Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP Lingadheeranahalli Plant Closure Protest | ಕಸ ಸಂಸ್ಕರಣಾ ಘಟಕ ಸ್ಥಗಿತಕ್ಕೆ ಆಗ್ರಹ : 3ನೇ ದಿನಕ್ಕೆ ಕಾಲಿಟ್ಟ ಬನಶಂಕರಿ 6ನೇ ಹಂತದ ನಿವಾಸಿಗಳ ಧರಣಿ

ಗುರುವಾರ ಪ್ರತಿಭಟನಾ ನಿರತರ ಮನವೊಲಿಸಲು ಸ್ಥಳೀಯ ಶಾಸಕ ಎಸ್.ಟಿ.ಸೋಮಶೇಖರ್ ಆಗಮಿಸಿದರೂ, ಬಿಬಿಎಂಪಿಯಿಂದ ಸೂಕ್ತ ಕ್ರಮ ಆಗುವ ತನಕ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಬನಶಂಕರಿ 6ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಕಡ್ಡಿ ಮುರಿದಂತೆ ಹೇಳಿದೆ.

by Bengaluru Wire Desk
February 16, 2023
in Bengaluru Focus, Public interest
Reading Time: 1 min read
0
ಲಿಂಗಧೀರನಹಳ್ಳಿ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿ ಪ್ರತಿಭಟನೆ ನಿರತ ಸ್ಥಳೀಯ ನಿವಾಸಿಗಳು

ಲಿಂಗಧೀರನಹಳ್ಳಿ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿ ಪ್ರತಿಭಟನೆ ನಿರತ ಸ್ಥಳೀಯ ನಿವಾಸಿಗಳು

ಬೆಂಗಳೂರು, ಫೆ.16 www.bengaluruwire.com  : ನಗರದಲ್ಲಿ ಬನಶಂಕರಿ 6ನೇ ಹಂತದಲ್ಲಿನ ಲಿಂಗಧೀರನಹಳ್ಳಿ ತ್ಯಾಜ್ಯ ಸಂಸ್ಕರಣಾ ಘಟಕದಿಂದ ಬರುವ ದುರ್ವಾಸನೆಯಿಂದ ಬೇಸೆತ್ತು ಈ ಪ್ರದೇಶದ ಸುತ್ತಮುತ್ತಲಿನ ನಾಗರಿಕರು ಸಾಕಷ್ಟು ಆರೋಗ್ಯ ಸಮಸ್ಯೆ ಸೇರಿದಂತೆ ನಾನಾ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಈ ಘಟಕವನ್ನು ಮುಚ್ಚಬೇಕೆಂದು ಆಗ್ರಹಿಸಿ ಬನಶಂಕರಿ 6ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಮಂಗಳವಾರದಿಂದ ಆರಂಭಿಸಿರುವ ಅನಿರ್ದಿಷ್ಟ ಧರಣಿ 3ನೇ ದಿನಕ್ಕೆ ಕಾಲಿಟ್ಟಿದೆ.

ಬನಶಂಕರಿ 6ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಮಂಗಳವಾರ ಬೆಳಗ್ಗೆಯಿಂದಲೇ ತ್ಯಾಜ್ಯ ಸಂಸ್ಕರಣೆ ಘಟಕದ ಬಳಿ ಪ್ರತಿಭಟನೆ ಆರಂಭಿಸಿದ್ದು, ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಘಟಕವನ್ನು ಸ್ಥಳಾಂತರಿಸಬೇಕು ಇಲ್ಲವೇ ಮುಚ್ಚಿ ‘ತುರಹಳ್ಳಿಯನ್ನು ಉಳಿಸಿ’ ಎಂದು  ಒತ್ತಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಗುರುವಾರ ಬೆಂಗಳೂರು ವೈರ್ ಜೊತೆ ಮಾತನಾಡಿದ ಸಂಘದ ಅಧ್ಯಕ್ಷ ಮಹೇಶ್, “ಲಿಂಗಧೀರನಹಳ್ಳಿ ತ್ಯಾಜ್ಯ ಸಂಸ್ಕರಣಾ ಘಟಕ ಮುಚ್ಚುವಂತೆ ಒತ್ತಾಯಿಸಿ ಸಂಘದ ಸದಸ್ಯರು, ಸ್ಥಳೀಯ ನಿವಾಸಿಗಳು ನಡೆಸುತ್ತಿರುವ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದು ಬೆಳಗ್ಗೆ ಸ್ಥಳಕ್ಕೆ ಆಗಮಿಸಿದ ಯಶವಂತಪುರ ಶಾಸಕ ಹಾಗೂ ಸಚಿವರಾದ ಎಸ್.ಟಿ.ಸೋಮಶೇಖರ್, ಕಸ ಸಂಸ್ಕರಣಾ ಘಟಕವನ್ನು ಮುಚ್ಚಲು ಅಥವಾ ಸ್ಥಳಾಂತರಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆದಿದೆ. ಸದ್ಯಕ್ಕೆ ಧರಿಣಿ ಕೈಬಿಡಿ, ನಿಮ್ಮ ಸಮಸ್ಯೆಗೆ 3 ದಿನದ ಒಳಗಾಗಿ ಪರಿಹಾರ ಒದಗಿಸುತ್ತೇವೆ ಎಂದು ಹೇಳಿದ್ದಾರೆ. ಆದರೆ ಬಿಬಿಎಂಪಿ ಕಡೆಯಿಂದ ಸ್ಪಷ್ಟ ನಿರ್ಧಾರ ಪ್ರಕಟಿಸುವ ತನಕ ನಮ್ಮ ಧರಣಿ ಮುಂದುವರೆಸುತ್ತೇವೆ” ಎಂದು ತಿಳಿಸಿದ್ದಾರೆ.

“ಘಟಕ ಮುಚ್ಚಿ ಅಥವಾ ಸ್ಥಳಾಂತರ ಮಾಡಿ ಎಂಬ ಬೇಡಿಕೆ ಇಟ್ಟು ಎಂಟು ತಿಂಗಳಿಂದ ಹೋರಾಟ ಮಾಡುತ್ತಿದ್ದೇವೆ. ಕಳೆದ ಡಿಸೆಂಬರ್‌ನಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ಅವರೂ ಈ ಬಗ್ಗೆ ಬಿಬಿಎಂಪಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯವರು ಫೆ.9 ರಂದು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದು ಘಟಕ ಮುಚ್ಚಲು ಕ್ರಮ ಕೈಗೊಳ್ಳಿ ಎಂದು ಸ್ಪಷ್ಟವಾಗಿ ಸೂಚಿಸಿದ್ದಾರೆ. ಹೀಗಿದ್ದರೂ ಬಿಬಿಎಂಪಿ ಮುಖ್ಯ ಆಯುಕ್ತರು ಕ್ರಮ ಕೈಗೊಂಡಿಲ್ಲ. ಹೀಗಾಗಿ ಹೋರಾಟ ನಿರಂತರವಾಗಿ ನಡೆಯಲಿದೆ. ಬಿಬಿಎಂಪಿಯವರು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಘಟಕ ನಿರ್ಮಿಸಿದ್ದಾರೆ. 10 ಸಾವಿರ ಮನೆಗಳಿದ್ದರೂ, ಖಾಲಿ ಜಾಗ ಎಂದು ಸುಪ್ರೀಂಕೋರ್ಟಿಗೆ ಸುಳ್ಳು ಮಾಹಿತಿ ನೀಡಿತ್ತು. ಪಾಲಿಕೆಯಿಂದ ಸ್ಪಷ್ಟ ನಿರ್ಧಾರ ಕೈಗೊಳ್ಳುವ ತನಕ ತಮ್ಮ ಧರಣಿ ಸತ್ಯಾಗ್ರಹ ಕೈಬಿಡುವ ಪ್ರಶ್ನೆಯೇ ಇಲ್ಲ” ಎಂದು ಮಹೇಶ್ ಹೇಳಿದ್ದಾರೆ.

ಸಹಕಾರ ಸಚಿವ ಮತ್ತು ಶಾಸಕರಾದ ಎಸ್.ಟಿ.ಸೋಮಶೇಖರ್ ಸಿಎಂ ಬೊಮ್ಮಾಯಿ ಅವರಿಗೆ ಬರೆದ ಪತ್ರ

ಮನೆ ಕಿಟಕಿ- ಬಾಗಿಲು ತೆರೆದರೆ ದುರ್ವಾಸನೆ :

ಲಿಂಗಧೀರನ ಹಳ್ಳಿ ಬಳಿಯ ಮಧ್ಯ ಭಾಗದಲ್ಲಿ 2014ರಲ್ಲಿ ಬಿಬಿಎಂಪಿಯು ತ್ಯಾಜ್ಯ ವಿಲೇವಾರಿ ಘಟಕವನ್ನು 39,000 ಚದರ ಮೀಟರ್ ಭೂಮಿಯಲ್ಲಿ ನಿರ್ಮಾಣ ಮಾಡಿತ್ತು. ಸೂಕ್ತ ರೀತಿಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ನಿರ್ವಹಿಸದೇ ಇರುವುದರಿಂದ ಬನಶಂಕರಿ 6ನೇ ಹಂತದಲ್ಲಿ ಒಟ್ಟು 14 ಬ್ಲಾಕ್ ಗಳಿದ್ದು, ಸುತ್ತಲಿನ 6 ರಿಂದ 10 ಕಿ.ಮೀ ತನಕ ದುರ್ವಾಸನೆ ಬೀರುತ್ತಿದೆ. ತ್ಯಾಜ್ಯ ವಿಲೇವಾರಿ ವಾಸನೆಯಿಂದಾಗಿ ಇಲ್ಲಿನ ಜನರ ಜನಜೀವನ ದುಸ್ತರವಾಗಿದೆ. ದಿನನಿತ್ಯ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ ಕಿಟಕಿ- ಬಾಗಿಲು ಮುಚ್ಚಿಯೇ ವಾಸಿಸುವಂತಾಗಿದೆ. ಹಲವರಿಗೆ ಉಸಿರಾಟದ ಸಮಸ್ಯೆ, ಅಸ್ತಮಾ ರೋಗಗಳಿಗೆ ತುತ್ತಾಗಿದ್ದಾರೆ. ಸೊಳ್ಳೆ ಮತ್ತು ನೊಣಗಳ ಕಾಟ ಹೆಚ್ಚಾಗಿದ್ದು ವಾಸಿಸಲು ಸಾಧ್ಯವಾಗುತ್ತಿಲ್ಲ ಎಂದು ಬನಶಂಕರಿ 6ನೇ ಹಂತದ ನಿವಾಸಿ ಸುಘೋಷ ಸ ನಿಗಳೆ ದೂರಿದ್ದಾರೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ನಿರ್ದೇಶನದಂತೆ 2021ರಲ್ಲಿ ಲಿಂಗಧೀರನಹಳ್ಳಿ ಪ್ಲಾಂಟ್ ಅನ್ನು ಮುಚ್ಚಲಾಯಿತು. ಹಳೆಯದಾದ ಈ ತ್ಯಾಜ್ಯ ಸಂಸ್ಕರಣದಲ್ಲಿ ತಾಂತ್ರಿಕ ದೋಷಗಳಿವೆ. ಪರಿಸರಕ್ಕೆ ಹಾನಿಯಾಗದಂತೆ ಕಾಪಾಡಿಕೊಳ್ಳಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (National Green Tribunal) ಬಿಬಿಎಂಪಿಗೆ ಸೂಚಿಸಿತ್ತು. ಈ ಸಂದರ್ಭದಲ್ಲಿ ಬಿಬಿಎಂಪಿಯು ಸಮಸ್ಯೆ ಬಗೆಹರಿಸಲು ಹೆಚ್ಚಿನ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ಗೆ (Supreme Court)ಮೇಲ್ಮನವಿ ಸಲ್ಲಿಸಿತ್ತು. ಮಾಲಿನ್ಯ ನಿಯಂತ್ರಣ ಮಂಡಳಿ ನಿಗದಿಪಡಿಸಿದ ಮಾನದಂಡಗಳಿಗೆ ಅನುಗುಣವಾಗಿ ಸ್ಥಾವರವನ್ನು ನಡೆಸುವುದಾಗಿ ಬಿಬಿಎಂಪಿ ಹೇಳಿತ್ತು. ಆದರೆ, ಯಾವ ದುರಸ್ತಿ ಕ್ರಮವೂ ಕೈಗೊಳ್ಳದೆ ಬಿಬಿಎಂಪಿಯು ಕಣ್ಣಿಗೆ ಬಟ್ಟೆ ತೊಟ್ಟು ಕುರುಡರಂತೆ ವರ್ತಿಸುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತ್ಯಾಜ್ಯ ಸಂಸ್ಕರಣಾ ಘಟಕ ಮುಚ್ಚಲಾಗದು ಎಂದ ಬಿಬಿಎಂಪಿ :

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ  (Bangalore Solid Waste Management Ltd.)ನ ಮುಖ್ಯ ಎಂಜಿನಿಯರ್ ಆರ್.ಎಲ್ ಪರಮೇಶ್ವರಯ್ಯ, “ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಸ್ಕರಿಸಲೆಂದು ನಗರದ 7 ಕಡೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ತೆರೆಯಲಾಗಿತ್ತು. ಲಿಂಗಧೀರನಹಳ್ಳಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಸ್ಥಳೀಯ ನಿವಾಸಿಗಳ ಆಗ್ರಹದ ಮೇರೆಗೆ ಮುಚ್ಚಿದರೆ, ಸಾರ್ವಜನಿಕರ ಹಣ ಖರ್ಚು ಮಾಡಿದ್ದು ಮಣ್ಣು ಪಾಲಾಗುತ್ತದೆ. ತಾಂತ್ರಿಕವಾಗಿ ಅಥವಾ ನಿರ್ದಿಷ್ಟ ಸಮಸ್ಯೆಗಳಿದ್ದರೆ ಅದನ್ನು ಬಿಬಿಎಂಪಿಯು ಪರಿಹಸಲಿದೆ” ಎಂದ ಅವರು ಪರೋಕ್ಷವಾಗಿ ಘಟಕ ಮುಚ್ಚಲಾಗದು ಎಂದು ತಿಳಿಸಿದ್ದಾರೆ.

ಈ ಭಾಗದಲ್ಲಿ ಘಟಕ ನಿರ್ಮಿಸಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (KSPCB) ಹಸಿರು ನಿಶಾನೆ ತೋರಿದ ನಂತರ ಘಟಕದಲ್ಲಿ ಸಂಸ್ಕರಣಾ ಕಾರ್ಯಾಚರಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಬಿಬಿಎಂಪಿಗೆ ತಿಳಿಸಿತ್ತು. ಆದರೆ ಕೆಎಸ್‌ಪಿಸಿಬಿ ಷರತ್ತುಗಳ ಅನುಸಾರ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆ ಕೈಗೊಳ್ಳಲು ಪಾಲಿಕೆಯು ತಾತ್ಕಾಲಿಕವಾಗಿ ಘಟಕದ ಕಾರ್ಯಾಚರಣೆ ನಿಲ್ಲಿಸಲಾಗಿತ್ತು. ಫೆಬ್ರವರಿ 2022ರಲ್ಲಿ ಸ್ಥಾವರವನ್ನು ಪುನಃ ತೆರೆಯಲಾಗಿತ್ತು. ಆದರೆ, 2022ರ ನವೆಂಬರ್ ನಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಬಿಬಿಎಂಪಿ ತಾನು ನಿಗದಿಪಡಿಸಿದ ಪರಿಸರ ಕಾನೂನು ಷರತ್ತುಗಳನ್ನು ಪಾಲಿಸಲು ವಿಫಲವಾಗಿದೆ ಎಂದು ದೂರಿತ್ತು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW Special | Aero India 2023 |ಚಾಲಕ ರಹಿತ ಸ್ವದೇಶಿ ಮೆಟ್ರೊ ರೈಲು ತಯಾರಿಸಿದ ಬೆಮೆಲ್….!

Next Post

Karnataka Budget 2023-24 | ಚುನಾವಣಾ ವರ್ಷದಲ್ಲಿ ರಾಜ್ಯಕ್ಕೆ 3.09 ಲಕ್ಷ ಕೋಟಿ ರೂ. ಮಿಗತೆಯ ಬಜೆಟ್

Next Post

Karnataka Budget 2023-24 | ಚುನಾವಣಾ ವರ್ಷದಲ್ಲಿ ರಾಜ್ಯಕ್ಕೆ 3.09 ಲಕ್ಷ ಕೋಟಿ ರೂ. ಮಿಗತೆಯ ಬಜೆಟ್

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

Karnataka Budget 2023-24 | ರಾಜ್ಯ ಸರ್ಕಾರ ಬಜೆಟ್ ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 9,698 ಕೋಟಿ ರೂ.

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d