Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | BBMP Illegal A Khata | ಅಕ್ರಮ “ಎ” ಖಾತೆ ಮಾಡಿದ ಅಧಿಕಾರಿಗಳು ಹಾಗೂ ಆಸ್ತಿ ಮಾಲೀಕರಿಗೆ ಶುರುವಾಗಿದೆ ನಡುಕ !!

ನಿಮಯಬಾಹಿರ ಖಾತೆ ಪತ್ತೆ ಹಚ್ಚಲು ಪರಿಶೀಲನಾ ಸಮಿತಿ ರಚಿಸಿದ ಪಾಲಿಕೆ ಮುಖ್ಯ ಆಯುಕ್ತರು | ನಾಲ್ಕು ವಲಯಗಳಲ್ಲಿ ಹೆಚ್ಚಿನ ದೂರು ಬಂದ ಕಡೆ ಸತ್ಯಾ ಸತ್ಯತೆ ಪರಿಶೀಲಿಸಲಿದೆ ಸಮಿತಿ | ಒಂದು ತಿಂಗಳಲ್ಲಿ ವರದಿ ಸಲ್ಲಿಕೆಗೆ ಅಧಿಕಾರಿಗಳಿಗೆ ಸೂಚನೆ

by Bengaluru Wire Desk
July 3, 2023
in Bengaluru Focus, BW Special
Reading Time: 2 mins read
1
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.22 www.bengaluruwire.com : ನಗರದಲ್ಲಿ ನಿಯಮಬಾಹಿರವಾಗಿ “ಬಿ” ಖಾತೆಯನ್ನು ಅಕ್ರಮ ಮಾರ್ಗಗಳಿಂದ “ಎ” ಖಾತೆಯನ್ನಾಗಿ ಮಾಡಿಕೊಟ್ಟ ಕಂದಾಯ ಅಧಿಕಾರಿಗಳು ಹಾಗೂ ಮನೆ ಮಾಲೀಕರಿಗೆ ಸಂಕಷ್ಟ ಎದುರಾಗಿದೆ. ಇಂತಹ ಪ್ರಕರಣಗಳನ್ನು ಕಂಡು ಹಿಡಿಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BMP) ಮುಖ್ಯ ಆಯುಕ್ತರು ನಾಲ್ವರು ಅಧಿಕಾರಿಗಳ ಪರಿಶೀಲನಾ ಸಮಿತಿ ರಚಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಮಗಳನ್ನು ಮೀರಿ ನಿವೇಶನಗಳಿಗೆ “ಎ” ಖಾತೆಯನ್ನು ನೀಡಲಾಗುತ್ತಿದೆ ಹಾಗೂ ಅನುಮೋದನೆ ಪಡೆಯದ ಬಡಾವಣೆ ಹಾಗೂ ಸರ್ಕಾರಕ್ಕೆ ಶುಲ್ಕ ಸಲ್ಲಿಸದೇ ನಿರ್ಮಿಸಿರುವ ನಿವೇಶನಗಳಿಗೆ ‘ಎ’ ಖಾತೆ ನೀಡಲಾಗುತ್ತಿದೆ ಎಂಬ ದೂರು ಬಂದಿದೆ. ಈ ಹಿನ್ನಲೆಯಲ್ಲಿ ಪಾಲಿಕೆಯ ದಾಸರಹಳ್ಳಿ, ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ, ಮಹದೇವಪುರ ಹಾಗೂ ಯಲಹಂಕ ವ್ಯಾಪ್ತಿಯಲ್ಲಿ ಈ ರೀತಿಯ ಅಕ್ರಮ ಹಾಗೂ ನಿಯಮ ಬಾಹಿರ ಖಾತೆ ನೀಡಲಾಗುತ್ತಿದೆ ಎಂಬ ಬಗ್ಗೆ ಸಾಕಷ್ಟು ದೂರುಗಳು ಪಾಲಿಕೆಗೆ ಬಂದಿದೆ. ಆದ್ದರಿಂದ ಆ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ಹಾಗೂ ಅಗತ್ಯ ಕ್ರಮ ತೆಗೆದುಕೊಳ್ಳಲು ಬಿಬಿಎಂಪಿ ಆಯುಕ್ತರು “ಪರಿಶೀಲನಾ ಸಮಿತಿ” ರಚಿಸಿ ಆದೇಶಿಸಿದ್ದಾರೆ.

ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತರಾದ ಜಯರಾಮ್ ರಾಯ್ ಪುರ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಆರ್.ಎಲ್.ದೀಪಕ್, ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಹರೀಶ್ ಕುಮಾರ್ ಸಮಿತಿ ಸದಸ್ಯರಾಗಿದ್ದರೆ, ಹಣಕಾಸು ವಿಭಾಗದ ಅಪರ ಆಯುಕ್ತರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಈ ಸಮಿತಿಯು ಪಾಲಿಕೆಯ ಯಾವುದೇ ಅಧಿಕಾರಿಗಳನ್ನು ಸದಸ್ಯರನ್ನಾಗಿ ಹಾಗೂ ಅಧಿಕಾರಿ-ಸಿಬ್ಬಂದಿಯನ್ನಾಗಿ ತೆಗೆದುಕೊಳ್ಳುವ ಅಧಿಕಾರ ಹೊಂದಿರುತ್ತದೆ. ಸಮಿತಿಯು ತನ್ನ ಪರಿಶೀಲನಾ ವರದಿಯನ್ನು ಆದಷ್ಟು ಶೀಘ್ರದಲ್ಲಿ ಅಂದರೆ ಮುಂದಿನ ಒಂದು ತಿಂಗಳ ಅವಧಿಯೊಳಗೆ ನೀಡಬೇಕೆಂದು ಮುಖ್ಯ ಆಯುಕ್ತರು ಸೂಚಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟಾರೆ 19 ಲಕ್ಷಕ್ಕೂ ಹೆಚ್ಚಿನ ಆಸ್ತಿಗಳಿದ್ದು, ಅವುಗಳ ಪೈಕಿ 6 ಲಕ್ಷ ಬಿ ಖಾತೆಯ ಆಸ್ತಿಗಳಿವೆ ಎಂದು ಅಂದಾಜಿಸಲಾಗಿದೆ.

ಬೆಂಗಳೂರು ಮಹಾನಗರ ಪಾಲಿಕೆಗೆ 110 ಹಳ್ಳಿಗಳು, 7 ನಗರ ಸಭೆ ಹಾಗೂ ಒಂದು ಪುರಸಭೆ ಸೇರ್ಪಡೆಯಾಗಿ 2007ರಲ್ಲಿ ಬಿಬಿಎಂಪಿಯಾದ ಬಳಿಕ ಮಹದೇವಪುರ, ಬೊಮ್ಮನಹಳ್ಳಿ, ರಾಜ ರಾಜೇಶ್ವರಿನಗರ ಹಾಗೂ ಯಲಹಂಕ ವಲಯಗಳಲ್ಲಿ “ಬಿ” ಖಾತೆಯನ್ನು ಅಕ್ರಮ ಮಾರ್ಗಗಳಿಂದ “ಎ” ಖಾತೆಯನ್ನಾಗಿ ಮಾಡುವ ಪ್ರಕರಣಗಳು ಹಿಂದಿನಿಂದಲೂ ತೆರೆಮರೆಯಲ್ಲಿ ನಡೆದುಕೊಂಡು ಬರುತ್ತಲೇ ಇದೆ. ಜನಪ್ರತಿನಿಧಿ ಆಡಳಿತವಿದ್ದಾಗ ಪಾಲಿಕೆ ಕೌನ್ಸಿಲ್ ಸಭೆಗಳಲ್ಲಿ ಕಾರ್ಪೊರೇಟರ್ ಗಳು ಈ ಬಗ್ಗೆ ಸಭೆಯ ಗಮನಕ್ಕೆ ತಂದು ಪಾಲಿಕೆ ವಲಯಗಳಲ್ಲಿ ಅಕ್ರಮ “ಎ” ಖಾತೆಗಳ ನಿಯಂತ್ರಣಕ್ಕೆ ಆಗ್ರಹಿಸುತ್ತಿದ್ದ ಹಿನ್ನಲೆಯಲ್ಲಿ ಎ ಖಾತೆಗಳ ಹಾವಳಿ ನಿಯಂತ್ರಣದಲ್ಲಿತ್ತು.

ಆದರೆ ಆಡಳಿತಾಧಿಕಾರಿಗಳ ಅವಧಿಯ ಬಳಿಕ ಈ ಬಗ್ಗೆ ಹೆಚ್ಚಿನ ಗಮನ ನೀಡದ ಕಾರಣ ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಿಗಳು ನಿರಂತರವಾಗಿ ಲಕ್ಷಾಂತರ ರೂಪಾಯಿ ಹಣ ಪಡೆದು ಬಿ- ಖಾತೆಯ ಸ್ವತ್ತುಗಳಿಗೆ ಎ – ಖಾತೆ ನೀಡುವ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ಪಾಲಿಕೆ ಕಂದಾಯ ವಿಭಾಗದ ಅಧಿಕಾರಿಗಳು ಹಾಗೂ ಅವರ ಏಜಂಟರು ಲಕ್ಷಾಂತರ ರೂಪಾಯಿ ಹಣ ಗಳಿಸುತ್ತಿದ್ದಾರೆ ಎಂದು ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಈ ವಿಚಾರದ ಬಗ್ಗೆ ಆರೋಪ ಮಾಡುತ್ತಲೇ ಬಂದಿದ್ದಾರೆ. ಇದೀಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತರು ನಾಲ್ವರು ಅಧಿಕಾರಿಗಳ ಪರಿಶೀಲನಾ ಸಮಿತಿಗೆ ಅಕ್ರಮವನ್ನು ಪತ್ತೆ ಹಚ್ಚಿ ವರದಿ ನೀಡುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬಿಬಿಎಂಪಿ ಆಯುಕ್ತರು ಏನಂತಾರೆ? :

“ಪಾಲಿಕೆಯ ದಾಸರಹಳ್ಳಿ, ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ, ಮಹದೇವಪುರ ಹಾಗೂ ಯಲಹಂಕ ವ್ಯಾಪ್ತಿಯಲ್ಲಿ ಪಾಲಿಕೆಯ ನಿಯಮಗಳನ್ನು ಉಲ್ಲಂಘಿಸಿ ನಿವೇಶನಗಳಿಗೆ “ಎ” ಖಾತೆಯನ್ನು ನೀಡಲಾಗುತ್ತಿದೆ ಎಂದು ಸಾಕಷ್ಟು ದೂರುಗಳು ಬಂದಿದೆ. ಈ ಹಿನ್ನಲೆಯಲ್ಲಿ ಅಂತಹ ಅನುಮಾನಾಸ್ಪದವಾಗಿ ಖಾತೆ ಮಾಡಿರುವ ಪ್ರಕರಣಗಳನ್ನು ಪತ್ತೆ ಹಚ್ಚಿ, ಹಿಂದೆಯೇ ಈ ಇಂತಹ ನಿವೇಶನಗಳಿಗೆ “ಎ” ಖಾತೆ ಮಾಡಲಾಗಿತ್ತಾ, ಸರ್ಕಾರಕ್ಕೆ ಸೂಕ್ತ ಶುಲ್ಕ ಸಲ್ಲಿಸಿ ನಿವೇಶನ ನಿರ್ಮಿಸಲಾಗಿದೆಯಾ? ಹಿಂದಿನ ನಗರಸಭೆ, ಪುರಸಭೆಯಿಂದ ಬಿಬಿಎಂಪಿಗೆ ಸೇರ್ಪಡೆಯಾದಾಗ ಅಲ್ಲಿನ ರಿಜಿಸ್ಟರ್ ಗಳಲ್ಲಿ ಅಕ್ರಮವಾಗಿ ನಿವೇಶನಗಳನ್ನು ‘ಎ‘ ಖಾತೆ ರಿಜಿಸ್ಟರ್ ಗಳಿಗೆ ದಾಖಲು ಮಾಡಲಾಗಿದೆಯಾ? ಎಂಬ ಬಗ್ಗೆ ಎಲ್ಲಾ ಕೋನಗಳಿಂದ ತನಿಖೆ ನಡೆಸಿ ವರದಿ ನೀಡಲು ಪರಿಶೀಲನಾ ಸಮಿತಿ ರಚಿಸಲಾಗಿದೆ. ಆ ಸಮಿತಿ ನೀಡುವ ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು”

– ತುಷಾರ್ ಗಿರಿನಾಥ್, ಬಿಬಿಎಂಪಿ ಮುಖ್ಯ ಆಯುಕ್ತರು

ಮಾನ್ಯುಲ್ ಖಾತೆ ನೀಡಿಕೆ ನಿಲ್ಲಿಸಿ ಕಂಪ್ಯೂಟರ್ ಖಾತೆ ಮಾಡಿ :

“ಬಿಬಿಎಂಪಿ ವ್ಯಾಪ್ತಿಯ 100 ವಾರ್ಡ್ ಗಳನ್ನು ಬಿಟ್ಟರೆ ಉಳಿದ 143 ವಾರ್ಡ್ ಗಳಲ್ಲಿ ಇನ್ನೂ ಭೌತಿಕವಾಗಿ ಖಾತೆ ಪ್ರಮಾಣಪತ್ರ ನೀಡುವ ಸಂಪ್ರದಾಯವಿದೆ. ಇದರಿಂದ ನಕಲಿ ಖಾತೆಗಳ ಹಾವಳಿ ಹಾಗೂ ಅಕ್ರಮವಾಗಿ “ಎ” ಖಾತೆ ಮಾಡುವ ಪ್ರಕರಣಗಳು ನಡೆಯುತ್ತಿದೆ. ಆದ್ದರಿಂದ ಕೂಡಲೇ ಬಿಬಿಎಂಪಿಯು ಕಂಪ್ಯೂಟರೀಕೃತವಾಗಿ ಖಾತೆಯನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕಿದೆ. ಈ ಹಿಂದೆಯೂ ಬಿಬಿಎಂಪಿ ಅಧಿಕಾರಿಗಳಿಗೆ ಈ ಸಂಬಂಧ ತಿಳಿಸಲಾಗಿದೆ. ಪಾಲಿಕೆಯ ನಾಲ್ಕು ವಲಯಗಳಲ್ಲಿ ಅಕ್ರಮ “ಎ” ಖಾತೆ ನೀಡುವ ಪ್ರಕರಣಗಳನ್ನು ಕಂಡು ಹಿಡಿಯಲು ಬಿಬಿಎಂಪಿ ಆಯುಕ್ತರು ಪರಿಶೀಲನಾ ಸಮಿತಿ ರಚಿಸಿರುವುದು ಸ್ವಾಗತಾರ್ಹ. ಲೋಪಗಳು ಕಂಡು ಬಂದರೆ, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕಿದೆ.”

– ಸತೀಶ್ ರೆಡ್ಡಿ, ಬೊಮ್ಮನಹಳ್ಳಿ ಶಾಸಕ

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

BBMP NEWS | ಬೆಂಗಳೂರಿನ 6 ಲಕ್ಷಕ್ಕೂ ಹೆಚ್ಚಿನ ‘ಬಿ’ ಖಾತಾ ಸ್ವತ್ತಿನ ಮಾಲೀಕರಿಗೆ ಖುಷಿ ವಿಷಯ : ಏನು ಗೊತ್ತಾ?

Next Post

ಅಮೃತ ಕರ್ನಾಟಕ ಸೃಷ್ಟಿಸಲಿರುವ ಬಿಜೆಪಿಯ ಪ್ರಣಾಳಿಕೆ : 224 ಕ್ಷೇತ್ರಗಳಲ್ಲಿ ಸಲಹೆ ಸ್ವೀಕಾರ

Next Post

ಅಮೃತ ಕರ್ನಾಟಕ ಸೃಷ್ಟಿಸಲಿರುವ ಬಿಜೆಪಿಯ ಪ್ರಣಾಳಿಕೆ : 224 ಕ್ಷೇತ್ರಗಳಲ್ಲಿ ಸಲಹೆ ಸ್ವೀಕಾರ

ಫೆ.25 ರಾಷ್ಟ್ರೀಯ ವಿಜ್ಞಾನ ದಿನದ ಹಿನ್ನಲೆ : ಐಐಎನಲ್ಲಿ ನಾನಾ ವೈಜ್ಞಾನಿಕ ಚಟುವಟಿಕೆ ವೀಕ್ಷಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group