Saturday, June 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

  • Bengaluru Focus

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

  • Bengaluru Focus

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW Special | Yettinahole Water Project | ಎತ್ತಿನಹೊಳೆ ತಿರುವು ಮೊದಲ ಹಂತದ ಕಾಮಗಾರಿ ಬಹುತೇಕ ಪೂರ್ಣ : ಇದೇ ಡಿಸೆಂಬರ್ ಅಂತ್ಯದಿಂದ ಪ್ರಾಯೋಗಿಕವಾಗಿ ನೀರು ಪೂರೈಕೆ

ಎರಡನೇ ಹಂತದಲ್ಲಿ ಕೈಗೆತ್ತಿಕೊಂಡಿರುವ 260 ಕಿ.ಮೀ ಉದ್ದದ ಗುರುತ್ವಾಕರ್ಷಣೆ ಆಧಾರಿತ ಕಾಲುವೆ ನಿರ್ಮಾಣ ಕಾಮಗಾರಿಯ ಪೈಕಿ ಶೇ.70ರಷ್ಟು ಪೂರ್ಣಗೊಂಡಿದ್ದು, ಮುಂದಿನ ವರ್ಷದ ಮಾರ್ಚ್ 2023ಕ್ಕೆ ಪೂರ್ಣಗೊಳ್ಳಲಿದೆ.

by Bengaluru Wire Desk
December 29, 2022
in BW Special, Public interest
Reading Time: 2 mins read
0
ಎತ್ತಿನಹೊಳೆ ಯೋಜನೆಯಡಿ ನಿರ್ಮಾಣಗೊಂಡಿರುವ ಎತ್ತರಿಸಿದ ನೀರಿನ ಕಾಲುವೆಯ ಚಿತ್ರ

ಎತ್ತಿನಹೊಳೆ ಯೋಜನೆಯಡಿ ನಿರ್ಮಾಣಗೊಂಡಿರುವ ಎತ್ತರಿಸಿದ ನೀರಿನ ಕಾಲುವೆಯ ಚಿತ್ರ

ಬೆಳಗಾವಿ, ಡಿ.23 www.bengaluruwire.com : ಕುಡಿಯುವ ನೀರು ಮತ್ತು ಅಂತರ್ಜಲ ಕುಸಿತ ಸಮಸ್ಯೆ ಎದುರಿಸುತ್ತಿರುವ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನರಿಗೆ ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ.

ಎತ್ತಿನಹೊಳೆ ತಿರುವು ಯೋಜನೆಯ ಮೊದಲ ಹಂತದ ಕಾಮಗಾರಿಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದ್ದು, ಈ ವರ್ಷದ ಡಿಸೆಂಬರ್ ಅಂತ್ಯಕ್ಕೆ ಪ್ರಾಯೋಗಿಕವಾಗಿ ಚಾಲನೆಗೊಳಿಸಲು ಯೋಜಿಸಲಾಗಿದೆ. ಅದೇ ರೀತಿ ಎರಡನೇ ಹಂತದಲ್ಲಿ ಕೈಗೆತ್ತಿಕೊಂಡಿರುವ 260 ಕಿ.ಮೀ ಉದ್ದ ಗುರುತ್ವಾಕರ್ಷಣೆ ಆಧಾರಿತ ಕಾಲುವೆ ನಿರ್ಮಾಣ ಕಾರ್ಯ ಶೇ.70ರಷ್ಟು ಪೂರ್ಣಗೊಂಡಿದೆ ಎಂದು ಜಲಸಂಪನ್ಮೂಲ ಇಲಾಖೆ ತಿಳಿಸಿದೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳನ್ನು ಎರಡು ಹಂತಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಒಂದನೇ ಹಂತದಲ್ಲಿ ಏತ ಕಾಮಗಾರಿಗಳನ್ನು ಹಾಗೂ ವಿದ್ಯುತ್ ಕಾಮಗಾರಿಗಳನ್ನು 7 ಪ್ಯಾಕೇಜ್ ಗಳಾಗಿ ಕೈಗೆತ್ತಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಕೈಗೊಂಡಿರುವ ಲಿಫ್ಟ್ ಕಾಂಪೊನೆಂಟ್ ಕಾಮಗಾರಿಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ವರ್ಷದ ಡಿಸೆಂಬರ್ ಅಂತ್ಯಕ್ಕೆ ಪ್ರಾಯೋಗಿಕವಾಗಿ ಚಾಲನೆಗೊಳಿಸಲು ಯೋಜಿಸಲಾಗಿದೆ.

ಎತ್ತಿನಹೊಳೆ ಯೋಜನೆಯ ಪಂಪ್ ಹೌಸ್ ಮತ್ತು ಅದರ ನಿಯಂತ್ರಣ ಕೊಠಡಿಯ ಚಿತ್ರ

260 ಕಿ.ಮೀ ಕಾಲುವೆ ಪೈಕಿ 170 ಕಿ.ಮೀ ಕಾಮಗಾರಿ ಪೂರ್ಣ :

ಅಲ್ಲದೆ ಎರಡನೇ ಹಂತದಲ್ಲಿ ಕೈಗೆತ್ತಿಕೊಂಡಿರುವ 260 ಕಿ.ಮೀ ಉದ್ದದ ಗುರುತ್ವಾಕರ್ಷಣೆ ಆಧಾರಿತ ಕಾಲುವೆ ನಿರ್ಮಾಣ ಕಾಮಗಾರಿಯ ಪೈಕಿ ಶೇ.70ರಷ್ಟು ಪೂರ್ಣಗೊಂಡಿದ್ದು, ಮುಂದಿನ ವರ್ಷದ ಮಾರ್ಚ್ 2023ಕ್ಕೆ ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಯೋಜಿಸಲಾಗಿದೆ. ಭೈರಗೊಂಡ್ಲು ಜಲಾಶಯಕ್ಕಿಂತ ಮೊದಲು ಕವಲೊಡೆಯುವ ಟಿ.ಜಿ ಹಳ್ಳಿ, ರಾಮನಗರ ಫೀಡರ್, ಮಧುಗಿರಿ ಫೀಡರ್ ಮತ್ತು ಗೌರಿಬಿದನೂರು ಫೀಡರ್ ಗಳ ನಿರ್ಮಾಣ ಕಾಮಗಾರಿಗಳು ವಿವಿಧ ಹಂತದ ಪ್ರಗತಿಯಲ್ಲಿರುತ್ತದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಶ್ರವಣಬೆಳಗೊಳ ಶಾಸಕ ಸಿ.ಎಸ್.ಬಾಲಕೃಷ್ಣ ಎತ್ತಿನಹೊಳೆ ಯೋಜನೆ ಕುರಿತಂತೆ ಕೇಳಿದ ಚುಕ್ಕೆ ಗುರಿತಿಲ್ಲದ ಪ್ರಶ್ನೆಗೆ ಜಲಸಂಪನ್ಮೂಲ ಸಚಿವ ಬಿ.ಗೋವಿಂದ ಕಾರಜೋಳ ಈ ಉತ್ತರ ನೀಡಿದ್ದಾರೆ.

ಎತ್ತಿನಹೊಳೆ ತಿರುವು ಯೋಜನೆಯಲ್ಲಿ ವಿವಿಧ ಹಂತದಲ್ಲಿರುವ ಫೀಡರ್ ಗಳ ಕಾಮಗಾರಿಯು ಈ ಕೆಳಕಂಡಂತಿದೆ :

1)            260 ಕಿ.ಮೀ ಉದ್ದದ ಗುರುತ್ವಾಕರ್ಷಣೆ ಕಾಲುವೆ ಪೈಕಿ 170 ಕಿ.ಮೀ ಕಾಮಗಾರಿಯು ಬಹುತೇಕ ಪೂರ್ಣಗೊಂಡಿರುತ್ತದೆ.

ಎತ್ತಿನಹೊಳೆ ಯೋಜನೆಯಡಿ ನಿರ್ಮಾಣಗೊಂಡಿರುವ ಕಾಲುವೆಯ ಚಿತ್ರ

2)            ಟಿ.ಜಿ.ಹಳ್ಳಿ ಮತ್ತು ರಾಮನಗರ ಫೀಡರ್ ಕಾಲುವೆಯ ಒಟ್ಟು 52.89 ಕಿ.ಮೀ ಉದ್ದದ ಪೈಕಿ, ಈವರೆಗೆ 42.30 ಕಿ.ಮೀ ಪೈಪ್ ಲೈನ್ ನಿರ್ಮಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಯು ಪ್ರಗತಿಯಲ್ಲಿರುತ್ತದೆ.

3)            ಮಧುಗಿರಿ ಫೀಡರ್ ಕಾಲುವೆ ಒಟ್ಟು 120.48 ಕಿ.ಮೀ ಉದ್ದದ ಪೈಕಿ ಈವರೆಗೆ 98 ಕಿ.ಮೀ ಪೈಪ್ ಲೈನ್ ನಿರ್ಮಾಣ ಮಾಡುವ ಕಾಮಗಾರಿಯು ಪೂರ್ಣಗೊಂಡಿದೆ. ಬಾಕಿ ಕಾಮಗಾರಿಯು ನಡೆಯುತ್ತಿದೆ.

4)            ಗೌರಿಬಿದನೂರು ಫೀಡರ್ ಕಾಲುವೆಯ ಒಟ್ಟು 81.60 ಕಿ.ಮೀ ಉದ್ದದ ಪೈಕಿ 73 ಕಿ.ಮೀ ಪೈಪ್ ಲೈನ್ ನಿರ್ಮಿಸುವ ಕಾರ್ಯ ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಯು ಕೈಗೊಳ್ಳಲಾಗುತ್ತಿದೆ.

ಭೈರಗೊಂಡ್ಲು ಜಲಾಶಯಕ್ಕಿಂತ ಮೊದಲು ಕವಲೊಡೆಯುವ 254.97 ಕಿ.ಮೀ ಉದ್ದದ ಪೂರಕ ಕಾಲುವೆ ನಿರ್ಮಾಣ ಕಾಮಗಾರಿಯು ಶೇ.85ರಷ್ಟು ಪೂರ್ಣಗೊಂಡಿದೆ. ಇದು ಜೂನ್ 2023ಕ್ಕೆ ಪೂರ್ಣಗೊಳ್ಳಲಿದೆ. ಭೈರಗೊಂಡ್ಲು ಜಲಾಶಯದ ಸಂಗ್ರಹಣಾ ಸಾಮರ್ಥ್ಯವನ್ನು 1.5 ರಿಂದ 2 ಟಿಎಂಸಿಗೆ ಸೀಮಿತಗೊಳಿಸಿ 23,251 ಕೋಟಿ ರೂ. ಮೊತ್ತದ ಪುನರ್ ಪರಿಷ್ಕ್ರತ ಯೋಜನಾ ವರದಿಗೆ ಅನುಮೋದನೆ ನೀಡಲು ಜಲಸಂಪನ್ಮೂಲ ಇಲಾಖೆ ಕ್ರಮ ಕೈಗೊಂಡಿದೆ.

ಎತ್ತಿನಹೊಳೆ ತಿರುವು ಯೋಜನೆ ವಿವರ :

ಎತ್ತಿನಹೊಳೆ ಮೂಲ ಅಂದಾಜಿನಡಿ ಲಿಫ್ಟ್ ಕಾಂಪೊನೆಂಟ್ ಅಡಿಯಲ್ಲಿ ಒಟ್ಟು 8 ಲಿಫ್ಟ್ ಯೋಜನೆ (ವಿದ್ಯುತ್ ಚಾಲಿತ ಬೃಹದಾಕಾರದ ಮೋಟರ್‌ಗಳನ್ನು ಅಳವಡಿಸಿ ದೊಡ್ಡಗಾತ್ರದ ಪೈಪ್‌ಗಳ ಮೂಲಕ ನೀರೆತ್ತುವುದು)ಗಳಿದೆ. ಇದರಿಂದ ವಾರ್ಷಿಕ 24.1 ಟಿಎಂಸಿ ನೀರನ್ನು 960 ಮೀಟರ್ ಎತ್ತರಕ್ಕೆ ಎತ್ತಿ ಅಲ್ಲಿಂದ 260 ಕಿ.ಮೀ ಉದ್ದದ ಗುರುತ್ವಾಕರ್ಷಣೆ ಕಾಲುವೆ ಮೂಲಕ ಕೊರಕಟಗೆರೆ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಜಲಾಶಯವೊಂದಕ್ಕೆ ನೀರು ಹರಿಸಿ ತದನಂತರ ಆ ಜಲಾಶಯದಿಂದ ಲಿಫ್ಟ್ ಮುಖಾಂತರ ನೀರನ್ನು ಎತ್ತಿ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರಿನ ಉದ್ದೇಶಕ್ಕೆ ಹಾಗೂ ಕೆರೆ ತುಂಬಿಸಲು ಯೋಜಿಸಲಾಗಿದೆ.

ಎತ್ತಿನಹೊಳೆ ಯೋಜನೆಯ ಗುರುತ್ವಾಕರ್ಷಣೆ ಕಾಲುವೆಯ ಚಿತ್ರ

ಎತ್ತಿನಹೊಳೆ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರದೇಶಗಳಿಗೆ ಸುರಕ್ಷಿತ ಕುಡಿಯುವ ನೀರನ್ನು ಪೂರೈಸುವ ಯೋಜನೆ ಇದಾಗಿದೆ. ಅಲ್ಲದೆ ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಭಾಗಗಳಲ್ಲಿ ಕಾಮಗಾರಿಗಳನ್ನು ಕೂಡಲೇ ಕೈಗೆತ್ತಿಗೊಳ್ಳಲು ಈ ಭಾಗದ ಜನಪ್ರತಿನಿಧಿಗಳು ತೀವ್ರವಾಗಿ ಒತ್ತಾಯಿಸುತ್ತಿರುವುದರಿಂದ ಹಾಗೂ ಯೋಜನೆಯ ವಿವಿಧ ಹಂತಗಳಲ್ಲಿರುವ ಕಾಮಗಾರಿಗಳನ್ನು ಏಕ ಕಾಲದಲ್ಲಿ ಕೈಗೆತ್ತಿಕೊಂಡು ಪೂರ್ಣಗೊಳಿಸಿ ಕುಡಿಯುವ ನೀರು ಪೂರೈಸುವ ದೃಷ್ಟಿಯಿಂದ ಭೈರಗೊಂಡ್ಲು ಜಲಾಶಯದ ನಂತರ ನೀರನ್ನು ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪೂರೈಸುವ ಕಾಮಗಾರಿಗಳನ್ನು ಕೂಡ ಕೈಗೆತ್ತಿಕೊಳ್ಳಲು ಕ್ರಮವಹಿಸಲಾಗಿರುತ್ತದೆ ಎಂದು ಗೋವಿಂದ ಕಾರಜೋಳ ವಿಧಾನಸಭೆಯಲ್ಲಿ ಉತ್ತರ ನೀಡಿದ್ದಾರೆ.

ಪರಿಷ್ಕೃತ ಯೋಜನಾ ಮೊತ್ತ ಮೂಲ ಅಂದಾಜು ಮೊತ್ತಕ್ಕಿಂತ ಶೇ.179ರಷ್ಟು ಏರಿಕೆ :

2012ರಲ್ಲಿ ಎತ್ತಿನಹೊಳೆ ಯೋಜನೆ ಪ್ರಾರಂಭವಾದಾಗಿನಿಂದ ಈತನಕ ಯೋಜನೆಯ ಮೊತ್ತ ಶೇ.179ರಷ್ಟು ಹೆಚ್ಚಾಗಿದೆ. ಯೋಜನೆ ಜಾರಿಯ ಪ್ರಾರಂಭದಲ್ಲಿ 8,323 ಕೋಟಿ ರೂ. ಇದ್ದ ಯೋಜನಾ ಅಂದಾಜು ಮೊತ್ತ, 2014ರ ಇಸವಿಯಲ್ಲಿ 12,912.36 ಕೋಟಿ ರೂ.ಗೆ ಪರಿಷ್ಕೃತಗೊಂಡಿತ್ತು. ಡಿ.9ರಂದು ರಾಜ್ಯ ಸಚಿವ ಸಂಪುಟದಲ್ಲಿ ಎತ್ತಿನಹೊಳೆ ತಿರುವು ಯೋಜನೆಯ ಪರಿಷ್ಕೃತ ಯೋಜನಾ ಮೊತ್ತವನ್ನು 23,251 ಕೋಟಿ ರೂ.ಗಳಿಗೆ ಏರಿಕೆ ಮಾಡಲಾಗಿದೆ.

WhatsApp Join our WhatsApp Channel
Previous Post

BW SPECIAL | #Covid19 Bengaluru | ಬೆಂಗಳೂರಿನಲ್ಲಿ ಕೋವಿಡ್ ನ ರೂಪಾಂತರಿ XBB ತಳಿ ತೀವ್ರ ಏರಿಕೆ…! : ಸ್ಟ್ರಾಂಡ್ ಲೈಫ್ ಸೈನ್ಸ್ ವರದಿಯಲ್ಲಿ ಬಹಿರಂಗ

Next Post

BW Special | Namma Metro Rail | ನಮ್ಮ ಮೊಟ್ರೊ ಆದಾಯ- ಪ್ರಯಾಣಿಕರ ಸಂಖ್ಯೆಯಲ್ಲಿ ವೃದ್ಧಿ : 11 ತಿಂಗಳಲ್ಲಿ 339 ಕೋಟಿ ರೂ. ಸಂಪಾದಿಸಿದ BMRCL

Next Post
ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

BW Special | Namma Metro Rail | ನಮ್ಮ ಮೊಟ್ರೊ ಆದಾಯ- ಪ್ರಯಾಣಿಕರ ಸಂಖ್ಯೆಯಲ್ಲಿ ವೃದ್ಧಿ : 11 ತಿಂಗಳಲ್ಲಿ 339 ಕೋಟಿ ರೂ. ಸಂಪಾದಿಸಿದ BMRCL

ಹೊಸ ವರ್ಷ ಆಚರಣೆಗೆ ರಸ್ತೆಯುದ್ದಕ್ಕೂ ದೀಪಾಲಂಕಾರ ಅಳವಡಿಸಿರುವುದು. (ಸಾಂದರ್ಭಿಕ ಚಿತ್ರ)

Covid19 New Year | ಹೊಸ ವರ್ಷ ಸಂಭ್ರಮಾಚರಣೆಗೆ ರಾತ್ರಿ 1ರ ತನಕ ಅವಕಾಶ : ವಿವಿಧ ರೀತಿಯ ನಿರ್ಬಂಧಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

Please login to join discussion

Like Us on Facebook

Follow Us on Twitter

Recent News

Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

June 20, 2026
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

June 20, 2026
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group