Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP Lingadheeranahalli Plant Closure Protest | ಕಸ ಸಂಸ್ಕರಣಾ ಘಟಕ ಸ್ಥಗಿತಕ್ಕೆ ಆಗ್ರಹ : 3ನೇ ದಿನಕ್ಕೆ ಕಾಲಿಟ್ಟ ಬನಶಂಕರಿ 6ನೇ ಹಂತದ ನಿವಾಸಿಗಳ ಧರಣಿ

ಗುರುವಾರ ಪ್ರತಿಭಟನಾ ನಿರತರ ಮನವೊಲಿಸಲು ಸ್ಥಳೀಯ ಶಾಸಕ ಎಸ್.ಟಿ.ಸೋಮಶೇಖರ್ ಆಗಮಿಸಿದರೂ, ಬಿಬಿಎಂಪಿಯಿಂದ ಸೂಕ್ತ ಕ್ರಮ ಆಗುವ ತನಕ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಬನಶಂಕರಿ 6ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಕಡ್ಡಿ ಮುರಿದಂತೆ ಹೇಳಿದೆ.

by Bengaluru Wire Desk
February 16, 2023
in Bengaluru Focus, Public interest
Reading Time: 1 min read
0
ಲಿಂಗಧೀರನಹಳ್ಳಿ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿ ಪ್ರತಿಭಟನೆ ನಿರತ ಸ್ಥಳೀಯ ನಿವಾಸಿಗಳು

ಲಿಂಗಧೀರನಹಳ್ಳಿ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿ ಪ್ರತಿಭಟನೆ ನಿರತ ಸ್ಥಳೀಯ ನಿವಾಸಿಗಳು

ಬೆಂಗಳೂರು, ಫೆ.16 www.bengaluruwire.com  : ನಗರದಲ್ಲಿ ಬನಶಂಕರಿ 6ನೇ ಹಂತದಲ್ಲಿನ ಲಿಂಗಧೀರನಹಳ್ಳಿ ತ್ಯಾಜ್ಯ ಸಂಸ್ಕರಣಾ ಘಟಕದಿಂದ ಬರುವ ದುರ್ವಾಸನೆಯಿಂದ ಬೇಸೆತ್ತು ಈ ಪ್ರದೇಶದ ಸುತ್ತಮುತ್ತಲಿನ ನಾಗರಿಕರು ಸಾಕಷ್ಟು ಆರೋಗ್ಯ ಸಮಸ್ಯೆ ಸೇರಿದಂತೆ ನಾನಾ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಈ ಘಟಕವನ್ನು ಮುಚ್ಚಬೇಕೆಂದು ಆಗ್ರಹಿಸಿ ಬನಶಂಕರಿ 6ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಮಂಗಳವಾರದಿಂದ ಆರಂಭಿಸಿರುವ ಅನಿರ್ದಿಷ್ಟ ಧರಣಿ 3ನೇ ದಿನಕ್ಕೆ ಕಾಲಿಟ್ಟಿದೆ.

ಬನಶಂಕರಿ 6ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಮಂಗಳವಾರ ಬೆಳಗ್ಗೆಯಿಂದಲೇ ತ್ಯಾಜ್ಯ ಸಂಸ್ಕರಣೆ ಘಟಕದ ಬಳಿ ಪ್ರತಿಭಟನೆ ಆರಂಭಿಸಿದ್ದು, ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಘಟಕವನ್ನು ಸ್ಥಳಾಂತರಿಸಬೇಕು ಇಲ್ಲವೇ ಮುಚ್ಚಿ ‘ತುರಹಳ್ಳಿಯನ್ನು ಉಳಿಸಿ’ ಎಂದು  ಒತ್ತಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಗುರುವಾರ ಬೆಂಗಳೂರು ವೈರ್ ಜೊತೆ ಮಾತನಾಡಿದ ಸಂಘದ ಅಧ್ಯಕ್ಷ ಮಹೇಶ್, “ಲಿಂಗಧೀರನಹಳ್ಳಿ ತ್ಯಾಜ್ಯ ಸಂಸ್ಕರಣಾ ಘಟಕ ಮುಚ್ಚುವಂತೆ ಒತ್ತಾಯಿಸಿ ಸಂಘದ ಸದಸ್ಯರು, ಸ್ಥಳೀಯ ನಿವಾಸಿಗಳು ನಡೆಸುತ್ತಿರುವ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದು ಬೆಳಗ್ಗೆ ಸ್ಥಳಕ್ಕೆ ಆಗಮಿಸಿದ ಯಶವಂತಪುರ ಶಾಸಕ ಹಾಗೂ ಸಚಿವರಾದ ಎಸ್.ಟಿ.ಸೋಮಶೇಖರ್, ಕಸ ಸಂಸ್ಕರಣಾ ಘಟಕವನ್ನು ಮುಚ್ಚಲು ಅಥವಾ ಸ್ಥಳಾಂತರಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆದಿದೆ. ಸದ್ಯಕ್ಕೆ ಧರಿಣಿ ಕೈಬಿಡಿ, ನಿಮ್ಮ ಸಮಸ್ಯೆಗೆ 3 ದಿನದ ಒಳಗಾಗಿ ಪರಿಹಾರ ಒದಗಿಸುತ್ತೇವೆ ಎಂದು ಹೇಳಿದ್ದಾರೆ. ಆದರೆ ಬಿಬಿಎಂಪಿ ಕಡೆಯಿಂದ ಸ್ಪಷ್ಟ ನಿರ್ಧಾರ ಪ್ರಕಟಿಸುವ ತನಕ ನಮ್ಮ ಧರಣಿ ಮುಂದುವರೆಸುತ್ತೇವೆ” ಎಂದು ತಿಳಿಸಿದ್ದಾರೆ.

“ಘಟಕ ಮುಚ್ಚಿ ಅಥವಾ ಸ್ಥಳಾಂತರ ಮಾಡಿ ಎಂಬ ಬೇಡಿಕೆ ಇಟ್ಟು ಎಂಟು ತಿಂಗಳಿಂದ ಹೋರಾಟ ಮಾಡುತ್ತಿದ್ದೇವೆ. ಕಳೆದ ಡಿಸೆಂಬರ್‌ನಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ಅವರೂ ಈ ಬಗ್ಗೆ ಬಿಬಿಎಂಪಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯವರು ಫೆ.9 ರಂದು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದು ಘಟಕ ಮುಚ್ಚಲು ಕ್ರಮ ಕೈಗೊಳ್ಳಿ ಎಂದು ಸ್ಪಷ್ಟವಾಗಿ ಸೂಚಿಸಿದ್ದಾರೆ. ಹೀಗಿದ್ದರೂ ಬಿಬಿಎಂಪಿ ಮುಖ್ಯ ಆಯುಕ್ತರು ಕ್ರಮ ಕೈಗೊಂಡಿಲ್ಲ. ಹೀಗಾಗಿ ಹೋರಾಟ ನಿರಂತರವಾಗಿ ನಡೆಯಲಿದೆ. ಬಿಬಿಎಂಪಿಯವರು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಘಟಕ ನಿರ್ಮಿಸಿದ್ದಾರೆ. 10 ಸಾವಿರ ಮನೆಗಳಿದ್ದರೂ, ಖಾಲಿ ಜಾಗ ಎಂದು ಸುಪ್ರೀಂಕೋರ್ಟಿಗೆ ಸುಳ್ಳು ಮಾಹಿತಿ ನೀಡಿತ್ತು. ಪಾಲಿಕೆಯಿಂದ ಸ್ಪಷ್ಟ ನಿರ್ಧಾರ ಕೈಗೊಳ್ಳುವ ತನಕ ತಮ್ಮ ಧರಣಿ ಸತ್ಯಾಗ್ರಹ ಕೈಬಿಡುವ ಪ್ರಶ್ನೆಯೇ ಇಲ್ಲ” ಎಂದು ಮಹೇಶ್ ಹೇಳಿದ್ದಾರೆ.

ಸಹಕಾರ ಸಚಿವ ಮತ್ತು ಶಾಸಕರಾದ ಎಸ್.ಟಿ.ಸೋಮಶೇಖರ್ ಸಿಎಂ ಬೊಮ್ಮಾಯಿ ಅವರಿಗೆ ಬರೆದ ಪತ್ರ

ಮನೆ ಕಿಟಕಿ- ಬಾಗಿಲು ತೆರೆದರೆ ದುರ್ವಾಸನೆ :

ಲಿಂಗಧೀರನ ಹಳ್ಳಿ ಬಳಿಯ ಮಧ್ಯ ಭಾಗದಲ್ಲಿ 2014ರಲ್ಲಿ ಬಿಬಿಎಂಪಿಯು ತ್ಯಾಜ್ಯ ವಿಲೇವಾರಿ ಘಟಕವನ್ನು 39,000 ಚದರ ಮೀಟರ್ ಭೂಮಿಯಲ್ಲಿ ನಿರ್ಮಾಣ ಮಾಡಿತ್ತು. ಸೂಕ್ತ ರೀತಿಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ನಿರ್ವಹಿಸದೇ ಇರುವುದರಿಂದ ಬನಶಂಕರಿ 6ನೇ ಹಂತದಲ್ಲಿ ಒಟ್ಟು 14 ಬ್ಲಾಕ್ ಗಳಿದ್ದು, ಸುತ್ತಲಿನ 6 ರಿಂದ 10 ಕಿ.ಮೀ ತನಕ ದುರ್ವಾಸನೆ ಬೀರುತ್ತಿದೆ. ತ್ಯಾಜ್ಯ ವಿಲೇವಾರಿ ವಾಸನೆಯಿಂದಾಗಿ ಇಲ್ಲಿನ ಜನರ ಜನಜೀವನ ದುಸ್ತರವಾಗಿದೆ. ದಿನನಿತ್ಯ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ ಕಿಟಕಿ- ಬಾಗಿಲು ಮುಚ್ಚಿಯೇ ವಾಸಿಸುವಂತಾಗಿದೆ. ಹಲವರಿಗೆ ಉಸಿರಾಟದ ಸಮಸ್ಯೆ, ಅಸ್ತಮಾ ರೋಗಗಳಿಗೆ ತುತ್ತಾಗಿದ್ದಾರೆ. ಸೊಳ್ಳೆ ಮತ್ತು ನೊಣಗಳ ಕಾಟ ಹೆಚ್ಚಾಗಿದ್ದು ವಾಸಿಸಲು ಸಾಧ್ಯವಾಗುತ್ತಿಲ್ಲ ಎಂದು ಬನಶಂಕರಿ 6ನೇ ಹಂತದ ನಿವಾಸಿ ಸುಘೋಷ ಸ ನಿಗಳೆ ದೂರಿದ್ದಾರೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ನಿರ್ದೇಶನದಂತೆ 2021ರಲ್ಲಿ ಲಿಂಗಧೀರನಹಳ್ಳಿ ಪ್ಲಾಂಟ್ ಅನ್ನು ಮುಚ್ಚಲಾಯಿತು. ಹಳೆಯದಾದ ಈ ತ್ಯಾಜ್ಯ ಸಂಸ್ಕರಣದಲ್ಲಿ ತಾಂತ್ರಿಕ ದೋಷಗಳಿವೆ. ಪರಿಸರಕ್ಕೆ ಹಾನಿಯಾಗದಂತೆ ಕಾಪಾಡಿಕೊಳ್ಳಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (National Green Tribunal) ಬಿಬಿಎಂಪಿಗೆ ಸೂಚಿಸಿತ್ತು. ಈ ಸಂದರ್ಭದಲ್ಲಿ ಬಿಬಿಎಂಪಿಯು ಸಮಸ್ಯೆ ಬಗೆಹರಿಸಲು ಹೆಚ್ಚಿನ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ಗೆ (Supreme Court)ಮೇಲ್ಮನವಿ ಸಲ್ಲಿಸಿತ್ತು. ಮಾಲಿನ್ಯ ನಿಯಂತ್ರಣ ಮಂಡಳಿ ನಿಗದಿಪಡಿಸಿದ ಮಾನದಂಡಗಳಿಗೆ ಅನುಗುಣವಾಗಿ ಸ್ಥಾವರವನ್ನು ನಡೆಸುವುದಾಗಿ ಬಿಬಿಎಂಪಿ ಹೇಳಿತ್ತು. ಆದರೆ, ಯಾವ ದುರಸ್ತಿ ಕ್ರಮವೂ ಕೈಗೊಳ್ಳದೆ ಬಿಬಿಎಂಪಿಯು ಕಣ್ಣಿಗೆ ಬಟ್ಟೆ ತೊಟ್ಟು ಕುರುಡರಂತೆ ವರ್ತಿಸುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತ್ಯಾಜ್ಯ ಸಂಸ್ಕರಣಾ ಘಟಕ ಮುಚ್ಚಲಾಗದು ಎಂದ ಬಿಬಿಎಂಪಿ :

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ  (Bangalore Solid Waste Management Ltd.)ನ ಮುಖ್ಯ ಎಂಜಿನಿಯರ್ ಆರ್.ಎಲ್ ಪರಮೇಶ್ವರಯ್ಯ, “ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಸ್ಕರಿಸಲೆಂದು ನಗರದ 7 ಕಡೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ತೆರೆಯಲಾಗಿತ್ತು. ಲಿಂಗಧೀರನಹಳ್ಳಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಸ್ಥಳೀಯ ನಿವಾಸಿಗಳ ಆಗ್ರಹದ ಮೇರೆಗೆ ಮುಚ್ಚಿದರೆ, ಸಾರ್ವಜನಿಕರ ಹಣ ಖರ್ಚು ಮಾಡಿದ್ದು ಮಣ್ಣು ಪಾಲಾಗುತ್ತದೆ. ತಾಂತ್ರಿಕವಾಗಿ ಅಥವಾ ನಿರ್ದಿಷ್ಟ ಸಮಸ್ಯೆಗಳಿದ್ದರೆ ಅದನ್ನು ಬಿಬಿಎಂಪಿಯು ಪರಿಹಸಲಿದೆ” ಎಂದ ಅವರು ಪರೋಕ್ಷವಾಗಿ ಘಟಕ ಮುಚ್ಚಲಾಗದು ಎಂದು ತಿಳಿಸಿದ್ದಾರೆ.

ಈ ಭಾಗದಲ್ಲಿ ಘಟಕ ನಿರ್ಮಿಸಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (KSPCB) ಹಸಿರು ನಿಶಾನೆ ತೋರಿದ ನಂತರ ಘಟಕದಲ್ಲಿ ಸಂಸ್ಕರಣಾ ಕಾರ್ಯಾಚರಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಬಿಬಿಎಂಪಿಗೆ ತಿಳಿಸಿತ್ತು. ಆದರೆ ಕೆಎಸ್‌ಪಿಸಿಬಿ ಷರತ್ತುಗಳ ಅನುಸಾರ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆ ಕೈಗೊಳ್ಳಲು ಪಾಲಿಕೆಯು ತಾತ್ಕಾಲಿಕವಾಗಿ ಘಟಕದ ಕಾರ್ಯಾಚರಣೆ ನಿಲ್ಲಿಸಲಾಗಿತ್ತು. ಫೆಬ್ರವರಿ 2022ರಲ್ಲಿ ಸ್ಥಾವರವನ್ನು ಪುನಃ ತೆರೆಯಲಾಗಿತ್ತು. ಆದರೆ, 2022ರ ನವೆಂಬರ್ ನಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಬಿಬಿಎಂಪಿ ತಾನು ನಿಗದಿಪಡಿಸಿದ ಪರಿಸರ ಕಾನೂನು ಷರತ್ತುಗಳನ್ನು ಪಾಲಿಸಲು ವಿಫಲವಾಗಿದೆ ಎಂದು ದೂರಿತ್ತು.

WhatsApp Join our WhatsApp Channel
Previous Post

BW Special | Aero India 2023 |ಚಾಲಕ ರಹಿತ ಸ್ವದೇಶಿ ಮೆಟ್ರೊ ರೈಲು ತಯಾರಿಸಿದ ಬೆಮೆಲ್….!

Next Post

Karnataka Budget 2023-24 | ಚುನಾವಣಾ ವರ್ಷದಲ್ಲಿ ರಾಜ್ಯಕ್ಕೆ 3.09 ಲಕ್ಷ ಕೋಟಿ ರೂ. ಮಿಗತೆಯ ಬಜೆಟ್

Next Post

Karnataka Budget 2023-24 | ಚುನಾವಣಾ ವರ್ಷದಲ್ಲಿ ರಾಜ್ಯಕ್ಕೆ 3.09 ಲಕ್ಷ ಕೋಟಿ ರೂ. ಮಿಗತೆಯ ಬಜೆಟ್

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

Karnataka Budget 2023-24 | ರಾಜ್ಯ ಸರ್ಕಾರ ಬಜೆಟ್ ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 9,698 ಕೋಟಿ ರೂ.

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group