Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Shivamogga Airport Inauguration | ಶಿವಮೊಗ್ಗ ವಿಮಾನ ನಿಲ್ದಾಣ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ

2 ವರ್ಷಗಳಲ್ಲಿ ಶಿವಮೊಗ್ಗ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ – ಸಿಎಂ ಬಸವರಾಜ ಬೊಮ್ಮಾಯಿ | ಪ್ರಧಾನಿ ಮೋದಿ ಕರೆಗೆ ಮೊಬೈಲ್ ಟಾರ್ಚ್ ಬೆಳಗಿ ಬಿಎಸ್ ವೈಗೆ ಗೌರವ ಸೂಚಿಸಿದ ಶಿವಮೊಗ್ಗ ಜನತೆ | ಶಿವಮೊಗ್ಗ ಏರ್ ಪೋರ್ಟ್ ವಿಶೇಷತೆಗಳೇನು? ಇಲ್ಲಿದೆ ಮಾಹಿತಿ

by Bengaluru Wire Desk
February 27, 2023
in News Wire, Public interest
Reading Time: 2 mins read
0
ಶಿವಮೊಗ್ಗದ ಸೋಗಾನೆ ಬಳಿ ನಿರ್ಮಿಸಲಾಗಿರುವ ನೂತನ ವಿಮಾನ ನಿಲ್ದಾಣದ ಮಾದರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರಿಸುತ್ತಿರುವ ಕರ್ನಾಟಕ ಮೂಲಭೂತ ಸೌಕರ್ಯ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಗೌರವಗುಪ್ತಾ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ವಿ.ಸೋಮಣ್ಣ ಚಿತ್ರದಲ್ಲಿದ್ದಾರೆ.

ಶಿವಮೊಗ್ಗದ ಸೋಗಾನೆ ಬಳಿ ನಿರ್ಮಿಸಲಾಗಿರುವ ನೂತನ ವಿಮಾನ ನಿಲ್ದಾಣದ ಮಾದರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರಿಸುತ್ತಿರುವ ಕರ್ನಾಟಕ ಮೂಲಭೂತ ಸೌಕರ್ಯ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಗೌರವಗುಪ್ತಾ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ವಿ.ಸೋಮಣ್ಣ ಚಿತ್ರದಲ್ಲಿದ್ದಾರೆ.

ಶಿವಮೊಗ್ಗ, ಫೆ.27 www.bengaluruwire.com : ಇಂದಿಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಭೇಟಿ ನೀಡಿದ್ದು, ಸೋಗಾನೆಯಲ್ಲಿ ರೂ.450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣ ಸೇರಿದಂತೆ 3,600 ಕೋಟಿ ರೂ.ಗಿಂತ ಹೆಚ್ಚಿನ ಬಹು ವಿಧದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.

ಇದಕ್ಕೂ ಮೊದಲು ನವದದೆಹಲಿಯಿಂದ ಸೇನಾ ವಿಮಾನದಲ್ಲಿ ಬಂದ ಮೋದಿಯವರು ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ನೇರವಾಗಿ ಬಂದಿಳಿದರು. ಬಳಿಕ ವಿಮಾನ ನಿಲ್ದಾಣದ ಉದ್ಘಾಟನೆ ಬಳಿಕ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ಹೊಸ ರೈಲು ಮಾರ್ಗ (Shivamogga – Shikaripura – Ranebennur new Railway line) ಮತ್ತು ಕೋಟೆಗಂಗೂರು ರೈಲ್ವೇ ಕೋಚಿಂಗ್ ಡಿಪೋ (Koteganguru Railway coaching depot) ಸೇರಿದಂತೆ ಶಿವಮೊಗ್ಗದಲ್ಲಿ ಎರಡು ರೈಲ್ವೆ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ಮಾಡಿದರು. 215 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಬಹು ರಸ್ತೆ ಅಭಿವೃದ್ಧಿ ಯೋಜನೆಗಳಿಗೆ (multi-village schemes) ಶಂಕುಸ್ಥಾಪನೆ ನೆರವೇರಿಸಿದರು. ಜಲ ಜೀವನ್ ಮಿಷನ್ (Jal Jeevan Mission) ಅಡಿಯಲ್ಲಿ 950 ಕೋಟಿ ರೂ.ಗೂ ಹೆಚ್ಚು ಮೊತ್ತದ ಬಹುಗ್ರಾಮ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಶಿವಮೊಗ್ಗ ನಗರದಲ್ಲಿ 895 ಕೋಟಿ ರೂ.ಗೂ ಅಧಿಕ ಮೊತ್ತದ 44 ಸ್ಮಾರ್ಟ್ ಸಿಟಿ ಯೋಜನೆಗಳನ್ನು  (Smart City Projects) ಉದ್ಘಾಟಿಸಿದರು.

ಶಿವಮೊಗ್ಗ ಏರ್ ಪೋರ್ಟ್ ಪಕ್ಷಿನೋಟ

ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಷ್ಟ್ರಕವಿ ಕುವೆಂಪು (National poet Kuvempu) ಅವರ “ಏಕ ಭಾರತ ಶ್ರೇಷ್ಠ ಭಾರತ”ಕ್ಕಾಗಿ ಸಮರ್ಪಣಾ ಭಾವವನ್ನು ಇಂದಿಗೂ ಜೀವಂತವಾಗಿರಿಸಿಕೊಂಡಿರುವ ಮಲೆನಾಡಿಗೆ ತಲೆಬಾಗಿ ನಮಿಸಿದರು. ಶಿವಮೊಗ್ಗದಲ್ಲಿ ನೂತನವಾಗಿ ಉದ್ಘಾಟನೆಗೊಂಡ ವಿಮಾನ ನಿಲ್ದಾಣವನ್ನು ಉಲ್ಲೇಖಿಸಿದ ಪ್ರಧಾನಿ, “ಬಹಳ ದಿನಗಳ ನಂತರ ಇಂದು ನಾಗರಿಕರ ಅಗತ್ಯಗಳನ್ನು ಪೂರೈಸಲಾಗಿದೆ” ಎಂದು ಹೇಳಿದರು. ವಿಮಾನ ನಿಲ್ದಾಣದ ಭವ್ಯವಾದ ಸೌಂದರ್ಯ ಮತ್ತು ನಿರ್ಮಾಣದ ಕುರಿತು ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು, “ಕರ್ನಾಟಕದ ಸಂಪ್ರದಾಯಗಳು ಮತ್ತು ತಂತ್ರಜ್ಞಾನದ ಸಮ್ಮಿಲನವನ್ನು ಈ ಏರ್ ಪೋರ್ಟ್ ಎತ್ತಿ ತೋರಿಸಿದೆ. ಇದು ಕೇವಲ ವಿಮಾನ ನಿಲ್ದಾಣವಾಗದೆ ಯುವ ಪೀಳಿಗೆಯ ಕನಸುಗಳನ್ನು ನನಸಾಗಿಸುವ ಅಭಿಯಾನವಾಗಿದೆ” ಎಂದು ಹೇಳಿದರು.

ಮೊಬೈಲ್ ಟಾರ್ಚ್ ಬೆಳಗಿ ಬಿಎಸ್ ವೈಗೆ ಗೌರವ :

ಪ್ರಧಾನಮಂತ್ರಿ ನರೇಂದ್ರಮೋದಿಯವರು ಇದೇ ಸಂದರ್ಭದಲ್ಲಿ ಬಿ ಎಸ್ ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು ಮತ್ತು ಸಾರ್ವಜನಿಕ ಜೀವನಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದರು. ಅವರು ಇತ್ತೀಚೆಗೆ ವಿಧಾನಸಭೆಯಲ್ಲಿ ಮಾಡಿದ ಭಾಷಣ ಸಾರ್ವಜನಿಕ ಜೀವನದಲ್ಲಿ ಎಲ್ಲರಿಗೂ ಸ್ಫೂರ್ತಿಯಾಗಿದೆ. ಪ್ರಕ್ಷಕರು ಮೊಬೈಲ್‌ಗಳ ಬ್ಯಾಟರಿ ದೀಪಗಳನ್ನು ಬೆಳಗಿಸುವ ಮೂಲಕ ಬಿ.ಎಸ್. ಯಡಿಯೂರಪ್ಪ ಅವರನ್ನು ಗೌರವಿಸುವಂತೆ ಪ್ರಧಾನ ಮಂತ್ರಿಗಳು ಮಾಡಿದ ಮನವಿಗೆ ನೆರೆದಿದ್ದ ಜನರಲ್ಲಿ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಮತ್ತು ಜನರು ಆಗ ತಮ್ಮ ಮೊಬೈಲ್ ಟಾರ್ಚ್ ಬೆಳಕು ಮಾಡಿ ಹಿರಿಯ ನಾಯಕರ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ನೆರದಿದ್ದ ಜನಸ್ತೋಮ

ಕರ್ನಾಟಕ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಈ ಪ್ರಗತಿಯ ಹಾದಿಯು ರಸ್ತೆಮಾರ್ಗಗಳು, ವಾಯುಮಾರ್ಗಗಳು ಮತ್ತು ಐವೇಗಳ (ಡಿಜಿಟಲ್ ಸಂಪರ್ಕ) ದಾಪುಗಾಲುಗಳಿಂದ ಸುಗಮವಾಗಿದೆ. ಕರ್ನಾಟಕದ ಡಬಲ್ ಇಂಜಿನ್ ಸರ್ಕಾರವು ಕರ್ನಾಟಕದ ಪ್ರಗತಿಯ ರಥಕ್ಕೆ ಶಕ್ತಿ ತುಂಬುತ್ತಿದೆ. ಹಿಂದಿನ ಕಾಲದ ದೊಡ್ಡ ನಗರ ಕೇಂದ್ರಿತ ಅಭಿವೃದ್ಧಿಗೆ ವಿರುದ್ಧವಾಗಿ ಡಬಲ್ ಇಂಜಿನ್ ಸರ್ಕಾರದ ಅಡಿಯಲ್ಲಿ ಕರ್ನಾಟಕದಲ್ಲಿ ಹಳ್ಳಿಗಳಿಗೆ ಮತ್ತು 2 ಮತ್ತು 3ನೇ ಸ್ತರದ ನಗರಗಳಿಗೆ ಅಭಿವೃದ್ಧಿಯ ವ್ಯಾಪಕ ಹರಡುವಿಕೆಯನ್ನು ಎತ್ತಿ ತೋರಿಸಿದೆ. “ಶಿವಮೊಗ್ಗದ ಅಭಿವೃದ್ಧಿಯು ಈ ಚಿಂತನೆಯ ಪ್ರಕ್ರಿಯೆಯ ಫಲಿತಾಂಶವಾಗಿದೆ”, ಅವರು ಹೇಳಿದರು.

2 ವರ್ಷಗಳಲ್ಲಿ ಶಿವಮೊಗ್ಗ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ :

ಇನ್ನೆರಡು ವರ್ಷಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ  ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ. ಮಲೆನಾಡಿನ  ಹೆಬ್ಬಾಗಿಲಾಗಿರುವ ಶಿವಮೊಗ್ಗದ ವಾಣಿಜ್ಯೋದ್ಯಮ, ವ್ಯಾಪಾರ, ವಹಿವಾಟು, ಕೃಷಿ, ಕೈಗಾರಿಕೆ, ಔದ್ಯೋಗೀಕರಣ ಇವೆಲ್ಲಕ್ಕೂ ಈ ವಿಮಾನ ನಿಲ್ದಾಣ ಹೆಬ್ಬಾಗಿಲಾಗಲಿದೆ.  ಇಡೀ ಭಾರತದ ಮೂಲೆ ಮೂಲೆಗೆ ಈ ವಿಮಾನ ನಿಲ್ದಾಣ ಸಂಪರ್ಕ ಕಲ್ಪಿಸಲಿದೆ  ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಏರ್ಪೋರ್ಟ್ ಕುರಿತ ಕಿರುಚಿತ್ರ ಪ್ರದರ್ಶನವಾಯಿತು. ಈ ಕಿರುಚಿತ್ರದಲ್ಲಿ ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ವಿಮಾನಯಾನ ಪ್ರಯಾಣಿಕರು, ಕೇಂದ್ರ ಸರ್ಕಾರ ವಿಮಾನಯಾನಕ್ಕೆ ನೀಡಿದ ಉತ್ತೇಜನ, ಹೊಸ ವಿಮಾನ ನಿಲ್ದಾಣ ಸ್ಥಾಪನೆ, ಪ್ರವಾಸೋದ್ಯಮ ಕುರಿತು ಮಾಹಿತಿಯಿತ್ತು. ಅಲ್ಲದೆ ಶಿವಮೊಗ್ಗ ವಿಮಾನ ನಿಲ್ದಾಣದ ಸೌಲಭ್ಯಗಳು, ಅದರ ವಿಶೇಷತೆಗಳು, ಆರಂಭದಿಂದ ಹಿಡಿದು ಉದ್ಘಾಟನೆಯವರೆಗಿನ ಮಾಹಿತಿಯನ್ನು ನೀಡಲಾಯಿತು.

ಶಿವಮೊಗ್ಗ ಏರ್ ಪೋರ್ಟ್ ವಿಶೇಷತೆಗಳೇನು?

(What Are Specialities In Shivamogga Airport?) :

  • ಸಂಜೆಯ ಕತ್ತಲೆಯಲ್ಲಿ ಬೆಳಗುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣ
  • ಶಿವಮೊಗ್ಗ ವಿಮಾನ ನಿಲ್ದಾಣ ಬೆಳಗಿನ ಸಂದರ್ಭದಲ್ಲಿನ ನೋಟ

ರಾಜ್ಯದ 2ನೇ ಅತಿ ದೊಡ್ಡ ಏರ್‌ ಪೋರ್ಟ್‌ ಎಂಬ ಹೆಗ್ಗಳಿಕೆ ಪಡೆದ ಶಿವಮೊಗ್ಗ ಏರ್‌ಪೋರ್ಟ್‌, ಒಟ್ಟು 775 ಎಕರೆ ವಿಸ್ತಿರ್ಣದಲ್ಲಿ ನಿರ್ಮಾಣವಾಗಿದೆ. 449.2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 3.2 ಕಿ.ಮೀ ರನ್‌ ವೇ ಹೊಂದಿದ್ದು, ವಿಮಾನ ನಿಲ್ದಾಣವು ಬೋಯಿಂಗ್ 737 ಮತ್ತು ಏರ್‌ಬಸ್ A320 ಮಾದರಿಯ ವಿಮಾನ ಸೇರಿದಂತೆ ಎಲ್ಲಾ ರೀತಿಯ ವಿಮಾನಗಳು ಇಲ್ಲಿ ಇಳಿಯುವ ರೀತಿ ವಿನ್ಯಾಸಗೊಳಿಸಲಾಗಿದೆ ಮತ್ತು ದಟ್ಟಣೆ ಅವಧಿಯಲ್ಲಿ ಗಂಟೆಗೆ ಸುಮಾರು 200 ಪ್ರಯಾಣಿಕರನ್ನು ನಿಭಾಯಿಸಬಲ್ಲದು. 4320 ಚದರಡಿ ವಿಸ್ತಿರ್ಣದ ಸುಸಜ್ಜಿತ ಪ್ಯಾಸೆಂಜರ್‌ ಟರ್ಮಿನಲ್‌ ಹಾಗೂ ವಿಮಾನ ನಿಲ್ದಾಣದ ಸುತ್ತ 15,900 ಮೀಟರ್‌ ಉದ್ದದ ಕಾಂಪೌಂಡ್‌ ಈ ವಿಮಾನ ನಿಲ್ದಾಣದಲ್ಲಿದೆ.

ಸಚಿವರಾದ ನಾರಾಯಣಗೌಡ, ವಿ.ಸೋಮಣ್ಣ, ಭೈರತಿ ಬಸವರಾಜ್, ಶಾಸಕ ಸಿ.ಟಿ.ರವಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಸಚಿವ ಈಶ್ವರಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶೇಷ ಪೇಟ ತೊಡಿಸಿ ಶಿವಮೊಗ್ಗ ಏರ್ಪೋರ್ಟ್ ಕಲಾಕೃತಿಯನ್ನು ಕಾಣಿಕೆ ನೀಡಿದರು.

ಬೆಳಗಾವಿಯಲ್ಲಿ 2,240 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ :

ಈ ಕಾರ್ಯಕ್ರಮದ ಬಳಿಕ ಬೆಳಗಾವಿಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ, ಜಲಜೀವನ ಮಿಷನ್ ಯೋಜನೆಗೆ ಶಂಕುಸ್ಥಾಪನೆ, ನವೀಕೃತ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸುವಿಕೆ, ಲೊಂಡ-ಬೆಳಗಾವಿ-ಘಟಪ್ರಭಾ ಮಾರ್ಗದ ಡಬ್ಲಿಂಗ್ ಕಾಮಗಾರಿ ಸೇರಿದಂತೆ 2240 ಕೋಟಿ‌ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೆಳಗಾವಿಯ ಹೊರವಲಯದ ಮಾಲಿನಿ ಸಿಟಿ ಮೈದಾನಲ್ಲಿ ಏರ್ಪಡಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಸೋಮವಾರ ರಾಷ್ಟ್ರಕ್ಕೆ ಸಮರ್ಪಿಸಿದರು.

ಇಂದು ಶಿವಮೊಗ್ಗದಲ್ಲಿ ಸನ್ಮಾನ್ಯ ಪ್ರಧಾನಿ ಶ್ರೀ @Narendramodi ಅವರಿಂದ ಉದ್ಘಾಟನೆಗೊಂಡ ನೂತನ ವಿಶ್ವ ದರ್ಜೆಯ ವಿಮಾನ ನಿಲ್ದಾಣದ ಸಂಕ್ಷಿಪ್ತ ನೋಟ.#ShivamoggaAirport pic.twitter.com/bKYFXR8kDX

— Basavaraj S Bommai (Modi Ka Parivar) (@BSBommai) February 27, 2023
WhatsApp Join our WhatsApp Channel
Previous Post

CAG REPORT ON MSIL | ನೈಸರ್ಗಿಕ ಮರಳು ಆಮದು ವಿಚಾರದಲ್ಲಿ ಎಂಎಸ್ಐಎಲ್ ನಿಯಮ ಉಲ್ಲಂಘನೆ – ದಾಸ್ತಾನಲ್ಲೇ ಉಳಿದ 89 ಸಾವಿರ ಮೆ.ಟನ್ ಮರಳು

Next Post

BW EXCLUSIVE INTERVIEW | Karnataka Assembly Election 2023 |‘ಈ ಬಾರಿಯ ಚುನಾವಣೆಯಲ್ಲಿ M3 ಹೊಸ ವಿದ್ಯುನ್ಮಾನ ಯಂತ್ರಗಳ ಬಳಕೆ’ : ಸಿಇಒ ಮನೋಜ್ ಕುಮಾರ್ ಮೀನಾ

Next Post
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ

BW EXCLUSIVE INTERVIEW | Karnataka Assembly Election 2023 |‘ಈ ಬಾರಿಯ ಚುನಾವಣೆಯಲ್ಲಿ M3 ಹೊಸ ವಿದ್ಯುನ್ಮಾನ ಯಂತ್ರಗಳ ಬಳಕೆ’ : ಸಿಇಒ ಮನೋಜ್ ಕುಮಾರ್ ಮೀನಾ

ಪ್ರತಿನಿತ್ಯ ನರಿ ಮುಖ ನೋಡಿದ್ರೆ ಒಳ್ಳೇದು ಅಂತ ಈ ಭೂಪ ಆ ವನ್ಯಪ್ರಾಣಿಯನ್ನೇ ತಂದು ಸಾಕಿದ್ದ….!

Please login to join discussion

Like Us on Facebook

Follow Us on Twitter

Recent News

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group