರಿಷ್ಟ 500 ಕಿ.ವ್ಯಾ ಸೀಮಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ನವ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯು ಸೌರ ಘಟಕಗಳ ಸ್ಥಾಪನೆಗಾಗಿ, ಬೆಸ್ಕಾಂಗೆ 10 ಮೆಗಾ ವ್ಯಾಟ್‌ ಸಾಮರ್ಥ್ಯದ ಸೌರಫಲಕ ಅಳವಡಿಸುವಂತೆ ಜವಾಬ್ದಾರಿ ನೀಡಿದೆ. ಈ ಯೋಜನೆಯಡಿಯಲ್ಲಿ  ಸೋಲಾರ್‌ ಘಟಕಗಳನ್ನು ಅಳವಡಿಸಿಕೊಳ್ಳಲು ಬೆಸ್ಕಾಂಗೆ ಈವರೆಗೆ 1500 ಅರ್ಜಿಗಳು ಸಲ್ಲಿಕೆಯಾಗಿವೆ. ʼಸೌರ ಗೃಹʼ ಹೆಸರಿನಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಬೆಸ್ಕಾಂನಲ್ಲಿ ನೋಂದಣಿಗೊಂಡಿರುವ (ಎಂಪ್ಯಾನಲ್ಡ್‌) ಏಜೆನ್ಸಿಗಳ ಮೂಲಕ ಸೌರ ಫಲಕಗಳನ್ನು (Solar Panels) ಅಳವಡಿಸಿಕೊಳ್ಳಬಹುದಾಗಿದೆ. ಜೊತೆಗೆ ಸೋಲಾರ್‌ ಘಟಕಗಳನ್ನು ಅಳವಡಿಸುವ ಏಜನ್ಸಿಗಳು 5 ವರ್ಷಗಳ ಅವಧಿಗೆ ಅವುಗಳನ್ನು ನಿರ್ವಹಣೆ ಮಾಡಬೇಕಾಗಿದೆ.

ಸೋಲಾರ್ ಪ್ಯಾನೆಲ್ ಅಳವಡಿಸಲು ಗ್ರಾಹಕರು ಏನು ಮಾಡಬೇಕು?:

ಸೌರ ಗೃಹ ಯೋಜನೆ ಪ್ರಯೋಜನ ಪಡೆಯಲು ಗ್ರಾಹಕರಿಗೆ ಎರಡು ಆಯ್ಕೆಗಳನ್ನು ನೀಡಲಾಗಿದೆ. ಕೇಂದ್ರ ಸರ್ಕಾರದ ನವ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯು ಯೋಜನೆ ಅನುಷ್ಠಾನವನ್ನು ಈ ವರ್ಷದ 10ನೇ ಜೂನ್ ನಿಂದ ಸರಳೀಕರಣಗೊಳಿಸಿದ್ದು, ಇಲಾಖೆ ಅಭಿವೃದ್ದಿ ಪಡಿಸಿರುವ ವೆಬ್ ಪೋರ್ಟಲ್ https://solarrooftop.gov.in ಮುಖಾಂತರ ಗ್ರಾಹಕರು ಅರ್ಜಿ  ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರದ ವೆಬ್‌ ಸೈಟ್‌ ಮೂಲಕ ಅರ್ಜಿ ಸಲ್ಲಿಸಿದರೆ, ಯೋಜನೆ ಅನುಷ್ಠಾನ ಇನ್ನಷ್ಟು ಸರಳ. ಸರ್ಕಾರದ ಸಹಾಯಧನ ನೇರವಾಗಿ ಗ್ರಾಹಕರ ಬ್ಯಾಂಕ್‌ ಖಾತೆಗೆ ಜಮೆಯಾಗುತ್ತೆ. ಇಲಾಖೆಯಲ್ಲಿ ನೋಂದಣಿಯಾಗಿರುವ ಏಜೆನ್ಸಿಗಳನ್ನು ಸಂಪರ್ಕಿಸಿ,  ಸೋಲಾರ್‌ ಪ್ಯಾನೆಲ್‌ ಗಳನ್ನು ಗ್ರಾಹಕರು ತಮ್ಮ ಮನೆಯ ಮೇಲ್ಛಾವಣಿಗಳಲ್ಲಿ ಅಳವಡಿಸಿಕೊಳ್ಳಬಹುದಾಗಿದೆ.

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಬೆಸ್ಕಾಂನಲ್ಲಿ ನೋಂದಣಿ ಮಾಡುವುದು ಹೇಗೆ? :

ಬೆಸ್ಕಾಂನಲ್ಲಿ ನೋಂದಣಿಗೊಂಡಿರುವ ಏಜೆನ್ಸಿಗಳ ಮೂಲಕ ಸೋಲಾರ್‌ ಫಲಕಗಳನ್ನು ಅಳವಡಿಸಿಕೊಳ್ಳಲು https://bescom.karnataka.gov.in/ ಮೂಲಕ ಗ್ರಾಹಕರು ಅರ್ಜಿ ಸಲ್ಲಿಸಬಹುದಾಗಿದೆ. ಬೆಸ್ಕಾಂ ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಿ ಸೋಲಾರ್‌ ಪ್ಯಾನಲ್‌ ಗಳನ್ನು ನೆಟ್‌ ಮೀಟರ್‌ ಅಡಿಯಲ್ಲಿ ಅಳವಡಿಸಿಕೊಂಡರೆ, ಕೇಂದ್ರ ಸರ್ಕಾರದಿಂದ ಬರುವ ಸಹಾಯಧನವನ್ನು ಬೆಸ್ಕಾಂ ನೇರವಾಗಿ ಸೋಲಾರ್‌ ಘಟಕ ಅಳವಡಿಸಿದ ಏಜೆನ್ಸಿಗೆ ಪಾವತಿಸುತ್ತದೆ.  ಗ್ರಾಹಕರು ಸಹಾಯಧನ ಮೊತ್ತವನ್ನು ಬಿಟ್ಟು, ಉಳಿದ ಹಣವನ್ನು ಸಂಬಂಧಿಸಿದ ಏಜೆನ್ಸಿಗಳಿಗೆ ಪಾವತಿಸಿದರೆ ಸಾಕು. ವೆಬ್ ಪೋರ್ಟಲ್‌ ಮೂಲಕ ಗ್ರಾಹಕರಿಗೆ ಸೋಲಾರ್ ಮೇಲ್ಛಾವಣಿ ಘಟಕಗಳನ್ನು ಅಳವಡಿಸಲು ಬೆಸ್ಕಾಂನಲ್ಲಿ ಎಂಪ್ಯಾನಲ್ಡ್‌ ಆಗಿರುವ ಏಜೆನ್ಸಿಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ನೋಂದಾಯಿತ ಏಜನ್ಸಿಗಳಿಂದ ಸ್ಥಳ ಸಮೀಕ್ಷೆ :

ನೋಂದಾಯಿತ  ಏಜೆನ್ಸಿಗಳು ಫಲಾನುಭವಿಗಳ ಸೋಲಾರ್‌ ಪ್ಯಾನಲ್‌ ಸಾಮರ್ಥ್ಯವನ್ನು ನಿರ್ಣಯಿಸಲು ಸ್ಥಳ ಸಮೀಕ್ಷೆಯನ್ನು ಮಾಡಿ ಸೋಲಾರ್ ಘಟಕಗಳ ಸಾಮಾರ್ಥ್ಯವನ್ನು ನಿಗದಿಪಡಿಸುತ್ತಾರೆ. ಫಲಾನುಭವಿಗಳ ಮನೆಯ ಮೇಲ್ಛಾವಣಿಯಲ್ಲಿ ಅಳವಡಿಸಬಹುದಾದ ಸೋಲಾರ್‌ ಪ್ಯಾನಲ್‌ ಸಾಮರ್ಥ್ಯದ ಕುರಿತು ಗ್ರಾಹಕರಿಗೆ (ಫಲಾನುಭವಿಗೆ) ಅಗತ್ಯ ಮಾರ್ಗದರ್ಶನ ನೀಡುತ್ತಾರೆ. ಹಾಗೆಯೆ ಯೋಜನೆಯನ್ನು ಪಡೆಯಲು ಬೇಕಾಗುವ ಅಗತ್ಯ ಅನುಮೋದನೆ, ನೆಟ್-ಮೀಟರ್ ಅಳವಡಿಕೆ ಮತ್ತು ಬೆಸ್ಕಾಂ ಅಧಿಕಾರಿಗಳಿಂದ ತಪಾಸಣೆ ನಡೆಸಲು ಸಹಾಯ ಮಾಡುತ್ತಾರೆ.

ಷರತ್ತುಗಳನ್ನು ಉಲ್ಲಂಘಿಸಿದರೆ ಏಜನ್ಸಿಗಳು ಕಪ್ಪುಪಟ್ಟಿಗೆ :

ಯಾವುದೇ ಏಜೆನ್ಸಿಯ ಪ್ರತಿನಿಧಿಗಳು ಗ್ರಾಹಕರನ್ನು ತಪ್ಪು ದಾರಿಗೆಳೆಯುವ ಮಾಹಿತಿಯನ್ನು ನೀಡಿದರೆ ಅಥವಾ ಪೋರ್ಟಲ್‌ ನಲ್ಲಿ ಉಲ್ಲೇಖಿಸಿರುವ ಷರತ್ತುಗಳನ್ನು ಉಲ್ಲಂಘಿಸಿದರೆ ಅವರನ್ನು ಕಪ್ಪುಪಟ್ಟಿಗೆ ಸೇರಿಸುವುದು ಮತ್ತು ಬ್ಯಾಂಕ್‌ ಗ್ಯಾರಂಟಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಮತ್ತು  ಏಜೆನ್ಸಿಯ ವಿರುದ್ದ ಎಸ್ಕಾಂಗಳು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಗೃಹ ಬಳಕೆಯ ಸೌರ ಮೇಲ್ಛಾವಣಿಯಿಂದ 4 ಗಿಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ :

ಕೇಂದ್ರ ಇಂಧನ ಇಲಾಖೆಯು, ಸೌರ ಮೇಲ್ಛಾವಣಿ ಘಟಕಗಳಿಂದ ಉತ್ಪಾದಿಸಲು ಉದ್ದೇಶಿಸಿರುವ 40 ಗಿಗಾ ವ್ಯಾಟ್ ಸಾಮರ್ಥ್ಯದಲ್ಲಿ 4 ಗಿಗಾ ವ್ಯಾಟ್ (4000 ಮೆಗಾ ವ್ಯಾಟ್‌)ನಷ್ಟು ವಿದ್ಯುತ್ ಅನ್ನು  ಗೃಹ ಬಳಕೆಯ ಗ್ರಾಹಕರ ಮೇಲ್ಛಾವಣಿಗಳಿಂದ ಉತ್ಪಾದಿಸುವ ಉದ್ದೇಶ ಹೊಂದಿದೆ.

WhatsApp Join our WhatsApp Channel
Previous Post

#Viral Video | ಆಸ್ಟ್ರೇಲಿಯಾ ಬಳಿಯಿದೆ ಹೊರಜಗತ್ತಿನ ಜೊತೆ ಸಂಪರ್ಕವೇ ಇಲ್ಲದ ಪ್ರಾಚೀನ ಬುಡಕಟ್ಟು ಜನಾಂಗದ ವಿಶಿಷ್ಟ ದ್ವೀಪ..!

Next Post

Weather News | ಡಿ.14ರಿಂದ ಬೆಂಗಳೂರಿಗೆ ಸೂರ್ಯನ ಬಿಸಿಲು : ಸೋಮವಾರ ಮತ್ತು ಮಂಗಳವಾರ ಮಳೆ ಮುಂದುವರಿಕೆ : ಹವಾಮಾನ ಇಲಾಖೆ

Next Post
ಸಾಂದರ್ಭಿಕ ಚಿತ್ರ

Weather News | ಡಿ.14ರಿಂದ ಬೆಂಗಳೂರಿಗೆ ಸೂರ್ಯನ ಬಿಸಿಲು : ಸೋಮವಾರ ಮತ್ತು ಮಂಗಳವಾರ ಮಳೆ ಮುಂದುವರಿಕೆ : ಹವಾಮಾನ ಇಲಾಖೆ

ಸಾಂದರ್ಭಿಕ ಚಿತ್ರ

Bescom Power Cuts | ಬೆಸ್ಕಾಂನಿಂದ ತುರ್ತು ನಿರ್ವಹಣಾ ಕೆಲಸ ಹಿನ್ನಲೆ : ನಾಳೆ (ಡಿ.13) ಈ ಸ್ಥಳಗಳಲ್ಲಿ ವಿದ್ಯುತ್ ಕಡಿತವಿರಲಿದೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group