Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW Special | Karnataka Revenue | ರಾಜ್ಯ ಸರ್ಕಾರಕ್ಕೆ ಬಂಪರ್ ಆದಾಯ : ನೋಂದಣಿ ಇಲಾಖೆಯಿಂದ 16,711 ಕೋಟಿ ರೂ. ದಾಖಲೆ ಆದಾಯ ಸಂಗ್ರಹ!!

ಇಲಾಖೆ ಆದಾಯ ಸಂಗ್ರಹದ ಗುರಿಯನ್ನು ಮೊದಲಿಗೆ 15 ಸಾವಿರ ಕೋಟಿ ರೂ. ಬಳಿಕ 17 ಸಾವಿರ ಕೋಟಿ ರೂ. ಎಂದು ಎರಡು ಬಾರಿ ಪರಿಷ್ಕರಣೆ ಮಾಡಿದ್ದ ರಾಜ್ಯ ಸರ್ಕಾರ | ಮಾ.15ರ ತನಕದ ಅಂಕಿ ಅಂಶದ ಪ್ರಕಾರ ಗುರಿ ತಲುಪಲು 288.91 ಕೋಟಿ ರೂ. ಸಂಗ್ರಹ ಬಾಕಿ | ಮುಂದಿನ ಜೂನ್ ಒಳಗಾಗಿ ರಾಜ್ಯದೆಲ್ಲಡೆ 'ಕಾವೇರಿ ತಂತ್ರಾಂಶ-2' ಲಭ್ಯ

by Bengaluru Wire Desk
March 18, 2023
in BW Special, News Wire
Reading Time: 2 mins read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.17 www.bengaluruwire.com : ರಾಜ್ಯ ಸರ್ಕಾರದ ಆದಾಯದಲ್ಲಿ ಪ್ರಮುಖ ಮೂಲವಾಗಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಮಾ.15ರ ತನಕ 16,711 ಕೋಟಿ ರೂ. ಆದಾಯ ಸಂಗ್ರಹಿಸಿ ಪರಿಷ್ಕೃತ ಗುರಿಯ ತಲುಪುವುದರ ಸನಿಹದಲ್ಲಿದೆ. ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿರುವಾಗ ಹಾಗೂ ಈ ವರ್ಷಾಂತ್ಯ ಪೂರ್ಣವಾಗಲು ದಿನಗಣನೆ ಆರಂಭವಾಗಿರುವಾಗ ಇಲಾಖೆಯು ಆದಾಯ ಸಂಗ್ರಹದಲ್ಲಿ ಹೊಸ ಇತಿಹಾಸ ಬರೆದಿದೆ.

2022-23ನೇ ಸಾಲಿನಲ್ಲಿ ಸರ್ಕಾರ ಮೊದಲಿಗೆ 15,807.91 ಕೋಟಿ ರೂ. ಆದಾಯ ಸಂಗ್ರಹಿಸುವ ಗುರಿ ನೀಡಿತ್ತು. ಆದರೆ ಈ ಗುರಿಯನ್ನು ಇಲಾಖೆಯು ಡಿಸೆಂಬರ್ 2022ರಲ್ಲೇ ಮಾಡಿ ಮುಗಿಸಿತ್ತು. ಬಳಿಕ ಸರ್ಕಾರವು 17,000 ಕೋಟಿ ರೂ. ಪರಿಷ್ಕೃತ ಗುರಿಯನ್ನು ನೀಡಿದ್ದು, ಇದನ್ನು ಮಾ.31ರ ಒಳಗೆ ತಲುಪಲು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಇನ್ನು ಕೇವಲ 288.91 ಕೋಟಿ ರೂ. ಸಂಗ್ರಹಿಸಬೇಕಿದೆ. ಒಂದೊಮ್ಮೆ ಸರ್ಕಾರ ನೀಡಿದ ಗುರಿಯನ್ನು ತಲುಪಿದರೆ ರಾಜ್ಯದ ನೋಂದಣಿ ಮತ್ತು ಮುಂದ್ರಾಂಕ ಇಲಾಖೆ ಇತಿಹಾಸದಲ್ಲೇ ಇದೊಂದು ಮತ್ತೊಂದು ದಾಖಲೆಯಾಗಲಿದೆ.

ಏಕೆಂದರೆ ಈ ಹಿಂದೆ 2021-22ನೇ ಸಾಲಿನಲ್ಲಿ ರಾಜ್ಯ ಸರ್ಕಾರವು ಈ ಇಲಾಖೆಗೆ 11,844.59 ಕೋಟಿ ರೂ. ಆದಾಯ ಸಂಗ್ರಹದ ಗುರಿ ನೀಡಿತ್ತು. ಆದರೆ ಇಲಾಖೆಯು ಆಗ ಮೊತ್ತ ಮೊದಲ ಬಾರಿಗೆ 12,917.79 ಕೋಟಿ ರೂ. ಆದಾಯ ಸಂಗ್ರಹಿಸಿ ಹೊಸ ದಾಖಲೆ ಸೃಷ್ಟಿಸಿತ್ತು. ಕರೋನಾ ಸೋಂಕಿನಿಂದ ಆರ್ಥಿಕ ಸಂಪನ್ಮೂಲ ಸಂಗ್ರಹದಲ್ಲಿ ತತ್ತರಿಸಿ ಹೋಗಿದ್ದ ರಾಜ್ಯ ಸರ್ಕಾರವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕೈ ಹಿಡಿದಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮಾ.15ರ ವರೆಗೆ 3,793.30 ಕೋಟಿ ರೂ. ಹೆಚ್ಚಿನ ಆದಾಯವನ್ನು ಸ್ಟಾಂಪ್ ಅಂಡ್ ರಿಜಿಸ್ಟ್ರೇಷನ್ ಇಲಾಖೆಯು ಸಂಗ್ರಹಿಸಿದಂತಾಗಿದೆ.

2022-23ನೇ ಸಾಲಿನಲ್ಲಿ ಈ ತನಕ 24,10,855 ಆಸ್ತಿ, ಒಪ್ಪಂದ ಮತ್ತಿತರ ದಾಖಲೆಗಳನ್ನು ನೋಂದಣಿಯಾಗಿರುವುದು ಇಲಾಖೆಯ ಅಂಕಿ ಅಂಶಗಳಿಂದ ತಿಳಿದು ಬರುತ್ತಿದೆ. ಕಳೆದ ವರ್ಷ ಅಂದರೆ 2021-2022ರಲ್ಲಿ 19,93,283 ದಾಖಲೆಗಳನ್ನು ಇಲಾಖೆಯು ರಿಜಿಸ್ಟರ್ ಮಾಡಿಕೊಂಡಿತ್ತು. ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿ 4,17,572 ದಾಖಲೆಗಳು ಹೆಚ್ಚುವರಿಯಾಗಿ ನೋಂದಣಿ ಮಾಡಲಾಗಿದೆ.

2020-21ರ ಆರಂಭದಲ್ಲಿ ಕರೋನಾ ಸೋಂಕಿನ ಮೊದಲ ಅಲೆ ವ್ಯಾಪಕವಾದಾಗ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆದಾಯ ನೆಲಕಚ್ಚಿತ್ತು. 2021-22ನೇ ಆರ್ಥಿಕ ವರ್ಷದ ಆಗಸ್ಟ್ ಬಳಿಕ ಇಲಾಖೆಯಲ್ಲಿ ಆಸ್ತಿ, ಒಪ್ಪಂದ ಮತ್ತಿತರ ದಾಖಲೆಗಳ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಸಂಗ್ರದಲ್ಲಿ ಗಮನಾರ್ಹವಾಗಿ ಏರಿಕೆಯಾಗುತ್ತಾ ಬಂದಿತ್ತು.

ಮಾರ್ಗಸೂಚಿ ದರದಲ್ಲಿ ಶೇ.10 ರಿಯಾಯಿತಿ ಲೆಕ್ಕಾಚಾರ ಫಲ ನೀಡಿತ್ತು :

ಸಾಂದರ್ಭಿಕ ಚಿತ್ರ

ಕರೋನಾ ಸೋಂಕಿನಿಂದ ರಾಜ್ಯ ಸರ್ಕಾರ ಮತ್ತು ಸಾರ್ವಜನಿಕರು ಆರ್ಥಿಕ ಸಮಸ್ಯೆಯಿಂದ ತತ್ತರಿಸಿದ್ದು, ಆಸ್ತಿ ನೋಂದಣಿ ಮತ್ತು ಆರ್ಥಿಕ ವ್ಯವಹಾರಕ್ಕೆ ಚೇತರಿಸಿಕೊಳ್ಳಲು, ರಾಜ್ಯಾದ್ಯಂತ ಇರುವ ಕೃಷಿಭೂಮಿ, ಕೃಷಿಯೇತರ ಭೂಮಿ, ಕಟ್ಟಡ, ಮನೆ, ಅಪಾರ್ಟ್ ಮೆಂಟ್, ಫ್ಲ್ಯಾಟ್, ವಿಲ್ಲಾ, ಭೂಪರಿವರ್ತಿತ ಜಮೀನುಗಳು ಸೇರಿದಂತೆ ವಿವಿಧ ಸ್ಥಿರಾಸ್ತಿಗಳ ಖರೀದಿ ಮತ್ತು ಮಾರಾಟ ಮಾಡುವಾಗ, ಮಾರ್ಗಸೂಚಿ ದರದಲ್ಲಿ ಶೇ.10ರಷ್ಟು ರಿಯಾಯಿತಿಯನ್ನು ಘೋಷಿಸಿತ್ತು. 2022ರ ಜನವರಿ 1ರಿಂದ ಮಾರ್ಚ್ 31ರ ಒಳಗೆ ಖರೀದಿ ಮತ್ತು ಮಾರಾಟ ಮಾಡುವ ಆಸ್ತಿಗಳಿಗೆ ಈ ರಿಯಾಯಿತಿ ಅನ್ವಯವಾಗುತ್ತಿತ್ತು. ಆದ್ದರಿಂದ ನೋಂದಣಿ ಮತ್ತು ಮುಂದ್ರಾಂಕ ಶುಲ್ಕ ಸಂಗ್ರಹದಲ್ಲಿ ಏರಿಕೆ ಕಂಡು ಬರಲು ಸಾಧ್ಯವಾಯಿತು.

ಇದರಿಂದ ಪ್ರೇರಿತರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನಃ 2022ರ ಏಪ್ರಿಲ್ 21ರಿಂದ ಮೂರು ತಿಂಗಳವರೆಗೆ ಅಂದರೆ ಆಗಸ್ಟ್ 20ನೇ ತಾರೀಖಿನ ವರೆಗೆ ಈ ರಿಯಾಯಿತಿಯನ್ನು ಮುಂದುವರೆಸಿ ಆದೇಶಿಸಿದ್ದರು. ಹೀಗಾಗಿ 2022-23ನೇ ಸಾಲಿನ ಆರ್ಥಿಕ ವರ್ಷದ ಆರಂಭದಲ್ಲೂ ಕೂಡ ಇದೇ ಟ್ರೆಂಡ್ ಮುಂದುವರೆದಿತ್ತು. ಸ್ಟಾಂಪ್ ಎಂಡ್ ರಿಜಿಸ್ಟ್ರೇಷನ್ ಇಲಾಖೆಯಲ್ಲಿ ಆಗಸ್ಟ್ ತಿಂಗಳೊಂದರಲ್ಲೇ  1,433.67 ಕೋಟಿ ರೂ.ಗಳಷ್ಟು ಸಂಗ್ರಹಿಸಿತ್ತು.

ಪ್ರತಿ ತಿಂಗಳು ಇಲಾಖೆಗೆ ಸರಾಸರಿ 1450- 1500 ಕೋಟಿ ರೂ. ಆದಾಯ ಸಂಗ್ರಹ :

ಒಂದಂತೂ ಸತ್ಯ ಕರೋನಾ ಸೋಂಕಿನ ತೀವ್ರತೆ ಕಡಿಮೆಯಾದ ಬಳಿಕ ರಾಜ್ಯದಲ್ಲಿ . ರಿಯಲ್ ಎಸ್ಟೇಟ್ ಕ್ಷೇತ್ರ ಮತ್ತೆ ಗರಿಗೆದರಿದಂತಾಗಿದೆ. ಹಾಗಾಗಿ 2022ರ ಆಗಸ್ಟ್ ನಂತರ ಪ್ರತಿ ತಿಂಗಳು ಸರಾಸರಿಯಾಗಿ 1450 ರಿಂದ 1500 ಕೋಟಿ ರೂ. ಮೊತ್ತದ ಆದಾಯ ಇಲಾಖೆ ಖಜಾನೆ ಸೇರುವಂತಾಗಿದೆ. ಪ್ರಸ್ತುತ 2023ರ ಮಾರ್ಚ್ ತಿಂಗಳಲ್ಲಿ 15 ದಿನದಲ್ಲಿ ಇಲಾಖೆಯು 1.22 ಲಕ್ಷ ದಾಖಲೆಗಳನ್ನು ನೋಂದಣಿ ಮಾಡಿ ಶುಲ್ಕದ ರೂಪದಲ್ಲಿ 737.84 ಕೋಟಿ ರೂ.ನಷ್ಟು ಸಂಗ್ರಹಿಸಿದೆ.

 ಕಳೆದ 12 ವರ್ಷದಲ್ಲಿ ನಾಲ್ಕು ಬಾರಿ ಮಾತ್ರ ಅತಿಹೆಚ್ಚು ಆದಾಯ ಸಂಗ್ರಹ :

 ಮುದ್ರಣ ಮತ್ತು ನೋಂದಣಿ ಇಲಾಖೆಯ 2011-12ನೇ ಸಾಲಿನಿಂದ 2022-23ನೇ ಸಾಲಿನ ವರೆಗಿನ 12 ವರ್ಷದ ಇಲಾಖೆಯ ಆದಾಯ ಗುರಿ ಮತ್ತು ವಾಸ್ತವ ಸಂಗ್ರಹದ ಮೊತ್ತವನ್ನು ಗಮನಿಸಿದಾಗ ಕೇವಲ ಐದು ಆರ್ಥಿಕ ವರ್ಷದಲ್ಲಿ ಮಾತ್ರ ಗುರಿಯನ್ನು ಮೀರಿ ಉತ್ತಮ ಸಾಧನೆ ಮಾಡಲಾಗಿದೆ (2011-12ರಲ್ಲಿ 4,250 ಕೋಟಿ ರೂ. ಗುರಿಯನ್ನು ಮೀರಿ 4,971.53 ಕೋಟಿ ರೂ. ಸಂಗ್ರಹವಾಗಿತ್ತು. 2018-19ರಲ್ಲಿ 10,400 ಕೋಟಿ ರೂ. ಗುರಿಯ ಬದಲಿಗೆ 10,845 ಕೋಟಿ ರೂ. ಹೆಚ್ಚುವರಿಯಾಗಿ ಆದಾಯ ಹರಿದು ಬಂದಿತ್ತು. ಇನ್ನು ಈ ಎರಡು ಆರ್ಥಿಕ ವರ್ಷ ಹೊರತುಪಡಿಸಿದರೆ ಈ ಒಂದು ದಶಕದಲ್ಲೇ 2022-23ನೇ ಸಾಲಿನಲ್ಲಿ ಮಾ.15ರ ತನಕ ಸರ್ಕಾರ ಮೊದಲಿಗೆ 15,807.91 ಕೋಟಿ ರೂ. ಆದಾಯ ಸಂಗ್ರಹಿಸುವ ಗುರಿ ನೀಡಿದ್ದರೂ ಡಿಸೆಂಬರ್ ನಲ್ಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಆ ಗುರಿಯನ್ನು ತಲುಪಿದರೆ ಆನಂತರ ರಾಜ್ಯ ಸರ್ಕಾರ ನೀಡಿದ 17 ಸಾವಿರ ಕೋಟಿ ರೂ. ಹೊಸ ಗುರಿಯನ್ನು ತಲುಪಲು ಇನ್ನು ಕೇವಲ 288.91 ಕೋಟಿ ರೂ. ಸಂಗ್ರಹಿಸಬೇಕಿದೆ. ಈ ಗುರಿ ತಲುಪುವುದು ಇಲಾಖೆಗೆ ಹೆಚ್ಚು ಕಷ್ಟವಲ್ಲ. ಅದು ಹೊರತುಪಡಿಸಿದರೆ 2021-22ರ ಸಾಲಿನಲ್ಲಿ 11,844.59 ಕೋಟಿ ರೂ. ಗುರಿಯ ಬದಲಿಗೆ 12,917.79 ಕೋಟಿ ರೂ. ಅತಿಹೆಚ್ಚು ಆರ್ಥಿಕ ಸಂಪನ್ಮೂಲ ಕ್ರೋಢೀಕರಣವಾಗಿ ದಾಖಲೆ ನಿರ್ಮಿಸಿತ್ತು.

ಮುಂದಿನ ಜೂನ್ ಒಳಗಾಗಿ ರಾಜ್ಯದೆಲ್ಲಡೆ ‘ಕಾವೇರಿ ತಂತ್ರಾಂಶ-2‘ ಲಭ್ಯ :

‘ಕಾವೇರಿ ತಂತ್ರಾಂಶ-2’ ಪೂರ್ಣ ಪ್ರಮಾಣದ ಬಳಕೆಗೆ ಸಿದ್ಧವಾಗಿದ್ದು, ಈ ವರ್ಷದ ಜೂನ್ ತಿಂಗಳ ಒಳಗಾಗಿ ರಾಜ್ಯದ ಎಲ್ಲ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಈಗಾಗಲೇ ಮಂಡ್ಯ, ಬೆಳಗಾವಿ ದಕ್ಷಿಣ ಹಾಗೂ ಚಿಕ್ಕೋಡಿಯಲ್ಲಿ ಪ್ರಾಯೋಗಿಕವಾಗಿ ‘ಕಾವೇರಿ ತಂತ್ರಾಂಶ-2’ ವ್ಯವಸ್ಥೆಯಡಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಹಳೆಯ ವ್ಯವಸ್ಥೆಯಲ್ಲಿ ಪ್ರತಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ದಿನವೊಂದರಲ್ಲಿ ಸರಾಸರಿಯಾಗಿ 40 ರಿಂದ 50 ದಾಖಲೆಗಳನ್ನಷ್ಟೇ ನೋಂದಣಿ ಮಾಡಬಹುದಿತ್ತು. ಹೊಸ ವ್ಯವಸ್ತೆಯಿಂದಾಗಿ ಪ್ರತಿದಿನ ಸರಾಸರಿ 70 ರಿಂದ 75 ದಾಖಲೆಗಳನ್ನು ರಿಜಿಸ್ಟ್ರೇಷನ್ ಮಾಡಿಸಬಹುದು ಎಂದು ಹೇಳುತ್ತಾರೆ ಇಲಾಖೆಯ ಹಿರಿಯ ಅಧಿಕಾರಿಗಳು.

ಏನಿದು ‘ಕಾವೇರಿ ತಂತ್ರಾಂಶ-2‘ ?:

ಸದಾ ಜನಜಂಗುಳಿಯಿಂದ ಅವ್ಯವಸ್ಥೆಯ ಆಗರವಾಗಿದ್ದ ಸಬ್‌ರಿಜಿಸ್ಟ್ರಾರ್‌ ಕಚೇರಿಗಳು ಇನ್ನುಮುಂದೆ ಸ್ಮಾರ್ಟ್‌ ಕಚೇರಿಯಾಗಲಿವೆ. ಆಸ್ತಿ ನೋಂದಣಿ, ಕ್ರಯ, ಕರಾರು, ದಾನ, ಒಪ್ಪಂದ ಮತ್ತು ಉಯಿಲು (ವಿಲ್‌) ಸೇರಿ ನಾನಾ ಸೇವೆಗಳನ್ನು ಸಾರ್ವಜನಿಕರು ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ದಿನವಿಡೀ ಕಾಯುವ ತಲೆಬಿಸಿ ಇರುವುದಿಲ್ಲ ಹಾಗೂ ಮಧ್ಯವರ್ತಿಗಳನ್ನು ಅವಲಂಬಿಸಬೇಕಿಲ್ಲ. ‘ಕಾವೇರಿ -2’ ವೆಬ್‌ಸೈಟ್‌ನಲ್ಲಿ ಲಾಗಿನ್‌ ಆಗಿ ಮನೆಯಿಂದಲೇ ಆಸ್ತಿ ನೋಂದಣಿ ಮತ್ತಿತರ ಸೇವೆ ಪಡೆಯಬಹುದಾಗಿದೆ. ಭೂಮಿ, ಇ-ಆಸ್ತಿ, ಇ-ಸ್ವತ್ತು ಎಲ್ಲದಕ್ಕೂ ಕಾವೇರಿ -2 ತಂತ್ರಾಂಶ ಲಿಂಕ್‌ ಆಗಿರಲಿದೆ. ಇದೊಂದು ಇಂಟೆಗ್ರೇಟೆಡ್‌ ತಂತ್ರಾಂಶವಾಗಿದ್ದು, ಆಸ್ತಿ ನೋಂದಣಿಗೆ ಸಲ್ಲಿಕೆಯಾದ ದಾಖಲೆಗಳ ಪರಿಶೀಲನೆ ನಡೆಯಲಿದೆ. ನಕಲಿ ದಾಖಲೆ ಸೃಷ್ಟಿಸಿ ನೋಂದಣಿಗೆ ಯತ್ನಿಸಿದರೆ ಸುಲಭವಾಗಿ ಸಿಕ್ಕಿಹಾಕಿಕೊಳ್ಳುತ್ತಾರೆ. ಬೆಂಗಳೂರಿನಲ್ಲಿ ಕೇಂದ್ರೀಯ ಸರ್ವರ್‌ ಹೊರತುಪಡಿಸಿ ಬೇರಾವುದೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸ್ಥಳೀಯ ಸರ್ವರ್‌ ಇರುವುದಿಲ್ಲ. ಈ ಹೊಸ ವ್ಯವಸ್ಥೆಯಿಂದ ಇಲಾಖೆಯ ಕಾರ್ಯವೈಖರಿಯೂ ಸಂಪೂರ್ಣ ಬದಲಾಗಲಿದೆ. ಜತೆಗೆ ಆಸ್ತಿ ನೋಂದಣಿ ಪ್ರಕ್ರಿಯೆ ಸರಳ ಮತ್ತು ಸುಸೂತ್ರವಾಗಲಿದೆ.

ಇಲಾಖೆಯ ಐಜಿಆರ್ ಏನು ಹೇಳುತ್ತಾರೆ?:

ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ರಾಜ್ಯ ಸರ್ಕಾರ 2022-23ನೇ ಸಾಲಿನಲ್ಲಿ ಹೊಸದಾಗಿ 17 ಸಾವಿರ ಕೋಟಿ ರೂ. ಆದಾಯ ಸಂಗ್ರಹದ ಗುರಿಯನ್ನು ನೀಡಿತ್ತು. ಆ ಪೈಕಿ ನಾವು ಮಾ.15ರ ತನಕ 16,711 ಕೋಟಿ ರೂ. ಸಂಗ್ರಹಿಸಿದ್ದೇವೆ. ಉಳಿದ 288.91 ಕೋಟಿ ರೂ. ಆದಾಯ ಕ್ರೋಢೀಕರಣದ ಗುರಿಯನ್ನು ತಲುಪಿ ಹೊಸ ದಾಖಲೆ ಸೃಷ್ಟಿಸುತ್ತೇವೆ ಎಂಬ ವಿಶ್ವಾಸವಿದೆ. ಕಾವೇರಿ ತಂತ್ರಾಂಶ-2 ವ್ಯವಸ್ಥೆಯನ್ನು ಮುಂದಿನ ಜೂನ್ ತಿಂಗಳ ಒಳಗಾಗಿ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಂಪೂರ್ಣವಾಗಿ ಅಳವಡಿಸುತ್ತೇವೆ.

– ಡಾ.ಮಮತ.ಬಿ.ಆರ್, ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

BDA News | ಅರ್ಕಾವತಿ ನಿವೇಶನದಾರರಿಗೆ ಕೆಂಪೇಗೌಡ ಬಡಾವಣೆಯಲ್ಲಿ 378 ಬದಲಿ ನಿವೇಶನ ಹಂಚಿಕೆ

Next Post

Weather News | ಬೆಂಗಳೂರು ಸೇರಿದಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ : ಇಲ್ಲಿದೆ ಡಿಟೇಲ್ಸ್

Next Post

Weather News | ಬೆಂಗಳೂರು ಸೇರಿದಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ : ಇಲ್ಲಿದೆ ಡಿಟೇಲ್ಸ್

ನವೀಕೃತಗೊಂಡಿರುವ ಚಾಂದಿನಿ ಚೌಕದ ಸ್ಥಳದ ಚಿತ್ರ

Bangalore Chandni Chowk | ಐತಿಹಾಸಿಕ ಸ್ಥಳ ಚಾಂದಿನಿ ಚೌಕ್ ಗೆ ಹೊಸ ಲುಕ್ : ಇಂದು ಶಿವಾಜಿನಗರ ಹಬ್ಬ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group