Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#KSRTC EV Power Plus Bus Service | ಬೆಂಗಳೂರು – ಮೈಸೂರು ನಡುವೆ ಕೆಎಸ್ ಆರ್ ಟಿಸಿ ಇವಿ ಪವರ್ ಪ್ಲಸ್ ಬಸ್ ಸೇವೆಗೆ ಉತ್ತಮ ಪ್ರತಿಕ್ರಿಯೆ..!

ಇವಿ ಪವರ್ ಪ್ಲಸ್ ಬಸ್ ಎಕ್ಸ್ ಪ್ರೆಸ್ ವೇ ರಸ್ತೆಯ ಮುಖಾಂತರ ಬೆಂಗಳೂರು- ಮೈಸೂರು ನಡುವೆ ಸಂಚಾರ | ಬೆಂಗಳೂರು ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರಿಗೆ 300 ರೂ. ಟಿಕೆಟ್ ದರ | ಫೆಬ್ರವರಿ ಎರಡನೇ ವಾರದಿಂದ ರಾಜಧಾನಿಯಿಂದ ರಾಜ್ಯದ ಬೇರೆ ನಗರಗಳಿಗೂ 49 ಇವಿ ಬಸ್ ಸೇವೆ

by Bengaluru Wire Desk
January 17, 2023
in Bengaluru Focus, News Wire
Reading Time: 1 min read
0
ಕೆಎಸ್ ಆರ್ ಟಿಸಿ ಬಸ್ ಸಾಂದರ್ಭಿಕ ಚಿತ್ರ

ಕೆಎಸ್ ಆರ್ ಟಿಸಿ ಬಸ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.17 www.bengaluruwire.com : ರಾಜ್ಯದಲ್ಲೇ ಮೊತ್ತ ಮೊದಲ ಬಾರಿಗೆ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಬೆಂಗಳೂರು- ಮೈಸೂರು ನಡುವೆ ಆರಂಭಿಸಿದ ಎಲೆಕ್ಟ್ರಿಕ್ ಬಸ್ ಸೇವೆ (Electric Bus Service) ಇವಿ ಪವರ್ ಪ್ಲಸ್ (EV Power Plus) ಹೆಸರಿನಲ್ಲಿ ಸೋಮವಾರದಿಂದ ಪ್ರಾರಂಭಿಸಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯ ಬೆಂಗಳೂರು ಮೈಸೂರು ನಡುವೆ ಸಂಸ್ಥೆಯು ಒಂದು ಬಸ್ ಸೇವೆಯನ್ನು ಪ್ರಾಯೋಗಾರ್ಥವಾಗಿ ಆರಂಭಿಸಿದ್ದು, ಬರುವ ದಿನಗಳಲ್ಲಿ ಇವಿ ಬಸ್ ಸೇವೆ ಹೆಚ್ಚಿಸಲು ನಿರ್ಧರಿಸಿದೆ.

ಮೊದಲ ದಿನವೇ ಬೆಂಗಳೂರು- ಮೈಸೂರು ನಡುವೆ ಒಟ್ಟಾರೆ 85 ಜನರು ಹೊಸ ಇವಿ ಬಸ್ ನಲ್ಲಿ ಪ್ರಯಾಣಿಸಿ ಎರಡು ನಗರಗಳ ನಡುವೆ ಎಲೆಕ್ಟ್ರಿಕ್ ಬಸ್ ನಲ್ಲಿ ಸಂಚರಿಸಿದ ಅನುಭವ ಪಡೆದರು. ಸೋಮವಾರ ಬೆಳಗ್ಗೆ 6.50ಕ್ಕೆ ಮೆಜಿಸ್ಟಿಕ್ ನಿಂದ 15 ಪ್ರಯಾಣಿಕರನ್ನು ಹೊತ್ತು ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಿಂದ 35 ಮಂದಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಬೆಳಗ್ಗೆ 7.30ಕ್ಕೆ ಅಲ್ಲಿಂದ ತೆರಳಿದ ಇವಿ ಪವರ್ ಪ್ಲಸ್ ಬಸ್ ಎಕ್ಸ್ ಪ್ರೆಸ್ ವೇ ರಸ್ತೆಯ ಮುಖಾಂತರ ಮೈಸೂರು ಬಸ್ ನಿಲ್ದಾಣವನ್ನು 9.45ಕ್ಕೆ ತಲುಪಿತು. ಪುನಃ ಮಧ್ಯಾಹ್ನ 12.10ಕ್ಕೆ 35 ಪ್ರಯಾಣಿಕರನ್ನು ಕೊಂಡೊಯ್ದ ಬಸ್ ಮಧ್ಯಾಹ್ನ 2.45ಕ್ಕೆಲ್ಲ ಪುನಃ ಮೆಜಿಸ್ಟಿಕ್ ನಿಲ್ದಾಣವನ್ನು ತಲುಪಿತು.

ಬೆಂಗಳೂರು – ಮೈಸೂರು ನಡುವೆ ಸಂಚರಿಸುವ ಇವಿ ಪವರ್ ಪ್ಲಸ್ ಬಸ್ ಒಳಗೆ ಪ್ರಯಾಣಿಕರು ಕುಳಿತಿರುವ ದೃಶ್ಯ

ಇನ್ನು ಮಂಗಳವಾರ ಎರಡನೇ ದಿನ ಬೆಂಗಳೂರಿನಿಂದ 43 ಪ್ರಯಾಣಿಕರೊಂದಿಗೆ ಬೆಳಗ್ಗೆ 7.30ಕ್ಕೆ ಮೈಸೂರು ಸ್ಯಾಟಲೈಟ್ ಬಸ್ ಸ್ಟ್ಯಾಂಡ್ ನಿಂದ ತೆರಳಿದ ಇವಿ ಪವರ್ ಪ್ಲಸ್ ವಾಹನ 9.44ಕ್ಕೆಲ್ಲ ಮೈಸೂರು ಬಸ್ ನಿಲ್ದಾಣವನ್ನು ತಲುಪಿತು. ಹೊಸ ಎಲೆಕ್ಟ್ರಿಕ್ ಬಸ್ ನಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರೊಬ್ಬರು, ‘ಬೆಂಗಳೂರಿನ ರಸ್ತೆಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ವಾಹನಗಳು ಓಡಾಡುತ್ತಿದೆ. ಬೆಂಗಳೂರು- ಮೈಸೂರು ಎರಡು ನಗರಗಳ ನಡುವೆ ಕೆಎಸ್ ಆರ್ ಟಿಸಿ, ಎಲೆಕ್ಟ್ರಿಕ್ ಬಸ್ ಸೇವೆ ಆರಂಭಿಸಿರುವುದು ನಿಜಕ್ಕೂ ಸಂತೋಷದ ವಿಷಯ. ಇದು ನಿಜಕ್ಕೂ ಪ್ರಯಾಣಿಕರಿಗೆ ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ನಾನು ಆಂಧ್ರಪ್ರದೇಶದವನು, ಇವಿ ಪವರ್ ಪ್ಲಸ್ ಬಸ್ ನಲ್ಲಿ ಪ್ರಯಾಣಿಸಿ ಸಂತೋಷವಾಗಿದೆ. ಕೆಎಸ್ಆರ್ ಟಿಸಿ ಒದಗಿಸಿರುವ ಸೇವೆಯು ನಿಜಕ್ಕೂ ಚೆನ್ನಾಗಿದೆ. ರಾಜ್ಯ ಸರ್ಕಾರ ಸಾರ್ವಜನಿಕ ಉದ್ಯಮಗಳಿಗೆ ಹೆಚ್ಚು ಒತ್ತು ನೀಡುತ್ತಿರುವುದು ಉತ್ತಮ ಬೆಳವಣಿಗೆ’ ಎಂದು ಮತ್ತೊಬ್ಬ ಪುರುಷ ಪ್ರಯಾಣಿಕರೊಬ್ಬರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಸಂಪೂರ್ಣವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ ಆಗಿರುವ ಕೆಎಸ್ಆರ್‌ಟಿಸಿ ಎಲೆಕ್ಟ್ರಿಕ್ ಬಸ್‌ನಲ್ಲಿ ವಿದ್ಯಾರ್ಥಿ ಪಾಸ್‌ಗಳಿಗೆ ಅವಕಾಶ ಇರುವುದಿಲ್ಲ. ಇದು ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಇಂಟರ್‌ಸಿಟಿ ಎಲೆಕ್ಟ್ರಿಕ್ ಬಸ್ ಸೇವೆಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಹತ್ವ ಪೂರ್ಣ ಯೋಜನೆಯಾಗಿರುವ ಇದರ ಅಡಿಯಲ್ಲಿ ಒಟ್ಟು 50 ಬಸ್‌ಗಳನ್ನು ಸೇವೆಗೆ ನೀಡಲು ಇಲಾಖೆ ನಿರ್ಧರಿಸಿದೆ. ಮೊದಲ ಹಂತದಲ್ಲಿ ರಾಜಧಾನಿ ಬೆಂಗಳೂರು ಮತ್ತು ಮೈಸೂರಿನ ನಡುವೆ ಕೆಎಸ್‌ಆರ್‌ಟಿಸಿ ಇವಿ ಪವರ್ ಪ್ಲಸ್ ಬಸ್ ಸಂಚರಿಸುತ್ತಿದೆ.

 ವೈ-ಫೈ ಹಾಗೂ ಸಿಸಿಟಿವಿ ಕ್ಯಾಮರಾ ಅಳವಡಿಕೆ :

ಬೆಂಗಳೂರಿನಿಂದ ಮೈಸೂರು ಬಸ್ ನಿಲ್ದಾಣದ ತನಕ ಇವಿ ಪವರ್ ಪ್ಲಸ್ ಬಸ್ ನಲ್ಲಿ ಪ್ರಯಾಣಿಸಿ ತಮ್ಮ ಸ್ಥಳದತ್ತ ತೆರಳುತ್ತಿರುವ ಪ್ರಯಾಣಿಕರು

ಈ ಎಲೆಕ್ಟ್ರಿಕ್ ಬಸ್‌ನಲ್ಲಿ ಪವರ್ ಪ್ಲಸ್ ವೈ-ಫೈ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಕೂಡ ಅಳವಡಿಸಲಾಗಿದೆ. ಹೈದರಾಬಾದ್ ಮೂಲದ ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ ಈ ಬಸ್‌ಗಳನ್ನು ತಯಾರು ಮಾಡಿದೆ. ಫೆಬ್ರವರಿ ಎರಡನೇ ವಾರದಲ್ಲಿ ಉಳಿದ 49 ಎಲೆಕ್ಟ್ರಿಕ್ ಬಸ್ ಗಳನ್ನು ಸೇವೆಗೆ ಸೇರ್ಪಡೆ ಮಾಡಲಾಗುತ್ತಿದ್ದು, ರಾಜಧಾನಿ ಬೆಂಗಳೂರಿನಿಂದ ರಾಜ್ಯದ ಬೇರೆ ಬೇರೆ ನಗರಗಳಾದ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ವಿರಾಜಪೇಟೆ ಮತ್ತು ಮಡಿಕೇರಿಗಳಿಗೆ ಇವಿ ಬಸ್ ಸೇವೆಯನ್ನು ಆರಂಭಿಸಲಿದೆ. ಈ ಸಂದರ್ಭದಲ್ಲಿ ಬೆಂಗಳೂರು ಮೈಸೂರು ನಡುವಿನ ಇವಿ ಬಸ್ ಗಳನ್ನು ಹೆಚ್ಚಿಸಲಾಗುತ್ತದೆ ಎಂದು ಕೆಎಸ್ ಆರ್ ಟಿಸಿ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಒಂದು ಬಾರಿ ಚಾರ್ಜ್‌ ಮಾಡಿದರೆ 300 ಕಿ.ಮೀ ಮೈಲೇಜ್ :

ಇವಿ ಪವರ್ ಪ್ಲಸ್ ಎಲೆಕ್ಟ್ರಿಕ್ ಬಸ್ಸನ್ನು ಒಮ್ಮೆ ಚಾರ್ಜ್ ಮಾಡಿದರೆ ಸಾಕು 300 ಕಿಲೋ ಮೀಟರ್ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರಯೋಗಿಕವಾಗಿ ಮೊದಲು ಬೆಂಗಳೂರು ಹಾಗೂ ಮೈಸೂರು ನಡುವೆ 1 ಎಲೆಕ್ಟ್ರಿಕ್ ಬಸ್ ಸಂಚಾರ ನಡೆಸಲಾಗುತ್ತಿದೆ. ಬೆಂಗಳೂರಿನ ಮೆಜಿಸ್ಟಿಕ್ ನಿಂದ ಮೈಸೂರಿಗೆ 320 ರೂಪಾಯಿ ಹಾಗೂ ಸ್ಯಾಟಲೈಟ್ ಬಸ್ ಸ್ಟ್ಯಾಂಡ್ ನಿಂದ ಮೈಸೂರು ಬಸ್ ನಿಲ್ದಾಣಕ್ಕೆ 300 ರೂಪಾಯಿ ದರ ನಿಗದಿ ಮಾಡಲಾಗಿದೆ. ಇದು ಐರಾವತ ಕ್ಲಬ್ ಕ್ಲಾಸ್ ಪ್ರಯಾಣ ದರಕ್ಕಿಂತ 30 ರೂ. ಕಡಿಮೆ ದರವಾಗಿದೆ.

ಎಲೆಕ್ಟಿಕ್ ಬಸ್ ಗಳಿಗಾಗಿ ಚಾರ್ಜಿಂಗ್ ಪಾಯಿಂಟ್ :

ಎಲೆಕ್ಟ್ರಿಕ್ ಬಸ್‌ಗಳಿಗಾಗಿ ಮೈಸೂರು ಮತ್ತು ಬೆಂಗಳೂರಲ್ಲಿ ಈಗಾಗಲೇ ಚಾರ್ಜಿಂಗ್ ಪಾಯಿಂಟ್‌ಗಳನ್ನು ಕೂಡ ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮಡಿಕೇರಿ, ವಿರಾಜಪೇಟೆ, ದಾವಣಗೆರೆ ಶಿವಮೊಗ್ಗ ನಗರ ಮತ್ತು ಚಿಕ್ಕಮಗಳೂರು ನಗರ ಬಸ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಪಾಯಿಂಟ್ ಅಳವಡಿಸಲಾಗುತ್ತದೆ. ಎಲೆಕ್ಟ್ರಿಕ್ ಬಸ್‌ಗಳ ಕಾರ್ಯನಿರ್ವಹಣೆಯನ್ನು ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ ಖಾಸಗಿ ಸಂಸ್ಥೆಯು ನಿರ್ವಹಿಸಲಿದೆ. ಈ ನಿರ್ವಹಣೆಗೆ ಕೆಎಸ್ಆರ್‌ಟಿಸಿ ಕೂಡ ಹಣ ನೀಡಲು ಮುಂದಾಗಿದ್ದು, ಕಾರ್ಯಾಚರಣೆಯ ವೆಚ್ಚವಾಗಿ ಪ್ರತಿ ಕಿ.ಮೀಗೆ 55 ರೂಪಾಯಿಗಳನ್ನು ಪಾವತಿಸಲಿದೆ. ಪ್ರತಿದಿನ ದಿನ ಬದಲಾಗುವ ಡೀಸೆಲ್ ದರವನ್ನು ಹೊಂದಿಸಲಾರದೆ ಪರಪಾಡಲು ಪಡುತ್ತಿರುವ ಕೆಎಸ್ ಆರ್ ಟಿಸಿ, ಭವಿಷ್ಯದಲ್ಲಿ ಇವಿ ಬಸ್ ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವೆಗೆ ಬಳಸಿಕೊಂಡು ತನ್ನ ನಿರ್ವಹಣಾ ವೆಚ್ಚವನ್ನು ಸರಿದೂಗಿಸಿಕೊಂಡು ಲಾಭದ ಹಾದಿ ಹಿಡಿಯಲಿದೆಯೇ ಕಾದು ನೋಡಬೇಕು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Bagalakote | ಕಿತ್ತೂರು ರಾಣಿ ಚೆನ್ನಮ್ಮ ಅದ್ಧೂರಿ ನಾಟಕಕ್ಕೆ ವೇದಿಕೆಯಲ್ಲಿ ನೈಜ ಕುದುರೆ, ಆನೆ, ಒಂಟೆ ಬಳಕೆ…!!

Next Post

#Desi IndOS Mobile Phones | ಆಂಡ್ರಾಯ್ಡ್ ಮೊಬೈಲ್ ಆಪರೇಟಿಂಗ್ ವ್ಯವಸ್ಥೆಗೆ ಪರ್ಯಾಯ : ದೇಶೀಯ ‘ಇಂಡೋಸ್ ‘ ಹೊರತರಲು ಕೇಂದ್ರ ಸರ್ಕಾರ ಪ್ರಯತ್ನ

Next Post
ಮೊಬೈಲ್ ಬಳಕೆಯ ಸಾಂದರ್ಭಿಕ ಚಿತ್ರ

#Desi IndOS Mobile Phones | ಆಂಡ್ರಾಯ್ಡ್ ಮೊಬೈಲ್ ಆಪರೇಟಿಂಗ್ ವ್ಯವಸ್ಥೆಗೆ ಪರ್ಯಾಯ : ದೇಶೀಯ ‘ಇಂಡೋಸ್ ‘ ಹೊರತರಲು ಕೇಂದ್ರ ಸರ್ಕಾರ ಪ್ರಯತ್ನ

ವೃದ್ಧ ಕಾರಿನ ಡ್ರೈವರ್ ಅನ್ನು ರಸ್ತೆಯಲ್ಲಿ ಎಳೆದೊಯ್ಯುತ್ತಿರುವ ದ್ವಿಚಕ್ರ ವಾಹನ ಸವಾರ. ಬಲಚಿತ್ರದಲ್ಲಿರುವಾತನೇ ಆ ವಾಹನ ಚಾಲನೆ ಮಾಡಿದ ಸುಹೇಲ್.

#Video News | ಬೆಂಗಳೂರು : ವೃದ್ಧನನ್ನು ರಸ್ತೆಯಲ್ಲಿ ಒಂದೂವರೆ ಕಿ.ಮೀ ಎಳೆದೊಯ್ದ ದ್ವಿಚಕ್ರ ಸವಾರ ; ಇಲ್ಲಿದೆ ಮನ ಕಲುಕುವ ವಿಡಿಯೋ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d