Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | Illegal Advertisements | ಫ್ಲೆಕ್ಸ್- ಕಟೌಟ್… ಗೆಟೌಟ್ ಯಾವಾಗ? ನಗರದಲ್ಲಿ ಜೀವಂತ ಇದ್ಯಾ ಬಿಬಿಎಂಪಿ ಜಾಹೀರಾತು ವಿಭಾಗ?

ಬೀದಿ ಬೀದಿಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ, ರಸ್ತೆ ವಿಭಜಕಗಳಲ್ಲಿ ರಾಜಕೀಯ ಪುಢಾರಿಗಳು, ಹಿಂಬಾಲಕರ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ರಾರಾಜಿಸುತ್ತಿದ್ದರೂ, ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ವಿಫಲ | ಹೈಕೋರ್ಟ್ ಸಾಕಷ್ಟು ಬಾರಿ ಚಾಟಿ ಬೀಸಿದರೂ ಆದೇಶ ಪಾಲನೆ ಮಾಡದ ಪಾಲಿಕೆ

by Bengaluru Wire Desk
January 13, 2023
in Bengaluru Focus, BW Special
Reading Time: 2 mins read
0
ಜ್ಞಾನಭಾರತಿ ಕ್ವಾಟ್ರಸ್ ಹತ್ತಿರ ರಸ್ತೆಯ ತಿರುವಿನಲ್ಲಿ ರಾಜರಾಜೇಶ್ವರಿ ನಗರ ಶಾಸಕ ಮತ್ತು ಸಚಿವರಾದ ಮುನಿರತ್ನ ಹಾಗೂ ಇತರರ ಆಳೆತ್ತರದ ಕಟೌಟ್ ಗಳನ್ನು ಅಳವಡಿಸಿರುವ ಚಿತ್ರ.

ಜ್ಞಾನಭಾರತಿ ಕ್ವಾಟ್ರಸ್ ಹತ್ತಿರ ರಸ್ತೆಯ ತಿರುವಿನಲ್ಲಿ ರಾಜರಾಜೇಶ್ವರಿ ನಗರ ಶಾಸಕ ಮತ್ತು ಸಚಿವರಾದ ಮುನಿರತ್ನ ಹಾಗೂ ಇತರರ ಆಳೆತ್ತರದ ಕಟೌಟ್ ಗಳನ್ನು ಅಳವಡಿಸಿರುವ ಚಿತ್ರ.

ಬೆಂಗಳೂರು, ಜ.13 www.bengaluruwire.com  :  ರಾಜಧಾನಿ ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಹಾವಳಿ ಮತ್ತೆ ಹೆಚ್ಚಾಗಿದೆ. ಏಪ್ರಿಲ್- ಮೇ ತಿಂಗಳಿನಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ, ಸಂಕ್ರಾಂತಿ ನೆಪದ ಹಿನ್ನಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳು, ಅವರ ಹಿಂಬಾಲಕರು ತಮ್ಮ ಪ್ರಚಾರಕ್ಕಾಗಿ ಫ್ಲೆಕ್ಸ್, ಬ್ಯಾನರ್ ಕಂಡ ಕಂಡಲ್ಲಿ ಹಾಕಿ ಬೆಂಗಳೂರಿನ ಸೌಂದರ್ಯವನ್ನು ಹಾಳುಗೆಡುವುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜಧಾನಿಯ ಕೇಂದ್ರ ಭಾಗದಲ್ಲಿ, ಮೆಜಿಸ್ಟಿಕ್, ರಾಜರಾಜೇಶ್ವರಿನಗರ, ಯಶವಂತಪುರ, ಮೈಸೂರು ರಸ್ತೆ, ಚಾಮರಾಜಪೇಟೆ, ಬಸವನಗುಡಿ, ಚಿಕ್ಕಪೇಟೆ, ಕೆ.ಆರ್.ಮಾರ್ಕೇಟ್ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಅನಧಿಕೃತ ಜಾಹೀರಾತು ಹಾವಳಿ ಹೆಚ್ಚಾಗಿದೆ. ಸಂಕ್ರಾಂತಿ ಹಬ್ಬದ ನೆಪದಲ್ಲಿ ರಾಜಕಾರಣಿಗಳು, ಅವರ ಹಿಂಬಾಲಕರು ವಾರ್ಡ್ ರಸ್ತೆ, ರಸ್ತೆಗಳಲ್ಲಿ, ಸರ್ಕಲ್ ಗಳಲ್ಲಿ ತಮ್ಮ ನೆಚ್ಚಿನ ನಾಯಕರು, ಪುಡಿ ಮುಖಂಡರುಗಳ ಫೋಟೊಗಳನ್ನು, ಬ್ಯಾನರ್, ಬಂಟಿಂಗ್ಸ್ ಗಳನ್ನು ಹಾಕಿ ಅಲ್ಲಿನ ಸ್ಥಳಗಳನ್ನು ಹಾಳುಗೆಡುವುತ್ತಿದ್ದಾರೆ. ಕೆಲವು ಕಡೆಗಳಲ್ಲಿ ರಸ್ತೆ ತಿರುವಿನ ಭಾಗದಲ್ಲೇ 20-30 ಅಡಿ ಎತ್ತರ ಕಟೌಟ್ ಹಾಕುವ ಕೆಟ್ಟ ಪರಿಪಾಠ ಮುಂದುವರೆದಿದೆ. ಇದು ಪಾದಚಾರಿಗಳು, ವಾಹನ ಸವಾರರ ಪ್ರಾಣಕ್ಕೆ ಕುತ್ತು ತರುವ ಸಾಧ್ಯತೆಯಿದೆ.

ವಿಧಾನಸೌಧದಿಂದ ಕೂಗಳತೆ ದೂರದಲ್ಲಿರೋ ಮಿನ್ಸ್ಕ್ ಸ್ಕ್ವೇರ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಯಾರ ಮುಲಾಜಿಲ್ಲದೆ ಅಳವಡಿಸಿದ ಅನಧಿಕೃತ ಬಂಟಿಂಗ್ಸ್

ಹೈಕೋರ್ಟ್ 2018ರಿಂದಲೂ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಸೇರಿದಂತೆ ಅನಧಿಕೃತವಾಗಿ ಜಾಹೀರಾತು ಹಾಕುವುದನ್ನು ನಿಷೇಧಿಸಿ, ಅವುಗಳನ್ನು ಪರಿಣಾಮಕಾರಿಯಾಗಿ ಪಾಲನೆ ಮಾಡುವಂತೆ ಹಲವು ಬಾರಿ ಬಿಬಿಎಂಪಿಗೆ ಹಾಗೂ ಅಲ್ಲಿನ ಅಧಿಕಾರಿಗಳಿಗೆ ಸಾಕಷ್ಟು ಎಚ್ಚರಿಕೆ, ಚಾಟಿ ಬೀಸಿದ್ದರೂ, ದಪ್ಪ ಚರ್ಮದ ಬಿಬಿಎಂಪಿ ಭ್ರಷ್ಟ, ಸೊಂಬೇರಿ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಕೈಜೋಡಿಸಿ ಆ ಜಾಹೀರಾತುಗಳನ್ನು ತೆರವುಗೊಳಿಸುವ ಗೋಜಿಗೆ ಹೋಗಿಲ್ಲ. ಕೆಲವು ಕಡೆಗಳಲ್ಲಿ ಸರ್ಕಾರಿ ಜಾಹೀರಾತುಗಳಿಗೆ ಮೀಸಲಾದ ವಾರ್ತಾ ಇಲಾಖೆಯ ಹೋರ್ಡಿಂಗ್ ಗಳ ಮೇಲೆಯೂ ಅನಧಿಕೃತ ಜಾಹೀರಾತುಗಳನ್ನು ಅವಳವಡಿಸಲಾಗುತ್ತಿದೆ. ಗೋಡೆ, ರಸ್ತೆ, ಮರ, ಕಾಂಪೌಂಡ್, ವೃತ್ತ ಎಲ್ಲವೂ ಆಯ್ತು. ಇದರ ಜೊತೆಗೆ ವಿಜಯನಗರ, ಗೋವಿಂದರಾಜ ನಗರ ಮತ್ತಿತರ ವಿಧಾನಸಭಾ ಕ್ಷೇತ್ರದಲ್ಲಿ ಜನಪ್ರತಿನಿಧಿಗಳು ಆಟೋಗಳ ಹಿಂಭಾಗ ಜಾಹೀರಾತು ಹಾಕಿಸುತ್ತಿದ್ದಾರೆ. ಇದಕ್ಕೆಲ್ಲ ಯಾರ ಅನುಮತಿಯಿದೆ? ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಬಿಬಿಎಂಪಿ ಜಾಹೀರಾತು ವಿಭಾಗ ಅಧಿಕಾರಿಗಳಿಗ್ಯಾಕೆ ಈ ಪಾಟಿ ಅಸಡ್ಡೆ? :

ನಗರದಲ್ಲಿ ಅನಧಿಕೃತ ಜಾಹೀರಾತು ತೆರವು ಸಂಬಂಧ ಬಿಬಿಎಂಪಿಯು ವಲಯವಾರು ಎಷ್ಟು ಜಾಹೀರಾತುಗಳನ್ನು ತೆರವುಗೊಳಿಸಿದೆ? ಎಷ್ಟು ಸಂಸ್ಥೆ ಅಥವಾ ವ್ಯಕ್ತಿಗಳ ಮೇಲೆ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿ ಕ್ರಮ ಕೈಗೊಂಡಿದೆ? ಹಾಗೂ ಕಾನೂನು ಉಲ್ಲಂಘಿಸಿದವರಿಗೆ ಎಷ್ಟು ದಂಡ ವಿಧಿಸಲಾಗಿದೆ? ಎಂದು ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ (Assistant Commissioner) ಶ್ರೀಧರ್ ಮೂರ್ತಿಯವರನ್ನು ಬೆಂಗಳೂರು ವೈರ್ ಪ್ರಶ್ನಿಸಿದಾಗ ಅವರು, ನಾನು ಯಾವ ಮಾಹಿತಿಯನ್ನು ಕೊಡುವುದಿಲ್ಲ. ಮಾಹಿತಿ ಬೇಕಿದ್ದರೆ ಹಿರಿಯ ಅಧಿಕಾರಿಗಳನ್ನು ಕೇಳಿ ಎಂದು ಪ್ರತಿಕ್ರಿಯಿಸಿದ್ದಾರೆ.

  • ಬಿಬಿಎಂಪಿ ಅಧಿಕಾರಿಗಳೇ ನಿಮಗೆ ಇದಕ್ಕಿಂತ ಸಾಕ್ಷಿ ಬೇಕಾ?

ಬಿಬಿಎಂಪಿಯಲ್ಲಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತರ ಹುದ್ದೆಯ ಮಾಹಿತಿ ಅಧಿಕಾರಿ ಹುದ್ದೆ. ಅಲ್ಲದೆ ಅದೊಂದು ಗೆಜೆಟೆಡ್ ಪೋಸ್ಟ್. ಅನಧಿಕೃತ ಜಾಹೀರಾತು ಅಳವಡಿಕೆ ವಿಚಾರ ಸಾಮಾನ್ಯ ಜನರ ಮೇಲೆ, ನಗರದ ಸೌಂದರ್ಯದ ಮೇಲೆ ಹಾಗೂ ಅದಕ್ಕಿಂತ ಹೆಚ್ಚಾಗಿ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಮುಖ ವಿಚಾರ. ಈ ವಿಚಾರದ ಕುರಿತಂತೆ ಸಾರ್ವಜನಿಕ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡುವ ಕೆಲಸವನ್ನು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿ ನಿರ್ವಹಿಸಲಿಲ್ಲ ಅಂದರೆ ಹೇಗೆ? ಇದು ಹೋಗಲಿ, ಜಾಹೀರಾತು ವಿಭಾಗದ ವಿಶೇಷ ಆಯುಕ್ತರಾದ ದೀಪಕ್ ಅವರಿಗೂ ಕರೆ ಮಾಡಿದಾಗ ಕನಿಷ್ಠ ಫೋನ್ ಎತ್ತುವುದಿರಲಿ, ಮಾಧ್ಯಮಗಳು ಕಳುಹಿಸಿದ ಸಂದೇಶಕ್ಕೂ ಪ್ರತಿಕ್ರಿಯೆ ಕೊಡಲಿಲ್ಲ.

ಹೈಕೋರ್ಟ್ ನಲ್ಲಿದೆ ನ್ಯಾಯಂಗ ನಿಂದನೆ ಅರ್ಜಿ ಪ್ರಕರಣ :

ಕಳೆದ ವರ್ಷದ ನವೆಂಬರ್ ನಲ್ಲಿ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ, ನಗರದಲ್ಲಿ ಅನಧಿಕೃತ ಜಾಹೀರಾತು ಹಾವಳಿ ತಡೆಗಟ್ಟುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯನ್ನು ದಾಖಲಿಸಿದ್ದರು. ಈ ಅರ್ಜಿಯು ಹೈಕೋರ್ಟ್ ನಲ್ಲಿ ಇನ್ನು ವಿಚಾರಣೆ ಹಂತದಲ್ಲಿದೆ. ಹೀಗಿದ್ದರೂ ಪಾಲಿಕೆಯ ಜಾಹೀರಾತು ವಿಭಾಗದ ಅಧಿಕಾರಿಗಳಾಗಲಿ,  ವಾರ್ಡ್ ಮಟ್ಟದಲ್ಲಿ ಎಇಇ, ಕಂದಾಯ ಅಧಿಕಾರಿಗಳಾಗಲಿ ತಲೆ ಕೆಡೆಸಿಕೊಳ್ಳುತ್ತಿಲ್ಲ. ಪಾಲಿಕೆಯಲ್ಲಿ ಪ್ರತಿ ವಲಯಕ್ಕೊಬ್ಬರು ವಿಶೇಷ ಆಯುಕ್ತರು ನೇಮಿಸಿದ್ದರೂ, ಅವರ ಗಮನಕ್ಕೆ ಅನಧಿಕೃತ ಜಾಹೀರಾತು ಅಳವಡಿಕೆ ವಿಚಾರ ಬಂದಿದ್ದರೂ ಡೋಂಟ್ ಕೇರ್ ಮನಸ್ಥಿತಿಯಲ್ಲಿದ್ದಾರೆ ಎಂದು ನಾಗರೀಕರು ದೂರುತ್ತಿದ್ದಾರೆ.

ರಸ್ತೆ ವಿಭಜಕದಲ್ಲೂ ಅಪಾಯಕಾರಿ ಫ್ಲೆಕ್ಸ್ ಅಳವಡಿಕೆ ನಿಂತಿಲ್ಲ :

ಬೆಂಗಳೂರಿನ ರಸ್ತೆ ವಿಭಜಕಗಳು ಅಂದರೆ ಅವು ಬಿಟ್ಟಿ ಪ್ರಚಾರ ನೀಡುವ ತಾಣವಾ?

ಹಲವು ಕಡೆಗಳಲ್ಲಿ ರಸ್ತೆ ವಿಭಜಕಗಳ ಮಧ್ಯೆ ಅಪಾಯಕಾರಿಯಾಗಿ ಫ್ಲೆಕ್ಸ್ ಅಳವಡಿಕೆ ಮಾಡುತ್ತಿರುವುದು, ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಚಾಲಕರ ಪಾಲಿಗೆ ಪ್ರಾಣಕ್ಕೆ ಸಂಚಕಾರ ತರುವಂತಿದೆ. ನಗರದಲ್ಲಿ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರು ಪ್ರಾಣ ಕಳೆದುಕೊಳ್ಳುವ ಮುನ್ನ ಬಿಬಿಎಂಪಿ ಸಿಬ್ಬಂದಿ ಇಂತಹ ಫ್ಲೆಕ್ಸ್ ಗಳನ್ನು ತ್ವರಿತಗತಿಯಲ್ಲಿ ತೆರವು ಮಾಡಬೇಕಾದ ಅವಶ್ಯಕತೆಯಿದೆ.

ಏಪ್ರಿಲ್- ಮೇ ತಿಂಗಳಿನಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆಯೂ ಸಮೀಪಿಸುತ್ತಿರುವುದರಿಂದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಲ್ಲಿರುವ ಹಾಲಿ, ಮಾಜಿ ಶಾಸಕರು, ಹೊಸ ಟಿಕೆಟ್ ಆಕಾಂಕ್ಷಿಗಳು ತಮ್ಮ ಹಿಂದಿನ ಸಾಧನೆಗಳನ್ನು ಬಿಂಬಿಸುವ, ತಮ್ಮ ಹಿರಿಯ ನಾಯಕರಿಗೆ ಶುಭ ಕೋರುವ, ಹುಟ್ಟು ಹಬ್ಬದ ದೊಡ್ಡ ದೊಡ್ಡ ಬ್ಯಾನರ್ ಗಳನ್ನು ಹಾಕುವ ಚಾಳಿ ಮತ್ತೆ ವ್ಯಾಪಕವಾಗಿ ಎಲ್ಲೆಡೆ ಹೆಚ್ಚಾಗಿದೆ.

ಮಾಧ್ಯಮಗಳು, ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ರೀತಿಯಲ್ಲಿ ಅನಧಿಕೃತ ಜಾಹೀರಾತುಗಳ ಬಗ್ಗೆ ಆಕ್ಷೇಪ, ಟೀಕೆ ವ್ಯಕ್ತಪಡಿಸಿದಾಗ, ಕಣ್ಣೊರೆಸುವಂತೆ ಪಾಲಿಕೆ ಅಧಿಕಾರಿಗಳು ಬಿರುಸಿನಿಂದ ನಾಲ್ಕೈದು ದಿನ ಅನಧಿಕೃತ ಅಡ್ವಟೈಸ್ ಮೆಂಟ್ ಗಳನ್ನು ತೆಗೆದು ಹಾಕುವ ಕೆಲಸ ಮಾಡಿ, ಆನಂತರ ಯಥಾ ಪ್ರಕಾರ ಸುಮ್ಮನಾಗುತ್ತಾರೆ.

‘ನಗರದ ಸೌಂದರ್ಯ ಹಾಗೂ ಪರಿಸರಕ್ಕೆ ಮಾರಕವಾಗಿರುವ ಅನಧಿಕೃತ ಜಾಹೀರಾತುಗಳನ್ನು ನಿಯಂತ್ರಿಸಿ ಹೈಕೋರ್ಟ್ ಆದೇಶವನ್ನು ಜಾರಿಗೆ ತರುವ ಉದ್ದೇಶ ಬಿಬಿಎಂಪಿಗೆ ಇದ್ದಂತಿಲ್ಲ. ಸ್ಥಳೀಯ ಮಟ್ಟದಲ್ಲಿ ರಾಜಕಾರಣಿಗಳಿಂದ ಶಿಫಾರಸ್ಸು, ಅವರ ಒತ್ತಡದ ಕಾರಣದಿಂದ ವರ್ಗಾವಣೆಯಾಗಿ ಆಯಕಟ್ಟಿನ ಸ್ಥಳಕ್ಕೆ ಬಂದ ಬಿಬಿಎಂಪಿ ಅಧಿಕಾರಿಗಳು, ಅಲ್ಲಿನ ಜನಪ್ರತಿನಿಧಿಗಳು, ಅವರ ಹಿಂಬಾಲಕರು ಸಾರ್ವಜನಿಕ ಸ್ಥಳದಲ್ಲಿ ಹಾಕಿದ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್, ಕಟೌಟ್ ಗಳನ್ನು ತೆರವುಗೊಳಿಸುವ ಗೋಜಿಗೆ ಹೋಗುವುದಿಲ್ಲ. ಹೈಕೋರ್ಟ್ ಆದೇಶವಿದ್ದಾಗ್ಯೂ, ರಾಜಕಾರಣಿಗಳು ಮತ್ತವರ ಪಟಾಲಮ್ ಕಾನೂನು ಬಾಹೀರವಾಗಿ ಹೀಗೆ ಜಾಹೀರಾತು ಅಳವಡಿಸಿ ಪ್ರಚಾರ ತೆಗೆದುಕೊಳ್ಳುವುದು ತಪ್ಪು. ಅನಧಿಕೃತ ಜಾಹೀರಾತುಗಳನ್ನು ನಿಯಂತ್ರಿಸುವಲ್ಲಿ ವಿಫಲರಾದ ಜಾಹೀರಾತು ವಿಭಾಗದ ಹೊಣೆ ಹೊತ್ತ ಬೇಜವಾಬ್ದಾರಿ ಅಧಿಕಾರಿಗಳನ್ನು ಪಾಲಿಕೆ ಬೇರೆಡೆ ವರ್ಗಾವಣೆ ಮಾಡಿದರೆ ಉತ್ತಮ.’

ಸಾಯಿದತ್ತ, ಸಾಮಾಜಿಕ ಕಾರ್ಯಕರ್ತರು

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Vidhanasoudha | ವಿಧಾನಸೌಧದ ಮುಂಭಾಗ ವೈಚಾರಿಕ ಕ್ರಾಂತಿಯ ಹರಿಕಾರ ಬಸವಣ್ಣ – ನಾಡಪ್ರಭು ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ

Next Post

BW ಸಂಪಾದಕೀಯ | BENGALURU WIRE 2nd Anniversary | ಜನಮನ ಗೆದ್ದ  “ಬೆಂಗಳೂರು ವೈರ್” ಗೆ ಎರಡನೇ ವಾರ್ಷಿಕೋತ್ಸವದ ಸಂಭ್ರಮ

Next Post
ಬೆಂಗಳೂರು ವೈರ್ ಜ.14ರಂದು ತನ್ನ ಎರಡನೇ ವಸಂತವನ್ನು ಪೂರೈಸಿ ಮೂರನೇ ವರ್ಷಕ್ಕೆ ಕಾಲಿಡುತ್ತಿದೆ.

BW ಸಂಪಾದಕೀಯ | BENGALURU WIRE 2nd Anniversary | ಜನಮನ ಗೆದ್ದ  "ಬೆಂಗಳೂರು ವೈರ್" ಗೆ ಎರಡನೇ ವಾರ್ಷಿಕೋತ್ಸವದ ಸಂಭ್ರಮ

ಬೆಂಗಳೂರು ವೈರ್ ಇರಿಸುವ ಹೆಜ್ಜೆಗಳು ಚಿಕ್ಕದಾದರೂ, ಅದು ಮೂಡಿಸುವ ಹೆಜ್ಜೆ ಗುರುತುಗಳು ದೊಡ್ಡದು

ಎರಡನೇ ವಸಂತ ಪೂರೈಸಿದ "ಬೆಂಗಳೂರು ವೈರ್" ವರದಿ ನಾಡಿನಲ್ಲಿ ಮೂಡಿಸಿದ ಪರಿಣಾಮಗಳೇನು? ಇಲ್ಲಿದೆ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d