Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Aero India 2023 | 14ನೇ ಆವೃತ್ತಿಯ ಏರೊ ಇಂಡಿಯಾ ಪ್ರದರ್ಶನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

ರಕ್ಷಣಾ ಕ್ಷೇತ್ರದ ರಫ್ತಿನಲ್ಲಿ ಸದ್ಯ 1.5 ಬಿಲಿಯನ್ ಡಾಲರ್ ರಫ್ತು |2024- 25ರ ವೇಳೆಗೆ 5 ಬಿಲಿಯನ್ ಡಾಲರ್ ಮೌಲ್ಯದ ಸರಕುಗಳನ್ನು ರಫ್ತು ಮಾಡುವ ಗುರಿ - ಮೋದಿ

by Bengaluru Wire Desk
February 13, 2023
in News Wire
Reading Time: 1 min read
0
PM at the 14th edition of Aero India 2023, in Bengaluru on February 13, 2023.

PM at the 14th edition of Aero India 2023, in Bengaluru on February 13, 2023.

ಬೆಂಗಳೂರು, ಫೆ.13 www.bengaluruwire.com : ಸಿಲಿಕಾನ್ ಸಿಟಿಯ 14ನೇ ಆವೃತ್ತಿಯ ಏರೊ ಇಂಡಿಯಾ 2023ರ ಮಹತ್ವದ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಿದರು.

ಈ ಮೂಲಕ ಐದು ದಿನಗಳ ಕಾಲ ದೇಶ ವಿದೇಶಗಳ ಯುದ್ಧ ವಿಮಾನಗಳ ಹಾರಾಟ, ಯುದ್ಧೋಪಕರಣ ಹಾಗೂ ಶಸ್ತ್ರಾಸ್ತ್ರಗಳ ಪ್ರದರ್ಶನ, ವೈಮಾನಿಕ ಹಾಗೂ ರಕ್ಷಣಾ ಕ್ಷೇತ್ರದ ವಿಚಾರ ಸಂಕಿರಣ, ರಕ್ಷಣಾ ಸಚಿವರ ಸಭೆ ಮತ್ತಿತರ ಕಾರ್ಯಕ್ರಮಗಳಿಗೆ ರಾಜಧಾನಿ ಸಾಕ್ಷಿಯಾಗಲಿದೆ.

ಏರ್ ಶೋ 2023 ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮೊದಲು ಭಾರತ ರಕ್ಷಣಾ ಕ್ಷೇತ್ರದಲ್ಲಿ ಆಮದು ಮಾಡಿಕೊಳ್ಳುತ್ತಿತ್ತು. ಈಗ ಬೇರೆ ದೇಶಗಳಿಗೆ ಯುದ್ಧ ಸಾಮಗ್ರಿಗಳನ್ನು ರಫ್ತು ಮಾಡುತ್ತಿದೆ. ಭಾರತದ ರಕ್ಷಣಾ ಕ್ಷೇತ್ರದ ಮೂಲಕ ಈಗ 1.5 ಬಿಲಿಯನ್ ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡಲಾಗುತ್ತಿದ್ದು,  2024- 25ರಲ್ಲಿ 5 ಬಿಲಿಯನ್ ಮೌಲ್ಯದ ಸರಕುಗಳನ್ನು ರಫ್ತು ಮಾಡುವ ಗುರಿಯಿದೆ. ದೇಶದ ಖಾಸಗಿ ಹೂಡಿಕೆದಾರರಿಗೆ ದೇಶದ ರಕ್ಷಣಾ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ವಿಫುಲ ಅವಕಾಶವಿದೆ ಎಂದು ಹೇಳಿದರು.

ಫ್ರಧಾನಮಂತ್ರಿ ನರೇಂದ್ರ ಮೋದಿ ಏರೊ ಇಂಡಿಯಾ ಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭ

ದೇಶದಲ್ಲಿ ಕೇಂದ್ರದಲ್ಲಿ ನೀತಿ ಹಾಗೂ ಪ್ರಾಮಾಣಿಕತೆಯಿದೆ. ಇದನ್ನು ಖಾಸಗಿ ಹೂಡಿಕೆದಾರರು ಬಳಸಿಕೊಳ್ಳಬೇಕು. ಉದ್ದಿಮೆ ನಡೆಸಲು ಹೆಚ್ಚಿನ ಅನುಕೂಲವಿದೆ. ಕೇಂದ್ರ ಸರ್ಕಾರ ತಯಾರಿಕೆ ಕೈಗಾರಿಕೆಗಳಿಗೆ ತೆರಿಗೆ ರಿಯಾಯಿತಿ ನೀಡಿದೆ. ಏರೊ ಇಂಡಿಯಾ ಪ್ರದರ್ಶನ ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಭವಿಷ್ಯ ನುಡಿದರು.

ಏರೊ ಇಂಡಿಯಾವನ್ನು ರೋಮಾಂಚನಗೊಂಡಿದ್ದೇನೆ. ಏರ್ ಶೋ ಮೂಲಕ ಬೆಂಗಳೂರಿನ ಆಕಾಶ ಹೊಸ ಉತ್ತುಂಗವನ್ನು‌ ಮುಟ್ಟಿದೆ. ಇದು ಹೊಸ ಭಾರತದ ಸತ್ಯವಾಗಿದೆ. ಅಲ್ಲದೆ ಭಾರತದ ಸಾಮರ್ಥ್ಯದ ಪ್ರತೀಕವಾಗಿದೆ. ವಿಶ್ವಮಟ್ಟದಲ್ಲಿ ರಕ್ಷಣಾ ಕ್ಷೇತ್ರದಲ್ಲಿ ದೇಶದ ಹೆಸರು ಉನ್ನತಮಟ್ಟವನ್ನು ತಲುಪಿದೆ. ಶತಕೋಟಿ ಅವಕಾಶಗಳ ಹಾದಿ ಪರಿಕಲ್ಪನೆಯು ನಮ್ಮಲ್ಲಿ ಸಾಕಾರಗೊಳ್ಳುತ್ತಿದೆ.

ಏರೊ ಇಂಡಿಯಾ ಮಳಿಗೆಯಲ್ಲಿ ಎಲ್ ಸಿಎ ತೇಜಸ್ ಮಾರ್ಕ್-2 ಯುದ್ಧ ವಿಮಾನ ಮಾದರಿಯ ಬಗ್ಗೆ ಪ್ರದರ್ಶಕರಿಂದ ಕೇಳಿ ತಿಳಿದುಕೊಂಡ ಪ್ರಧಾನಿ‌ ಮೋದಿ.

ಅತ್ಯಾಧುನಿಕ ತಂತ್ರಙ್ಞನ ಅಳವಡಿಸಿಕೊಂಡು ಕರ್ನಾಟಕ ರಕ್ಷಣಾ ಕ್ಷೇತ್ರವನ್ನು ಬಲಪಡಿಸುತ್ತಿದೆ. ತಂತ್ರಜ್ಞಾನವನ್ನು ಬಳಸಿಕೊಂಡು ಹೊಸ ಹೊಸ ಅವಿಷ್ಕಾರಗಳಾಗಬೇಕಿದೆ. ಹೊಸ ಅಲೋಚನೆ, ಯುವಕರನ್ನು ಬಳಸಿಕೊಂಡು ಇದನ್ನು ಸಾಕಾರಗೊಳಿಸಬೇಕಿದೆ. ಏರ್ ಶೋ ಕೇವಲ ವೈಮಾನಿಕ ಪ್ರದರ್ಶನವಷ್ಟೇ ಅಲ್ಲ, ಇದು ಭಾರತದ ಶಕ್ತಿಯಾಗಿದೆ. ಅಲ್ಲದೆ ವೈಮಾನಿಕ‌ ಪ್ರದರ್ಶನ ದೇಶದ ರಕ್ಷಣಾ ಕ್ಷೇತ್ರಕ್ಕೆ ಬಲ‌ ತುಂಬುತ್ತಿದೆ. ಏರೋ ಇಂಡಿಯಾದ ಕಿವಿಗಡಚಿಕ್ಕುವ ಘರ್ಜನೆಯು ಭಾರತದ ಸುಧಾರಣೆ, ಕಾರ್ಯಕ್ಷಮತೆ ಮತ್ತು ರೂಪಾಂತರದ ಸಂದೇಶವನ್ನು ಪ್ರತಿಧ್ವನಿಸುತ್ತದೆ ಎಂದರು.

ಪ್ರತ್ಯಕ್ಷ ನೋಡಿದರೂ ಪ್ರಮಾಣಿಸಿ ನೋಡು ಎಂಬಂತೆ ತೇಜಸ್ ಆಕಾಶದಲ್ಲಿ ಘರ್ಜಿಸುತ್ತಿದೆ, ತುಮಕೂರಿನ ಹೆಲಿಕಾಪ್ಟರ್ ತಯಾರಿಕಾ ಕೇಂದ್ರ ಇವೆಲ್ಲ ಆತ್ಮನಿರ್ಭರ್ ಭಾರತಕ್ಕೆ ಸಾಕ್ಷಿಯಾಗಿದೆ. ಹೊಸ ಹೊಸ ಅವಕಾಶವಿದೆ. ಭಾರತದಲ್ಲೀಗ ಅಮೃತ್ ಕಾಲವಿದೆ. ನಮ್ಮ‌ ದೇಶವು ಫೈಟರ್ ವಿಮಾನದ ರೀತಿ ಮುನ್ನಗ್ಗುತ್ತಿದೆ ಎಂದು ಪ್ರಧಾನಮಂತ್ರಿ ಬಣ್ಣಿಸಿದರು.

ಕರ್ನಾಟಕದ ಯುವಕರು ದೇಶವನ್ನು ಬಲಪಡಿಸಲು ರಕ್ಷಣಾ ಕ್ಷೇತ್ರದಲ್ಲಿ ತಮ್ಮ ತಾಂತ್ರಿಕ ಪರಿಣತಿಯನ್ನು ನಿಯೋಜಿಸಬೇಕು ಎಂದು ಪ್ರಧಾನಿ ಕರೆ ನೀಡಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಮ್ಮ ದೇಶದ ರಕ್ಷಣಾ ಕ್ಷೇತ್ರ ಸಶಕ್ತವಾಗಿದೆ. ಇತ್ತೀಚಿನ ದಿನಗಳಲ್ಲಿ ರಕ್ಷಣಾ ಕ್ಷೇತ್ರ ಕ್ಷಿಪ್ರವಾಗಿ ಅಭಿವೃದ್ಧಿಯಾಗುತ್ತಿದೆ. ಅದರಲ್ಲಿ ಏರ್ ಶೋ ಕಾರ್ಯಕ್ರಮ ಕೂಡ ಒಂದು. ದೇಶದಲ್ಲಿ ರಕ್ಷಣಾ ಕ್ಷೇತ್ರದಲ್ಲಿ ಕರ್ನಾಟಕದ ಕೊಡುಗೆ ಪ್ರಮುಖವಾಗಿದೆ. ತುಮಕೂರು, ಲಕ್ನೋ ಹಾಗೂ ಈಗ ಬೆಂಗಳೂರಿನಲ್ಲಿ ದೇಶದ ಕೈಗಾರಿಕೆ ವಿಚಾರದಲ್ಲಿ ಪ್ರಮುಖ ಬೆಳವಣಿಗೆಗೆ ಸಾಕ್ಷಿಯಾಗಿದೆ.

ಏರೊ ಇಂಡಿಯಾ 2023 ಅಂಗವಾಗಿ ಅಂಚೆ ಚೀಟಿ ಬಿಡುಗಡೆಗೊಳಿಸಿದ ಸಂದರ್ಭದ ಚಿತ್ರ

ಕರ್ನಾಟಕ ರಾಜ್ಯ ಶ್ರಿಗಂಧದ ನಾಡು. ಈ ನೆಲದ ಸುಗಂಧ ದೇಶಾದ್ಯಂತ ಪಸರಿಸಿದೆ. ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ರಕ್ಷಣಾ ಕ್ಷೇತ್ರದ ಸಾಮಗ್ರಿಗಳನ್ನು ಇಲ್ಲಿ ಉತ್ಪಾದಿಸಲಾಗುತ್ತಿದೆ. ಅದಕ್ಕೆ ಸಂತಸವಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.

ಈ ಏರ್ ಶೋನಲ್ಲಿ ಹಲವು ದೇಶಗಳ ರಕ್ಷಣಾ ಸಚಿವರು, ವಿವಿಧ ಕಂಪನಿಗಳ ಸಿಎಒ, ವಿವಿಧ ದೇಶಗಳ ಪ್ರದರ್ಶಕರು ಪಾಲ್ಗೊಳ್ಳುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಈ ಬಾರಿಯ ಏರೊ ಇಂಡಿಯಾ ವೈಮಾನಿಕ ಪ್ರದರ್ಶನದ ವಿಸ್ತೀರ್ಣ, ಪ್ರದರ್ಶಕರು, ವಿದೇಶಿಗರ ಪಾಲ್ಗೊಳ್ಳುವಿಕೆ ದೃಷ್ಟಿಯಿಂದ ವಿಶೇಷವಾಗಿದೆ. ದೇಶದ ರಕ್ಷಣಾ ಕ್ಷೇತ್ರದ ಶೇ.60ರಷ್ಟು ಅವಶ್ಯಕತೆಯನ್ನು ಬೆಂಗಳೂರು ಪೂರೈಸುತ್ತಿದೆ. ನಮ್ಮಲ್ಲಿ ಏರೊ ಸ್ಪೇಸ್ ನೀತಿ ರೂಪಿಸಲಾಗಿದೆ. ದೇಶದ ರಕ್ಷಣಾ ಕ್ಷೇತ್ರ ಬಲಪಡಿಸುವಲ್ಲಿ ಕರ್ನಾಟಕದ ಕೊಡುಗೆ ಮತ್ತಷ್ಟು ಹೆಚ್ಚಿಸಿ, ಉದ್ಯೋಗವಕಾಶವನ್ನು ಹೆಚ್ಚಿಸಲಾಗುವುದು. ನಮ್ಮ ಪ್ರಧಾನಿ ಗ್ರೇಟರ್ ಇಂಡಿಯಾ ಮಾಡುವ ಕನಸನ್ನು ನನಸು ಮಾಡುತ್ತಿದ್ದಾರೆ ಎಂದು ಕೊಂಡಾಡಿದರು.

ಇದೇ ಸಂದರ್ಭದಲ್ಲಿ ಏರೊ ಇಂಡಿಯಾ 2023 ಕಾರ್ಯಕ್ರಮದ ನೆನಪಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅಂಚೆಚೀಟಿ ಬಿಡುಗಡೆಗೊಳಿಸಲಾಯಿತು. ಬೆಳಗ್ಗೆ 9:30ರ ಏರ್ ಶೋ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ 9.40ಕ್ಕೆ ಆಗಮಿಸಿದರು. ಬಳಿಕ ವೈಮಾನಿಕ ಪ್ರದರ್ಶನಕ್ಕೆ ಯಲಹಂಕ ವಾಯುನೆಲೆ ಸಾಕ್ಷಿಯಾಯಿತು. ದೇಶದ ವಿವಿಧ ಯುದ್ಧ ವಿಮಾನ, ಹೆಲಿಕಾಪ್ಟರ್ ಗಳು ಬಾನಂಚಿನಲ್ಲಿ ಸಾಗಿ ವೈಮಾನಿಕ ಪ್ರದರ್ಶನ ನೀಡಿ ದೇಶದ ಏರೊಸ್ಪೇಸ್ ಸಾಮರ್ಥ್ಯವನ್ನು ತೋರ್ಪಡಿಸಿದವು.

ವೇದಿಕೆ ಕಾರ್ಯಕ್ರಮದ ಬಳಿಕ ರಕ್ಷಣಾ ಇಲಾಖೆಯ ವಿವಿಧ ಪ್ರದರ್ಶನ ಮಳಿಗೆ ಹಾಗೂ ಇಂಡಿಯನ್ ಪೆವಿಲಿಯನ್, ಸ್ಥಿರ ಪ್ರದರ್ಶನ ಸ್ಟಾಲ್ ಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಟ್ಟರು. ಇದೇ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Aeroindia2023 |ಗಮನಿಸಿ…!! : ಫೆ.13 ರಿಂದ ಏರ್ ಶೋ ಹಿನ್ನಲೆ – ಹಲವು ಕಡೆ ತಾತ್ಕಾಲಿಕ ವಾಹನ ಸಂಚಾರದಲ್ಲಿ ಬದಲಾವಣೆ

Next Post

Aero India 2023 | ಬೆಂಗಳೂರಿನ ಆಗಸದಲ್ಲಿ‌ ಲೋಹದ ಹಕ್ಕಿಗಳ ರುದ್ರ ರಮಣೀಯ ಕಸರತ್ತು

Next Post

Aero India 2023 | ಬೆಂಗಳೂರಿನ ಆಗಸದಲ್ಲಿ‌ ಲೋಹದ ಹಕ್ಕಿಗಳ ರುದ್ರ ರಮಣೀಯ ಕಸರತ್ತು

BW Special| Aero India 2023 | ದೇಶದ ರಕ್ಷಣಾ ವ್ಯವಸ್ಥೆಯ ಬತ್ತಳಿಕೆಗೆ "ಉತ್ತಮ್" ರಾಡಾರ್ : ತೇಜಸ್ ಯುದ್ಧ ವಿಮಾನಕ್ಕೆ ಬಲ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d