Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | BBMP Budget 2023-24 | ಬೆಂಗಳೂರಿನ ಬಜೆಟ್ ಸಲಹಾ ಸಭೆಗೆ ಬೆರಳೆಣಿಕೆ ಜನಪ್ರತಿನಿಧಿಗಳಷ್ಟೇ ಹಾಜರ್! ಇದರ ಹಿಂದಿನ ಕಾರಣ ಏನ್ ಗೊತ್ತಾ?

ನಗರದಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು, ರಾಜ್ಯ ಸಭಾ ಸದಸ್ಯರು, ಸಚಿವರು ಮತ್ತು ಕೇಂದ್ರ ಮಂತ್ರಿಗಳು ಸೇರಿದಂತೆ 59 ಜನಪ್ರತಿನಿಧಿಗಳಿದ್ದಾರೆ. ಆದರೆ ಸಭೆಗೆ ಹಾಜರಾಗಿದ್ದು ಕೆಲವರಷ್ಟೇ.

by Bengaluru Wire Desk
February 9, 2023
in Bengaluru Focus, BW Special, Public interest
Reading Time: 3 mins read
0
ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಬಿಬಿಎಂಪಿ ಬಜೆಟ್ ಕುರಿತ ಸಲಹಾ ಸೂಚನಾ ಸಭೆಯ ಚಿತ್ರ

ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಬಿಬಿಎಂಪಿ ಬಜೆಟ್ ಕುರಿತ ಸಲಹಾ ಸೂಚನಾ ಸಭೆಯ ಚಿತ್ರ

ಬೆಂಗಳೂರು, ಫೆ.09 www.bengaluruwire.com : ಸಿಲಿಕಾನ್ ಸಿಟಿಯಲ್ಲಿ ಮುಂದಿನ ವರ್ಷದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಲು 59 ನಗರದ ಶಾಸಕರು, ಸಚಿವರು, ರಾಜ್ಯಸಭಾ ಸಚಿವರು, ಸಂಸದರಿಗೆ ಸಲಹೆ ಸೂಚನೆ ನೀಡಲು ಬಿಬಿಎಂಪಿಯಿಂದ ಫೆ.9ರಂದು ನಡೆದ ಸಭೆಗೆ ಕೇವಲ 3 ದಿನದ ಹಿಂದೆ ನೋಟಿಸ್ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತವಾಗಿದೆ.

ಕೇವಲ ಮೂರು ದಿನಗಳ ನೋಟಿಸ್ ನೀಡಿದ ಕಾರಣಕ್ಕೆ ವಿವಿಧ ಕೆಲಸಗಳಲ್ಲಿ ಬ್ಯುಸಿಯಾಗಿದ್ದ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ನಗರದ ಅಭಿವೃದ್ಧಿಯ ದಿಕ್ಸೂಚಿಯಾದ ಪಾಲಿಕೆ ಬಜೆಟ್ ಗೆ ಸಲಹೆ- ಸೂಚನೆ ನೀಡುವ ಮಹತ್ವದ ಸಭೆಗೆ ಸಮಯ ಹೊಂದಿಸಿಕೊಂಡು ಬರಲು ಸಾಧ್ಯವಾಗಿಲ್ಲ. ಹೀಗಾಗಿ ಶುಕ್ರವಾರದ ಸಭೆಯಲ್ಲಿ ಕೇವಲ 7 ಜನಪ್ರತಿನಿಧಿಗಳು ಹಾಜರಾಗಿದ್ದಾರೆ. ಕೇವಲ ಕಣ್ಣೊರೆಸಲು, ಹೆಚ್ಚಿನ ಜನಪ್ರತಿನಿಧಿಗಳು ಸಭೆಗೆ ಆಗಮಿಸಿದರೆ ತಮಗೆ ಬಿಜೆಪಿ ನೇತೃತ್ವದ ಆಡಳಿತ ನಡೆಸುವ ಸರ್ಕಾರ ತನಗೆ ಬೇಕಾದಂತೆ ಪಾಲಿಕೆ ಬಜೆಟ್  ಮಂಡಿಸಲು ಒತ್ತಡ ಬರುತ್ತದೆಂಬ ಕಾರಣಕ್ಕೆ ಸಭೆಯ ಶಾಸ್ತ್ರ ಮಾಡಿ ಮುಗಿಸಿದ್ದಾರೆ ಎಂದು ನಗರದ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಆಕ್ರೋಶ ಹೊರಹಾಕಿವೆ.

ಫೆ.9ರಂದು ವಿಕಾಸಸೌಧದಲ್ಲಿ 2023-24ನೇ ಸಾಲಿನ ಬಿಬಿಎಂಪಿ ಬಜೆಟ್ ಗೆ ಆಗಮಿಸುವಂತೆ ಫೆ.6ರಂದು ಸಭಾ ನೋಟಿಸ್ ಕಳುಹಿಸಲಾಗಿತ್ತು. ಕೇವಲ ಮೂರು ದಿನಗಳಲ್ಲಿ ಮೀಟಿಂಗ್ ನೋಟಿಸ್ ಕೊಟ್ಟರೆ ಹೆಚ್ಚಿನ ಜನಪ್ರತಿನಿಧಿಗಳು ಸಭೆಗೆ ಆಗಮಿಸುವುದಾದರೂ ಹೇಗೆ ಎಂದು ನಗರದ ಕೆಲವು ಶಾಸಕರು, ಸಂಘಸಂಸ್ಥೆಗಳ ಕಾರ್ಯಕರ್ತರು ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವರ್ತೂರು ಹಾಳಾದ ರಸ್ತೆಯಲ್ಲಿ ಶಾಲಾ ಬಸ್ಸೊಂದು ಸಂಚರಿಸುವಾಗ ಚಕ್ರವು ಹಳ್ಳದಲ್ಲಿ ಹೂತು ಅಪಘಾತವಾಗಿ ಶಾಲಾ ಮಕ್ಕಳನ್ನು ರಕ್ಷಿಸಲಾಗಿತ್ತು. (ಸಾಂದರ್ಭಿಕ ಚಿತ್ರ)

 ಬಿಬಿಎಂಪಿಯ ಆಡಳಿತಾಧಿಕಾರಿ ಕಚೇರಿಯಿಂದ ಫೆ.6ರಂದೇ ನಗರದಿಂದ ಆರಿಸಿಬಂದ 7 ಜನ ಸಚಿವರು ಸೇರಿದಂತೆ 27 ಶಾಸಕರು, 14 ವಿಧಾನಪರಿಷತ್ ಸದ್ಯರು, 8 ಜನ ರಾಜ್ಯಸಭಾ ಸದಸ್ಯರು, 5 ಸಂಸದರು, ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್ ಸೇರಿದಂತೆ 59 ಜನಪ್ರತಿನಿಧಿಗಳಿಗೆ ಬಜೆಟ್ ಸಲಹೆ ಸೂಚನೆ ನೀಡುವಂತೆ ಅಧಿಕೃತವಾಗಿ ಆಹ್ವಾನ ನೀಡಿದರೆ ಶುಕ್ರವಾರ ನಡೆದ ಸಭೆಗೆ ಕೇವಲ 7 ಜನ ಜನಪ್ರತಿನಿಧಿಗಳು ಆಗಮಿಸಿದ್ದರು. ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಬಿಬಿಎಂಪಿಯ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅಲ್ಪಾವಧಿಯಲ್ಲಿ ಸಭೆ ನಡೆಸುವ ನೋಟಿಸ್ ಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿಬಂದಿದೆ.

ಫೆ.9 ಸಲಹಾ ಸಭೆಯಲ್ಲಿ ಹಾಜರಾದ ಜನಪ್ರತಿಧಿಗಳು ಯಾರು?

ನಗರದಲ್ಲಿನ 59 ಜನಪ್ರತಿನಿಧಿಗಳ ಪೈಕಿ ಕೇವಲ ಒಬ್ಬ ಸಚಿವ, ತಲಾ ಮೂವರು ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಶಾಸಕರಾದ ರವಿಸುಬ್ರಮಣ್ಯ, ಉದಯ್ ಬಿ. ಗರುಡಾಚಾರ್, ಅಖಂಡ ಶ್ರೀನಿವಾಸ್ ಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಪಿ.ಆರ್.ರಮೇಶ್, ಪುಟ್ಟಣ್ಣ ಹಾಗೂ ಗೋಪಿನಾಥ್ ರೆಡ್ಡಿ ಮಾತ್ರ ಪಾಲ್ಗೊಂಡಿದ್ದರು.

ಬೆಂಗಳೂರಿನ ರಸ್ತೆಯೊಂದರ ಸಾಂದರ್ಭಿಕ ಚಿತ್ರ

ನಗರದಲ್ಲಿವೆ ನೂರಾರು ಸಮಸ್ಯೆಗಳು :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸೆಪ್ಟೆಂಬರ್ 2020ರಿಂದ 2 ವರ್ಷ 5 ತಿಂಗಳಿನಿಂದ ಜನಪ್ರತಿನಿಧಿಗಳ ಆಡಳಿತವಿಲ್ಲದೆ ಕೇವಲ ಆಡಳಿತಾಗರರ ನೇತೃತ್ವದಲ್ಲಿ ಪಾಲಿಕೆ ಆಡಳಿತದ ಚಕ್ರ ನಡೆಯುತ್ತಿದೆ. ಈ ಮಧ್ಯೆ ನಗರದಲ್ಲಿ ಕೋವಿಡ್, ಹೆಚ್ಚಿನ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ, ರಸ್ತೆ ಗುಂಡಿ ಗಂಡಾಂತರದಿಂದ ಹತ್ತಾರು ನಾಗರೀಕರು ಪ್ರಾಣ ಕಳೆದುಕೊಂಡಿದ್ದಾರೆ, ಸೂಕ್ತ ಕಾಲಾವಧಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಬಜೆಟ್ ನಲ್ಲಿ ಘೋಷಿಸಿದಂತೆ ಪೂರ್ಣ ರೂಪದಲ್ಲಿ ಪ್ರತಿ ವರ್ಷವೂ ಯೋಜನೆಗಳು, ಬಜೆಟ್ ನಲ್ಲಿ ಮೀಸಲಿಟ್ಟ ಹಣ ಕರ್ಚಾಗದೆ ಉಳಿದಿದೆ.

ಕಲ್ಯಾಣ ಕಾರ್ಯಕ್ರಮಗಳಾಗಲಿ, ಪಾಲಿಕೆ ಶಿಕ್ಷಣ ಇಲಾಖೆಯಾಗಲಿ, ಅರಣ್ಯ ವಿಭಾಗವಾಗಲಿ ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯಿನಿರ್ವಹಿಸುತ್ತಿಲ್ಲ. ನಗರದಲ್ಲಿ ಸ್ವಚ್ಛ ಭಾರತ್ ಹೆಸರಿನಲ್ಲಿ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಹರಿದು ಬಂದಿದ್ದರೂ ನಗರದ ಸ್ವಚ್ಛತೆಯಾಗಿಲ್ಲ. ಬೀದಿ ಬೀದಿಯಲ್ಲಿ ಕಸ ಬಿದ್ದಿದೆ. ಹೆಸರಿಗೆ ಬಿಬಿಎಂಪಿಯಲ್ಲಿ ಬಜೆಟ್ ಮಂಡಿಸುತ್ತಿದ್ದರೂ, ಸೂಕ್ತ ರೀತಿಯಲ್ಲಿ ಅನುಷ್ಠಾನವಾಗುತ್ತಿಲ್ಲ. ಪರಿಸ್ಥಿತಿ ಹೀಗಿರುವಾಗ ನಗರದ ಜನತೆಗೆ ಜನಪ್ರತಿನಿಧಿಗಳ ಆಡಳಿತಕ್ಕೆ ಆಗ್ರಹಿಸುತ್ತಿದ್ದರೂ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಇದ್ಯಾವುದಕ್ಕೂ ತಲೆ ಕೆಡೆಸಿಕೊಂಡಿಲ್ಲ.

“ಬಜೆಟ್ ಸಲಹಾ ಸಭೆ ಕೇವಲ ನಾಮಕಾವಸ್ತೆ” :

“ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಸಲಹಾ ಸಭೆ ಕೇವಲ ನಾಮಕಾವಸ್ತೆ ಸಭೆ. ಇದರ ಬಗ್ಗೆ ಹೇಳಿ ಪ್ರಯೋಜನವಿಲ್ಲ. 2022-23ನೇ ಸಾಲಿನ ಬಜೆಟ್ ನಲ್ಲಿ ನಗರದ ಪ್ರತಿಯೊಂದು ವಾರ್ಡಿಗೆ 2 ರಿಂದ 4 ಕೋಟಿ ರೂ. ಅನುದಾನ ನಿಗದಿಪಡಿಸಿದ್ದರೂ, ಈತನಕ ಕಾಮಗಾರಿ ನಡೆಸಲು ಪಾಲಿಕೆಯಿಂದ ಕಾರ್ಯಾದೇಶವೇ ಆಗಿಲ್ಲ. ಹೀಗಿರುವಾಗ ಕಾಟಚಾರಕ್ಕೆ ಬಜೆಟ್, ಬಜೆಟ್ ಮೀಟಿಂಗ್ ಮಾಡೋದು ಯಾಕೆ? ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳ ಸಲಹೆ ಸೂಚನೆ ಪಡೆಯುವವರು, ಸಾಮಾನ್ಯ ಸಂದರ್ಭದಲ್ಲೇ ಹೆಚ್ಚಿನ ಸಮಯ ಕೊಡುವವರು ಈಗ ಕೇವಲ ಮೂರು ದಿನದಲ್ಲಿ ಮೀಟಿಂಗ್ ನೋಟಿಸ್ ಕೊಟ್ಟಿದ್ದಾರೆ. ಇದರಲ್ಲೇ ಎಲ್ಲಾ ತಿಳಿಯುತ್ತೆ”

      ರಾಮಲಿಂಗಾರೆಡ್ಡಿ, ಮಾಜಿ ಸಚಿವರು ಮತ್ತು ಶಾಸಕರು, ಬಿಟಿಎಂ ವಿಧಾನಸಭಾ ಕ್ಷೇತ್ರ

ಸಾರ್ವತ್ರಿಕ ಚುನಾವಣೆಯ ಕರಿನೆರಳಲ್ಲಿ ಪಾಲಿಕೆ ಬಜೆಟ್ :

ಈ ಮಧ್ಯೆ ಏಪ್ರಿಲ್ ಕೊನೇವಾರ ಹಾಗೂ ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ಸಾಧ್ಯತೆಯಿದೆ. ಜನರಿಗೆ ಉತ್ತಮ ಮೂಲಭೂತ ಸೌಕರ್ಯ, ಅಗತ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪೂರಕವಾಗುವಂತೆ ಸಲಹೆ, ಸೂಚನೆಗಳನ್ನು ನಗರವನ್ನು ಪ್ರತಿನಿಧಿಸುವ ಜನಪ್ರತಿನಿಧಿಗಲು ಕೊಡಬಹುದಿತ್ತು. ಇದಕ್ಕಾಗಿ ಒಂದು ವಾರಗಳ ಕಾಲವಕಾಶ ನೀಡಿದ್ದರೂ ಇರುವ 59 ನಗರದ ಜನಪ್ರತಿನಿಧಿಗಳಲ್ಲಿ ಅರ್ಧದಷ್ಟಾದರೂ ಮಂದಿ ವಿಕಾಸ ಸೌಧದಲ್ಲಿ ಶುಕ್ರವಾರ (ಫೆ.9) ನಡೆಸಿದ ಸಲಹಾ ಸೂಚನಾ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಮೂಲ್ಯ ಸಲಹೆ ನೀಡುತ್ತಿದ್ದರು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

“ಫೆ.9 ಮೀಟಿಂಗ್ ನೋಟಿಸ್ ನಮಗೆ ತಲುಪಿಲ್ಲ” :

“ನಮಗೆ ಬಿಬಿಎಂಪಿ ಬಜೆಟ್ ಸಲಹಾ ಸಭೆ ಫೆ.9ರಂದು ಇರೋ ವಿಚಾರವೇ ಗೊತ್ತಿಲ್ಲ. ಏಕಂದ್ರೆ ಈ ಬಗ್ಗೆ ನಮಗೆ ಅಧಿಕೃತವಾಗಿ ಯಾವುದೇ ಮೀಟಿಂಗ್ ನೋಟಿಸ್ ಬಂದಿಲ್ಲ. ಈ ಸಭೆ ಶುಕ್ರಮವಾರ ನಡೆಯುತ್ತಿರುವ ವಿಚಾರವೇ ಗೊತ್ತಿಲ್ಲ. ಹೀಗಿರುವಾಗ ಹೇಗೆ ಆ ಸಭೆಯಲ್ಲಿ ಭಾಗವಹಿಸೋಕೆ ಸಾಧ್ಯ? ತಮಗೆ ಬೇಕಾದವರಿಗೆ ಮೀಟಿಂಗ್ ನೋಟಿಸ್ ಕೊಟ್ಟು, ತಮಗೆ ಬೇಕಾದಂತೆ ಬಿಬಿಎಂಪಿ ಬಜೆಟ್ ಮಾಡಿಕೊಳ್ಳಲು ಹೊರಟಂತಿದೆ.”
  • ಯು.ಬಿ.ವೆಂಕಟೇಶ್, ವಿಧಾನ ಪರಿಷತ್ ಸದಸ್ಯರು

ಬಜೆಟ್ ಗೆ 16,261 ನಾಗರೀಕರು ಸಲಹೆ ಕೊಟ್ಟಿದ್ದರು :

ಇತ್ತೀಚೆಗಷ್ಟೇ ಬೆಂಗಳೂರಿನ ಕ್ಷೇಮಾಭಿವೃದ್ಧಿ ಸಂಘಗಳು, ಬೆಂಗಳೂರು ವಾರ್ಡ್ ಸಮಿತಿ ಬಳಗ ಹಾಗೂ ಜನಾಗ್ರಹ ಸಂಸ್ಥೆಯ ಸಹಯೋಗದೊಂದಿಗೆ ನಾಗರೀಕರ ಸಹಭಾಗಿತ್ವದ 2023-24ನೇ ಸಾಲಿನ ಬಜೆಟ್ ಬಗ್ಗೆ, ಬೆಂಗಳೂರಿನ ‘ನನ್ನ ನಗರ ನನ್ನ ಬಜೆಟ್ ಅಭಿಯಾನ’ ಮೂಲಕ ಜನಾಭಿಪ್ರಾಯ ಸಂಗ್ರಹಣೆ ಮಾಡಿತ್ತು. ಇದರಲ್ಲಿ ಪಾಲಿಕೆಯ 8 ವಲಯಗಳ 243 ವಾರ್ಡ್ ಗಳಿಂದ 16,261 ನಾಗರೀಕರು- ಸಂಘ ಸಂಸ್ಥೆಗಳು ತಮ್ಮ ಸಲಹೆಗಳನ್ನು ನೀಡಿದ್ದರು. ನಾಗರೀಕರು ನಗರದ ಬಜೆಟ್ ಗೆ ತಮ್ಮ ಸಲಹೆ, ಅಭಿಪ್ರಾಯ ನೀಡಿರುವಾಗ ಬೆಂಗಳೂರಿನ ಜನತೆಯನ್ನು ಪ್ರತಿನಿಧಿಸುವ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಹಾಗೂ ರಾಜ್ಯ ಸಭಾ ಸದಸ್ಯರು ಸಭೆಯಲ್ಲಿ ಹಾಜರಾಗುವಂತೆ ಮುಂಚೆಯೇ ಸಭಾ ನೋಟಿಸ್ ಕೊಡಬಹುದಿತ್ತು. ಇದು ಸಭೆಗೆ ಹೆಚ್ಚಿನ ಜನಪ್ರತಿನಿಥಿಗಳು ಆಗಮಿಸಲು ತಡೆಯುವ ಹುನ್ನಾರದಂತೆ ಕಂಡು ಬರುತ್ತಿದೆ ಎಂದು ನಾಗರೀಕ ಸಂಘಟನೆಗಳು ದೂರಿವೆ.

“ಬಜೆಟ್  ಮೀಟಿಂಗ್ ಅನ್ನೋ ಕಣ್ಣೊರೆಸುವ ಹುನ್ನಾರ” :

“ಬೆಂಗಳೂರಿನ ಅಭಿವೃದ್ಧಿಗೆ ಬಿಬಿಎಂಪಿ ಬಜೆಟ್ ಒಂದು ಮುನ್ನೋಟ ನೀಡುವ ಪ್ರಮುಖ ವಿಷಯ. ಹೀಗಿರುವಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ, ಬಿಬಿಎಂಪಿ ಬಜೆಟ್ ಗೆ ಜನಪ್ರತಿನಿಧಿಗಳು ಸಲಹೆ ನೀಡುವ ಸಭೆಯನ್ನು ಫೆ.9ಕ್ಕೆ ನಿಗಧಿ ಮಾಡಿ ಕೇವಲ 3 ದಿನಗಳ ಮೀಟಿಂಗ್ ನೋಟಿಸ್ ನೀಡಿರುವುದು ಸರಿಯಾದ ಕ್ರಮವಲ್ಲ. ಸಭೆ ನಡೆಸಿದಂತೆ ನಾಟಕ ಮಾಡಿ ತಮಗೆ ಬೇಕಾದಂತೆ ಪಾಲಿಕೆ ಬಜೆಟ್ ತಯಾರಿಸುವ ಹುನ್ನಾರವಲ್ಲದೇ ಮತ್ತೇನಲ್ಲ. ಪಾಲಿಕೆ ಸದಸ್ಯರ ಅವಧಿ ಮುಗಿದ ಕೂಡಲೇ ಚುನಾವಣೆ ಮಾಡುವುದನ್ನು ಬಿಟ್ಟು, ಅವರ ಅವಧಿ ಮುಗಿದ ಬಳಿಕ ಕಮಿಷನ್ ಆಸೆಗೆ ನಗರದ ಅಭಿವೃದ್ಧಿ ಹೆಸರಿನಲ್ಲಿ ಕಾಮಗಾರಿ ನಡೆಸಿ ನೂರಾರು ಕೋಟಿ ರೂ. ಹಣ ಹೊಡೆಯುವ ಯೋಜನೆ ಮಾಡಿದ್ದಾರೆ. ಹೀಗಾಗಿ ನಗರದ ಎಲ್ಲೆಡೆ ರಸ್ತೆ, ಮೋರಿ ಕಿತ್ತು ಹಾಕಿ ನಾವೆಲ್ಲಿ ಯುದ್ಧಪೀಡಿತ ಉಕ್ರೇನ್ ನಲ್ಲಿದ್ದೇವಾ ಅನ್ನೋ ರೀತಿ ಆಗಿದೆ.”

ಆದರ್ಶ್ ಅಯ್ಯರ್.ಆರ್, ಸಹ ಅಧ್ಯಕ್ಷರು, ಜನಾಧಿಕಾರ ಸಂಘರ್ಷ ಪರಿಷತ್ತು

ಸಭೆಯಲ್ಲಿ ಚರ್ಚೆಯಾದ ಪ್ರಮುಖ ಸಲಹೆ-ಸೂಚನೆಗಳು :

•             ಬೀದಿ ದೀಪಗಳ ನಿರ್ವಹಣೆ ಸರಿಯಾಗಿ ಮಾಡುವುದು.

•             ಉದ್ಯಾನವನಗಳ ನಿರ್ವಹಣೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಭದ್ರತಾ ಸಿಬ್ಬಂದಿಯ ನಿಯೋಜನೆ ಮಾಡುವುದು.

•             ಬೀದಿ ಬದಿ ಕಸ ಸುರಿಯುವ ಸ್ಥಳ(ಬ್ಲಾಕ್ ಸ್ಪಾಟ್ ಗಳು)ಗಳಿಲ್ಲದಂತೆ ಮಾಡುವುದು.

•             ಕಲ್ಯಾಣ ಕಾರ್ಯಕ್ರಮಗಳಾದ ಲ್ಯಾಪ್‌ಟಾಪ್, ಹೊಲಿಗೆ ಯಂತ್ರ, ಒಂಟಿ ಮೆನೆ ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳಿಗೆ ಅನುದಾನ ಮೀಸಲಿಡುವುದು.

•             ಪಾಲಿಕೆ ವ್ಯಾಪ್ತಿಯಲ್ಲಿ ಭಿಕ್ಷಾಟಣೆ, ಗ್ರಂಥಾಲಯ ಹಾಗೂ ಡಲ್ಟ್ ಸೆಸ್ ಗಳನ್ನು ಸಂಗ್ರಹಿಸುತ್ತಿದ್ದು, ಅದನ್ನು ಸರಿಯಾಗಿ ವಿನಿಯೋಗ ಮಾಡಲು ಕ್ರಮಕೈಗೊಳ್ಳುವುದು.

•             ರಸ್ತೆಗಳ ಅಗಲೀಕರಣಕ್ಕಾಗಿ ಅನುದಾನ ಮೀಸಲಿಡುವುದು.

•             ಪ್ರತಿ ವಾರ್ಡ್ ಗೆ ಸಾರ್ವಜನಿಕ ಕಾಮಗಾರಿಗಳಿಗೆ(ಪಿಒಡಬ್ಲ್ಯೂ) ಅನುದಾನ ಮೀಸಲಿಡುವುದು.

•             ರಾಜಕಾಲುವೆಗಳ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವುದು.

•             ಪಾದಚಾರಿ ಮಾರ್ಗಗಳ ನಿರ್ವಹಣೆಗಾಗಿ ಅನುದಾನ ಮೀಸಲಿಡುವುದು.

•             ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುವುದು.

7 ಜನಪ್ರತಿನಿಧಿಗಳನ್ನು ಬಿಟ್ಟರೆ ವಿಕಾಸ ಸೌಧದಲ್ಲಿನ ಬಜೆಟ್ ಸಲಹಾ ಸೂಚನಾ ಸಭೆಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರು, ಜಂಟಿ ಆಯುಕ್ತರಗಳೇ ಸಭೆಯಲ್ಲಿ ಪಾಲ್ಗೊಂಡಿದ್ದರು. ಒಟ್ಟಿನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿಯಾಗಿರುವ ಬಜೆಟ್ ತಯಾರಿಯಲ್ಲಿ ಜನಪ್ರತಿನಿಧಿಗಳನ್ನು ಒಳಗೊಳ್ಳುವಿಕೆ ಯಾವ ಮಟ್ಟಿಗೆ ಆಗಿದೆ, ಆಗುತ್ತಿದೆ ಎಂಬುದಕ್ಕೆ ಇದೊಂದು ತಾಜಾ ಉದಾಹರಣೆಯಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BBMP News | ಹಲವು ಬೇಡಿಕೆ ಈಡೇರಿಕೆಗೆ ಪಾಲಿಕೆ ಅಧಿಕಾರಿ ನೌಕರರ ಸಂಘದ ಆಗ್ರಹ : ಬಿಬಿಎಂಪಿ ಕಚೇರಿಗಳು ಬಂದ್

Next Post

AeroIndia2023 | ಏರೊ ಇಂಡಿಯಾ ಚಮತ್ಕಾರಿಕ ವೈಮಾನಿಕ ಪೂರ್ವಾಭ್ಯಾಸಕ್ಕೆ ನೋಡುಗರು ಫಿದಾ !!

Next Post

AeroIndia2023 | ಏರೊ ಇಂಡಿಯಾ ಚಮತ್ಕಾರಿಕ ವೈಮಾನಿಕ ಪೂರ್ವಾಭ್ಯಾಸಕ್ಕೆ ನೋಡುಗರು ಫಿದಾ !!

BW EXCLUSIVE | #Lithium | ಜಮ್ಮು ಮತ್ತು ಕಾಶ್ಮೀರದಲ್ಲಿ ಲೀಥಿಯಂ ಖನಿಜ ನಿಕ್ಷೇಪ ಕಂಡು ಬಂದಿದ್ದು ಈಗಲ್ಲ 1997ರಲ್ಲಿ!! : ಜಿಎಸ್ಐ ನೀಡಿದ್ದ ಆ ವರದಿಯಲ್ಲೇನಿತ್ತು?

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d