Monday, June 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#KSRTC EV Power Plus Bus Service | ಬೆಂಗಳೂರು – ಮೈಸೂರು ನಡುವೆ ಕೆಎಸ್ ಆರ್ ಟಿಸಿ ಇವಿ ಪವರ್ ಪ್ಲಸ್ ಬಸ್ ಸೇವೆಗೆ ಉತ್ತಮ ಪ್ರತಿಕ್ರಿಯೆ..!

ಇವಿ ಪವರ್ ಪ್ಲಸ್ ಬಸ್ ಎಕ್ಸ್ ಪ್ರೆಸ್ ವೇ ರಸ್ತೆಯ ಮುಖಾಂತರ ಬೆಂಗಳೂರು- ಮೈಸೂರು ನಡುವೆ ಸಂಚಾರ | ಬೆಂಗಳೂರು ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರಿಗೆ 300 ರೂ. ಟಿಕೆಟ್ ದರ | ಫೆಬ್ರವರಿ ಎರಡನೇ ವಾರದಿಂದ ರಾಜಧಾನಿಯಿಂದ ರಾಜ್ಯದ ಬೇರೆ ನಗರಗಳಿಗೂ 49 ಇವಿ ಬಸ್ ಸೇವೆ

by Bengaluru Wire Desk
January 17, 2023
in Bengaluru Focus, News Wire
Reading Time: 1 min read
0
ಕೆಎಸ್ ಆರ್ ಟಿಸಿ ಬಸ್ ಸಾಂದರ್ಭಿಕ ಚಿತ್ರ

ಕೆಎಸ್ ಆರ್ ಟಿಸಿ ಬಸ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.17 www.bengaluruwire.com : ರಾಜ್ಯದಲ್ಲೇ ಮೊತ್ತ ಮೊದಲ ಬಾರಿಗೆ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಬೆಂಗಳೂರು- ಮೈಸೂರು ನಡುವೆ ಆರಂಭಿಸಿದ ಎಲೆಕ್ಟ್ರಿಕ್ ಬಸ್ ಸೇವೆ (Electric Bus Service) ಇವಿ ಪವರ್ ಪ್ಲಸ್ (EV Power Plus) ಹೆಸರಿನಲ್ಲಿ ಸೋಮವಾರದಿಂದ ಪ್ರಾರಂಭಿಸಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯ ಬೆಂಗಳೂರು ಮೈಸೂರು ನಡುವೆ ಸಂಸ್ಥೆಯು ಒಂದು ಬಸ್ ಸೇವೆಯನ್ನು ಪ್ರಾಯೋಗಾರ್ಥವಾಗಿ ಆರಂಭಿಸಿದ್ದು, ಬರುವ ದಿನಗಳಲ್ಲಿ ಇವಿ ಬಸ್ ಸೇವೆ ಹೆಚ್ಚಿಸಲು ನಿರ್ಧರಿಸಿದೆ.

ಮೊದಲ ದಿನವೇ ಬೆಂಗಳೂರು- ಮೈಸೂರು ನಡುವೆ ಒಟ್ಟಾರೆ 85 ಜನರು ಹೊಸ ಇವಿ ಬಸ್ ನಲ್ಲಿ ಪ್ರಯಾಣಿಸಿ ಎರಡು ನಗರಗಳ ನಡುವೆ ಎಲೆಕ್ಟ್ರಿಕ್ ಬಸ್ ನಲ್ಲಿ ಸಂಚರಿಸಿದ ಅನುಭವ ಪಡೆದರು. ಸೋಮವಾರ ಬೆಳಗ್ಗೆ 6.50ಕ್ಕೆ ಮೆಜಿಸ್ಟಿಕ್ ನಿಂದ 15 ಪ್ರಯಾಣಿಕರನ್ನು ಹೊತ್ತು ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಿಂದ 35 ಮಂದಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಬೆಳಗ್ಗೆ 7.30ಕ್ಕೆ ಅಲ್ಲಿಂದ ತೆರಳಿದ ಇವಿ ಪವರ್ ಪ್ಲಸ್ ಬಸ್ ಎಕ್ಸ್ ಪ್ರೆಸ್ ವೇ ರಸ್ತೆಯ ಮುಖಾಂತರ ಮೈಸೂರು ಬಸ್ ನಿಲ್ದಾಣವನ್ನು 9.45ಕ್ಕೆ ತಲುಪಿತು. ಪುನಃ ಮಧ್ಯಾಹ್ನ 12.10ಕ್ಕೆ 35 ಪ್ರಯಾಣಿಕರನ್ನು ಕೊಂಡೊಯ್ದ ಬಸ್ ಮಧ್ಯಾಹ್ನ 2.45ಕ್ಕೆಲ್ಲ ಪುನಃ ಮೆಜಿಸ್ಟಿಕ್ ನಿಲ್ದಾಣವನ್ನು ತಲುಪಿತು.

ಬೆಂಗಳೂರು – ಮೈಸೂರು ನಡುವೆ ಸಂಚರಿಸುವ ಇವಿ ಪವರ್ ಪ್ಲಸ್ ಬಸ್ ಒಳಗೆ ಪ್ರಯಾಣಿಕರು ಕುಳಿತಿರುವ ದೃಶ್ಯ

ಇನ್ನು ಮಂಗಳವಾರ ಎರಡನೇ ದಿನ ಬೆಂಗಳೂರಿನಿಂದ 43 ಪ್ರಯಾಣಿಕರೊಂದಿಗೆ ಬೆಳಗ್ಗೆ 7.30ಕ್ಕೆ ಮೈಸೂರು ಸ್ಯಾಟಲೈಟ್ ಬಸ್ ಸ್ಟ್ಯಾಂಡ್ ನಿಂದ ತೆರಳಿದ ಇವಿ ಪವರ್ ಪ್ಲಸ್ ವಾಹನ 9.44ಕ್ಕೆಲ್ಲ ಮೈಸೂರು ಬಸ್ ನಿಲ್ದಾಣವನ್ನು ತಲುಪಿತು. ಹೊಸ ಎಲೆಕ್ಟ್ರಿಕ್ ಬಸ್ ನಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರೊಬ್ಬರು, ‘ಬೆಂಗಳೂರಿನ ರಸ್ತೆಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ವಾಹನಗಳು ಓಡಾಡುತ್ತಿದೆ. ಬೆಂಗಳೂರು- ಮೈಸೂರು ಎರಡು ನಗರಗಳ ನಡುವೆ ಕೆಎಸ್ ಆರ್ ಟಿಸಿ, ಎಲೆಕ್ಟ್ರಿಕ್ ಬಸ್ ಸೇವೆ ಆರಂಭಿಸಿರುವುದು ನಿಜಕ್ಕೂ ಸಂತೋಷದ ವಿಷಯ. ಇದು ನಿಜಕ್ಕೂ ಪ್ರಯಾಣಿಕರಿಗೆ ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ನಾನು ಆಂಧ್ರಪ್ರದೇಶದವನು, ಇವಿ ಪವರ್ ಪ್ಲಸ್ ಬಸ್ ನಲ್ಲಿ ಪ್ರಯಾಣಿಸಿ ಸಂತೋಷವಾಗಿದೆ. ಕೆಎಸ್ಆರ್ ಟಿಸಿ ಒದಗಿಸಿರುವ ಸೇವೆಯು ನಿಜಕ್ಕೂ ಚೆನ್ನಾಗಿದೆ. ರಾಜ್ಯ ಸರ್ಕಾರ ಸಾರ್ವಜನಿಕ ಉದ್ಯಮಗಳಿಗೆ ಹೆಚ್ಚು ಒತ್ತು ನೀಡುತ್ತಿರುವುದು ಉತ್ತಮ ಬೆಳವಣಿಗೆ’ ಎಂದು ಮತ್ತೊಬ್ಬ ಪುರುಷ ಪ್ರಯಾಣಿಕರೊಬ್ಬರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಸಂಪೂರ್ಣವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ ಆಗಿರುವ ಕೆಎಸ್ಆರ್‌ಟಿಸಿ ಎಲೆಕ್ಟ್ರಿಕ್ ಬಸ್‌ನಲ್ಲಿ ವಿದ್ಯಾರ್ಥಿ ಪಾಸ್‌ಗಳಿಗೆ ಅವಕಾಶ ಇರುವುದಿಲ್ಲ. ಇದು ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಇಂಟರ್‌ಸಿಟಿ ಎಲೆಕ್ಟ್ರಿಕ್ ಬಸ್ ಸೇವೆಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಹತ್ವ ಪೂರ್ಣ ಯೋಜನೆಯಾಗಿರುವ ಇದರ ಅಡಿಯಲ್ಲಿ ಒಟ್ಟು 50 ಬಸ್‌ಗಳನ್ನು ಸೇವೆಗೆ ನೀಡಲು ಇಲಾಖೆ ನಿರ್ಧರಿಸಿದೆ. ಮೊದಲ ಹಂತದಲ್ಲಿ ರಾಜಧಾನಿ ಬೆಂಗಳೂರು ಮತ್ತು ಮೈಸೂರಿನ ನಡುವೆ ಕೆಎಸ್‌ಆರ್‌ಟಿಸಿ ಇವಿ ಪವರ್ ಪ್ಲಸ್ ಬಸ್ ಸಂಚರಿಸುತ್ತಿದೆ.

 ವೈ-ಫೈ ಹಾಗೂ ಸಿಸಿಟಿವಿ ಕ್ಯಾಮರಾ ಅಳವಡಿಕೆ :

ಬೆಂಗಳೂರಿನಿಂದ ಮೈಸೂರು ಬಸ್ ನಿಲ್ದಾಣದ ತನಕ ಇವಿ ಪವರ್ ಪ್ಲಸ್ ಬಸ್ ನಲ್ಲಿ ಪ್ರಯಾಣಿಸಿ ತಮ್ಮ ಸ್ಥಳದತ್ತ ತೆರಳುತ್ತಿರುವ ಪ್ರಯಾಣಿಕರು

ಈ ಎಲೆಕ್ಟ್ರಿಕ್ ಬಸ್‌ನಲ್ಲಿ ಪವರ್ ಪ್ಲಸ್ ವೈ-ಫೈ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಕೂಡ ಅಳವಡಿಸಲಾಗಿದೆ. ಹೈದರಾಬಾದ್ ಮೂಲದ ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ ಈ ಬಸ್‌ಗಳನ್ನು ತಯಾರು ಮಾಡಿದೆ. ಫೆಬ್ರವರಿ ಎರಡನೇ ವಾರದಲ್ಲಿ ಉಳಿದ 49 ಎಲೆಕ್ಟ್ರಿಕ್ ಬಸ್ ಗಳನ್ನು ಸೇವೆಗೆ ಸೇರ್ಪಡೆ ಮಾಡಲಾಗುತ್ತಿದ್ದು, ರಾಜಧಾನಿ ಬೆಂಗಳೂರಿನಿಂದ ರಾಜ್ಯದ ಬೇರೆ ಬೇರೆ ನಗರಗಳಾದ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ವಿರಾಜಪೇಟೆ ಮತ್ತು ಮಡಿಕೇರಿಗಳಿಗೆ ಇವಿ ಬಸ್ ಸೇವೆಯನ್ನು ಆರಂಭಿಸಲಿದೆ. ಈ ಸಂದರ್ಭದಲ್ಲಿ ಬೆಂಗಳೂರು ಮೈಸೂರು ನಡುವಿನ ಇವಿ ಬಸ್ ಗಳನ್ನು ಹೆಚ್ಚಿಸಲಾಗುತ್ತದೆ ಎಂದು ಕೆಎಸ್ ಆರ್ ಟಿಸಿ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಒಂದು ಬಾರಿ ಚಾರ್ಜ್‌ ಮಾಡಿದರೆ 300 ಕಿ.ಮೀ ಮೈಲೇಜ್ :

ಇವಿ ಪವರ್ ಪ್ಲಸ್ ಎಲೆಕ್ಟ್ರಿಕ್ ಬಸ್ಸನ್ನು ಒಮ್ಮೆ ಚಾರ್ಜ್ ಮಾಡಿದರೆ ಸಾಕು 300 ಕಿಲೋ ಮೀಟರ್ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರಯೋಗಿಕವಾಗಿ ಮೊದಲು ಬೆಂಗಳೂರು ಹಾಗೂ ಮೈಸೂರು ನಡುವೆ 1 ಎಲೆಕ್ಟ್ರಿಕ್ ಬಸ್ ಸಂಚಾರ ನಡೆಸಲಾಗುತ್ತಿದೆ. ಬೆಂಗಳೂರಿನ ಮೆಜಿಸ್ಟಿಕ್ ನಿಂದ ಮೈಸೂರಿಗೆ 320 ರೂಪಾಯಿ ಹಾಗೂ ಸ್ಯಾಟಲೈಟ್ ಬಸ್ ಸ್ಟ್ಯಾಂಡ್ ನಿಂದ ಮೈಸೂರು ಬಸ್ ನಿಲ್ದಾಣಕ್ಕೆ 300 ರೂಪಾಯಿ ದರ ನಿಗದಿ ಮಾಡಲಾಗಿದೆ. ಇದು ಐರಾವತ ಕ್ಲಬ್ ಕ್ಲಾಸ್ ಪ್ರಯಾಣ ದರಕ್ಕಿಂತ 30 ರೂ. ಕಡಿಮೆ ದರವಾಗಿದೆ.

ಎಲೆಕ್ಟಿಕ್ ಬಸ್ ಗಳಿಗಾಗಿ ಚಾರ್ಜಿಂಗ್ ಪಾಯಿಂಟ್ :

ಎಲೆಕ್ಟ್ರಿಕ್ ಬಸ್‌ಗಳಿಗಾಗಿ ಮೈಸೂರು ಮತ್ತು ಬೆಂಗಳೂರಲ್ಲಿ ಈಗಾಗಲೇ ಚಾರ್ಜಿಂಗ್ ಪಾಯಿಂಟ್‌ಗಳನ್ನು ಕೂಡ ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮಡಿಕೇರಿ, ವಿರಾಜಪೇಟೆ, ದಾವಣಗೆರೆ ಶಿವಮೊಗ್ಗ ನಗರ ಮತ್ತು ಚಿಕ್ಕಮಗಳೂರು ನಗರ ಬಸ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಪಾಯಿಂಟ್ ಅಳವಡಿಸಲಾಗುತ್ತದೆ. ಎಲೆಕ್ಟ್ರಿಕ್ ಬಸ್‌ಗಳ ಕಾರ್ಯನಿರ್ವಹಣೆಯನ್ನು ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ ಖಾಸಗಿ ಸಂಸ್ಥೆಯು ನಿರ್ವಹಿಸಲಿದೆ. ಈ ನಿರ್ವಹಣೆಗೆ ಕೆಎಸ್ಆರ್‌ಟಿಸಿ ಕೂಡ ಹಣ ನೀಡಲು ಮುಂದಾಗಿದ್ದು, ಕಾರ್ಯಾಚರಣೆಯ ವೆಚ್ಚವಾಗಿ ಪ್ರತಿ ಕಿ.ಮೀಗೆ 55 ರೂಪಾಯಿಗಳನ್ನು ಪಾವತಿಸಲಿದೆ. ಪ್ರತಿದಿನ ದಿನ ಬದಲಾಗುವ ಡೀಸೆಲ್ ದರವನ್ನು ಹೊಂದಿಸಲಾರದೆ ಪರಪಾಡಲು ಪಡುತ್ತಿರುವ ಕೆಎಸ್ ಆರ್ ಟಿಸಿ, ಭವಿಷ್ಯದಲ್ಲಿ ಇವಿ ಬಸ್ ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವೆಗೆ ಬಳಸಿಕೊಂಡು ತನ್ನ ನಿರ್ವಹಣಾ ವೆಚ್ಚವನ್ನು ಸರಿದೂಗಿಸಿಕೊಂಡು ಲಾಭದ ಹಾದಿ ಹಿಡಿಯಲಿದೆಯೇ ಕಾದು ನೋಡಬೇಕು.

WhatsApp Join our WhatsApp Channel
Previous Post

Bagalakote | ಕಿತ್ತೂರು ರಾಣಿ ಚೆನ್ನಮ್ಮ ಅದ್ಧೂರಿ ನಾಟಕಕ್ಕೆ ವೇದಿಕೆಯಲ್ಲಿ ನೈಜ ಕುದುರೆ, ಆನೆ, ಒಂಟೆ ಬಳಕೆ…!!

Next Post

#Desi IndOS Mobile Phones | ಆಂಡ್ರಾಯ್ಡ್ ಮೊಬೈಲ್ ಆಪರೇಟಿಂಗ್ ವ್ಯವಸ್ಥೆಗೆ ಪರ್ಯಾಯ : ದೇಶೀಯ ‘ಇಂಡೋಸ್ ‘ ಹೊರತರಲು ಕೇಂದ್ರ ಸರ್ಕಾರ ಪ್ರಯತ್ನ

Next Post
ಮೊಬೈಲ್ ಬಳಕೆಯ ಸಾಂದರ್ಭಿಕ ಚಿತ್ರ

#Desi IndOS Mobile Phones | ಆಂಡ್ರಾಯ್ಡ್ ಮೊಬೈಲ್ ಆಪರೇಟಿಂಗ್ ವ್ಯವಸ್ಥೆಗೆ ಪರ್ಯಾಯ : ದೇಶೀಯ ‘ಇಂಡೋಸ್ ‘ ಹೊರತರಲು ಕೇಂದ್ರ ಸರ್ಕಾರ ಪ್ರಯತ್ನ

ವೃದ್ಧ ಕಾರಿನ ಡ್ರೈವರ್ ಅನ್ನು ರಸ್ತೆಯಲ್ಲಿ ಎಳೆದೊಯ್ಯುತ್ತಿರುವ ದ್ವಿಚಕ್ರ ವಾಹನ ಸವಾರ. ಬಲಚಿತ್ರದಲ್ಲಿರುವಾತನೇ ಆ ವಾಹನ ಚಾಲನೆ ಮಾಡಿದ ಸುಹೇಲ್.

#Video News | ಬೆಂಗಳೂರು : ವೃದ್ಧನನ್ನು ರಸ್ತೆಯಲ್ಲಿ ಒಂದೂವರೆ ಕಿ.ಮೀ ಎಳೆದೊಯ್ದ ದ್ವಿಚಕ್ರ ಸವಾರ ; ಇಲ್ಲಿದೆ ಮನ ಕಲುಕುವ ವಿಡಿಯೋ

Please login to join discussion

Like Us on Facebook

Follow Us on Twitter

Recent News

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026

ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

June 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group