Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#AssemblyElection2023 | ಮತದಾರರಿಗೆ ಆಮಿಷ ಒಡ್ಡುವ ವಿಡಿಯೋ ಮಾಡಿ ಕಳಿಸಿದರೆ 5 ಸಾವಿರ ಇನಾಮು ; ಕೆಆರ್ ಎಸ್ ಪಕ್ಷದ ಓಪನ್ ಆಫರ್!!

ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಾತ್ರಿ ಪಡಿಸುವಂತೆ ಒತ್ತಾಯಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅವರ ಜವಾಬ್ದಾರಿಯನ್ನು ನೆನಪಿಸುವ ಹಿನ್ನಲೆಯಲ್ಲಿ ಜ.27ರಿಂದ ಫೆಬ್ರವರಿ 10ರ ತನಕ ಕೆಆರ್ ಎಸ್ ಪಕ್ಷ ಅಭಿಯಾನ ಹಮ್ಮಿಕೊಂಡಿದೆ.

by Bengaluru Wire Desk
January 30, 2023
in News Wire, Public interest
Reading Time: 1 min read
0
ಮೊಬೈಲ್ ರೆಕಾರ್ಡಿಂಗ್ ಸಾಂದರ್ಭಿಕ ಚಿತ್ರ

ಮೊಬೈಲ್ ರೆಕಾರ್ಡಿಂಗ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.30 www.bengaluruwire.com : ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು (Free and Fair Election) ಖಾತ್ರಿ ಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರಸಮಿತಿ ಪಕ್ಷ (Karnataka Rashtra Samithi Party- KRS) ಮತದಾರರಿಗೆ ಓಪನ್ ಆಫರ್ ಇಟ್ಟಿದೆ.

ಅದೇನಪ್ಪ ಅಂದರೆ, “ಭ್ರಷ್ಟ, ದುಷ್ಟ, ನೀಚ, ಜನದ್ರೋಹಿ ರಾಜಕಾರಣಿಗಳು ಓಟಿಗಾಗಿ ಮತದಾರರಿಗೆ ಆಮಿಷ ಒಡ್ಡುವಂತಹ ಚುನಾವಣಾ ಅಕ್ರಮಗಳನ್ನು ನಿಲ್ಲಿಸಲು, ಯಾವ ಪಕ್ಷದ ಭ್ರಷ್ಟ ಅಭ್ಯರ್ಥಿ ಅಥವಾ ಆತನ ಬೆಂಬಲಿಗರು ಕುಕ್ಕರ್, ಮಿಕ್ಸಿ,ತಟ್ಟೆ, ಚೆಂಬು, ಕಿಟ್ ಹಂಚಿ ಜನರನ್ನು ಅನೈತಿಕ ಕೆಲಸಕ್ಕೆ ಪ್ರಚೋದಿಸುತ್ತಿದ್ದರೆ, ಅದನ್ನು ಪ್ರಶ್ನಿಸಿ, ತಿರಸ್ಕರಿಸಿ, ಆ ಘಟನೆಯ ವಿಡಿಯೋ ಮಾಡಿ 88617-75862 ಸಂಖ್ಯೆಗೆ ಕಳುಹಿಸುವ ಧೀರ ದೇಶಭಕ್ತರಿಗೆ ₹5000 ಬಹುಮಾನ ನೀಡಲಾಗುವುದು!”  ಎಂದು ಮತದಾರರಿಗೆ ಬಹಿರಂಗವಾಗಿ ಬಹುಮಾನ ಘೋಷಿಸಿದೆ.

ಆದರೆ ಕೆಆರ್ ಎಸ್ ಪಕ್ಷ ಇದಕ್ಕೊಂದು ಷರತ್ತು ವಿಧಿಸಿದೆ, ಮತದಾರರಿಗೆ ಆಮಿಷ ಒಡ್ಡುವ ವಸ್ತುಗಳನ್ನು ವಿತರಿಸುತ್ತಿರುವ ವಿಡಿಯೋ ಕಳುಹಿಸುವುದಲ್ಲ, ಬದಲಿಗೆ ಆ ವಸ್ತು ಕೊಟ್ಟವರನ್ನು ಪ್ರಶ್ನಿಸಿ, ಅದನ್ನು ತಿರಸ್ಕರಿಸಿ, ನೀಚ ಮತ್ತು ಭ್ರಷ್ಟ ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಳ್ಳುವ ವಿಡಿಯೋವನ್ನು ತಮ್ಮ ಪಕ್ಷದ ಮೊಬೈಲ್ ನಂಬರ್ ಗೆ ಕಳುಹಿಸಬೇಕು ಎಂದು ಹೇಳಿದೆ.

“ಈ ವಿಚಾರದಲ್ಲಿ ಪ್ರಾಮಾಣಿಕ ಮತದಾರರು ಭಯ ಪಡಬೇಡಿ. ಈ ಸಮಯದಲ್ಲಿ ನೀಚರು ನಿಮ್ಮನ್ನೇನೂ ಮಾಡಲಾರರು. ನಿಮಗೆ ಯಾವುದೇ ರೀತಿಯ ತೊಂದರೆ ಆದರೆ ಕೆಆರ್ ಎಸ್ ಪಕ್ಷ ನಿಮ್ಮ ಬೆನ್ನಿಗಿರುತ್ತದೆ” ಎಂದು ವಾಗ್ದಾನವನ್ನು ನೀಡಿದೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಚಿಹ್ನೆ

ರಾಜ್ಯದಲ್ಲಿ ಓಟಿಗಾಗಿ ರಾಜಕಾರಣಿಗಳು ಮತದಾರರಿಗೆ ಆಮಿಷ ಒಡ್ಡುವಂತಹ ಚುನಾವಣಾ ಅಕ್ರಮಗಳನ್ನು ನಿಲ್ಲಿಸಲು ಆಗ್ರಹಿಸಿ, ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಾತ್ರಿ ಪಡಿಸುವಂತೆ ಒತ್ತಾಯಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅವರ ಜವಾಬ್ದಾರಿಯನ್ನು ನೆನಪಿಸುವ ಹಿನ್ನಲೆಯಲ್ಲಿ ‘#ನ್ಯಾಯಸಮ್ಮತಚುನಾವಣೆಗಾಗಿKRSಅಭಿಯಾನ’ವನ್ನು KRS ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿಯವರು ಜ.27ರಿಂದ ಬೆಂಗಳೂರು ಗ್ರಾಮಾಂತರಿಂದ ಈ ಅಭಿಯಾನವನ್ನು ಆರಂಭಿಸಿದ್ದು, ಫೆಬ್ರವರಿ 10ರ ವರೆಗೆ ಈ ಅಭಿಯಾನ ನಡೆಯಲಿದೆ.

ಎಲ್ಲೆಲ್ಲಿಯ ಜಿಲ್ಲಾಧಿಕಾರಿಗಳನ್ನು ಕೆಆರ್ ಎಸ್ ಪಕ್ಷ ಭೇಟಿಯಾಗಲಿದೆ?:

ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಮಡಿಕೇರಿ, ಉಡುಪಿ, ಕಾರವಾರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಗುರ್ಲರ್ಗ, ಯಾದಗಿರಿ, ರಾಯಚೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ, ಗದಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಬೆಂಗಳೂರು ಜಿಲ್ಲಾಧಿಕಾರಿಗಳನ್ನು ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಭೇಟಿಯಾಗಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವಂತೆ ಮನವಿ ಪತ್ರಗಳನ್ನು ನೀಡಲಿದ್ದಾರೆ.

ವಿಡಿಯೋ ಕಳುಹಿಸಿ ಬಹುಮಾನ ಪಡೆಯಿರಿ :

“ನಮ್ಮ ರಾಜ್ಯದಲ್ಲಿಯ ಇಂದಿನ ಈ ಮಟ್ಟದ ಲಂಚ, ಭ್ರಷ್ಟಾಚಾರ, ದುರಾಡಳಿತದ ಮೂಲವೇ ಚುನಾವಣಾ ಅಕ್ರಮಗಳು. ಚುನಾವಣಾ ಸಂದರ್ಭದಲ್ಲಿ ಅಪರಾಧ ಎಂದು ಪರಿಗಣಿಸಲ್ಪಡುವ ಕೃತ್ಯಗಳು ಚುನಾವಣಾಪೂರ್ವದಲ್ಲಿಯೂ ಅಪರಾಧಗಳೇ. ಹಾಗಾಗಿ ವಿಚಾರದಲ್ಲಿ ನಾಡಿನ ಜನತೆ ಸರ್ಕಾರಿ ಅಧಿಕಾರಿಗಳ ಮೇಲೆ ಅವಲಂಬಿತರಾದರೆ ಏನೇನೂ ಪ್ರಯೋಜನವಿಲ್ಲ. ಜನರೇ ಈ ಆಮಿಷಗಳನ್ನು ತಿರಸ್ಕರಿಸುವ ಮತ್ತು ಚುನಾವಣಾ ಅಕ್ರಮಗಳನ್ನು ನಿಲ್ಲಿಸುವ ಕಾರ್ಯಕ್ಕೆ ಮುಂದಾಗಬೇಕು. ಹಾಗಾಗಿ ಯಾರೇ ಆದರೂ ಜನರನ್ನು ಅನೈತಿಕ ಕೆಲಸಕ್ಕೆ ಪ್ರಚೋದಿಸುತ್ತಿದ್ದರೆ, ಅದನ್ನು ಪ್ರಶ್ನಿಸಿ, ಅವರು ಕೊಟ್ಟ ವಸ್ತುಗಳನ್ನು ತಿರಸ್ಕರಿಸಿ, ಅವರನ್ನು ತರಾಟೆಗೆ ತೆಗೆದುಕೊಳ್ಳುವ ವಿಡಿಯೋ ಮಾಡಿ ನಮ್ಮ ಪಕ್ಷದ ಮೊಬೈಲ್ ನಂಬರ್ ಗೆ ಕಳಿಸಿದರೆ, ಅಂತಹವರಿಗೆ ಬಹುಮಾನ ನೀಡಲಾಗುವುದು. “

  • ರವಿಕೃಷ್ಣರೆಡ್ಡಿ, ರಾಜ್ಯಾಧ್ಯಕ್ಷ, ಕೆಆರ್ ಎಸ್ ಪಕ್ಷ

.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

#Bharat  Jodo Yatra Finale | ಜಮ್ಮುಕಾಶ್ಮೀರದಲ್ಲಿ ಹಿಮಪಾತದ ಮಧ್ಯೆ ಭಾರತ ಜೋಡೋ ಯಾತ್ರೆ ಸಮಾರೋಪ

Next Post

BW SPECIAL | ಪುಣ್ಯಕೋಟಿ ದತ್ತು ಯೋಜನೆಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ : ಅನಧಿಕೃತ ಜಾನುವಾರು ಸಾಗಣೆ ನಿಯಂತ್ರಣಕ್ಕೆ ಮತ್ತಷ್ಟು ಬಿಗಿಕ್ರಮ!!

Next Post
ಉಡುಪಿ ಶ್ರೀಕೃಷ್ಣ ಮಠದ ಗೋಶಾಲೆಯ ಸಾಂದರ್ಭಿಕ ಚಿತ್ರ (ಕೃಪೆ : ವಿಕಿಪೀಡಿಯಾ)

BW SPECIAL | ಪುಣ್ಯಕೋಟಿ ದತ್ತು ಯೋಜನೆಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ : ಅನಧಿಕೃತ ಜಾನುವಾರು ಸಾಗಣೆ ನಿಯಂತ್ರಣಕ್ಕೆ ಮತ್ತಷ್ಟು ಬಿಗಿಕ್ರಮ!!

37ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ

ಶ್ರೀ ಸಿದ್ದೇಶ್ವರ ಸ್ವಾಮೀಜಿ ನಡೆದಾಡಿದ ನಾಡಿನಲ್ಲಿ ಫೆ.4 ಮತ್ತು 5 ರಂದು 37ನೇ ಪತ್ರಕರ್ತರ ರಾಜ್ಯ ಸಮ್ಮೇಳನ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d