Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Karnataka Assembly Election 2023 | ವಿಧಾನಸಭಾ ಚುನಾವಣೆ ಹಿನ್ನಲೆ : ನಗರ ಜಿಲ್ಲಾ ವ್ಯಾಪ್ತಿಯಲ್ಲಿ 3 ರೌಡಿಗಳು ಜೈಲಿಗೆ, 10 ಮಂದಿಗೆ ನೋಟಿಸ್

ಬೆಂಗಳೂರು ವ್ಯಾಪ್ತಿಯಲ್ಲಿ ಶೇ.65 ಮತದಾನದ ಗುರಿ‌ ನೀಡಿದ ಚುನಾವಣಾ ಆಯೋಗ | ಈ ಬಾರಿ ಅತ್ಯಾಧುನಿಕ ಎಂ3 ಮತಯಂತ್ರ ಬಳಕೆ

by Bengaluru Wire Desk
March 4, 2023
in Bengaluru Focus
Reading Time: 1 min read
0

ಬೆಂಗಳೂರು, ಮಾ.4 www.bengaluruwire.com : ಬೆಂಗಳೂರು ವ್ಯಾಪ್ತಿಯಲ್ಲಿ ಶೇ.65 ಮತದಾನ ಆಗುವ ಗುರಿಯನ್ನು ಕೇಂದ್ರ ಚುನಾವಣಾ ಆಯೋಗ ನೀಡಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್ ಹೇಳಿದರು.

ಸಾರ್ವತ್ರಿಕ ಚುನಾವಣಾ ವಿಧಾನಸಭಾ ಚುನಾವಣೆ 2023ರ ಹಿನ್ನಲೆಯಲ್ಲಿ ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ, ವಿದ್ಯುನ್ಮಾನ ಮತಯಂತ್ರ (EVM)ಗಳ ಬಳಕೆ ಕುರಿತು‌ ಮಾಧ್ಯಮದವರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

2018 ರ ವಿಧಾನಸಭಾ ಚುನಟವಣೆಯಲ್ಲಿ ಬೆಂಗಳೂರಿನಲ್ಲಿ ಸರಾಸರಿ ಕಡಿಮೆ ಮತದಾನವಾಗಿತ್ತು. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರವಿದೆ. ಈ ವ್ಯಾಪ್ತಿಯಲ್ಲಿ ಸರಾಸರಿ ಕೇವಲ ಶೇ.57.8 ರಷ್ಟು ಮತದಾನವಾಗಿತ್ತು. ನಗರದ ಇತರೆಡೆಯೂ ಕಡಿಮೆ ಮತದಾನವಾಗಿತ್ತು. ಈ ಹಿನ್ನಲೆಯಲ್ಲಿ ಸರಾಸರಿ ಶೇ.65ರಷ್ಟು ಮತದಾನವಾಗಬೇಕೆಂದು ಚುನಾವಣಾ ಆಯೋಗ ಗುರಿ ನೀಡಿದೆ.

ಈ ಹಿನ್ನಲೆಯಲ್ಲಿ ಹಿಂದೆಂದಿಗಿಂತ ಈ ಬಾರಿಯೂ ಚುನಾವಣಾ ದಿನಾಂಕ ಘೋಷಣೆಗೂ ಸಾಕಷ್ಟು ಮುನ್ನ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಾಕಷ್ಟು ಚುನಾವಣಾ ಪೂರ್ವಸಿದ್ಧತಾ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳ‌ ನೇಮಕ, ಪ್ರತಿ ಮತಗಟ್ಟೆಗಳಿಗೆ ಕನಿಷ್ಠ ಸೌಲಭ್ಯ, ಮತದಾನ ಜಾಗೃತಿ ಕಾರ್ಯ ಆರಂಭವಾಗಿದೆ. ಪಾರದರ್ಶಕ ಚುನಾವಣೆಯಲ್ಲಿ‌ ನಿರ್ಣಾಯಕವಾಗಿರುವ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ನೇಮಕವಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಗುಣಮಟ್ಟ ಕಾಯ್ದುಕೊಂಡು ಪಟ್ಟಿ ಸಿದ್ಧಪಡಿಸಲಾಗಿದೆ ಎಂದರು.

ಈವರೆಗೆ 3 ರೌಡಿ ಶೀಟರ್ ಜೈಲಿಗೆ, 10 ಮಂದಿಗೆ ನೋಟಿಸ್ :
ಚುನಾವಣೆ ಸಂದರ್ಭದಲ್ಲಿ ಗಲಭೆ, ಅಶಾಂತಿ ವಾತಾವರಣ ನಿರ್ಮಾಣ ಮಾಡುವ ರೌಡಿಗಳನ್ನು ಗೂಂಡಾ ಕಾಯ್ದೆಯಡಿ ಮುಂಜಾಗ್ರತಾ ಕ್ರಮವಾಗಿ ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿದ್ದೇವೆ. ಪ್ರಸ್ತುತ ಮೂವರು ರೌಡಿ ಶೀಟರ್ ಗಳನ್ನು ಕಳೆದ ವಾರ ಜೈಲಿಗೆ ಕಳುಹಿಸಿದ್ದು, ಚುನಾವಣೆ ಮುಗಿಯುವ ತನಕ ಅವರನ್ನೆಲ್ಲ ಹೊರಗೆ ಬಿಡುವುದಿಲ್ಲ. ಇದಲ್ಲದೆ 10 ಜನ ರೌಡಿ ಶೀಟರ್ ಗಳಿಗೆ ಪೊಲೀಸರ ವರದಿ ಆಧಾರದ ಮೇಲೆ ವಿಚಾರಣಾ ನೋಟಿಸ್ ನೀಡಿದ್ದೇವೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 38 ಚುನಾವಣಾ ದೂರುಗಳು ಬಂದಿದ್ದು ಅದರಲ್ಲಿ 26 ಚಾರ್ಜ್ ಶೀಟ್ ಸಲ್ಲಿಸಲಾಗಿದೆ. 10 ಪ್ರಕರಣಗಳಲ್ಲಿ ಬಿ ರಿಪೋರ್ಟ್, 2 ಪ್ರಕರಣಗಳಲ್ಲಿ‌ ಸಿ ರಿಪೋರ್ಟ್, 8 ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ. 14 ಜನರು ಖುಲಾಸೆಯಾಗಿದ್ದಾರೆ.

ಬೆಂಗಳೂರಿನಲ್ಲಿ 90 ಲಕ್ಷ ಮತದಾರರಿದ್ದರೆ, 7 ವಿಧಾನಸಭಾ ಕ್ಷೇತ್ರವನ್ನು ಹೊಂದಿರುವ ನಗರ ಜಿಲ್ಲೆಯಲ್ಲಿ 32 ಲಕ್ಷ ಮತದಾರರಿದ್ದಾರೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 6.5 ಲಕ್ಷ ಮತದಾರರಿದ್ದು, ದೇಶದಲ್ಲೇ ಅತಿದೊಡ್ಡ ವಿಧಾನಸಭಾ ಕ್ಷೇತ್ರವೆಂಬ ಹೆಗ್ಗಳಿಕೆ ಹೊಂದಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದರು.

ಈ ಬಾರಿ ಅತ್ಯಾಧುನಿಕ ಎಂ3 ಮತಯಂತ್ರ ಬಳಕೆ :
ಈ ಬಾರಿ ಎಂ3 ಹೆಸರಿನ ಸುಧಾರಿತ ಮತಯಂತ್ರಗಳನ್ನು ಬಳಸಲಾಗುತ್ತಿದೆ. ಈ ಮತಯಂತ್ರ ಈ ಹಿಂದಿನ ಮತಯಂತ್ರಕ್ಕಿಂತ ಸಾಕಷ್ಟು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಈ ಮತಯಂತ್ರದಲ್ಲಿನ ಕಂಟ್ರೋಲ್ ಯೂನಿಟ್ (CU) ಒಂದೇ ಬಾರಿಗೆ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಗರಿಷ್ಠ 384 ಅಭ್ಯರ್ಥಿಗಳ ತನಕ ಮತ ಹಾಕಲು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಅದೇ ರೀತಿ 16 ಅಭ್ಯರ್ಥಿಗಳ ಒಂದು ಬ್ಯಾಲೇಟ್ ಯೂನಿಟ್ ರೀತಿ ಗರಿಷ್ಠ 4 ಬ್ಯಾಲೇಟ್ ಯೂನಿಟ್ ಗಳನ್ನಷ್ಟೇ ಕಂಟ್ರೋಲ್ ಯೂನಿಟ್ ಗೆ ಸಂಪರ್ಕ ಕಲ್ಪಿಸಬಹುದಾಗಿತ್ತು.

ಎಂ3 ಮತಯಂತ್ರದ ಕಂಟ್ರೋಲ್ ಯೂನಿಟ್ ಗೆ 24 ಬ್ಯಾಲೇಟ್ ಯೂನಿಟ್ ಗಳನ್ನು ಒಂದೇ ಬಾರಿಗೆ ಸಂಪರ್ಕ ಕಲ್ಪಿಸಬಹುದು. ಇದರಿಂದ ಹೆಚ್ಚಿನ ಕಂಟ್ರೋಲ್ ಯೂನಿಟ್ ಬಳಕೆ ತಪ್ಪಿದಂತಾಗಿದೆ ಎಂದು ಅವರು ಹೇಳಿದರು.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿನ 7 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 3,083 ಮತಗಟ್ಟೆಗಳಿದ್ದು, ಈ ಬಾರಿಯ ಚುನಾವಣೆಗೆ ಕನಿಷ್ಠ 15 ಸಾವಿರ ಸಿಬ್ಬಂದಿ ಅವಶ್ಯಕತೆಯಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ಬಾರಿ ಒಂದು ಲಕ್ಷ ಯುವ ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಈ ಸಂಖ್ಯೆ ಮತ್ತಷ್ಟು ಏರಿಕೆಯಾಗಲಿದೆ ಎಂದು ದಯಾನಂದ್ ಹೇಳಿದರು.

ಕಾರ್ಯಕ್ರಮದಲ್ಲಿ ಚುನಾವಣಾ ತಹಸೀಲ್ದಾರ್ ಮಂಜುನಾಥ್, ಮಾಸ್ಟರ್ ಟ್ರೈನರ್ ಮಂಜುನಾಥ್ ಸ್ವಾಮಿ‌ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

KAS | ಲೋಕಾಯುಕ್ತ ದಾಳಿಗೆ ಒಳಗಾದ ಪ್ರಶಾಂತ್ ಮಾಡಾಳ್ ಕೆಎಎಸ್ ಅಧಿಕಾರಿಯಲ್ಲ : ಕೆಎಎಸ್ ಅಧಿಕಾರಿಗಳ ಸಂಘದ ಸ್ಪಷ್ಟನೆ

Next Post

BIS HUID 6 Digit | ಏ.1ರಿಂದ ಕಳಪೆ ಚಿನ್ನಾಭರಣ ಮಾರಾಟ ಸಾಧ್ಯವಿಲ್ಲ : ಕಳುವಾಗುವ ಚಿನ್ನಾಭರಣ ಪತ್ತೆ ಸುಲಭ !! – ಎಚ್ ಯುಐಡಿ ಕೋಡ್ ಇರುವ ಚಿನ್ನಾಭರಣ ಮಾರಾಟಕ್ಕೆ ಅವಕಾಶ  

Next Post
ಚಿನ್ನಾಭರಣದ ಸಾಂದರ್ಭಿಕ ಚಿತ್ರ

BIS HUID 6 Digit | ಏ.1ರಿಂದ ಕಳಪೆ ಚಿನ್ನಾಭರಣ ಮಾರಾಟ ಸಾಧ್ಯವಿಲ್ಲ : ಕಳುವಾಗುವ ಚಿನ್ನಾಭರಣ ಪತ್ತೆ ಸುಲಭ !! - ಎಚ್ ಯುಐಡಿ ಕೋಡ್ ಇರುವ ಚಿನ್ನಾಭರಣ ಮಾರಾಟಕ್ಕೆ ಅವಕಾಶ  

ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚರ ಕುರಿತು ಪತ್ರಿಕಾಗೋಷ್ಟಿಯಲ್ಲಿ ಆರೋಪ ಮಾಡುತ್ತಿರುವ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್.ರಮೇಶ್.

Lokayukta Complaint | “ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಗಣ್ಯರ ಆತಿಥ್ಯಕ್ಕಾಗಿ 200 ಕೋಟಿ ರೂ. ಲೂಟಿ ” : ಲೋಕಾಯುಕ್ತಕ್ಕೆ ದೂರು

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d