Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BDA News | ಅರ್ಕಾವತಿ ನಿವೇಶನದಾರರಿಗೆ ಕೆಂಪೇಗೌಡ ಬಡಾವಣೆಯಲ್ಲಿ 378 ಬದಲಿ ನಿವೇಶನ ಹಂಚಿಕೆ

ಸಾರ್ವಜನಿಕರಿಂದಲೇ ರಾಂಡಮೈಸೇಶನ್ ಮೂಲಕ ಬದಲಿ ನಿವೇಶನ ಆಯ್ಕೆ

by Bengaluru Wire Desk
March 16, 2023
in Bengaluru Focus, News Wire
Reading Time: 1 min read
0
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬೆಂಗಳೂರ, ಮಾ.16 www.bengaluruwire.com : ರೀಡೂ, ಡಿನೋಟಿಫಿಕೇಶನ್ ಸೇರಿದಂತೆ ಹಲವು ಕಾರಣಗಳಿಂದ ಅರ್ಕಾವತಿ ಬಡಾವಣೆ (Arkavathi Layout)ಯಲ್ಲಿ ನಿವೇಶನವನ್ನು ಕಳೆದುಕೊಂಡಿದ್ದ 378 ನಾಗರಿಕರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದಿಂದ ನಾಡಪ್ರಭು ಕೆಂಪೇಗೌಡ ಬಡಾವಣೆ (Nadaparbhu Kempegowda Layout)ನಲ್ಲಿ ರಾಂಡಮೈಸೇಶನ್ (Randamisation) ಮೂಲಕ ಗುರುವಾರ ಬದಲಿ ನಿವೇಶನವನ್ನು ವಿತರಿಸಲಾಯಿತು.

ಬಿಡಿಎ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ಜಿ.ಕುಮಾರ ನಾಯಕ್ ಸಮ್ಮುಖದಲ್ಲಿ ಸಾರ್ವಜನಿಕರಿಂದಲೇ ರಾಂಡಮೈಸ್ ಪ್ರಕ್ರಿಯೆಯನ್ನು ನಡೆಸಲಾಯಿತು.
20X30 ಚದರಡಿಯ ಅಳತೆಯ 232 ನಿವೇಶನಗಳು, 30X40 ಅಳತೆಯ 67, 40X60 ಅಳತೆಯ 34 ಹಾಗೂ 50X80 ಅಳತೆಯ 45 ನಿವೇಶನಗಳನ್ನು ರಾಂಡಮೈಸ್ ಮಾಡುವ ಮೂಲಕ ಹಂಚಿಕೆದಾರರಿಗೆ ವಿತರಣೆ ಮಾಡಲಾಯಿತು.

ಎರಡು ದಶಕಗಳ ಹಿಂದೆ ಅರ್ಕಾವತಿ ಬಡಾವಣೆಯಲ್ಲಿ ಸಾವಿರಾರು ನಾಗರಿಕರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಬಹುತೇಕ ಎಲ್ಲಾ ಹಂಚಿಕೆದಾರರಿಗೆ ನೋಂದಣಿಯನ್ನೂ ಮಾಡಿಕೊಡಲಾಗಿತ್ತು. ಆದರೆ, ರೀಡೂ, ಡಿನೋಟಿಫಿಕೇಶನ್ ಸೇರಿದಂತೆ ನಾನಾ ಕಾರಣಗಳಿಂದ 2,000 ಕ್ಕೂ ಹೆಚ್ಚು ನಿವೇಶನ ಹಂಚಿಕೆದಾರರು ನಿವೇಶನವನ್ನು ಕಳೆದುಕೊಂಡಿದ್ದರು. ಇದರ ಪರಿಣಾಮ ಹಲವು ವರ್ಷಗಳಿಂದ ಬದಲಿ ನಿವೇಶನಕ್ಕಾಗಿ ಬಿಡಿಎಗೆ ಅಲೆದಾಡುತ್ತಿದ್ದರು. ಆದರೆ, ಅವರಿಗೆ ಅರ್ಕಾವತಿ ಬಡಾವಣೆಯಲ್ಲಿ ನಿವೇಶನ ಅಲಭ್ಯವಾಗಿತ್ತು.

ಈ ಬಗ್ಗೆ ಮಾತನಾಡಿದ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಅವರು, ನಿವೇಶನ ಹಂಚಿಕೆದಾರರ ಸಂಕಷ್ಟವನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿ ಕಳೆದ ವರ್ಷ ಸುಮಾರು 300 ನಿವೇಶನದಾರರಿಗೆ ಅರ್ಕಾವತಿಯಲ್ಲಿಯೇ ರಾಂಡಮೈಸ್ ಮೂಲಕ ನಿವೇಶನ ಹಂಚಿಕೆ ಮಾಡಲಾಗಿತ್ತು. ಆದರೆ, ಉಳಿದ ನಿವೇಶನ ಹಂಚಿಕೆದಾರರಿಗೆ ಅರ್ಕಾವತಿಯಲ್ಲಿ ಬದಲಿ ನಿವೇಶನವನ್ನು ಗುರುತಿಸಿ ಹಂಚಿಕೆ ಮಾಡುವುದು ತಡವಾಗಿತ್ತು ಎಂದರು.

ಈ ಹಿನ್ನೆಲೆಯಲ್ಲಿ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನ ಪಡೆಯಲು ಆಸಕ್ತಿ ಇರುವ ಹಂಚಿಕೆದಾರರಿಗೆ ಒಂದು ಅವಕಾಶವನ್ನು ನೀಡಲಾಗಿತ್ತು. ಅದರಂತೆ ಅರ್ಜಿ ಸಲ್ಲಿಸಿದ ಬಹುತೇಕ ಹಂಚಿಕೆದಾರರಿಗೆ ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಈ ರಾಂಡಮೈಸೇಶನ್ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿ ನಡೆದಿದ್ದು, ಸಾರ್ವಜನಿಕರೇ ಕಂಪ್ಯೂಟರ್ ನಲ್ಲಿ ಕ್ಲಿಕ್ ಮಾಡುವ ಮೂಲಕ ನಿವೇಶನವನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.

ಬಿಡಿಎ ಕೇಂದ್ರ ಕಚೇರಿಯಲ್ಲಿ ಬದಲಿ ನಿವೇಶನ ಹಂಚಿಕೆ ಪ್ರಕ್ರಿಯೆ ವೀಕ್ಷಿಸುತ್ತಿರುವ ಕಮಿಷನರ್ ಜಿ.ಕುಮಾರ್ ನಾಯಕ್

ಸದ್ಯದ ಪರಿಸ್ಥಿತಿಯಲ್ಲಿ ಅರ್ಕಾವತಿ ಬಡಾವಣೆಯಲ್ಲಿ ಬದಲಿ ನಿವೇಶನಗಳು ಲಭ್ಯವಾಗುವುದು ತಡವಾಗುತ್ತದೆ. ಈ ಹಿನ್ನೆಲೆಯಲ್ಲಿ ಆಸಕ್ತಿ ಇರುವ ನಿವೇಶನ ಹಂಚಿಕೆದಾರರು ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನ ಬಯಸಿ ಅರ್ಜಿ ಸಲ್ಲಿಸಿದರೆ ಅವರಿಗೆ ನಿವೇಶನವನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದರು.

ತಕ್ಷಣದಿಂದಲೇ ಹಂಚಿಕೆ ಪತ್ರ ವಿತರಣೆ ಮತ್ತು ನೋಂದಣಿ ಪ್ರಕ್ರಿಯೆ :
ಈಗಾಗಲೇ ಹತ್ತಾರು ವರ್ಷಗಳಿಂದ ನಿವೇಶನದಾರರು ಬಿಡಿಎಗೆ ಅಲೆದಾಡಿದ್ದಾರೆ. ಅವರನ್ನು ಮತ್ತಷ್ಟು ಕಾಯಿಸದೇ ಈಗ ಹಂಚಿಕೆಯಾಗಿರುವ ಬದಲಿ ನಿವೇಶನಗಳಿಗೆ ಹಂಚಿಕೆ ಪತ್ರ ವಿತರಣೆ ಮತ್ತು ನೋಂದಣಿ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿಶ್ವನಾಥ್ ತಿಳಿಸಿದರು.

ಆಯುಕ್ತ ಕುಮಾರ ನಾಯಕ್ ಅವರು ಮಾತನಾಡಿ, ನಾನಾ ಕಾರಣಗಳಿಂದ ಅರ್ಕಾವತಿ ನಿವೇಶನ ಹಂಚಿಕೆದಾರರಿಗೆ ನಿವೇಶನವನ್ನು ನೀಡಲು ಸಾಧ್ಯವಾಗಿಲ್ಲ. ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನ ಬಯಸಿ ಅರ್ಜಿ ಸಲ್ಲಿಸಿದವರಿಗೆ ಪಾರದರ್ಶಕವಾಗಿ ಸಾರ್ವಜನಿಕರ ಸಮ್ಮುಖದಲ್ಲಿಯೇ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಬದಲಿ ನಿವೇಶನದ ಬಗ್ಗೆ ಫಲಾನುಭವಿಗಳು ಏನಂತಾರೆ? :
ರಾಂಡಮೈಸೇಶನ್ ನಲ್ಲಿ ಬದಲಿ ನಿವೇಶನ ಪಡೆದ ಆಶಾರಾವ್ ಅವರು ಮಾತನಾಡಿ, ಅರ್ಕಾವತಿ ಬಡಾವಣೆಯಲ್ಲಿ ನಮಗೆ ನಿವೇಶನ ಹಂಚಿಕೆಯಾಗಿದ್ದರೂ ಅದು ನಮ್ಮ ಕೈಗೆ ಬರಲಿಲ್ಲ. ನಿವೇಶನ ಪಡೆಯಲು ಹಲವು ವರ್ಷಗಳಿಂದ ಬಿಡಿಎಗೆ ಅಲೆದಾಡುತ್ತಾ ಬಂದಿದ್ದೇವಾದರೂ ಬದಲಿ ನಿವೇಶನ ಸಿಕ್ಕಿರಲಿಲ್ಲ. ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಮಗೆ ಬದಲಿ ನಿವೇಶನ ಹಂಚಿಕೆ ಮಾಡಿಕೊಟ್ಟಿರುವುದು ಸಂತಸ ತಂದಿದೆ ಎಂದರು.

ಮತ್ತೋರ್ವ ಹಂಚಿಕೆದಾರ ನಿತಿನ್ ಅವರು ಮಾತನಾಡಿ, ಹಲವು ವರ್ಷಗಳಿಂದ ಅಲೆದಾಡುತ್ತಿದ್ದ ನಮಗೆ ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನವನ್ನು ಹಂಚಿಕೆ ಮಾಡಿರುವುದು ಸಂತಸ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಡಿಎ ಕಾರ್ಯದರ್ಶಿ ಡಾ.ಶಾಂತರಾಜು, ಅಭಿಯಂತರ ಸದಸ್ಯ ಶಾಂತರಾಜಣ್ಣ ಮತ್ತು ಇತರ ಅಧಿಕಾರಿಗಳು ಇದ್ದರು.

WhatsApp Join our WhatsApp Channel
Previous Post

ಸಾರಿಗೆ ನೌಕರರಿಗೆ ಖುಷಿಯ ಸುದ್ದಿ : ಶೇ.15ರಷ್ಟು ವೇತನ ಪರಿಷ್ಕರಣೆ ಘೋಷಿಸಿದ ಸಿಎಂ ಬೊಮ್ಮಾಯಿ

Next Post

BW Special | Karnataka Revenue | ರಾಜ್ಯ ಸರ್ಕಾರಕ್ಕೆ ಬಂಪರ್ ಆದಾಯ : ನೋಂದಣಿ ಇಲಾಖೆಯಿಂದ 16,711 ಕೋಟಿ ರೂ. ದಾಖಲೆ ಆದಾಯ ಸಂಗ್ರಹ!!

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

BW Special | Karnataka Revenue | ರಾಜ್ಯ ಸರ್ಕಾರಕ್ಕೆ ಬಂಪರ್ ಆದಾಯ : ನೋಂದಣಿ ಇಲಾಖೆಯಿಂದ 16,711 ಕೋಟಿ ರೂ. ದಾಖಲೆ ಆದಾಯ ಸಂಗ್ರಹ!!

Weather News | ಬೆಂಗಳೂರು ಸೇರಿದಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ : ಇಲ್ಲಿದೆ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group