Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW SPECIAL | BIG NEWS | ರಾಜ್ಯದ ಏಳು ಜಿಲ್ಲೆಗಳಲ್ಲಿ ಕಲ್ಲು ಗಣಿಗಾರಿಕೆಗಾಗಿ ಸಿಡಿಸಲಾಗಿತ್ತು 21.27 ಲಕ್ಷ ಕೆ.ಜಿ ಅಕ್ರಮ ಸ್ಪೋಟಕ….!!

ಈ ಹಿಂದೆ ಚಿಕ್ಕಬಳ್ಳಾಪುರ, ಶಿವಮೊಗ್ಗ, ಹಾಸನ ಜಿಲ್ಲೆಗಳ ಗಣಿಗಳಲ್ಲಿ ಅನಧಿಕೃತ ಸ್ಪೋಟಕಗಳ ಅಪಘಾತಕ್ಕೂ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಾರ್ಯವೈಖರಿಗೂ ಏನಾದರೂ ಸಂಬಂಧವಿತ್ತಾ? ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಸರ್ಕಾರಕ್ಕೆ ಮಂಡಿಸಿದ ವರದಿಯಲ್ಲೇನಿದೆ?

by Bengaluru Wire Desk
March 1, 2023
in BW Special, Public interest
Reading Time: 2 mins read
0
ಗಣಿ ಪ್ರದೇಶವೊಂದರಲ್ಲಿ ಸ್ಪೋಟಕ ಬಳಸಿದ ಸಂದರ್ಭದಲ್ಲಿ ಸಿಡಿತವಾಗುತ್ತಿರುವ ದೃಶ್ಯ

ಗಣಿ ಪ್ರದೇಶವೊಂದರಲ್ಲಿ ಸ್ಪೋಟಕ ಬಳಸಿದ ಸಂದರ್ಭದಲ್ಲಿ ಸಿಡಿತವಾಗುತ್ತಿರುವ ದೃಶ್ಯ

ಬೆಂಗಳೂರು, ಫೆ.23 www.bengaluruwire.com : ರಾಜ್ಯದ ಏಳು ಜಿಲ್ಲೆಗಳಲ್ಲಿ 2014-15ರಿಂದ ಮೂರು ವರ್ಷಗಳಲ್ಲಿ  127.64 ಲಕ್ಷ ಮೆಟ್ರಿಕ್ ಟನ್ ಕಟ್ಟಡ ಕಲ್ಲನ್ನು ಹೊರತೆಗೆಯಲು ಅಂದಾಜು 21.27 ಲಕ್ಷ ( 2127 Tonnes Or 21,27,257 K.G ) ಕೆ.ಜಿಗಳಷ್ಟು ಸ್ಪೋಟಕಗಳನ್ನು ಬಳಸಿದ್ದರೂ ಆ ಬಗ್ಗೆ ಆಯಾ ಜಿಲ್ಲಾಧಿಕಾರಿಗಳ ಅನುಮತಿಯನ್ನೇ ಪಡೆದಿರಲಿಲ್ಲ ಎಂಬ ಸ್ಪೋಟಕ ಮಾಹಿತಿ ಹೊರಬಿದ್ದಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಮಹಾಲೇಖಪಾಲಕರು 2017-18ನೇ ಸಾಲಿನ ವರದಿಯಲ್ಲಿ ಗಣಿ ಗುತ್ತಿಗೆ ಕುರಿತು ಉಲ್ಲೇಖಿಸಿದ್ದ ಅಂಶಗಳ ಬಗ್ಗೆ 2022-23ನೇ ಸಾಲಿನ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (Public Accounts Committee – PAC) ಸರ್ಕಾರಕ್ಕೆ ಮಂಡಿಸಿರುವ ವರದಿಯಲ್ಲಿ ಈ ಆತಂಕಕಾರಿ ವಿಷಯವನ್ನು ಬಹಿರಂಗಪಡಿಸಿದೆ.

ಸ್ಪೋಟಕಗಳ ಅಧಿನಿಯಮದ ಪ್ರಕಾರ ನಿರ್ದಿಷ್ಟ ಭದ್ರತೆಗಳನ್ನು ಕೈಗೊಳ್ಳುವ ಸಲುವಾಗಿ ಗುತ್ತಿಗೆದಾರರು ಗಣಿಗಾರಿಗೆಗಾಗಿ ಸ್ಪೋಟಕಗಳ ಬಳಕೆಗೆ ಜಿಲ್ಲಾಧಿಕಾರಿಗಳ ಅನುಮತಿಯನ್ನು ಪಡೆದುಕೊಳ್ಳಬೇಕು. ಆದರೆ ಏಳು ಜಿಲ್ಲೆಗಳಲ್ಲಿ 1,046 ಗುತ್ತಿಗೆಗಳ ಪೈಕಿ 250 ಗುತ್ತಿಗೆಗಳನ್ನು ಸಂಬಂಧಿತ ಜಿಲ್ಲಾಧಿಕಾರಿಗಳ ದಾಖಲೆಗಳೊಂದಿಗೆ ಲೆಕ್ಕಪರಶೋಧನೆಯು ಕ್ರಾಸ್ ಚೆಕ್ (ಅಡ್ಡ ಪರಿಶೀಲನೆ) ಮಾಡಿದಾಗ 209 ಗಣಿ ಗುತ್ತಿಗೆಗಳಲ್ಲಿ ಅಂದರೆ ಶೇ.83.60 ಪ್ರಕರಣಗಳಲ್ಲಿ ಗಣಿಗಾರಿಕೆ ನಿವೇಶನಗಳಲ್ಲಿ ಸ್ಪೋಟಕ ಸಿಡಿಸುವಿಕೆಗಾಗಿ ಗಣಿ ಗುತ್ತಿಗೆದಾರರು ಅನುಮತಿಯನ್ನೇ ಪಡೆದುಕೊಂಡಿರಲಿಲ್ಲ ಎಂಬ ಆಘಾತಕಾರಿ ಅಂಶವನ್ನು ಶಾಸಕ ಮತ್ತು ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಅಧ್ಯಕ್ಷ ಕೃಷ್ಣ ಭೈರೇಗೌಡ ನೇತೃತ್ವದ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.

ಕಲ್ಲು ಗಣಿಗಾರಿಕೆ ಯೋಜನೆಗಳ ಪ್ರಕಾರ ಸರಾಸರಿ ಆರು ಟನ್ನುಗಳಷ್ಟು ಕಟ್ಟಡ ಕಲ್ಲನ್ನು ಹೊರತೆಗೆಯಲು ಒಂದು ಕೆ.ಜಿ ಸ್ಪೋಟಕದ ಅಗತ್ಯತೆಯಿದೆ. ಹೀಗಿರುವಾಗ ಪರಿಶೀಲನೆ ನಡೆಸಿದ 7 ಜಿಲ್ಲೆಗಳಲ್ಲಿ 2014-15ರಿಂದ 2016-17ನೇ ಇಸವಿಯ ತನಕ 127.64 ಲಕ್ಷ ಮೆಟ್ರಿಕ್ ಟನ್ನುಗಳಷ್ಟು ಕಟ್ಟಡ ಕಲ್ಲನ್ನು ಹೊರತೆಗೆಯಲು 21.27 ಲಕ್ಷ ಟನ್ ಸ್ಪೋಟಕಗಳನ್ನು ಬಳಸಿರಬೇಕು ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಂದಾಜಿಸಿದೆ.

ಅನಧಿಕೃತ ಸ್ಪೋಟಕಗಳಿಂದಾದ ಅಪಘಾತಕ್ಕೆ ಸಮಿತಿಯ ವಿಷಾದ :

ಗಣಿಗಾರಿಕೆಗಳಲ್ಲಿ ಅನಧಿಕೃತ ಸ್ಪೋಟಕಗಳ ಅಪಘಾತದಿಂದ ಚಿಕ್ಕಬಳ್ಳಾಪುರ, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಸಂಭವಿಸಿದ ಅಮಾಯಕ ಹಾಗೂ ಅಸಹಾಯಕ ಕೂಲಿ ಕಾರ್ಮಿಕರ ಸಾವು- ನೋವುಗಳಿಗೆ ಸಮಿತಿಯು ವಿಷಾದ ವ್ಯಕ್ತಪಡಿಸಿ, ಇಂತಹ ಘಟನೆಗಳಿಗೆ ಕಾರಣಕರ್ತರಾದ ಸಮಾಜಘಾತುಕ ವ್ಯಕ್ತಿಗಳ ವಿರುದ್ಧ ಹಾಗೂ ಇಂತಹ ಘಟನೆಗಳನ್ನು ನಿರಂತರ ಪರೀಕ್ಷಾ ತಪಾಸಣೆಗಳನ್ನು ನಡೆಸದೇ ಕಾನೂನು ಬಾಹಿರ ಸ್ಪೋಟಕಗಳಿಗೆ ಆಸ್ಪದ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮಕೈಗೊಳ್ಳಬೇಕೆಂದು ಸಮಿತಿ ಶಿಫಾರಸ್ಸು ಮಾಡಿದೆ.

ಅನಧಿಕೃತ ಸ್ಪೋಟಕ ವಸ್ತುಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ :

ಇಂತಹ ಗುತ್ತಿಗೆಗಳ ಸಂಬಂಧಿತ ಜಿಲ್ಲಾಧಿಕಾರಿಗಳ ಕಚೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಮೇಲ್ವಿಚಾರಣಾ ಸಂಸ್ಥೆಗಳು, ಗಣಿ ಭದ್ರತೆ ನಿರ್ದೇಶಕರು ಹೀಗೆ ಕಲ್ಲು ಗಣಿ ಗುತ್ತಿಗೆಗಳಲ್ಲಿ ಸ್ಪೋಟಕಗಳ ಖರೀದಿ ಮತ್ತು ಬಳಕೆ ಬಗ್ಗೆ ಯಾವುದೇ ಮಾಹಿತಿ ಹೊಂದಿರಲಿಲ್ಲ ಎಂಬ ಕಳವಳಕಾರಿ ವಿಷಯವನ್ನು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಸಾಮಾನ್ಯವಾಗಿ ಗಣಿ ಗುತ್ತಿಗೆಗಳನ್ನು ನೀಡುವುದು ಮತ್ತು ನವೀಕರಣ ಮಾಡುವುದು ಸಂಬಂಧಿಸಿದ ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಕಾರ್ಯಪಡೆ ಸಮಿತಿಯ ಮೇಲ್ವಿಚಾರಣೆಯ ಅಡಿಯಲ್ಲಿ ಆಗಬೇಕು. ಅದೇ ರೀತಿ ಎಲ್ಲಾ ಗಣಿಗಳಲ್ಲಿ ಸ್ಪೋಟಕಗಳ ಸಿಡಿತಗೊಳಿಸಲು ಈ ಕಚೇರಿಗಳಿಂದ ಆಕ್ಷೇಪಣಾರಹಿತ ಪ್ರಮಾಣಪತ್ರಗಳನ್ನು ಪಡೆಯುವುದು ಮುಖ್ಯವಾಗಿರುತ್ತದೆ. ಆದರೆ ಈ ವಿಚಾರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ನಡುವೆ ಸಮನ್ವಯತೆಯೇ ಇರಲಿಲ್ಲ ಎಂಬುದನ್ನು ಪಿಎಸಿ ಸಮಿತಿಯು ಬೊಟ್ಟು ಮಾಡಿ ತೋರಿಸಿದೆ. ಇದನ್ನೂ ಓದಿ : ಬೆಂಗಳೂರಿನ ಮಗ್ಗುಲಲ್ಲೇ ಬೃಹತ್ ಬಂಡೆಗಳ ಬ್ಲಾಸ್ಟಿಂಗ್ : ಘಟನೆಯಲ್ಲಿ ಓರ್ವ ವ್ಯಕ್ತಿಯ ತಲೆಗೆ ಗಾಯ – ಅನಾಥಾಶ್ರಮ ಮೇಲ್ಛಾವಣಿ ಜಖಂ

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿನ ಲೋಪಗಳೇನು?:

ಗಣಿಸ್ಪೋಟಗಳಲ್ಲಿ ಸ್ಪೋಟಕಗಳನ್ನು ಬಳಸುವಾಗ ಭೂಮಿಯ ಕಂಪನವನ್ನು ಕನಿಷ್ಠ ಮಟ್ಟಕ್ಕೆ ತರುವ ರೀತಿಯಲ್ಲಿ ಸಮೂಹ ಗಣಿ ಪ್ರದೇಶದಲ್ಲಿ ಗಣಿವಾರು ಸಿಡಿಸುವಿಕೆ ಚಟುವಟಿಕೆಗಳ ವೇಳಾಪಟ್ಟಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ನಿರ್ದಿಷ್ಟಪಡಿಸಿರಲಿಲ್ಲ. ಅಲ್ಲದೆ ಇಲಾಖೆಯ ಕ್ಷೇತ್ರ ಕಚೇರಿಗಳು ಮೇಲ್ವಿಚಾರಣೆ ಉದ್ದೇಶಗಳಿಗಾಗಿ ಸಿಡಿತದ ಕಂಪನಗಳನ್ನು ನಿಯತಕಾಲಿಕವಾಗಿ ಅಳತೆ ಮಾಡುವ ಸಲುವಾಗಿ ಅಗತ್ಯ ಉಪಕರಣವನ್ನು ಹೊಂದಿರಲಿಲ್ಲ. ಹೀಗಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಸ್ಪೋಟಕ ಸಿಡಿತದ ಕಂಪನಗಳನ್ನು ಗಮನಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಸಿಡಿತದ ಕಾರಣ ಸಂಭವಿಸಿದ ನಷ್ಟಗಳ ಬಗ್ಗೆ ಸ್ವೀಕರಿಸಲಾದ ದೂರುಗಳಿಗೆ ಪರಿಣಾಮಕಾರಿಯಾಗಿ ಪರಿಹಾರ ನೀಡಲಾಗಲಿಲ್ಲ.

ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರು ಹೇಳಿದ್ದೇನು? :

“ಕೇವಲ ಏಳು ಜಿಲ್ಲೆಗಳಲ್ಲಿ 250 ಗಣಿ ಗುತ್ತಿಗೆಗಳನ್ನು ಸಂಬಂಧಿಸಿದ ಜಿಲ್ಲಾಧಿಕಾರಿಗಳ ದಾಖಲೆ ಜೊತೆ ಲೆಕ್ಕಪರಿಶೋಧನೆಯ ಅಡ್ಡಪರಿಶೀಲನೆ ಮಾಡಿದಾಗ 209 ಗುತ್ತಿಗೆ ಗಣಿಕಾರಿಕೆ ನಿವೇಶನಗಳಲ್ಲಿ ಸ್ಪೋಟಕ ಸಿಡಿಸುವಿಕೆಗೆ ಅನುಮತಿ ಪಡೆದಿರಲಿಲ್ಲ. ನಿಜಕ್ಕೂ ಇದು ಗಂಭೀರ ವಿಚಾರ. ಹೀಗಾಗಿ ಚಿಕ್ಕಬಳ್ಳಾಪುರ, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಅನಧಿಕೃತ ಸ್ಪೋಟಕಗಳ ಬಳಕೆಯಿಂದ ಅಪಘಾತಗಳಾಗಿ ಅಮಾಯಕರು ತಮ್ಮದಲ್ಲದ ತಪ್ಪಿಗೆ ಬಲಿಯಾದರು. ಸರ್ಕಾರ ಇಂತಹ ವಿಚಾರಗಳ ಬಗ್ಗೆ ಹೆಚ್ಚು ಗಮನ ನೀಡುತ್ತಿಲ್ಲ. ಹೀಗಾಗಿಯೇ ರಾಜ್ಯ ಗಣಿಗಳಿಂದ ಲೂಟಿಯಾಗುತ್ತಿದ್ದರೂ ಸರ್ಕಾರಕ್ಕೆ ರಾಜಧನ ವರಮಾನ ನಷ್ಟವಾಗುತ್ತಿದೆ. ಇದನ್ನೇ ಸಾರ್ವಜನಿಕ ಲೆಕ್ಕಪತ್ರ ವರದಿಯಲ್ಲಿ ತಿಳಿಸಿದ್ದೇವೆ. ಸಮಿತಿ ನೀಡಿದ ಪರಿಹಾರ ಕ್ರಮಗಳನ್ನು ಸರ್ಕಾರ ಅನುಷ್ಠಾನ ಮಾಡುವುದರತ್ತ ಆದ್ಯ ಗಮನ ನೀಡಬೇಕು.”

– ಕೃಷ್ಣಭೈರೇಗೌಡ, ಅಧ್ಯಕ್ಷರು, ಸಾರ್ವಜನಿಕ ಲೆಕ್ಕಪತ್ರ ಸಮಿತಿ

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಫೆ.25 ರಾಷ್ಟ್ರೀಯ ವಿಜ್ಞಾನ ದಿನದ ಹಿನ್ನಲೆ : ಐಐಎನಲ್ಲಿ ನಾನಾ ವೈಜ್ಞಾನಿಕ ಚಟುವಟಿಕೆ ವೀಕ್ಷಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ

Next Post

ಲೋಕಾಯುಕ್ತ ಬಿಎಸ್ ಪಾಟೀಲ್ ರಾಜೀನಾಮೆಗೆ ವಿವಿಧ ಸಾಮಾಜಿಕ ಹೋರಾಟಗಾರರ ಆಗ್ರಹ

Next Post
ಲೋಕಾಯುಕ್ತರ ರಾಜೀನಾಮೆಗೆ ಆಗ್ರಹಿಸಿ ಲೋಕಾಯುಕ್ತರ ಕಚೇರಿಗೆ  ತೆರಳಿದ್ದ ಪ್ರಜಾ ನ್ಯಾಯ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಮುಖಂಡರ ನಿಯೋಗ

ಲೋಕಾಯುಕ್ತ ಬಿಎಸ್ ಪಾಟೀಲ್ ರಾಜೀನಾಮೆಗೆ ವಿವಿಧ ಸಾಮಾಜಿಕ ಹೋರಾಟಗಾರರ ಆಗ್ರಹ

BBMP In Youtube | ಬೆಂಗಳೂರಿನ ಅಭಿವೃದ್ಧಿ ಕಾರ್ಯಗಳನ್ನು ಸಾರ್ವಜನಿಕರಿಗೆ ತಿಳಿಸಲು ಯೂಟ್ಯೂಬ್ ಮೊರೆಹೋದ ಬಿಬಿಎಂಪಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group